< ಅರಸುಗಳು - ದ್ವಿತೀಯ ಭಾಗ 10 >

1 ಆಗ ಸಮಾರ್ಯ ಪಟ್ಟಣದಲ್ಲಿ ಅಹಾಬನ ಸಂತಾನದ ಎಪ್ಪತ್ತು ಮಂದಿ ರಾಜಪುತ್ರರಿದ್ದರು. ಯೇಹುವು ಆ ಪಟ್ಟಣದಲ್ಲಿದ್ದ ಇಜ್ರೇಲಿನ ಅಧಿಕಾರಿಗಳಾದ ಹಿರಿಯರಿಗೂ, ಅಧಿಕಾರಿಗಳಿಗೂ ರಾಜ್ಯಪಾಲಕರಿಗೂ ಪತ್ರಗಳನ್ನು ಬರೆದು ಅವುಗಳನ್ನು ದೂತರ ಮುಖಾಂತರವಾಗಿ ಕಳುಹಿಸಿದನು.
शोमरोनात अहाबाला सत्तर पुत्र होते. शोमरोनातील अधिकारी आणि वडिलधारी मंडळी यांना येहूने पत्रे पाठवली. व इज्रेलच्या अधिकाऱ्यांना तसेच ज्यांनी या अहाबाच्या मुलांना वाढवले त्यांनाही पाठवली. पत्रात त्याने लिहिले.
2 ಪತ್ರಗಳಲ್ಲಿ, “ನಿಮ್ಮ ವಶದಲ್ಲಿರುವ ನಿಮ್ಮ ಯಜಮಾನನ ಮಕ್ಕಳೂ, ರಥಾಶ್ವಬಲಗಳೂ, ಕೋಟೆಕೊತ್ತಲುಗಳುಳ್ಳ ಪಟ್ಟಣಗಳೂ, ಯುದ್ಧಾಯುಧಗಳೂ ಇರುತ್ತವಷ್ಟೇ.
“हे पत्र मिळाल्यावर तुमच्या धन्याच्या मुलांपैकी जो सगळ्यात गुणी आणि लायक मुलगा असेल त्याची निवड करा. रथ, घोडे इत्यादी तुमच्याजवळ आहेच. तुमचे वास्तव्यही मजबूत शहरात आहे.
3 ಈ ಪತ್ರವು ಕೈ ಸೇರಿದೊಡನೆ ಆ ರಾಜ ಪುತ್ರರಲ್ಲಿ ಉತ್ತಮನೂ, ಸಮರ್ಥನೂ ಆದ ಒಬ್ಬನನ್ನು ಆರಿಸಿಕೊಂಡು, ಅವನನ್ನು ಅವನ ತಂದೆಯ ಸಿಂಹಾಸನದ ಮೇಲೆ ಕುಳ್ಳಿರಿಸಿ ನಿಮ್ಮ ಯಜಮಾನನ ಕುಟುಂಬದವರಿಗಾಗಿ ಯುದ್ಧಮಾಡಿರಿ” ಎಂಬುದಾಗಿ ಬರೆದಿತ್ತು.
तुमच्याकडे शस्त्रास्त्रे आहेत. तुम्ही ज्या मुलाची निवड कराल तो उत्तम व योग्य असेल त्यास त्याच्या वडिलाच्या सिंहासनावर बसवा. मग आपल्या धन्याच्या घराण्यासाठी लढा द्या.”
4 ಅವರು ಬಹಳವಾಗಿ ಭಯಪಟ್ಟು, “ಇಬ್ಬರೂ ರಾಜರು ಅವನ ಮುಂದೆ ನಿಲ್ಲಲಾರದೆ ಹೋದಮೇಲೆ, ನಾವು ನಿಲ್ಲುವುದು ಹೇಗೆ?” ಅಂದುಕೊಂಡರು.
पण हे वाचून ती अधिकारी आणि वडिलधारी मंडळी फारच घाबरली. ते सर्व म्हणाले, “योराम आणि अहज्या हे दोन राजे सुद्धा येहूला रोखू शकले नाहीत, तेव्हा आम्ही काय त्यास अडवणार?”
5 ಅನಂತರ ರಾಜಗೃಹಾಧಿಪತಿ, ಪಟ್ಟಣದ ಪುರಾಧಿಕಾರಿ, ಹಿರಿಯರು, ರಾಜಪುತ್ರಪಾಲಕರು ಇವರೆಲ್ಲ ಸೇರಿ ಯೇಹುವಿಗೆ, “ನಾವು ನಿನ್ನ ಆಜ್ಞಾಪಾಲರಕರಾದ ಸೇವಕರು. ನಾವಾಗಿ ನಮಗೊಬ್ಬ ಅರಸನನ್ನು ನೇಮಿಸಿಕೊಳ್ಳುವುದಿಲ್ಲ, ನಿನ್ನ ಚಿತ್ತವೇ ನೆರವೇರಲಿ” ಎಂದು ಹೇಳಿ ಕಳುಹಿಸಿದರು.
मग, अहाबाच्या घराची देखभाल करणारा अधिकारी, नगराधिकारी, वडिलधारी मंडळी आणि त्या मुलांचे पालक यांनी येहूला खालील प्रमाणे संदेश पाठवला, “आम्ही तुझे सेवक आहोत. तू म्हणशील ते आम्ही करु. आम्ही कोणालाच राजा करत नाही. तुला योग्य वाटेल ते कर.”
6 ಆಗ ಯೇಹುವು ಇನ್ನೊಂದು ಪತ್ರದ ಮೂಲಕವಾಗಿ ಅವರಿಗೆ, “ನೀವು ನನ್ನ ಪಕ್ಷದವರಾಗಿದ್ದು ನನ್ನ ಆಜ್ಞಾನುಸಾರ ನಡೆದುಕೊಳ್ಳುವ ಮನಸ್ಸುಳ್ಳವರಾಗಿದ್ದರೆ, ನಾಳೆ ಇಷ್ಟು ಹೊತ್ತಿಗೆ ನಿಮ್ಮ ಯಜಮಾನನ ಸಂತಾನದವರ ತಲೆಗಳೊಡನೆ ಇಜ್ರೇಲಿಗೆ ಬನ್ನಿರಿ” ಎಂದು ಆಜ್ಞಾಪಿಸಿದನು. ಆಹಾಬನ ಎಪ್ಪತ್ತು ಮಂದಿ ರಾಜಪುತ್ರರು ಪಟ್ಟಣದ ಪ್ರಧಾನಪುರುಷರ ಪರಾಂಬರಿಕೆಯಲ್ಲಿದ್ದರು.
येहूने मग त्या अधिकाऱ्यांना आणखी एक पत्र पाठवले. त्यामध्ये त्याने लिहिले, “तुमचा मला पाठिंबा असेल आणि तुम्ही माझ्या आज्ञेत असाल तर अहाबाच्या मुलांचा शिरच्छेद करा. साधारण याच वेळेला इज्रेल येथे त्यांना माझ्याकडे आणा.” अहाब राजाची सत्तर मुले होती आणि नगरातील अधिकाऱ्यांकडे ती होती. त्या अधिकाऱ्यांनी त्यांना वाढवले होते.
7 ಪ್ರಧಾನಪುರುಷರು ಪತ್ರಿಕೆಯನ್ನು ಓದಿದೊಡನೆ, ಆ ಎಪ್ಪತ್ತು ಮಂದಿ ರಾಜಪುತ್ರರನ್ನು ಹಿಡಿದು ಕೊಂದು ಅವರ ತಲೆಗಳನ್ನು ಪುಟ್ಟಿಗಳಲ್ಲಿ ತುಂಬಿ ಇಜ್ರೇಲಿನಲ್ಲಿದ್ದ ಯೇಹುವಿಗೆ ಕಳುಹಿಸಿಕೊಟ್ಟರು.
या अधिकाऱ्यांना हे पत्र मिळाले तेव्हा त्यांनी या राजाच्या सर्व सत्तर राजपुत्रांना एकत्र आणून ठार केले. मग त्यांची मस्तके टोपल्यांमध्ये भरली. या टोपल्या येहूकडे इज्रेल याठिकाणी पाठवल्या.
8 ರಾಜಪುತ್ರರ ತಲೆಗಳನ್ನು ತಂದಿದ್ದಾರೆಂಬ ವರ್ತಮಾನವು ಯೇಹುವಿಗೆ ತಲುಪಿದಾಗ ಅವನು, “ಬೆಳಗಾಗುವ ತನಕ ಅವುಗಳನ್ನು ಹೆಬ್ಬಾಗಿಲಿನ ಹತ್ತಿರ ಎರಡು ರಾಶಿಗಳಾಗಿ ಮಾಡಿ ಹಾಕಿರಿ” ಎಂದು ಆಜ್ಞಾಪಿಸಿದನು.
निरोप्याने येऊन येहूला सांगितले, “या लोकांनी राजपुत्रांची मुंडकी आणली आहेत.” त्यास येहू म्हणाला, “नगराच्या वेशीजवळ त्या मुंडक्यांचे दोन ढीग करून सकाळपर्यंत तिथे ठेवा.”
9 ಮರುದಿನ ಬೆಳಿಗ್ಗೆ ಯೇಹುವು ಅವುಗಳ ಹತ್ತಿರ ಹೋಗಿ ಎಲ್ಲಾ ಜನರ ಎದುರಿಗೆ ನಿಂತು ಅವರಿಗೆ, “ನೀವು ನಿರಪರಾಧಿಗಳು, ನಾನಾದರೋ ನನ್ನ ಯಜಮಾನನಿಗೆ ವಿರೋಧವಾಗಿ ಒಳಸಂಚು ಮಾಡಿ ಅವನನ್ನು ಕೊಂದವನು, ಆದರೆ ಇವರನ್ನೆಲ್ಲಾ ಹತಿಸಿದವರಾರು?
सकाळी येहू निघाला आणि लोकांपुढे उभा राहून त्यांना म्हणाला, “तुम्ही निरपराध आहात. मी माझ्या धन्याविरुध्द कट रचून त्यास ठार केले. पण अहाबाच्या या मुलांची हत्या कोणी केली? तुम्हीच त्यांना मारलेत.
10 ೧೦ ಇಗೋ, ಯೆಹೋವನ ವಾಕ್ಯವು ಅಹಾಬನ ಮನೆಯವರನ್ನು ಕುರಿತು ಹೇಳಿದ ಮಾತುಗಳೆಲ್ಲಾ ತಪ್ಪದೆ ನೆರವೇರುವುದೆಂದು ತಿಳಿದುಕೊಳ್ಳಿರಿ. ಯೆಹೋವನು ತನ್ನ ಸೇವಕನಾದ ಎಲೀಯನ ಮುಖಾಂತರವಾಗಿ ಹೇಳಿದ್ದನ್ನು ಮಾಡಿದ್ದಾನಷ್ಟೇ” ಎಂದು ಹೇಳಿದನು.
१०परमेश्वर बोलतो त्याप्रमाणेच सर्व घडते हे तुम्ही जाणून घेतले पाहिजे. अहाबाच्या कुटुंबाबद्दल परमेश्वराने एलीयाकडून वदविले होते. आता परमेश्वराने आपण ज्या गोष्टी करु म्हणून सांगितले होते त्या सर्व करून दाखवल्या आहेत.”
11 ೧೧ ಅನಂತರ ಯೇಹುವು ಇಜ್ರೇಲಿನಲ್ಲಿ ಉಳಿದ ಅಹಾಬನ ಕುಟುಂಬದವರನ್ನೂ, ಅವನ ಸರದಾರರೂ, ಆಪ್ತಮಿತ್ರರೂ, ಪುರೋಹಿತರು ಇವರನ್ನೂ ಸಂಹರಿಸಿದನು. ಒಬ್ಬನನ್ನೂ ಉಳಿಸಲಿಲ್ಲ.
११आणि येहूने इज्रेलमधल्या अहाबाच्या सर्व कुटुंबियांना ठार केले. सर्व प्रतिष्ठित माणसे, जिवलग मित्र याजक यांची त्याने हत्या केली. अहाबाच्या नातलगांपैकी कोणीही जिवंत राहिले नाही.
12 ೧೨ ನಂತರ ಯೇಹುವು ಸಮಾರ್ಯಕ್ಕೆ ಹೊರಟು ಹೋದನು. ಅವನು ದಾರಿಯಲ್ಲಿ ಕುರುಬರು ಉಣ್ಣೆಕತ್ತರಿಸುವ ಮನೆಯ ಬಳಿಗೆ ಬಂದಾಗ,
१२इज्रेल सोडून येहू शोमरोनला आला. वाटेत तो मेंढपाळांच्या तळावर थांबला. मेंढपाळ लोकर कातरतात त्या ठिकाणच्या एका घरात तो गेला.
13 ೧೩ ಯೇಹುವು ಯೆಹೂದ್ಯರ ಅರಸನಾದ ಅಹಜ್ಯನ ಸಹೋದರರನ್ನು ಕಂಡು ಅವರಿಗೆ, “ನೀವು ಯಾರು?” ಎಂದು ಕೇಳಿದನು. ಅದಕ್ಕೆ ಅವರು, “ನಾವು ಅಹಜ್ಯನ ಸಹೋದರರು. ರಾಜಪುತ್ರರನ್ನೂ, ರಾಜಮಾತೆಯ ಮಕ್ಕಳನ್ನೂ ವಂದಿಸುವುದಕ್ಕೋಸ್ಕರ ಇಲ್ಲಿಗೆ ಬಂದಿದ್ದೇವೆ” ಎಂದು ಉತ್ತರ ಕೊಟ್ಟರು.
१३यहूदाचा राजा अहज्या याच्या नातेवाईकांना तो भेटला. येहूने त्यांची चौकशी केली, “तुम्ही कोण आहात?” ते म्हणाले, “आम्ही यहूदाचा राजा अहज्या याचे नातेवाईक. राजाची मुले आणि राजमातेची मुले यांची विचारपूस करायला आम्ही जात आहोत.”
14 ೧೪ ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.
१४तेव्हा येहू आपल्याबरोबरच्या लोकांस म्हणाला, “यांना जिवंत ताब्यात घ्या.” तेव्हा येहूच्या लोकांनी त्यांना ताब्यात घेतले. ते सगळे मिळून बेचाळीस होते. बेथ-एकेद जवळच्या विहिरीपाशी येहूने त्या सर्वांना ठार केले. येहूने कोणालाही जिवंत ठेवले नाही.
15 ೧೫ ಯೇಹುವು ಅಲ್ಲಿಂದ ಮುಂದೆ ಹೋಗುತ್ತಿರುವಾಗ, ತನ್ನನ್ನು ಎದುರುಗೊಳ್ಳುವುದಕ್ಕಾಗಿ ಬಂದ ರೇಕಾಬನ ಮಗನಾದ ಯೆಹೋನಾದಾಬನನ್ನು ಕಂಡು ವಂದಿಸಿ, “ನಿನ್ನ ವಿಷಯದಲ್ಲಿ, ನನ್ನ ಹೃದಯವು ಯಥಾರ್ಥವಾಗಿರುವಂತೆ ನಿನ್ನ ಹೃದಯವು ಯಥಾರ್ಥವಾಗಿರುವುದೋ?” ಎಂದು ಕೇಳಿದನು. ಅವನು, “ಹೌದು” ಎಂದು ಉತ್ತರ ಕೊಟ್ಟನು. ಆಗ ಯೇಹುವು, “ಹಾಗಾದರೆ ನಿನ್ನ ಕೈಯನ್ನು ಕೊಡು” ಎನ್ನಲು ಅವನು ತನ್ನ ಕೈಯನ್ನು ಕೊಟ್ಟನು. ಯೇಹುವು ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕುಳ್ಳಿರಿಸಿಕೊಂಡನು.
१५तिथून निघाल्यावर येहूला रेखाबाचा मुलगा योनादाब भेटला. तो येहूला भेटायलाच निघाला होता. येहूने त्याचे कुशल विचारुन म्हटले, “मी तुझा विश्वासू मित्र आहे, तसाच तूही आहेस ना?” यहोनादाब म्हणाला, “होय, मी तुझा विश्वासू मित्र आहे.” येहू म्हणाला, “तसे असेल तर मला तुझा हात दे.” आणि येहूने त्याचा हात धरुन त्यास आपल्या रथात घेतले.
16 ೧೬ ಯೇಹುವು ಅವನಿಗೆ, “ನನ್ನ ಜೊತೆಯಲ್ಲಿ ಬಂದು, ಯೆಹೋವನಲ್ಲಿ ನನಗಿರುವ ಆಸಕ್ತಿಯನ್ನು ನೋಡು” ಎಂದು ಹೇಳಿ ಅವನನ್ನು ಕೈಹಿಡಿದು ತನ್ನ ರಥದಲ್ಲಿ ಕರೆದುಕೊಂಡು ಹೋದನು.
१६येहू योनादाबाला म्हणाला, “चल माझ्याबरोबर. परमेश्वराबद्दल मला किती उत्कंठा आहे ती बघ.” तेव्हा यहोनादाब येहूबरोबर त्याच्या रथातून निघाला.
17 ೧೭ ಸಮಾರ್ಯವನ್ನು ಸೇರಿದ ನಂತರ ಅಲ್ಲಿ ಉಳಿದಿದ್ದ ಅಹಾಬನ ಸಂತಾನದವರನ್ನೆಲ್ಲಾ ಸಂಹರಿಸಿಬಿಟ್ಟನು. ಹೀಗೆ ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿಸಿದ ಮಾತು ನೆರವೇರಿತು.
१७शोमरोनला पोहोचल्यावर येहूने अहाबचे जे कोणी कुटुंबिय अजून जिवंत होते त्या सर्वांना मारले. एलीयाला परमेश्वराने सांगितले होते ते सर्व येहूने केले.
18 ೧೮ ತರುವಾಯ ಅವನು ಎಲ್ಲಾ ಜನರನ್ನು ಒಟ್ಟಿಗೆ ಸೇರಿಸಿ ಅವರಿಗೆ, “ಅಹಾಬನು ಬಾಳ್ ದೇವತೆಯನ್ನು ಸ್ವಲ್ಪ ಮಾತ್ರ ಆರಾಧಿಸಿದನು. ಯೇಹುವಾದರೂ ಇನ್ನೂ ಅಧಿಕವಾಗಿ ಸೇವಿಸಬೇಕೆಂದಿದ್ದಾನೆ.
१८येहूने मग सर्वांना एकत्र बोलावले. त्यांना तो म्हणाला, “अहाबाने बआलाची थोडी सेवा केली. पण येहू मात्र त्याची बरीच सेवा करणार आहे.
19 ೧೯ ಆದುದರಿಂದ, ನೀವು ಬಾಳ್ ದೇವತೆಯ ಆರಾಧಕರಾದ ಎಲ್ಲಾ ಪ್ರವಾದಿಗಳನ್ನೂ, ಭಕ್ತರನ್ನೂ, ಯಾಜಕರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನೂ ಬಾಳ್ ದೇವತೆಗೋಸ್ಕರ ಸರ್ವಾಂಗಯಜ್ಞವನ್ನು ಸಮರ್ಪಿಸಬೇಕೆಂದಿದ್ದೇನೆ, ಆದುದರಿಂದ ಅವರಲ್ಲಿ ಒಬ್ಬನೂ ಈ ಕಾರ್ಯಕ್ಕೆ ಬಾರದಿರಕೂಡದು, ಬಾರದವನು ಸಾಯಬೇಕು” ಎಂದು ಹೇಳಿದನು. ಯೇಹುವು ಬಾಳ್ ದೇವತೆಯ ಭಕ್ತರನ್ನು ಸಂಹರಿಸಬೇಕೆಂದು ಈ ಯುಕ್ತಿಯನ್ನು ಮಾಡಿದನು.
१९आता बआलाच्या सर्व संदेष्टयांना आणि याजकांना बोलावून घ्या. तसेच जे जे बआलाची पूजा करतात त्यांनाही बोलवा. यामध्ये कोणीही गैरहजर असता कामा नये. बआलसाठी मला मोठा यज्ञ करायचा आहे. इथे जो येणार नाही त्यास मी ठार करीन हे नक्की,” येहूची ही सर्व बतावणी होती. त्यास बआलाच्या पूजकांचा संहार करायचा होता.
20 ೨೦ ಇದಲ್ಲದೆ, ಯೇಹುವು ದೂತರ ಮುಖಾಂತರವಾಗಿ, “ಬಾಳ್ ದೇವತೆಯನ್ನು ಆರಾಧಿಸುವ ಎಲ್ಲಾ ಭಕ್ತರೂ ತಮ್ಮನ್ನು ಶುದ್ಧಿಮಾಡಿಕೊಂಡು ಉತ್ಸವಕ್ಕೆ ಬರಬೇಕು” ಎಂದು ಹೇಳಿದನು.
२०येहू म्हणाला, “बआलसाठी पवित्र मेळ्याची तयारी करा.” तेव्हा याजकांनी त्याची घोषणा केली.
21 ೨೧ ಯೇಹುವು ಇಸ್ರಾಯೇಲರ ಸಮಸ್ತ ಪ್ರಾಂತ್ಯಗಳಲ್ಲಿ, ಬಾಳ್ ದೇವತೆಯನ್ನು ಸೇವಿಸುವ ಭಕ್ತರಲ್ಲಿ ಒಬ್ಬನೂ ತಪ್ಪದೆ ಎಲ್ಲರೂ ಸೇರಿ ಬರಬೇಕೆಂದು ಪ್ರಕಟಿಸಿದನು. ಅವನು ಎಲ್ಲಾ ಕಡೆಗಳಿಗೂ ದೂತರನ್ನು ಕಳುಹಿಸಿದ್ದರಿಂದ ಅವರಲ್ಲಿ ಒಬ್ಬನೂ ತಪ್ಪಿಸಿ ಕೊಳ್ಳದೆ ಎಲ್ಲರೂ ಸೇರಿ ಬಂದಿದ್ದರು. ಬಾಳ್ ದೇವತೆಯ ದೇವಸ್ಥಾನವು ಪೂರ್ಣವಾಗಿ ಅವನ ಪೂಜಾರಿಗಳಿಂದ, ಭಕ್ತರಿಂದ ತುಂಬಿಹೋಯಿತು.
२१येहूने मग इस्राएलभर संदेश पाठवला. बआलाचे समस्त पूजक जमले. एकही मागे राहिला नाही. बआलाच्या देवळात ते आल्यावर देऊळ भरुन गेले.
22 ೨೨ ಯೇಹುವು ವಸ್ತ್ರಗಾರದ ಅಧಿಪತಿಗೆ, “ಬಾಳ್ ದೇವತೆಯನ್ನು ಸೇವಿಸುವ ಭಕ್ತರೆಲ್ಲರಿಗೂ ಬಟ್ಟೆಗಳನ್ನು ಕೊಡು” ಎಂದು ಆಜ್ಞಾಪಿಸಿಲು ಅವನು ತಂದುಕೊಟ್ಟನು.
२२वस्त्र भांडार सांभाळणाऱ्याला येहू म्हणाला, “बआलाच्या या सर्व पूजकांसाठी वस्त्रे दे.” तेव्हा त्याने सर्वासाठी वस्त्रे दिली.
23 ೨೩ ಅನಂತರ ಯೇಹುವು ರೇಕಾಬನ ಮಗನಾದ ಯೆಹೋನಾದಾಬನೊಡನೆ ದೇವಸ್ಥಾನವನ್ನು ಪ್ರವೇಶಿಸಿ ಬಾಳ್ ದೇವತೆಯನ್ನು ಸೇವಿಸುವ ಭಕ್ತರಿಗೆ, “ಯೆಹೋವನ ಭಕ್ತರು ನಿಮ್ಮ ಮಧ್ಯದಲ್ಲಿ ಬಂದಿರುತ್ತಾರೋ? ವಿಚಾರಿಸಿ ನೋಡಿರಿ. ಬಾಳ್ ದೇವತೆಯ ಭಕ್ತರು ಮಾತ್ರ ಇಲ್ಲಿರಬೇಕು” ಎಂದು ಹೇಳಿದನು.
२३मग येहू आणि रेखाबाचा मुलगा योनादाब बआलाच्या देवळात शिरले. येहू तेथे जमलेल्या बआलाच्या सर्व पूजकांना म्हणाला, “तुमच्यात कोणी परमेश्वराचा सेवक नाही ना ते एकदा पाहून खात्री करून घ्या. बआलाच्या पूजा करणारेच सर्व इथे आहेत ना ते पाहा.”
24 ೨೪ ಆಮೇಲೆ ಅವರು ಸರ್ವಾಂಗಹೋಮಯಜ್ಞಗಳನ್ನು ಸಮರ್ಪಿಸುವುದಕ್ಕೆ ಹೋದರು. ಇದಕ್ಕೆ ಮೊದಲೇ ಅವನು ದೇವಸ್ಥಾನದ ಹೊರಗೆ ಎಂಭತ್ತು ಮಂದಿಯನ್ನು ಕಾಯುವುದಕ್ಕಾಗಿ ಇರಿಸಿ ಯೇಹುವು ಅವರಿಗೆ, “ನಾನು ಯಾರನ್ನು ನಿಮ್ಮ ಕೈಗೆ ಸಿಕ್ಕುವ ಹಾಗೆ ಮಾಡುವೆನೋ ಅವರಲ್ಲಿ ಒಬ್ಬನನ್ನೂ ಬಿಡಬೇಡಿರಿ. ಬಿಟ್ಟರೆ ಅವನ ಪ್ರಾಣಕ್ಕೆ ಬದಲಾಗಿ ನಿಮ್ಮ ಪ್ರಾಣವು ಹೋಗುವುದು” ಎಂಬುದಾಗಿ ಆಜ್ಞಾಪಿಸಿದ್ದನು.
२४यज्ञ आणि होमार्पणे करण्यासाठी बआलाचे सर्व पूजक बालाच्या देवळात शिरले. बाहेर येहूने ऐंशीजणांना तयार ठेवले होते. त्यांना येहूने सांगितले होते, “कोणालाही आतून निसटू द्यायचे नाही. एखादा कोणी गेलाच तर त्यास जाऊ देणाऱ्याला आपला जीव गमवावा लागेल.”
25 ೨೫ ಸರ್ವಾಂಗಹೋಮವನ್ನು ಅರ್ಪಿಸಿದ ಕೂಡಲೆ ಯೇಹುವು ಕಾವಲುಗಾರರಿಗೂ, ಸೇನಾಧಿಪತಿಗಳಿಗೂ, “ಒಳಗೆ ಹೋಗಿ ಅವರೆಲ್ಲರನ್ನೂ ಸಂಹರಿಸಿರಿ. ಒಬ್ಬನೂ ತಪ್ಪಿಸಿಕೊಳ್ಳಬಾರದು” ಎಂದು ಆಜ್ಞಾಪಿಸಿದನು. ಅವರು ಒಳಗೆ ಹೋಗಿ ಅವರನ್ನು ಕತ್ತಿಯಿಂದ ಕೊಂದು ಅವರ ಶವಗಳನ್ನು ಹೊರಗೆ ಹಾಕಿ ಬಾಳ್ ದೇವತೆಯ ದೇವಸ್ಥಾನಕ್ಕೆ ಸೇರಿದ ಪಟ್ಟಣವನ್ನು ಪ್ರವೇಶಿಸಿದರು.
२५स्वत: यज्ञात होमबली अर्पण केल्यावर लगेच हुजऱ्यांना आणि सरदारांना येहूने सांगितले, “आता, आत जा आणि बालाची पूजा करणाऱ्यांना ठार करा. कोणालाही देवळातून जिवंत बाहेर येऊ देऊ नका.” तेव्हा सरदारांनी धारदार तलवारींनी सर्व पूजकांना ठार केले. त्यांनी आणि हुजऱ्यांनी बाल देवतेच्या पूजकांचे मृतदेह बाहेर टाकले ते बआलाच्या देवळाच्या गर्भगृहात गेले
26 ೨೬ ಅವರು ಅಲ್ಲಿನ ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನು ತೆಗೆದುಕೊಂಡು ಬಂದು ಸುಟ್ಟುಹಾಕಿದರು.
२६स्मृतीस्तंभ त्यांनी उखडून टाकले आणि बआलाची देऊळ जाळले.
27 ೨೭ ಇದಲ್ಲದೆ, ಬಾಳ್ ದೇವತೆಯ ವಿಗ್ರಹ ಸ್ತಂಭಗಳನ್ನೂ, ದೇವಸ್ಥಾನಗಳನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಾಲಯಕ್ಕಾಗಿ ಉಪಯೋಗಿಸುತ್ತಿದ್ದಾರೆ.
२७बआलाच्या स्मृतीस्तंभाचा त्यांनी चुराडा केला. बआलाच्या देवळाचाही विध्वंस केला. त्या देवळाचे त्यांनी प्रसाधनगृह करून टाकले. अजूनही लोक त्याचा तसाच वापर करतात.
28 ೨೮ ಹೀಗೆ ಯೇಹುವು ಇಸ್ರಾಯೇಲರಲ್ಲಿ ಬಾಳ್ ದೇವತೆಯ ಪೂಜೆಯನ್ನು ನಿಲ್ಲಿಸಿದನು.
२८अशा प्रकारे इस्राएलमधली बआलाची पूजा येहूने मोडून काढली.
29 ೨೯ ಆದರೂ ಯೇಹುವು ಇಸ್ರಾಯೇಲರನ್ನು ಬೇತೇಲ್ ಮತ್ತು ದಾನ್ ಊರುಗಳಲ್ಲಿದ್ದ ಚಿನ್ನದ ಬಸವನನ್ನು ಪೂಜಿಸಿ ಪಾಪಕ್ಕೆ ಪ್ರೇರೇಪಿಸಿದ ನೆಬಾಟನ ಮಗನಾದ ಯಾರೊಬ್ಬಾಮನ ಮಾರ್ಗವನ್ನು ಬಿಡದೆ ಅದನ್ನು ಅನುಸರಿಸಿದನು.
२९पण नबाटचा मुलगा यराबाम याने जी पापे इस्राएलाला करायला लावली त्यापासून येहू पूर्णपणे परावृत्त झाला नाही. बेथेल आणि दान इथली सोन्याची वासरे त्याने उध्वस्त केली नाहीत.
30 ೩೦ ಯೆಹೋವನು ಯೇಹುವಿಗೆ, “ನೀನು ನನ್ನ ದೃಷ್ಟಿಗೆ ಹಿತಕರವಾದದ್ದನ್ನು ನಡಿಸಿ ನನ್ನ ಮೆಚ್ಚಿಕೆಯನ್ನು ಪಡೆದಿರುವೆ. ಅಹಾಬನ ಮನೆಯವರನ್ನು ಕುರಿತು ನನ್ನ ಚಿತ್ತವನ್ನು ನೆರವೇರಿಸಿದ್ದೀ. ಆದುದರಿಂದ ನಿನ್ನ ಸಂತಾನದವರು ನಾಲ್ಕನೆಯ ತಲೆಮಾರಿನವರೆಗೂ ಇಸ್ರಾಯೇಲರ ಸಿಂಹಾಸನದ ಮೇಲೆ ಕುಳಿತುಕೊಳ್ಳುವರು” ಎಂದು ಹೇಳಿದನು.
३०परमेश्वर येहूला म्हणाला, “तू चांगली कामगिरी केलीस. माझ्या मते जे उचित तसेच तू वागलास. अहाबाच्या कुटुंबाचा मला हव्या त्या पध्दतीने तू विध्वंस केलास. तेव्हा आता तुझ्या पुढच्या चार पिढ्या इस्राएलवर राज्य करतील.
31 ೩೧ ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
३१पण परमेश्वराच्या नियमांना अनुसरुन मन: पूर्वक वर्तन ठेवणे येहूला जमले नाही. यराबामाच्या ज्या दुष्कृत्यांमुळे इस्राएल पापाच्या गर्तेत गेला ते करण्यापासून तो स्वत: ला थोपवू शकला नाही.”
32 ೩೨ ಯೆಹೋವನು ಆ ಕಾಲದಲ್ಲಿ ಇಸ್ರಾಯೇಲರನ್ನು ಕುಗ್ಗಿಸತೊಡಗಿದನು. ಹಜಾಯೇಲನು ಬಂದು ಇಸ್ರಾಯೇಲರನ್ನು ಇಸ್ರಾಯೇಲರ ಮೇರೆಗಳಲ್ಲಿ ಸೋಲಿಸಿದನು.
३२याचवेळी परमेश्वराने इस्राएल प्रदेशाचे लचके तोडायला सुरुवात केली. अरामाचा राजा हजाएल याने इस्राएलच्या सर्व सीमांवर पराभव केला.
33 ೩೩ ಯೊರ್ದನ್ ನದಿಯ ಪೂರ್ವದಿಕ್ಕಿಗೂ, ಅರ್ನೋನ್ ತಗ್ಗಿನ ಅರೋಯೇರ್ ಪಟ್ಟಣದ ಉತ್ತರದಿಕ್ಕಿಗೂ ಇರುವ ಗಿಲ್ಯಾದ್, ಬಾಷಾನ್ ಪ್ರಾಂತ್ಯಗಳಲ್ಲಿ ವಾಸವಾಗಿದ್ದ ಗಾದ್, ರೂಬೇನ್ ಮತ್ತು ಮನಸ್ಸೆ ಕುಲಗಳವರನ್ನೂ, ಬೇರೆ ಎಲ್ಲಾ ಪ್ರಾಂತ್ಯಗಳಲ್ಲಿರುವ ಇಸ್ರಾಯೇಲರನ್ನೂ ಬಾಧಿಸಿದನು.
३३यार्देन नदीच्या पूर्वेकडील प्रदेश त्याने जिंकला गाद, रऊबेन आणि मनश्शे यांच्या कुटुंबांच्या ताब्यातील प्रदेशासकट सगळा गिलाद त्यामध्ये आला. तसेच आर्णोन खोऱ्यातील अरोएर पासून गिलाद आणि बाशानपर्यंतचा प्रदेश हजाएलने जिंकला.
34 ೩೪ ಯೇಹುವಿನ ಉಳಿದ ಚರಿತ್ರೆಯೂ, ಅವನ ಶೂರಕೃತ್ಯಗಳ ವಿವರವೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
३४“इस्राएलच्या राजांचा इतिहास” या पुस्तकात येहूच्या इतर पराक्रमांची नोंद आहे.
35 ೩೫ ಯೇಹುವು ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ಸಮಾರ್ಯದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಯೆಹೋವಾಹಾಜನು ಅರಸನಾದನು.
३५येहू मरण पावला आणि आपल्या पूर्वजांना मिळाला. लोकांनी त्याचे दफन शोमरोनात केले. येहूचा मुलगा यहोआहाज त्यानंतर इस्राएलचा राजा झाला.
36 ೩೬ ಯೇಹುವು ಸಮಾರ್ಯ ಪಟ್ಟಣದಲ್ಲಿ ವಾಸವಾಗಿದ್ದುಕೊಂಡು ಇಸ್ರಾಯೇಲರನ್ನು ಇಪ್ಪತ್ತೆಂಟು ವರ್ಷಗಳ ಕಾಲ ಆಳಿದನು.
३६येहूने शोमरोन मधून इस्राएलवर अठ्ठावीस वर्षे राज्य केले.

< ಅರಸುಗಳು - ದ್ವಿತೀಯ ಭಾಗ 10 >