< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >

1 ಈ ಭಕ್ತಿ ಕಾರ್ಯಗಳಾದ ನಂತರ ಅಶ್ಶೂರದ ಅರಸನಾದ ಸನ್ಹೇರೀಬನು ಯುದ್ಧಕ್ಕೆ ಹೊರಟು ಯೆಹೂದದಲ್ಲಿ ನುಗ್ಗಿ ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನು ಸ್ವಾಧೀನಮಾಡಿ ಕೊಳ್ಳಬೇಕೆಂದು ಅವುಗಳಿಗೆ ಮುತ್ತಿಗೆ ಹಾಕಿದನು.
ထိုအမှုများတို့ကို လက်စသတ်သည်နောက်၊ အာရှုရိရှင်ဘုရင် သနာခရိပ်သည်၊ ယုဒပြည်သို့စစ်ချီ၍ ခိုင်ခံ့သောမြို့တို့ကို ဝိုင်းထားလျက် တိုက်ယူခြင်းငှါ အားထုတ်လေ၏။
2 ದೇಶದೊಳಗೆ ನುಗ್ಗಿದ ಸನ್ಹೇರೀಬನು ಯೆರೂಸಲೇಮಿನ ಮೇಲೆಯೂ ಯುದ್ಧಕ್ಕಾಗಿ ಬರಬೇಕೆಂದಿರುವುದು ಹಿಜ್ಕೀಯನಿಗೆ ತಿಳಿದುಬಂದಿತು.
ထိုသို့ သနာခရိပ်သည်လာ၍၊ ယေရုရှလင်မြို့ကို တိုက်မည့်အကြံရှိကြောင်းကို၊ ဟေဇကိသည်သိမြင်လျှင်၊
3 ಅವನು ಪಟ್ಟಣದ ಹೊರಗಿರುವ ಎಲ್ಲಾ ಒರತೆಗಳನ್ನು ಮುಚ್ಚಿಸಬೇಕೆಂದು ಮನಸ್ಸು ಮಾಡಿ ತನ್ನ ಸರದಾರರ ಮತ್ತು ಶೂರರ ಮುಂದೆ ಆ ಪ್ರಸ್ತಾಪವನ್ನೆತ್ತಿ ಅವರ ಸಹಾಯವನ್ನು ಪಡೆದುಕೊಂಡನು.
မြို့ပြင်၌ရှိသော စမ်းရေကိုဖြတ်ခြင်းငှါ မှူးမတ်၊ စစ်သူကြီးတို့နှင့် တိုင်ပင်၍။ သူတို့သည် ဝိုင်းလုပ်ကြ၏။
4 ಆಗ ಅನೇಕರು ಸೇರಿ, “ಇಲ್ಲಿಗೆ ಬರುವ ಅಶ್ಶೂರದ ರಾಜರು ಬೇಕಾದಷ್ಟು ನೀರನ್ನು ನೋಡುವುದೇತಕ್ಕೆ?” ಎಂದುಕೊಂಡು ಎಲ್ಲಾ ಒರತೆಗಳನ್ನೂ ದೇಶದ ಮಧ್ಯದಲ್ಲಿ ಹರಿಯುವ ಹೊಳೆಯನ್ನು ಮುಚ್ಚಿಬಿಟ್ಟರು.
အာရှုရိရှင်ဘုရင်တို့သည် လာ၍၊ များစွာသော ရေကို အဘယ်ကြောင့်တွေ့ရမည်နည်းဟု လူများတို့သည် ဆိုလျက်၊ စုဝေး၍ စမ်းရေတွင်းရှိသမျှကို ပိတ်ကြ၏။ ပြည်အလယ်၌ စီးသောချောင်းရေကိုလည်း ဖြတ်ကြ၏။
5 ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.
ဟေဇကိသည်လည်း ကိုယ်ကို ခိုင်ခံ့စေ၏။ ပြိုသောမြို့ရိုးရှိသမျှကို ပြုပြင်၍၊ ရဲတိုက်တို့နှင့် တညီတည်း တည်၏။ ပြင်မြို့ရိုးကိုလည်း တည်၏။ ဒါဝိဒ်မြို့၌ မိလ္လော ရဲတိုက်ကိုလည်း ပြုပြင်၍၊များစွာသော လှံလက်နက်ဒိုင်း လွှားတို့ကိုလည်း လုပ်လေ၏။
6 ಅನಂತರ ಅವನು ಜನರನ್ನು ಮುನ್ನಡೆಸಲು ಸೇನಾಪತಿಗಳನ್ನು ನೇಮಿಸಿ ಅವರನ್ನು ಊರುಬಾಗಲಿನ ಬಯಲಿನಲ್ಲಿ ಒಟ್ಟಾಗಿ ಸೇರಿಸಿಕೊಂಡು ಅವರಿಗೆ,
လူများတို့တွင် တပ်မှူးတို့ကိုခန့်ထား၍၊ မြို့ လမ်းမ၌ စုဝေးစေသဖြင့်၊ အားပေးသော စကားကို ပြောလျက်၊
7 “ಶೂರರಾಗಿರಿ, ಧೈರ್ಯದಿಂದಿರಿ; ಅಶ್ಶೂರದ ಅರಸನಿಗೂ ಅವನೊಂದಿಗಿರುವ ಆ ದೊಡ್ಡ ಗುಂಪಿಗೂ ಅಂಜಬೇಡಿರಿ, ಕಳವಳಪಡಬೇಡಿರಿ. ಅವನಿಗಿರುವ ಸಹಾಯಕ್ಕಿಂತ ನಮಗಿರುವ ಸಹಾಯವು ದೊಡ್ಡದ್ದು. ಅವನೊಂದಿಗಿರುವದಕ್ಕಿಂತ ದೊಡ್ಡವನಾಗಿರುವವನು ನಮ್ಮೊಂದಿಗಿದ್ದಾನೆ.
ခွန်အားယူ၍ ရဲရင့်ခြင်းရှိကြလော့။ အာရှုရိ ရှင်ဘုရင်နှင့် သူ၌ပါသောအလုံးအရင်း အပေါင်းတို့ ကြောင့် မကြောက်ကြနှင့်။ စိတ်မပျက်ကြနှင့်။ ငါတို့ ဘက်၌နေသော သူတို့သည်၊ သူ့ဘက်၌ နေသောသူတို့ထက်သာ၍ များကြ၏။
8 ಅವನಿಗಿರುವ ಸಹಾಯವು ನಶ್ವರವಾದ ತೋಳುಬಲ; ನಮಗಾದರೋ ನಮ್ಮ ಸಹಾಯಕನು ದೇವರಾದ ಯೆಹೋವನೇ. ಆತನು ನಮಗೆ ನೆರವಾಗಿ, ಯುದ್ಧಗಳಲ್ಲಿ ನಮಗೋಸ್ಕರ ಕಾದಾಡುವನು” ಎಂದು ಹೇಳಿ ಧೈರ್ಯಪಡಿಸಿದನು. ಜನರು ಯೆಹೂದದ ಅರಸನಾದ ಹಿಜ್ಕೀಯನ ಮಾತುಗಳನ್ನು ಕೇಳಿ ಭರವಸೆಯುಳ್ಳವರಾದರು.
သူ့ဘက်၌ လူလက်ရုံးရှိ၏။ ငါတို့ဘက်၌ ထောက်မ၍၊ စစ်ကူတော်မူသော ငါတို့၏ဘုရားသခင် ထာဝရဘုရားရှိတော်မူသည်ဟု မိန့်တော်မူ၏။ လူများတို့ သည် ယုဒရှင်ဘုရင်ဟေဇကိ၏ စကားကိုကိုးစား ကြ၏။
9 ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,
ထိုနောက် အာရှုရိရှင်ဘုရင်သနာခရိပ်သည် ဗိုလ်ခြေအပေါင်းတို့နှင့်တကွ၊ လာခရှမြို့ကိုဝိုင်ထားစဉ် တွင်၊ မိမိကျွန်အချို့ကို ယေရုရှလင်မြို့၊ ယုဒရှင်ဘုရင် ဟေဇကိထံသို့၎င်း၊ ယေရုရှလင်မြို့၌ရှိသော ယုဒ လူအပေါင်းတို့ရှိရာသို့၎င်း စေလွှတ်၍၊
10 ೧೦ “ಅಶ್ಶೂರದ ಅರಸನಾದ ಸನ್ಹೇರೀಬನು ಈ ರೀತಿಯಾಗಿ ಹೇಳುತ್ತಿದ್ದಾನೆ: ನೀವು ಯಾವುದರ ಮೇಲೆ ಭರವಸೆಯಿಟ್ಟು ಮುತ್ತಿಗೆಗೆ ಗುರಿಯಾಗಲಿರುವ ಯೆರೂಸಲೇಮಿನಲ್ಲಿ ನಿಂತಿದ್ದೀರಿ?
၁၀အာရှုရိရှင်ဘုရင်သနာခရိပ် မိန့်တော်မူသည် ကား၊ သင်တို့သည် ယေရုရှလင်မြို့၌ ဝိုင်းထားခြင်းကို ခံခြင်းငှါ၊ အဘယ်သို့ခိုလှုံကြသနည်း။
11 ೧೧ ಹಿಜ್ಕೀಯನು, ‘ನಮ್ಮ ದೇವರಾದ ಯೆಹೋವನು ಅಶ್ಶೂರದ ಅರಸನ ಕೈಯಿಂದ ನಮ್ಮನ್ನು ರಕ್ಷಿಸುವನು’ ಎಂಬ ನಂಬಿಕೆ ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುತ್ತಿರುವುದು ನಿಮ್ಮನ್ನು ಹಸಿವೆ ನೀರಡಿಕೆಗಳಿಂದ ಸಾಯಿಸುವುದಕ್ಕಾಗಿಯೇ ಅಲ್ಲದೆ ಮತ್ತ್ಯಾವುದಕ್ಕೂ ಅಲ್ಲ.
၁၁ဟေဇကိက၊ ငါတို့၏ဘုရားသခင် ထာဝရ ဘုရားသည် ငါတို့ကို အာရှုရိရှင်ဘုရင်လက်မှ ကယ်လွှတ် တော်မူမည်ဟုဆိုလျက်၊ မွတ်သိပ်ခြင်း၊ ရေငတ်ခြင်း အားဖြင့် အသေခံရသည်တိုင်အောင်၊ ကိုယ်ကိုစွန့်ပစ်စေ ခြင်းငှါ၊ သင်တို့ကို ဖြားယောင်းသည်မဟုတ်လော။
12 ೧೨ ಹಿಜ್ಕೀಯನು ಒಂದೇ ಯಜ್ಞವೇದಿಯ ಮುಂದೆ ಆರಾಧನೆ ಮಾಡಿ ಅದರ ಮೇಲೆಯೇ ಧೂಪಹಾಕಬೇಕೆಂಬುದಾಗಿ ಯೆಹೂದ್ಯರಿಗೂ, ಯೆರೂಸಲೇಮಿನವರಿಗೂ ಆಜ್ಞಾಪಿಸಿ, ದೇವರ ಬೇರೆ ಎಲ್ಲಾ ಪೂಜಾಸ್ಥಳಗಳನ್ನೂ ಯಜ್ಞವೇದಿಗಳನ್ನೂ ಕೆಡವಿಸಿ ಬಿಟ್ಟನಲ್ಲವೆ?
၁၂ထိုဟေဇကိသည် ထာဝရဘုရား၏ မြင့်သော အရပ်ဌာနနှင့် ယဇ်ပလ္လင်တို့ကို ပယ်၍၊ သင်တို့သည် တခုတည်းသော ယဇ်ပလ္လင် ရှေ့မှာကိုးကွယ်ရမည်။ ထိုယဇ် ပလ္လင်ပေါ်မှာ နံ့သာပေါင်းကို မီးရှို့ရမည်ဟု ယုဒပြည်သူ ယေရုရှလင်မြို့ သားတို့ကို မိန့်တော်မူပြီမဟုတ်လော။
13 ೧೩ ನಾನೂ, ನನ್ನ ತಂದೆ, ತಾತಂದಿರೂ ಎಲ್ಲಾ ದೇಶಗಳ ಜನಾಂಗಗಳಿಗೆ ಮಾಡಿದ್ದನ್ನು ಕೇಳಲಿಲ್ಲವೋ? ಆ ಜನಾಂಗಗಳ ದೇವತೆಗಳಿಗೆ ಅವರ ದೇಶವನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸುವುದಕ್ಕೆ ಸಾಧ್ಯವಾಯಿತೋ?
၁၃ငါနှင့် ငါ့ဘိုးဘေးတို့သည် အတိုင်းတိုင်းအပြည် ပြည်တို့၌ အဘယ်သို့ပြုသည်ကို သင်တို့မသိကြသလော။ အတိုင်းတိုင်းအပြည်ပြည် ဘုရားတို့သည် မိမိတို့ပြည် များကို ငါ့လက်မှ ကယ်လွှတ်ခြင်းငှါ တတ်စွမ်းနိုင် သလော။
14 ೧೪ ನನ್ನ ತಂದೆತಾತಂದಿರು ನಾಶಮಾಡಿಬಿಟ್ಟ ಆ ಜನಾಂಗಗಳ ದೇವರುಗಳಲ್ಲಿ ಯಾವನು ತಾನೆ ತನ್ನ ಪ್ರಜೆಯನ್ನು ನನ್ನ ಕೈಯಿಂದ ಬಿಡಿಸುವುದಕ್ಕೆ ಸಮರ್ಥನಾಗಿದ್ದನು? ಹೀಗಿರುವಲ್ಲಿ ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕದಂತೆ ತಪ್ಪಿಸಿ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಯೋ
၁၄ငါ့ဘိုးဘေးအကုန်အစင်ဖျက်ဆီးသော တိုင်း နိုင်ငံတို့၏ ဘုရားတို့တွင်၊ အဘယ်မည်သောဘုရားသည် မိမိပြည်ကို ငါ့လက်မှ ကယ်လွှတ်ဘူးသနည်း။ သင်တို့၏ ဘုရားသည် သင်တို့ကိုငါ့လက်မှ အဘယ်သို့ကယ်လွှတ် မည်နည်း။
15 ೧೫ ನೀವು ಹಿಜ್ಕೀಯನಿಂದ ಮರುಳಾಗಿ ಈ ರೀತಿಯಾಗಿ ಮೋಸಹೋಗಬೇಡಿರಿ, ಅವನನ್ನು ನಂಬಲೂ ಬೇಡಿರಿ. ಯಾವ ರಾಜ್ಯಜನಾಂಗಗಳ ದೇವತೆಗಳೂ ತನ್ನ ಪ್ರಜೆಗಳನ್ನು ನನ್ನ ಮತ್ತು ನನ್ನ ಪೂರ್ವಿಕರ ಕೈಯಿಂದ ಬಿಡಿಸಲಾರದೆ ಹೋದನು ಅಂದ ಮೇಲೆ, ನಿಮ್ಮ ದೇವರು ನಿಮ್ಮನ್ನು ನನ್ನ ಕೈಗೆ ಸಿಕ್ಕಿದಂತೆ ತಪ್ಪಿಸಬಲ್ಲನೇ?” ಎಂದು ಹೇಳಿಸಿದನು.
၁၅သို့ဖြစ်၍၊ ဟေဇကိသည် သင်တို့ကိုမလှည့်စား စေနှင့်။ ထိုသို့ မဖြားယောင်းစေနှင့်။ သူ့စကားကို မယုံကြ နှင့်။ အခြားသော တိုင်းနိုင်ငံ၌ ကိုးကွယ်သော ဘုရား မည်မျှသည်၊ မိမိပြည်ကိုငါ့လက်မှ၎င်း၊ ငါ့ဘိုးဘေး လက်မှ၎င်း မကယ်မလွှတ်နိုင်။ ထိုမျှမက၊ သင်တို့၏ဘုရားသည် သင်တို့ကို ငါ့လက်မှ မကယ်မလွှတ်နိုင်ဟု မှာလိုက်လေ၏။
16 ೧೬ ಸನ್ಹೇರೀಬನು ದೇವರಾದ ಯೆಹೋವನಿಗೂ ಆತನ ಸೇವಕನಾದ ಹಿಜ್ಕೀಯನಿಗೂ ವಿರುದ್ಧವಾಗಿ ಆಡಿದ ಈ ಮಾತುಗಳನ್ನು ತನ್ನ ಸೇವಕರ ಮುಖಾಂತರ ಹೇಳಿ ಕಳುಹಿಸಿದನು.
၁၆သူ့ကျွန်တို့သည် ထာဝရအရှင်ဘုရားသခင် တဘက်၊ ဘုရားသခင်၏ကျွန်ဟေဇကိတဘက်၌ သာ၍ ပြောဆိုကြ၏။
17 ೧೭ ಅಷ್ಟು ಮಾತ್ರವಲ್ಲದೆ, ಇಸ್ರಾಯೇಲಿನ ದೇವರಾದ ಯೆಹೋವನನ್ನು ನಿಂದಿಸಿ ದೂಷಿಸುವುದಕ್ಕಾಗಿ, “ಅನ್ಯದೇಶಗಳವರ ದೇವರುಗಳು ತಮ್ಮ ಜನರನ್ನು ನನ್ನ ಕೈಯಿಂದ ಬಿಡಿಸಲಾರದೆ ಹೋದಂತೆ ಹಿಜ್ಕೀಯನ ದೇವರು ತನ್ನ ಪ್ರಜೆಗಳನ್ನು ನನ್ನ ಕೈಯಿಂದ ಬಿಡಿಸಲಾರನು” ಎಂಬುದಾಗಿ ಪತ್ರದಲ್ಲಿ ಬರೆದು ಕಳುಹಿಸಿದನು.
၁၇ထိုမှတပါး အခြားသော တိုင်းနိုင်ငံဘုရားတို့ သည်၊ မိမိလူများကို ငါ့လက်မှ မကယ်မလွှတ်နိုင်သည် နည်းတူ၊ ဟေဇကိကိုးကွယ်သော ဘုရားသည်၊ သူ၏ လူများကို ငါ့လက်မှ မကယ်မလွှတ်ရဟုဣသရေလအမျိုး ၏ ဘုရားသခင်ထာဝရဘုရားကို ကဲ့ရဲ့ပြစ်တင်သော စာကို ရေး၍ ပေးလိုက်သေး၏။
18 ೧೮ ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆ
၁၈တဖန်မြို့ရိုးပေါ်မှာရှိသော ယေရုရှလင်မြို့သား တို့ကို ခြိမ်းချောက်နှောက်ရှက်၍၊ မြို့ကိုတိုက်ယူနိုင်အောင်၊ ယုဒဘာသာစကားအားဖြင့် ကျယ်သော အသံနှင့် ကြွေး ကြော်ကြ၏။
19 ೧೯ ಯೆರೂಸಲೇಮಿನ ದೇವರಾದ ಯೆಹೋವನು ಮನುಷ್ಯರ ಕೈಕೆಲಸವಾಗಿರುವ ಅನ್ಯದೇಶಗಳವರ ದೇವತೆಗಳಿಗೆ ಸಮಾನನಾಗಿರುವನನು ಎಂದು ಅನ್ಯದೇವರುಗಳಿಗೆ ಹೋಲಿಸಿ ಮಾತನಾಡಿದರು.
၁၉လူတို့လက်ဖြင့် လုပ်သောဘုရား၊ မြေကြီးသား များ ကိုးကွယ်သော ဘုရားတို့နှင့် ယေရုရှလင်မြို့ ဘုရား သခင်ကို ရော၍ ကဲ့ရဲ့ကြ၏။
20 ೨೦ ಈ ಕಾರಣದಿಂದ ಅರಸನಾದ ಹಿಜ್ಕೀಯನು ಹಾಗು ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಪರಲೋಕದ ದೇವರಿಗೆ ಮೊರೆಯಿಟ್ಟು ಪ್ರಾರ್ಥಿಸಿದರು.
၂၀ထိုအကြောင်းကြောင့်၊ ဟေဇကိမင်းကြီးနှင့် အာမုတ်သား ပရောဖက်ဟေရှာယသည် ဆုတောင်း၍၊ ကောင်းကင်ဘုံသို့ ဟစ်ခေါ်သဖြင့်၊
21 ೨೧ ಯೆಹೋವನು ದೂತನನ್ನು ಕಳುಹಿಸಿ ಅಶ್ಶೂರದ ಅರಸನ ದಂಡಿನಲ್ಲಿದ್ದ ಎಲ್ಲಾ ಶೂರರನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ಸಂಹರಿಸಿದನು; ಅಶ್ಶೂರದ ಅರಸನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿಹೋಗಬೇಕಾಯಿತು. ಅಲ್ಲಿ ಅವನು ತನ್ನ ದೇವರ ಗುಡಿಗೆ ಹೋಗಿದ್ದಾಗ ಅವನ ಸ್ವಂತ ಮಕ್ಕಳೇ ಅವನನ್ನು ಕತ್ತಿಯಿಂದ ಕೊಂದು ಹಾಕಿದರು.
၂၁ထာဝရဘုရားစေလွှတ်တော်မူသော ကောင်းကင် တမန်သည်၊ အာရှုရိရှင်ဘုရင်တပ်၌ ခွန်အားကြီးသော သူရဲများ၊ တပ်မှူး၊ စစ်ကဲများအပေါင်းတို့ကို သုတ်သင် ပယ်ရှင်းလေ၏။ ရှင်ဘုရင်သည် မျက်နှာပျက်လျက်၊ မိမိ ပြည်သို့ပြန်သွား၏။ မိမိဘုရား၏ ဗိမာန်သို့ရောက်သော အခါ၊ မိမိသားရင်းတို့သည် ထားနှင့်သတ်ကြ၏။
22 ೨೨ ಹೀಗೆ ಯೆಹೋವನು ಹಿಜ್ಕೀಯನನ್ನೂ ಯೆರೂಸಲೇಮಿನವರನ್ನೂ ಅಶ್ಶೂರ್ಯದ ಅರಸನಾದ ಸನ್ಹೇರೀಬನ ಕೈಗೂ ಸುತ್ತಲಿನ ಎಲ್ಲಾ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿ ಕಾಪಾಡುತ್ತಿದ್ದನು.
၂၂ထိုသို့ထာဝရဘုရားသည် ဟေဇကိနှင့် ယေရုရှလင်မြို့သားတို့ကို၊ အာရှုရိရှင်ဘုရင်လက်မှ၎င်း၊ အခြားသောရန်သူလက်မှ၎င်း ကယ်လွှတ်၍၊ အရပ်ရပ်၌ စောင့်မတော်မူ၏။
23 ೨೩ ಅನೇಕರು ಯೆಹೋವನಿಗೋಸ್ಕರ ಕಾಣಿಕೆಗಳನ್ನೂ, ಯೆಹೂದ್ಯರ ಅರಸನಾದ ಹಿಜ್ಕೀಯನಿಗೋಸ್ಕರ ಶ್ರೇಷ್ಠ ವಸ್ತುಗಳನ್ನೂ ಯೆರೂಸಲೇಮಿಗೆ ತೆಗೆದುಕೊಂಡು ಬಂದರು. ಅಂದಿನಿಂದ ಎಲ್ಲಾ ಜನಾಂಗಗಳವರು ಹಿಜ್ಕೀಯನನ್ನು ಬಹಳ ದೊಡ್ಡವನೆಂದು ಪರಿಗಣಿಸುತ್ತಿದ್ದರು.
၂၃အများသောသူတို့သည် ယေရုရှလင်မြို့သို့ ထာဝဘုရားအဘို့ ပူဇော်သက္ကာကို၎င်း၊ ယုဒရှင်ဘုရင် ဟေဇကိထံသို့ လက်ဆောင်ပဏ္ဏာကို၎င်း ဆောင်ခဲ့ကြ သဖြင့်၊ ဟေဇကိသည် ထိုကာလမှစ၍ ခပ်သိမ်းသောလူ မျိုး ရှေ့မှာဘုန်းကြီးတော်မူ၏။
24 ೨೪ ಆ ಕಾಲದಲ್ಲಿ ಹಿಜ್ಕೀಯನು ಮರಣಕರವಾದ ರೋಗಕ್ಕೆ ತುತ್ತಾದನು ಆಗ ಅವನು ಯೆಹೋವನಿಗೆ ಪ್ರಾರ್ಥಿಸಲು ಆತನು ಅದ್ಭುತವಾಗಿ ಸದುತ್ತರವನ್ನು ದಯಪಾಲಿಸಿ ಅವನಿಗೆ ಒಂದು ಗುರುತನ್ನು ಅನುಗ್ರಹಿಸಿದನು.
၂၄ထိုကာလအခါ ဟေဇကိမင်းသည် သေနာစွဲ၍ ထာဝရဘုရားအား ဆုတောင်းသဖြင့်၊ ဗျာဒိတ်တော်နှင့် ထူးဆန်းသော တန်ခိုးတော်ကို ခံရ၏။
25 ೨೫ ಆದರೆ ಹಿಜ್ಕೀಯನು ಈ ಉಪಕಾರಕ್ಕೆ ತಕ್ಕಂತೆ ನಡೆಯದೆ ಅಹಂಕಾರಿಯಾದನು. ಆದುದರಿಂದ ಯೆಹೂದದ ಮೇಲೆಯೂ ಯೆರೂಸಲೇಮಿನವರ ಮೇಲೆಯೂ ದೇವರ ಕೋಪವುಂಟಾಯಿತು.
၂၅သို့ရာတွင် ဟေဇကိသည် မိမိခံရသော ကျေးဇူးတော်နှင့် အထိုက်အလျောက်မကျင့်၊ ထောင်လွှား သော စိတ်ရှိ၏။ ထိုကြောင့် သူ၌၎င်း၊ ယုဒပြည်နှင့် ယေရုရှလင်မြို့၌၎င်း၊ အမျက်တော်ထွက်လေ၏။
26 ೨೬ ಆಗ ಹಿಜ್ಕೀಯನ ತನ್ನ ಗರ್ವವನ್ನು ಬಿಟ್ಟು, ಯೆರೂಸಲೇಮಿನವರೊಡನೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ಅವನ ಉಳಿದ ಜೀವಮಾನದಲ್ಲಿ ಯೆಹೋವನ ಕೋಪವು ಅವನ ಮೇಲೆ ಬರಲಿಲ್ಲ.
၂၆သို့ရာတွင် ဟေဇကိသည် မိမိစိတ်ထောင်လွှား သော အပြစ်ကြောင့်၊ ယေရုရှလင်မြို့သားတို့နှင့်တကွ ကိုယ်တိုင်ကိုယ်ကို နှိမ့်ချသောကြောင့်၊ လက်ထက်တော် ကာလတွင်၊ ထာဝရဘုရား၏ အမျက်တော်မသက် ရောက်။
27 ೨೭ ಹಿಜ್ಕೀಯನಿಗೆ ಅತ್ಯಧಿಕವಾದ ಧನ ಘನತೆಗಳು ಒದಗಿದವು; ಅವನು ಬೆಳ್ಳಿಬಂಗಾರ, ರತ್ನ, ಪರಿಮಳ ದ್ರವ್ಯ, ಗುರಾಣಿ, ಆಭರಣ ಮುಂತಾದ ಶ್ರೇಷ್ಠಾಯುಧಗಳನ್ನು ಇಡುವುದಕ್ಕೋಸ್ಕರ ಭಂಡಾರಗಳನ್ನು ಸಿದ್ಧಪಡಿಸಿದನು
၂၇ဟေဇကိသည် များစွာသော စည်းစိမ်ဥစ္စာ ဂုဏ် အသရေရှိ ၏။ ရွှေ၊ ငွေ၊ ကျောက်မြတ်၊ နံ့သာမျိုး၊ ဒိုင်းလွှား၊ နှမြောဘွယ်သော တန်ဆာ သိုထားရာဘဏ္ဍာ တိုက်များကို တည်လေ၏။
28 ೨೮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು. ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
၂၈စပါးကျီများ၊ ဆီ၊ စပျစ်ရည်သိုထားရာ တိုက်များ၊ တိရစ္ဆာန်မျိုး တင်းကုပ်များ၊ သိုးခြံများကိုလည်း လုပ်လေ ၏။
29 ೨೯ ಇದಲ್ಲದೆ, ಪಟ್ಟಣಗಳನ್ನೂ ಕಟ್ಟಿಸಿ ದನಕುರಿಗಳ ದೊಡ್ಡ ಹಿಂಡುಗಳನ್ನು ಸಂಪಾದಿಸಿಕೊಂಡನು. ದೇವರು ಅವನಿಗೆ ಕೊಟ್ಟ ಸಂಪತ್ತು ಅಪರಿಮಿತವಾಗಿತ್ತು.
၂၉ကိုယ်အဘို့ မြို့တို့ကိုတည်၍၊ များစွာသော သိုးနွား တို့ကိုလည်း ဆည်းဖူးလေ၏။ ဘုရားသခင်သည် များစွာ သောဥစ္စာကို ပေးသနားတော်မူ၏။
30 ೩೦ ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.
၃၀ထိုမှတပါး၊ ဟေဇကိသည် ဂိဟုတ်အထက် ချောင်းရေကို ပိတ်၍၊ ဒါဝိဒ်မြို့အနောက်သို့ တည့်တည့် စီးစေ၏။ ထိုသို့ ဟေဇက်သည် ပြုလေရာရာ၌ အကြံ ထမြောက်၏။
31 ೩೧ ಆದರೂ ಅವನ ದೇಶದಲ್ಲಿ ಉಂಟಾದ ಅದ್ಭುತ ವಿಷಯವನ್ನು ವಿಚಾರಿಸುವುದಕ್ಕಾಗಿ ಬಾಬೆಲಿನ ಅರಸನ ರಾಯಭಾರಿಗಳು ಅವನ ಬಳಿಗೆ ಬಂದಾಗ, ದೇವರು ಅವನನ್ನು ಪರೀಕ್ಷಿಸುವುದಕ್ಕೂ ಹಾಗು ಅವನ ಸರ್ವಾಂತರ್ಯವನ್ನು ತಿಳಿದುಕೊಳ್ಳುವುದಕ್ಕೂ ಅವನನ್ನು ಬಿಟ್ಟುಕೊಟ್ಟನು
၃၁သို့ရာတွင်၊ နိုင်ငံတော်၌ ဖြစ်သောအံ့ဘွယ်သော အမှုကို မေးမြန်းစေခြင်းငှါ၊ ဗာဗုလုန်မင်းတို့သည် သံတမန်ကို စေလွှတ်သော အမှုမှာ၊ ဟေဇကိမင်း၏ သဘောကို အကုန်အစင်သိခြင်းငှါ၊ ဘုရားသခင်သည် စုံစမ်း၍အလွတ်ထားတော်မူ၏။
32 ೩೨ ಹಿಜ್ಕೀಯನ ಉಳಿದ ಚರಿತ್ರೆಯೂ ಅವನ ಭಕ್ತಿ ಕಾರ್ಯಗಳೂ ಆಮೋಚನ ಮಗನಾದ, ಪ್ರವಾದಿಯಾದ ಯೆಶಾಯನ ದರ್ಶನಗ್ರಂಥದಲ್ಲಿಯೂ, ಯೆಹೂದ್ಯರ ಮತ್ತು ಇಸ್ರಾಯೇಲರ ರಾಜ ಗ್ರಂಥದಲ್ಲಿಯೂ ಬರೆದಿರುತ್ತವೆ.
၃၂ဟေဇကိပြုမူသော အမှုအရာကြွင်းလေသမျှ တို့နှင့် ကျေးဇူးပြုခြင်းအရာသည် အာမုတ်သား ပရော ဖက်ဟေရှာယ၏ ရူပါရုံကျမ်း၊ ယုဒရာဇဝင်၊ ဣသရေလ ရာဇဝင်၌ ရေးထားလျက် ရှိ၏။
33 ೩೩ ಹಿಜ್ಕೀಯನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದವಂಶದವರ ಕುಟುಂಬ ಸ್ಮಶಾನ ಭೂಮಿಯ ದಿಬ್ಬದ ಮೇಲೆ ಸಮಾಧಿಮಾಡಿದರು. ಅವನ ಉತ್ತರಕ್ರಿಯೆ ನಡೆಯುವಾಗ ಎಲ್ಲಾ ಯೆಹೂದ್ಯರೂ, ಯೆರೂಸಲೇಮಿನವರು ಅವನನ್ನು ಬಹಳವಾಗಿ ಸನ್ಮಾನಿಸಿದರು. ಅವನಿಗೆ ಬದಲಾಗಿ ಅವನ ಮಗನಾದ ಮನಸ್ಸೆಯು ಅರಸನಾದನು.
၃၃ဟေဇကိသည် ဘိုးဘေးတို့နှင့်အိပ်ပျော်၍၊ ဒါဝိဒ် ၏သားတော် မြေးတော်တို့ သင်္ချိုင်းတွင် အမြတ်ဆုံးသော သင်္ချိုင်း၌ သင်္ဂြိုဟ်ခြင်းကို ပြုလေ၏။ ယုဒပြည်သူ ယေရုရှလင်မြို့သားအပေါင်းတို့သည်၊ ဟေဇကိ အနိစ္စ ရောက်သောအခါ၊ ဂုဏ်အသရေတော်ကို ချီးမြှောက်ကြ ၏။ သားတော်မနာရှေသည် ခမည်းတော်အရာ၌ နန်းထိုင်၏။

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 32 >