< गलातियों 3 >

1 हे निर्बुद्धि गलातियों, किसने तुम्हें मोह लिया? तुम्हारी तो मानो आँखों के सामने यीशु मसीह क्रूस पर दिखाया गया!
ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?
2 मैं तुम से केवल यह जानना चाहता हूँ, कि तुम ने पवित्र आत्मा को, क्या व्यवस्था के कामों से, या विश्वास के समाचार से पाया?
ಒಂದು ಸಂಗತಿಯನ್ನು ಮಾತ್ರ ನಿಮ್ಮಿಂದ ತಿಳಿದುಕೊಳ್ಳಬೇಕೆಂದಿದ್ದೇನೆ. ನೀವು ದೇವರಾತ್ಮನನ್ನು ಹೊಂದಿದ್ದು ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಅನುಸರಿಸಿದ್ದರಿಂದಲೋ ಅಥವಾ ನಂಬಿಕೆಯ ಸುವಾರ್ತೆಯನ್ನು ಕೇಳಿದ್ದರಿಂದಲೋ?
3 क्या तुम ऐसे निर्बुद्धि हो, कि आत्मा की रीति पर आरम्भ करके अब शरीर की रीति पर अन्त करोगे?
ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?
4 क्या तुम ने इतना दुःख व्यर्थ उठाया? परन्तु कदाचित् व्यर्थ नहीं।
ನೀವು ಇವೆಲ್ಲವುಗಳನ್ನು ಅನುಭವಿಸಿದ್ದು ವ್ಯರ್ಥವೋ? ವ್ಯರ್ಥವೇ ಎಂದು ಹೇಳಬೇಕೇನು?
5 इसलिए जो तुम्हें आत्मा दान करता और तुम में सामर्थ्य के काम करता है, वह क्या व्यवस्था के कामों से या विश्वास के सुसमाचार से ऐसा करता है?
ದೇವರು ತನ್ನ ಆತ್ಮನನ್ನು ನಿಮಗೆ ಹೇರಳವಾಗಿ ಕೊಟ್ಟು ನಿಮ್ಮಲ್ಲಿ ಮಹತ್ಕಾರ್ಯಗಳನ್ನು ನಡಿಸುತ್ತಾ ಬಂದದ್ದು, ನೀವು ಧರ್ಮಶಾಸ್ತ್ರವನ್ನು ಅನುಸರಿಸಿದ್ದರಿಂದಲೋ ಅಥವಾ ಸುವಾರ್ತೆಯನ್ನು ಕೇಳಿ ನಂಬಿದ್ದರಿಂದಲೋ?
6 “अब्राहम ने तो परमेश्वर पर विश्वास किया और यह उसके लिये धार्मिकता गिनी गई।”
ಅಬ್ರಹಾಮನು “ದೇವರನ್ನು ನಂಬಿದನು, ಆ ನಂಬಿಕೆಯು ಅವನ ಪಾಲಿಗೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬುದಾಗಿ ಬರೆದಿದೆಯಲ್ಲಾ.
7 तो यह जान लो, कि जो विश्वास करनेवाले हैं, वे ही अब्राहम की सन्तान हैं।
ಆದ್ದರಿಂದ ನಂಬುವವರೇ ಅಬ್ರಹಾಮನ ಮಕ್ಕಳೆಂದು ತಿಳಿದುಕೊಳ್ಳಿರಿ.
8 और पवित्रशास्त्र ने पहले ही से यह जानकर, कि परमेश्वर अन्यजातियों को विश्वास से धर्मी ठहराएगा, पहले ही से अब्राहम को यह सुसमाचार सुना दिया, कि “तुझ में सब जातियाँ आशीष पाएँगी।”
ದೇವರು ಅನ್ಯಜನರನ್ನು ನಂಬಿಕೆಯ ನಿಮಿತ್ತವಾಗಿಯೇ ನೀತಿವಂತರೆಂದು ನಿರ್ಣಯಿಸುವನೆಂಬುದಾಗಿರುವ ವೇದವಾಕ್ಯವನ್ನು ಮೊದಲೇ ಕಂಡು ಅಬ್ರಹಾಮನಿಗೆ, “ನಿನ್ನ ಮೂಲಕ ಎಲ್ಲಾ ಜನಾಂಗಗಳವರಿಗೆ ಆಶೀರ್ವಾದವುಂಟಾಗುವುದೆಂಬ” ಸುವಾರ್ತೆಯನ್ನು ಮುಂಚಿತವಾಗಿಯೇ ತಿಳಿಸಿತು.
9 तो जो विश्वास करनेवाले हैं, वे विश्वासी अब्राहम के साथ आशीष पाते हैं।
ಹೀಗಿರಲಾಗಿ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವವರು, ನಂಬಿಕೆಯಿಟ್ಟ ಅಬ್ರಹಾಮನೊಂದಿಗೆ ಆಶೀರ್ವಾದವನ್ನು ಹೊಂದುವರು.
10 १० अतः जितने लोग व्यवस्था के कामों पर भरोसा रखते हैं, वे सब श्राप के अधीन हैं, क्योंकि लिखा है, “जो कोई व्यवस्था की पुस्तक में लिखी हुई सब बातों के करने में स्थिर नहीं रहता, वह श्रापित है।”
೧೦ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
11 ११ पर यह बात प्रगट है, कि व्यवस्था के द्वारा परमेश्वर के यहाँ कोई धर्मी नहीं ठहरता क्योंकि धर्मी जन विश्वास से जीवित रहेगा।
೧೧ಇದಲ್ಲದೆ ಧರ್ಮಶಾಸ್ತ್ರದಿಂದ ಯಾರೂ ದೇವರ ಸನ್ನಿಧಿಯಲ್ಲಿ ನೀತಿವಂತರಾಗಲು ಸಾಧ್ಯವಿಲ್ಲವೆಂದು ಸ್ಪಷ್ಟವಾಗಿದೆ, ಏಕೆಂದರೆ “ನೀತಿವಂತನು ನಂಬಿಕೆಯಿಂದಲೇ ಬದುಕುವನು” ಎಂದು ಪ್ರಕಟವಾಗಿದೆ.
12 १२ पर व्यवस्था का विश्वास से कुछ सम्बंध नहीं; पर “जो उनको मानेगा, वह उनके कारण जीवित रहेगा।”
೧೨ಹಾಗೆಯೇ ಮೋಶೆಯ ಧರ್ಮಶಾಸ್ತ್ರಕ್ಕೆ ನಂಬಿಕೆಯು ಆಧಾರವಾಗಿಲ್ಲ, “ಅದರ ನೇಮಗಳನ್ನು ಆಚರಿಸುವವನೇ ಅವುಗಳ ಮೂಲಕ ಬದುಕುವನು” ಎಂದು ಬರೆದಿದೆ.
13 १३ मसीह ने जो हमारे लिये श्रापित बना, हमें मोल लेकर व्यवस्था के श्राप से छुड़ाया क्योंकि लिखा है, “जो कोई काठ पर लटकाया जाता है वह श्रापित है।”
೧೩ಯೇಸು ಕ್ರಿಸ್ತನು ನಮನ್ನು ಶಾಪದಿಂದ ಬಿಡಿಸುವುದಕ್ಕಾಗಿ ತಾನೇ ಶಾಪಗ್ರಸ್ತನಾದನು. ಏಕೆಂದರೆ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ “ಮರಕ್ಕೆ ತೂಗುಹಾಕಲ್ಪಟ್ಟು ಪ್ರತಿಯೊಬ್ಬನು ಶಾಪಗ್ರಸ್ತನು” ಎಂದು ತಿಳಿದಿದ್ದೇವೆ.
14 १४ यह इसलिए हुआ, कि अब्राहम की आशीष मसीह यीशु में अन्यजातियों तक पहुँचे, और हम विश्वास के द्वारा उस आत्मा को प्राप्त करें, जिसकी प्रतिज्ञा हुई है।
೧೪ಅಬ್ರಹಾಮನಿಗೆ ಉಂಟಾದ ಆಶೀರ್ವಾದವು, ಕ್ರಿಸ್ತ ಯೇಸುವಿನಲ್ಲಿ ಅನ್ಯಜನರಿಗೆಲ್ಲ ಸಿಗುವಂತೆಯೂ ಮತ್ತು ದೇವರು ವಾಗ್ದಾನ ಮಾಡಿದ ಪರಿಶುದ್ಧಾತ್ಮನು ನಮಗೆ ನಂಬಿಕೆಯ ಮೂಲಕ ದೊರಕುವಂತೆಯೂ, ತನ್ನ ಮರಣದ ಮೂಲಕ ಕ್ರಿಸ್ತನು ನಮ್ಮನ್ನು ಕೊಂಡುಕೊಂಡನು.
15 १५ हे भाइयों, मैं मनुष्य की रीति पर कहता हूँ, कि मनुष्य की वाचा भी जो पक्की हो जाती है, तो न कोई उसे टालता है और न उसमें कुछ बढ़ाता है।
೧೫ಸಹೋದರರೇ, ದೈನಂದಿನ ಜೀವನದಿಂದ ಒಂದು ದೃಷ್ಟಾಂತವನ್ನು ನಿಮಗೆ ಹೇಳುತ್ತೇನೆ, ಒಬ್ಬನು ಮತ್ತೊಬ್ಬನೊಡನೆ ಸ್ಥಿರಪಡಿಸಿದ ಒಂದು ಒಪ್ಪಂದವು ಕೇವಲ ಮನುಷ್ಯನದ್ದಾಗಿದ್ದರೂ, ಅದನ್ನು ಯಾರೂ ರದ್ದುಮಾಡುವಂತಿಲ್ಲ ಮತ್ತು ಅದಕ್ಕೆ ಏನನ್ನೂ ಸೇರಿಸುವಂತಿಲ್ಲ.
16 १६ अतः प्रतिज्ञाएँ अब्राहम को, और उसके वंश को दी गईं; वह यह नहीं कहता, “वंशों को,” जैसे बहुतों के विषय में कहा, पर जैसे एक के विषय में कि “तेरे वंश को” और वह मसीह है।
೧೬ಹಾಗೆಯೇ, ದೇವರು ಅಬ್ರಹಾಮನಿಗೆ ಮತ್ತು ಅವನಿಂದ ಬರುವ ಪೀಳಿಗೆಗೆ ವಾಗ್ದಾನ ಮಾಡಿದನು. ಆದರೆ “ಪೀಳಿಗೆ” ಎಂದು ಹೇಳಿದಾಗ, ಅದು ವಂಶದಲ್ಲಿ ಇರುವ ಎಲ್ಲರಿಗೂ ಅನ್ವಯಿಸದೇ, ಅಬ್ರಹಾಮನ ವಂಶಕ್ಕೆ ಸೇರಿದ ಒಬ್ಬ ವ್ಯಕ್ತಿಯನ್ನೇ ಸೂಚಿಸುತ್ತದೆ. ಆ ಒಬ್ಬನು ಕ್ರಿಸ್ತನೇ.
17 १७ पर मैं यह कहता हूँ कि जो वाचा परमेश्वर ने पहले से पक्की की थी, उसको व्यवस्था चार सौ तीस वर्षों के बाद आकर नहीं टाल सकती, कि प्रतिज्ञा व्यर्थ ठहरे।
೧೭ನಾನು ಹೇಳಬಯಸುವುದೇನೆಂದರೆ, ದೇವರು ಮೊದಲು ಅನುಮೋದಿಸಿದ ಒಡಂಬಡಿಕೆಯನ್ನು, ನಾನೂರ ಮೂವತ್ತು ವರ್ಷಗಳ ನಂತರ ಬಂದ ಮೋಶೆಯ ಧರ್ಮಶಾಸ್ತ್ರವು ಅದನ್ನು ನಿರರ್ಥಕಗೊಳಿಸಿ, ಆ ವಾಗ್ದಾನವನ್ನು ಬರಿದಾಗಿಮಾಡಲು ಸಾಧ್ಯವಿಲ್ಲ.
18 १८ क्योंकि यदि विरासत व्यवस्था से मिली है, तो फिर प्रतिज्ञा से नहीं, परन्तु परमेश्वर ने अब्राहम को प्रतिज्ञा के द्वारा दे दी है।
೧೮ಅಬ್ರಹಾಮನಿಗೆ ಸಿಕ್ಕ ಆ ಬಾಧ್ಯತೆ ಮೋಶೆಯ ಧರ್ಮಶಾಸ್ತ್ರದ ಮೇಲೆ ಆಧಾರಗೊಂಡಿರುವುದಾದರೆ, ವಾಗ್ದಾನದ ಮೇಲೆ ಆಧಾರವಾಗಲು ಸಾಧ್ಯವಾಗುತ್ತಿರಲಿಲ್ಲ. ಆದರೆ ದೇವರು ಅಬ್ರಹಾಮನಿಗೆ ಕೊಟ್ಟ ಬಾಧ್ಯತೆಯನ್ನು ವಾಗ್ದಾನದ ಮೂಲಕವಾಗಿಯೇ ದಯಪಾಲಿಸಿದ್ದಾನೆ.
19 १९ तब फिर व्यवस्था क्या रही? वह तो अपराधों के कारण बाद में दी गई, कि उस वंश के आने तक रहे, जिसको प्रतिज्ञा दी गई थी, और व्यवस्था स्वर्गदूतों के द्वारा एक मध्यस्थ के हाथ ठहराई गई।
೧೯ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ಯಾತಕ್ಕೆ? ವಾಗ್ದಾನದಲ್ಲಿ ಸೂಚಿತನಾದವನು ಹುಟ್ಟಿ ಬರುವತನಕ ದೇವರು ಇಂಥಿಂಥದು ಅಪರಾಧವೆಂದು ತೋರಿಸುವುದಕ್ಕಾಗಿ ಅದನ್ನು ವಾಗ್ದಾನದ ತರುವಾಯ ನೇಮಿಸಿ ದೇವದೂತರ ಮುಖಾಂತರ ಒಬ್ಬ ಮಧ್ಯಸ್ಥನ ಕೈಯಲ್ಲಿ ಕೊಟ್ಟನು.
20 २० मध्यस्थ तो एक का नहीं होता, परन्तु परमेश्वर एक ही है।
೨೦ಒಂದೇ ಪಕ್ಷವಿದ್ದರೆ ಮಧ್ಯಸ್ಥನು ಬೇಕಿಲ್ಲ. ದೇವರಾದರೋ ಒಬ್ಬನೇ.
21 २१ तो क्या व्यवस्था परमेश्वर की प्रतिज्ञाओं के विरोध में है? कदापि नहीं! क्योंकि यदि ऐसी व्यवस्था दी जाती जो जीवन दे सकती, तो सचमुच धार्मिकता व्यवस्था से होती।
೨೧ಹಾಗಾದರೆ ಮೋಶೆಯ ಧರ್ಮಶಾಸ್ತ್ರವು ದೇವರ ವಾಗ್ದಾನಗಳಿಗೆ ವಿರುದ್ಧವೋ? ಹಾಗೆ ಎಂದಿಗೂ ತಿಳಿದುಕೊಳ್ಳಬಾರದು. ಬದುಕಿಸುವುದಕ್ಕೆ ಶಕ್ತವಾಗಿರುವ ಧರ್ಮಶಾಸ್ತ್ರವು ಕೊಡಲ್ಪಟ್ಟಿದ್ದರೆ ಅದನ್ನು ಅನುಸರಿಸುವುದರ ಮೂಲಕ ನಿಸ್ಸಂದೇಹವಾಗಿ ನೀತಿಯುಂಟಾಗುತ್ತಿತ್ತು.
22 २२ परन्तु पवित्रशास्त्र ने सब को पाप के अधीन कर दिया, ताकि वह प्रतिज्ञा जिसका आधार यीशु मसीह पर विश्वास करना है, विश्वास करनेवालों के लिये पूरी हो जाए।
೨೨ಸಮಸ್ತ ಲೋಕವು ಪಾಪಕ್ಕೆ ಅಧೀನವಾಯಿತೆಂದು ಪವಿತ್ರಗ್ರಂಥವು ಸ್ಪಷ್ಪೀಕರಿಸುತ್ತದೆ. ಹೀಗಿರುವುದರಿಂದ ವಾಗ್ದಾನ ಮಾಡಿದ ಸೌಭಾಗ್ಯವನ್ನು ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಿಗೆ ಅವರ ನಂಬಿಕೆಯ ಆಧಾರದ ಮೇಲೆ ಕೊಡಲಾಗುತ್ತದೆ.
23 २३ पर विश्वास के आने से पहले व्यवस्था की अधीनता में हम कैद थे, और उस विश्वास के आने तक जो प्रगट होनेवाला था, हम उसी के बन्धन में रहे।
೨೩ಆದರೆ ಯೇಸು ಕ್ರಿಸ್ತನ ನಂಬಿಕೆಯಲ್ಲಿ ಜೀವಿಸುವ ಕಾಲ ಬರುವುದಕ್ಕೆ ಮೊದಲು ನಾವು ಮುಂದಕ್ಕೆ ಪ್ರಕಟವಾಗಬೇಕಾಗಿದ್ದ ಆ ನಂಬಿಕೆಗೆ ವಶವಾಗುವುದಕ್ಕಾಗಿ ಮೋಶೆಯ ಧರ್ಮಶಾಸ್ತ್ರದಿಂದ ನಾವು ಬಂಧಿಸಲ್ಪಟ್ಟಿದ್ದೆವು.
24 २४ इसलिए व्यवस्था मसीह तक पहुँचाने के लिए हमारी शिक्षक हुई है, कि हम विश्वास से धर्मी ठहरें।
೨೪ನಾವು ನಂಬಿಕೆಯಿಂದ ಯೇಸು ಕ್ರಿಸ್ತನಲ್ಲಿ ನೀತಿವಂತರೆಂಬ ನಿರ್ಣಯವನ್ನು ಹೊಂದುವ ಕಾಲ ಬರುವ ತನಕ, ಮೋಶೆಯ ಧರ್ಮಶಾಸ್ತ್ರವು ನಮ್ಮನ್ನು ಮುನ್ನಡೆಸುವ ಪಾಲಕನಂತಾಗಿತ್ತು.
25 २५ परन्तु जब विश्वास आ चुका, तो हम अब शिक्षक के अधीन न रहे।
೨೫ಆದರೆ ಈಗ ಕ್ರಿಸ್ತ ನಂಬಿಕೆಯು ಬಂದಿರಲಾಗಿ ನಾವು ಮುನ್ನಡೆಸುವಂಥ ಧರ್ಮಶಾಸ್ತ್ರದ ಹತೋಟಿಯಲ್ಲಿ ಇಲ್ಲ.
26 २६ क्योंकि तुम सब उस विश्वास करने के द्वारा जो मसीह यीशु पर है, परमेश्वर की सन्तान हो।
೨೬ಹಾಗೆ ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿಟ್ಟಿರುವ ನಂಬಿಕೆಯ ಮೂಲಕ ದೇವರ ಮಕ್ಕಳಾಗಿದ್ದೀರಿ.
27 २७ और तुम में से जितनों ने मसीह में बपतिस्मा लिया है उन्होंने मसीह को पहन लिया है।
೨೭ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.
28 २८ अब न कोई यहूदी रहा और न यूनानी; न कोई दास, न स्वतंत्र; न कोई नर, न नारी; क्योंकि तुम सब मसीह यीशु में एक हो।
೨೮ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.
29 २९ और यदि तुम मसीह के हो, तो अब्राहम के वंश और प्रतिज्ञा के अनुसार वारिस भी हो।
೨೯ನೀವು ಕ್ರಿಸ್ತನವರಾಗಿದ್ದರೆ ಅಬ್ರಹಾಮನ ವಂಶದವರಾಗಿ ಹಾಗೂ ದೇವರ ವಾಗ್ದಾನಕ್ಕನುಸಾರವಾಗಿ ಬಾಧ್ಯರೂ ಆಗಿದ್ದೀರಿ.

< गलातियों 3 >