< אֶסְתֵר 8 >

בַּיּ֣וֹם הַה֗וּא נָתַ֞ן הַמֶּ֤לֶךְ אֲחַשְׁוֵרוֹשׁ֙ לְאֶסְתֵּ֣ר הַמַּלְכָּ֔ה אֶת־בֵּ֥ית הָמָ֖ן צֹרֵ֣ר היהודיים וּמָרְדֳּכַ֗י בָּ֚א לִפְנֵ֣י הַמֶּ֔לֶךְ כִּֽי־הִגִּ֥ידָה אֶסְתֵּ֖ר מַ֥ה הוּא־לָֽהּ׃ 1
ಆ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ಎಸ್ತೇರ್ ರಾಣಿಗೆ ಕೊಟ್ಟನು. ಆಕೆಯು ಮೊರ್ದೆಕೈಗೂ ತನಗೂ ಇರುವ ಸಂಬಂಧವನ್ನು ತಿಳಿಸಿದಳು.
וַיָּ֨סַר הַמֶּ֜לֶךְ אֶת־טַבַּעְתּ֗וֹ אֲשֶׁ֤ר הֶֽעֱבִיר֙ מֵֽהָמָ֔ן וַֽיִּתְּנָ֖הּ לְמָרְדֳּכָ֑י וַתָּ֧שֶׂם אֶסְתֵּ֛ר אֶֽת־מָרְדֳּכַ֖י עַל־בֵּ֥ית הָמָֽן׃ פ 2
ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.
וַתּ֣וֹסֶף אֶסְתֵּ֗ר וַתְּדַבֵּר֙ לִפְנֵ֣י הַמֶּ֔לֶךְ וַתִּפֹּ֖ל לִפְנֵ֣י רַגְלָ֑יו וַתֵּ֣בְךְּ וַתִּתְחַנֶּן־ל֗וֹ לְהַֽעֲבִיר֙ אֶת־רָעַת֙ הָמָ֣ן הָֽאֲגָגִ֔י וְאֵת֙ מַֽחֲשַׁבְתּ֔וֹ אֲשֶׁ֥ר חָשַׁ֖ב עַל־הַיְּהוּדִֽים׃ 3
ಎಸ್ತೇರಳು ಪುನಃ ಅರಸನನ್ನು ಮಾತನಾಡಿಸುವುದಕ್ಕೆ ಹೋಗಿ ಅವನ ಪಾದಗಳಿಗೆ ಬಿದ್ದು, ಅಳುತ್ತಾ, “ಅಗಾಗನ ವಂಶದವನಾದ ಹಾಮಾನನು ಯೆಹೂದ್ಯರ ಹಾನಿಗಾಗಿ ಕಲ್ಪಿಸಿದ ದುಷ್ಟ ಯೋಜನೆಗಳನ್ನು, ಅಪಾಯಗಳನ್ನು ನಿವಾರಿಸಬೇಕು” ಎಂದು ವಿಜ್ಞಾಪಿಸಿದಳು.
וַיּ֤וֹשֶׁט הַמֶּ֙לֶךְ֙ לְאֶסְתֵּ֔ר אֵ֖ת שַׁרְבִ֣ט הַזָּהָ֑ב וַתָּ֣קָם אֶסְתֵּ֔ר וַֽתַּעֲמֹ֖ד לִפְנֵ֥י הַמֶּֽלֶךְ׃ 4
ಅರಸನು ಸುವರ್ಣ ರಾಜದಂಡವನ್ನು ಆಕೆಯ ಕಡೆಗೆ ಚಾಚಿದ್ದರಿಂದ ಆಕೆಯು ಎದ್ದು ಅರಸನ ಮುಂದೆ ನಿಂತಳು.
וַ֠תֹּאמֶר אִם־עַל־הַמֶּ֨לֶךְ ט֜וֹב וְאִם־מָצָ֧אתִי חֵ֣ן לְפָנָ֗יו וְכָשֵׁ֤ר הַדָּבָר֙ לִפְנֵ֣י הַמֶּ֔לֶךְ וְטוֹבָ֥ה אֲנִ֖י בְּעֵינָ֑יו יִכָּתֵ֞ב לְהָשִׁ֣יב אֶת־הַסְּפָרִ֗ים מַחֲשֶׁ֜בֶת הָמָ֤ן בֶּֽן־הַמְּדָ֙תָא֙ הָאֲגָגִ֔י אֲשֶׁ֣ר כָּתַ֗ב לְאַבֵּד֙ אֶת־הַיְּהוּדִ֔ים אֲשֶׁ֖ר בְּכָל־מְדִינ֥וֹת הַמֶּֽלֶךְ׃ 5
ಆಗ ಎಸ್ತೇರಳು ಅವನಿಗೆ, “ಅರಸನು ನನ್ನ ಮೇಲೆ ಕಟಾಕ್ಷವಿಟ್ಟು, ನನ್ನನ್ನು ಮೆಚ್ಚಿ, ನಾನು ಹೇಳುವ ಮಾತು ಒಳ್ಳೆಯದೆಂದು ಅದಕ್ಕೆ ಸಮ್ಮತಿಸುವುದಾದರೆ, ಅರಸನ ಎಲ್ಲಾ ಸಂಸ್ಥಾನಗಳಲ್ಲಿರುವ ಯೆಹೂದ್ಯರನ್ನು ಸಂಹರಿಸುವ ವಿಷಯವಾಗಿ ಅಗಾಗನ ವಂಶದವನೂ, ಹಮ್ಮೆದಾತನ ಮಗನು ಆದ ಹಾಮಾನನು ಬರೆಯಿಸಿದ ಪತ್ರವನ್ನು ರದ್ದುಮಾಡುವುದಕ್ಕಾಗಿ ಆಜ್ಞಾಪತ್ರವನ್ನು ಪ್ರಕಟಿಸಬೇಕು.
כִּ֠י אֵיכָכָ֤ה אוּכַל֙ וְֽרָאִ֔יתִי בָּרָעָ֖ה אֲשֶׁר־יִמְצָ֣א אֶת־עַמִּ֑י וְאֵֽיכָכָ֤ה אוּכַל֙ וְֽרָאִ֔יתִי בְּאָבְדַ֖ן מוֹלַדְתִּֽי׃ ס 6
ನನ್ನ ಜನರಿಗೆ ಕೇಡು ಸಂಭವಿಸುವುದನ್ನು ನೋಡಿ ನಾನು ಸಹಿಸಿಕೊಂಡಿರುವುದು ಹೇಗೆ? ನನ್ನ ಕುಲನಾಶನವನ್ನು ನೋಡುತ್ತಾ ಸುಮ್ಮನಿರುವುದು ಹೇಗೆ?” ಎಂದು ಬಿನ್ನವಿಸಿದಳು.
וַיֹּ֨אמֶר הַמֶּ֤לֶךְ אֲחַשְׁוֵרֹשׁ֙ לְאֶסְתֵּ֣ר הַמַּלְכָּ֔ה וּֽלְמָרְדֳּכַ֖י הַיְּהוּדִ֑י הִנֵּ֨ה בֵית־הָמָ֜ן נָתַ֣תִּי לְאֶסְתֵּ֗ר וְאֹתוֹ֙ תָּל֣וּ עַל־הָעֵ֔ץ עַ֛ל אֲשֶׁר־שָׁלַ֥ח יָד֖וֹ ביהודיים׃ 7
ಆಗ ಅಹಷ್ವೇರೋಷ್ ರಾಜನು ರಾಣಿಯಾದ ಎಸ್ತೇರಳಿಗೂ ಮತ್ತು ಯೆಹೂದ್ಯನಾದ ಮೊರ್ದೆಕೈಗೂ, “ಹಾಮಾನನು ಯೆಹೂದ್ಯರಿಗೆ ವಿರುದ್ಧವಾಗಿ ಕೈಯೆತ್ತಿದ್ದರಿಂದ ಅವನನ್ನು ಗಲ್ಲಿಗೆ ಹಾಕಿಸಿ, ಅವನ ಸೊತ್ತನ್ನು ಎಸ್ತೇರಳಿಗೆ ದಾನಮಾಡಿದ್ದೇನಲ್ಲಾ, ಅರಸನ ಹೆಸರಿನಲ್ಲಿ ಬರೆಯಲ್ಪಟ್ಟು ರಾಜಮುದ್ರೆಯಿರುವ ಲೇಖನವನ್ನು ಯಾರೂ ರದ್ದುಮಾಡಲು ಬರುವುದಿಲ್ಲ.
וְ֠אַתֶּם כִּתְב֨וּ עַל־הַיְּהוּדִ֜ים כַּטּ֤וֹב בְּעֵֽינֵיכֶם֙ בְּשֵׁ֣ם הַמֶּ֔לֶךְ וְחִתְמ֖וּ בְּטַבַּ֣עַת הַמֶּ֑לֶךְ כִּֽי־כְתָ֞ב אֲשֶׁר־נִכְתָּ֣ב בְּשֵׁם־הַמֶּ֗לֶךְ וְנַחְתּ֛וֹם בְּטַבַּ֥עַת הַמֶּ֖לֶךְ אֵ֥ין לְהָשִֽׁיב׃ 8
ಆದುದರಿಂದ ಯೆಹೂದ್ಯರ ವಿಷಯವಾಗಿ ನಿಮಗೆ ಸರಿತೋರುವುದನ್ನು ಅರಸನ ಹೆಸರಿನಲ್ಲಿ ನೀವೂ ಬರೆಯಿಸಿ, ಅದಕ್ಕೆ ರಾಜಮುದ್ರೆಯನ್ನು ಹಾಕಿರಿ” ಎಂದು ಹೇಳಿದನು.
וַיִּקָּרְא֣וּ סֹפְרֵֽי־הַמֶּ֣לֶךְ בָּֽעֵת־הַ֠הִיא בַּחֹ֨דֶשׁ הַשְּׁלִישִׁ֜י הוּא־חֹ֣דֶשׁ סִיוָ֗ן בִּשְׁלוֹשָׁ֣ה וְעֶשְׂרִים֮ בּוֹ֒ וַיִּכָּתֵ֣ב כְּֽכָל־אֲשֶׁר־צִוָּ֣ה מָרְדֳּכַ֣י אֶל־הַיְּהוּדִ֡ים וְאֶ֣ל הָאֲחַשְׁדַּרְפְּנִֽים־וְהַפַּחוֹת֩ וְשָׂרֵ֨י הַמְּדִינ֜וֹת אֲשֶׁ֣ר ׀ מֵהֹ֣דּוּ וְעַד־כּ֗וּשׁ שֶׁ֣בַע וְעֶשְׂרִ֤ים וּמֵאָה֙ מְדִינָ֔ה מְדִינָ֤ה וּמְדִינָה֙ כִּכְתָבָ֔הּ וְעַ֥ם וָעָ֖ם כִּלְשֹׁנ֑וֹ וְאֶ֨ל־הַיְּהוּדִ֔ים כִּכְתָבָ֖ם וְכִלְשׁוֹנָֽם׃ 9
ಆಗ ರಾಜಲೇಖಕರು ಕರೆಯಲ್ಪಟ್ಟರು. ಅವರು ಬಂದು ಮೂರನೆಯ ತಿಂಗಳಾದ ಜೇಷ್ಠಮಾಸದ ಇಪ್ಪತ್ತಮೂರನೆಯ ದಿನದಲ್ಲಿ, ಮೊರ್ದೆಕೈಯ ಆಜ್ಞಾನುಸಾರ ಯೆಹೂದ್ಯರಿಗೂ, ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರ ಇಪ್ಪತ್ತೇಳು ಸಂಸ್ಥಾನಗಳ ಉಪರಾಜರಿಗೂ, ದೇಶಾಧಿಪತಿಗಳಿಗೂ ಮತ್ತು ಅಧಿಕಾರಿಗಳಿಗೂ ಪತ್ರಗಳನ್ನು ಬರೆದರು. ಆ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಇದ್ದವು. ಯೆಹೂದ್ಯರಿಗೆ ಬರೆದ ಪತ್ರಗಳು ಯೆಹೂದ್ಯ ಬರಹದಲ್ಲಿಯೂ, ಭಾಷೆಗಳಲ್ಲಿಯೂ ಲಿಖಿತವಾದವು.
וַיִּכְתֹּ֗ב בְּשֵׁם֙ הַמֶּ֣לֶךְ אֲחַשְׁוֵרֹ֔שׁ וַיַּחְתֹּ֖ם בְּטַבַּ֣עַת הַמֶּ֑לֶךְ וַיִּשְׁלַ֣ח סְפָרִ֡ים בְּיַד֩ הָרָצִ֨ים בַּסּוּסִ֜ים רֹכְבֵ֤י הָרֶ֙כֶשׁ֙ הָֽאֲחַשְׁתְּרָנִ֔ים בְּנֵ֖י הָֽרַמָּכִֽים׃ 10
೧೦ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಆ ಪತ್ರಗಳಿಗೆ ರಾಜಮುದ್ರೆಯನ್ನು ಹಾಕಿ, ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದಂಥ, ಅರಸನ ಸೇವೆಗಾಗಿ ಉಪಯೋಗಿಸಲ್ಪಡುತ್ತಿದ್ದ ವೇಗವಾಗಿ ಓಡುವಂಥ ಕುದುರೆಗಳ ಮುಖಾಂತರ ಕಳುಹಿಸಿದನು.
אֲשֶׁר֩ נָתַ֨ן הַמֶּ֜לֶךְ לַיְּהוּדִ֣ים ׀ אֲשֶׁ֣ר בְּכָל־עִיר־וָעִ֗יר לְהִקָּהֵל֮ וְלַעֲמֹ֣ד עַל־נַפְשָׁם֒ לְהַשְׁמִיד֩ וְלַהֲרֹ֨ג וּלְאַבֵּ֜ד אֶת־כָּל־חֵ֨יל עַ֧ם וּמְדִינָ֛ה הַצָּרִ֥ים אֹתָ֖ם טַ֣ף וְנָשִׁ֑ים וּשְׁלָלָ֖ם לָבֽוֹז׃ 11
೧೧ಆ ಪತ್ರಗಳಲ್ಲಿ ಅರಸನು, “ಅಹಷ್ವೇರೋಷ್ ರಾಜನ ಎಲ್ಲಾ ಸಂಸ್ಥಾನಗಳ ಆಯಾ ಪಟ್ಟಣಗಳಲ್ಲಿರುವ ಯೆಹೂದ್ಯರು ಒಂದೇ ದಿನದಲ್ಲಿ ಅಂದರೆ, ಹನ್ನೆರಡನೆಯ ತಿಂಗಳಾದ ಫಾಲ್ಗುಣಮಾಸದ ಹದಿಮೂರನೆಯ ದಿನದಲ್ಲಿ ಒಟ್ಟಾಗಿ ಸೇರಿಕೊಳ್ಳಬೇಕು.
בְּי֣וֹם אֶחָ֔ד בְּכָל־מְדִינ֖וֹת הַמֶּ֣לֶךְ אֲחַשְׁוֵר֑וֹשׁ בִּשְׁלוֹשָׁ֥ה עָשָׂ֛ר לְחֹ֥דֶשׁ שְׁנֵים־עָשָׂ֖ר הוּא־חֹ֥דֶשׁ אֲדָֽר׃ 12
೧೨ತಮ್ಮ ಪ್ರಾಣರಕ್ಷಣೆಗಾಗಿ ಎದ್ದು, ತಮ್ಮ ವಿರುದ್ಧವಾಗಿ ಆಯುಧಗಳೊಡನೆ ನೆರೆದು ಬರುವ ಎಲ್ಲಾ ಜನಾಂಗಗಳವರನ್ನೂ, ಸಂಸ್ಥಾನಗಳವರನ್ನೂ, ಅವರ ಹೆಂಡತಿಯರು ಮಕ್ಕಳು ಸಹಿತವಾಗಿ ಕೊಂದು, ಸಂಹರಿಸಿ, ನಿರ್ನಾಮಗೊಳಿಸಬೇಕು.
פַּתְשֶׁ֣גֶן הַכְּתָ֗ב לְהִנָּ֤תֵֽן דָּת֙ בְּכָל־מְדִינָ֣ה וּמְדִינָ֔ה גָּל֖וּי לְכָל־הָעַמִּ֑ים וְלִהְי֨וֹת היהודיים עתודים לַיּ֣וֹם הַזֶּ֔ה לְהִנָּקֵ֖ם מֵאֹיְבֵיהֶֽם׃ 13
೧೩ಅವರ ಸೊತ್ತನ್ನು ಸೂರೆಮಾಡಬೇಕು, ಈ ಪತ್ರದ ಒಂದೊಂದು ಪ್ರತಿಯನ್ನು ಪ್ರತಿಯೊಂದು ಸಂಸ್ಥಾನದಲ್ಲಿ ರಾಜವಿಧಿಯೆಂದು ಎಲ್ಲಾ ಜನರಲ್ಲಿ ಪ್ರಕಟಿಸಬೇಕು, ಆ ದಿನದಲ್ಲಿ ಯೆಹೂದ್ಯರು ತಮ್ಮ ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೆ ಸಿದ್ಧರಾಗಿರಬೇಕು” ಎಂದು ಅಪ್ಪಣೆಮಾಡಿದ್ದನು.
הָרָצִ֞ים רֹכְבֵ֤י הָרֶ֙כֶשׁ֙ הָֽאֲחַשְׁתְּרָנִ֔ים יָֽצְא֛וּ מְבֹהָלִ֥ים וּדְחוּפִ֖ים בִּדְבַ֣ר הַמֶּ֑לֶךְ וְהַדָּ֥ת נִתְּנָ֖ה בְּשׁוּשַׁ֥ן הַבִּירָֽה׃ פ 14
೧೪ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅಂಚೆಯವರು ಅರಮನೆಯ ಸವಾರಿಕುದುರೆಗಳನ್ನು ಹತ್ತಿಕೊಂಡು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿ ಶೀಘ್ರವಾಗಿ ಹೊರಟರು.
וּמָרְדֳּכַ֞י יָצָ֣א ׀ מִלִּפְנֵ֣י הַמֶּ֗לֶךְ בִּלְב֤וּשׁ מַלְכוּת֙ תְּכֵ֣לֶת וָח֔וּר וַעֲטֶ֤רֶת זָהָב֙ גְּדוֹלָ֔ה וְתַכְרִ֥יךְ בּ֖וּץ וְאַרְגָּמָ֑ן וְהָעִ֣יר שׁוּשָׁ֔ן צָהֲלָ֖ה וְשָׂמֵֽחָה׃ 15
೧೫ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.
לַיְּהוּדִ֕ים הָֽיְתָ֥ה אוֹרָ֖ה וְשִׂמְחָ֑ה וְשָׂשֹׂ֖ן וִיקָֽר׃ 16
೧೬ಅಲ್ಲಿನ ಯೆಹೂದ್ಯರಿಗೆ ಸಂತೋಷ, ಗೌರವ, ಹರ್ಷಪ್ರಭಾವ ಮತ್ತು ತೇಜಸ್ಸುಳ್ಳವರಾದರು.
וּבְכָל־מְדִינָ֨ה וּמְדִינָ֜ה וּבְכָל־עִ֣יר וָעִ֗יר מְקוֹם֙ אֲשֶׁ֨ר דְּבַר־הַמֶּ֤לֶךְ וְדָתוֹ֙ מַגִּ֔יעַ שִׂמְחָ֤ה וְשָׂשׂוֹן֙ לַיְּהוּדִ֔ים מִשְׁתֶּ֖ה וְי֣וֹם ט֑וֹב וְרַבִּ֞ים מֵֽעַמֵּ֤י הָאָ֙רֶץ֙ מִֽתְיַהֲדִ֔ים כִּֽי־נָפַ֥ל פַּֽחַד־הַיְּהוּדִ֖ים עֲלֵיהֶֽם׃ 17
೧೭ರಾಜನಿರ್ಣಯ ಶಾಸನಗಳು ಪ್ರಕಟಿಸಲ್ಪಟ್ಟ ಪ್ರತಿಯೊಂದು ಸಂಸ್ಥಾನದಲ್ಲಿಯೂ ಪಟ್ಟಣದಲ್ಲಿಯೂ ಇದ್ದ ಯೆಹೂದ್ಯರಿಗೆ ಶುಭದಿನ ಉಂಟಾಯಿತು; ಅವರು ಸಂತೋಷದಿಂದಲೂ, ಉಲ್ಲಾಸದಿಂದಲೂ ಭಕ್ಷ್ಯಭೋಜನಮಾಡಿದರು. ದೇಶದ ಜನರಲ್ಲಿ ಅನೇಕರು ಯೆಹೂದ್ಯರಿಗೆ ಭಯಪಟ್ಟು ಅವರ ಮತಕ್ಕೆ ಸೇರಿದರು.

< אֶסְתֵר 8 >