< קֹהֶלֶת 10 >

זְב֣וּבֵי מָ֔וֶת יַבְאִ֥ישׁ יַבִּ֖יעַ שֶׁ֣מֶן רֹוקֵ֑חַ יָקָ֛ר מֵחָכְמָ֥ה מִכָּבֹ֖וד סִכְל֥וּת מְעָֽט׃ 1
ಸತ್ತ ನೊಣಗಳು ಸುಗಂಧ ತೈಲವನ್ನು ದುರ್ವಾಸನೆಗೆ ಒಳಪಡಿಸುತ್ತದೆ. ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮಾನಗಳನ್ನು ಕೆಡಿಸಿಬಿಡುತ್ತದೆ.
לֵ֤ב חָכָם֙ לִֽימִינֹ֔ו וְלֵ֥ב כְּסִ֖יל לִשְׂמֹאלֹֽו׃ 2
ಜ್ಞಾನಿಯ ಹೃದಯವು ಬಲಗಡೆ ಸಾಗಿದರೆ, ಮೂರ್ಖನ ಹೃದಯವು ಎಡಗಡೆ ಸಾಗುವುದು.
וְגַם־בַּדֶּ֛רֶךְ כְּשֶׁהַסָּכָל (כְּשֶׁסָּכָ֥ל) הֹלֵ֖ךְ לִבֹּ֣ו חָסֵ֑ר וְאָמַ֥ר לַכֹּ֖ל סָכָ֥ל הֽוּא׃ 3
ಮೂರ್ಖನು ಮಾರ್ಗದಲ್ಲಿ ನಡೆಯುವಾಗಲೂ, ತಾನು ಅರಿವಿಲ್ಲದ ಮೂರ್ಖನೆಂದು ಪ್ರತಿಯೊಬ್ಬರಿಗೂ ಪ್ರಕಟಿಸುತ್ತಾನೆ.
אִם־ר֤וּחַ הַמֹּושֵׁל֙ תַּעֲלֶ֣ה עָלֶ֔יךָ מְקֹומְךָ֖ אַל־תַּנַּ֑ח כִּ֣י מַרְפֵּ֔א יַנִּ֖יחַ חֲטָאִ֥ים גְּדֹולִֽים׃ 4
ಅಧಿಕಾರಿಯು ನಿನಗೆ ವಿರುದ್ಧವಾಗಿ ಸಿಟ್ಟುಗೊಂಡರೆ, ನಿನ್ನ ಉದ್ಯೋಗವನ್ನು ಬಿಟ್ಟುಬಿಡಬೇಡ. ಏಕೆಂದರೆ ತಾಳ್ಮೆಯು ದೊಡ್ಡ ಅಪರಾಧಗಳನ್ನು ಶಾಂತಪಡಿಸುತ್ತದೆ.
יֵ֣שׁ רָעָ֔ה רָאִ֖יתִי תַּ֣חַת הַשָּׁ֑מֶשׁ כִּשְׁגָגָ֕ה שֶׁיֹּצָ֖א מִלִּפְנֵ֥י הַשַּׁלִּֽיט׃ 5
ಮತ್ತೊಂದು ವ್ಯಸನವನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ. ಅದು ಆಳುವವರಿಂದ ಬರುವ ತಪ್ಪಿನಿಂದಾದದ್ದು.
נִתַּ֣ן הַסֶּ֔כֶל בַּמְּרֹומִ֖ים רַבִּ֑ים וַעֲשִׁירִ֖ים בַּשֵּׁ֥פֶל יֵשֵֽׁבוּ׃ 6
ಅದು ಯಾವುದೆಂದರೆ, ಮೂರ್ಖರನ್ನು ಉನ್ನತ ಪದವಿಗೆ ನೇಮಿಸುವುದು. ಘನವಂತರನ್ನು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವಂತೆ ಮಾಡುವುದು.
רָאִ֥יתִי עֲבָדִ֖ים עַל־סוּסִ֑ים וְשָׂרִ֛ים הֹלְכִ֥ים כַּעֲבָדִ֖ים עַל־הָאָֽרֶץ׃ 7
ಕುದುರೆಗಳ ಮೇಲೆ ಸವಾರಿ ಮಾಡುವ ಸೇವಕರನ್ನೂ ಅಧಿಕಾರಿಗಳು ಸೇವಕರ ಹಾಗೆ ನಡೆದುಕೊಂಡು ಹೋಗುವುದನ್ನೂ ನಾನು ನೋಡಿದ್ದೇನೆ.
חֹפֵ֥ר גּוּמָּ֖ץ בֹּ֣ו יִפֹּ֑ול וּפֹרֵ֥ץ גָּדֵ֖ר יִשְּׁכֶ֥נּוּ נָחָֽשׁ׃ 8
ಗುಂಡಿಯನ್ನು ಅಗೆಯುವವನೇ ಅದರಲ್ಲಿ ಬೀಳುವನು. ಗೋಡೆಯನ್ನು ಒಡೆಯುವವನನ್ನು ಹಾವು ಕಡಿಯುವುದು.
מַסִּ֣יעַ אֲבָנִ֔ים יֵעָצֵ֖ב בָּהֶ֑ם בֹּוקֵ֥עַ עֵצִ֖ים יִסָּ֥כֶן בָּֽם׃ 9
ಗಣಿಯಿಂದ ಬಂಡೆಗಳನ್ನು ಸೀಳುವವನು ಗಾಯಗೊಳ್ಳುವನು. ಮರಕಡಿಯುವವನು ಅದರಿಂದಲೇ ಅಪಾಯಕ್ಕೊಳಗಾಗುವನು.
אִם־קֵהָ֣ה הַבַּרְזֶ֗ל וְהוּא֙ לֹא־פָנִ֣ים קִלְקַ֔ל וַחֲיָלִ֖ים יְגַבֵּ֑ר וְיִתְרֹ֥ון הַכְשֵׁ֖יר חָכְמָֽה׃ 10
ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.
אִם־יִשֹּׁ֥ךְ הַנָּחָ֖שׁ בְּלֹוא־לָ֑חַשׁ וְאֵ֣ין יִתְרֹ֔ון לְבַ֖עַל הַלָּשֹֽׁון׃ 11
ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?
דִּבְרֵ֥י פִי־חָכָ֖ם חֵ֑ן וְשִׂפְתֹ֥ות כְּסִ֖יל תְּבַלְּעֶֽנּוּ׃ 12
ಜ್ಞಾನಿಯ ಮಾತುಗಳು ಹಿತಕರ. ಆದರೆ ಬುದ್ಧಿಹೀನನ ಮಾತುಗಳು ಅವನಿಗೆ ವಿನಾಶಕರ.
תְּחִלַּ֥ת דִּבְרֵי־פִ֖יהוּ סִכְל֑וּת וְאַחֲרִ֣ית פִּ֔יהוּ הֹולֵל֖וּת רָעָֽה׃ 13
ಅವನ ಮಾತುಗಳು ಆರಂಭದಲ್ಲಿ ಮೂಢತನವಾಗಿರುವುದು. ಅವನ ಮಾತಿನ ಅಂತ್ಯವು ಹುಚ್ಚುತನವಾಗಿರುವುದು.
וְהַסָּכָ֖ל יַרְבֶּ֣ה דְבָרִ֑ים לֹא־יֵדַ֤ע הָאָדָם֙ מַה־שֶׁיִּֽהְיֶ֔ה וַאֲשֶׁ֤ר יִֽהְיֶה֙ מֵֽאַחֲרָ֔יו מִ֖י יַגִּ֥יד לֹֽו׃ 14
ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.
עֲמַ֥ל הַכְּסִילִ֖ים תְּיַגְּעֶ֑נּוּ אֲשֶׁ֥ר לֹֽא־יָדַ֖ע לָלֶ֥כֶת אֶל־עִֽיר׃ 15
ಮೂಢರ ಕಷ್ಟವು ಅವರನ್ನು ದಣಿಸುತ್ತದೆ. ನಗರಕ್ಕೆ ಹೇಗೆ ಹೋಗಬೇಕೆಂದು ಸಹ ಅವನಿಗೆ ತಿಳಿಯದು.
אִֽי־לָ֣ךְ אֶ֔רֶץ שֶׁמַּלְכֵּ֖ךְ נָ֑עַר וְשָׂרַ֖יִךְ בַּבֹּ֥קֶר יֹאכֵֽלוּ׃ 16
ಬಾಲಕನಾಗಿದ್ದವನು ದೇಶಕ್ಕೆ ಅರಸನಾಗಿದ್ದರೆ, ನಾಯಕರೆಲ್ಲರು ಬೆಳಿಗ್ಗೆಯೇ ಔತಣಕ್ಕೆ ಕೂತುಕೊಂಡರೆ ಅಯ್ಯೋ ಕಷ್ಟ!
אַשְׁרֵ֣יךְ אֶ֔רֶץ שֶׁמַּלְכֵּ֖ךְ בֶּן־חֹורִ֑ים וְשָׂרַ֙יִךְ֙ בָּעֵ֣ת יֹאכֵ֔לוּ בִּגְבוּרָ֖ה וְלֹ֥א בַשְּׁתִֽי׃ 17
ಶ್ರೇಷ್ಠ ಹಿನ್ನೆಲೆಯವನು ದೇಶಕ್ಕೆ ಅರಸನಾದರೆ, ರಾಜಕುಮಾರರು ಕುಡುಕರಾಗುವುದಕ್ಕೆ ಬದಲು, ಸರಿಯಾದ ಸಮಯದಲ್ಲಿ ಶಕ್ತಿಗಾಗಿ ಊಟ ಮಾಡಿದರೆ ಅದು ದೇಶಕ್ಕೆ ಆಶೀರ್ವಾದ.
בַּעֲצַלְתַּ֖יִם יִמַּ֣ךְ הַמְּקָרֶ֑ה וּבְשִׁפְל֥וּת יָדַ֖יִם יִדְלֹ֥ף הַבָּֽיִת׃ 18
ಸೋಮಾರಿತನದಿಂದ ಮನೆ ಕುಸಿಯುತ್ತದೆ. ಜೋಲುಗೈಯಿಂದ ಮನೆ ಸೋರುತ್ತದೆ.
לִשְׂחֹוק֙ עֹשִׂ֣ים לֶ֔חֶם וְיַ֖יִן יְשַׂמַּ֣ח חַיִּ֑ים וְהַכֶּ֖סֶף יַעֲנֶ֥ה אֶת־הַכֹּֽל׃ 19
ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.
גַּ֣ם בְּמַדָּֽעֲךָ֗ מֶ֚לֶךְ אַל־תְּקַלֵּ֔ל וּבְחַדְרֵי֙ מִשְׁכָּ֣בְךָ֔ אַל־תְּקַלֵּ֖ל עָשִׁ֑יר כִּ֣י עֹ֤וף הַשָּׁמַ֙יִם֙ יֹולִ֣יךְ אֶת־הַקֹּ֔ול וּבַ֥עַל הַכְּנָפַיִם (כְּנָפַ֖יִם) יַגֵּ֥יד דָּבָֽר׃ 20
ನಿನ್ನ ಆಲೋಚನೆಯಲ್ಲಿಯೂ ಅರಸನನ್ನು ನಿಂದಿಸಬೇಡ. ನೀನು ಮಲಗುವ ಕೋಣೆಯಲ್ಲಿ ಐಶ್ವರ್ಯವಂತರನ್ನು ಶಪಿಸಬೇಡ. ಏಕೆಂದರೆ ಆಕಾಶದ ಪಕ್ಷಿಗಳು ನಿನ್ನ ಮಾತನ್ನು ತೆಗೆದುಕೊಂಡು ಹೋಗಬಹುದು. ಹಾರುವ ಪಕ್ಷಿ ನಿನ್ನ ಸುದ್ದಿಯನ್ನು ತಿಳಿಸಬಹುದು.

< קֹהֶלֶת 10 >