< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 20 >
1 ೧ ಇದಾದ ಮೇಲೆ ಮೋವಾಬ್ಯರೂ ಅಮ್ಮೋನಿಯರೂ ಹಾಗೂ ಮೆಗೂನ್ಯರಲ್ಲಿ ಕೆಲವರೂ ಯೆಹೋಷಾಫಾಟನಿಗೆ ವಿರುದ್ಧವಾಗಿ ಯುದ್ಧಕ್ಕೆ ಬಂದರು.
၁ကာလအနည်းငယ်ကြာသောအခါမောဘ ပြည်နှင့်အမ္မုန်ပြည်မှစစ်တပ်များသည် မိမိ တို့၏မဟာမိတ်မဟုနိမ် နှင့်အတူယုဒပြည်သို့ချင်းနင်းဝင်ရောက်လာ ကြ၏။-
2 ೨ ದೂತರು ಬಂದು ಯೆಹೋಷಾಫಾಟನಿಗೆ, “ಮಹಾಸಮೂಹವು ನಿನಗೆ ವಿರುದ್ಧವಾಗಿ ಲವಣ ಸಮುದ್ರದ ಆಚೆಯಲ್ಲಿರುವ ಅರಾಮ್ ಪ್ರಾಂತ್ಯದ ಕಡೆಯಿಂದ ಬಂದು ಈಗ ‘ಏಂಗೆದಿ’ ಎನಿಸಿಕೊಳ್ಳುವ ಹಚಚೋನ್ ತಾಮಾರಿನಲ್ಲಿ ಬಂದು ತಂಗಿದ್ದಾರೆ” ಎಂದು ತಿಳಿಸಿದರು.
၂သတင်းပို့သူတို့သည်ယောရှဖတ်မင်းထံလာ ရောက်၍``အင်အားကြီးမားသည့်တပ်ကြီးတစ် တပ်သည်အရှင့်အား တိုက်ခိုက်ရန်ပင်လယ်သေ တစ်ဖက်ကမ်းဧဒုံပြည်မှချီတက်လာပါပြီ။ သူတို့သည်အင်္ဂေဒိခေါ်ဟာဇဇုန္တာမာမြို့ကို သိမ်းယူလိုက်ကြပါပြီ'' ဟုလျှောက်ထား ကြ၏။-
3 ೩ ಯೆಹೋಷಾಫಾಟನು ಇದನ್ನು ಕೇಳಿ ಹೆದರಿ, ಯೆಹೋವನನ್ನೇ ಆಶ್ರಯಿಸಿಕೊಳ್ಳಬೇಕೆಂದು ನಿರ್ಣಯಿಸಿಕೊಂಡನು. ಯೆಹೂದ್ಯರೆಲ್ಲರೂ ಉಪವಾಸ ಮಾಡಬೇಕೆಂದು ಪ್ರಕಟಿಸಿದನು.
၃ယောရှဖတ်သည်ကြောက်လန့်သဖြင့်လမ်း ပြတော်မူရန် ထာဝရဘုရားထံပတ္ထနာပြု တော်မူ၏။ ယုဒပြည်တစ်လျှောက်လုံး၌ အစာရှောင်ရန်နေ့ကိုသတ်မှတ်တော်မူ၏။-
4 ೪ ಆಗ ಯೆಹೂದ್ಯರು ಯೆಹೋವನ ಸಹಾಯವನ್ನು ಕೇಳಿಕೊಳ್ಳುವುದಕ್ಕಾಗಿ ತಮ್ಮ ಎಲ್ಲಾ ಪಟ್ಟಣಗಳಿಂದ ಆತನ ಸನ್ನಿಧಿಯಲ್ಲಿ ಸೇರಿ ಬಂದರು.
၄ယုဒပြည်အမြို့မြို့မှလူတို့သည်ထာဝရ ဘုရားလမ်းပြပို့ဆောင်မှုကိုတောင်းခံရန် ယေရုရှလင်မြို့သို့လာရောက်ကြလေသည်။-
5 ೫ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಆಲಯದ ಹೊಸ ಪ್ರಾಕಾರದಲ್ಲಿ ಸಭೆಯಾಗಿ ನೆರೆದು ಬಂದಾಗ, ಯೆಹೋಷಾಫಾಟನು ಅದರ ಮುಂದೆ ನಿಂತು,
၅ထိုနောက်သူတို့သည်ယေရုရှလင်မြို့သူမြို့ သားများနှင့်အတူ ဗိမာန်တော်တံတိုင်းသစ် တွင်စုဝေးကြ၏။ ယောရှဖတ်မင်းသည်သူ တို့၏ရှေ့သို့လာ၍ရပ်ပြီးလျှင်၊-
6 ೬ “ಯೆಹೋವನೇ, ನಮ್ಮ ಪೂರ್ವಿಕರ ದೇವರೇ, ಪರಲೋಕದಲ್ಲಿ ದೇವರಾಗಿ ಇರುವಾತನು ನೀನಲ್ಲವೋ? ನೀನು ಜನಾಂಗಗಳನ್ನೂ, ಎಲ್ಲಾ ರಾಜ್ಯಗಳನ್ನು ಆಳುವವನಾಗಿರುವೆ. ಬಲ, ಪರಾಕ್ರಮಗಳು ನಿನ್ನ ಕೈಗಳಲ್ಲಿ ಇರುತ್ತವೆ: ನಿನ್ನೆದುರಿನಲ್ಲಿ ನಿಲ್ಲುವವರು ಯಾರಿದ್ದಾರೆ?
၆``အို အကျွန်ုပ်တို့ဘိုးဘေးများ၏ဘုရားသခင် ထာဝရဘုရား၊ ကိုယ်တော်သည်ကောင်းကင်ဘုံ တွင်စံတော်မူ၍ ကမ္ဘာပေါ်ရှိလူမျိုးတကာတို့ ကိုအုပ်စိုးတော်မူပါ၏။ ကိုယ်တော်သည်တန်ခိုး အာနုဘော်ပြည့်စုံတော်မူသဖြင့်အဘယ် သူမျှကိုယ်တော်အားအတိုက်အခံမပြု နိုင်ပါ။-
7 ೭ ನಮ್ಮ ದೇವರಾದ ನೀನು ನಿನ್ನ ಪ್ರಜೆಗಳಾದ ಇಸ್ರಾಯೇಲರ ಎದುರಿನಿಂದ ಈ ದೇಶದ ನಿವಾಸಿಗಳನ್ನು ಓಡಿಸಿ, ದೇಶವನ್ನು ನಿನ್ನ ಸ್ನೇಹಿತನಾದ ಅಬ್ರಹಾಮನ ಸಂತಾನದವರಿಗೆ ಶಾಶ್ವತ ಸ್ವತ್ತಾಗಿ ಕೊಟ್ಟಿರುವೆಯಲ್ಲಾ?
၇ကိုယ်တော်သည်အကျွန်ုပ်တို့၏ဘုရားဖြစ် တော်မူပါ၏။ ကိုယ်တော်၏လူမျိုးတော်ဣသ ရေလအမျိုးသားတို့သည် ဤပြည်တော်သို့ ဝင်ရောက်လာချိန်၌ကိုယ်တော်သည်မူလနေ ထိုင်သောပြည်သားတို့ကိုနှင်ထုတ်၍ ပြည် တော်ကိုကိုယ်တော်၏အဆွေတော်အာဗြဟံ ၏သားမြေးတို့အားထာဝစဉ်အပိုင်ပေး သနားတော်မူပါ၏။-
8 ೮ ಅವರು ಈ ದೇಶದಲ್ಲಿ ನೆಲಗೊಂಡು ಇದರಲ್ಲಿ ನಿನ್ನ ಹೆಸರಿಗಾಗಿ ಪವಿತ್ರಾಲಯವನ್ನು ಕಟ್ಟಿದರು.
၈သူတို့သည်ဤပြည်တွင်နေထိုင်လျက်ကိုယ်တော် ၏ဂုဏ်တော်ကိုချီးမွမ်းရန်ဗိမာန်တော်ကိုတည် ဆောက်ကြပါ၏။-
9 ೯ ತಮ್ಮ ಮೇಲೆ ನ್ಯಾಯ ತೀರ್ಪಿನ ಖಡ್ಗ, ಘೋರವ್ಯಾಧಿ, ಕ್ಷಾಮ ಮೊದಲಾದ ಆಪತ್ತುಗಳು ನಮಗೆ ಬರುವಾಗ, ನಾವು ನಿನ್ನ ನಾಮ ಮಹತ್ತು ಇರುವ ಈ ಆಲಯದ ಮುಂದೆಯೂ, ನಿನ್ನ ಮುಂದೆಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿನಗೆ ಮೊರೆಯಿಡುವುದಾದರೆ ನೀನು ಕೇಳಿ ರಕ್ಷಿಸುವಿ ಎಂದುಕೊಂಡಿದ್ದೇವೆ.
၉စစ်မက်ဘေး၊ ကူးစက်တတ်သောရောဂါဘေး၊ ငတ်မွတ်ခေါင်းပါးခြင်းဘေးအစရှိသော ကြီးမားသည့် အဘယ်ဘေးအန္တရာယ်မဆို ကျရောက်လာချိန်၌ သူတို့သည်ကိုယ်တော်အား ကိုးကွယ်ဝတ်ပြုရာ ဤဗိမာန်တော်ရှေ့သို့လာ ၍ရပ်လျက်ပတ္ထနာပြုသောအခါ ကိုယ်တော် သည်နားညောင်း၍သူတို့အားကယ်ဆယ် တော်မူမည်ဟုယုံကြည်ကြပါ၏။''
10 ೧೦ ಈ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ ಸೇಯೀರ್ ಪರ್ವತ ಪ್ರದೇಶದವರನ್ನೂ ನೋಡು, ಇಸ್ರಾಯೇಲರು ಐಗುಪ್ತ ದೇಶದಿಂದ ಬರುತ್ತಿದ್ದಾಗ, ಇವರ ದೇಶದಲ್ಲಿ ನುಗ್ಗಬಾರದೆಂದು ನಿನ್ನಿಂದ ಅಪ್ಪಣೆಹೊಂದಿ, ಇವರನ್ನು ಸಂಹರಿಸದೆ ಬೇರೆ ಮಾರ್ಗವಾಗಿ ಹೋದರಲ್ಲಾ.
၁၀``ယခုအခါအမ္မုန်ပြည်သား၊ မောဘပြည်သား နှင့်ဧဒုံပြည်သားတို့သည်အကျွန်ုပ်အားတိုက် ခိုက်ကြပါပြီ။ အကျွန်ုပ်တို့ဘိုးဘေးများ အီဂျစ်ပြည်မှထွက်ခွာလာစဉ်အခါက ဘိုးဘေးတို့သည်ထိုပြည်များသို့ဝင်ရောက် ခွင့်ကိုကိုယ်တော်ပေးတော်မမူပါ။ သို့ဖြစ် ၍သူတို့သည်ထိုပြည်များကိုရှောင်ကွင်း ပြီးလျှင်မဖျက်မဆီးဘဲထားခဲ့ကြ ပါ၏။-
11 ೧೧ ಈಗ ಅವರು ಉಪಕಾರಕ್ಕೆ ಅಪಕಾರಮಾಡಿ, ನೀನು ನಮಗೆ ಅನುಗ್ರಹಿಸಿದ ಸ್ವತ್ತಿನೊಳಗಿಂದ ನಮ್ಮನ್ನು ಹೊರ ಓಡಿಸುವುದಕ್ಕಾಗಿ ನಮ್ಮ ಮೇಲೆ ಯುದ್ಧಕ್ಕೆ ಬಂದಿರುತ್ತಾರೆ.
၁၁ဤသို့ပြုသည့်အတွက်ကျေးဇူးဆပ်သည့် အနေဖြင့်သူတို့သည် အကျွန်ုပ်တို့အား ကိုယ်တော်ပေးသနားတော်မူသည့်ပြည်တော် မှနှင်ထုတ်ရန်ရောက်ရှိလာကြပါ၏။-
12 ೧೨ ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದಿರುವ ಈ ಮಹಾಸಮೂಹದ ಮುಂದೆ ನಿಲ್ಲುವುದಕ್ಕೆ ನಮ್ಮಲ್ಲಿ ಬಲವಿಲ್ಲ; ಏನು ಮಾಡಬೇಕೆಂಬುದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತಿವೆ” ಎಂದು ಪ್ರಾರ್ಥಿಸಿದನು.
၁၂ကိုယ်တော်သည်အကျွန်ုပ်တို့၏ဘုရားဖြစ်တော်မူ ပါ၏။ အကျွန်ုပ်တို့သည်ယခုတိုက်ခိုက်ရန်ရောက် ရှိလာသောတပ်မတော်ကြီး၏ရှေ့တွင်ခိုကိုးရာ မဲ့ဖြစ်လျက်နေကြပါ၏။ အဘယ်သို့ပြုရမည် ကိုအကျွန်ုပ်တို့မသိကြပါ။ သို့ရာတွင်ကူမ တော်မူရန်အထံတော်သို့မျှော်ကြည့်ကြပါ၏'' ဟုအသံကျယ်စွာဆုတောင်းပတ္ထနာပြုတော် မူ၏။
13 ೧೩ ಎಲ್ಲಾ ಯೆಹೂದ್ಯರೂ ಅವರ ಹೆಂಡತಿ ಮಕ್ಕಳೂ ಯೆಹೋವನ ಸನ್ನಿಧಿಯಲ್ಲಿ ನಿಂತಿದ್ದರು.
၁၃ယုဒပြည်သူအပေါင်းတို့သည် မိမိတို့သား မယားများနှင့်အတူဗိမာန်တော်ရှေ့တွင် ရပ်လျက်နေကြ၏။-
14 ೧೪ ಆಗ ಆ ಸಮೂಹದೊಳಗೆ ಆಸಾಫನ ವಂಶದವನಾದ ಲೇವಿಯನೂ, ಮತ್ತನ್ಯನಿಗೆ ಹುಟ್ಟಿದ ಯೆಗೀಯೇಲನ ಮರಿಮಗನೂ, ಬೆನಾಯನ ಮೊಮ್ಮಗನೂ, ಜೆಕರ್ಯನ ಮಗನೂ ಆದ ಯಹಜೀಯೇಲನ ಮೇಲೆ ಯೆಹೋವನ ಆತ್ಮವು ಬಂದಿತು.
၁၄ထာဝရဘုရား၏ဝိညာဉ်သည်လူအုပ်ထဲတွင် ရှိသောလေဝိအနွယ်ဝင်တစ်ဦး၏အပေါ် သို့သက်ရောက်တော်မူ၏။ ထိုသူသည်ဇာခရိ သားယဟာဇေလဖြစ်၏။ မတ္တနိ၊ ယေယေလ၊ ဗေနာယနှင့်အာသပ်မှဆင်းသက်လာသူ အာသပ်အနွယ်ဝင်တည်း။-
15 ೧೫ ಅವನು, “ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನವರೇ, ಅರಸನಾದ ಯೆಹೋಷಾಫಾಟನೇ, ಯೆಹೋವನು ಹೇಳುವುದನ್ನು ಕೇಳಿರಿ: ಈ ಮಹಾಸಮೂಹದ ನಿಮಿತ್ತವಾಗಿ ಕಳವಳಗೊಳ್ಳಬೇಡಿರಿ; ಹೆದರಬೇಡಿರಿ; ಯುದ್ಧವು ನಿಮ್ಮದಲ್ಲ; ದೇವರದೇ.
၁၅ယဟာဇေလက``အရှင်မင်းကြီးနှင့်တကွ ယုဒပြည်သူများ၊ ယေရုရှလင်မြို့သား အပေါင်းတို့၊ သင်တို့သည်စိတ်မပျက်အား မလျော့ကြနှင့်။ ဤကြီးမားသည့်တပ်မတော် ကိုရင်ဆိုင်ရန်မကြောက်ကြနှင့်ဟုထာဝရ ဘုရားမိန့်တော်မူပါ၏။ တိုက်ပွဲသည်သင် တို့၏အပေါ်တွင်မတည်။ ဘုရားသခင် ၏အပေါ်တွင်တည်ပေသည်။-
16 ೧೬ ನಾಳೆ ಬೆಳಗ್ಗೆ ಅವರಿಗೆ ವಿರುದ್ಧವಾಗಿ ಹೊರಡಿರಿ; ಇಗೋ ಅವರು ಹಚ್ಚೀಚ್ ಗಟ್ಟದ ಮಾರ್ಗವಾಗಿ ಬರುತ್ತಾರೆ. ಯೆರೂವೇಲ್ ಅರಣ್ಯದ ಮುಂದಿರುವ ಕಣಿವೆಯ ತುದಿಯಲ್ಲಿ ಅವರನ್ನು ಸಂಧಿಸುವಿರಿ.
၁၆နက်ဖြန်ထိုသူတို့ဇိဇမြို့တောင်ကြားလမ်း သို့ချီတက်လာသောအခါ သူတို့အားတိုက် ခိုက်ကြလော့။ သင်တို့သည်ယေရွေလအနီး တောကန္တာရသို့သွားရာချိုင့်ဝှမ်းအဆုံး၌ သူတို့နှင့်တွေ့ဆုံမိကြလိမ့်မည်။-
17 ೧೭ ಈ ಸಮೂಹದೊಂದಿಗೆ ನೀವು ಯುದ್ಧಮಾಡುವುದು ಅವಶ್ಯವಿಲ್ಲ. ಯೆಹೂದ್ಯರೇ, ಯೆರೂಸಲೇಮಿನವರೇ, ಸುಮ್ಮನೆ ನಿಂತುಕೊಂಡು ಯೆಹೋವನು ನಿಮಗೋಸ್ಕರ ಮಾಡುವ ರಕ್ಷಣಾ ಕಾರ್ಯವನ್ನು ನೋಡಿರಿ; ಹೆದರಬೇಡಿರಿ, ಕಳವಳಗೊಳ್ಳಬೇಡಿರಿ. ನಾಳೆ ಅವರೆದುರಿಗೆ ಹೊರಡಿರಿ, ಯೆಹೋವನು ನಿಮ್ಮ ಸಂಗಡ ಇರುವನು” ಎಂದು ಹೇಳಿದನು.
၁၇သင်တို့သည်ဤတိုက်ပွဲကိုဆင်နွဲရကြမည် မဟုတ်။ နေရာသာယူ၍စောင့်နေကြလော့။ ထာဝရဘုရားသည်သင်တို့အားအောင်ပွဲ ခံစေတော်မူသည်ကိုတွေ့ရကြလိမ့်မည်။ ယုဒပြည်သူများနှင့်ယေရုရှလင်မြို့ သားတို့၊ မတွန့်မဆုတ်ကြနှင့်။ မကြောက် မလန့်ဘဲတိုက်ပွဲသို့ဝင်ကြလော့။ ထာဝရ ဘုရားသည်သင်တို့နှင့်အတူရှိတော်မူ လိမ့်မည်'' ဟုဗျာဒိတ်တော်ဆင့်ဆို၏။
18 ೧೮ ಆಗ ಯೆಹೋಷಾಫಾಟನು ನೆಲದವರೆಗೂ ಬಗ್ಗಿ ನಮಸ್ಕರಿಸಿದನು. ಎಲ್ಲಾ ಯೆಹೂದ್ಯರೂ ಯೆರೂಸಲೇಮಿನವರೂ ಯೆಹೋವನ ಮುಂದೆ ಅಡ್ಡಬಿದ್ದು ನಮಸ್ಕರಿಸಿದರು.
၁၈ထိုအခါယောရှဖတ်မင်းသည်မြေသို့တိုင် အောင်ဦးညွှတ်ပျပ်ဝပ်လျက်နေ၏။ ပြည်သူ အပေါင်းတို့သည်လည်းမင်းကြီးနှင့်အတူ ပျပ်ဝပ်ကာထာဝရဘုရားအားရှိခိုးကြ၏။-
19 ೧೯ ಆಮೇಲೆ ಲೇವಿಯರಲ್ಲಿ ಕೆಹಾತ್ಯರೂ, ಕೋರಹಿಯರೂ ಎದ್ದು, ಇಸ್ರಾಯೇಲ್ ದೇವರಾದ ಯೆಹೋವನನ್ನು ಮಹಾಸ್ವರದಿಂದ ಕೀರ್ತಿಸಿದರು.
၁၉ကောဟတ်နှင့်ကောရသားချင်းစုများမှလေဝိ အနွယ်ဝင်တို့သည်မတ်တပ်ရပ်လျက် ဣသရေလ အမျိုးသားတို့၏ဘုရားသခင်ထာဝရဘုရား အားအသံကျယ်စွာထောမနာပြုကြကုန်၏။
20 ೨೦ ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಅರಣ್ಯಕ್ಕೆ ಹೊರಟರು. ಹೊರಡುವಾಗ, ಯೆಹೋಷಾಫಾಟನು ಅವರಿಗೆ, “ಯೆಹೂದ್ಯರೇ, ಯೆರೂಸಲೇಮಿನವರೇ, ನನ್ನ ಮಾತನ್ನು ಕೇಳಿರಿ, ಯೆಹೋವನಲ್ಲಿ ಭರವಸವಿಡಿರಿ, ಆಗ ನೀವು ಸುರಕ್ಷಿತರಾಗಿರುವಿರಿ; ಆತನ ಪ್ರವಾದಿಗಳನ್ನು ನಂಬಿರಿ, ಆಗ ನೀವು ಸಫಲರಾಗುವಿರಿ” ಎಂದು ಹೇಳಿದನು.
၂၀နောက်တစ်နေ့နံနက်စောစော၌ ပြည်သူတို့သည် တေကောအနီးတောကန္တာရသို့ထွက်ခွာသွား ကြ၏။ ထွက်ခွာစပြုသောအခါ ယောရှဖတ် သည်ပြည်သူတို့အား``ယုဒပြည်သူများ နှင့်ယေရုရှလင်မြို့သားတို့၊ သင်တို့သည် မိမိတို့ဘုရားသခင်ထာဝရဘုရားကို ကိုးစားကြလျှင်ရပ်တည်နိုင်ကြလိမ့်မည်။ ကိုယ်တော်၏ပရောဖက်များဟောကြား သည်ကိုယုံကြည်ကြလျှင်အောင်မြင် ကြလိမ့်မည်'' ဟုမိန့်တော်မူ၏။-
21 ೨೧ ಆ ನಂತರ ಅವನು ಜನರೊಂದಿಗೆ ಸಮಾಲೋಚನೆ ಮಾಡಿ ಯೆಹೋವನನ್ನು ಸ್ತುತಿಸಿ ಹಾಡುವುದಕ್ಕಾಗಿ ಕೆಲವರನ್ನು ಆರಿಸಿಕೊಂಡು ಅವರಿಗೆ, “ಪರಿಶುದ್ಧವಸ್ತ್ರ ಅಲಂಕಾರ ಭೂಷಣದೊಡನೆ ಭಟರ ಮುಂದೆ ಹೋಗುತ್ತಾ, ‘ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ, ಆತನ ಕೃಪೆಯು ಶಾಶ್ವತವಾದದ್ದು’ ಎಂದು ಭಜಿಸಿರಿ” ಎಂಬುದಾಗಿ ಆಜ್ಞಾಪಿಸಿದನು.
၂၁မင်းကြီးသည်ပြည်သူတို့နှင့်တိုင်ပင်၍ဂီတ ပညာသည် အချို့ကိုနေ့ထူးနေ့မြတ်များတွင် ဝတ်ဆင်လေ့ရှိသည့်ဝတ်လုံများကိုဝတ်စေ၍ တပ်မတော်ရှေ့ကချီတက်စေပြီးလျှင်``ထာဝရ ဘုရားအားထောမနာပြုကြလော့။ ကိုယ်တော် ၏မေတ္တာတော်သည် ထာဝစဉ်တည်၏'' ဟုသီဆို ကြစေရန်အမိန့်ပေးတော်မူ၏။
22 ೨೨ ಅವರು ಉತ್ಸಾಹ ಧ್ವನಿಯಿಂದ ಕೀರ್ತಿಸುವುದಕ್ಕೆ ಪ್ರಾರಂಭಿಸಿದರು. ಆಗ ಯೆಹೋವನು ಯೆಹೂದ್ಯರಿಗೆ ವಿರುದ್ಧವಾಗಿ ಬಂದ ಅಮ್ಮೋನಿಯರನ್ನೂ, ಮೋವಾಬ್ಯರನ್ನೂ, ಸೇಯೀರ್ ಪರ್ವತದವರನ್ನೂ ನಾಶಮಾಡುವುದಕ್ಕಾಗಿ ಹೊಂಚು ಹಾಕುವವರನ್ನು ಬರಮಾಡಿದನು.
၂၂သူတို့စ၍သီချင်းဆိုကြသောအခါ ထာဝရ ဘုရားသည်ချင်းနင်းဝင်ရောက်လာသောတပ် တို့ကိုကစဥ့်ကလျားဖြစ်စေတော်မူ၏။-
23 ೨೩ ಅಮ್ಮೋನಿಯರೂ, ಮೋವಾಬ್ಯರೂ ಸೇಯೀರ್ ಪರ್ವತದವರ ಮೇಲೆ ಬಿದ್ದು ಅವರನ್ನು ಸಂಪೂರ್ಣವಾಗಿ ಸಂಹರಿಸಿಬಿಟ್ಟರು. ಅಮ್ಮೋನಿಯರನ್ನು ಮುಗಿಸಿಬಿಟ್ಟ ಮೇಲೆ ತಾವೇ ಒಬ್ಬರನ್ನೊಬ್ಬರು ಕೊಲ್ಲುವುದಕ್ಕೆ ಪ್ರಾರಂಭಿಸಿದರು.
၂၃အမ္မုန်တပ်မတော်နှင့်မောဘတပ်မတော်တို့ သည် ဧဒုံတပ်မတော်ကိုတိုက်ခိုက်ချေမှုန်း ဖျက်ဆီးပြီးလျှင် အချင်းချင်းပြန်၍ကြမ်း ကြုတ်စွာတိုက်ခိုက်ကြလေသည်။-
24 ೨೪ ಯೆಹೂದ್ಯರು ಅರಣ್ಯದಲ್ಲಿನ ಬುರುಜಿಗೆ ಬಂದು ಆ ಸಮೂಹವಿದ್ದ ಕಡೆಗೆ ನೋಡಿದಾಗ, ನೆಲದ ಮೇಲೆ ಬಿದ್ದಿರುವ ಹೆಣಗಳ ಹೊರತಾಗಿ, ಜೀವದಿಂದುಳಿದವರು ಯಾರು ಕಾಣಿಸಲಿಲ್ಲ.
၂၄ယုဒတပ်မတော်သည်သဲကန္တာရရှိကင်းမျှော် စင်သို့ရောက်သောအခါ ရန်သူတို့ဘက်သို့ကြည့် လိုက်ရာတစ်ယောက်မကျန်မြေပေါ်တွင်လဲသေ နေကြသည်ကိုမြင်ရကြ၏။
25 ೨೫ ಯೆಹೋಷಾಫಾಟನೂ ಅವನ ಜನರೂ ಸುಲಿಗೆ ಮಾಡುವುದಕ್ಕೋಸ್ಕರ ಅಲ್ಲಿಗೆ ಹೋದರು. ಅವರಿಗೆ ದ್ರವ್ಯ, ವಸ್ತ್ರ, ಶ್ರೇಷ್ಠಾಯುಧಗಳು ರಾಶಿರಾಶಿಯಾಗಿ ಸಿಕ್ಕಿದವು. ಅವರು ಹೊರಲಾರದಷ್ಟು ಸುಲಿಗೆಮಾಡಿದರು, ಕೊಳ್ಳೆಯು ಬಲು ಹೆಚ್ಚಾಗಿದ್ದುದರಿಂದ ಅವರು ಮೂರು ದಿನಗಳ ವರೆಗೂ ಕೂಡಿಸುತ್ತಿದ್ದರು.
၂၅ယောရှဖတ်နှင့်သူ၏စစ်သည်တော်တို့သည် ရန်သူ တို့၏ဥစ္စာပစ္စည်းများကိုသိမ်းယူရန်လာရောက် ကြသောအခါသိုးနွားအမြောက်အမြား၊ ရိက္ခာ၊ အဝတ်အစားနှင့်အခြားအဖိုးတန်ပစ္စည်းများ ကိုတွေ့ရှိကြလေသည်။ သူတို့သိမ်းယူသည့်ဥစ္စာ ပစ္စည်းမှာအလွန်ပင်များသဖြင့် သုံးရက်တိုင်တိုင် သိမ်းယူသော်လည်းမကုန်ချေ။-
26 ೨೬ ನಾಲ್ಕನೆಯ ದಿನದಲ್ಲಿ ಬೆರಾಕ ತಗ್ಗಿನಲ್ಲಿ ಕೂಡಿಬಂದರು. ಅವರು ಅಲ್ಲಿ ಯೆಹೋವನನ್ನು ಸ್ತುತಿಸಿದ್ದರಿಂದ ಆ ಸ್ಥಳಕ್ಕೆ ಇಂದಿನ ವರೆಗೂ ಬೆರಾಕ ತಗ್ಗು ಎಂಬ ಹೆಸರಿದೆ.
၂၆လေးရက်မြောက်သောနေ့၌သူတို့သည်ဗရာခ ချိုင့်ဝှမ်းတွင်စုရုံးကြလျက် ဘုရားသခင်ပြု တော်မူသောကျေးဇူးတော်အပေါင်းအတွက် ကိုယ်တော်အားထောမနာပြုကြကုန်၏။ ဤ သည်ကိုအကြောင်းပြု၍ထိုချိုင့်ဝှမ်းကို ဗရာခ ဟုခေါ်ဝေါ်သမုတ်ကြလေသည်။-
27 ೨೭ ಆ ನಂತರ ಯೆಹೂದ್ಯರೂ ಯೆರೂಸಲೇಮಿನವರೂ ಅವರ ಮುಂದೆ ಯೆಹೋಷಾಫಾಟನೂ ಯೆಹೋವನು ತಮಗೆ ಶತ್ರುಗಳ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆಂದು ಜಯಘೋಷ ಮಾಡುತ್ತಾ ಯೆರೂಸಲೇಮಿಗೆ ಹಿಂತಿರುಗಿದರು.
၂၇ယောရှဖတ်သည်အောင်ပွဲခံ၍မိမိ၏စစ် သည်တော်တို့ကို ယေရုရှလင်မြို့သို့ပြန် လည်ခေါ်ဆောင်လာတော်မူ၏။-
28 ೨೮ ಅವರು ಸ್ವರಮಂಡಲ, ಕಿನ್ನರಿ, ತುತ್ತೂರಿ, ಇವುಗಳೊಡನೆ ಯೆರೂಸಲೇಮಿನಲ್ಲಿರುವ ಯೆಹೋವನ ಆಲಯಕ್ಕೆ ಬಂದರು.
၂၈သူတို့သည်မြို့တော်သို့ရောက်ကြသောအခါ စောင်းများ၊ တံပိုးခရာများတီးမှုတ်လျက် ဗိမာန်တော်သို့ချီတက်ကြလေသည်။-
29 ೨೯ ಯೆಹೋವನು ತಾನೇ ಇಸ್ರಾಯೇಲರ ಶತ್ರುಗಳೊಡನೆ ಯುದ್ಧಮಾಡಿದನೆಂಬ ಸುದ್ದಿಯು ಅನ್ಯದೇಶಗಳ ರಾಜ್ಯಗಳವರಿಗೆ ಮುಟ್ಟಿದಾಗ ಅವರೆಲ್ಲರೂ ಬಹುಭೀತರಾದರು.
၂၉ဣသရေလအမျိုးသားများ၏ရန်သူတို့ ကို ထာဝရဘုရားအဘယ်သို့နှိမ်နင်းတော်မူ ကြောင်းကိုကြားသိရသည့်လူမျိုးအပေါင်း တို့သည်ကြောက်လန့်ကြကုန်၏။-
30 ೩೦ ಹೀಗೆ ದೇವರ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳು ಭಯಭೀತರಾದರು. ಯೆಹೋಷಾಫಾಟನ ರಾಜ್ಯಕ್ಕೆ ಶತ್ರುಗಳ ಭಯತಪ್ಪಿ ಸಮಾಧಾನ ಉಂಟಾಯಿತು.
၃၀သို့ဖြစ်၍ယောရှဖတ်သည်ငြိမ်းချမ်းစွာနန်းစံ တော်မူရ၏။ ဘုရားသခင်သည်သူ၏နိုင်ငံ အရပ်ရပ်တွင်လုံခြုံမှုရှိစေတော်မူ၏။
31 ೩೧ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಪಟ್ಟಕ್ಕೆ ಬಂದಾಗ ಮೂವತ್ತೈದು ವರ್ಷದವನಾಗಿದ್ದನು. ಇವನು ಯೆರೂಸಲೇಮಿನಲ್ಲಿ ಇಪ್ಪತ್ತೈದು ವರ್ಷ ಆಡಳಿತ ನಡೆಸಿದನು. ಶಿಲ್ಹಿಯ ಮಗಳಾದ ಅಜೂಬಳೆಂಬಾಕೆಯು ಅವನ ತಾಯಿ.
၃၁ယောရှဖတ်သည်သက်တော်သုံးဆယ့်ငါးနှစ်ရှိ သောအခါ ယုဒပြည်ဘုရင်အဖြစ်နန်းတက် ၍ယေရုရှလင်မြို့တွင်နှစ်ဆယ့်ငါးနှစ်နန်းစံ လေသည်။ သူ၏မယ်တော်မှာရှိလဟိ၏သမီး အဇုဘဖြစ်၏။-
32 ೩೨ ಇವನು ತನ್ನ ತಂದೆಯಾದ ಆಸನ ಮಾರ್ಗದಲ್ಲಿ ನಡೆಯುತ್ತಾ ಅದನ್ನು ಮೀರದೆ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿ ನಡೆದುಕೊಂಡನು.
၃၂သူသည်မိမိခမည်းတော်အာသကဲ့သို့ပင် ထာဝရဘုရား၏ရှေ့တော်မှောက်တွင်ဖြောင့် မှန်သည့်အမှုကိုသာပြုကျင့်၏။-
33 ೩೩ ಅದರೂ ಪೂಜಾಸ್ಥಳಗಳನ್ನು ಹಾಳುಮಾಡಲಿಲ್ಲ. ಜನರು ತಮ್ಮ ಪೂರ್ವಿಕರ ದೇವರ ಮೇಲೆ ಮನಸ್ಸಿಟ್ಟಿರಲಿಲ್ಲ, ದೇವರ ಕಡೆಗೆ ತಿರುಗಿಕೊಳ್ಳಲೂ ಇಲ್ಲ.
၃၃သို့ရာတွင်ရုပ်တုကိုးကွယ်ရာဌာနများကို မဖြိုဖျက်။ ပြည်သူတို့သည်မိမိတို့ဘိုးဘေး များ၏ဘုရားသခင်ထာဝရဘုရားအား စိတ် ပါလက်ပါကိုးကွယ်ဝတ်ပြုမှုကိုမပြုကြ သေးပေ။
34 ೩೪ ಯೆಹೋಷಾಫಾಟನ ಉಳಿದ ಪೂರ್ವೋತ್ತರ ಚರಿತ್ರೆಯು ಇಸ್ರಾಯೇಲ್ ರಾಜರ ಗ್ರಂಥದಲ್ಲಿ ಅಡಕವಾಗಿರುವ ಹನಾನೀಯ ಮಗನಾದ ಯೇಹುವಿನ ವೃತ್ತಾಂತದಲ್ಲಿ ಬರೆಯಲಾಗಿದೆ.
၃၄ယောရှဖတ်၏နန်းသက်အစမှအဆုံးတိုင် အောင်သူဆောင်ရွက်ခဲ့သည့်အမှုအရာ အလုံးစုံကို ဣသရေလရာဇဝင်၏တစ်စိတ် တစ်ဒေသဖြစ်သောဟာနန်၏သားယေဟု အတ္ထုပ္ပတ္တိတွင်ရေးထားသတည်း။
35 ೩೫ ಯೆಹೂದ್ಯರ ಅರಸನಾದ ಯೆಹೋಷಾಫಾಟನು ಇಸ್ರಾಯೇಲರ ಅರಸನೂ, ಬಹು ದುರಾಚಾರಿಯೂ ಆದ ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡನು.
၃၅အခါတစ်ပါးကယုဒဘုရင်ယောရှဖတ် သည် ဆိုးညစ်ယုတ်မာသောအမှုများစွာတို့ ကိုပြုကျင့်သူဣသရေလဘုရင်အာခဇိ နှင့်မဟာမိတ်ဖွဲ့ခဲ့၏။-
36 ೩೬ ಅವರು ತಾರ್ಷೀಷಿಗೆ ಹೋಗುವುದಕ್ಕಾಗಿ ಹಡುಗುಗಳನ್ನು ಕಟ್ಟಬೇಕೆಂದು ಒಡಬಂಡಿಕೆ ಮಾಡಿಕೊಂಡು ಅವುಗಳನ್ನು ಎಚ್ಯೋನ್ ಗೆಬೆರಿನಲ್ಲಿ ಕಟ್ಟಿಸಿದರು.
၃၆သူတို့နှစ်ဦးသည်ဧဇယုန်ဂါဗာသင်္ဘောဆိပ်တွင် တာရှုမြို့သို့ရွက်လွှင့်ရန်သင်္ဘောများကိုဆောက် လုပ်ကြ၏။-
37 ೩೭ ಆಗ ಮಾರೇಷಾ ಊರಿನ ದೋದಾವಾಹುವಿನ ಮಗನಾದ ಎಲೀಯೆಜರನು ಯೆಹೋಷಾಫಾಟನಿಗೆ ವಿರುದ್ಧವಾಗಿ, “ನೀನು ಅಹಜ್ಯನೊಡನೆ ಒಡಬಂಡಿಕೆ ಮಾಡಿಕೊಂಡದ್ದರಿಂದ ಯೆಹೋವನು ನಿನ್ನ ಕೆಲಸವನ್ನು ಹಾಳು ಮಾಡುವನು” ಎಂದು ಪ್ರವಾದಿಸಿದನು. ಆ ಹಡುಗುಗಳು ಒಡೆದು ಹೋದುದರಿಂದ ತಾರ್ಷೀಷಿಗೆ ಪ್ರಯಾಣ ಮಾಡಲು ಸಾಧ್ಯವಾಗಲಿಲ್ಲ.
၃၇သို့ရာတွင်မရေရှမြို့နေဒေါဒဝ၏သား ဧလျေဇကယောရှဖတ်အား``အရှင်သည် အာခဇိနှင့်မဟာမိတ်ဖွဲ့သဖြင့် ထာဝရ ဘုရားသည်အရင်ဆောက်လုပ်ထားသည့် သင်္ဘောများကိုဖျက်ဆီးတော်မူလိမ့်မည်'' ဟုဆိုသည့်အတိုင်းထိုသင်္ဘောတို့သည် ပျက်၍တာရှုမြို့သို့မသွားရချေ။