< Κατα Λουκαν 20 >

1 Καὶ ἐγένετο ἐν μιᾷ τῶν ἡμερῶν διδάσκοντος αὐτοῦ τὸν λαὸν ἐν τῷ ἱερῷ καὶ εὐαγγελιζομένου ἐπέστησαν οἱ ἀρχιερεῖς καὶ οἱ γραμματεῖς σὺν τοῖς πρεσβυτέροις,
ಆ ದಿನಗಳಲ್ಲಿ ಒಂದು ದಿನ ಆತನು ದೇವಾಲಯದಲ್ಲಿ ಜನರಿಗೆ ಉಪದೇಶಮಾಡುತ್ತಾ ಸುವಾರ್ತೆಯನ್ನು ಸಾರುತ್ತಿರಲಾಗಿ ಮುಖ್ಯಯಾಜಕರೂ ಶಾಸ್ತ್ರಿಗಳೂ ಸಭೆಯ ಹಿರಿಯರನ್ನು ಕೂಡಿಸಿಕೊಂಡು ಫಕ್ಕನೆ ಬಂದು,
2 καὶ εἶπαν λέγοντες πρὸς αὐτόν Εἰπὸν ἡμῖν ἐν ποίᾳ ἐξουσίᾳ ταῦτα ποιεῖς, ἢ τίς ἐστιν ὁ δούς σοι τὴν ἐξουσίαν ταύτην;
“ನೀನು ಯಾವ ಅಧಿಕಾರದಿಂದ ಇದನ್ನೆಲ್ಲಾ ಮಾಡುತ್ತೀ? ಈ ಅಧಿಕಾರವನ್ನು ನಿನಗೆ ಕೊಟ್ಟವರು ಯಾರು? ನಮಗೆ ಹೇಳು” ಎಂದು ಆತನನ್ನು ಕೇಳಲು,
3 ἀποκριθεὶς δὲ εἶπεν πρὸς αὐτούς Ἐρωτήσω ὑμᾶς κἀγὼ λόγον, καὶ εἴπατέ μοι
ಯೇಸು ಅವರಿಗೆ, “ನಾನು ಸಹ ನಿಮ್ಮನ್ನು ಒಂದು ಮಾತು ಕೇಳುತ್ತೇನೆ, ನನಗೆ ಹೇಳಿರಿ.
4 Τὸ βάπτισμα Ἰωάνου ἐξ οὐρανοῦ ἦν ἢ ἐξ ἀνθρώπων;
ದೀಕ್ಷಾಸ್ನಾನ ಮಾಡಿಸುವ ಅಧಿಕಾರವು ಯೋಹಾನನಿಗೆ ಪರಲೋಕದಿಂದ ಬಂದಿತೋ ಅಥವಾ ಮನುಷ್ಯರಿಂದ ಬಂದಿತೋ?” ಎಂದು ಅವರನ್ನು ಕೇಳಿದನು.
5 οἱ δὲ συνελογίσαντο πρὸς ἑαυτοὺς λέγοντες ὅτι Ἐὰν εἴπωμεν Ἐξ οὐρανοῦ, ἐρεῖ Διὰ τί οὐκ ἐπιστεύσατε αὐτῷ;
ಆಗ ಅವರು, “‘ಪರಲೋಕದಿಂದ ಬಂದಿತೆಂದು ನಾವು ಹೇಳಿದರೆ ಮತ್ತೆ ನೀವು ಅವನನ್ನು ಯಾಕೆ ನಂಬಲಿಲ್ಲ ಅಂದಾನು,
6 ἐὰν δὲ εἴπωμεν Ἐξ ἀνθρώπων, ὁ λαὸς ἅπας καταλιθάσει ἡμᾶς· πεπεισμένος γάρ ἐστιν Ἰωάνην προφήτην εἶναι.
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
7 καὶ ἀπεκρίθησαν μὴ εἰδέναι πόθεν.
ಅದು ಎಲ್ಲಿಂದ ಬಂದಿತೋ ನಾವರಿಯೆವು ಎಂದು ಉತ್ತರಕೊಟ್ಟರು.
8 καὶ ὁ Ἰησοῦς εἶπεν αὐτοῖς Οὐδὲ ἐγὼ λέγω ὑμῖν ἐν ποίᾳ ἐξουσίᾳ ταῦτα ποιῶ.
ಆಗ ಯೇಸು ಅವರಿಗೆ, “ಇದನ್ನೆಲ್ಲಾ ಯಾವ ಅಧಿಕಾರದಿಂದ ಮಾಡುತ್ತೇನೋ ಅದನ್ನು ನಾನೂ ನಿಮಗೆ ಹೇಳುವುದಿಲ್ಲ” ಎಂದು ಹೇಳಿದನು.
9 Ἤρξατο δὲ πρὸς τὸν λαὸν λέγειν τὴν παραβολὴν ταύτην. ἄνθρωπος ἐφύτευσεν ἀμπελῶνα, καὶ ἐξέδετο αὐτὸν γεωργοῖς, καὶ ἀπεδήμησεν χρόνους ἱκανούς.
ಆಗ ಆತನು ಜನರಿಗೆ ಒಂದು ಸಾಮ್ಯವನ್ನು ಹೇಳುವುದಕ್ಕೆ ತೊಡಗಿದನು. ಅದೇನೆಂದರೆ, “ಒಬ್ಬ ಮನುಷ್ಯನು ಒಂದು ದ್ರಾಕ್ಷಿಯ ತೋಟವನ್ನು ಮಾಡಿ, ಆದನ್ನು ಒಕ್ಕಲಿಗರಿಗೆ ಗುತ್ತಿಗೆಗೆ ಕೊಟ್ಟು, ಬೇರೊಂದು ದೇಶಕ್ಕೆ ಹೋಗಿ ಅಲ್ಲಿ ಬಹುಕಾಲ ಇದ್ದನು.
10 καὶ καιρῷ ἀπέστειλεν πρὸς τοὺς γεωργοὺς δοῦλον, ἵνα ἀπὸ τοῦ καρποῦ τοῦ ἀμπελῶνος δώσουσιν αὐτῷ· οἱ δὲ γεωργοὶ ἐξαπέστειλαν αὐτὸν δείραντες κενόν.
೧೦ಫಲಕಾಲ ಬಂದಾಗ ದ್ರಾಕ್ಷಿಯ ತೋಟದ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಆಳನ್ನು ಒಕ್ಕಲಿಗರ ಬಳಿಗೆ ಕಳುಹಿಸಿದನು. ಆದರೆ ಆ ಒಕ್ಕಲಿಗರು ಅವನನ್ನು ಹೊಡೆದು ಬರಿಗೈಯಲ್ಲಿ ಕಳುಹಿಸಿಬಿಟ್ಟರು.
11 καὶ προσέθετο ἕτερον πέμψαι δοῦλον· οἱ δὲ κἀκεῖνον δείραντες καὶ ἀτιμάσαντες ἐξαπέστειλαν κενόν.
೧೧ಆ ಧಣಿಯು ಬೇರೊಬ್ಬ ಆಳನ್ನು ಕಳುಹಿಸಲಾಗಿ ಅವರು ಅವನನ್ನೂ ಹೊಡೆದು ಅವಮಾನಪಡಿಸಿ ಬರಿಗೈಯಲ್ಲಿ ಕಳುಹಿಸಿಬಿಟ್ಟರು.
12 καὶ προσέθετο τρίτον πέμψαι· οἱ δὲ καὶ τοῦτον τραυματίσαντες ἐξέβαλον.
೧೨ಆ ಮೇಲೆ ಮೂರನೆಯವನನ್ನು ಕಳುಹಿಸಲು ಅವರು ಅವನನ್ನೂ ಗಾಯಗೊಳಿಸಿ ಹೊರಕ್ಕೆ ಅಟ್ಟಿದರು.
13 εἶπεν δὲ ὁ κύριος τοῦ ἀμπελῶνος Τί ποιήσω; πέμψω τὸν υἱόν μου τὸν ἀγαπητόν· ἴσως τοῦτον ἐντραπήσονται.
೧೩ಆಗ ಆ ದ್ರಾಕ್ಷಿಯ ತೋಟದ ಧಣಿಯು, ‘ನಾನೇನು ಮಾಡಲಿ? ನನ್ನ ಮುದ್ದುಮಗನನ್ನು ಕಳುಹಿಸುತ್ತೇನೆ, ಒಂದು ವೇಳೆ ಅವನಿಗಾದರೂ ಮರ್ಯಾದೆ ತೋರಿಸಾರು’ ಅಂದುಕೊಂಡನು.
14 ἰδόντες δὲ αὐτὸν οἱ γεωργοὶ διελογίζοντο πρὸς ἀλλήλους λέγοντες Οὗτός ἐστιν ὁ κληρονόμος· ἀποκτείνωμεν αὐτόν, ἵνα ἡμῶν γένηται ἡ κληρονομία.
೧೪ಆದರೆ ಆ ಒಕ್ಕಲಿಗರು ದ್ರಾಕ್ಷಿಯ ತೋಟದ ಯಜಮಾನನ ಮಗನನ್ನು ಕಂಡು, ‘ಇವನೇ ಬಾಧ್ಯಸ್ಥನು; ಇವನನ್ನು ಕೊಂದು ಹಾಕೋಣ, ಇವನ ಪಿತ್ರಾರ್ಜಿತವೆಲ್ಲಾ ನಮ್ಮದಾಗುವುದು’ ಎಂದು ಒಬ್ಬರ ಸಂಗಡಲೊಬ್ಬರು ಮಾತನಾಡಿಕೊಂಡು,
15 καὶ ἐκβαλόντες αὐτὸν ἔξω τοῦ ἀμπελῶνος ἀπέκτειναν. τί οὖν ποιήσει αὐτοῖς ὁ κύριος τοῦ ἀμπελῶνος;
೧೫ಅವನನ್ನು ದ್ರಾಕ್ಷಿಯ ತೋಟದಿಂದ ಹೊರಕ್ಕೆ ದೊಬ್ಬಿ, ಕೊಂದು ಹಾಕಿದರು. ಹಾಗಾದರೆ ದ್ರಾಕ್ಷಿಯ ತೋಟದ ಧಣಿಯು ಅವರಿಗೆ ಏನು ಮಾಡಿಯಾನು?
16 ἐλεύσεται καὶ ἀπολέσει τοὺς γεωργοὺς τούτους, καὶ δώσει τὸν ἀμπελῶνα ἄλλοις. ἀκούσαντες δὲ εἶπαν Μὴ γένοιτο.
೧೬ಅವನು ಬಂದು ಆ ಒಕ್ಕಲಿಗರನ್ನು ಸಂಹರಿಸಿ ತನ್ನ ತೋಟವನ್ನು ಬೇರೆ ಜನರಿಗೆ ಮಾಡುವುದಕ್ಕೆ ಕೊಡುವನು” ಅಂದನು. ಇದನ್ನು ಜನರು ಕೇಳಿ, “ಹಾಗಾಗಬಾರದು” ಅಂದರು.
17 ὁ δὲ ἐμβλέψας αὐτοῖς εἶπεν Τί οὖν ἐστιν τὸ γεγραμμένον τοῦτο Λίθον ὃν ἀπεδοκίμασαν οἱ οἰκοδομοῦντες, οὗτος ἐγενήθη εἰς κεφαλὴν γωνίας;
೧೭ಆದರೆ ಯೇಸು ಅವರನ್ನು ದೃಷ್ಟಿಸಿ ನೋಡಿ, ಹಾಗಾದರೆ “‘ಮನೆ ಕಟ್ಟುವವರು ಬೇಡವೆಂದು ತಿರಸ್ಕರಿಸಲ್ಪಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು’ ಎಂದು ಬರೆದಿರುವ ಮಾತೇನು?
18 πᾶς ὁ πεσὼν ἐπ’ ἐκεῖνον τὸν λίθον συνθλασθήσεται· ἐφ’ ὃν δ’ ἂν πέσῃ, λικμήσει αὐτόν.
೧೮“ಈ ಕಲ್ಲಿನ ಮೇಲೆ ಬೀಳುವ ಪ್ರತಿಯೊಬ್ಬನು ತುಂಡುತುಂಡಾಗುವನು. ಆ ಕಲ್ಲು ಯಾರ ಮೇಲೆ ಬೀಳುವುದೋ ಅದು ಅವನನ್ನು ಪುಡಿಪುಡಿ ಮಾಡುವುದು” ಅಂದನು.
19 Καὶ ἐζήτησαν οἱ γραμματεῖς καὶ οἱ ἀρχιερεῖς ἐπιβαλεῖν ἐπ’ αὐτὸν τὰς χεῖρας ἐν αὐτῇ τῇ ὥρᾳ, καὶ ἐφοβήθησαν τὸν λαόν· ἔγνωσαν γὰρ ὅτι πρὸς αὐτοὺς εἶπεν τὴν παραβολὴν ταύτην.
೧೯ಶಾಸ್ತ್ರಿಗಳೂ ಮುಖ್ಯಯಾಜಕರೂ ಈ ಮಾತುಗಳನ್ನು ಕೇಳಿ ತಮ್ಮನ್ನೇ ಕುರಿತು ಈ ಸಾಮ್ಯವನ್ನು ಹೇಳಿದನು ಎಂದು ತಿಳಿದುಕೊಂಡು ಅದೇ ಗಳಿಗೆಯಲ್ಲಿ ಆತನನ್ನು ಹಿಡಿಯುವುದಕ್ಕೆ ಸಂದರ್ಭನೋಡಿದರು. ಆದರೆ ಜನರಿಗೆ ಭಯಪಟ್ಟರು.
20 Καὶ παρατηρήσαντες ἀπέστειλαν ἐνκαθέτους ὑποκρινομένους ἑαυτοὺς δικαίους εἶναι, ἵνα ἐπιλάβωνται αὐτοῦ λόγου, ὥστε παραδοῦναι αὐτὸν τῇ ἀρχῇ καὶ τῇ ἐξουσίᾳ τοῦ ἡγεμόνος.
೨೦ಆಮೇಲೆ ಅವರು ಯೇಸುವನ್ನು ಅಧಿಪತಿಯ ವಶಕ್ಕೂ ಅಧಿಕಾರಿಗಳಿಗೂ ಒಪ್ಪಿಸಬೇಕೆಂದು ಹೊಂಚು ಹಾಕುತ್ತಾ, ನೀತಿವಂತರಂತೆ ನಟಿಸುತ್ತಿರುವ ಗೂಢಚಾರರನ್ನು ಆತನ ಮಾತಿನಲ್ಲಿ ಏನನ್ನಾದರೂ ತಪ್ಪುಗಳನ್ನು ಕಂಡುಹಿಡಿಯುವುದಕ್ಕೆ (ಆತನ ಬಳಿಗೆ) ಕಳುಹಿಸಿದರು.
21 καὶ ἐπηρώτησαν αὐτὸν λέγοντες Διδάσκαλε, οἴδαμεν ὅτι ὀρθῶς λέγεις καὶ διδάσκεις καὶ οὐ λαμβάνεις πρόσωπον, ἀλλ’ ἐπ’ ἀληθείας τὴν ὁδὸν τοῦ Θεοῦ διδάσκεις·
೨೧ಗೂಢಚಾರರು, “ಬೋಧಕನೇ, ನೀನು ಸರಿಯಾಗಿ ಮಾತನಾಡುತ್ತಾ ಉಪದೇಶಮಾಡುತ್ತೀ, ನೀನು ಮುಖದಾಕ್ಷಿಣ್ಯವಿಲ್ಲದೆ ದೇವರ ಮಾರ್ಗವನ್ನು ಸತ್ಯವಾಗಿ ಬೋಧಿಸುವವನಾಗಿದ್ದೀ ಎಂದು ಬಲ್ಲೆವು.
22 ἔξεστιν ἡμᾶς Καίσαρι φόρον δοῦναι ἢ οὔ;
೨೨ಕೈಸರನಿಗೆ ಕಂದಾಯ ಕೊಡುವುದು ಸರಿಯೋ ಸರಿಯಲ್ಲವೋ?” ಎಂದು ಆತನನ್ನು ಕೇಳಿದರು.
23 κατανοήσας δὲ αὐτῶν τὴν πανουργίαν εἶπεν πρὸς αὐτούς
೨೩ಯೇಸು ಅವರ ಕುಯುಕ್ತಿಯನ್ನು ಅರಿತುಕೊಂಡು,
24 Δείξατέ μοι δηνάριον· τίνος ἔχει εἰκόνα καὶ ἐπιγραφήν; οἱ δὲ εἶπαν Καίσαρος.
೨೪ಅವರಿಗೆ, “ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?” ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.
25 ὁ δὲ εἶπεν πρὸς αὐτούς Τοίνυν ἀπόδοτε τὰ Καίσαρος Καίσαρι καὶ τὰ τοῦ Θεοῦ τῷ Θεῷ.
೨೫ಆತನು ಅವರಿಗೆ, “ಹಾಗಾದರೆ ಕೈಸರನದನ್ನು ಕೈಸರನಿಗೆ ಕೊಡಿರಿ, ದೇವರದನ್ನು ದೇವರಿಗೆ ಕೊಡಿರಿ” ಎಂದು ಹೇಳಿದನು.
26 καὶ οὐκ ἴσχυσαν ἐπιλαβέσθαι αὐτοῦ ῥήματος ἐναντίον τοῦ λαοῦ, καὶ θαυμάσαντες ἐπὶ τῇ ἀποκρίσει αὐτοῦ ἐσίγησαν.
೨೬ಯೇಸು ಜನರ ಮುಂದೆ ಹೇಳಿದ ಮಾತಿನಲ್ಲಿ ಅವರು ಯಾವ ತಪ್ಪನ್ನೂ ಹಿಡಿಯಲಾಗದೆ, ಆತನು ಕೊಟ್ಟ ಉತ್ತರಕ್ಕೆ ಆಶ್ಚರ್ಯಪಟ್ಟು ಸುಮ್ಮನಾದರು.
27 Προσελθόντες δέ τινες τῶν Σαδδουκαίων, οἱ ἀντιλέγοντες ἀνάστασιν μὴ εἶναι, ἐπηρώτησαν αὐτὸν
೨೭ತರುವಾಯ ಪುನರುತ್ಥಾನವಿಲ್ಲವೆಂದು ಹೇಳುವವರಾದ ಸದ್ದುಕಾಯರಲ್ಲಿ ಕೆಲವರು ಬಂದು ಆತನಿಗೆ ಪ್ರಶ್ನೆಮಾಡಿದ್ದೇನಂದರೆ,
28 λέγοντες Διδάσκαλε, Μωϋσῆς ἔγραψεν ἡμῖν, ἐάν τινος ἀδελφὸς ἀποθάνῃ ἔχων γυναῖκα, καὶ οὗτος ἄτεκνος ᾖ, ἵνα λάβῃ ὁ ἀδελφὸς αὐτοῦ τὴν γυναῖκα καὶ ἐξαναστήσῃ σπέρμα τῷ ἀδελφῷ αὐτοῦ.
೨೮“ಬೋಧಕನೇ, ಅಣ್ಣನಾದವನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ತಮ್ಮನು ಆಕೆಯನ್ನು ಮದುವೆಮಾಡಿಕೊಂಡು ತನ್ನ ಅಣ್ಣನಿಗೆ ಸಂತಾನವನ್ನು ಪಡೆಯಬೇಕೆಂದು ಮೋಶೆಯು ನಮಗೆ ಬರೆದಿಟ್ಟನಷ್ಟೆ.
29 ἑπτὰ οὖν ἀδελφοὶ ἦσαν· καὶ ὁ πρῶτος λαβὼν γυναῖκα ἀπέθανεν ἄτεκνος·
೨೯ಒಳ್ಳೆಯದು, ಏಳು ಮಂದಿ ಅಣ್ಣತಮ್ಮಂದಿರಿದ್ದರು. ಮೊದಲನೆಯವನು ಮದುವೆಯಾಗಿ ಮಕ್ಕಳಿಲ್ಲದೆ ಸತ್ತನು.
30 καὶ ὁ δεύτερος
೩೦ಎರಡನೆಯವನೂ ಅವನ ತರುವಾಯ ಮೂರನೆಯವನೂ ಆಕೆಯನ್ನು ಮದುವೆಮಾಡಿಕೊಂಡರು. ಇದೇ ರೀತಿಯಾಗಿ ಏಳು ಮಂದಿಯೂ ಮದುವೆಯಾಗಿ ಮಕ್ಕಳಿಲ್ಲದೆ ಸತ್ತರು.
31 καὶ ὁ τρίτος ἔλαβεν αὐτήν, ὡσαύτως δὲ καὶ οἱ ἑπτὰ οὐ κατέλιπον τέκνα καὶ ἀπέθανον.
೩೧
32 ὕστερον καὶ ἡ γυνὴ ἀπέθανεν.
೩೨ಕಡೆಯಲ್ಲಿ ಆ ಹೆಂಗಸೂ ಸತ್ತಳು.
33 ἡ γυνὴ οὖν ἐν τῇ ἀναστάσει τίνος αὐτῶν γίνεται γυνή; οἱ γὰρ ἑπτὰ ἔσχον αὐτὴν γυναῖκα.
೩೩ಹಾಗಾದರೆ ಪುನರುತ್ಥಾನದಲ್ಲಿ ಆ ಸ್ತ್ರೀಯು ಅವರೊಳಗೆ ಯಾರ ಹೆಂಡತಿಯಾಗಿರುವಳು? ಆಕೆಯನ್ನು ಏಳು ಮಂದಿಯೂ ಮದುವೆ ಮಾಡಿಕೊಂಡಿದ್ದರಲ್ಲಾ” ಅಂದರು.
34 καὶ εἶπεν αὐτοῖς ὁ Ἰησοῦς Οἱ υἱοὶ τοῦ αἰῶνος τούτου γαμοῦσιν καὶ γαμίσκονται, (aiōn g165)
೩೪ಯೇಸು ಅವರಿಗೆ, “ಈ ಲೋಕದ ಜನರು ಮದುವೆಮಾಡಿಕೊಳ್ಳುತ್ತಾರೆ ಹಾಗೂ ಮದುವೆಮಾಡಿಕೊಡುತ್ತಾರೆ. (aiōn g165)
35 οἱ δὲ καταξιωθέντες τοῦ αἰῶνος ἐκείνου τυχεῖν καὶ τῆς ἀναστάσεως τῆς ἐκ νεκρῶν οὔτε γαμοῦσιν οὔτε γαμίζονται· (aiōn g165)
೩೫ಆದರೆ ಮುಂಬರುವ ಲೋಕವನ್ನೂ, ಸತ್ತವರೊಳಗಿಂದ ಪುನರುತ್ಥಾನವನ್ನೂ ಪಡೆಯುವುದಕ್ಕೆ ಯೋಗ್ಯರೆನಿಸಿಕೊಂಡಿರುವವರು ಮದುವೆಮಾಡಿಕೊಳ್ಳುವುದೂ ಇಲ್ಲ, ಮಾಡಿಕೊಡುವುದೂ ಇಲ್ಲ. (aiōn g165)
36 οὐδὲ γὰρ ἀποθανεῖν ἔτι δύνανται, ἰσάγγελοι γάρ εἰσιν, καὶ υἱοί εἰσιν Θεοῦ τῆς ἀναστάσεως υἱοὶ ὄντες.
೩೬ಅವರು ಇನ್ನು ಮರಣಕ್ಕೆ ಗುರಿಯಾಗುವುದೇ ಇಲ್ಲ. ಏಕೆಂದರೆ ಅವರು ದೇವದೂತರಿಗೆ ಸರಿಸಮಾನರೂ, ಪುನರುತ್ಥಾನವನ್ನು ಹೊಂದಿದವರಾಗಿವುದ್ದರಿಂದ ಅವರು ದೇವರ ಮಕ್ಕಳೂ ಆಗಿರುತ್ತಾರೆ.
37 ὅτι δὲ ἐγείρονται οἱ νεκροὶ, καὶ Μωϋσῆς ἐμήνυσεν ἐπὶ τῆς Βάτου, ὡς λέγει Κύριον τὸν Θεὸν Ἀβραὰμ καὶ Θεὸν Ἰσαὰκ καὶ Θεὸν Ἰακώβ·
೩೭ಸತ್ತವರು ಬದುಕಿ ಏಳುತ್ತಾರೆಂಬುದನ್ನು ಮೋಶೆಯೂ ಸೂಚಿಸಿದ್ದಾನೆ. ಅವನು ಪೊದೆಯ ಸಂಗತಿಯಿರುವ ಅಧ್ಯಾಯದಲ್ಲಿಕರ್ತನನ್ನು ‘ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು’ ಎಂದು ಹೇಳಿದ್ದಾನೆ.
38 Θεὸς δὲ οὐκ ἔστιν νεκρῶν ἀλλὰ ζώντων· πάντες γὰρ αὐτῷ ζῶσιν.
೩೮ದೇವರು ಜೀವಿತರಿಗೆ ದೇವರಾಗಿದ್ದಾನೆ ಹೊರತು ಜೀವವಿಲ್ಲದವರಿಗೆ ಅಲ್ಲ. ಆತನಿಗೆ ಎಲ್ಲರೂ ಜೀವಿಸುವವರೇ” ಎಂದು ಹೇಳಿದನು.
39 ἀποκριθέντες δέ τινες τῶν γραμματέων εἶπαν Διδάσκαλε, καλῶς εἶπας.
೩೯ಶಾಸ್ತ್ರಿಗಳಲ್ಲಿ ಕೆಲವರು, “ಬೋಧಕನೇ, ಚೆನ್ನಾಗಿ ಹೇಳಿದಿ” ಅಂದರು.
40 οὐκέτι γὰρ ἐτόλμων ἐπερωτᾶν αὐτὸν οὐδέν.
೪೦ಆತನನ್ನು ಇನ್ನೇನು ಕೇಳುವುದಕ್ಕೂ ಅವರಿಗೆ ಧೈರ್ಯವಿಲ್ಲದೆ ಹೋಯಿತು.
41 Εἶπεν δὲ πρὸς αὐτούς Πῶς λέγουσιν τὸν Χριστὸν εἶναι Δαυεὶδ υἱόν;
೪೧ಆಗ ಯೇಸು, “ಬರಬೇಕಾದ ಕ್ರಿಸ್ತನು ದಾವೀದನ ಮಗನೆಂದು ಹೇಳುತ್ತಾರಲ್ಲಾ, ಅದು ಹೇಗಾದೀತು?
42 αὐτὸς γὰρ Δαυεὶδ λέγει ἐν βίβλῳ ψαλμῶν Εἶπεν Κύριος τῷ Κυρίῳ μου Κάθου ἐκ δεξιῶν μου
೪೨“‘ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಗಳಿಗೆ ಪೀಠವನ್ನಾಗಿ ಮಾಡುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ಕೀರ್ತನೆಗಳ ಗ್ರಂಥದಲ್ಲಿ ದಾವೀದನೇ ಹೇಳುತ್ತಾನಲ್ಲಾ.
43 ἕως ἂν θῶ τοὺς ἐχθρούς σου ὑποπόδιον τῶν ποδῶν σου.
೪೩
44 Δαυεὶδ οὖν αὐτὸν Κύριον καλεῖ, καὶ πῶς αὐτοῦ υἱός ἐστιν;
೪೪“ದಾವೀದನು ಆತನನ್ನು ‘ಒಡೆಯನೆಂದು’ ಹೇಳಿದ ಮೇಲೆ ಆತನು ಅವನಿಗೆ ಮಗನಾಗುವುದು ಹೇಗೆ?” ಎಂದು ಅವರನ್ನು ಕೇಳಿದನು.
45 Ἀκούοντος δὲ παντὸς τοῦ λαοῦ εἶπεν τοῖς μαθηταῖς
೪೫ಜನರೆಲ್ಲರು ಕೇಳುತ್ತಿರುವಲ್ಲಿ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ,
46 Προσέχετε ἀπὸ τῶν γραμματέων τῶν θελόντων περιπατεῖν ἐν στολαῖς καὶ φιλούντων ἀσπασμοὺς ἐν ταῖς ἀγοραῖς καὶ πρωτοκαθεδρίας ἐν ταῖς συναγωγαῖς καὶ πρωτοκλισίας ἐν τοῖς δείπνοις,
೪೬“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.
47 οἳ κατεσθίουσιν τὰς οἰκίας τῶν χηρῶν καὶ προφάσει μακρὰ προσεύχονται· οὗτοι λήμψονται περισσότερον κρίμα.
೪೭ಅವರು ವಿಧವೆಯರ ಮನೆಗಳನ್ನು ನುಂಗಿ, ನಟನೆಗಾಗಿ ದೇವರಿಗೆ ಉದ್ದವಾದ ಪ್ರಾರ್ಥನೆಗಳನ್ನು ಮಾಡುತ್ತಾರೆ. ಇಂಥವರು ಹೆಚ್ಚಾದ ದಂಡನೆಯನ್ನು ಹೊಂದುವರು” ಅಂದನು.

< Κατα Λουκαν 20 >