< ಅರಸುಗಳು - ದ್ವಿತೀಯ ಭಾಗ 1 >
1 ೧ ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
၁ဣသရေလဘုရင်အာဟပ်ကွယ်လွန်သောအခါ မောဘပြည်သည်ဣသရေလပြည်ကိုပုန်ကန် လေသည်။
2 ೨ ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
၂ဣသရေလဘုရင်အာခဇိသည် ရှမာရိမြို့ နန်းတော်အမိုးထက်ရှိလသာဆောင်မှလိမ့် ကျသဖြင့် ပြင်းထန်စွာဒဏ်ရာရရှိ၏။ သို့ ဖြစ်၍သူသည်ဖိလိတ္တိပြည်ဧကြုန်မြို့၏ဘုရား ဗာလဇေဗုပ်ထံသံတမန်များစေလွှတ်ကာ မိမိပြန်လည်ကျန်းမာလာမည်မလာမည် ကိုစုံစမ်းမေးမြန်းစေ၏။-
3 ೩ ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
၃သို့ရာတွင်ထာဝရဘုရား၏ကောင်းကင်တမန် သည် တိရှဘိမြို့သားပရောဖက်ဧလိယ အား``အာခဇိမင်း၏သံတမန်များနှင့်သွား ရောက်တွေ့ဆုံလော့။ သူတို့အားဣသရေလ ပြည်တွင်ဘုရားမရှိသောကြောင့် ဧကြုန် ဘုရားဗာလဇေဗုပ်ထံသွားရောက်စုံစမ်း မေးမြန်းရသလောဟုမေးလော့။-
4 ೪ ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
၄မင်းကြီးအား`မိမိ၏သလွန်မှတစ်ဖန်ပြန်၍ ထနိုင်မည်မဟုတ်ကြောင်း၊ သေမည်ဖြစ်ကြောင်း ထာဝရဘုရားမိန့်တော်မူသည်ကိုသင်တို့ လျှောက်ထားကြလော့' ဟုဆင့်ဆိုရမည်'' ဟု မိန့်တော်မူသည်။ ဧလိယသည်ထာဝရဘုရားမိန့်မှာတော်မူသည့် အတိုင်းပြုသဖြင့်၊-
5 ೫ ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
၅သံတမန်တို့သည်မင်းကြီးထံသို့ပြန်ကြ၏။ မင်းကြီးက``အဘယ်ကြောင့်သင်တို့ပြန်လာ ကြသနည်း'' ဟုမေးတော်မူ၏။
6 ೬ ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
၆ထိုသူတို့က``လူတစ်ယောက်သည် အကျွန်ုပ်တို့နှင့် လာရောက်တွေ့ဆုံပြီးလျှင် ထာဝရဘုရားသည် အရှင့်အား`ဣသရေလပြည်တွင်ဘုရားမရှိ သောကြောင့် ဧကြုန်ဘုရားထံသံတမန်များ စေလွှတ်၍စုံစမ်းမေးမြန်းရသလော။ သင်သည် သင်၏သလွန်မှတစ်ဖန်ပြန်၍ထနိုင်မည် မဟုတ်။ သေလိမ့်မည်'' ဟုမိန့်တော်မူကြောင်း အရှင့်ထံပြန်ကြားလျှောက်ထားရန် အကျွန်ုပ် တို့အားပြောကြားသွားပါသည်'' ဟုသံ တော်ဦးတင်ကြ၏။
7 ೭ ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
၇မင်းကြီးက``ထိုသူ၏ပုံပန်းသဏ္ဌာန်ကား အဘယ်သို့နည်း'' ဟုမေးတော်မူ၏။
8 ೮ ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
၈ထိုသူတို့က``သူသည်တိရစ္ဆာန်သားရေဖြင့် ချုပ်လုပ်ထားသည့်ဝတ်လုံကိုဝတ်၍ သားရေ ခါးပတ်ကိုစည်းထားပါသည်'' ဟုလျှောက် ကြ၏။ မင်းကြီးက``ထိုသူသည်ဧလိယဖြစ် ပါသည်တကား'' ဟုမြွက်ဆိုတော်မူ၏။
9 ೯ ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
၉ထိုနောက်မင်းကြီးသည်တပ်မှူးတစ်ယောက်ကို လူငါးဆယ်တပ်နှင့်အတူဧလိယထံသို့ စေလွှတ်တော်မူ၏။ တပ်မှူးသည်တောင်ကုန်း တစ်ခုပေါ်တွင်ဧလိယထိုင်နေသည်ကိုတွေ့ မြင်သဖြင့် သူ့အား``ဘုရားသခင်၏အစေခံ၊ ဆင်းခဲ့လော့။ ဘုရင်အမိန့်တော်ရှိသည်'' ဟု ဆို၏။
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၀ဧလိယက``ငါသည်ဘုရားသခင်၏အစေ ခံမှန်လျှင် ကောင်းကင်မှမီးကျ၍သင်နှင့်သင် ၏တပ်သားတို့ကိုကျွမ်းလောင်ပါစေသော'' ဟု ဆိုသော်ချက်ချင်းပင်မီးကျလာသဖြင့် တပ်မှူး နှင့်သူ၏တပ်သားတို့သည်ကျွမ်းလောင်လေ ၏။
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
၁၁မင်းကြီးသည်အခြားတပ်မှူးတစ်ယောက်နှင့် လူငါးဆယ်တပ်ကိုစေလွှတ်ပြန်၏။ သူတို့ သည်ဧလိယထံသို့သွား၍``ဘုရားသခင် ၏အစေခံ၊ အမြန်ဆင်းခဲ့လော့။ ဘုရင် အမိန့်တော်ရှိသည်'' ဟုဆို၏။
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၂ဧလိယက``ငါသည်ဘုရားသခင်၏အစေ ခံမှန်လျှင် ကောင်းကင်မှမီးကျ၍သင်နှင့်သင် ၏တပ်သားတို့ကိုကျွမ်းလောင်ပါစေသော'' ဟု ဆိုသော်ချက်ချင်းပင်ကောင်းကင်မှမီးကျ သဖြင့် တပ်မှူးနှင့်တပ်သားတို့သည်ကျွမ်း လောင်လေ၏။
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
၁၃မင်းကြီးသည်တပ်မှူးတစ်ယောက်နှင့်လူငါး ဆယ်တပ်ကိုနောက်တစ်ကြိမ်စေလွှတ်ပြန်၏။ ထိုတပ်မှူးသည်တောင်ကုန်းပေါ်သို့တက်၍ ဧလိယရှေ့တွင်ဒူးထောက်လျက်``ဘုရားသခင်၏အစေခံ၊ အကျွန်ုပ်နှင့်အကျွန်ုပ်၏ တပ်သားတို့ကိုသနားတော်မူပါ။ အကျွန်ုပ် တို့၏အသက်ကိုချမ်းသာပေးတော်မူပါ။-
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
၁၄အခြားတပ်မှူးနှစ်ယောက်နှင့်သူတို့၏တပ် သားများသည် ကောင်းကင်မှမီးကျ၍သေ ရကြပါ၏။ သို့ရာတွင်အကျွန်ုပ်ကိုသနား တော်မူပါ'' ဟုတောင်းပန်၏။
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
၁၅ထာဝရဘုရား၏ကောင်းကင်တမန်ကဧလိယ အား``မကြောက်နှင့်။ ထိုသူနှင့်အတူလိုက်သွား လော့'' ဟုဆိုသဖြင့် ဧလိယသည်မင်းကြီးထံ သို့တပ်မှူးနှင့်အတူလိုက်သွားပြီးလျှင်၊-
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
၁၆``ထာဝရဘုရားက`ဣသရေလပြည်တွင် ဗျာဒိတ်တော်ကိုမေးလျှောက်ရန် ဘုရားမရှိ သောကြောင့်ဧကြုန်မြို့၏ဘုရားဗာလဇေဗုပ် အားစုံစမ်းမေးမြန်းရန်သံတမန်တို့ကိုစေ လွှတ်ရသလော။ သို့ဖြစ်၍သင်သည်ပြန်လည် ကျန်းမာလာလိမ့်မည်မဟုတ်။ သေလိမ့်မည်' ဟုမိန့်တော်မူ၏'' ဟုဆင့်ဆိုလေ၏။
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
၁၇ဧလိယဆင့်ဆိုသောထာဝရဘုရား၏ဗျာ ဒိတ်တော်အတိုင်း အာခဇိသည်ကွယ်လွန်လေ၏။ အာခဇိတွင်သားတော်မရှိသဖြင့်ညီတော် ယောရံသည် ယောရှဖတ်၏သားယုဒဘုရင် ယဟောရံ၏နန်းစံဒုတိယနှစ်၌နန်းတက် လေသည်။
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
၁၈အာခဇိမင်း၏အခြားလုပ်ဆောင်ချက်ရှိ သမျှတို့ကို ဣသရေလရာဇဝင်တွင်ရေး ထားသတည်း။