< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
وَتَمَرَّدَ الْمُوآبِيُّونَ عَلَى إِسْرَائِيلَ بَعْدَ وَفَاةِ آخْابَ،١
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
وَسَقَطَ أَخَزْيَا مِنْ كُوَّةٍ فِي عُلِّيَّةِ قَصْرِهِ فِي السَّامِرَةِ، فَأُصِيبَ بِجُرْحٍ قَاتِلٍ. وَبَعَثَ رُسُلاً إِلَى مَعْبَدِ بَعْلَ زَبُوبَ إِلَهِ عَقْرُونَ قَائِلاً: «امْضُوا وَاسْأَلُوهُ إِنْ كُنْتُ أَبْرَأُ مِنْ جُرْحِي؟»٢
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
فَقَالَ مَلاكُ الرَّب لإِيلِيَّا التَّشْبِيِّ: «قُمْ وَاذْهَبْ لِلِقَاءِ رُسُلِ مَلِكِ السَّامِرَةِ وَقُلْ لَهُمْ: هَلْ لأَنَّهُ لَا يُوْجَدُ إِلَهٌ فِي إِسْرَائِيلَ تَذْهَبُونَ لِسُؤَالِ بَعْلَ زَبُوبَ إِلَهِ عَقْرُونَ؟٣
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
لِذَلِكَ هَذَا مَا يَقُولُهُ الرَّبُّ: إِنَّ السَّرِيرَ الَّذِي رَقَدْتَ عَلَيْهِ لَنْ تَنْهَضَ عَنْهُ، بَلْ حَتْماً تَمُوتَ». وَانْصَرَفَ إِيلِيَّا.٤
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
وَرَجَعَ الرُّسُلُ إِلَى أَخَزْيَا فَسَأَلَهُمْ: «لِمَاذَا رَجَعْتُمْ؟»٥
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
فَأَجَابُوهُ: «اعْتَرَضَنَا رَجُلٌ وَأَمَرَنَا أَنْ نَرْجِعَ إِلَيْكَ لِنُخْبِرَكَ أَنَّ اللهَ يَقُولُ: هَلْ لأَنَّهُ لَا يُوْجَدُ إِلَهٌ فِي إِسْرَائِيلَ تُرْسِلُ لِتَسْأَلَ بَعْلَ زَبُوبَ إِلَهَ عَقْرُونَ؟ لِذَلِكَ فَإِنَّ السَّرِيرَ الَّذِي رَقَدْتَ عَلَيْهِ لَنْ تَنْهَضَ عَنْهُ بَلْ حَتْماً تَمُوتَ».٦
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
فَسَأَلَهُمْ: «مَا أَوْصَافُ الرَّجُلِ الَّذِي اعْتَرَضَكُمْ وَبَلَّغَكُمْ هَذَا الْكَلامَ؟»٧
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
فَأَجَابُوهُ: «إِنَّهُ رَجُلٌ كَثِيفُ الشَّعْرِ مُتَنَطِّقٌ بِحِزامٍ مِنْ جِلْدٍ حَوْلَ حَقْوَيْهِ». فَقَالَ: «إِنَّهُ حَتْماً إِيلِيَّا التَّشْبِيُّ».٨
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
فَأَرْسَلَ أَحَدَ قَادَتِهِ عَلَى رَأْسِ خَمْسِينَ جُنْدِيًّا إِلَى إِيلِيَّا، الَّذِي كَانَ جَالِساً آنَئِذٍ عَلَى قِمَّةِ جَبَلٍ. فَقَالَ لَهُ: «يَا رَجُلَ اللهِ، إِنَّ الْمَلِكَ يَأْمُرُكَ بِمُرَافَقَتِنَا».٩
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
فَأَجَابَ إِيلِيَّا: «إِنْ كُنْتُ أَنَا رَجُلَ اللهِ، فَلْتَنْزِلْ نَارٌ مِنَ السَّمَاءِ وَتَلْتَهِمْكَ أَنْتَ وَرِجَالَكَ الْخَمْسِينَ». فَنَزَلَتْ نَارٌ مِنَ السَّمَاءِ وَالْتَهَمَتْهُ مَعَ رِجَالِهِ الْخَمْسِينَ.١٠
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
فَعَادَ أَخَزْيَا وَأَرْسَلَ إِلَيْهِ قَائِداً آخَرَ عَلَى رَأْسِ خَمْسِينَ جُنْدِيًّا، فَقَالَ لإِيلِيَّا: «يَا رَجُلَ اللهِ، الْمَلِكُ يَأْمُرُكَ أَنْ تُسْرِعَ وَتَنْزِلَ».١١
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
فَأَجَابَهُ إِيلِيَّا: «إِنْ كُنْتُ أَنَا رَجُلَ اللهِ، فَلْتَنْزِلْ نَارٌ مِنَ السَّمَاءِ وَتَلْتَهِمْكَ أَنْتَ وَرِجَالَكَ الْخَمْسِينَ». فَنَزَلَتْ نَارٌ مِنَ السَّمَاءِ وَالْتَهَمَتْهُ مَعَ رِجَالِهِ الْخَمْسِينَ.١٢
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
ثُمَّ أَرْسَلَ أَخَزْيَا لِلْمَرَّةِ الثَّالِثَةِ قَائِداً آخَرَ عَلَى رَأْسِ خَمْسِينَ جُنْدِيًّا. فَأَقْبَلَ هَذَا إِلَى إِيلِيَّا وَجَثَا أَمَامَهُ وَتَوَسَّلَ إِلَيْهِ قَائِلاً: «يَا رَجُلَ اللهِ، لِتَكُنْ نَفْسِي وَنُفُوسُ عَبِيدِكَ هَؤُلاءِ عَزِيزَةً فِي عَيْنَيْكَ.١٣
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
لَقَدْ نَزَلَتْ نَارٌ مِنَ السَّمَاءِ الْتَهَمَتِ الْقَائِدَيْنِ السَّابِقَيْنِ مَعَ رِجَالِهِمَا الْمِئَةِ، فَأَرْجُوكَ لِتَكُنْ نَفْسِي عَزِيزَةً فِي عَيْنَيْكَ (وَلا تَقْضِ عَلَيْنَا)».١٤
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
فَقَالَ مَلاكُ الرَّبِّ لإِيلِيَّا: «امْضِ مَعَهُ وَلا تَخَفْ مِنْهُ». فَقَامَ وَانْطَلَقَ مَعَهُ لِمُقَابَلَةِ الْمَلِكِ.١٥
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
وَقَالَ إِيلِيَّا لِلْمَلِكِ: «هَذَا مَا يَقُولُهُ الرَّبُّ: مِنْ حَيْثُ إِنَّكَ أَرْسَلْتَ مَبْعُوثِينَ لِتَسْتَشِيرَ بَعْلَ زَبُوبَ إِلَهَ عَقْرُونَ وَكَأَنَّهُ لَا يُوْجَدُ إِلَهٌ فِي إِسْرَائِيلَ لِتَسْأَلَهُ، فَإِنَّ السَّرِيرَ الَّذِي رَقَدْتَ عَلَيْهِ لَنْ تَنْهَضَ عَنْهُ، بَلْ حَتْماً تَمُوتَ».١٦
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
فَمَاتَ أَخَزْيَا بِمُوْجِبِ كَلامِ الرَّبِّ الَّذِي نَطَقَ بِهِ عَلَى لِسَانِ إِيلِيَّا. وَإِذْ لَمْ يَكُنْ لَهُ ابْنٌ، خَلَفَهُ أَخُوهُ يَهُورَامُ، وَذَلِكَ فِي السَّنَةِ الثَّانِيَةِ لِحُكْمِ يَهُورَامَ بْنِ يَهُوشَافَاطَ مَلِكِ يَهُوذَا.١٧
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
أَمَّا بَقِيَّةُ أَخْبَارِ أَخَزْيَا وَأَعْمَالُهُ أَلَيْسَتْ هِيَ مُدَوَّنَةً فِي كِتَابِ أَخْبَارِ مُلُوكِ إِسْرَائِيلَ؟١٨

< ಅರಸುಗಳು - ದ್ವಿತೀಯ ಭಾಗ 1 >