< Κατα Μαρκον 8 >

1 Ἐν ἐκείναις ταῖς ἡμέραις, παμπόλλου ὄχλου ὄντος, καὶ μὴ ἐχόντων τί φάγωσι, προσκαλεσάμενος ὁ Ἰησοῦς τοὺς μαθητὰς αὐτοῦ λέγει αὐτοῖς,
ಆ ದಿನಗಳಲ್ಲಿ ಜನರು ಪುನಃ ದೊಡ್ಡಗುಂಪಾಗಿ ಬಂದು ನೆರೆದಿದ್ದರು. ಊಟಮಾಡಲು ಅವರಲ್ಲಿ ಆಹಾರವಿರಲಿಲ್ಲ. ಆಗ ಯೇಸು ತನ್ನ ಶಿಷ್ಯರನ್ನು ಹತ್ತಿರಕ್ಕೆ ಕರೆದು,
2 Σπλαγχνίζομαι ἐπὶ τὸν ὄχλον, ὅτι ἤδη ἡμέρας τρεῖς προσμένουσί μοι, καὶ οὐκ ἔχουσι τί φάγωσι·
“ಈ ಜನರನ್ನು ನೋಡಿ ಕನಿಕರಪಡುತ್ತೇನೆ, ಏಕೆಂದರೆ ಮೂರು ದಿನಗಳಿಂದ ಇವರು ನನ್ನ ಬಳಿಯಲ್ಲಿದ್ದಾರೆ; ಇವರಿಗೆ ಊಟಕ್ಕೆ ಏನೂ ಇಲ್ಲ.
3 καὶ ἐὰν ἀπολύσω αὐτοὺς νήστεις εἰς οἶκον αὐτῶν, ἐκλυθήσονται ἐν τῇ ὁδῷ· τινὲς γὰρ αὐτῶν μακρόθεν ἥκασι.
ಇವರನ್ನು ಹಸಿವೆಯಿಂದ ಮನೆಗೆ ಕಳುಹಿಸಿದರೆ ದಾರಿಯಲ್ಲಿ ಬಳಲಿ ಬಿದ್ದಾರು. ಇವರಲ್ಲಿ ಕೆಲವರು ದೂರದಿಂದ ಬಂದಿದ್ದಾರಲ್ಲಾ” ಎಂದು ಅವರಿಗೆ ಹೇಳಿದನು.
4 Καὶ ἀπεκρίθησαν αὐτῷ οἱ μαθηταὶ αὐτοῦ, Πόθεν τούτους δυνήσεταί τις ὧδε χορτάσαι ἄρτων ἐπ᾿ ἐρημίας;
ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.
5 Καὶ ἐπηρώτα αὐτούς, Πόσους ἔχετε ἄρτους; Οἱ δὲ εἶπον, Ἑπτά.
ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.
6 Καὶ παρήγγειλε τῷ ὄχλῳ ἀναπεσεῖν ἐπὶ τῆς γῆς· καὶ λαβὼν τοὺς ἑπτὰ ἄρτους, εὐχαριστήσας ἔκλασε καὶ ἐδίδου τοῖς μαθηταῖς αὐτοῦ, ἵνα παραθῶσι· καὶ παρέθηκαν τῷ ὄχλῳ.
ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.
7 Καὶ εἶχον ἰχθύδια ὀλίγα· καὶ εὐλογήσας εἶπε παραθεῖναι καὶ αὐτά.
ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು; ಆತನು ಅವುಗಳಿಗಾಗಿ ದೇವರಿಗೆ ಸ್ತೋತ್ರಮಾಡಿ, ಇವುಗಳನ್ನೂ ಹಂಚಿಕೊಡಿರಿ ಎಂದು ಶಿಷ್ಯರಿಗೆ ಅಪ್ಪಣೆ ಕೊಟ್ಟನು.
8 Ἔφαγον δέ, καὶ ἐχορτάσθησαν· καὶ ἦραν περισσεύματα κλασμάτων ἑπτὰ σπυρίδας.
ಜನರು ತಿಂದು ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಲಾಗಿ ಏಳು ಬುಟ್ಟಿಗಳು ತುಂಬಿದವು.
9 Ἦσαν δὲ οἱ φαγόντες ὡς τετρακισχίλιοι· καὶ ἀπέλυσεν αὐτούς.
ಊಟಮಾಡಿದವರು ಹೆಚ್ಚುಕಡಿಮೆ ನಾಲ್ಕು ಸಾವಿರ ಗಂಡಸರಿದ್ದರು.
10 Καὶ εὐθέως ἐμβὰς εἰς τὸ πλοῖον μετὰ τῶν μαθητῶν αὐτοῦ, ἦλθεν εἰς τὰ μέρη Δαλμανουθά.
೧೦ಆತನು ಅವರನ್ನು ಕಳುಹಿಸಿದ ನಂತರ ಕೂಡಲೆ ತನ್ನ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಸೀಮೆಗೆ ಬಂದನು.
11 Καὶ ἐξῆλθον οἱ Φαρισαῖοι, καὶ ἤρξαντο συζητεῖν αὐτῷ, ζητοῦντες παρ᾿ αὐτοῦ σημεῖον ἀπὸ τοῦ οὐρανοῦ, πειράζοντες αὐτόν.
೧೧ತರುವಾಯ ಫರಿಸಾಯರು ಯೇಸುವಿನ ಬಳಿಗೆ ಬಂದು, ಆತನ ಕೂಡ ತರ್ಕಮಾಡಿ, ಆತನನ್ನು ಪರೀಕ್ಷಿಸುವ ಉದ್ದೇಶದಿಂದ, “ನೀನು ಪರಲೋಕದಿಂದ ಒಂದು ಸೂಚಕಕಾರ್ಯವನ್ನು ಮಾಡಿ ತೋರಿಸು” ಎಂದು ಕೇಳಿದರು.
12 Καὶ ἀναστενάξας τῷ πνεύματι αὐτοῦ λέγει, Τί ἡ γενεὰ αὕτη σημεῖον ἐπιζητεῖ; Ἀμὴν λέγω ὑμῖν, εἰ δοθήσεται τῇ γενεᾷ ταύτῃ σημεῖον.
೧೨ಯೇಸು ಅದನ್ನು ಕೇಳಿ ತನ್ನ ಆತ್ಮದಲ್ಲಿ ನಿಟ್ಟುಸಿರುಬಿಟ್ಟು, “ಈ ಸಂತತಿಯು ಸೂಚಕಕಾರ್ಯವನ್ನು ಅಪೇಕ್ಷಿಸುವುದು ಏಕೆ? ನಿಮಗೆ ನಾನು ಸತ್ಯವಾಗಿ ಹೇಳುತ್ತೇನೆ, ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲ್ಪಡುವುದಿಲ್ಲ, ಇದು ಖಂಡಿತ” ಎಂದು ಹೇಳಿದನು.
13 Καὶ ἀφεὶς αὐτούς, ἐμβὰς πάλιν εἰς τὸ πλοῖον, ἀπῆλθεν εἰς τὸ πέραν.
೧೩ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೇದಡಕ್ಕೆ ಹೋದನು.
14 Καὶ ἐπελάθοντο λαβεῖν ἄρτους, καὶ εἰ μὴ ἕνα ἄρτον οὐκ εἶχον μεθ᾿ ἑαυτῶν ἐν τῷ πλοίῳ.
೧೪ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.
15 Καὶ διεστέλλετο αὐτοῖς, λέγων, Ὁρᾶτε, βλέπετε ἀπὸ τῆς ζύμης τῶν Φαρισαίων καὶ τῆς ζύμης Ἡρῴδου.
೧೫ಯೇಸು ಅವರಿಗೆ, “ಫರಿಸಾಯರ ಮತ್ತು ಹೆರೋದನ ಹುಳಿಹಿಟ್ಟಿನ ವಿಷಯದಲ್ಲಿ ನೀವು ಜಾಗರೂಕತೆಯಿಂದಿರಿ” ಎಂದು ಎಚ್ಚರಿಸಿದನು.
16 Καὶ διελογίζοντο πρὸς ἀλλήλους, λέγοντες ὅτι Ἄρτους οὐκ ἔχομεν.
೧೬ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.
17 Καὶ γνοὺς ὁ Ἰησοῦς λέγει αὐτοῖς, Τί διαλογίζεσθε ὅτι ἄρτους οὐκ ἔχετε; Οὔπω νοεῖτε, οὐδὲ συνίετε; Ἔτι πεπωρωμένην ἔχετε τὴν καρδίαν ὑμῶν;
೧೭ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?
18 Ὀφθαλμοὺς ἔχοντες οὐ βλέπετε; Καὶ ὦτα ἔχοντες οὐκ ἀκούετε; Καὶ οὐ μνημονεύετε;
೧೮ಕಣ್ಣಿದ್ದು ಕಾಣುವುದಿಲ್ಲವೋ? ಕಿವಿಯಿದ್ದು ಕೇಳುವುದಿಲ್ಲವೋ? ನಿಮಗೆ ನೆನಪಿಲ್ಲವೋ?
19 Ὅτε τοὺς πέντε ἄρτους ἔκλασα εἰς τοὺς πεντακισχιλίους, πόσους κοφίνους πλήρεις κλασμάτων ἤρατε; Λέγουσιν αὐτῷ, Δώδεκα.
೧೯ನಾನುಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.
20 Ὅτε δὲ τοὺς ἑπτὰ εἰς τοὺς τετρακισχιλίους, πόσων σπυρίδων πληρώματα κλασμάτων ἤρατε; Οἱ δὲ εἶπον, Ἑπτά.
೨೦“ಮತ್ತುಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದು ಹಂಚಿಸಿದ ನಂತರ ಎಷ್ಟು ಪುಟ್ಟಿಗಳನ್ನು ತೆಗೆದುಕೊಂಡು ಹೋದಿರಿ” ಎಂದು ಕೇಳಿದನು. ಅವರು, “ಏಳು ಪುಟ್ಟಿಗಳು” ಅಂದರು.
21 Καὶ ἔλεγεν αὐτοῖς, Πῶς οὐ συνίετε;
೨೧ಆಗ ಆತನು ಅವರಿಗೆ, “ನೀವು ಇನ್ನೂ ಗ್ರಹಿಸಲಿಲ್ಲವೋ?” ಎಂದು ಕೇಳಿದನು.
22 Καὶ ἔρχεται εἰς Βηθσαϊδάν. Καὶ φέρουσιν αὐτῷ τυφλόν, καὶ παρακαλοῦσιν αὐτὸν ἵνα αὐτοῦ ἅψηται.
೨೨ಮತ್ತು ಅವರು ಬೇತ್ಸಾಯಿದ ಊರಿಗೆ ಬಂದರು. ಅಲ್ಲಿ ಜನರು ಒಬ್ಬ ಕುರುಡನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದು, ಇವನನ್ನು ಮುಟ್ಟಬೇಕು ಎಂದು ಆತನನ್ನು ಬೇಡಿಕೊಂಡರು.
23 Καὶ ἐπιλαβόμενος τῆς χειρὸς τοῦ τυφλοῦ, ἐξήγαγεν αὐτὸν ἔξω τῆς κώμης· καὶ πτύσας εἰς τὰ ὄμματα αὐτοῦ, ἐπιθεὶς τὰς χεῖρας αὐτῷ, ἐπηρώτα αὐτὸν εἴ τι βλέπει.
೨೩ಆತನು ಕುರುಡನ ಕೈ ಹಿಡಿದು ಊರ ಹೊರಗೆ ಕರೆದುಕೊಂಡು ಹೋಗಿ ಅವನ ಕಣ್ಣುಗಳ ಮೇಲೆ ಉಗುಳು ಹಚ್ಚಿ, ಅವನ ಮೇಲೆ ತನ್ನ ಕೈಗಳನ್ನಿಟ್ಟು, “ನಿನಗೆ ಏನಾದರೂ ಕಾಣುತ್ತದೆಯೋ?” ಎಂದು ಅವನನ್ನು ಕೇಳಿದನು.
24 Καὶ ἀναβλέψας ἔλεγε, Βλέπω τοὺς ἀνθρώπους, ὅτι ὡς δένδρα ὁρῶ περιπατοῦντας.
೨೪ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
25 Εἶτα πάλιν ἐπέθηκε τὰς χεῖρας ἐπὶ τοὺς ὀφθαλμοὺς αὐτοῦ, καὶ ἐποίησεν αὐτὸν ἀναβλέψαι. Καὶ ἀποκατεστάθη, καὶ ἐνέβλεψε τηλαυγῶς ἅπαντας.
೨೫ತನ್ನ ಕೈಗಳನ್ನು ಪುನಃ ಅವನ ಕಣ್ಣುಗಳ ಮೇಲಿಟ್ಟನು; ಆಗ ಅವನು ಕಣ್ಣರಳಿಸಿ ನೋಡಿ ಪೂರ್ಣ ದೃಷ್ಟಿಯನ್ನು ಹೊಂದಿದನು. ಅವನು ನೋಡಲು ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.
26 Καὶ ἀπέστειλεν αὐτὸν εἰς τὸν οἶκον αὐτοῦ, λέγων, Μηδὲ εἰς τὴν κώμην εἰσέλθῃς, μηδὲ εἴπῃς τινὶ ἐν τῇ κώμῃ.
೨೬ತರುವಾಯ ಆತನು, “ನೀನು ಊರೊಳಗೆ ಹೋಗಬೇಡ” ಎಂದು ಹೇಳಿ ಅವನನ್ನು ಅವನ ಮನೆಗೆ ಕಳುಹಿಸಿಬಿಟ್ಟನು.
27 Καὶ ἐξῆλθεν ὁ Ἰησοῦς καὶ οἱ μαθηταὶ αὐτοῦ εἰς τὰς κώμας Καισαρείας τῆς Φιλίππου· καὶ ἐν τῇ ὁδῷ ἐπηρώτα τοὺς μαθητὰς αὐτοῦ, λέγων αὐτοῖς, Τίνα με λέγουσιν οἱ ἄνθρωποι εἶναι;
೨೭ಯೇಸುವೂ ಆತನ ಶಿಷ್ಯರೂ ಫಿಲಿಪ್ಪನ ಕೈಸರೈಯ ಎಂಬ ಪಟ್ಟಣಕ್ಕೆ ಸೇರಿದ ಗ್ರಾಮಗಳಿಗೆ ಹೊರಟರು. ದಾರಿಯಲ್ಲಿ ಆತನು, “ಜನರು ನನ್ನನ್ನು ಯಾರೆಂದು ಹೇಳುತ್ತಾರೆ?” ಎಂದು ತನ್ನ ಶಿಷ್ಯರನ್ನು ಕೇಳಿದನು.
28 Οἱ δὲ ἀπεκρίθησαν, Ἰωάννην τὸν βαπτιστήν· καὶ ἄλλοι Ἠλίαν· ἄλλοι δὲ ἕνα τῶν προφητῶν.
೨೮ಅದಕ್ಕೆ ಅವರು, “ನಿನ್ನನ್ನು ಕೆಲವರು ಸ್ನಾನಿಕನಾದ ಯೋಹಾನನು ಅನ್ನುತ್ತಾರೆ; ಕೆಲವರು ಎಲೀಯನು ಅನ್ನುತ್ತಾರೆ; ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಅನ್ನುತ್ತಾರೆ” ಎಂದು ಹೇಳಿದರು.
29 Καὶ αὐτὸς λέγει αὐτοῖς, Ὑμεῖς δὲ τίνα με λέγετε εἶναι; Ἀποκριθεὶς δὲ ὁ Πέτρος λέγει αὐτῷ, Σὺ εἶ ὁ Χριστός.
೨೯ಆತನು ಅವರನ್ನು, ಕುರಿತು “ನೀವು ನನ್ನನ್ನು ಯಾರನ್ನುತ್ತೀರಿ?” ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
30 Καὶ ἐπετίμησεν αὐτοῖς, ἵνα μηδενὶ λέγωσι περὶ αὐτοῦ.
೩೦ಅದಕ್ಕೆ ಆತನು, “ನನ್ನ ವಿಷಯವಾಗಿ ಯಾರಿಗೂ ಹೇಳಬೇಡಿರಿ” ಎಂದು ಅವರಿಗೆ ಖಂಡಿತವಾಗಿ ಎಚ್ಚರಿಸಿದನು.
31 Καὶ ἤρξατο διδάσκειν αὐτούς, ὅτι δεῖ τὸν υἱὸν τοῦ ἀνθρώπου πολλὰ παθεῖν, καὶ ἀποδοκιμασθῆναι ἀπὸ τῶν πρεσβυτέρων καὶ ἀρχιερέων καὶ γραμματέων, καὶ ἀποκτανθῆναι, καὶ μετὰ τρεῖς ἡμέρας ἀναστῆναι·
೩೧ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.
32 καὶ παρρησίᾳ τὸν λόγον ἐλάλει. Καὶ προσλαβόμενος αὐτὸν ὁ Πέτρος ἤρξατο ἐπιτιμᾷν αὐτῷ.
೩೨ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.
33 Ὁ δὲ ἐπιστραφείς, καὶ ἰδὼν τοὺς μαθητὰς αὐτοῦ, ἐπετίμησε τῷ Πέτρῳ, λέγων, Ὕπαγε ὀπίσω μου, Σατανᾶ· ὅτι οὐ φρονεῖς τὰ τοῦ Θεοῦ, ἀλλὰ τὰ τῶν ἀνθρώπων.
೩೩ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.
34 Καὶ προσκαλεσάμενος τὸν ὄχλον σὺν τοῖς μαθηταῖς αὐτοῦ, εἶπεν αὐτοῖς, Ὅστις θέλει ὀπίσω μου ἐλθεῖν, ἀπαρνησάσθω ἑαυτόν, καὶ ἀράτω τὸν σταυρὸν αὐτοῦ, καὶ ἀκολουθείτω μοι.
೩೪ಆ ಮೇಲೆ ಆತನು ತನ್ನ ಶಿಷ್ಯರ ಜೊತೆಗೆ ಜನರ ಗುಂಪನ್ನೂ ಹತ್ತಿರ ಕರೆದು ಅವರಿಗೆ ಹೇಳಿದ್ದೇನಂದರೆ, “ಯಾರಿಗಾದರೂ ನನ್ನನ್ನು ಹಿಂಬಾಲಿಸಲು ಮನಸ್ಸಿದ್ದರೆ ಅವನು ತನ್ನನ್ನು ನಿರಾಕರಿಸಿ ತನ್ನ ಶಿಲುಬೆಯನ್ನು ಹೊತ್ತುಕೊಂಡು ನನ್ನನ್ನು ಹಿಂಬಾಲಿಸಲಿ.
35 Ὃς γὰρ ἂν θέλῃ τὴν ψυχὴν αὐτοῦ σῶσαι, ἀπολέσει αὐτήν· ὃς δ᾿ ἂν ἀπολέσῃ τὴν ψυχὴν αὐτοῦ ἕνεκεν ἐμοῦ καὶ τοῦ εὐαγγελίου, οὗτος σώσει αὐτήν.
೩೫ತನ್ನ ಪ್ರಾಣವನ್ನು ಉಳಿಸಿಕೊಳ್ಳಬೇಕೆಂದಿರುವವನು ಅದನ್ನು ಕಳೆದುಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿಯೂ, ಸುವಾರ್ತೆಯ ನಿಮಿತ್ತವಾಗಿಯೂ ತನ್ನ ಪ್ರಾಣವನ್ನು ಕಳೆದುಕೊಳ್ಳುವವನು ಅದನ್ನು ಉಳಿಸಿಕೊಳ್ಳುವನು.
36 Τί γὰρ ὠφελήσει ἄνθρωπον, ἐὰν κερδήσῃ τὸν κόσμον ὅλον, καὶ ζημιωθῇ τὴν ψυχὴν αὐτοῦ;
೩೬ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿಕೊಂಡರೂ ತನ್ನ ಸ್ವಂತ ಪ್ರಾಣವನ್ನೇ ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು?
37 Ἢ τί δώσει ἄνθρωπος ἀντάλλαγμα τῆς ψυχῆς αὐτοῦ;
೩೭ಒಬ್ಬನು ತನ್ನ ಪ್ರಾಣಕ್ಕೆ ಬದಲಾಗಿ ಏನು ಈಡು ಕೊಡಲಾದೀತು?
38 Ὃς γὰρ ἂν ἐπαισχυνθῇ με καὶ τοὺς ἐμοὺς λόγους ἐν τῇ γενεᾷ ταύτῃ τῇ μοιχαλίδι καὶ ἁμαρτωλῷ, καὶ ὁ υἱὸς τοῦ ἀνθρώπου ἐπαισχυνθήσεται αὐτόν, ὅταν ἔλθῃ ἐν τῇ δόξῃ τοῦ πατρὸς αὐτοῦ μετὰ τῶν ἀγγέλων τῶν ἁγίων.
೩೮ವ್ಯಭಿಚಾರಿಣಿಯಂತಿರುವ ಈ ಪಾಪಿಷ್ಠ ಪೀಳಿಗೆಯವರಲ್ಲಿ ಯಾರು ನನ್ನನ್ನೂ, ನನ್ನ ಮಾತುಗಳನ್ನೂ ಕುರಿತು ನಾಚಿಕೆಪಡುವರೋ, ಅಂಥವರನ್ನು ಕುರಿತು ಮನುಷ್ಯಕುಮಾರನು, ತಾನು ತನ್ನ ತಂದೆಯ ಪ್ರಭಾವದೊಡನೆ ಪರಿಶುದ್ಧ ದೇವದೂತರ ಸಮೇತವಾಗಿ ಬರುವಾಗ, ನಾಚಿಕೆಪಡುವನು” ಎಂದನು.

< Κατα Μαρκον 8 >