< ಸಮುವೇಲನು - ಪ್ರಥಮ ಭಾಗ 30 >

1 ದಾವೀದನೂ ಅವನ ಜನರೂ ಮೂರನೆಯ ದಿನ ಚಿಕ್ಲಗ್ ಊರನ್ನು ಮುಟ್ಟಿದರು. ಅಷ್ಟರೊಳಗೆ ಅಮಾಲೇಕ್ಯರು ದಂಡೆತ್ತಿ ದಕ್ಷಿಣ ಪ್ರಾಂತ್ಯಕ್ಕೂ ಚಿಕ್ಲಗ್ ಊರಿಗೂ ಬಂದು ಚಿಕ್ಲಗ್ ಊರನ್ನು ಸುಟ್ಟು ಹಾಳುಮಾಡಿ,
तीसरे दिन दावीद एवं उनके साथी ज़िकलाग नगर पहुंचे. इस बीच अमालेकियों ने नेगेव तथा ज़िकलाग पर छापा मारा था. उन्होंने ज़िकलाग पर हमला किया, तथा उसे आग लगा दी.
2 ಆ ಊರಿನಲ್ಲಿದ್ದ ಎಲ್ಲಾ ಹೆಂಗಸರನ್ನೂ ಚಿಕ್ಕವರನ್ನೂ ದೊಡ್ಡವರನ್ನೂ ಸೆರೆಹಿಡಿದುಕೊಂಡು ಹೋಗಿದ್ದರು.
उन्होंने नगर की हर अवस्था की स्त्रियों को बंदी बना लिया था मगर उन्होंने किसी की भी हत्या नहीं की. उन्हें बंदी बनाकर वे उन्हें अपने साथ ले गए.
3 ಆದರೆ ಯಾರನ್ನೂ ಕೊಂದಿರಲಿಲ್ಲ. ದಾವೀದನೂ ಅವನ ಜನರೂ ತಮ್ಮ ಊರಿಗೆ ಬಂದಾಗ ಅದು ಸುಡಲ್ಪಟ್ಟಿರುವುದನ್ನೂ, ತಮ್ಮ ಹೆಂಡತಿಯರೂ ಗಂಡುಮಕ್ಕಳೂ ಸೆರೆಯಾಗಿ ಒಯ್ಯಲ್ಪಟ್ಟಿರುವುದನ್ನೂ ಕಂಡು
जब दावीद और उनके साथी लौटकर नगर में आए तो उन्होंने देखा कि नगर भस्म हुआ पड़ा है, और उनकी पत्नियां, पुत्र और पुत्रियां बंदी बनाकर ले जा चुके हैं.
4 ಅವರು ತಮ್ಮಿಂದಾಗುವಷ್ಟು ಕಾಲ ಅತ್ತರು.
यह देख दावीद और उनके साथी ऊंची आवाज में उस समय तक रोते रहे, जब तक उनमें रोने के लिए बल ही बाकी न रह गया.
5 ದಾವೀದನ ಇಬ್ಬರು ಹೆಂಡತಿಯರಾದ ಇಜ್ರೇಲಿನವಳಾದ ಅಹೀನೋವಮಳೂ, ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸೆರೆಯಾಗಿ ಹೋಗಿದ್ದರು.
दावीद की दोनों पत्नियां भी बंदी बनाकर ले जाई गई थी; येज़्रील की अहीनोअम तथा कर्मेल के नाबाल की विधवा अबीगइल.
6 ಇದಲ್ಲದೆ ಜನರು ತಮ್ಮ ಗಂಡು ಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡು, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದುದರಿಂದ ಅವನು ಬಲು ಇಕ್ಕಟ್ಟಿನಲ್ಲಿ ಬಿದ್ದನು. ಆದರೂ ಅವನು ತನ್ನ ದೇವರಾದ ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು
इस समय दावीद बहुत ही परेशान थे, क्योंकि उनके साथी उनका पत्थराव करने की योजना कर रहे थे. हर एक व्यक्ति का हृदय अपने पुत्र-पुत्रियों के अपहरण के कारण बहुत ही कटु हो चुका था. मगर दावीद ने इस स्थिति में याहवेह अपने परमेश्वर में बल प्राप्‍त किया.
7 ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ, “ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ” ಎಂದು ಹೇಳಲು ಅವನು ತಂದನು.
दावीद ने अहीमेलेख के पुत्र अबीयाथर पुरोहित से विनती की, “कृपया मेरे पास एफ़ोद लेकर आइए.” अबीयाथर एफ़ोद लेकर दावीद के निकट आ गए.
8 ಆಗ ದಾವೀದನು ಯೆಹೋವನನ್ನು, “ನಾನು ಆ ಗುಂಪನ್ನು ಹಿಂದಟ್ಟಬಹುದೋ, ಅದು ನನಗೆ ಸಿಕ್ಕುವುದೋ?” ಎಂದು ಕೇಳಲು ಆತನು, “ಹಿಂದಟ್ಟು, ಅದು ನಿನಗೆ ಸಿಕ್ಕುವುದು, ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ” ಎಂದು ಉತ್ತರಕೊಟ್ಟನು.
दावीद ने याहवेह से पूछा, “क्या मैं इन छापामारों का पीछा करूं? क्या मैं उन्हें पकड़ सकूंगा?” याहवेह की ओर से उत्तर आया, “पीछा अवश्य करो, क्योंकि तुम उन्हें निश्चयतः पकड़ लोगे और बंदियों को छुड़ा लोगे.”
9 ದಾವೀದನೂ ಅವನ ಸಂಗಡ ಇದ್ದ ಆರುನೂರು ಮಂದಿ ಸೈನಿಕರೂ ಹೊರಟು ಬೆಸೋರ್ ಹಳ್ಳಕ್ಕೆ ಬಂದ ಮೇಲೆ ಆ ಹಳ್ಳದಿಂದ ಮೇಲೆ ಹತ್ತಲಾರದಷ್ಟು
तब दावीद अपने छः सौ साथियों के साथ उनका पीछा करने निकल पड़े. जब वे बेसोर नामक नदी पर पहुंचे, कुछ पीछे रह गए.
10 ೧೦ ಆಯಾಸಗೊಂಡ ಇನ್ನೂರು ಜನರು ಅಲ್ಲೇ ನಿಂತುಬಿಟ್ಟದ್ದರಿಂದ, ದಾವೀದನು ಉಳಿದ ನಾನೂರು ಜನರನ್ನೇ ಕರೆದುಕೊಂಡು ಮುಂದೆ ನಡೆದನು.
दावीद ने वहां उन दो सौ व्यक्तियों को छोड़ दिया, क्योंकि ये थक गए थे और बेसोर नदी को पार करने में असमर्थ थे. मगर दावीद अपने शेष चार सौ साथियों को लेकर आगे बढ़ते गए.
11 ೧೧ ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
चलते हुए मैदान में पहुंचने पर उन्हें एक मिस्रवासी व्यक्ति मिला. वे उसे दावीद के पास ले गए. उन्होंने उसे भोजन कराया तथा पीने के लिए पानी भी दिया.
12 ೧೨ ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.
इसके अतिरिक्त उन्होंने उसे खाने के लिए एक पिण्ड अंजीर तथा एक गुच्छा किशमिश भी दिया. भोजन कर लेने के बाद उसमें स्फूर्ति लौट आई. तीन दिन और तीन रात से उसने कुछ भी न खाया था नहीं कुछ पिया था.
13 ೧೩ ಆಗ ದಾವೀದನು ಅವನನ್ನು, “ನೀನು ಯಾರ ಕಡೆಯವನು, ಎಲ್ಲಿಯವನು?” ಎಂದು ಕೇಳಿದನು. ಅವನು “ನಾನು ಐಗುಪ್ತನು, ಒಬ್ಬ ಅಮಾಲೇಕ್ಯನ ದಾಸನು. ನಾನು ಮೂರು ದಿನಗಳ ಹಿಂದೆ ಅಸ್ವಸ್ಥನಾಗಿ ಮಲಗಿಕೊಂಡಿದ್ದರಿಂದ ನನ್ನ ಯಜಮಾನನು ನನ್ನನ್ನು ಬಿಟ್ಟುಹೋದನು.
दावीद ने उससे पूछा, “तुम कहां से आ रहे हो तथा कौन है तुम्हारा स्वामी?” उस युवा ने उत्तर दिया, “मैं मिस्रवासी हूं. मैं एक अमालेकी का सेवक हूं. तीन दिन तक मेरे अस्वस्थ होने पर मेरे स्वामी ने मेरा परित्याग कर दिया.
14 ೧೪ ನಾವು ಕೆರೇತ್ಯರೂ ಯೆಹೂದ್ಯರೂ ಕಾಲೇಬ್ಯರೂ ಇರುವ ದಕ್ಷಿಣ ಪ್ರಾಂತ್ಯವನ್ನು ಸೂರೆಮಾಡಿ ಚಿಕ್ಲಗ್ ಊರನ್ನು ಸುಟ್ಟುಬಿಟ್ಟು ಬಂದೆವು” ಎಂದು ಉತ್ತರ ಕೊಟ್ಟನು.
हम लोगों ने केरेथियों के दक्षिण क्षेत्र पर, यहूदिया के एक क्षेत्र पर तथा कालेब के दक्षिण क्षेत्र पर छापा मारा. तब हमने ज़िकलाग में आग लगा दी.”
15 ೧೫ ಅನಂತರ ದಾವೀದನು, “ನೀನು ನನ್ನನ್ನು ಆ ಗುಂಪು ಇರುವ ಸ್ಥಳಕ್ಕೆ ಕರೆದುಕೊಂಡು ಹೋಗುವಿಯೋ?” ಎಂದು ಕೇಳಿದ್ದಕ್ಕೆ ಅವನು, “ನೀನು ನನ್ನನ್ನು ಕೊಲ್ಲುವುದಿಲ್ಲವೆಂದೂ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದರೆ ನಿನ್ನನ್ನು ಆ ಗುಂಪಿನವರ ಬಳಿಗೆ ಕರಕೊಂಡು ಹೋಗುವೆನು” ಅಂದನು.
दावीद ने उससे पूछा, “क्या तुम हमें इन छापामारों तक पहुंचा सकते हो?” उस मिस्रवासी ने उनसे कहा, “पहले आप शपथ लीजिए कि आप न तो मेरी हत्या करेंगे, और न मुझे मेरे स्वामी के हाथों में सौंपेंगे; तब मैं आपको इन छापामारों तक पहुंचा दूंगा.”
16 ೧೬ ಅವರು ಅಲ್ಲಿಗೆ ಹೋದಾಗ ಆ ಗುಂಪಿನವರು ತಮಗೆ ಫಿಲಿಷ್ಟಿಯ ಮತ್ತು ಯೆಹೂದ ಪ್ರಾಂತ್ಯಗಳಲ್ಲಿ ದೊರಕಿದ ದೊಡ್ಡ ಕೊಳ್ಳೆಯ ನಿಮಿತ್ತವಾಗಿ ಸಂತೋಷಿಸಿ, ಉಂಡು ಕುಡಿದು, ಕುಣಿದಾಡುತ್ತಾ ಅಲ್ಲಿನ ಬೈಲಿನಲ್ಲಿ ವ್ಯಾಪಿಸಿಕೊಂಡಿದ್ದರು.
तब वह मिस्रवासी उन्हें उस स्थान पर ले गया. छापामार एक विशाल भूभाग पर फैले हुए थे. फिलिस्तीनियों तथा यहूदिया से लूटकर लाई गई सामग्री के कारण वे अब खा-पीकर आमोद-प्रमोद में लिप्‍त थे.
17 ೧೭ ದಾವೀದನು ಮರುದಿನ ಹೊತ್ತಾರೆಯಿಂದ ಸೂರ್ಯಸ್ತಮಾನದವರೆಗೂ ಅವರನ್ನು ಸಂಹರಿಸಿದನು. ಒಂಟೆಗಳನ್ನು ಹತ್ತಿ ಓಡಿಹೋದ ನಾನೂರು ಮಂದಿ ಪ್ರಾಯಸ್ಥರ ಹೊರತು ಬೇರೆ ಯಾರೂ ತಪ್ಪಿಸಿಕೊಳ್ಳಲಿಲ್ಲ.
शाम से दावीद ने उनका संहार करना शुरू किया और यह क्रम अगले दिन की शाम तक चलता रहा. इसमें ऊंटों पर आरोहित चार सौ युवा छापामारों को छोड़ उनमें कोई भी जीवित न रहा. वे चार सौ ऊंटों पर भाग निकले.
18 ೧೮ ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು.
दावीद ने अपनी दोनों पत्नियों को तथा अमालेकियों द्वारा लूटी गई सारा सामग्री पुनः प्राप्‍त कर ली.
19 ೧೯ ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ, ಗಂಡು ಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರುಗಿ ತೆಗೆದುಕೊಂಡು ಬಂದನು.
किसी वस्तु की हानि नहीं हुई थी—न तो कोई छोटी वस्तु या बड़ी वस्तु, पुत्र या पुत्रियां, लूटी हुई वस्तुएं या कुछ भी, जो छीन लिया गया था, दावीद को सभी कुछ पुनः प्राप्‍त हो गया.
20 ೨೦ ಇದಲ್ಲದೆ ದಾವೀದನು ಶತ್ರುಗಳ ದನಕುರಿಗಳನ್ನೂ ತೆಗೆದುಕೊಂಡನು. ಅವನ ಜನರು, “ಇವು ದಾವೀದನ ಕೊಳ್ಳೆ” ಎಂದು ಹೇಳಿ ಅವುಗಳನ್ನು ತಮ್ಮ ದನಗಳ ಮುಂದಾಗಿ ಹೊಡೆದುಕೊಂಡು ಬಂದರು.
दावीद ने सारी भेड़ें और पशु भी पकड़ लिए, और उन्हें अन्य पशुओं के साथ सबके आगे-आगे लेकर लौटे. उन्होंने घोषणा की, “यह सब दावीद द्वारा लूटी गई सामग्री है.”
21 ೨೧ ಅನಂತರ ದಾವೀದನು ಆಯಾಸದಿಂದ ತನ್ನ ಹಿಂದೆ ಬರಲಾರದೆ ಬೆಸೋರ್ ಹಳ್ಳದ ಹತ್ತಿರ ಉಳಿದಿದ್ದ ಇನ್ನೂರು ಜನರ ಬಳಿಗೆ ಹೋಗುತ್ತಿರುವಾಗ, ಅವರು ಅವನನ್ನೂ ಅವನೊಂದಿಗಿದ್ದ ಜನರನ್ನೂ ಸಂಧಿಸಿ, ಅವರ ಕ್ಷೇಮಸಮಾಚಾರವನ್ನು ವಿಚಾರಿಸಿದರು.
जब वे लौटते हुए उन दो सौ के स्थान पर पहुंचे, जो सरिता पार करने योग्य नहीं रह गए थे, जिन्हें उन्होंने सरिता बेसोर के पार छोड़ दिया था, वे दावीद और उनके साथियों से भेंटकरने आगे आए. दावीद ने उनसे उनका कुशल क्षेम पूछा.
22 ೨೨ ಆಗ ದಾವೀದನ ಜೊತೆಯಲ್ಲಿ ಹೋಗಿದ್ದ ಜನರಲ್ಲಿ ದುಷ್ಟರೂ ಮೂರ್ಖರೂ ಆದ ಕೆಲವು ಮಂದಿ, “ಇವರು ನಮ್ಮ ಸಂಗಡ ಬಾರದ್ದರಿಂದ, ನಾವು ತೆಗೆದುಕೊಂಡು ಬಂದಿರುವ ಕೊಳ್ಳೆಯಲ್ಲಿ ಇವರಿಗೆ ಏನೂ ಸಿಕ್ಕುವುದಿಲ್ಲ. ತಮ್ಮ ತಮ್ಮ ಹೆಂಡತಿ ಮಕ್ಕಳನ್ನು ಕರೆದುಕೊಂಡು ಹೋಗಿಬಿಡಲಿ” ಎಂದರು.
तब दावीद के साथियों में से वे, जो निकम्मे तथा दुर्वृत्त थे, कहने लगे, “हम इन्हें इस सामग्री में से कुछ नहीं देंगे, क्योंकि इन्होंने हमारा साथ छोड़ दिया था तथा ये हमारे साथ युद्ध पर नहीं गए थे. हां, हर एक व्यक्ति अपनी पत्नी और संतान को लेकर यहां से चला जाए.”
23 ೨೩ ಆಗ ದಾವೀದನು ಅವರಿಗೆ, “ಸಹೋದರರೇ, ಯೆಹೋವನು ನಮ್ಮನ್ನು ಕಾಪಾಡಿ ನಮಗೆ ವಿರೋಧವಾಗಿ ಬಂದಿದ್ದ ಶತ್ರುಗಳ ಗುಂಪನ್ನು ನಮ್ಮ ಕೈಗೆ ಒಪ್ಪಿಸಿ ನಮಗೆ ಇಷ್ಟನ್ನೆಲ್ಲಾ ಕೊಟ್ಟ ಮೇಲೆ ನೀವು ಹೀಗೆ ಮಾಡಬಾರದು.
मगर जवाब में दावीद ने कहा, “नहीं, मेरे भाइयो, याहवेह द्वारा दी गई सामग्री के साथ हम ऐसा नहीं कर सकते. याहवेह ने हमें सुरक्षा प्रदान की है तथा हमें उन छापामारों पर जय प्रदान की है.
24 ೨೪ ಈ ವಿಷಯದಲ್ಲಿ ನಿಮ್ಮ ಮಾತನ್ನು ಯಾರು ಕೇಳುವರು? ಯುದ್ಧಮಾಡಿದವನಿಗೆ ಸಿಕ್ಕುವಷ್ಟು ಪಾಲು ಸಾಮಾನು ಕಾಯುವವನಿಗೂ ಸಿಕ್ಕಬೇಕು. ಉಭಯರಿಗೂ ಸಮಭಾಗವಾಗಬೇಕು” ಎಂದು ಉತ್ತರಕೊಟ್ಟನು.
किसे तुम्हारा यह तर्क मान्य हो सकता है? लूट की सामग्री में उसका भी उतना ही अंश होगा, जो सबके सामान की रक्षा के लिए पीछे रुका रहता है, जितना उसका, जो युद्ध करता है; सबका अंश समान होगा.”
25 ೨೫ ದಾವೀದನು ಇಸ್ರಾಯೇಲರಲ್ಲಿ ಇದನ್ನು ಕಟ್ಟಳೆಯಾಗಿ ನೇಮಿಸಿದ್ದರಿಂದ ಇಂದಿನವರೆಗೂ ಹಾಗೆಯೇ ನಡೆಯುತ್ತಾ ಬಂದಿದೆ.
दावीद ने उस दिन से इस्राएल में यही नियम तथा विधि प्रभावी कर दी, जो आज तक प्रभावी है.
26 ೨೬ ದಾವೀದನು ಚಿಕ್ಲಗ್ ಊರಿಗೆ ಬಂದನಂತರ ತನ್ನ ಸ್ನೇಹಿತರಾದ ಯೆಹೂದದ ಹಿರಿಯರಿಗೆ ಕೊಳ್ಳೆಯ ಒಂದು ಭಾಗವನ್ನು ಕಳುಹಿಸಿ, “ಇಗೋ ಯೆಹೋವನ ಶತ್ರುಗಳನ್ನು ಸೂರೆಮಾಡಿ ತಂದವುಗಳಲ್ಲಿ ಇದು ನಿಮಗೆ ಬಹುಮಾನವಾಗಿರಲಿ” ಎಂದು ಹೇಳಿದನು.
जब दावीद ज़िकलाग पहुंचे, उन्होंने लूट की सामग्री में से एक अंश यहूदिया के पुरनियों को भेज दिया, जो उनके मित्र भी थे. उसके साथ उन्होंने उन्हें यह संदेश भेजा, “याहवेह के शत्रुओं से लूट की सामग्री में से यह आपके लिए उपहार है.”
27 ೨೭ ಬಹುಮಾನ ಹೊಂದಿದವರು ಯಾರೆಂದರೆ: ಬೇತೇಲಿನವರು, ದಕ್ಷಿಣ ಪ್ರಾಂತ್ಯದ ರಾಮೋತಿನವರು, ಯತ್ತೀರಿನವರು,
जो उपहार भेजा गया था, वह इन स्थानों के प्रवरों के लिए था: जो बेथेल में वास कर रहे थे, रामोथ नेगेव तथा यत्तिर में;
28 ೨೮ ಅರೋಯೇರಿನವರು ಸಿಪ್ಮೋತಿನವರು ಎಷ್ಟೆಮೋವದವರು,
जो अरोअर, सिपमोथ, एशतमोह,
29 ೨೯ ರಾಕಾಲಿನವರು, ಎರಹ್ಮೇಲ್ಯರು, ಕೇನ್ಯರು,
तथा राकाल में थे; जो येराहमील नगरों के वासी थे तथा केनीत वासी;
30 ೩೦ ಹೊರ್ಮದವರು, ಬೋರಾಷಾನಿನವರು, ಅತಾಕಿನವರು,
जो होरमाह, बोर आशान, आथाक
31 ೩೧ ಹೆಬ್ರೋನಿನವರು ಮತ್ತು ದಾವೀದನೂ ಅವನ ಜನರೂ ಸಂಚರಿಸುತ್ತಿದ್ದ ಇತರ ಎಲ್ಲಾ ಸ್ಥಳಗಳವರು ಇವರೇ.
तथा हेब्रोन के निवासी थे तथा उन सभी स्थानों के प्रवरों को, जिन-जिन स्थानों पर दावीद तथा उनके साथी जाते रहे थे.

< ಸಮುವೇಲನು - ಪ್ರಥಮ ಭಾಗ 30 >