< लूका 10 >

1 और इन बातों के बाद प्रभु ने सत्तर और मनुष्य नियुक्त किए और जिस-जिस नगर और जगह को वह आप जाने पर था, वहाँ उन्हें दो-दो करके अपने आगे भेजा।
ಇದಾದ ಮೇಲೆ ಕರ್ತನು ಇನ್ನೂ ಎಪ್ಪತ್ತು ಮಂದಿಯನ್ನು ತನ್ನ ಶಿಷ್ಯರನ್ನಾಗಿ ನೇಮಿಸಿ, ಅವರನ್ನು ಇಬ್ಬಿಬ್ಬರಾಗಿ ತಾನು ಹೋಗಬೇಕೆಂದಿದ್ದ ಪ್ರತಿಯೊಂದು ಊರಿಗೂ ಪ್ರತಿಯೊಂದು ಸ್ಥಳಕ್ಕೂ ಮುಂದಾಗಿ ಕಳುಹಿಸಿದನು.
2 और उसने उनसे कहा, “पके खेत बहुत हैं; परन्तु मजदूर थोड़े हैं इसलिए खेत के स्वामी से विनती करो, कि वह अपने खेत काटने को मजदूर भेज दे।
ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ಬೆಳೆಯು ಹೇರಳವಾಗಿದೆ, ಕೊಯ್ಲುಗಾರರು ಕೆಲವರೂ ಮಾತ್ರ ಇದ್ದಾರೆ; ಆದುದರಿಂದ ಕೊಯ್ಲಿಗೆ ಆಳುಗಳನ್ನು ಕಳುಹಿಸಬೇಕೆಂದು ಬೆಳೆಯ ಯಜಮಾನನನ್ನು ಬೇಡಿಕೊಳ್ಳಿರಿ.
3 जाओ; देखों मैं तुम्हें भेड़ों के समान भेड़ियों के बीच में भेजता हूँ।
ಹೋಗಿರಿ, ತೋಳಗಳ ನಡುವೆ ಕುರಿಮರಿಗಳಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ.
4 इसलिए न बटुआ, न झोली, न जूते लो; और न मार्ग में किसी को नमस्कार करो।
ನೋಡಿರಿ, ನೀವು ಹೋಗುವಾಗ ಹಣದ ಚೀಲವನ್ನಾಗಲಿ, ಪ್ರವಾಸದ ಚೀಲವನ್ನಾಗಲಿ, ಕಾಲಿಗೆ ಕೆರಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿರಿ. ದಾರಿಯಲ್ಲಿ ಯಾರಿಗೂ ವಂದಿಸಬೇಡಿರಿ.
5 जिस किसी घर में जाओ, पहले कहो, ‘इस घर पर कल्याण हो।’
ಇದಲ್ಲದೆ ನೀವು ಯಾವ ಮನೆಯೊಳಗೆ ಹೋದರೂ, ‘ಈ ಮನೆಗೆ ಸಮಾಧಾನವಾಗಲಿ’ ಎಂದು ಮೊದಲು ಹೇಳಿರಿ.
6 यदि वहाँ कोई कल्याण के योग्य होगा; तो तुम्हारा कल्याण उस पर ठहरेगा, नहीं तो तुम्हारे पास लौट आएगा।
ಸಮಾಧಾನ ಹೊಂದಲು ಯೋಗ್ಯನು ಆ ಮನೆಯಲ್ಲಿ ಇದ್ದರೆ ನಿಮ್ಮ ಸಮಾಧಾನವು ಅವನ ಮೇಲೆ ನಿಲ್ಲುವುದು, ಇಲ್ಲದಿದ್ದರೆ ಅದು ನಿಮಗೆ ಹಿಂತಿರುಗುವುದು.
7 उसी घर में रहो, और जो कुछ उनसे मिले, वही खाओ-पीओ, क्योंकि मजदूर को अपनी मजदूरी मिलनी चाहिए; घर-घर न फिरना।
ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.
8 और जिस नगर में जाओ, और वहाँ के लोग तुम्हें उतारें, तो जो कुछ तुम्हारे सामने रखा जाए वही खाओ।
ಮತ್ತು ನೀವು ಯಾವ ಊರಿಗಾದರೂ ಹೋದ ಮೇಲೆ ಆ ಊರಿನ ಜನರು ನಿಮ್ಮನ್ನು ಸೇರಿಸಿಕೊಂಡರೆ ಅವರು ನಿಮಗೆ ಬಡಿಸಿದ್ದನ್ನು ಊಟಮಾಡಿರಿ.
9 वहाँ के बीमारों को चंगा करो: और उनसे कहो, ‘परमेश्वर का राज्य तुम्हारे निकट आ पहुँचा है।’
ಅಲ್ಲಿರುವ ರೋಗಿಗಳನ್ನು ವಾಸಿಮಾಡಿ ಅವರಿಗೆ, ‘ದೇವರ ರಾಜ್ಯವು ನಿಮ್ಮ ಸಮೀಪಕ್ಕೆ ಬಂದಿದೆ’ ಎಂದು ಹೇಳಿರಿ.
10 १० परन्तु जिस नगर में जाओ, और वहाँ के लोग तुम्हें ग्रहण न करें, तो उसके बाजारों में जाकर कहो,
೧೦ಆದರೆ ನೀವು ಯಾವ ಊರಿಗಾದರೂ ಹೋದ ಮೇಲೆ ಆ ಜನರು ನಿಮ್ಮನ್ನು ಸ್ವೀಕರಿಸದ್ದಿದ್ದರೆ, ನೀವು ಆ ಊರ ಬೀದಿಗಳಿಗೆ ಬಂದು,
11 ११ ‘तुम्हारे नगर की धूल भी, जो हमारे पाँवों में लगी है, हम तुम्हारे सामने झाड़ देते हैं, फिर भी यह जान लो, कि परमेश्वर का राज्य तुम्हारे निकट आ पहुँचा है।’
೧೧‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮ್ಮ ವಿರುದ್ಧವಾಗಿ ಝಾಡಿಸಿಬಿಡುತ್ತೇವೆ. ಆದಾಗ್ಯೂ ದೇವರ ರಾಜ್ಯವು ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ’ ಎಂಬುದಾಗಿ ಹೇಳಿರಿ.
12 १२ मैं तुम से कहता हूँ, कि उस दिन उस नगर की दशा से सदोम की दशा अधिक सहने योग्य होगी।
೧೨ಆ ದಿನದಲ್ಲಿ ಅಂತಹ ಊರಿನ ಗತಿಯು ಸೊದೋಮ್ ಊರಿನ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಹೇಳುತ್ತೇನೆ.
13 १३ “हाय खुराजीन! हाय बैतसैदा! जो सामर्थ्य के काम तुम में किए गए, यदि वे सोर और सीदोन में किए जाते, तो टाट ओढ़कर और राख में बैठकर वे कब के मन फिराते।
೧೩ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
14 १४ परन्तु न्याय के दिन तुम्हारी दशा से सोर और सीदोन की दशा अधिक सहने योग्य होगी।
೧೪ಆದರೆ ನ್ಯಾಯವಿಚಾರಣೆಯಲ್ಲಿ ನಿಮ್ಮ ಗತಿಗಿಂತಲೂ ತೂರ್ ಸೀದೋನ್ ಪಟ್ಟಣಗಳ ಗತಿಯು ಮೇಲಾಗಿರುವುದು.
15 १५ और हे कफरनहूम, क्या तू स्वर्ग तक ऊँचा किया जाएगा? तू तो अधोलोक तक नीचे जाएगा। (Hadēs g86)
೧೫ಎಲೈ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಇಲ್ಲ! ಪಾತಾಳಕ್ಕೇ ಇಳಿಯುವಿ. (Hadēs g86)
16 १६ “जो तुम्हारी सुनता है, वह मेरी सुनता है, और जो तुम्हें तुच्छ जानता है, वह मुझे तुच्छ जानता है; और जो मुझे तुच्छ जानता है, वह मेरे भेजनेवाले को तुच्छ जानता है।”
೧೬ನಿಮ್ಮ ಮಾತನ್ನು ಕೇಳುವವನು ನನ್ನ ಮಾತನ್ನು ಕೇಳುವವನಾಗಿದ್ದಾನೆ, ನಿಮ್ಮನ್ನು ತಿರಸ್ಕರಿಸುವವನು ನನ್ನನ್ನು ತಿರಸ್ಕರಿಸುವವನಾಗಿದ್ದಾನೆ, ನನ್ನನ್ನು ತಿರಸ್ಕಾರ ಮಾಡುವವನು ನನ್ನನ್ನು ಕಳುಹಿಸಿಕೊಟ್ಟಾತನನ್ನೇ ತಿರಸ್ಕಾರ ಮಾಡುವವನಾಗಿದ್ದಾನೆ” ಅಂದನು.
17 १७ वे सत्तर आनन्द से फिर आकर कहने लगे, “हे प्रभु, तेरे नाम से दुष्टात्मा भी हमारे वश में है।”
೧೭ತರುವಾಯ ಆ ಎಪ್ಪತ್ತು ಮಂದಿಯು ಸಂತೋಷವುಳ್ಳವರಾಗಿ ಹಿಂತಿರುಗಿ ಬಂದು, “ಕರ್ತನೇ, ದೆವ್ವಗಳು ಕೂಡಾ ನಿನ್ನ ಹೆಸರಿನಲ್ಲಿ ನಮಗೆ ಅಧೀನವಾಗುತ್ತವೆ” ಅಂದರು.
18 १८ उसने उनसे कहा, “मैं शैतान को बिजली के समान स्वर्ग से गिरा हुआ देख रहा था।
೧೮ಯೇಸು ಅವರಿಗೆ, “ಸೈತಾನನು ಮಿಂಚಿನಂತೆ ಆಕಾಶದಿಂದ ಬೀಳುವುದನ್ನು ಕಂಡೆನು.
19 १९ मैंने तुम्हें साँपों और बिच्छुओं को रौंदनेका, और शत्रु की सारी सामर्थ्य पर अधिकार दिया है; और किसी वस्तु से तुम्हें कुछ हानि न होगी।
೧೯ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವುದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವುದೂ ನಿಮಗೆ ಕೇಡು ಮಾಡುವುದೇ ಇಲ್ಲ.
20 २० तो भी इससे आनन्दित मत हो, कि आत्मा तुम्हारे वश में हैं, परन्तु इससे आनन्दित हो कि तुम्हारे नाम स्वर्ग पर लिखे हैं।”
೨೦ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಿಮ್ಮ ಹೆಸರುಗಳು ಪರಲೋಕದಲ್ಲಿ ಬರೆಯಲ್ಪಟ್ಟಿವೆ ಎಂದು ಸಂತೋಷಪಡಿರಿ” ಎಂದು ಹೇಳಿದನು.
21 २१ उसी घड़ी वह पवित्र आत्मा में होकर आनन्द से भर गया, और कहा, “हे पिता, स्वर्ग और पृथ्वी के प्रभु, मैं तेरा धन्यवाद करता हूँ, कि तूने इन बातों को ज्ञानियों और समझदारों से छिपा रखा, और बालकों पर प्रगट किया, हाँ, हे पिता, क्योंकि तुझे यही अच्छा लगा।
೨೧ಅದೇ ಗಳಿಗೆಯಲ್ಲಿ ಆತನು ಪವಿತ್ರಾತ್ಮನನಿಂದ ಉಲ್ಲಾಸಗೊಂಡು ಹೇಳಿದ್ದೇನಂದರೆ, “ತಂದೆಯೇ, ಪರಲೋಕ ಮತ್ತು ಭೂಲೋಕಗಳ ಒಡೆಯನೇ, ನೀನು ಜ್ಞಾನಿಗಳಿಗೂ ಮತ್ತು ವಿವೇಕಿಗಳಿಗೂ ಈ ವಿಷಯಗಳನ್ನು ಮರೆಮಾಡಿ, ಮಕ್ಕಳಿಗೆ ಪ್ರಕಟಮಾಡಿರುವುದರಿಂದ ನಿನ್ನನ್ನು ಕೊಂಡಾಡುತ್ತೇನೆ. ಹೌದು, ತಂದೆಯೇ, ಹೀಗೆ ಮಾಡುವುದೇ ಒಳ್ಳೆಯದೆಂದು ನಿನ್ನ ದೃಷ್ಟಿಗೆ ತೋರಿದ್ದರಿಂದ ನಿನ್ನನ್ನು ಕೊಂಡಾಡುತ್ತೇನೆ.
22 २२ मेरे पिता ने मुझे सब कुछ सौंप दिया है; और कोई नहीं जानता कि पुत्र कौन है, केवल पिता और पिता कौन है यह भी कोई नहीं जानता, केवल पुत्र के और वह जिस पर पुत्र उसे प्रकट करना चाहे।”
೨೨ನನ್ನ ತಂದೆಯು ಎಲ್ಲವನ್ನೂ ನನಗೆ ಒಪ್ಪಿಸಿದ್ದಾನೆ. ಮಗನು ಎಂಥವನೆಂದು ತಂದೆಯ ಹೊರತು ಮತ್ತಾರೂ ತಿಳಿದಿರುವುದಿಲ್ಲ, ತಂದೆ ಎಂಥವನೆಂದು ಮಗನ ಹೊರತು ಇನ್ನಾರು ತಿಳಿದಿರುವುದಿಲ್ಲ ಮತ್ತು ಮಗನು ತಂದೆಯನ್ನು ಯಾರಿಗೆ ಪ್ರಕಟಪಡಿಸುವುದಕ್ಕೆ ಮನಸ್ಸುಳ್ಳವನಾಗಿದ್ದಾನೋ, ಅವನೂ ಆತನನ್ನು ತಿಳಿದವನಾಗಿದ್ದಾನೆ” ಅಂದನು.
23 २३ और चेलों की ओर मुड़कर अकेले में कहा, “धन्य हैं वे आँखें, जो ये बातें जो तुम देखते हो देखती हैं,
೨೩ಆ ಮೇಲೆ ಆತನು ಶಿಷ್ಯರ ಕಡೆಗೆ ತಿರುಗಿಕೊಂಡು ಪ್ರತ್ಯೇಕವಾಗಿ ಹೇಳಿದ್ದೇನೆಂದರೆ, “ನೀವು ನೋಡುತ್ತಿರುವ ಸಂಗತಿಗಳನ್ನು ನೋಡುವವರು ಧನ್ಯರು.
24 २४ क्योंकि मैं तुम से कहता हूँ, कि बहुत से भविष्यद्वक्ताओं और राजाओं ने चाहा, कि जो बातें तुम देखते हो देखें; पर न देखीं और जो बातें तुम सुनते हो सुनें, पर न सुनीं।”
೨೪ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ” ಅಂದನು.
25 २५ तब एक व्यवस्थापक उठा; और यह कहकर, उसकी परीक्षा करने लगा, “हे गुरु, अनन्त जीवन का वारिस होने के लिये मैं क्या करूँ?” (aiōnios g166)
೨೫ಆಗ ಒಬ್ಬ ಧರ್ಮೋಪದೇಶಕನು ಎದ್ದು ಆತನನ್ನು ಪರೀಕ್ಷಿಸುವುದಕ್ಕಾಗಿ, “ಬೋಧಕನೇ, ನಾನು ನಿತ್ಯಜೀವವನ್ನು ಹೊಂದಿಕೊಳ್ಳಲು ಏನು ಮಾಡಬೇಕು?” ಎಂದು ಕೇಳಲು, (aiōnios g166)
26 २६ उसने उससे कहा, “व्यवस्था में क्या लिखा है? तू कैसे पढ़ता है?”
೨೬ಆತನು ಅವನಿಗೆ, “ಧರ್ಮಶಾಸ್ತ್ರದಲ್ಲಿ ಏನು ಬರೆದದೆ? ಹೇಗೆ ಓದಿದ್ದೀ?” ಎಂದು ಕೇಳಿದನು.
27 २७ उसने उत्तर दिया, “तू प्रभु अपने परमेश्वर से अपने सारे मन और अपने सारे प्राण और अपनी सारी शक्ति और अपनी सारी बुद्धि के साथ प्रेम रख; और अपने पड़ोसी से अपने जैसा प्रेम रख।”
೨೭ಅದಕ್ಕೆ ಅವನು, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಶಕ್ತಿಯಿಂದಲೂ ನಿನ್ನ ಪೂರ್ಣ ಬುದ್ಧಿಯಿಂದಲೂ ಪ್ರೀತಿಸಬೇಕು.’ ಮತ್ತು ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂದು ಬರೆದದೆ” ಅಂದನು.
28 २८ उसने उससे कहा, “तूने ठीक उत्तर दिया, यही कर तो तू जीवित रहेगा।”
೨೮ಆತನು ಅವನಿಗೆ, “ನೀನು ಸರಿಯಾಗಿ ಉತ್ತರಕೊಟ್ಟಿರುವಿ, ಅದರಂತೆ ಮಾಡು, ಮಾಡಿದರೆ ನಿತ್ಯಜೀವಕ್ಕೆ ಬಾಧ್ಯನಾಗುವಿ” ಎಂದು ಹೇಳಿದನು.
29 २९ परन्तु उसने अपने आपको धर्मी ठहराने की इच्छा से यीशु से पूछा, “तो मेरा पड़ोसी कौन है?”
೨೯ಆದರೆ ಅವನು ತನ್ನನ್ನು ನೀತಿವಂತನೆಂದು ತೋರಿಸಿಕೊಳ್ಳುವುದಕ್ಕೆ ಅಪೇಕ್ಷಿಸಿ, “ನನ್ನ ನೆರೆಯವನು ಯಾರು?” ಎಂದು ಯೇಸುವನ್ನು ಕೇಳಲು,
30 ३० यीशु ने उत्तर दिया “एक मनुष्य यरूशलेम से यरीहो को जा रहा था, कि डाकुओं ने घेरकर उसके कपड़े उतार लिए, और मारपीट कर उसे अधमरा छोड़कर चले गए।
೩೦ಯೇಸು ಅವನಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನಂದರೆ, “ಒಬ್ಬಾನೊಬ್ಬ ಮನುಷ್ಯನು ಯೆರೂಸಲೇಮಿನ ಬೆಟ್ಟದ ಪ್ರದೇಶದಿಂದ ಇಳಿದು ಯೆರಿಕೋ ಎಂಬ ಊರಿಗೆ ಹೋಗುತ್ತಿರುವಾಗ ಕಳ್ಳರ ಕೈಗೆ ಸಿಕ್ಕಿಬಿದ್ದನು. ಅವರು ಅವನನ್ನು ಸುಲಿಗೆ ಮಾಡಿಕೊಂಡು, ಹೊಡೆದು, ಅವನನ್ನು ಅರೆಜೀವಮಾಡಿ ಬಿಟ್ಟುಹೋದರು.
31 ३१ और ऐसा हुआ कि उसी मार्ग से एक याजक जा रहा था, परन्तु उसे देखकर कतराकर चला गया।
೩೧ಆಗ ಒಬ್ಬ ಯಾಜಕನು ಆ ದಾರಿಯಲ್ಲಿ ಇಳಿದುಬರುತ್ತಾ ಅವನನ್ನು ಕಂಡು ಓರೆಯಾಗಿ ಹೋದನು.
32 ३२ इसी रीति से एक लेवीउस जगह पर आया, वह भी उसे देखकर कतराकर चला गया।
೩೨ಅದೇ ರೀತಿಯಲ್ಲಿ ಒಬ್ಬ ಲೇವಿಯು ಆ ಸ್ಥಳಕ್ಕೆ ಬಂದು ಅವನನ್ನು ಕಂಡು ಓರೆಯಾಗಿ ಹೋದನು.
33 ३३ परन्तु एक सामरीयात्री वहाँ आ निकला, और उसे देखकर तरस खाया।
೩೩ಆದರೆ ಒಬ್ಬ ಸಮಾರ್ಯದವನು ಪ್ರಯಾಣಮಾಡುತ್ತಾ ಅವನು ಬಿದಿದ್ದ ಸ್ಥಳಕ್ಕೆ ಬಂದಾಗ ಅವನನ್ನು ಕಂಡು ಕನಿಕರಿಸಿ,
34 ३४ और उसके पास आकर और उसके घावों पर तेल और दाखरस डालकरपट्टियाँ बाँधी, और अपनी सवारी पर चढ़ाकर सराय में ले गया, और उसकी सेवा टहल की।
೩೪ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
35 ३५ दूसरे दिन उसने दो दीनार निकालकर सराय के मालिक को दिए, और कहा, ‘इसकी सेवा टहल करना, और जो कुछ तेरा और लगेगा, वह मैं लौटने पर तुझे दे दूँगा।’
೩೫ಮರುದಿನ ಅವನು ಎರಡು ದಿನಾರಿಗಳನ್ನುತೆಗೆದು ಛತ್ರದವನಿಗೆ ಕೊಟ್ಟು, ‘ಇವನನ್ನು ಆರೈಕೆಮಾಡು, ಇದಕ್ಕಿಂತ ಹೆಚ್ಚಾಗಿ ಏನಾದರೂ ವೆಚ್ಚಮಾಡಿದರೆ ನಾನು ಹಿಂತಿರುಗಿ ಬಂದಾಗ ನಿನಗೆ ಕೊಡುವೆನು’ ಅಂದನು.
36 ३६ अब तेरी समझ में जो डाकुओं में घिर गया था, इन तीनों में से उसका पड़ोसी कौन ठहरा?”
೩೬ಈ ಮೂವರಲ್ಲಿ ಯಾವನು ಕಳ್ಳರ ಕೈಗೆ ಸಿಕ್ಕಿದವನಿಗೆ ನೆರೆಯವನಾದನೆಂದು ನಿನಗೆ ತೋರುತ್ತದೆ ಹೇಳು?” ಎಂದು ಕೇಳಿದ್ದಕ್ಕೆ,
37 ३७ उसने कहा, “वही जिसने उस पर तरस खाया।” यीशु ने उससे कहा, “जा, तू भी ऐसा ही कर।”
೩೭ಆ ಧರ್ಮೋಪದೇಶಕನು, “ಅವನಿಗೆ ದಯೆ ತೋರಿಸಿದವನೇ” ಅಂದನು. ಆಗ ಯೇಸು ಅವನಿಗೆ, “ಹೋಗು, ನೀನೂ ಅದರಂತೆ ಮಾಡು” ಎಂದು ಹೇಳಿದನು.
38 ३८ फिर जब वे जा रहे थे, तो वह एक गाँव में गया, और मार्था नाम एक स्त्री ने उसे अपने घर में स्वागत किया।
೩೮ಅವರು ಸಂಚಾರಮಾಡುತ್ತಿರುವಾಗ ಆತನು ಒಂದು ಹಳ್ಳಿಗೆ ಬಂದನು. ಅಲ್ಲಿ ಮಾರ್ಥಳೆಂಬ ಒಬ್ಬ ಸ್ತ್ರೀಯು ಆತನನ್ನು ತನ್ನ ಮನೆಯಲ್ಲಿ ಉಳಿಸಿಕೊಂಡಳು.
39 ३९ और मरियम नामक उसकी एक बहन थी; वह प्रभु के पाँवों के पास बैठकर उसका वचन सुनती थी।
೩೯ಆಕೆಗೆ ಮರಿಯಳೆಂಬ ಒಬ್ಬ ತಂಗಿ ಇದ್ದಳು. ಈಕೆಯು ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತುಕೊಂಡು ಆತನ ವಾಕ್ಯವನ್ನು ಕೇಳುತ್ತಿದ್ದಳು.
40 ४० परन्तु मार्था सेवा करते-करते घबरा गई और उसके पास आकर कहने लगी, “हे प्रभु, क्या तुझे कुछ भी चिन्ता नहीं कि मेरी बहन ने मुझे सेवा करने के लिये अकेली ही छोड़ दिया है? इसलिए उससे कह, मेरी सहायता करे।”
೪೦ಆದರೆ ಮಾರ್ಥಳು ಉಪಚಾರ ಸೇವೆಯ ವಿಷಯವಾಗಿ ಬಹಳ ಬೇಸತ್ತು ಯೇಸುವಿನ ಬಳಿಗೆ ಬಂದು, “ಕರ್ತನೇ, ನನ್ನ ತಂಗಿಯು ಸೇವೆಗೆ ನನ್ನೊಬ್ಬಳನ್ನೇ ಬಿಟ್ಟಿದ್ದಾಳೆ, ಇದಕ್ಕೆ ನಿನಗೆ ಚಿಂತೆಯಿಲ್ಲವೋ? ನನಗೆ ನೆರವಾಗಬೇಕೆಂದು ಆಕೆಗೆ ಹೇಳು” ಅಂದಳು.
41 ४१ प्रभु ने उसे उत्तर दिया, “मार्था, हे मार्था; तू बहुत बातों के लिये चिन्ता करती और घबराती है।
೪೧ಆದರೆ, ಕರ್ತನು ಆಕೆಗೆ, “ಮಾರ್ಥಳೇ, ಮಾರ್ಥಳೇ, ನೀನು ಅನೇಕ ವಿಷಯಗಳಿಗಾಗಿ ಚಿಂತೆಯಲ್ಲಿಯೂ ಗಡಿಬಿಡಿಯಲ್ಲಿಯೂ ಸಿಕ್ಕಿಕೊಂಡಿದ್ದೀ.
42 ४२ परन्तु एक बात अवश्य है, और उस उत्तम भाग को मरियम ने चुन लिया है: जो उससे छीना न जाएगा।”
೪೨ಆದರೆ ಅಗತ್ಯವಾದದ್ದು ಒಂದೇ, ಮರಿಯಳು ಆ ಉತ್ತಮ ಭಾಗವನ್ನು ಆರಿಸಿಕೊಂಡಿದ್ದಾಳೆ, ಅದು ಆಕೆಯಿಂದ ತೆಗೆಯಲ್ಪಡುವುದಿಲ್ಲ” ಎಂದು ಉತ್ತರಕೊಟ್ಟನು.

< लूका 10 >