< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >

1 ದೇಶದ ಜನರು ಯೋಷೀಯನ ಮಗನಾದ ಯೆಹೋವಾಹಾಜನು ಅವನ ತಂದೆಯ ಬದಲಾಗಿ ಯೆರೂಸಲೇಮಿನಲ್ಲಿ ಅವನನ್ನು ಅರಸನನ್ನಾಗಿ ಮಾಡಿದರು.
यहोआहाज़, येहोआकिम और येहोआकिन का शासन: तब देश की प्रजा ने येरूशलेम में योशियाह के पुत्र यहोआहाज़ को उसके पिता योशियाह की जगह पर राजा होने के लिए चुना.
2 ಯೆಹೋವಾಹಾಜನು ಪಟ್ಟಕ್ಕೆ ಬಂದಾಗ ಅವನು ಇಪ್ಪತ್ತಮೂರು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
शासन शुरू करते समय यहोआहाज़ की उम्र तेईस साल थी. येरूशलेम में उसने तीन महीने शासन किया.
3 ಐಗುಪ್ತದ ಅರಸನು ಯೆರೂಸಲೇಮಿಗೆ ಬಂದು ಅವನನ್ನು ಪಟ್ಟದಿಂದ ತೆಗೆದುಹಾಕಿ, ಯೆಹೂದ್ಯರು ತನಗೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರುವಂತೆ ಮಾಡಿದನು.
तब मिस्र के राजा ने उसे येरूशलेम में गद्दी से हटा दिया और देश पर साढ़े तीन हज़ार किलो चांदी और पैंतीस किलो सोने का कर लगा दिया.
4 ಐಗುಪ್ತದ ಅರಸನಾದ ನೆಕೋವನು ಯೆಹೋವಾಹಾಜನ ಸಹೋದರನಾದ ಎಲ್ಯಾಕೀಮನನ್ನು ಯೆಹೂದದ ಮತ್ತು ಯೆರೂಸಲೇಮಿನ ಅರಸನನ್ನಾಗಿ ನೇಮಿಸಿ ಅವನಿಗೆ ಯೆಹೋಯಾಕೀಮನೆಂಬ ಹೆಸರಿಟ್ಟನು ಮತ್ತು ಅವನ ಸಹೋದರನಾದ ಯೆಹೋವಾಹಾಜನನ್ನು ಐಗುಪ್ತ ದೇಶಕ್ಕೆ ತೆಗೆದುಕೊಂಡು ಹೋದನು.
तब मिस्र के राजा ने उसके भाई एलियाकिम को यहूदिया और येरूशलेम का राजा बना दिया और उसका नाम बदलकर यहोइयाकिम रख दिया. मगर उसके भाई यहोआहाज़ को वह अपने साथ मिस्र ले गया.
5 ಯೆಹೋಯಾಕೀಮನು ಅರಸನಾದಾಗ ಅವನು ಇಪ್ಪತ್ತೈದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು. ಅವನು ತನ್ನ ದೇವರಾದ ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
यहोइयाकिम की उम्र पच्चीस साल की थी, जब वह राजा बनाया गया. उसने येरूशलेम में ग्यारह साल शासन किया. उसने याहवेह अपने परमेश्वर की दृष्टि में बुरा किया.
6 ಬಾಬೆಲಿನ, ಅರಸನಾದ ನೆಬೂಕದ್ನೆಚ್ಚರನು ಅವನ ಮೇಲೆ ಯುದ್ಧಕ್ಕೆ ಬಂದು ಅವನನ್ನು ಬಾಬಿಲೋನಿಗೆ ಒಯ್ಯುವುದಕ್ಕೋಸ್ಕರ ಅವನಿಗೆ ಬೇಡಿಹಾಕಿ,
बाबेल के राजा नबूकदनेज्ज़र ने हमला कर दिया और उसे कांसे की बेड़ियों से बांधकर बाबेल ले गया.
7 ಯೆಹೋವನ ಆಲಯದ ಹಲವು ಸಾಮಾನುಗಳನ್ನು ತೆಗೆದುಕೊಂಡು ಹೋಗಿ ತನ್ನ ದೇವಾಲಯದಲ್ಲಿಟ್ಟನು.
इसके अलावा नबूकदनेज्ज़र ने याहवेह के भवन की कुछ वस्तुएं लेकर बाबेल में अपने मंदिर में रख दीं.
8 ಯೆಹೋಯಾಕೀಮನ ಉಳಿದ ಚರಿತ್ರೆಯೂ, ಅವನು ನಡಿಸಿದ ಅಸಹ್ಯ ಕೃತ್ಯಗಳೂ, ಅವನಲ್ಲಿ ಕಂಡುಬಂದದ್ದೆಲ್ಲವೂ ಇಸ್ರಾಯೇಲರ ಮತ್ತು ಯೆಹೂದ್ಯರ ರಾಜ ಗ್ರಂಥದಲ್ಲಿ ಬರೆದಿರುತ್ತವೆ. ಅವನಿಗೆ ಬದಲಾಗಿ ಅವನ ಮಗನಾದ ಯೆಹೋಯಾಕೀನನು ಅರಸನಾದನು.
यहोइयाकिम द्वारा किए गए बाकी काम, उसके द्वारा किए गए घृणित काम और उसके सारे दोषों का वर्णन इस्राएल और यहूदिया के राजा नामक पुस्तक में किया गया है. उसके स्थान पर उसका पुत्र यहोइयाखिन राजा बन गया.
9 ಯೆಹೋಯಾಕೀನನು ಅರಸನಾದಾಗ ಅವನು ಎಂಟು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿನಗಳ ಕಾಲ ಆಳಿದನು. ಅವನು ಯೆಹೋವನ ಚಿತ್ತಕ್ಕೆ ವಿರುದ್ಧವಾಗಿ ನಡೆದನು.
राजा बनने के समय यहोइयाखिन की उम्र आठ साल की थी. येरूशलेम में उसने तीन महीने और दस दिन शासन किया. उसने वही किया, जो याहवेह की दृष्टि में बुरा है.
10 ೧೦ ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.
साल खत्म होते-होते वसन्त ऋतु में राजा नबूकदनेज्ज़र ने उसे याहवेह के भवन की कीमती वस्तुओं के साथ बाबेल बुलवा लिया और उसके संबंधी सीदकियाहू को यहूदिया और येरूशलेम पर राजा ठहरा दिया.
11 ೧೧ ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರ್ಷದವನಾಗಿದ್ದನು; ಅವನು ಯೆರೂಸಲೇಮಿನಲ್ಲಿ ಹನ್ನೊಂದು ವರ್ಷಗಳ ಕಾಲ ಆಳಿದನು.
जब सीदकियाहू ने शासन शुरू किया उसकी उम्र इक्कीस साल थी. येरूशलेम में उसने ग्यारह साल शासन किया.
12 ೧೨ ಅವನು ತನ್ನ ದೇವರಾದ ಯೆಹೋವನಿಗೆ ವಿರೋಧವಾಗಿ ನಡೆದದ್ದಲ್ಲದೆ ಅವನ ಮಾತುಗಳನ್ನು ತನಗೆ ತಿಳಿಸುತ್ತಿದ್ದ ಪ್ರವಾದಿಯಾದ ಯೆರೆಮೀಯನ ಮುಂದೆ ತನ್ನನ್ನು ತಗ್ಗಿಸಿಕೊಳ್ಳಲಿಲ್ಲ.
उसने वह किया, जो याहवेह उसके परमेश्वर की दृष्टि में बुरा है. उसने याहवेह के अभिवक्ता भविष्यद्वक्ता येरेमियाह के सामने अपने आपको नम्र नहीं किया.
13 ೧೩ ಇದಲ್ಲದೆ, ಅರಸನಾದ ನೆಬೂಕದ್ನೆಚ್ಚರನಿಗೆ ಅಧೀನನಾಗಿರುತ್ತೇನೆ ಎಂದು ದೇವರ ಮೇಲೆ ಆಣೆಯಿಟ್ಟು ಪ್ರಮಾಣಮಾಡಿಸಿದ್ದ ನೆಬೂಕದ್ನೆಚ್ಚರನಿಗೆ ವಿರುದ್ಧವಾಗಿ ತಿರುಗಿಬಿದ್ದದ್ದಲ್ಲದೆ ಇಸ್ರಾಯೇಲ್ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳದೆ ಹಠಮಾರಿಯಾಗಿ ತನ್ನ ಮನಸ್ಸನ್ನು ಕಠಿಣ ಮಾಡಿಕೊಂಡನು.
उसने राजा नबूकदनेज्ज़र के विरुद्ध विद्रोह कर दिया, जिसने उसे सच्चा रहने के लिए परमेश्वर की शपथ दिलाई थी. वह हठी हो गया और उसका हृदय कठोर हो गया फलस्वरूप वह याहवेह इस्राएल के परमेश्वर की ओर न हुआ.
14 ೧೪ ಪ್ರಧಾನಯಾಜಕರೂ, ಪ್ರಜೆಗಳೂ ಕೂಡ ಮಹಾ ದ್ರೋಹಿಗಳಾಗಿ, ಅನ್ಯಜನಾಂಗಗಳ ಅಸಹ್ಯ ಕೃತ್ಯಗಳನ್ನು ಅನುಸರಿಸಿ, ಯೆಹೋವನು ತನಗೆ ಪ್ರತಿಷ್ಠಿಸಿಕೊಂಡಿದ್ದ ಯೆರೂಸಲೇಮಿನ ದೇವಾಲಯವನ್ನು ಹೊಲೆಮಾಡಿದರು.
इसके अलावा पुरोहितों के अधिकारी और प्रजा और दूसरे जनताओं की घृणित प्रथाओं का पालन करते हुए याहवेह से विश्वासघात किया. येरूशलेम में पवित्र याहवेह के भवन को उन्होंने अशुद्ध कर दिया था.
15 ೧೫ ಅವರ ಪೂರ್ವಿಕರ ದೇವರಾದ ಯೆಹೋವನು ತನ್ನ ಪ್ರಜೆಗಳನ್ನು, ತನ್ನ ನಿವಾಸಸ್ಥಾನವನ್ನೂ ಕನಿಕರಿಸಿ, ಸಾವಕಾಶ ಮಾಡದೆ ತನ್ನ ದೂತರ ಮುಖಾಂತರವಾಗಿ ಅವರನ್ನು ಎಚ್ಚರಿಸುತ್ತಾ ಬಂದರು.
अपनी प्रजा के प्रति और अपने घर के प्रति अपनी दया के कारण याहवेह उनके पूर्वजों के परमेश्वर ने कई बार अपने दूतों के द्वारा उनके लिए अपना संदेश भेजा;
16 ೧೬ ಅವರಾದರೋ ದೇವಪ್ರೇಷಿತರನ್ನು ಗೇಲಿಮಾಡಿ, ಯೆಹೋವನ ಮಾತುಗಳನ್ನು ಕಡೆಗಣಿಸಿ ಆತನ ಪ್ರವಾದಿಗಳನ್ನು ಹೀಯಾಳಿಸಿದ್ದರಿಂದ, ಆತನ ಕೋಪಾಗ್ನಿಯು ಆತನ ಪ್ರಜೆಗಳ ಮೇಲೆ ಉರಿಯತೊಡಗಿತು, ಅದರ ತಾಪವು ಆರಿಹೋಗಲೇ ಇಲ್ಲ.
मगर वे हमेशा अपने ही परमेश्वर के संदेशवाहकों का मज़ाक उड़ाते रहे, उनके संदेश का तिरस्कार करते रहे और परमेश्वर के भविष्यवक्ताओं को मज़ाक का पात्र बना दिया. यह तब तक होता रहा जब तक याहवेह का क्रोध उनकी प्रजा पर टूट न पड़ा, जब तक परिस्थिति काबू से बाहर न हो गई.
17 ೧೭ ಆತನು ಕಸ್ದೀಯರ ಅರಸನನ್ನು ಅವರ ಮೇಲೆ ಬರಮಾಡಿ ಎಲ್ಲರನ್ನೂ ಅವನ ಕೈಗೆ ಒಪ್ಪಿಸಿದನು. ಅವನು ಅವರ ಯುವಭಟರನ್ನು ಅವರ ಪವಿತ್ರಾಲಯದಲ್ಲೇ ಕತ್ತಿಯಿಂದ ಸಂಹರಿಸಿ ಯುವಕರನ್ನೂ, ಕನ್ಯೆಯರನ್ನೂ, ಮುದುಕರನ್ನೂ, ಅತಿವೃದ್ಧರನ್ನೂ ಕನಿಕರಿಸದೆ ಎಲ್ಲರನ್ನೂ ಕೊಲ್ಲಿಸಿದನು.
तब परमेश्वर उनके विरुद्ध कलदियों के राजा को ले आए. उसने उनके युवाओं का उन्हीं के पवित्र स्थान में वध कर दिया. उसने न तो युवाओं पर कृपा दिखाई और न कुंवारी कन्याओं पर, न बूढ़ों पर न कमज़ोरों पर. परमेश्वर ने सभी को नबूकदनेज्ज़र के अधीन कर दिया.
18 ೧೮ ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.
वह परमेश्वर के भवन की छोटी-बड़ी सभी वस्तुएं, याहवेह के भवन के खजाने और राजा और उसके साथी शासकों के भी खजाने, सभी कुछ अपने साथ बाबेल ले गया.
19 ೧೯ ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.
तब उन्होंने परमेश्वर के भवन को भस्म कर दिया. उन्होंने येरूशलेम की शहरपनाह तोड़ डाली, उसके सारे मजबूत भवनों को आग लगाकर नाश कर दिया, सभी कीमती वस्तुओं को ध्वस्त कर दिया.
20 ೨೦ ಕತ್ತಿಗೆ ತಪ್ಪಿಸಿಕೊಂಡವರನ್ನು ಅರಸನು ಬಾಬಿಲೋನಿಗೆ ಸೆರೆಯೊಯ್ದನು. ಪಾರಸಿಯರ ಪ್ರಭುತ್ವವು ಅಲ್ಲಿ ಸ್ಥಾಪಿತವಾಗುವವರೆಗೆ ಅವರು ಅವನಿಗೂ ಅವನ ಮಕ್ಕಳಿಗೂ ಸೇವಕರಾಗಿದ್ದರು.
उन सभी को, जो तलवार के वार से बच निकले थे, उन्हें वह अपने साथ बाबेल ले गया. ये सभी उस समय तक उसके और उसकी संतान के सेवक तब तक बने रहे जब तक फारस का शासन चलता रहा.
21 ೨೧ ಈ ಪ್ರಕಾರ ಯೆರೆಮೀಯನ ಮುಖಾಂತರ ಹೇಳಿಸಿದ ಯೆಹೋವನ ಮಾತು ನೆರವೇರಿತು; ದೇಶವು ತನ್ನ ಸಬ್ಬತ್ ಕಾಲವನ್ನು ಅನುಭವಿಸುವವರೆಗೂ ಸಮಾಧಾನವಾಗಿತ್ತಷ್ಟೇ. ದೇಶವು ಎಪ್ಪತ್ತು ವರ್ಷಗಳು ಪೂರ್ಣವಾಗುವವರೆಗೂ ಅದು ಶೂನ್ಯವಾಗಿದ್ದ ಸಬ್ಬತ್ತನ್ನು ಅನುಭವಿಸಿತು.
यह भविष्यद्वक्ता येरेमियाह द्वारा की गई याहवेह की भविष्यवाणी पूरी हुई थी, कि भूमि उन सत्तर सालों का शब्बाथ प्राप्‍त कर सके, जिनसे इसे दूर रखा गया था.
22 ೨೨ ಪಾರಸಿಯ ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಯೆಹೋವನು ತಾನು ಯೆರೆಮೀಯನ ಮುಖಾಂತರ ಹೇಳಿಸಿದ ವಾಕ್ಯವನ್ನು ನೆರವೇರಿಸುವುದಕ್ಕಾಗಿ ಆ ಪಾರಸಿಯ ರಾಜನಾದ ಕೋರೆಷನ ಮನಸ್ಸನ್ನು ಪ್ರೇರೇಪಿಸಿದ್ದರಿಂದ ಅವನು ತನ್ನ ರಾಜ್ಯದಲ್ಲೆಲ್ಲಾ ಡಂಗುರದಿಂದಲೂ, ಪತ್ರಗಳಿಂದಲೂ,
फारस के राजा कोरेश के शासन के पहले साल में येरेमियाह द्वारा कही गई याहवेह की भविष्यवाणी पूरी करने के उद्देश्य से याहवेह ने फारस के राजा की आत्मा को उभारा. फलस्वरूप उसने सभी राज्य में यह लिखित घोषणा करवा दी:
23 ೨೩ ಪಾರಸಿಯ ರಾಜನಾದ ಕೋರೆಷನೆಂಬ ನನ್ನ ಮಾತನ್ನು ಕೇಳಿರಿ, “ಪರಲೋಕದ ದೇವರಾದ ಯೆಹೋವನು ನನಗೆ ಭೂಲೋಕದ ಎಲ್ಲಾ ರಾಜ್ಯಗಳನ್ನು ಒಪ್ಪಿಸಿ, ತನಗೋಸ್ಕರ ಯೆಹೂದ ದೇಶದ ಯೆರೂಸಲೇಮಿನಲ್ಲಿ ಆಲಯವನ್ನು ಕಟ್ಟಬೇಕೆಂದು ಆಜ್ಞಾಪಿಸಿದ್ದಾನೆ. ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ ಅವರು ಸ್ವದೇಶಕ್ಕೆ ಪ್ರಯಾಣ ಬೆಳೆಸಲಿ; ಅವರ ದೇವರಾದ ಯೆಹೋವನು ಅವರ ಸಂಗಡ ಇರುವನು” ಎಂದು ಪ್ರಕಟಿಸಿದನು.
फारस के राजा कोरेश की ओर से यह घोषणा की जा रही है: “‘स्वर्ग के परमेश्वर याहवेह ने मुझे पृथ्वी के सारे राज्यों का अधिकार सौंपा है. उन्हीं ने मुझे उनके लिए यहूदिया के येरूशलेम में एक भवन बनाने के लिए चुना है. तुम सब में से जो कोई उनकी प्रजा में से है, याहवेह उसका परमेश्वर उसके साथ रहे, उसे वहां जाने दिया जाए.’”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 36 >