< ಅರಸುಗಳು - ಪ್ರಥಮ ಭಾಗ 22 >

1 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
पुढील तीन वर्षे इस्राएल आणि अराम यांच्यामध्ये शांततेची गेली.
2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
तिसऱ्या वर्षी, यहूदाचा राजा यहोशाफाट इस्राएलाचा राजा याला भेटायला गेला.
3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.
यावेळी इस्राएलाच्या राजाने आपल्या अधिकाऱ्यांना विचारले, “अरामाच्या राजाने रामोथ-गिलाद आपल्याकडून घेतले होते ते आठवते ना? ते परत मिळवण्यासाठी आपण काहीच का केले नाही? रामोथ आपले असायला हवे.”
4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
आणि इस्राएल राजा यहोशाफाटाला म्हणाला, “तुम्ही आमच्या बाजूने रामोथ-गिलाद येथे अरामी सैन्याशी लढाल का?” यहोशाफाट म्हणाला, “अवश्य माझे सैन्य आणि घोडे तुमचेच आहेत.”
5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
यहोशाफाटाने इस्राएलाच्या राजास म्हटले, “प्रथम आपण परमेश्वराचा सल्ला घेतला पाहिजे.”
6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
तेव्हा इस्राएलाच्या राजाने संदेष्ट्यांची एक सभा घेतली. तेव्हा तिथे चारशे संदेष्टे हजर होते. राजाने त्यांना विचारले, “आपण आत्ताच रामोथ-गिलाद येथे अरामी फौजेवर चालून जावे का?” की काही काळ थांबावे? संदेष्टे म्हणाले, “तुम्ही खुशाल आत्ताच हल्ला करा. परमेश्वर तुम्हास जय मिळवून देईल.”
7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
पण यहोशाफाटाने शंका काढली, “परमेश्वराचा आणखी कोणी संदेष्टा यांच्या खेरीज इथे आहे का? तसा असेल तर त्यालाही देवाचे मत विचारलेले बरे.”
8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
इस्राएलाचा राजा म्हणाला, “ज्याच्या द्वारे परमेश्वराचा सल्ला घेता येईल तसा आणखी एक संदेष्टा आहे. इम्ला याचा पुत्र मीखाया.” पण मी त्याचा द्वेष करतो. कारण तो काही सांगतो तेव्हा माझ्याबद्दल कधीच चांगले भविष्यकथन करत नाही. त्याचे बोलणे मला अप्रिय वाटते. यहोशाफाट म्हणाला, “इस्राएलाच्या राजा, तुझे असे बोलणे बरोबर नव्हे.”
9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
तेव्हा इस्राएलाच्या राजाने आपल्या एका सेवकाला “इम्लाचा पुत्र मीखायाला घेऊन येण्यास सांगितले.”
10 ೧೦ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
१०यावेळी इस्राएलाचा राजा व यहूदाचा राजा यहोशाफाट राजवस्त्रे घालून सिंहासनावर बसले होते. शोमरोनच्या वेशीजवळ न्यायदान चालते त्याठिकाणी ते होते. सर्व संदेष्टे त्यांच्या समोर उभे होते. त्यांचे भविष्यकथन चालेले होते.
11 ೧೧ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
११त्यांच्यापैकी एक कनानाचा पुत्र सिद्कीया हा होता. त्याने प्रचंड शक्तीचे प्रतीक अशी लोखंडाची शिंगे केली होती. तो अहाबाला म्हणाला, “परमेश्वराचे म्हणणे हे आहे की ही शिंगे तू अरामी सैन्याविरुध्द लढताना वापरावीस म्हणजे तू शत्रूचा पराभव करशील, त्याचा संहार करशील.”
12 ೧೨ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
१२मग ते सर्वच भविष्यवादी भविष्य सांगत होते. पुढे सिद्कीया म्हणाला, “आता तुझ्या सैन्याने चढाई करावी. रामोथ-गिलाद येथे अरामी सैन्यावर हल्ला करावा. विजय तुमचाच आहे. परमेश्वर ते राजाच्या हाती देईल.”
13 ೧೩ ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
१३हे चाललेले असतानाच एक सेवक मीखायाच्या शोधात गेला व त्यास भेटून म्हणाला, “राजा या युध्दात विजयी होईल असे सर्वच संदेष्ट्यांचे म्हणणे आहे. तेव्हा तूही तसेच म्हणणे श्रेयस्कर ठरेल व ते सुरक्षितपणाचे होईल.”
14 ೧೪ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
१४पण मीखाया म्हणाला, “नाही, कदापि नाही. जे परमेश्वर माझ्याकडून वदवतो तेच मी सांगेन. माझी तशी प्रतिज्ञाच आहे.”
15 ೧೫ ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
१५मीखाया मग राजाकडे आला. राजाने त्यास विचारले, “मीखाया, मी आणि राजा यहोशाफाट हातमिळवणी करु ना? रामोथ-गिलाद अरामाच्या सैन्यावर आता चढाई करु का?” मीखाया म्हणाला, “हो तुम्ही आत्ताच ही लढाई करा. परमेश्वर तुम्हास यश देईल.”
16 ೧೬ ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
१६पण राजा त्यास म्हणाला, “तू हे परमेश्वराच्या शक्तीने सांगत नाहीस. आपल्या मनाचे सांगतो आहेस. तेव्हा खरे काय ते सांग परमेश्वराचे म्हणणे सांग. अशी शपथ कितीदा मी तुला देऊ?”
17 ೧೭ ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
१७तेव्हा मीखायाने सांगितले, “काय होणार ते मला दिसते आहे. इस्राएलाचे सैन्य डोंगरांवर इतस्तत: पसरेल. मेंढपाळ नसलेल्या मेंढरांसारखी त्यांची अवस्था होईल. परमेश्वराचे म्हणणे असे आहे, ‘यांना कोणी नेता नाही. यांनी सुखरूप घरी जावे. लढाईच्या भानगडीत पडू नये.”
18 ೧೮ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
१८मग इस्राएलाच्या राजा यहोशाफाटाला म्हणाला, “पाहा, हेच बोललो होतो ना मी! हा संदेष्टा कधीही माझ्याबद्दल चांगले भविष्यकथन करत नाही. हा नेहमी अप्रिय गोष्टीच मला ऐकवतो.”
19 ೧೯ ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
१९इकडे परमेश्वराचे म्हणणे काय आहे ते मीखाया सांगतच होता. मीखाया म्हणाला, “ऐका परमेश्वर काय म्हणतो: ते पाहा परमेश्वर स्वर्गात सिंहासनावर बसलेला मी पाहिला. आकाशातले त्याचे सर्व सैन्य त्याच्या शेजारी उभे आहे.
20 ೨೦ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
२०परमेश्वराने म्हटले, ‘अहाब राजाची कोणी फसगत करेल का? त्याने रामोथ-गिलाद वर हल्ला करावा असे मला वाटते. त्यामध्ये त्यास मरण येईल.’ तेव्हा आता काय करावे याबद्दल देवदूतांमध्ये एकमत होईना.
21 ೨೧ ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
२१मग त्यापैकी एकजण परमेश्वराकडे गेला आणि म्हणाला, ‘मी हे काम करीन.’
22 ೨೨ ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
२२परमेश्वर त्यास म्हणाला, ‘तू अहाबाची फसगत कशी करशील?’ यावर तो देवदूत म्हणाला, ‘मी अहाबाच्या संदेष्ट्यांमध्ये गोंधळ माजवून देईन. त्यांना मी राजाशी खोटे बोलायला प्रवृत्त करीन संदेष्टे राजाला सांगतील ते खोटे असेल.’ यावर परमेश्वर म्हणाला, ‘हे चांगले झाले; जा आणि अहाब राजाला या मोहात पाड, तुला यश येईल.
23 ೨೩ ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
२३मीखायाचे सांगून झाले. मग तो म्हणाला, तेव्हा खरी हकिकत अशी आहे. परमेश्वरानेच तुमच्या संदेष्ट्यांना खोटे बोलायला लावले आहे. तुमच्यावर मोठे संकट ओढवावे असे परमेश्वरास वाटते.”
24 ೨೪ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
२४मग कनानाचा पुत्र सिदकीया हा संदेष्टा मीखायाजवळ गेला. मीखायाच्या त्याने तोंडात मारले. सिद्कीया म्हणाला, “माझ्यातली परमेश्वराची शक्ती संपली आहे आणि तो आता तुझ्या मार्फतच बोलतो आहे अशी खरेच तुझी समजूत आहे?”
25 ೨೫ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
२५मीखाया म्हणाला, “लवकरच आपत्ती येणार आहे. तेव्हा तू एका लहानशा खोलीत दडून बसशील तेव्हा माझे म्हणणे खरे असल्याचे तुझ्या लक्षात येईल.”
26 ೨೬ ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
२६तेव्हा इस्राएलच्या राजाने आपल्या एका सेवकाला मीखायाला पकडायचा हुकूम केला. राजा म्हणाला, “याला धरा आणि नगराधिकारी आमोन व राजपुत्र योवाश यांच्याकडे घेऊन जा.
27 ೨೭ ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
२७आणि त्यांना जाऊन सांगा, राजा म्हणतो, या मनुष्यांस बंदीत टाका व मी सुखरूप परत येईपर्यंत त्यास फक्त भाकर आणि पाणी द्या. युध्दावरुन मी परत सुखरूप येईपर्यंत त्यास तिथेच राहू द्या.”
28 ೨೮ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
२८मीखाया मोठ्याने म्हणाला, “मी काय म्हणतो ते सर्व लोकहो ऐका. राजा, तू युध्दावरुन जिवंत परत आलास तर परमेश्वर माझ्या मार्फत बोलला नाही असे खुशाल समजा.”
29 ೨೯ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
२९नंतर इस्राएल राजा अहाब आणि यहूदाचा राजा यहोशाफाट रामोथ येथे अरामाच्या सैन्याशी लढायला गेले. रामोथ-गिलाद प्रांतात हे युध्द झाले.
30 ೩೦ ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
३०अहाब यहोशाफाटाला म्हणाला, “आपण आता युध्दाचा व्यूह रचू. मला राजा म्हणून कोणी ओळखणार नाही असे कपडे मी घालीन. पण तू मात्र राजाला शोभेल असाच पोषाख कर.” अशाप्रकारे इस्राएलाच्या राजाने अगदी चारचौघांसारखे कपडे करून युध्दाला सुरुवात केली.
31 ೩೧ ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
३१अरामाच्या राजाकडे बत्तीस रथाधिपती होते. त्या राजाने या बत्तीस जणांना इस्राएलाच्या राजाचा शोध घ्यायला सांगितले. राजाला ठार करण्याबद्दल त्याने त्यांना बजावले.
32 ೩೨ ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
३२तेव्हा युध्द चालू असताना या रथाधिपतींनी राजा यहोशाफाटाला पाहिले. “तोच इस्राएलचा राजा असे त्यांना वाटले.” त्यामुळे त्याचा ते वध करायला निघाले. यहोशाफाट आरडाओरडा करु लागला.
33 ೩೩ ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
३३हा इस्राएलचा अहाब राजा नव्हे हे त्या रथाधिपतीच्या लक्षात आल्यावर त्यांनी त्यास मारले नाही.
34 ೩೪ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
३४तेव्हा एका सैनिकाने, कोणावर नेम धरुन नव्हे असा हवेतच एक बाण सोडला. हा बाण नक्की इस्राएलाचा राजा अहाब याला लागला. शरीराचा जो छोटा भाग चिलखताने झाकलेला नव्हता तिथे बाण लागला. तेव्हा राजा अहाब आपल्या सारथ्याला म्हणाला, “मला बाण लागला आहे. रथ येथून हलव. आपण या लढाईपासून दूर जाऊ.”
35 ೩೫ ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
३५युध्द मात्र चालूच राहिले. राजा अहाब आपल्या रथात बसून राहिला. रथात टेकून बसून तो अरामाच्या सैन्याकडे पाहत होता. त्यास एवढा रक्तस्राव झाला की रथाच्या बैठकीच्या भागात रक्ताचे थारोळे झाले. संध्याकाळच्या सुमारास राजाला मृत्यू आला.
36 ೩೬ ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
३६सूर्यास्ताच्या वेळी “इस्राएलाच्या सर्वसैन्याला आपापल्या प्रांतात घरोघरी जायचा आदेश मिळाला.”
37 ೩೭ ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
३७राजा अहाबाला अशा तऱ्हेने मरण आले. काही जणांनी त्याचा देह शोमरोनाला आणला. त्यास त्यांनी तिथे पुरले.
38 ೩೮ ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
३८शोमरोनमधल्या तळ्यावर या लोकांनी अहाबाच्या रथ धुतला. रथातील रक्त कुत्र्यांनी चाटले आणि त्या तळ्यातील पाण्याने वेश्या स्नान करीत असत. परमेश्वराने जे जे होईल असे सांगितले होते तसेच नक्की घडले.
39 ೩೯ ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
३९इस्राएलाच्या राजांचा इतिहास या ग्रंथात राजा अहाबाच्या सर्व गोष्टींची नोंद केलेली आहे. आपला महाल सुशोभित करण्यासाठी त्याने हस्तिदंत कसे वापरले, त्याने नगरे उभारली याबद्दलही या ग्रंथात सांगितलेले आहे.
40 ೪೦ ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
४०अहाब मरण पावला व त्यास त्याच्या पूर्वजांशेजारी दफन करण्यात आले. त्याचा पुत्र अहज्या त्याच्या जागी राजा झाला.
41 ೪೧ ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
४१अहाब इस्राएलाचा राजा झाल्यावर चौथे वर्ष चालू असताना यहोशाफाट यहूदाचा राजा झाला. यहोशाफाट हा आसाचा पुत्र.
42 ೪೨ ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
४२यहोशाफाट वयाच्या पस्तीसाव्या वर्षी राजा झाला आणि यरूशलेमामध्ये त्याने पंचवीस वर्षे राज्य केले. त्याच्या आईचे नाव अजूबा. ती शिल्हीची कन्या.
43 ೪೩ ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
४३यहोशाफाट चांगला राजा होता. हा आपले वडिल आसा ह्यांच्याप्रमाणेच वागला. परमेश्वराच्या दृष्टीने जे योग्य ते त्याने केले. पण यहोशाफाटाने उंचावरील पूजास्थळे काढली नाहीत. लोक त्याठिकाणी होम करणे, धूप जाळणे वगैरे करत राहिले.
44 ೪೪ ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
४४यहोशाफाट राजाने इस्राएलाच्या राजाशी शांततेचा करार केला.
45 ೪೫ ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
४५राजा यहोशाफाट शूर होता. त्याने बऱ्याच लढाया केल्या. त्याने जे केले त्याची हकिकत यहूदाच्या राजांचा इतिहास या ग्रंथात आहे.
46 ೪೬ ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
४६त्याचे वडिल आसा राज्य करीत असताना जे पुरुषगमन करणारे राहून गेले होते त्यांना यहोशाफाटाने त्यांना हाकलून लावले.
47 ೪೭ ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
४७याच काळात अदोम प्रदेशाला राजा नव्हता. एक कारभारीच इथला कारभार पाहत असे. त्याची नेमणूक यहूदाचा राजा करी.
48 ೪೮ ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
४८राजा यहोशाफाटाने तार्शीशी काही मालवाहू गलबते बांधली. त्यामध्ये त्याचा हेतू ओफिरहून सोने आणण्याचा होता. पण ती तेथपर्यंत कधी पोहोंचू शकली नाहीत कारण एसयोन-गेबेरच्या बंदरात त्यांची नासधूस करण्यात आली.
49 ೪೯ ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
४९इस्राएलाचा राजा अहाबाचा पुत्र अहज्या याने यहोशाफाटाला मदतीचा हात दिला. “त्याच्या मनुष्यांबरोबर आपले खलाशी देण्याची तयारी दर्शवली.” पण अहज्याची कुमक स्विकारण्यास यहोशाफाटाने नकार दिला.
50 ೫೦ ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
५०यहोशाफाट मरण पावला त्यानंतर दावीद नगरात आपल्या पूर्वजांबरोबर त्याचे दफन करण्यात आले. त्याच्या जागी त्याचा पुत्र यहोराम राज्य करु लागला.
51 ೫೧ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
५१अहज्या अहाबाचा पुत्र होता. यहोशाफाटाच्या यहूदावरील सत्तेच्या सतराव्या वर्षी अहज्या इस्राएलाचा राजा झाला. शोमरोन मध्ये त्याने दोन वर्षे राज्य केले.
52 ೫೨ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
५२अहज्याने परमेश्वराचे अनेक अपराध केले. आपले वडिल अहाब, आई ईजबेल आणि नबाटाचा पुत्र यराबाम या सगळ्यांनी जे केले तेच याने केले. या सर्व राज्यकर्त्यांनी इस्राएली लोकांस आणखी पापात लोटले.
53 ೫೩ ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
५३आपल्या वडिलांप्रमाणेच अहज्यानेही बआल या अमंगळ दैवताची पूजा केली. त्यामुळे इस्राएलचा देव परमेश्वर याचा कोप ओढवला. परमेश्वर अहाबावर संतापला होता तसाच अहज्यावर संतापला.

< ಅರಸುಗಳು - ಪ್ರಥಮ ಭಾಗ 22 >