< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
وَعَصَى مُوآبُ عَلَى إِسْرَائِيلَ بَعْدَ وَفَاةِ أَخْآبَ.١
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
وَسَقَطَ أَخَزْيَا مِنَ ٱلْكَوَّةِ ٱلَّتِي فِي عُلِّيَّتِهِ ٱلَّتِي فِي ٱلسَّامِرَةِ فَمَرِضَ، وَأَرْسَلَ رُسُلًا وَقَالَ لَهُمُ: «ٱذْهَبُوا ٱسْأَلُوا بَعْلَ زَبُوبَ إِلَهَ عَقْرُونَ إِنْ كُنْتُ أَبْرَأُ مِنْ هَذَا ٱلْمَرَضِ».٢
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
فَقَالَ مَلَاكُ ٱلرَّبِّ لِإِيلِيَّا ٱلتِّشْبِيِّ: «قُمِٱصْعَدْ لِلِقَاءِ رُسُلِ مَلِكِ ٱلسَّامِرَةِ وَقُلْ لَهُمْ: أَلَيْسَ لِأَنَّهُ لَا يُوجَدُ فِي إِسْرَائِيلَ إِلَهٌ، تَذْهَبُونَ لِتَسْأَلُوا بَعْلَ زَبُوبَ إِلَهَ عَقْرُونَ؟٣
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
فَلِذَلِكَ هَكَذَا قَالَ ٱلرَّبُّ: إِنَّ ٱلسَّرِيرَ ٱلَّذِي صَعِدْتَ عَلَيْهِ لَا تَنْزِلُ عَنْهُ بَلْ مَوْتًا تَمُوتُ». فَٱنْطَلَقَ إِيلِيَّا.٤
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
وَرَجَعَ ٱلرُّسُلُ إِلَيْهِ، فَقَالَ لَهُمْ: «لِمَاذَا رَجَعْتُمْ؟»٥
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
فَقَالُوا لَهُ: «صَعِدَ رَجُلٌ لِلِقَائِنَا وَقَالَ لَنَا: ٱذْهَبُوا رَاجِعِينَ إِلَى ٱلْمَلِكِ ٱلَّذِي أَرْسَلَكُمْ وَقُولُوا لَهُ: هَكَذَا قَالَ ٱلرَّبُّ: أَلَيْسَ لِأَنَّهُ لَا يُوجَدُ فِي إِسْرَائِيلَ إِلَهٌ أَرْسَلْتَ لِتَسْأَلَ بَعْلَ زَبُوبَ إِلَهَ عَقْرُونَ؟ لِذَلِكَ ٱلسَّرِيرُ ٱلَّذِي صَعِدْتَ عَلَيْهِ، لَا تَنْزِلُ عَنْهُ بَلْ مَوْتًا تَمُوتُ».٦
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
فَقَالَ لَهُمْ: «مَا هِيَ هَيْئَةُ ٱلرَّجُلِ ٱلَّذِي صَعِدَ لِلِقَائِكُمْ وَكَلَّمَكُمْ بِهَذَا ٱلْكَلَامِ؟»٧
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
فَقَالُوا لَهُ: «إِنَّهُ رَجُلٌ أَشْعَرُ مُتَنَطِّقٌ بِمِنْطَقَةٍ مِنْ جِلْدٍ عَلَى حُقَوَيْهِ». فَقَالَ: «هُوَ إِيلِيَّا ٱلتِّشْبِيُّ».٨
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
فَأَرْسَلَ إِلَيْهِ رَئِيسَ خَمْسِينَ مَعَ ٱلْخَمْسِينَ ٱلَّذِينَ لَهُ، فَصَعِدَ إِلَيْهِ وَإِذَا هُوَ جَالِسٌ عَلَى رَأْسِ ٱلْجَبَلِ. فَقَالَ لَهُ: «يَا رَجُلَ ٱللهِ، ٱلْمَلِكُ يَقُولُ ٱنْزِلْ».٩
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
فَأَجَابَ إِيلِيَّا وَقَالَ لِرَئِيسِ ٱلْخَمْسِينَ: «إِنْ كُنْتُ أَنَا رَجُلَ ٱللهِ، فَلْتَنْزِلْ نَارٌ مِنَ ٱلسَّمَاءِ وَتَأْكُلْكَ أَنْتَ وَٱلْخَمْسِينَ ٱلَّذِينَ لَكَ». فَنَزَلَتْ نَارٌ مِنَ ٱلسَّمَاءِ وَأَكَلَتْهُ هُوَ وَٱلْخَمْسِينَ ٱلَّذِينَ لَهُ.١٠
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
ثُمَّ عَادَ وَأَرْسَلَ إِلَيْهِ رَئِيسَ خَمْسِينَ آخَرَ وَٱلْخَمْسِينَ ٱلَّذِينَ لَهُ. فَأَجَابَ وَقَالَ لَهُ: «يَارَجُلَ ٱللهِ، هَكَذَا يَقُولُ ٱلْمَلِكُ: أَسْرِعْ وَٱنْزِلْ».١١
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
فَأَجَابَ إِيلِيَّا وَقَالَ لَهُمْ: «إِنْ كُنْتُ أَنَا رَجُلَ ٱللهِ، فَلْتَنْزِلْ نَارٌ مِنَ ٱلسَّمَاءِ وَتَأْكُلْكَ أَنْتَ وَٱلْخَمْسِينَ ٱلَّذِينَ لَكَ». فَنَزَلَتْ نَارُ ٱللهِ مِنَ ٱلسَّمَاءِ وَأَكَلَتْهُ هُوَ وَٱلْخَمْسِينَ ٱلَّذِينَ لَهُ.١٢
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
ثُمَّ عَادَ فَأَرْسَلَ رَئِيسَ خَمْسِينَ ثَالِثًا وَٱلْخَمْسِينَ ٱلَّذِينَ لَهُ. فَصَعِدَ رَئِيسُ ٱلْخَمْسِينَ ٱلثَّالِثُ وَجَاءَ وَجَثَا عَلَى رُكْبَتَيْهِ أمَامَ إِيلِيَّا، وَتَضَرَّعَ إِلَيْهِ وَقَالَ لَهُ: «يَا رَجُلَ ٱللهِ، لِتُكْرَمْ نَفْسِي وَأَنْفُسُ عَبِيدِكَ هَؤُلَاءِ ٱلْخَمْسِينَ فِي عَيْنَيْكَ.١٣
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
هُوَذَا قَدْ نَزَلَتْ نَارٌ مِنَ ٱلسَّمَاءِ وَأَكَلَتْ رَئِيسَيِ ٱلْخَمْسِينَيْنِ ٱلْأَوَّلَيْنِ وَخَمْسِينَيْهِمَا، وَٱلْآنَ فَلْتُكْرَمْ نَفْسِي فِي عَيْنَيْكَ».١٤
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
فَقَالَ مَلَاكُ ٱلرَّبِّ لِإِيلِيَّا: «ٱنْزِلْ مَعَهُ. لَا تَخَفْ مِنْهُ». فَقَامَ وَنَزَلَ مَعَهُ إِلَى ٱلْمَلِكِ.١٥
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
وَقَالَ لَهُ: «هَكَذَا قَالَ ٱلرَّبُّ: مِنْ أَجْلِ أَنَّكَ أَرْسَلْتَ رُسُلًا لِتَسْأَلَ بَعْلَ زَبُوبَ إِلَهَ عَقْرُونَ، أَلَيْسَ لِأَنَّهُ لَا يُوجَدُ فِي إِسْرَائِيلَ إِلَهٌ لِتَسْأَلَ عَنْ كَلَامِهِ! لِذَلِكَ ٱلسَّرِيرُ ٱلَّذِي صَعِدْتَ عَلَيْهِ لَا تَنْزِلُ عَنْهُ بَلْ مَوْتًا تَمُوتُ».١٦
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
فَمَاتَ حَسَبَ كَلَامِ ٱلرَّبِّ ٱلَّذِي تَكَلَّمَ بِهِ إِيلِيَّا. وَمَلَكَ يَهُورَامُ عِوَضًا عَنْهُ فِي ٱلسَّنَةِ ٱلثَّانِيَةِ لِيَهُورَامَ بْنِ يَهُوشَافَاطَ مَلِكِ يَهُوذَا، لِأَنَّهُ لَمْ يَكُنْ لَهُ ٱبْنٌ.١٧
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
وَبَقِيَّةُ أُمُورِ أَخَزْيَا ٱلَّتِي عَمِلَ، أَمَا هِيَ مَكْتُوبَةٌ فِي سِفْرِ أَخْبَارِ ٱلْأَيَّامِ لِمُلُوكِ إِسْرَائِيلَ؟١٨

< ಅರಸುಗಳು - ದ್ವಿತೀಯ ಭಾಗ 1 >