< ಅರಸುಗಳು - ಪ್ರಥಮ ಭಾಗ 22 >

1 ಮೂರು ವರ್ಷಗಳ ಕಾಲ ಇಸ್ರಾಯೇಲರಿಗೂ ಅರಾಮ್ಯರಿಗೂ ಯುದ್ಧ ನಡೆಯಲಿಲ್ಲ.
ရှုရိပြည်နှင့် ဣသရေလပြည်သည် စစ်မတိုက် ဘဲ သုံးနှစ်နေပြီးမှ၊
2 ಮೂರನೆಯ ವರ್ಷದಲ್ಲಿ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನ ಬಳಿಗೆ ಬಂದನು.
တတိယနှစ်တွင်၊ ယုဒရှင်ဘုရင်ယောရှဖတ်သည် ဣသရေလရှင်ဘုရင်ထံသို့ လာ၏။
3 ಆಗ ಇಸ್ರಾಯೇಲರ ಅರಸನು ತನ್ನ ಸೇವಕರಿಗೆ, “ಗಿಲ್ಯಾದಿನ ರಾಮೋತ್ ಪಟ್ಟಣವು ನಮ್ಮದೆಂದು ನಿಮಗೆ ಗೊತ್ತಿದೆಯಲ್ಲಾ. ಅದನ್ನು ಇಷ್ಟರವರೆಗೂ ಅರಾಮ್ಯರ ಅರಸನಿಂದ ಹಿಂತಿರುಗಿ ತೆಗೆದುಕೊಳ್ಳದೆ ಸುಮ್ಮನೆ ಕುಳಿತುಕೊಂಡಿರುತ್ತೇವೆ” ಎಂದು ಹೇಳಿದನು.
ဣသရေလရှင်ဘုရင်ကလည်း၊ ဂိလဒ်ပြည် ရာမုတ်မြို့သည် ငါတို့ နိုင်ငံအဝင်ဖြစ်သည်ကို သင်တို့ မသိလော။ ငါတို့သည် ရှုရိရှင်ဘုရင်လက်မှ မနှုတ်မယူဘဲ ငြိမ်သက်စွာ နေကြပြီတကားဟု မိမိကျွန်တို့အားဆို၏။
4 ಅವನು ಯೆಹೋಷಾಫಾಟನಿಗೆ, “ಯುದ್ಧಮಾಡುವುದಕ್ಕಾಗಿ ನೀನು ನಮ್ಮ ಜೊತೆಯಲ್ಲಿ ರಾಮೋತ್ ಗಿಲ್ಯಾದಿಗೆ ಬರುತ್ತೀಯೋ?” ಎಂದು ಕೇಳಲು ಅವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ, ನನ್ನ ಕುದುರೆಗಳೂ ನಿನ್ನ ಕುದುರೆಗಳೂ ಒಂದೇ ಅಲ್ಲವೇ?” ಎಂದು ಉತ್ತರಕೊಟ್ಟನು.
ယောရှဖတ်မင်းအားလည်း၊ ဂိလဒ်ပြည် ရာမုတ်မြို့သို့ ငါနှင့်အတူ စစ်ချီမည်လောဟုမေးလျှင်၊ ယောရှဖတ်က၊ ငါသည်မင်းကြီးကဲ့သို့ဖြစ်၏။ ငါ့လူတို့သည် မင်းကြီး၏လူကဲ့သို့၎င်း၊ ငါ့မြင်းတို့သည် မင်းကြီး၏ မြင်းကဲ့ သို့၎င်းဖြစ်ကြသည်ဟု ဣသရေလရှင်ဘုရင်အား ပြန် ပြော၏။
5 ಯೆಹೋಷಾಫಾಟನು, “ಯೆಹೋವನ ಸನ್ನಿಧಿಯಲ್ಲಿ ಈಗ ವಿಚಾರಿಸು” ಎಂದು ಇಸ್ರಾಯೇಲರ ಅರಸನನ್ನು ಬೇಡಿಕೊಂಡನು.
တဖန်ယောရှဖတ်က၊ ထာဝရဘုရား၏ နှုတ် ကပတ်တော်ကို ယနေ့မေးမြန်းပါလော့ဟု ဣသရေလ ရှင်ဘုရင်အားဆိုသော်၊
6 ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
ဣသရေလရှင်ဘုရင်သည် ပရောဖက်လေးရာ တို့ကို စုဝေးစေပြီးလျှင်၊ ငါသည်ဂိလဒ်ပြည် ရာမုတ်မြို့သို့ စစ်ချီကောင်းသလော။ မချီဘဲ နေကောင်းသလောဟု မေးသော်၊ သူတို့ကချီတော်မူပါ။ ထာဝရဘုရားသည် အရှင်မင်းကြီး၏လက်တော်သို့ အပ်တော်မူမည်ဟု လျှောက်ကြ၏။
7 ಆದರೆ ಯೆಹೋಷಾಫಾಟನು ಇಸ್ರಾಯೇಲ್ಯರ ಅರಸನನ್ನು, “ಯೆಹೋವನ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸಬಹುದಾದ ಬೇರೆ ಪ್ರವಾದಿಗಳು ಇರುವುದಿಲ್ಲವೋ?” ಎಂದು ಕೇಳಿದನು.
ယောရှဖတ်ကလည်း၊ ငါတို့မေးမြန်းစရာ ထာဝရဘုရား၏ ပရောဖက် တစုံ တပါးမျှမရှိသလောဟု မေးသော်၊
8 ಅದಕ್ಕೆ ಅವನು “ನಮಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಬಲ್ಲವನಾದ ಇನ್ನೊಬ್ಬ ಪ್ರವಾದಿಯಿರುತ್ತಾನೆ, ಅವನು ಇಮ್ಲನ ಮಗನಾದ ಮೀಕಾಯೆಹು ಎಂಬುವನು. ಆದರೆ ನಾನು ಅವನನ್ನು ಹಗೆಮಾಡುತ್ತೇನೆ, ಅವನು ನನ್ನ ಕುರಿತು ಯಾವಾಗಲೂ ಶುಭವನ್ನಲ್ಲ ಅಶುಭವನ್ನೇ ಮುಂತಿಳಿಸುತ್ತಾನೆ” ಎಂದು ಉತ್ತರಕೊಟ್ಟನು. ಅದಕ್ಕೆ ಯೆಹೋಷಾಫಾಟನು “ಅರಸನು ಹಾಗನ್ನದಿರಲಿ” ಅಂದನು.
ဣသရေလရှင်ဘုရင်က၊ ထာဝရဘုရားကို မေးမြန်းရသော သူတယောက်ဣမလသား မိက္ခာရှိသေး ၏။ သို့ရာတွင် ထိုသူကို ငါမုန်း၏။ ငါ၌ မင်္ဂလာစကားကို မဟော။ အမင်္ဂလာစကားကိုသာ ဟောတတ်သည်ဟု ယောရှဖတ်အားဆိုလျှင်၊ ယောရှဖတ်က ထိုသို့မင်းကြီး မပြောပါနှင့်ဟု ပြန်ဆို၏။
9 ಆಗ ಇಸ್ರಾಯೇಲ್ಯರ ಅರಸನು ಒಬ್ಬ ಕಂಚುಕಿಯನ್ನು ಕರೆದು ಅವನಿಗೆ, “ಹೋಗಿ ಇಮ್ಲನ ಮಗನಾದ ಮೀಕಾಯೆಹುವನ್ನು ಬೇಗನೆ ಕರೆದುಕೊಂಡು ಬಾ” ಎಂದು ಆಜ್ಞಾಪಿಸಿದನು.
ထိုအခါ ဣသရေလရှင်ဘုရင်သည် အရာရှိ တယောက်ကိုခေါ်၍၊ ဣမလသားမိက္ခာကို အလျင်အမြန် ခေါ်ခဲ့ဟုမိန့်တော်မူ၏။
10 ೧೦ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು ಸಮಾರ್ಯ ಪಟ್ಟಣದ ಹೆಬ್ಬಾಗಿಲಿನ ಹತ್ತಿರವಿರುವ ಬಯಲಿನಲ್ಲಿ ತಮ್ಮ ತಮ್ಮ ಆಸನಗಳ ಮೇಲೆ ಕುಳಿತುಕೊಂಡಿರಲು ಎಲ್ಲಾ ಪ್ರವಾದಿಗಳು ಅವರ ಮುಂದೆ ಪರವಶರಾಗಿ ಮಾತನಾಡುತ್ತಾ ಇದ್ದರು.
၁၀ဣသရေလရှင်ဘုရင်နှင့် ယုဒရှင်ဘုရင် ယောရှ ဖတ်တို့သည် မင်းမြောက်တန်ဆာကို ဝတ်ဆင်လျက် ရှမာရိမြို့တံခါးဝရှေ့၊ ဟင်းလင်းသော အရပ်၌ ရာဇ ပလ္လင်တို့အပေါ်မှာထိုင်၍၊ ပရောဖက်အပေါင်းတို့သည် ရှေ့တော်၌ ဟောပြောကြ၏။
11 ೧೧ ಅವರಲ್ಲಿ ಕೆನಾನನ ಮಗನಾದ ಚಿದ್ಕೀಯ ಎಂಬುವನು ಕಬ್ಬಿಣದ ಕೊಂಬುಗಳನ್ನು ಮಾಡಿಸಿ, ತಲೆಗೆ ಕಟ್ಟಿಕೊಂಡು ಬಂದು, “ಯೆಹೋವನು ಹೀಗೆನ್ನುತ್ತಾನೆ, ಅರಾಮ್ಯರು ನಿರ್ಮೂಲರಾಗುವವರೆಗೂ ಇವುಗಳಿಂದ ನೀನು ಅವರನ್ನು ಇರಿದು ಕೊಂದುಹಾಕುವಿ” ಎಂದನು.
၁၁ခေနာနာသားဇေဒကိသည် သံဦးချိုတို့ကို လုပ်၍၊ ထာဝရဘုရား မိန့်တော်မူသည်ကား၊ ကိုယ်တော် သည် ရှုရိလူတို့ကို မဖျက်ဆီးမှီ တိုင်အောင် ဤဦးချိုတို့နှင့် တိုးရမည်ဟုမိန့်တော်မူကြောင်းကို ဆင့်ဆို၏။
12 ೧೨ ಉಳಿದ ಪ್ರವಾದಿಗಳೂ ಇದೇ ತರದ ಮಾತುಗಳನ್ನು ಹೇಳಿ, “ರಾಮೋತ್ ಗಿಲ್ಯಾದಿಗೆ ಹೋಗು ನೀನು ಸಫಲನಾಗಿ ಬರುವಿ. ಯೆಹೋವನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
၁၂ပရောဖက်အပေါင်းတို့ကလည်း၊ ဂိလဒ်ပြည် ရာမုတ်မြို့သို့ စစ်ချီ၍ အောင်တော်မူပါ။ ထာဝရဘုရား သည် အရှင်မင်းကြီး၏ လက်တော်သို့ အပ်တော်မူမည်ဟု ပရောဖက်ပြု၍ ဟောကြ၏။
13 ೧೩ ಮೀಕಾಯೆಹುವನ್ನು ಕರೆಯುವುದಕ್ಕೆ ಹೋದ ದೂತನು ಅವನಿಗೆ, “ಎಲ್ಲಾ ಪ್ರವಾದಿಗಳೂ ಏಕ ಮನಸ್ಸಿನಿಂದ ಅರಸನಿಗೆ ಶುಭವನ್ನೇ ಮುಂತಿಳಿಸುತ್ತಾರೆ, ದಯವಿಟ್ಟು ನೀನೂ ಅವರಂತೆ ಶುಭವನ್ನೇ ಮುಂತಿಳಿಸು” ಎಂದು ಹೇಳಿದನು.
၁၃မိက္ခာကိုခေါ်သောတမန်က၊ ပရောဖက် အပေါင်းတို့သည် မင်္ဂလာစကားကိုသာ ရှင်ဘုရင်အား တညီတညွတ်တည်းဟောကြ၏။ ကိုယ်တော်လည်း သူတို့ ဟောကြသည်နည်းတူ မင်္ဂလာစကားကိုသာ ဟောတော် မူပါဟုဆိုလျှင်၊
14 ೧೪ ಅದಕ್ಕೆ ಮೀಕಾಯೆಹುವು, “ಯೆಹೋವನಾಣೆ, ಯೆಹೋವನು ಹೇಳುವುದನ್ನೇ ನುಡಿಯುತ್ತೇನೆ” ಎಂದು ಉತ್ತರಕೊಟ್ಟನು.
၁၄မိက္ခာတ၊ ထာဝရဘုရားအသက်ရှင်တော်မူ သည်အတိုင်း ထာဝရဘုရားမိန့်တော်မူသော စကားကို သာ ငါပြန်ပြောရမည်ဟုဆို၏။
15 ೧೫ ಅವನು ಅರಸನ ಬಳಿಗೆ ಬಂದಾಗ ಅರಸನು, “ನಾವು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕ್ಕಾಗಿ ಹೋಗಬಹುದೋ, ಹೋಗಬಾರದೋ?” ಎಂದು ಕೇಳಲು ಅವನು, “ಹೋಗಬಹುದು, ಸಫಲನಾಗುವಿ, ಯೆಹೋವನು ಪಟ್ಟಣವನ್ನು ಅರಸನ ಕೈಗೆ ಒಪ್ಪಿಸುವನು” ಎಂದು ಹೇಳಿದನು.
၁၅ရှင်ဘုရင်ထံသို့ ရောက်သောအခါ ရှင်ဘုရင်က၊ အချင်းမိက္ခာ၊ ငါတို့သည် ဂိလဒ်ပြည်ရာမုတ်မြို့သို့ စစ်ချီ ကောင်းသလော။ မချီဘဲနေကောင်းသလောဟုမေးလျှင်၊ မိက္ခာက၊ စစ်ချီ၍ အောင်တော်မူပါ။ ထာဝရဘုရားသည် အရှင်မင်းကြီး၏ လက်တော်သို့ အပ်တော်မူမည်ဟု ပြန်လျှောက်၏။
16 ೧೬ ಆಗ ಅರಸನು, “ಅವನಿಗೆ ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು.
၁၆ရှင်ဘုရင်ကလည်း၊ မှန်သောစကားမှတပါး အခြားသောစကားကို ထာဝရဘုရားအခွင့်နှင့် သင်သည် ငါ့အားမဟောမည်အကြောင်း၊ ငါသည် ဘယ်နှစ်ကြိမ် တိုင်အောင် သင့်အား အကျိန်ပေးရမည်နည်းဟု မေးသော်၊
17 ೧೭ ಆಗ ಮೀಕಾಯೆಹುವು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳಲ್ಲಿ ಚದುರಿಹೋದದ್ದನ್ನು ಕಂಡೆನು. ಆಗ ಯೆಹೋವನು, ‘ಇವರು ಒಡೆಯನಿಲ್ಲದವರಾಗಿರುತ್ತಾರೆ, ಸಮಾಧಾನದಿಂದ ತಮ್ಮ ತಮ್ಮ ಮನೆಗಳಿಗೆ ಹೋಗಲಿ’ ಎಂದನು” ಎಂಬುದಾಗಿ ಉತ್ತರಕೊಟ್ಟನು.
၁၇မိက္ခာက၊ ဣသရေလအမျိုးသားအပေါင်းတို့ သည် သိုးထိန်းမရှိ သောသိုးကဲ့သို့၊ တောင်များအပေါ်မှာ အရပ်ရပ်ကွဲပြားလျက် ရှိကြသည်ကို ငါမြင်ပြီ။ ထာဝရ ဘုရားကလည်း၊ ဤသူအပေါင်းတို့သည် အရှင်မရှိသော ကြောင့် အသီးအသီးကိုယ်နေရာသို့ ပြန်ကြပါလေစေဟု မိန့်တော်မူကြောင်းကို လျှောက်ဆို၏။
18 ೧೮ ಆಗ ಇಸ್ರಾಯೇಲರ ಅರಸನು ಯೆಹೋಷಾಫಾಟನಿಗೆ, “ಇವನು ನನಗೆ ಯಾವಾಗಲೂ ಶುಭವನ್ನಲ್ಲ, ಅಶುಭವನ್ನೇ ಮುಂತಿಳಿಸುತ್ತಾನೆಂದು ನಾನು ನಿನಗೆ ಹೇಳಲಿಲ್ಲವೋ?” ಎಂದನು.
၁၈ဣသရေလရှင်ဘုရင်ကလည်း၊ သူသည်ငါ၌ မင်္ဂလာစကားကိုမဟော၊ အမင်္ဂလာစကားကိုသာ ဟောတတ်သည်ဟု မင်းကြီးအား ငါမပြောသလောဟု ယောရှဖတ်အားဆို၏။
19 ೧೯ ಅದಕ್ಕೆ ಮೀಕಾಯೆಹುವು “ಅದಿರಲಿ, ಈಗ ಯೆಹೋವನ ವಾಕ್ಯವನ್ನು ಕೇಳು, ಯೆಹೋವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡದ್ದನ್ನೂ ಪರಲೋಕಸೈನ್ಯಗಳು ಆತನ ಎಡಬಲಗಳಲ್ಲಿ ನಿಂತಿದ್ದನ್ನೂ ಕಂಡೆನು.
၁၉မိက္ခာကလည်း၊ သို့ဖြစ်၍ ထာဝရဘုရား၏ အမိန့်တော်ကို နားထောင်ပါ။ ထာဝရဘုရားသည် ပလ္လင် တော်ပေါ်မှာ ထိုင်တော်မူသည်ကို၎င်း၊ ကောင်းကင် ဗိုလ်ခြေအပေါင်းတို့သည် လက်ျာတော်ဘက် လက်ဝဲ တော်ဘက်၌ ရပ်နေကြသည်ကို၎င်း ငါမြင်ပြီ။
20 ೨೦ ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸುವಿರಿ’ ಎಂದು ಕೇಳಿದಾಗ ಒಬ್ಬನು ಒಂದು ರೀತಿಯಾಗಿ, ಇನ್ನೊಬ್ಬನು ಇನ್ನೊಂದು ರೀತಿಯಾಗಿ ಉತ್ತರಕೊಟ್ಟರು.
၂၀ထာဝရဘုရားကလည်း၊ အာဟပ်သည် ဂိလဒ် ပြည်ရာမုတ်မြို့သို့ စစ်ချီ၍ ဆုံးစေခြင်းငှါ အဘယ်သူ သွေးဆောင်မည်နည်းဟု မေးတော်မူလျှင်၊ အခြံအရံ တော်တို့သည် တယောက်တနည်းစီ ပြန်လျှောက်ကြ၏။
21 ೨೧ ಕೊನೆಯಲ್ಲಿ ಒಂದು ಆತ್ಮವು ಯೆಹೋವನ ಮುಂದೆ ಬಂದು ನಿಂತು ಅವನಿಗೆ, ‘ನಾನು ಹೋಗಿ ಅವರನ್ನು ಪ್ರೇರೇಪಿಸುವೆನು’ ಅಂದಿತು.
၂၁တဖန်ဝိညာဉ်တပါးသည် လာ၍ ထာဝရဘုရား ရှေ့တော်၌ ရပ်လျက်၊ အကျွန်ုပ်သွေးဆောင်ပါမည်ဟု လျှောက် လျှင်၊
22 ೨೨ ‘ಹೇಗೆ ಪ್ರೇರೇಪಿಸುವಿ?’ ಎಂದು ಯೆಹೋವನು ಕೇಳಲು ಅದು, ‘ನಾನು ಅಸತ್ಯವನ್ನಾಡುವ ಆತ್ಮವಾಗಿ ಅವನ ಎಲ್ಲಾ ಪ್ರವಾದಿಗಳಲ್ಲಿ ಸೇರುವೆನು’ ಎಂದು ಉತ್ತರಕೊಟ್ಟಿತು. ಆಗ ಆತನು ಅದಕ್ಕೆ, ‘ಹೋಗಿ ಅದರಂತೆ ಮಾಡು ಅವನನ್ನು ಪ್ರೇರೇಪಿಸಿ ಸಫಲವಾಗುವಿ’ ಅಂದನು.
၂၂ထာဝရဘုရားက အဘယ်သို့သွေးဆောင်မည် နည်းဟု မေးတော်မူသော်၊ အကျွန်ုပ်သွား၍ ထိုမင်းကြီး၏ ပရောဖက်အပေါင်းတို့ထဲမှာ မုသာစကားကို ပြောတတ် သော စိတ်ဝိညာဉ်ဖြစ်ပါမည်ဟု ပြန်လျှောက်သော်၊ သင်သည် သွေးဆောင်၍ နိုင်လိမ့်မည်။ ထိုသို့သွား၍ ပြုလော့ဟု မိန့်တော်မူ၏။
23 ೨೩ ನೋಡು ಯೆಹೋವನು ನಿನ್ನ ವಿಷಯದಲ್ಲಿ ಕೇಡು ನುಡಿದು ನಿನ್ನ ಎಲ್ಲಾ ಪ್ರವಾದಿಗಳಲ್ಲಿ ಅಸತ್ಯವನ್ನಾಡುವ ಆತ್ಮವನ್ನು ಕಳುಹಿಸಿದ್ದಾನೆ” ಎಂದು ಹೇಳಿದನು.
၂၃သို့ဖြစ်၍ ထာဝရဘုရားသည် မုသာစကားကို ပြောတတ်သော စိတ်ဝိညာဉ်ကို မင်းကြီး၏ ပရောဖက် အပေါင်းတို့၌ သွင်းတော်မူပြီ။ မင်းကြီး၏အမှုမှာ အမင်္ဂလာစကားကို ပြောတော်မူပြီဟု ဟောလေ၏။
24 ೨೪ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
၂၄ထိုအခါခေနာနာ၏ သားဇေဒကိသည် ချဉ်းလာ ၍ မိက္ခာ၏ ပါးကိုပုတ်လျက်၊ ထာဝရဘုရား၏ ဝိညာဉ် တော်သည် သင်နှင့်နှုတ်ဆက်ခြင်းငှါ အဘယ်လမ်းဖြင့် ငါမှထွက်တော်မူသနည်းဟု မေးလျှင်၊
25 ೨೫ ಮೀಕಾಯೆಹುವು, “ನೀನು ಅಡಗಿಕೊಳ್ಳುವುದಕ್ಕೆ ಒಳಗಿನ ಕೋಣೆಗೆ ಹೋಗುವ ದಿನದಲ್ಲಿ ಅದು ನಿನಗೆ ಗೊತ್ತಾಗುವುದು” ಎಂದು ಉತ್ತರಕೊಟ್ಟನು.
၂၅မိက္ခာက၊ သင်သည် ပုန်းရှောင်၍ နေခြင်းငှါ အတွင်းခန်းထဲသို့ ဝင်သောနေ့၌ သင်မြင်လိမ့်မည်ဟု ဆို၏။
26 ೨೬ ಆಗ ಇಸ್ರಾಯೇಲಿನ ಅರಸನು ಸೇವಕರಿಗೆ, “ಮೀಕಾಯೆಹುವನ್ನು ಹಿಡಿದುಕೊಂಡು ಹೋಗಿ ಪುರಾಧಿಕಾರಿಯಾದ ಆಮೋನನಿಗೂ, ರಾಜಪುತ್ರನಾದ ಯೋವಾಷನಿಗೂ ಒಪ್ಪಿಸಿ ಅವರಿಗೆ,
၂၆ဣသရေလရှင်ဘုရင်က၊ မိက္ခာကို မြို့ဝန်မင်း အာမုန်ထံ၊ သားတော်ယောရှထံသို့ ယူသွား၍၊
27 ೨೭ ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.
၂၇ဤသူကိုထောင်ထဲမှာ လှောင်ထားကြ။ ငါသည် ငြိမ်ဝပ်စွာ ပြန်၍ မလာမှီတိုင်အောင် ဆင်းရဲစွာ စား သောက်စေဟု အမိန့်တော်ရှိကြောင်းကို ဆင့်ဆိုလော့ဟု စီရင်၏။
28 ೨೮ ಮೀಕಾಯೆಹುವು ಅರಸನಿಗೆ, “ನೀನು ಸುರಕ್ಷಿತವಾಗಿ ಬರುವುದಾದರೆ ನಾನು ನುಡಿದದ್ದು ಯೆಹೋವನ ಮಾತಲ್ಲವೆಂದು ತಿಳಿದುಕೋ” ಎಂದು ಹೇಳಿ “ಎಲ್ಲಾ ಜನರೇ, ಇದನ್ನು ಕೇಳಿರಿ” ಎಂದು ಕೂಗಿದನು.
၂၈မိက္ခာကလည်း၊ မင်းကြီးသည် ငြိမ်ဝပ်စွာ ပြန်လာရလျှင် ထာဝရဘုရားသည်ငါ့အားဖြင့် မိန့်တော် မမူ၊ အိုလူများအပေါင်းတို့၊ နားထောင်ကြလော့ဟုဆို၏။
29 ೨೯ ಇಸ್ರಾಯೇಲರ ಅರಸನೂ ಯೆಹೂದ್ಯರ ಅರಸನಾದ ಯೆಹೋಷಾಫಾಟನೂ ರಾಮೋತ್ ಗಿಲ್ಯಾದಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟರು.
၂၉ထိုသို့ ဣသရေလရှင်ဘုရင်နှင့် ယုဒရှင်ဘုရင် ယောရှဖတ်တို့သည် ဂိလဒ်ပြည်ရာမုတ်မြို့သို့ စစ်ချီကြ၏။
30 ೩೦ ಇಸ್ರಾಯೇಲರ ಅರಸನೂ ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ರಣರಂಗಕ್ಕೆ ಬರುವೆನು. ನೀನಾದರೂ ನಿನ್ನ ರಾಜವಸ್ತ್ರಗಳನ್ನೇ ಧರಿಸಿಕೊಂಡು ಬಾ” ಎಂದು ಹೇಳಿ ವೇಷಹಾಕಿಕೊಂಡು ರಣರಂಗಕ್ಕೆ ಹೋದನು.
၃၀ဣသရေလရှင်ဘုရင်က၊ ငါသည်ခြားနားသော အယောင်ကို ဆောင်၍စစ်ပွဲထဲသို့ ဝင်မည်။ မင်းကြီး မူကား မင်းမြောက်တန်ဆာကို ဝတ်ဆင်ပါလော့ဟု ယောရှဖတ်အားဆိုပြီးမှ၊ ဣသရေလရှင်ဘုရင်သည် ခြားနားသော အယောင်ကို ဆောင်လျက် စစ်ပွဲထဲသို့ ဝင်၏။
31 ೩೧ ಅರಾಮ್ಯರ ಅರಸನು ತನ್ನ ರಥಬಲದ ಮೂವತ್ತೆರಡು ಅಧಿಪತಿಗಳಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನು ಬಿಟ್ಟು ಇಸ್ರಾಯೇಲರ ಅರಸನಿಗೇ ಗುರಿಯಿಡಿರಿ” ಎಂದು ಆಜ್ಞಾಪಿಸಿದನು.
၃၁ရှုရိရှင်ဘုရင်က၊ ဣသရေလရှင်ဘုရင်မှတပါး အခြားသော လူကြီးလူငယ်ကို မတိုက်နှင့်ဟု ရထားစီး သူရဲများကို အုပ်သော ဗိုလ်သုံးကျိပ်နှစ်ယောက်တို့ကိုမှာ ထားနှင့်သောကြောင့်၊
32 ೩೨ ಅವರು ಯೆಹೋಷಾಫಾಟನನ್ನು ಕಂಡಾಗ ಅವನೇ ಇಸ್ರಾಯೇಲರ ಅರಸನೆಂದು ತಿಳಿದು ಅವನ ವಿರುದ್ಧ ಯುದ್ಧಮಾಡಿದರು.
၃၂ရထားစီးသူရဲအုပ်ဗိုလ်မင်းတို့သည် ယောရှဖတ် ကိုမြင်သောအခါ၊ အကယ်စင်စစ်ထိုသူသည် ဣသရေလ ရှင်ဘုရင်ဖြစ်လိမ့်မည်ဟု ဆိုလျက်သူ့ကို တိုက်အံ့သောငှါ လမ်းလွှဲကြ၍၊ ယောရှဖတ်လည်း ကြွေးကြော်လေ၏။
33 ೩೩ ಆಗ ಅವನು ಇಸ್ರಾಯೇಲ್ಯರ ಅರಸನಲ್ಲವೆಂಬುದು ರಥಬಲದ ಅಧಿಪತಿಗಳಿಗೆ ಗೊತ್ತಾದಾಗ ಅವರು ಅವನನ್ನು ಬಿಟ್ಟು ಹಿಂದಿರುಗಿದರು.
၃၃ဣသရေလရှင်ဘုရင် မဟုတ်ကြောင်းကို ရထား စီးသူရဲအုပ်ဗိုလ်မင်းတို့သည် ရိပ်မိသောအခါ၊ မလိုက်ဘဲ အခြားသို့ ရှောင်သွားကြ၏။
34 ೩೪ ಅರಾಮ್ಯರ ಒಬ್ಬ ಸೈನಿಕನು ಯಾರಿಗೂ ಗುರಿಯಿಡದೆ ಬಾಣವನ್ನೆಸೆಯಲು ಆ ಬಾಣವು ಇಸ್ರಾಯೇಲ್ಯರ ಅರಸನಿಗೆ ಅವನ ಕವಚದ ಸಂದಿಯಲ್ಲಿ ತಾಗಿತು. ಆಗ ಅವನು ತನ್ನ ಸಾರಥಿಗೆ, “ರಥವನ್ನು ಹಿಂತಿರುಗಿಸಿ ನನ್ನನ್ನು ರಣರಂಗದಿಂದ ಆಚೆಗೆ ಕರೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ” ಎಂದು ಹೇಳಿದನು.
၃၄လူတယောက်သည် မရွယ်ဘဲလေးနှင့်ပစ်၍၊ ဣသရေလရှင်ဘုရင်ကို သံချပ်အင်္ကျီအဆစ်ကြားမှာ မှန်လေသော်၊ ငါ့ကိုစစ်ပွဲထဲက လှည့်၍ ထုတ်ဆောင် လော့။ ငါနာသည်ဟု မိမိရထားတော်ထိန်းကို ဆို၏။
35 ೩೫ ಆದರೂ ಆ ದಿನ ಯುದ್ಧವು ಬಹು ಘೋರವಾಗಿದ್ದುದರಿಂದ ಅರಸನು ಅರಾಮ್ಯರ ಎದುರಾಗಿ ತನ್ನ ರಥದಲ್ಲಿಯೇ ಆತುಕೊಂಡು ನಿಂತಿದ್ದು ಸಾಯಂಕಾಲವಾದಾಗ ಸತ್ತನು. ಗಾಯದಿಂದ ರಕ್ತವು ಸುರಿದು ಸುರಿದು ರಥದ ಅಡಿಯಲ್ಲಿ ನಿಂತಿತು.
၃၅ထိုနေ့၌တိုး၍ တိုက်ကြ၏။ ရှင်ဘုရင်သည် ရှုရိလူတဘက်တချက်၌ရထားတော်ထဲမှာ လူကိုမှီ၍ ထိုင်နေ၏။ ညဦးယံ၌ အသက်တော်ကုန်၏။ ထိခိုက်ရာ အနာမှ အသွေးသည်ရထားထဲသို့ယို၏။
36 ೩೬ ಸೂರ್ಯಸ್ತಮಾನವಾದ ಕೂಡಲೆ “ಪ್ರತಿಯೊಬ್ಬನೂ ತನ್ನ ಪ್ರಾಂತ್ಯಕ್ಕೂ ಪಟ್ಟಣಕ್ಕೂ ಹೋಗಲಿ” ಎಂಬ ಕೂಗು ಇಸ್ರಾಯೇಲ್ ಸೈನ್ಯದಲ್ಲಿ ಹಬ್ಬಿಕೊಂಡಿತು
၃၆လူအပေါင်းတို့၊ ကိုယ်နေသော မြို့ပြည်သို့ ပြန်သွားကြဟု နေဝင်သောအခါ တတပ်လုံးကို ကြွေး ကြော်လေ၏။
37 ೩೭ ಅರಸನು ಸಾಯಲು ಅವನನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿ ಮಾಡಿದರು.
၃၇ထိုသို့ရှင်ဘုရင်သေ၍ ရှမာရိမြို့သို့ ရောက် သဖြင့် သင်္ဂြိုဟ်ခြင်းကို ခံရ၏။
38 ೩೮ ದೇವದಾಸಿಯರು ಸ್ನಾನಮಾಡುವ ಸಮಾರ್ಯದ ಕೆರೆಯಲ್ಲಿ ಅವನ ರಥವನ್ನು ತೊಳೆಯುತ್ತಿದ್ದಾಗ ನಾಯಿಗಳು ಬಂದು ಅದರಲ್ಲಿದ್ದ ರಕ್ತವನ್ನು ನೆಕ್ಕಿದವು. ಹೀಗೆ ಯೆಹೋವನು ಹೇಳಿದ ಮಾತು ನೆರವೇರಿತು.
၃၈ရထားတော်နှင့် လက်နက်တော်ကို ရှမာရိမြို့ ရေကန်၌ ဆေးသဖြင့်၊ ထာဝရဘုရားမိန့်တော်မူသော စကားနှင့်အညီခွေးတို့သည် အသွေးကို လျက်ကြ၏။
39 ೩೯ ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
၃၉အာဟပ်ပြုမူသော အမှုအရာကြွင်းလေသမျှ တို့နှင့် တည်ဆောက်သော ဆင်စွယ်နန်း၊ ပြုစုသောမြို့တို့ သည် ဣသရေလရာဇဝင်၌ ရေးထားလျက်ရှိ၏။
40 ೪೦ ಅಹಾಬನು ಪೂರ್ವಿಕರ ಬಳಿಗೆ ಸೇರಲು ಅವನಿಗೆ ಬದಲಾಗಿ ಅವನ ಮಗನಾದ ಅಹಜ್ಯ ಎಂಬುವನು ಅರಸನಾದನು.
၄၀အာဟပ်သည် ဘိုးဘေးတို့နှင့်အိပ်ပျော်၍၊ သားတော်အာခဇိသည် ခမည်းတော်အရာ၌ နန်းထိုင်၏။
41 ೪೧ ಇಸ್ರಾಯೇಲ್ಯರ ಅರಸನಾದ ಅಹಾಬನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಆಸನ ಮಗನಾದ ಯೆಹೋಷಾಫಾಟನು ಯೆಹೂದ್ಯರ ಅರಸನಾದನು.
၄၁ဣသရေလရှင်ဘုရင် အာဟပ်နန်းစံလေးနှစ် တွင် အာသသား ယောရှဖတ်သည် အသက်သုံးဆယ် ငါးနှစ်ရှိသော် ယုဒနိုင်ငံကို အစိုးရ၍၊
42 ೪೨ ಅವನು ಅರಸನಾದಾಗ ಮೂವತ್ತೈದು ವರ್ಷದವನಾಗಿದ್ದು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಳಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ
၄၂ယေရုရှလင်မြို့၌ နှစ်ဆယ်ငါးနှစ်စိုးစံလေ၏။ မယ်တော်ကား ရှိလဟိသမီးအဇုဘအမည်ရှိ၏။
43 ೪೩ ಅವನು ತಪ್ಪದೆ ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದರೂ, ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ಆ ಸ್ಥಳಗಳಲ್ಲಿ ಯಜ್ಞಮಾಡುತ್ತಾ ಧೂಪಹಾಕುತ್ತಾ ಇದ್ದರು.
၄၃ထိုမင်းသည်ခမည်းတော် အာသလိုက်သော လမ်းကိုမလွှဲ၊ အကုန်အစင်လိုက်၍ ထာဝရဘုရား ရှေ့တော်၌ ဖြောင့်မတ်သော အကျင့်ကိုသာ ကျင့်၏။ သို့ရာတွင် မြင့်သောအရပ်တို့ကို မပယ်ရှားသောကြောင့်၊ လူတို့သည် ထိုအရပ်တို့၌ ယဇ်ပူဇော်၍ နံ့သာပေါင်းကို မီးရှို့ကြ၏။
44 ೪೪ ಅವನು ಇಸ್ರಾಯೇಲ್ಯರ ಅರಸರೊಡನೆ ಸಮಾಧಾನದಿಂದಿದ್ದನು.
၄၄ယောရှဖတ်မင်းသည် ဣသရေလရှင်ဘုရင်နှင့် စစ်မတိုက် မိဿဟာယဖွဲ့လေ၏။
45 ೪೫ ಅವನ ಉಳಿದ ಚರಿತ್ರೆಯೂ ಅವನು ಯುದ್ಧಗಳಲ್ಲಿ ನಡಿಸಿದ ಶೂರಕೃತ್ಯಗಳ ವಿವರವೂ ಯೆಹೂದ್ಯರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.
၄၅ယောရှဖတ်ပြုမူသော အမှုအရာကြွင်းလေသမျှ တို့နှင့် တန်ခိုးကြီးခြင်း၊ စစ်တိုက်ခြင်းအရာတို့သည် ယုဒရာဇဝင်၌ ရေးထားလျက် ရှိ၏။
46 ೪೬ ಅವನು ತನ್ನ ತಂದೆಯಾದ ಅಸನ ಕಾಲದಲ್ಲಿ ತಪ್ಪಿಸಕೊಂಡ ದೇವದಾಸದಾಸಿಯರನ್ನು ದೇಶದಿಂದ ತೆಗೆದುಹಾಕಿದನು.
၄၆ခမည်းတော်အာသလက်ထက်၌ ကျန်ကြွင်းသေး သော ယောက်ျားအလိုသို့ လိုက်တတ်သော မိန်းမလျှာ တို့ကို ပြည်တော်မှ သုတ်သင်ပယ်ရှင်းလေ၏။
47 ೪೭ ಆ ಕಾಲದಲ್ಲಿ ಎದೋಮ್ ದೇಶದಲ್ಲಿ ಅರಸನಿರಲಿಲ್ಲ. ಅವನ ಪ್ರತಿನಿಧಿಯೇ ಅದನ್ನು ಆಳುತ್ತಿದ್ದನು.
၄၇ထိုကာလ၊ ဧဒုံပြည်၌ ရှင်ဘုရင်မရှိ။ ယုဒ ရှင်ဘုရင်ခန့်ထားသော မြို့ဝန်မင်း စီရင်ရ၏။
48 ೪೮ ಇದಲ್ಲದೆ ಯೆಹೋಷಾಫಾಟನು ಓಫೀರಿನಿಂದ ಬಂಗಾರ ತರುವುದಕ್ಕಾಗಿ ತಾರ್ಷಿಷ್ ಹಡಗುಗಳನ್ನು ಮಾಡಿಸಿದನು.
၄၈ယောရှဖတ်သည် ဩဖိရပြည်သို့ စေလွှတ်၍၊ ရွှေကို ယူစေခြင်းငှါ တာရှုသင်္ဘောတို့ကို ဧဇယုန်ဂါဗာမြို့ မှာ တည်၏။
49 ೪೯ ಆಗ ಅಹಾಬನ ಮಗನಾದ ಅಹಜ್ಯನು ಅವನನ್ನು, “ನಿನ್ನ ಜನರ ಜೊತೆಯಲ್ಲಿ ನನ್ನ ಜನರೂ ಸಮುದ್ರ ಪ್ರಯಾಣ ಮಾಡುವುದಕ್ಕೆ ಅಪ್ಪಣೆಯಾಗಲಿ” ಎಂದು ಬೇಡಿಕೊಂಡನು. ಅವನು ಅದಕ್ಕೆ ಒಪ್ಪಲಿಲ್ಲ. ಆದರೆ ಆ ಹಡಗುಗಳು ಎಚ್ಯೋನ್ಗೆಬೆರಿನಲ್ಲಿ ಒಡೆದುಹೋದುದರಿಂದ ಓಫೀರನ್ನು ಮುಟ್ಟಲಿಲ್ಲ.
၄၉အာဟပ်သား အာခဇိက၊ ငါ့ကျွန်တို့သည် မင်းကြီးကျွန်တို့နှင့် သင်္ဘောစီးဝါစေဟု ယောရှဖတ်၌ အခွင့်တောင်း၍ ယောရှဖတ်သည် အခွင့်ပေး၏။ သို့သော် လည်း သင်္ဘောတို့သည် ဧဇယုန်ဂါဗာမြို့မှာ ကျိုးပဲ့သော ကြောင့်၊ ဩဖိရမြို့သို့ မသွားရ။
50 ೫೦ ಯೆಹೋಷಾಫಾಟನು ತನ್ನ ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ಅವನ ಪೂರ್ವಿಕನಾದ ದಾವೀದನ ಪಟ್ಟಣದೊಳಗೆ ಕುಟುಂಬ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋರಾಮನು ಅರಸನಾದನು.
၅၀ယောရှဖတ်သည် ဘိုးဘေးတို့နှင့် အိပ်ပျော်၍ သူတို့နှင့်အတူ အဘဒါဝိဒ်မြို့၌ သင်္ဂြိုဟ်ခြင်းကိုခံလေ၏။ သားတော်ယဟောရံသည် ခမည်းတော်အရာ၌ နန်းထိုင် ၏။
51 ೫೧ ಯೆಹೂದ್ಯರ ಅರಸನಾದ ಯೆಹೋಷಾಫಾಟನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಅಹಾಬನ ಮಗನಾದ ಅಹಜ್ಯ ಎಂಬುವನು ಇಸ್ರಾಯೇಲರ ಅರಸನಾಗಿ ಸಮಾರ್ಯದಲ್ಲಿ ಎರಡು ವರ್ಷ ಆಳ್ವಿಕೆ ಮಾಡಿದನು.
၅၁ယုဒရှင်ဘုရင်ယောရှဖတ်နန်းစံ ဆယ်ခုနစ်နှစ် တွင်၊ အာဟပ်သားအာခဇိသည် ရှမာရိမြို့၌ မင်းပြု၍ ဣသရေလနိုင်ငံကို နှစ်နှစ်စိုးစံ၏။
52 ೫೨ ಅವನು ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿ ನೆಬಾಟನ ಮಗನಾದ ಯಾರೊಬ್ಬಾಮನ ಮತ್ತು ತನ್ನ ತಂದೆತಾಯಿಗಳ ಮಾರ್ಗದಲ್ಲಿ ನಡೆದು ಯೆಹೋವನ ದೃಷ್ಟಿಯಲ್ಲಿ ದ್ರೋಹಿಯಾದನು.
၅၂ထိုမင်းသည်ထာဝရဘုရားရှေ့တော်၌ ဒုစရိုက်ကို ပြု၍၊ မိဘလိုက်သောလမ်း၊ ဣသရေအမျိုးကို ပြစ်မှား စေသော နေဗတ်၏သား ယေရောဗောင်လိုက်သောလမ်းသို့ လိုက်လေ၏။
53 ೫೩ ತನ್ನ ತಂದೆಯಂತೆ ಬಾಳ್ ದೇವರನ್ನು ಪೂಜಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೆ ಕೋಪ ಉಂಟುಮಾಡಿನು.
၅၃ဗာလဘုရားကို ဝတ်ပြုကိုးကွယ်၍၊ အဘကျင့်လေသမျှအတိုင်း ဣသရေလအမျိုး၏ ဘုရားသခင် ထာဝရဘုရား၏ အမျက်တော်ကို နှိုးဆော်သတည်း။

< ಅರಸುಗಳು - ಪ್ರಥಮ ಭಾಗ 22 >