< ルカの福音書 13 >

1 さて,ちょうどその時,ガリラヤ人たちのことを彼に報告した。ピラトが彼らの血を彼らの犠牲と混ぜたのである。
ಅದೇ ಸಮಯದಲ್ಲಿ ಕೆಲವರು ಯೇಸುವಿನ ಹತ್ತಿರದಲ್ಲಿದ್ದು, ಪಿಲಾತನು ಗಲಿಲಾಯದವರ ರಕ್ತವನ್ನು ಅವರು ಕೊಟ್ಟ ಬಲಿಗಳ ಸಂಗಡ ಬೆರಸಿದನೆಂದು ಆತನಿಗೆ ತಿಳಿಸಿದರು.
2 イエスは彼らに答えた,「あなた方は,彼らがこのような災難に遭ったからといって,これらのガリラヤ人たちがほかのすべてのガリラヤ人たちよりも罪人だったと思うのか。
ಅದಕ್ಕೆ ಯೇಸು ಅವರಿಗೆ, “ಆ ಗಲಿಲಾಯದವರು ಇಂಥಾ ಕೊಲೆಯನ್ನು ಅನುಭವಿಸಿದ್ದರಿಂದ ಅವರನ್ನು ಎಲ್ಲಾ ಗಲಿಲಾಯದವರಿಗಿಂತ ಪಾಪಿಷ್ಠರೆಂದು ಭಾವಿಸುತ್ತೀರೋ?
3 あなた方に告げるが,そうではない。むしろ,あなた方も悔い改めなければ,みな同じように滅びるだろう。
ಹಾಗೆ ಭಾವಿಸಕೂಡದೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ.
4 あるいは,シロアムの塔が倒れて押し殺されたあの十八人は,エルサレムに住むすべての人たちよりも違反の多い者だったと思うのか。
ಇಲ್ಲವೆ ಸಿಲೊವಾಮಿನಲ್ಲಿ ಗೋಪುರ ಬಿದ್ದು ಸತ್ತ ಆ ಹದಿನೆಂಟು ಮಂದಿಯು ಯೆರೂಸಲೇಮಿನಲ್ಲಿ ವಾಸವಾಗಿರುವ ಎಲ್ಲಾ ಮನುಷ್ಯರಿಗಿಂತಲೂ ಕೆಟ್ಟವರೆಂದು ನೀವು ಭಾವಿಸುತ್ತೀರೋ?
5 あなた方に告げるが,そうではない。むしろ,あなた方も悔い改めなければ,みな同じように滅びるだろう」 。
ಹಾಗಲ್ಲವೆಂದು ನಿಮಗೆ ಹೇಳುತ್ತೇನೆ. ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳದಿದ್ದರೆ ನೀವೆಲ್ಲರೂ ಅವರಂತೆ ನಾಶವಾಗುವಿರಿ” ಎಂದು ಹೇಳಿದನು.
6 彼は次のたとえを話した。「ある人が,自分のブドウ園に植えた一本のイチジクの木を持っていた。彼はそこに実を探しに来たが,何も見つからなかった。
ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.
7 彼はブドウの栽培人に言った,『見ろ,この三年間,このイチジクの木に実を探しに来ているのに,何も見つからなかった。これを切り倒してしまえ。なぜこれが土地を無駄にふさいでいるのか』。
ಬಳಿಕ ಅವನು ತೋಟಗಾರನಿಗೆ, ‘ನೋಡು, ನಾನು ಮೂರು ವರ್ಷದಿಂದಲೂ ಈ ಅಂಜೂರದ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದಿದ್ದೇನೆ; ಆದರೂ ನನಗೆ ಸಿಕ್ಕಲಿಲ್ಲ. ಇದನ್ನು ಕಡಿದು ಹಾಕು. ಇದರಿಂದ ಭೂಮಿಯು ಯಾಕೆ ವ್ಯರ್ಥವಾಗಬೇಕು’ ಎಂದು ಹೇಳಿದನು.
8 栽培人は答えた,『ご主人様,それを今年だけそのままにしておいてやってください。この木の周りを掘って,肥料をやりますから。
ಅದಕ್ಕೆ ಆ ತೋಟಗಾರನು, ‘ಯಜಮಾನನೇ ಈ ವರ್ಷವೂ ಇದನ್ನು ಬಿಡು, ಅಷ್ಟರಲ್ಲಿ ನಾನು ಇದರ ಸುತ್ತಲು ಅಗೆದು ಗೊಬ್ಬರ ಹಾಕುತ್ತೇನೆ.
9 もし実を結べば上等ですし,そうでなければ,その後で,これを切り倒してしまって構いません』」 。
ಮುಂದೆ ಅದರಲ್ಲಿ ಹಣ್ಣು ಬಿಟ್ಟರೆ ಸರಿ, ಇಲ್ಲದಿದ್ದರೆ ಇದನ್ನು ಕಡಿದುಹಾಕಬಹುದು’” ಎಂದು ಉತ್ತರ ಕೊಟ್ಟನು.
10 彼は安息日に会堂の一つで教えていた。
೧೦ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
11 見よ,十八年間も病弱の霊に取りつかれた女がいた。彼女は腰が曲がったままで,どうしても伸ばすことができなかった。
೧೧ಅಲ್ಲಿ ಹದಿನೆಂಟು ವರ್ಷಗಳಿಂದ ದುರಾತ್ಮನಿಂದ ಬಾಧಿತಳಾಗಿ ಬೆನ್ನು ಬಗ್ಗಿ ಹೋಗಿ ಗೂನಿಯಾಗಿದ್ದು ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದ ಒಬ್ಬ ಹೆಂಗಸು ಇದ್ದಳು.
12 イエスは彼女を見ると,呼び寄せて彼女に言った,「女よ,あなたは自分の病弱さから解き放たれている」 。
೧೨ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ, “ನಿನ್ನ ರೋಗವು ಬಿಡುಗಡೆಯಾಯಿತು” ಎಂದು ಹೇಳಿ
13 彼女の上に手を置いた。すると,すぐに彼女はまっすぐになり,神に栄光をささげた。
೧೩ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು. ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು.
14 会堂長は,イエスが安息日にいやしたので憤慨し,群衆に言った,「人々が働くべき日は六日ある。だからそれらの日にやって来て,いやしてもらうがよい。安息日にはいけないのだ!」
೧೪ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
15 そこで主は彼に答えた,「偽善者たち! あなた方はおのおの,安息日に自分の牛やロバを家畜小屋から解いて,水を飲ませに引いて行くではないか。
೧೫ಆ ಮಾತನ್ನು ಕೇಳಿ ಕರ್ತನು ಅವನಿಗೆ, “ಕಪಟಿಗಳೇ, ನಿಮ್ಮಲ್ಲಿ ಪ್ರತಿಯೊಬ್ಬನು ಸಬ್ಬತ್ ದಿನದಲ್ಲಿ ತನ್ನ ಎತ್ತನ್ನಾಗಲಿ ಕತ್ತೆಯನ್ನಾಗಲಿ ಗೋದಲಿಯಿಂದ ಬಿಚ್ಚಿ ನೀರು ಕುಡಿಸುವುದಕ್ಕಾಗಿ ಹಿಡಿದುಕೊಂಡು ಹೋಗುತ್ತಾನಲ್ಲವೇ.
16 アブラハムの娘で,サタンが十八年間も縛っていたこの女は,安息日にその束縛から解かれるべきではなかったか」 。
೧೬ಹಾಗಾದರೆ ಹದಿನೆಂಟು ವರ್ಷಗಳ ತನಕ ಸೈತಾನನು ಕಟ್ಟಿ ಹಾಕಿದ್ದವಳೂ ಅಬ್ರಹಾಮನ ವಂಶದವಳೂ ಆಗಿರುವ ಈಕೆಯನ್ನು ಸಬ್ಬತ್ ದಿನದಲ್ಲಿ ಈ ಬಂಧನದಿಂದ ಬಿಡಿಸಬಾರದೋ?” ಎಂದು ಕೇಳಿದನು.
17 彼がこれらのことを言うと,彼の反対者たちはみな恥じ入った。しかし,群衆はみな,彼によってなされたすべての栄光ある事柄のために喜んだ。
೧೭ಈ ಮಾತುಗಳನ್ನು ಆತನು ಹೇಳುತ್ತಿರಲಾಗಿ ಆತನ ವಿರೋಧಿಗಳೆಲ್ಲರೂ ಅವಮಾನಿತರಾದರು. ಗುಂಪು ಕೂಡಿದ್ದ ಜನರೆಲ್ಲರೂ ಆತನಿಂದಾಗುತ್ತಿದ್ದ ಎಲ್ಲಾ ಮಹತ್ತಾದ ಕಾರ್ಯಗಳಿಗೆ ಸಂತೋಷಪಟ್ಟರು.
18 彼は言った,「神の王国は何に似ているだろうか。それを何と比べようか。
೧೮ತರುವಾಯ ಯೇಸು ಕೇಳಿದ್ದೇನಂದರೆ, “ದೇವರ ರಾಜ್ಯವು ಏನನ್ನು ಹೋಲುತ್ತದೆ? ಅದನ್ನು ನಾನು ಯಾವುದಕ್ಕೆ ಹೋಲಿಸಲಿ?
19 それは,ある人が取って自分の庭にまいた,一粒のからしの種のようなものだ。それは成長し,大きな木になり,その枝に空の鳥たちが巣を作った」 。
೧೯ಅದು ಸಾಸಿವೆ ಕಾಳಿಗೆ ಹೋಲಿಕೆಯಾಗಿದೆ. ಒಬ್ಬ ಮನುಷ್ಯನು ಅದನ್ನು ತೆಗೆದುಕೊಂಡು ಹೋಗಿ ತನ್ನ ತೋಟದಲ್ಲಿ ಹಾಕಿದನು. ಅದು ಬೆಳೆದು ಮರವಾಯಿತು. ಮತ್ತು ಆಕಾಶದಲ್ಲಿ ಹಾರಾಡುವ ಪಕ್ಷಿಗಳು ಅದರ ಕೊಂಬೆಗಳಲ್ಲಿ ಗೂಡು ಕಟ್ಟಿದವು” ಅಂದನು.
20 また彼は言った,「神の王国を何と比べようか。
೨೦ಆತನು ಇನ್ನೂ ಹೇಳಿದ್ದೇನಂದರೆ, “ದೇವರ ರಾಜ್ಯವನ್ನು ನಾನು ಯಾವುದಕ್ಕೆ ಹೋಲಿಸಲಿ?
21 それはパン種のようだ。ある女がそれを取って,三ますの麦粉の中に隠すと,ついには全体が発酵した」 。
೨೧ಅದು ಹುಳಿಹಿಟ್ಟಿಗೆ ಹೋಲಿಕೆಯಾಗಿದೆ. ಅದನ್ನು ಒಬ್ಬ ಹೆಂಗಸು ತೆಗೆದು ಮೂರು ಸೇರು ಹಿಟ್ಟಿನಲ್ಲಿ ಕಲಸಿಡಲು ಆ ಹಿಟ್ಟೆಲ್ಲಾ ಹುಳಿಯಾಯಿತು” ಅಂದನು.
22 彼は町々や村々を通って行きながら,教え,エルサレムに向けて旅をしていた。
೨೨ಯೇಸು ಊರೂರಿಗೂ ಗ್ರಾಮ ಗ್ರಾಮಕ್ಕೂ ಹೋಗಿ ಉಪದೇಶ ಮಾಡುತ್ತಾ ಯೆರೂಸಲೇಮಿಗೆ ಪ್ರಯಾಣ ಮಾಡುತ್ತಿದ್ದನು.
23 ある者が彼に言った,「主よ,救われる者は少ないのですか」。 彼は彼らに言った,
೨೩ಆಗ ಒಬ್ಬನು, “ಕರ್ತನೇ, ರಕ್ಷಣೆ ಹೊಂದುವವರು ಸ್ವಲ್ಪ ಜನರೋ?” ಎಂದು ಕೇಳಲು,
24 「狭い戸口を通って入るよう必死に努めなさい。あなた方に告げるが,入ろうと努めながら,入れない人が多いからだ。
೨೪ಆತನು ಅವರಿಗೆ, “ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಹೋಗುವುದಕ್ಕೆ ಪ್ರಯಾಸಪಡಿರಿ. ಏಕೆಂದರೆ ಬಹು ಜನರು ಒಳಗೆ ಹೋಗುವುದಕ್ಕೆ ನೋಡುವರು. ಆದರೆ ಅವರಿಂದಾಗುವುದಿಲ್ಲ ಎಂದು ನಿಮಗೆ ಹೇಳುತ್ತೇನೆ.
25 いったん家の主人が起き上がって戸を閉めてしまうと,あなた方が外に立ち,戸をたたいて,『だんな様,だんな様,わたしたちに開けてください!』と言い始めても,彼は答えてあなた方に告げるだろう,『わたしはあなた方を知らないし,あなた方がどこから来たのかも知らない』。
೨೫ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು
26 その時,あなた方は言い始めるだろう,『わたしたちはあなたの面前で食べたり飲んだりしましたし,あなたはわたしたちの通りで教えてくださいました』。
೨೬ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.
27 彼は言うだろう,『わたしはあなた方を知らないし,あなた方がどこから来たのかも知らない。不法を働く者たちよ,皆わたしから離れ去れ』。
೨೭ಆದರೆ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ. ಅಧರ್ಮಮಾಡುವ ನೀವೆಲ್ಲರೂ ನನ್ನ ಕಡೆಯಿಂದ ಹೊರಟು ಹೋಗಿರಿ’ ಎಂದು ನಿಮಗೆ ಹೇಳುತ್ತೇನೆ ಅನ್ನುವನು.
28 そこには嘆きと歯ぎしりとがあるだろう。アブラハム,イサク,ヤコブ,そしてすべての預言者たちが神の王国にいるのに,自分たちが外に投げ出されているのを見るときには。
೨೮ಅಬ್ರಹಾಮ, ಇಸಾಕ, ಯಾಕೋಬರು ಮತ್ತು ಎಲ್ಲಾ ಪ್ರವಾದಿಗಳು ದೇವರ ರಾಜ್ಯದಲ್ಲಿರುವುದನ್ನೂ ನೀವು ನೋಡುವಿರಿ. ಆದರೆ ನಿಮ್ಮನ್ನು ಮಾತ್ರ ಹೊರಗೆ ಹಾಕಲಾಗುವುದು ಅಲ್ಲಿ ನಿಮಗೆ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಉಂಟಾಗುವವು.
29 人々は東から,西から,北から,南からやって来て,神の王国で席に着くだろう。
೨೯ಇದಲ್ಲದೆ ಪೂರ್ವ ಪಶ್ಚಿಮ ಉತ್ತರ ದಕ್ಷಿಣಗಳಿಂದಲೂ ಜನರು ಬಂದು ದೇವರ ರಾಜ್ಯದಲ್ಲಿ ಔತಣಕ್ಕೆ ಕುಳಿತುಕೊಳ್ಳುವರು.
30 見よ,最後であったのに最初になる者たちがおり,最初であったのに最後になる者たちがいる」 。
೩೦ಇಗೋ ಕಡೆಯವರಾಗಿರುವ ಕೆಲವರು ಮೊದಲಿನವರಾಗುವರು. ಮೊದಲಿನವರಾಗಿರುವ ಕೆಲವರು ಕಡೆಯವರಾಗುವರು” ಅಂದನು.
31 その同じ日に,何人かのファリサイ人たちがやって来て,彼に言った,「ここから出て,立ち去りなさい。ヘロデがあなたを殺そうとしているからです」。
೩೧ಅದೇ ಗಳಿಗೆಯಲ್ಲಿ ಕೆಲವು ಮಂದಿ ಫರಿಸಾಯರು ಹತ್ತಿರ ಬಂದು ಯೇಸುವಿಗೆ, “ನೀನು ಇಲ್ಲಿಂದ ಹೊರಟು ಹೋಗು, ಹೆರೋದನು ನಿನ್ನನ್ನು ಕೊಲ್ಲಬೇಕೆಂದಿದ್ದಾನೆ” ಎಂದು ಹೇಳಲು,
32 彼は彼らに言った,「行って,あのキツネに言いなさい,『見よ,わたしは今日も明日も悪霊たちを追い出し,いやしを行なっている。そして三日目に,自分の使命を成し遂げるだろう。
೩೨ಆತನು ಅವರಿಗೆ, “ನೀವು ಹೋಗಿ ‘ಇಗೋ, ನಾನು ಈಹೊತ್ತು ನಾಳೆ ದೆವ್ವಗಳನ್ನು ಬಿಡಿಸುತ್ತಾ ರೋಗಿಗಳನ್ನು ವಾಸಿಮಾಡುತ್ತಾ ಇದ್ದು, ಮೂರನೆಯ ದಿನದಲ್ಲಿ ಸಿದ್ಧಿಗೆ ಬರುತ್ತೇನೆ’ ಎಂದು ಆ ನರಿಗೆ ಹೇಳಿರಿ.
33 それでも,わたしは,今日も明日もあさっても進んで行かなければならない。預言者がエルサレムの外で滅びることはあり得ないからだ』。
೩೩ಹೇಗೂ ನಾನು ಈ ಹೊತ್ತು ನಾಳೆ ನಾಡಿದ್ದು ಸಂಚಾರ ಮಾಡಬೇಕು. ಪ್ರವಾದಿಯಾದವನು ಯೆರೂಸಲೇಮಿನಲ್ಲಿಯೇ ಹೊರತು ಬೇರೆ ಪಟ್ಟಣದಲ್ಲಿ ಕೊಲ್ಲಲ್ಪಡಕೂಡದಷ್ಟೆ.
34 「エルサレム,エルサレム,預言者たちを殺し,自分のところに遣わされた者たちを石打ちにする者よ! めんどりがそのひなの群れを翼の下に集めるように,わたしは幾たびあなたの子らを集めようとしたことか。だが,あなた方は拒んだ!
೩೪ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
35 見よ,あなた方の家は荒れ果てたままに残される。あなた方に告げるが,あなた方は,『主の名において来る者は幸いだ!』と言うときまでは,決してわたしを見ることはないだろう」 。
೩೫ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.

< ルカの福音書 13 >