< ಅರಸುಗಳು - ಪ್ರಥಮ ಭಾಗ 19 >

1 ಎಲೀಯನು ಬಾಳನ ಎಲ್ಲಾ ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದನ್ನೂ ಮತ್ತು ಅವನು ಮಾಡಿದ ಬೇರೆ ಎಲ್ಲಾ ಕಾರ್ಯಗಳನ್ನೂ ಅಹಾಬನು ಈಜೆಬೆಲಳಿಗೆ ತಿಳಿಸಿದನು.
एलियाले गरेका सबै काम र कसरी तिनले सबै अगमवक्तालाई तरवारले मारे भनी आहाबले ईजेबेललाई बताए ।
2 ಈಜೆಬೆಲಳು ಎಲೀಯನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನೀನು ಪ್ರವಾದಿಗಳ ಪ್ರಾಣವನ್ನು ತೆಗೆದಂತೆ ನಾಳೆ ಇಷ್ಟು ಹೊತ್ತಿಗೆ ನಾನು ನಿನ್ನ ಪ್ರಾಣವನ್ನು ತೆಗೆಯದೇ ಹೋದರೆ ದೇವತೆಗಳು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಹೇಳಿಕಳುಹಿಸಿದಳು.
तब ईजेबेलले एलियाकहाँ यसो भनेर एक जना सन्देशवाहक पठाए, “तैँले जसरी ती अगमवक्ताहरूको प्राण लिइस्, त्यसरी नै भोलि यसै बेलासम्म मैले तेरो प्राण लिइनँ भने देवताहरूले मलाई पनि त्यसै गरून् वा सोभन्दा बेसी गरून् ।”
3 ಅವನು ಇದನ್ನು ಕೇಳಿದೊಡನೆ ತನ್ನ ಪ್ರಾಣ ರಕ್ಷಣೆಗಾಗಿ ಅಲ್ಲಿಂದ ಹೊರಟು ಯೆಹೂದದ ಬೇರ್ಷೆಬಕ್ಕೆ ಬಂದು ಅಲ್ಲಿ ತನ್ನ ಸೇವಕನನ್ನು ಬಿಟ್ಟನು.
जब एलियाले यो कुरा सुने तिनी उठेर आफ्नो जीवन बचाउन भागे, र यहूदाको बेर्शेबामा आए, तर आफ्नो नोकरलाई चाहिँ त्यहीँ छाडे ।
4 ತರುವಾಯ ತಾನೊಬ್ಬನೇ ಅರಣ್ಯದೊಳಗೆ ಒಂದು ದಿನದ ಪ್ರಯಾಣದಷ್ಟು ದೂರ ಹೋಗಿ ಒಂದು ಜಾಲೀ ಗಿಡದ ಕೆಳಗೆ ಕುಳಿತುಕೊಂಡು ಮರಣವನ್ನು ಅಪೇಕ್ಷಿಸಿದನು. ಅವನು, “ಯೆಹೋವನೇ ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಬಿಡು. ನಾನು ನನ್ನ ಪೂರ್ವಿಕರಿಗಿಂತ ಉತ್ತಮನಲ್ಲ” ಎಂದು ದೇವರನ್ನು ಪ್ರಾರ್ಥಿಸಿ ಅದೇ ಗಿಡದ ಕೆಳಗೆ ಮಲಗಿಕೊಂಡು ನಿದ್ರೆ ಮಾಡಿದನು.
तर तिनी आफैचाहिँ एक दिनको यात्रा गरेर उजाड-स्थानमा गए, र अम्रिसको एउटा झाडीमा आए । आफू मरोस् भनी तिनले बिन्ती गर, “हे परमप्रभु, अब अति भयो । मेरो प्राण लिनुहोस् किनकि म मेरा पित्रहरूभन्दा असल छैनँ ।”
5 ಪಕ್ಕನೆ ಒಬ್ಬ ದೇವದೂತನು ಅವನನ್ನು ತಟ್ಟಿ, “ಎದ್ದು ಊಟ ಮಾಡು” ಎಂದು ಹೇಳಿದನು.
त्यसैले तिनी पल्टे, र अम्रिसको झाडीमुनि सुते । अकस्मात् एउटा स्वर्गदूतले तिनलाई छोएर भने, “उठेर खाऊ ।”
6 ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.
एलियाले हेरे, र आफ्नो शिरनेर कोइलामा पोलेर तयार पारिएको रोटी र एक सुरही पानी देखे । त्यसैले तिनले खाए, र पिए अनि फेरि पल्टे ।
7 ಯೆಹೋವನ ದೂತನು ಎರಡನೆಯ ಸಾರಿ ಬಂದು ಅವನನ್ನು ತಟ್ಟಿ ಅವನಿಗೆ, “ಎದ್ದು ಊಟ ಮಾಡು, ನೀನು ನಿನ್ನ ಶಕ್ತಿ ಮೀರುವಷ್ಟು ಪ್ರಯಾಣಮಾಡಬೇಕಾಗಿದೆ” ಎಂದನು.
परमप्रभुका दूत दोस्रो पटक पनि आए र तिनलाई छोएर भने, “उठेर खाऊ किनकि तिम्रो लागि यात्रा निकै लामो छ ।”
8 ಅವನು ಎದ್ದು ತಿಂದು, ಕುಡಿದು ಅದರ ಬಲದಿಂದ ನಲ್ವತ್ತು ದಿನ ಹಗಲಿರುಳು ಪ್ರಯಾಣ ಮಾಡಿ ದೇವಗಿರಿಯಾದ
त्यसैले तिनी उठेर खाए, र पिए अनि त्यस खानाको शक्ति पाएर चालिस दिन यात्रा गरेर परमेश्वरको पर्वत होरेबसम्मै आए ।
9 ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು. ಆಗ ಅವನಿಗೆ ಯೆಹೋವನಿಂದ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
त्यहाँ तिनी एउटा गुफामा गए, र त्यहीँ नै बसे । तब परमप्रभुको वचन तिनीकहाँ आयो, “ए एलिया, तँ यहाँ के गर्दै छस्?”
10 ೧೦ ಅವನು ಅದಕ್ಕೆ, “ಸೇನಾಧೀಶ್ವರನಾದ ದೇವರೇ, ಯೆಹೋವನೇ ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ. ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
एलियाले जवाफ दिए, “सर्वशक्तिमान् परमप्रभुको निम्ति म साह्रै जोसिलो भएको छु, किनकि इस्राएलीहरूले तपाईंको करार उल्लङ्घन गरेका छन्, तपाईंका वेदीहरू भत्काइदिएका छन्, र तपाईंका अगमवक्ताहरूलाई तरवारले मारेका छन् । अब म एकलै छाडिएको छु, र तिनीहरूले मेरो प्राण लिन खोज्दै छन् ।”
11 ೧೧ ಆಗ ಪುನಃ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಯೆಹೋವನ ಮುಂದೆ ನಿಲ್ಲು” ಎಂಬ ವಾಣಿಯಾಯಿತು. ಆಹಾ ಯೆಹೋವನು ಅಲ್ಲಿ ಹಾದು ಹೋದನು. ಆತನ ಮುಂದೆ ಪರ್ವತಗಳು ಭೇದಿಸಿ ಬಂಡೆಗಳನ್ನು ಪುಡಿ ಪುಡಿಮಾಡುವಂಥ ದೊಡ್ಡ ಬಿರುಗಾಳಿಯು ಬೀಸಿತು. ಯೆಹೋವನು ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವಾಯಿತು, ಅದರಲ್ಲಿಯೂ ಆತನಿರಲಿಲ್ಲ.
परमप्रभुले जवाफ दिनुभयो, “निस्केर जा, अनि पर्वतमा मेरो सामु खडा हो ।” तब परमप्रभु त्यहाँबाट भएर जानुभयो, र प्रचण्ड बतासले पर्वतलाई प्रहार गर्‍यो अनि परमप्रभुको सामु चट्टानहरू टुक्राटुक्रा भए, तर परमप्रभु बतासमा हुनुहुन्थेन । बतासपछि एउटा भूकम्प गयो, तर परमप्रभु भूकम्पमा पनि हुनुहुन्थेन ।
12 ೧೨ ಭೂಕಂಪವಾದ ನಂತರ ಸಿಡಿಲುಂಟಾಯಿತು, ಅದರಲ್ಲಿಯೂ ಯೆಹೋವನಿರಲಿಲ್ಲ. ಕಡೆಗೆ ನಯವಾದ ಮೃದು ಸ್ವರವೊಂದು ಕೇಳಿಸಿತು,
भूकम्पपछि एउटा आगो आयो, तर परमप्रभु आगोमा पनि हुनुहुन्थेन । आगोपछि एउटा सानो आवाज आयो ।
13 ೧೩ ಅದನ್ನು ಕೇಳಿದ ಕೂಡಲೆ ಎಲೀಯನು ತನ್ನ ಕಂಬಳಿಯಿಂದ ಮೋರೆಯನ್ನು ಮುಚ್ಚಿಕೊಂಡು ಹೋಗಿ ಗವಿಯ ದ್ವಾರದಲ್ಲಿ ನಿಂತನು. ಆಗ, “ಎಲೀಯನೇ ನೀನು ಇಲ್ಲೇನು ಮಾಡುತ್ತೀ?” ಎಂಬ ವಾಣಿಯು ಕೇಳಿಸಿತು.
जब एलियाले त्यो आवाज सुने तब तिनले खास्टोमा आफ्नो मुहार लुकाए, र बाहिर निस्केर गुफाको मुखमा उभिए । तब एउटा आवाज आयो जसले तिनलाई भन्यो, “ए एलिया, तँ यहाँ के गर्दै छस्?”
14 ೧೪ ಅದಕ್ಕೆ ಅವನು, “ಸೇನಾಧೀಶ್ವರನಾದ ಯೆಹೋವನೇ, ಇಸ್ರಾಯೇಲರು ನಿನ್ನ ನಿಬಂಧನೆಯನ್ನು ಮೀರಿದ್ದಾರೆ, ಯಜ್ಞವೇದಿಗಳನ್ನು ಕೆಡವಿಹಾಕಿದ್ದಾರೆ, ಪ್ರವಾದಿಗಳನ್ನು ಕತ್ತಿಯಿಂದ ಸಂಹರಿಸಿದ್ದಾರೆ. ನಾನೊಬ್ಬನೇ ಉಳಿದು ನಿನ್ನ ಗೌರವವನ್ನು ಕಾಪಾಡುವುದರಲ್ಲಿ ಆಸಕ್ತನಾಗಿದ್ದೇನೆ. ಆದರೆ ಅವರು ನನ್ನ ಪ್ರಾಣವನ್ನೂ ತೆಗೆಯಬೇಕೆಂದಿದ್ದಾರೆ” ಎಂದು ಉತ್ತರಕೊಟ್ಟನು.
एलियाले जवाफ दिए, “सर्वशक्तिमान् परमप्रभुको निम्ति म साह्रै जोसिलो भएको छु, किनकि इस्राएलीहरूले तपाईंको करार उल्लङ्घन गरेका छन्, तपाईंका वेदीहरू भत्काइदिएका छन्, र तपाईंका अगमवक्ताहरूलाई तरवारले मारेका छन् । अब म एकलै छाडिएको छु, र तिनीहरूले मेरो प्राण लिन खोज्दै छन् ।”
15 ೧೫ ಆಗ ಯೆಹೋವನು ಅವನಿಗೆ, “ನೀನು ಬಂದ ದಾರಿಯಿಂದ ಹಿಂದಿರುಗಿ ದಮಸ್ಕದ ಅರಣ್ಯಕ್ಕೆ ಹೋಗು, ಅಲ್ಲಿಂದ ಪಟ್ಟಣದೊಳಗೆ ಪ್ರವೇಶಿಸಿ ಹಜಾಯೇಲನನ್ನು ಅರಾಮ್ಯರ ಅರಸನನ್ನಾಗಿ ಅಭಿಷೇಕಿಸು.
तब परमप्रभुले तिनलाई भन्नुभयो, “फर्केर दमस्कसको उजाड-स्थानको बाटोमा जा, र तँ त्यहाँ आइपुगेपछि हजाएललाई अरामका राजाको रूपमा अभिषेक गर् ।
16 ೧೬ ನಿಂಷಿಯ ಮಗನಾದ ಯೇಹುವನ್ನು ಇಸ್ರಾಯೇಲರ ಅರಸನನ್ನಾಗಿಯೂ, ಆಬೇಲ್ ಮೆಹೋಲದವನೂ ಶಾಫಾಟನ ಮಗನೂ ಆದ ಎಲೀಷನನ್ನು ನಿನಗೆ ಬದಲಾಗಿ ಪ್ರವಾದಿಯನ್ನಾಗಿಯೂ ಅಭಿಷೇಕಿಸು.
तैँले निम्शीका छोरा येहूलाई इस्राएलको राजाको रूपमा नियुक्त गर्नू, र तेरो ठाउँमा हाबिल-महोलाको शाफातका छोरा एलीशालाई अगमवक्ताको रूपमा अभिषेक गर्नू ।
17 ೧೭ ಹಜಾಯೇಲನ ಕತ್ತಿಗೆ ತಪ್ಪಿಸಿಕೊಂಡವರನ್ನು ಯೇಹುವು ಕೊಲ್ಲುವನು. ಅವನ ಕತ್ತಿಗೆ ತಪ್ಪಿಸಿಕೊಂಡವರನ್ನು ಎಲೀಷನು ಕೊಲ್ಲುವನು.
हजाएलको तरवारबाट उम्कने जोसुकैलाई येहूले मार्ने छन्, र येहूको तरवारबाट उम्कने जोसुकैलाई एलीशाले मार्ने छन् ।
18 ೧೮ ಆದರೆ ಬಾಳನ ವಿಗ್ರಹಕ್ಕೆ ಅಡ್ಡಬೀಳದೆಯೂ, ಅದನ್ನು ಮುದ್ದಿಡದೆಯೂ ಇರುವ ಏಳು ಸಾವಿರ ಇಸ್ರಾಯೇಲರನ್ನು ಉಳಿಸುವೆನು” ಎಂದು ಹೇಳಿದನು.
तर म इस्राएलमा सात हजार मानिसलाई बचाइराख्ने छु, जसले बालको सामु घुँडा टेकेका छैनन्, र जसका मुखले त्यसलाई चुम्बन गरेका छैनन् ।”
19 ೧೯ ಎಲೀಯನು ಅಲ್ಲಿಂದ ಹೊರಟುಹೋಗಿ ಶಾಫಾಟನ ಮಗನಾದ ಎಲೀಷನನ್ನು ಕಂಡನು. ಅವನು ಹೊಲವನ್ನು ಉಳುವುದಕ್ಕೆ ಹನ್ನೆರಡು ಜೋಡಿ ಎತ್ತುಗಳನ್ನು ತಂದು ಹನ್ನೆರಡನೆ ಜೋಡಿಯಿಂದ ತಾನಾಗಿಯೇ ಹೊಲವನ್ನು ಉಳುತ್ತಿದ್ದನು. ಎಲೀಯನು ಅಲ್ಲಿಂದ ಹಾದುಹೋಗುವಾಗ ತನ್ನ ಕಂಬಳಿಯನ್ನು ಅವನ ಮೇಲೆ ಹಾಕಿದನು.
त्यसैले एलिया त्यहाँबाट प्रस्थान गरे, र तिनले शाफातका छोरा एलीशालाई फेला पारे । तिनले बाह्र हल गोरुले खेत जोतिरहेका थिए । त्यस बेला तिनले बाह्रौँ हललाई जोतिरहेका थिए । एलिया एलीशाकहाँ आए, र तिनलाई आफ्नो खास्टो ओढाइदिए ।
20 ೨೦ ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
त्यसपछि एलीशाले ती गोरुहरू छाडेर एलियाको पछि लागे । तिनले भने, “मलाई मेरा पिता र मेरी आमालाई चुम्बन गर्न दिनुहोस्, र त्यसपछि म तपाईंको पछि लाग्ने छु ।” तब एलियाले भने, “फर्केर जाऊ, तर मैले तिमीलाई भनेको कुराको बारेमा सोचविचार गर ।”
21 ೨೧ ಎಲೀಷನು ಹಿಂದಿರುಗಿ ಹೋಗಿ ತಾನು ಉಳುತ್ತಿದ್ದ ಜೋಡಿ ಎತ್ತುಗಳನ್ನು ತೆಗೆದುಕೊಂಡು ಅವುಗಳನ್ನು ವಧಿಸಿ ಮಾಂಸವನ್ನು ರಂಟೆಯ ಕಟ್ಟಿಗೆಯಿಂದ ಬೇಯಿಸಿ, ಜನರಿಗೆ ಔತಣಮಾಡಿಸಿದನು. ಅನಂತರ ಅವನು ಎದ್ದು ಎಲೀಯನನ್ನು ಹಿಂಬಾಲಿಸಿ ಅವನ ಸೇವಕನಾದನು.
त्यसैले एलीशा एलियाबाट गए, र एक हल गोरु लिए । तिनले हलोका काठहरू जलाएर मासु पकाए । तिनले त्यो मानिसहरूलाई दिए, र तिनले पनि खाए । तब तिनी उठेर एलियाको पछि लागे, र तिनको सेवा गरे ।

< ಅರಸುಗಳು - ಪ್ರಥಮ ಭಾಗ 19 >