< ಅರಸುಗಳು - ದ್ವಿತೀಯ ಭಾಗ 16 >
1 ೧ ರೆಮಲ್ಯನ ಮಗನಾದ ಪೆಕಹನ ಆಳ್ವಿಕೆಯ ಹದಿನೇಳನೆಯ ವರ್ಷದಲ್ಲಿ ಯೆಹೂದ ರಾಜನಾದ ಯೋತಾಮನ ಮಗ ಆಹಾಜನು ಆಳತೊಡಗಿದನು.
၁ရေမလိ၏သားပေကာ၏ နန်းစံတစ်ဆယ့်ခုနစ် နှစ်မြောက်၌ယောသံ၏သားအာခတ်သည်၊ အ သက်နှစ်ဆယ်ရှိသောအခါယုဒပြည်ဘုရင် အဖြစ်နန်းတက်၍ ယေရုရှလင်မြို့၌တစ်ဆယ့် ခြောက်နှစ်နန်းစံရ၏။ သူသည်မိမိ၏ဘေးတော် ဒါဝိဒ်မင်း၏စံနမူနာကောင်းကိုမယူဘဲ ထာဝရဘုရားနှစ်သက်တော်မမူသည့် အမှုတို့ကိုပြု၍၊-
2 ೨ ಆಹಾಜನು ಪಟ್ಟಕ್ಕೆ ಬಂದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಇವನು ತನ್ನ ದೇವರಾದ ಯೆಹೋವನ ದೃಷ್ಟಿಯಲ್ಲಿ ಒಳ್ಳೆಯವನಾಗಿರಲಿಲ್ಲ. ತನ್ನ ಪೂರ್ವಿಕನಾದ ದಾವೀದನ ಮಾರ್ಗವನ್ನು ಬಿಟ್ಟು ಇಸ್ರಾಯೇಲರ ಮಾರ್ಗವನ್ನು ಹಿಡಿದನು.
၂
3 ೩ ಇದಲ್ಲದೆ, ಅವನು ಇಸ್ರಾಯೇಲಿನ ಅರಸುಗಳ ಮಾರ್ಗದಲ್ಲಿ ನಡೆದುದಲ್ಲದೆ, ಯೆಹೋವನು ಇಸ್ರಾಯೇಲರ ಎದುರಿನಿಂದ ಹೊರಡಿಸಿಬಿಟ್ಟ ಅನ್ಯಜನಾಂಗಗಳ ಅಸಹ್ಯವಾದ ಪೂಜಾಕಾರ್ಯಗಳನ್ನು ಅನುಸರಿಸಿ ತನ್ನ ಮಗನನ್ನು ಅಗ್ನಿಗೆ ಬಲಿಕೊಟ್ಟನು.
၃ဣသရေလမင်းတို့၏လမ်းစဉ်ကိုလိုက်လေ သည်။ သူသည်ဣသရေလအမျိုးသားတို့ချီ တက်လာချိန်၌ ထာဝရဘုရားနှင်ထုတ်တော် မူသောလူမျိုးတို့၏စက်ဆုတ်ရွံရှာဖွယ်ကောင်း သည့်ဋ္ဌလေ့ထုံးစံတို့ကိုအတုခိုးကာ မိမိ ၏သားတော်ကိုပင်လျှင်မီးရှို့ရာပူဇော်သကာ အဖြစ်ရုပ်တုတို့အားပူဇော်လေသည်။-
4 ೪ ಪೂಜಾಸ್ಥಳಗಳಲ್ಲಿಯೂ, ದಿನ್ನೆಗಳ ಮೇಲೆಯೂ, ಎಲ್ಲಾ ಹಸಿರು ಮರಗಳ ಕೆಳಗಡೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.
၄ရုပ်တုကိုးကွယ်ရာဌာနများဖြစ်သောတောင် ကုန်းများနှင့် အရိပ်ကောင်းသည့်သစ်ပင်အောက် တို့တွင်အာခတ်သည်ယဇ်များကိုပူဇော်၍ နံ့သာပေါင်းကိုမီးရှို့၏။
5 ೫ ಇವನ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನ್, ಇಸ್ರಾಯೇಲರ ಅರಸನೂ, ರೆಮಲ್ಯನ ಮಗನೂ ಆದ ಪೆಕಹ ಎಂಬುವವರು ಒಟ್ಟಿಗೆ ಸೇರಿ ಯೆರೂಸಲೇಮಿಗೆ ವಿರೋಧವಾಗಿ ಬಂದು ಆಹಾಜನನ್ನು ಸುತ್ತಿಕೊಂಡರು. ಆದರೆ ಅವನನ್ನು ಜಯಿಸುವುದು ಅವರಿಂದ ಆಗಲಿಲ್ಲ.
၅ရှုရိဘုရင်ရေဇိန်နှင့်ဣသရေလဘုရင်ပေကာ တို့သည် စစ်ချီ၍ယေရုရှလင်မြို့ကိုဝိုင်းရံ ထားကြသော်လည်း အာခတ်မင်းကိုမနှိမ်နင်း နိုင်ကြ။-
6 ೬ ಇದೇ ಕಾಲದಲ್ಲಿ ಅರಾಮ್ಯರ ಅರಸನಾದ ರೆಚೀನನು ಏಲತ್ ಪಟ್ಟಣವನ್ನು ಅರಾಮ್ ರಾಜ್ಯಕ್ಕೆ ಸೇರಿಸಿಕೊಂಡು ಅದರಲ್ಲಿದ್ದ ಯೆಹೂದ್ಯರನ್ನೆಲ್ಲಾ ಓಡಿಸಿದನು. ಎದೋಮ್ಯರು ಬಂದು ಅಲ್ಲಿ ವಾಸಿಸತೊಡಗಿದರು. ಅವರು ಇಂದಿನವರೆಗೂ ಅಲ್ಲೇ ವಾಸವಾಗಿದ್ದಾರೆ.
၆(ထိုအချိန်၌ပင်လျှင်ဧဒုံဘုရင်သည်ဧလတ် မြို့ကိုပြန်လည်သိမ်းယူပြီးနောက် ထိုပြည်တွင် နေထိုင်သူယုဒပြည်သားတို့အားနှင်ထုတ် လိုက်လေသည်။ ဧဒုံပြည်သားတို့သည်ဧလတ် မြို့သို့လာရောက်နေထိုင်၍ယနေ့တိုင်အောင် ရှိနေကြသတည်း။-)
7 ೭ ಆಹಾಜನು ಅಶ್ಶೂರ್ ದೇಶದ ಅರಸನಾದ ತಿಗ್ಲತ್ಪಿಲೆಸೆರನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ನಿನ್ನ ದಾಸನೂ, ಮಗನೂ ಆಗಿದ್ದೇನೆ. ನೀನು ಬಂದು ನನ್ನನ್ನು, ನನಗೆ ವಿರೋಧವಾಗಿ ಎದ್ದಿರುವ ಅರಾಮ್ಯರ ಮತ್ತು ಇಸ್ರಾಯೇಲರ ಅರಸುಗಳ ಕೈಗೆ ಸಿಕ್ಕದಂತೆ ತಪ್ಪಿಸು” ಎಂದು ಕೇಳಿಕೊಂಡನು.
၇အာခတ်မင်းသည်အာရှုရိဧကရာဇ်ဘုရင် တိဂလတ်ပိလေသာထံသို့``အကျွန်ုပ်သည် အရှင်၏သစ္စာတော်ခံ၊ အစေခံတစ်ဦးဖြစ် ပါ၏။ အကျွန်ုပ်တို့ကိုတိုက်ခိုက်လျက်နေသူ ရှုရိဘုရင်နှင့် ဣသရေလဘုရင်တို့လက်မှ ကယ်တော်မူပါ'' ဟုသဝဏ်လွှာရေး၍သံ တမန်များစေလွှတ်ပေးပို့လိုက်၏။-
8 ೮ ಇದಲ್ಲದೆ, ಆಹಾಜನು ಯೆಹೋವನ ಆಲಯದಲ್ಲಿಯೂ, ಅರಮನೆಯ ಭಂಡಾರದಲ್ಲಿಯೂ ಇದ್ದ, ಬೆಳ್ಳಿಬಂಗಾರವನ್ನು ತೆಗೆದುಕೊಂಡು ಅಶ್ಶೂರದ ಅರಸನಿಗೆ ಕಾಣಿಕೆಯಾಗಿ ಕಳುಹಿಸಿದನು.
၈အာခတ်သည်ဗိမာန်တော်နှင့်နန်းတော်ဘဏ္ဍာ တိုက်ထဲမှရွှေ၊ ငွေတို့ကိုယူ၍ဧကရာဇ် မင်းအားလက်ဆောင်ပဏ္ဏာအဖြစ်ဆက်သ လေသည်။-
9 ೯ ಅಶ್ಶೂರದ ಅರಸನು ಇವನ ಮಾತಿಗೆ ಒಪ್ಪಿ, ದಮಸ್ಕ ಪಟ್ಟಣಕ್ಕೆ ವಿರೋಧವಾಗಿ ಹೋಗಿ ರೆಚೀನನನ್ನು ಕೊಂದು ನಿವಾಸಿಗಳನ್ನು ಸೆರೆಹಿಡಿದು, ಕೀರ್ ಪ್ರಾಂತ್ಯಕ್ಕೆ ತಂದನು.
၉တိဂလတ်ပိလေသာသည်အာခတ်မင်း၏ပန် ကြားချက်အရ မိမိ၏တပ်မတော်နှင့်အတူ ဒမာသက်မြို့ကိုချီတက်သိမ်းယူပြီးလျှင် ရေဇိန်မင်းအားလုပ်ကြံ၍ပြည်သူတို့အား ကိရမြို့သို့သုံ့ပန်းများအဖြစ်ဖမ်းသွား တော်မူ၏။
10 ೧೦ ಅರಸನಾದ ಆಹಾಜನು ಅಶ್ಶೂರದ ಅರಸನಾದ ತಿಗ್ಲತ್ಪಿಲೆಸೆರನ ದರ್ಶನಕ್ಕಾಗಿ ದಮಸ್ಕಕ್ಕೆ ಹೋದನು. ಅವನು ಅಲ್ಲಿದ್ದ ಯಜ್ಞವೇದಿಯನ್ನು ಕಂಡು, ಅದರ ಒಂದು ಪ್ರತಿಮೆಯನ್ನೂ, ಅದರ ಎಲ್ಲಾ ಅಲಂಕಾರದ ನಕ್ಷೆಯನ್ನೂ ಬರೆಯಿಸಿ, ಯಾಜಕನಾದ ಊರೀಯನಿಗೆ ಕಳುಹಿಸಿದನು.
၁၀အာခတ်မင်းသည်ဧကရာဇ်ဘုရင်တိဂလတ် ပိလေသာကိုတွေ့ဆုံရန် ဒမာသက်မြို့သို့သွား သောအခါ ထိုမြို့တွင်ရှိသောယဇ်ပလ္လင်ကိုမြင် သဖြင့် ထိုယဇ်ပလ္လင်၏ပုံတူတစ်ခုကိုစေ့စပ် သေချာစွာပြုလုပ်ပြီးလျှင် ယဇ်ပုရောဟိတ် ဥရိယထံသို့ပေးပို့လိုက်၏။-
11 ೧೧ ಅರಸನಾದ ಆಹಾಜನು ದಮಸ್ಕದಿಂದ ಬರುವಷ್ಟರಲ್ಲಿ ಊರೀಯನು ಅರಸನಿಂದ ತನಗೆ ಬಂದ ಮಾದರಿಯ ಪ್ರಕಾರ ಒಂದು ಯಜ್ಞವೇದಿಯನ್ನು ಮಾಡಿಸಿಟ್ಟಿದ್ದನು.
၁၁သို့ဖြစ်၍ဥရိယသည်ထိုပုံစံအတိုင်း တိကျ စွာယဇ်ပလ္လင်တစ်ခုကိုအာခတ်မင်းပြန်၍ မရောက်မီ အပြီးဆောက်လုပ်ထားလေသည်။-
12 ೧೨ ಅರಸನು ದಮಸ್ಕದಿಂದ ಹಿಂತಿರುಗಿ ಬಂದ ಮೇಲೆ ಆ ಯಜ್ಞವೇದಿಯನ್ನು ಕಂಡು, ಸಮೀಪಕ್ಕೆ ಹೋಗಿ, ಅದರ ಮೇಲೆ ಬಲಿಗಳನ್ನು ಅರ್ಪಿಸಿದನು.
၁၂ဒမာသက်မြို့မှပြန်၍ရောက်ရှိလာသော အခါ အာခတ်မင်းသည်တည်ဆောက်ပြီး သည့်ယဇ်ပလ္လင်ကိုမြင်လေလျှင်၊-
13 ೧೩ ತಾನು ತಂದ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯನೈವೇದ್ಯ ಇವುಗಳನ್ನು ಸಮರ್ಪಿಸಿ ಸಮಾಧಾನಯಜ್ಞಕ್ಕಾಗಿ ವಧಿಸಿದ ಪಶುಗಳ ರಕ್ತವನ್ನು ಅದರ ಮೇಲೆ ಚಿಮುಕಿಸಿದನು.
၁၃ထိုပလ္လင်ပေါ်တွင်ယဇ်ကောင်များနှင့်ဘောဇဉ် ပူဇော်သကာများကိုမီးရှို့ပူဇော်၏။ ထိုနောက် စပျစ်ရည်ပူဇော်သကာများနှင့် မိတ်သဟာယ ယဇ်ဆိုင်ရာသွေးတို့ကိုလည်း ထိုယဇ်ပလ္လင်ပေါ် တွင်သွန်းလောင်းလေသည်။-
14 ೧೪ ಇದಲ್ಲದೆ, ಯೆಹೋವನ ಆಲಯಕ್ಕೂ, ತನ್ನ ವೇದಿಗೂ ಮಧ್ಯದಲ್ಲಿದ್ದು ಆ ವರೆಗೂ ಯೆಹೋವನ ಸೇವೆಗೆ ಉಪಯೋಗಿಸಲ್ಪಡುತ್ತಿದ್ದ ತಾಮ್ರ ಯಜ್ಞವೇದಿಯನ್ನೂ ಆಲಯದ ಎದುರಿನಿಂದ ತೆಗೆಯಿಸಿ, ತನ್ನ ಯಜ್ಞವೇದಿಯ ಉತ್ತರ ದಿಕ್ಕಿನಲ್ಲಿಡಿಸಿದನು.
၁၄ထာဝရဘုရားအားဆက်ကပ်ထားသည့်ကြေး ဝါပလ္လင်မှာ ယဇ်ပလ္လင်သစ်နှင့်ဗိမာန်တော်စပ်ကြား တွင်တည်ရှိနေသောကြောင့် အာခတ်သည်ထို ပလ္လင်ကိုယဇ်ပလ္လင်သစ်၏မြောက်ဘက်သို့ပြောင်း ရွှေ့လိုက်ပြီးလျှင်၊-
15 ೧೫ ಅರಸನಾದ ಆಹಾಜನು ಯಾಜಕನಾದ ಊರೀಯನಿಗೆ, “ಉದಯಕಾಲದಲ್ಲಿ ಸರ್ವಾಂಗಹೋಮವನ್ನೂ, ಸಾಯಂಕಾಲದಲ್ಲಿ ಧಾನ್ಯನೈವೇದ್ಯವನ್ನೂ, ಅರಸನು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ ಇವುಗಳನ್ನೂ, ಜನರು ತರುವ ಸರ್ವಾಂಗಹೋಮದ್ರವ್ಯ, ಧಾನ್ಯನೈವೇದ್ಯ, ಪಾನದ್ರವ್ಯ ಇವುಗಳನ್ನೂ ಈ ಮಹಾವೇದಿಯ ಮೇಲೆ ಸಮರ್ಪಿಸಬೇಕು ಮತ್ತು ಸರ್ವಾಂಗಹೋಮಯಜ್ಞಗಳಿಗಾಗಿ ವಧಿಸುವ ಪಶುಗಳ ರಕ್ತವನ್ನು ಇದರ ಮೇಲೆಯೇ ಚಿಮುಕಿಸಬೇಕು. ತಾಮ್ರ ಯಜ್ಞವೇದಿಯನ್ನು ಕುರಿತಾಗಿ ನಾನೇ ಆಲೋಚಿಸಿ ನೋಡಿಕೊಳ್ಳುವೆನು” ಎಂದು ಹೇಳಿದನು.
၁၅ဥရိယအား``ငါ၏ယဇ်ပလ္လင်ကြီးကိုနံနက်ချိန် မီးရှို့ရာယဇ်နှင့် ညနေချိန်ဘောဇဉ်ပူဇော်သကာ များအတွက်လည်းကောင်း၊ ဘုရင်နှင့်ပြည်သူတို့ ၏မီးရှို့ရာယဇ်နှင့်ဘောဇဉ်ပူဇော်သကာများ၊ ပြည်သူတို့၏စပျစ်ရည်ပူဇော်သကာများ အတွက်လည်းကောင်းအသုံးပြုလော့။ ထိုယဇ် ပလ္လင်ပေါ်တွင်ယဇ်ကောင်ရှိသမျှတို့၏သွေး ကိုသွန်းလောင်းလော့။ ကြေးဝါပလ္လင်မှာငါ အတိတ်နိမိတ်ဖတ်ခြင်းကိုမေးလျှောက်ရာ ဖြစ်ရမည်'' ဟုအမိန့်ပေးသည့်အတိုင်း၊-
16 ೧೬ ಯಾಜಕನಾದ ಊರೀಯನು ಅರಸನಾದ ಆಹಾಜನು ಹೇಳಿದಂತೆಯೇ ಮಾಡಿದನು.
၁၆ဥရိယသည်ပြုလေ၏။
17 ೧೭ ಅರಸನಾದ ಆಹಾಜನು ಅಶ್ಶೂರದ ಅರಸನ ನಿಮಿತ್ತವಾಗಿ ಯಜ್ಞವೇದಿಗಳ ಪಟ್ಟಿಗಳನ್ನು ಕತ್ತರಿಸಿದನು, ಅವುಗಳ ಮೇಲಿದ್ದ ಗಂಗಾಳಗಳನ್ನು ತೆಗೆದಿಟ್ಟನು. ಕಡಲೆನಿಸುವ ಪಾತ್ರೆಯನ್ನು ತಾಮ್ರದ ಹೋರಿಗಳ ಮೇಲಣಿಂದ ಇಳಿಸಿ ಕಲ್ಲುಕಟ್ಟೆಗಳ ಮೇಲೆ ಇಡಿಸಿದನು.
၁၇အာခတ်မင်းသည်ဗိမာန်တော်တွင်အသုံးပြု သည့်ကြေးဝါလှည်းတို့ကိုယူ၍ ယင်းတို့အပေါ် ရှိအင်တုံများကိုဖယ်ရှားလိုက်လေသည်။ သူ သည်ကြေးဝါနွားလားဥသဘရုပ်တစ်ဆယ့် နှစ်ကောင်၏ကျောက်ကုန်းထက်မှ ကြေးဝါကန် များကိုလည်းယူ၍အောက်ခံကျောက်ပေါ်တွင် ထားရှိလေသည်။-
18 ೧೮ ಯೆಹೋವನ ಆಲಯದ ಪ್ರಾಕಾರದೊಳಗೆ ಸಬ್ಬತ್ ದಿನದ ಆರಾಧನೆಗಾಗಿ ರಾಜರಿಗಾಗಿ ಕಟ್ಟಲ್ಪಟ್ಟಿದ್ದ ಮಂಟಪವನ್ನು ಹಾಗೂ ಅರಮನೆಯಿಂದ ದೇವಸ್ಥಾನಕ್ಕೆ ಹೋಗುವ ಹೊರಗಿನ ಬಾಗಿಲನ್ನೂ ಬದಲಾಯಿಸಿದವನು ಅಶ್ಶೂರದ ಅರಸನಾದ ಈ ಆಹಾಜನೇ.
၁၈ထိုနောက်အာရှုရိဧကရာဇ်ဘုရင်နှစ်သက် စေရန် အာခတ်သည်ဗိမာန်တော်ရှိရာဇပလ္လင် တည်ရာစင်မြင့်ကိုဖယ်ရှားပြီးလျှင် ဘုရင် အတွက်သီးသန့်ထားသည့်ဗိမာန်တော် အဝင်ဝကိုလည်းပိတ်လိုက်၏။
19 ೧೯ ಆಹಾಜನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಯೆಹೂದ್ಯರ ರಾಜಕಾಲ ಇತಿಹಾಸ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಿದೆ.
၁၉အာခတ်မင်းလုပ်ဆောင်ခဲ့သောအခြားအမှု အရာရှိသမျှကို ယုဒရာဇဝင်တွင်ရေး ထားသတည်း။-
20 ೨೦ ಆಹಾಜನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನ ಪಟ್ಟಣದೊಳಗೆ ಅವನ ಕುಟುಂಬ ಸ್ಮಶಾನದಲ್ಲಿ ಸಮಾಧಿಮಾಡಿದರು. ಅವನ ನಂತರ ಅವನ ಮಗನಾದ ಹಿಜ್ಕೀಯನು ಅರಸನಾದನು.
၂၀အာခတ်ကွယ်လွန်သောအခါ သူ့အားဒါဝိဒ် မြို့ရှိဘုရင်များ၏သင်္ချိုင်းတော်တွင်သင်္ဂြိုဟ် ကြ၏။ ထိုနောက်သူ၏သားတော်ဟေဇကိ သည် ခမည်းတော်၏အရိုက်အရာကိုဆက်ခံ ၍နန်းတက်လေသည်။