< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
अख़ीअब के मरने के बाद मोआब इस्राईल से बाग़ी हो गया।
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
और अख़ज़ियाह उस झिलमिली दार खिड़की में से, जो सामरिया में उसके बालाख़ानें में थी, गिर पड़ा और बीमार हो गया। इसलिए उसने क़ासिदों को भेजा और उनसे ये कहा, “जाकर अक़रून के मा'बूद बा'लज़बूब' से पूछो, कि मुझे इस बीमारी से शिफ़ा हो जाएगी या नहीं।”
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
लेकिन ख़ुदावन्द के फ़रिश्ते ने एलियाह तिशबी से कहा, उठ और सामरिया के बादशाह के क़ासिदों से मिलने को जा और उनसे कह, 'क्या इस्राईल में ख़ुदा नहीं जो तुम अक़रून के मा'बूद बा'लज़बूब से पूछने चले हो?
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
इसलिए अब ख़ुदावन्द यूँ फ़रमाता है कि “तू उस पलंग पर से, जिस पर तू चढ़ा है, उतरने न पाएगा, बल्कि तू ज़रूर मरेगा।” तब एलियाह रवाना हुआ।
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
वह क़ासिद उसके पास लौट आए, तब उसने उनसे पूछा, “तुम लौट क्यूँ आए?”
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
उन्होंने उससे कहा, एक शख़्स हम से मिलने को आया, और हम से कहने लगा, 'उस बादशाह के पास जिसने तुम को भेजा है फिर जाओ, और उससे कहो: ख़ुदावन्द यूँ फ़रमाता है कि “क्या इस्राईल में कोई ख़ुदा नहीं जो तू अक़रून के मा'बूद बा'लज़बूब से पूछने को भेजता है? इसलिए तू उस पलंग से, जिस पर तू चढ़ा है, उतरने न पाएगा, बल्कि ज़रूर ही मरेगा।”
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
उसने उनसे कहा, “उस शख़्स की कैसी शक्ल थी, जो तुम से मिलने को आया और तुम से ये बातें कहीं?”
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
उन्होंने उसे जवाब दिया, “वह बहुत बालों वाला आदमी था, और चमड़े का कमरबन्द अपनी कमर पर कसे हुए था।” तब उसने कहा, “ये तो एलियाह तिशबी है।”
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
तब बादशाह ने पचास सिपाहियों के एक सरदार को, उसके पचासों सिपाहियों के साथ उसके पास भेजा। जब वह उसके पास गया और देखा कि वह एक टीले की चोटी पर बैठा है। उसने उससे कहा, ऐ नबी, बादशाह ने कहा है, “तू उतर आ।”
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
एलियाह ने उस पचास के सरदार को जवाब दिया, “अगर मैं नबी हूँ, तो आग आसमान से नाज़िल हो और तुझे तेरे पचासों के साथ जला कर भसम कर दे।” तब आग आसमान से नाज़िल हुई, और उसे उसके पचासों के साथ जला कर भसम कर दिया।
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
फिर उसने दोबारा पचास सिपाहियों के दूसरे सरदार को, उसके पचासों सिपाहियों के साथ उसके पास भेजा। उसने उससे मुख़ातिब होकर कहा, ऐ नबी, बादशाह ने यूँ कहा है, “जल्द उतर आ।”
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
एलियाह ने उनको भी जवाब दिया, “अगर मैं नबी हूँ, तो आग आसमान से नाज़िल हो और तुझे तेरे पचासों के साथ जलाकर भसम कर दे।” फ़िर ख़ुदा की आग आसमान से नाज़िल हुई, और उसे उसके पचासों के साथ जला कर भसम कर दिया।
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
फिर उसने तीसरे पचास सिपाहियों के सरदार को, उसके पचासों सिपाहियों के साथ भेजा; और पचास सिपाहियों का ये तीसरा सरदार ऊपर चढ़कर एलियाह के आगे घुटनों के बल गिरा, और उसकी मिन्नत करके उससे कहने लगा, “ऐ नबी, मेरी जान और इन पचासों की जानें, जो तेरे ख़ादिम हैं, तेरी निगाह में क़ीमती हों।
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
देख, आसमान से आग नाज़िल हुई और पचास सिपाहियों के पहले दो सरदारों को उनके पचासों समेत जला कर भसम कर दिया; इसलिए अब मेरी जान तेरी नज़र में क़ीमती हो।”
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
तब ख़ुदावन्द के फ़रिश्ते ने एलियाह से कहा, “उसके साथ नीचे जा, उससे न डर।” तब वह उठकर उसके साथ बादशाह के पास नीचे गया,
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
और उससे कहा, ख़ुदावन्द यूँ फ़रमाता है, “तूने जो अक़रून के मा'बूद बा'लज़बूब से पूछने को लोग भेजे हैं, तो क्या इसलिए कि इस्राईल में कोई ख़ुदा नहीं है जिसकी मर्ज़ी को तू दरियाफ़्त कर सके? इसलिए तू उस पलंग से, जिस पर तू चढ़ा है, उतरने न पाएगा, बल्कि ज़रूर ही मरेगा।”
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
इसलिए वह ख़ुदावन्द के कलाम के मुताबिक़ जो एलियाह ने कहा था, मर गया; और चूँकि उसका कोई बेटा न था, इसलिए शाह — ए — यहूदाह यहूराम — बिन — यहूसफ़त के दूसरे साल से यहूराम उसकी जगह सल्तनत करने लगा।
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
और अख़ज़ियाह के और काम जो उसने किए, क्या वह इस्राईल के बादशाहों की तवारीख़ की किताब में लिखे नहीं?

< ಅರಸುಗಳು - ದ್ವಿತೀಯ ಭಾಗ 1 >