< ಅರಸುಗಳು - ದ್ವಿತೀಯ ಭಾಗ 1 >

1 ಅಹಾಬನು ಮರಣಹೊಂದಿದ ನಂತರ ಮೋವಾಬ್ಯರು ಇಸ್ರಾಯೇಲರಿಗೆ ವಿರುದ್ಧವಾಗಿ ದಂಗೆ ಎದ್ದರು.
အာဟပ်မင်း သေသောနောက်၊ မောဘပြည် သည် ဣသရေလရှင်ဘုရင်ကို ပုန်ကန်လေ၏။
2 ಅಹಜ್ಯನು ಸಮಾರ್ಯದಲ್ಲಿ ತನ್ನ ಮೇಲುಪ್ಪರಿಗೆಯ ಕಿಟಿಕಿಯಿಂದ ಬಿದ್ದು ಅಸ್ವಸ್ಥನಾದಾಗ ತನ್ನ ಸೇವಕರನ್ನು ಕರೆದು ಅವರಿಗೆ, “ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನ ಸನ್ನಿಧಿಗೆ ಹೋಗಿ ನಾನು ಈ ಅಸ್ವಸ್ಥತೆಯಿಂದ ವಾಸಿಯಾಗುವೆನೋ ಇಲ್ಲವೋ ಎಂಬುದನ್ನು ವಿಚಾರಿಸಿರಿ” ಎಂದು ಹೇಳಿಕಳುಹಿಸಿದನು.
အာခဇိမင်းသည် ရှမာရိမြို့၌ အထက်အခန်း ပြတင်းပေါက်မှ ကျ၍နာနေသောကြောင့်၊ ငါသည် ဤအနာမှာ ထမြောက်မည်လောဟု ဧကြုန်မြို့၏ ဘုရား ဗာလဇေဗုပ်သို့ သွား၍ မေးမြန်းကြဟု မှာထား၍ သံတမန်တို့ကို စေလွှတ်လေ၏။
3 ಆಗ ಯೆಹೋವನ ದೂತನು ತಿಷ್ಬೀಯನಾದ ಎಲೀಯನಿಗೆ, “ನೀನು ಹೋಗಿ ಸಮಾರ್ಯದ ಅರಸನ ಸೇವಕರನ್ನು ಎದುರುಗೊಂಡು ಅವರಿಗೆ, ‘ನೀವು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಹೋಗುವುದೇನು ಇಸ್ರಾಯೇಲರಲ್ಲಿ ದೇವರಿಲ್ಲವೋ?
ထာဝရဘုရား၏ ကောင်းကင်တမန်သည် တိရှဘိမြို့သား ဧလိယအားလည်း၊ ရှမာရိရှင်ဘုရင် စေလွှတ်သော သံတမန်တို့ကို ကြိုဆိုခြင်းငှါ ထသွားလော့။ ဣသရေလပြည်၌ ဘုရားသခင်မရှိသောကြောင့်၊ ဧကြုန် မြို့၏ဘုရားဗာလဇေဗုပ်သို့သွား၍ မေးမြန်းရသလော။
4 ಅಹಜ್ಯನು ತಾನು ಹತ್ತಿ ಮಲಗಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂಬುದಾಗಿ ಹೇಳು ಎಂದು ಆಜ್ಞಾಪಿಸಿದನು. ಎಲೀಯನು ಹಾಗೆಯೇ ಮಾಡಿದನು.
ထိုကြောင့်ထာဝရဘုရားမိန့်တော်မူသည်ကား၊ သင်သည် ယခု တက်သောသာလွန်ပေါ်က နောက်တဖန် မဆင်းရ၊ စင်စစ်သေရမည်ဟု သူတို့အားဆင့်ဆိုရမည် အကြောင်းမိန့်တော်မူသည်အတိုင်း၊ ဧလိယသွားလေ၏။
5 ದೂತರು ಅರಸನ ಬಳಿಗೆ ಹಿಂದಿರುಗಿ ಬಂದಾಗ, “ನೀವು ಹಿಂದಿರುಗಿ ಬಂದ್ದದೇಕೆ?” ಎಂದು ಕೇಳಿದನು.
သံတမန်တို့သည် ပြန်လာသောအခါ ရှင်ဘုရင်က၊ အဘယ်ကြောင့်ယခုပြန်လာကြသနည်းဟု မေးလျှင်၊
6 ಅದಕ್ಕೆ ಅವರು, “ಒಬ್ಬ ಮನುಷ್ಯನು ನಮ್ಮನ್ನು ಎದುರುಗೊಂಡು ನಮಗೆ, ‘ನಿಮ್ಮನ್ನು ಕಳುಹಿಸಿದ ಅರಸನ ಬಳಿಗೆ ಹೋಗಿ’ ಯೆಹೋವನ ಹೆಸರಿನಲ್ಲಿ ಅವನಿಗೆ, ‘ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ಕಳುಹಿಸುವುದೇನು? ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇ ಬೇಕು’ ಎಂಬುದಾಗಿ ಹೇಳಿರಿ ಎಂದು ಆಜ್ಞಾಪಿಸಿದನು” ಎಂದು ಉತ್ತರ ಕೊಟ್ಟರು.
သူတို့က၊ လူတယောက်သည် ကျွန်တော်တို့ကို ကြိုဆိုခြင်းငှါ လာ၍ သင်တို့ကိုစေလွှတ်သော ရှင်ဘုရင် ထံသို့ ပြန်ကြ။ ထာဝရဘုရား မိန့်တော်မူသည်ကား၊ ဣသရလပြည်၌ ဘုရားသခင် မရှိသောကြောင့်၊ ဧကြုန် မြို့၏ ဘုရားဗာလဇေဗုပ်သို့သွား၍ မေးမြန်းရသလော။ ထိုကြောင့် သင်သည်ယခုတတ်သော သာလွန်ပေါ်က နောက်တဖန်မဆင်းရ။ စင်စစ်သေရမည်ဟု ပြောရမည် အကြောင်း မှာထားပါသည်ဟု လျှောက်ကြ၏။
7 ಅರಸನು ತಿರುಗಿ ಅವರನ್ನು, “ನಿಮಗೆ ಎದುರಾಗಿ ಹೀಗೆ ಹೇಳಿದ ಮನುಷ್ಯನು ಹೇಗಿದ್ದನು?” ಎಂದು ಕೇಳಲು,
ရှင်ဘုရင်ကလည်း၊ သင်တို့ကိုကြိုဆိုခြင်းငှါ လာ၍ ဤသို့ပြောသောသူကား အဘယ်သို့သော သူနည်းဟု မေးလျှင်၊
8 ಅವರು, “ಅವನು ಕಂಬಳಿ ಹೊದ್ದುಕೊಂಡಿದ್ದನು. ಅವನ ಸೊಂಟಕ್ಕೆ ತೊಗಲಿನ ನಡುಕಟ್ಟು ಇತ್ತು” ಎಂದು ಉತ್ತರ ಕೊಟ್ಟರು. ಅದಕ್ಕೆ ಅರಸನು, “ಆ ಮನುಷ್ಯನು ತಿಷ್ಬೀಯನಾದ ಎಲೀಯನೇ ಆಗಿರಬೇಕು” ಎಂದನು.
သူတို့က၊ ထိုသူသည် ကိုယ်၌အမွေးများ၍ သားရေခါးပန်းကို စည်းသောသူ ဖြစ်ပါသည်ဟု လျှောက် ကြသော်၊ ထိုသူသည် တိရှဘိမြို့သား ဧလိယဖြစ်လိမ့်မည် ဟု ရှင်ဘုရင်ဆိုလျက်၊
9 ಆಗ ಅರಸನು ಎಲೀಯನನ್ನು ಕರೆತರುವುದಕ್ಕಾಗಿ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಹೋಗಿ ಎಲೀಯನು ಬೆಟ್ಟದ ತುದಿಯಲ್ಲಿ ಕುಳಿತಿರುವುದನ್ನು ಕಂಡು ಅವನಿಗೆ, “ದೇವರ ಮನುಷ್ಯನೇ ಇಳಿದು ಬಾ ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
လူငါးကျိပ်အုပ်သော တပ်မှူးကိုစေလွှတ်၍၊ တပ်မှူးသည် တောင်ပေါ်မှာထိုင်သော ဧလိယထံသို့ ရောက်ပြီးလျှင်၊ အိုဘုရားသခင်၏လူ၊ သင်သည် ဆင်းရ မည်အကြောင်း၊ ရှင်ဘုရင်အမိန့်တော်ရှိသည်ဟုဆို၏။
10 ೧೦ ಅದಕ್ಕೆ ಎಲೀಯನು ಪಂಚದಶಾಧಿಪತಿಗೆ, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၀ဧလိယကလည်း၊ ငါသည် ဘုရားသခင်၏လူမှန်လျှင်၊ ကောင်းကင်ကမီးကျ၍ သင်နှင့်သင်၏လူ ငါးကျိပ် တို့ကို လောင်ပါစေဟု လူငါးကျိပ်အုပ်သော တပ်မှူးအားဆိုသည်အတိုင်း၊ ကောင်းကင်က မီးကျ၍ သူနှင့်သူ၌ ပါသောလူငါးကျိပ်တို့ကို လောင်လေ၏။
11 ೧೧ ತರುವಾಯ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನೂ, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಹೋಗಿ ಎಲೀಯನಿಗೆ “ದೇವರ ಮನುಷ್ಯನೇ ಬೇಗನೆ ಇಳಿದು ಬಾ, ಅರಸನು ನಿನ್ನನ್ನು ಕರೆಯುತ್ತಾನೆ” ಎಂದು ಹೇಳಿದನು.
၁၁တဖန်လူငါးကျိပ်အုပ်သော တပ်မှူးတယောက်ကို ရှင်ဘုရင်စေလွှတ်၍၊ ထိုတပ်မှူးက၊ အိုဘုရားသခင်၏ လူ၊ သင်သည် အလျင်အမြန် ဆင်းရမည်အကြောင်း ရှင်ဘုရင် အမိန့်တော်ရှိသည်ဟုဆို၏။
12 ೧೨ ಆಗ ಎಲೀಯನು, “ನಾನು ದೇವರ ಮನುಷ್ಯನಾಗಿರುವುದಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ, ನಿನ್ನ ಐವತ್ತು ಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ” ಎಂದನು. ಕೂಡಲೆ ಆಕಾಶದಿಂದ ಬೆಂಕಿ ಬಿದ್ದು ಅವನನ್ನೂ, ಅವನ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.
၁၂ဧလိယကလည်း၊ ငါသည်ဘုရားသခင်၏ လူမှန်လျှင် ကောင်းကင်က မီးကျ၍ သင်နှင့်သင်၏လူငါးကျိပ် တို့ကို လောင်ပါစေဟု သူတို့အား ဆိုသည်အတိုင်း၊ ဘုရားသခင်၏မီးသည် ကောင်းကင်ကကျ၍ သူနှင့်သူ၌ ပါသောလူငါးကျိပ်တို့ကို လောင်လေ၏။
13 ೧೩ ಆಗ ಅರಸನು ಇನ್ನೊಬ್ಬ ಪಂಚದಶಾಧಿಪತಿಯನ್ನು, ಅವನ ಐವತ್ತು ಮಂದಿ ಸಿಪಾಯಿಗಳನ್ನೂ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಬೇಡಿಕೊಂಡು ಅವನಿಗೆ, “ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.
၁၃တဖန်လူငါးကျိပ်အုပ်သော တတိယတပ်မှူးကို ရှင်ဘုရင်စေလွှတ်သဖြင့်၊ ထိုတပ်မှူးသည် တက်၍ ဧလိယရှေ့မှာဒူးထောက်လျက်၊ အိုဘုရားသခင်၏လူ၊ ကျွန်တော်အသက်နှင့် ကိုယ်တော် ကျွန် ဤလူငါးကျိပ်တို့၏ အသက်ကို နှမြောတော်မူပါ။
14 ೧೪ ಆಕಾಶದಿಂದ ಬೆಂಕಿಬಿದ್ದು ಮೊದಲು ಬಂದ ಇಬ್ಬರು ಪಂಚದಶಾಧಿಪತಿಗಳನ್ನೂ, ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲಾ, ನನ್ನ ಪ್ರಾಣವಾದರೂ ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದೆಂದು ಎಣಿಸಲ್ಪಡಲಿ” ಎಂದು ಬೇಡಿಕೊಂಡನು.
၁၄ကောင်းကင်က မီးကျ၍ အခြားသော တပ်မှူး နှစ်ယောက်နှင့် သူတို့၌ ပါသောလူတရာကို လောင် သော်လည်း၊ ကျွန်တော်အသက်ကို နှမြောတော်မူပါဟု တောင်းပန်လေ၏။
15 ೧೫ ಆಗ ಯೆಹೋವನ ದೂತನು ಎಲೀಯನಿಗೆ, “ನೀನು ಇವನ ಸಂಗಡ ಹೋಗು, ಅವನಿಗೆ ಹೆದರಬೇಡ” ಎಂದು ಹೇಳಿದ್ದರಿಂದ ಅವನು ಎದ್ದು, ಇವನ ಜೊತೆಯಲ್ಲಿ ಅರಸನ ಬಳಿಗೆ ಹೋದನು.
၁၅ထာဝရဘုရား၏ ကောင်းကင်တမန်ကလည်း၊ သူနှင့်အတူ ဆင်းသွားလော့။ သူ့ကို မကြောက်နှင့်ဟု ဧလိယအားဆိုသည်အတိုင်း၊ ဧလိယသည်ထ၍ ရှင်ဘုရင် ထံသို့ ရောက်လျှင်၊
16 ೧೬ ನಂತರ ಎಲೀಯನು ಅರಸನಿಗೆ, “ನೀನು ಎಕ್ರೋನಿನ ದೇವರಾದ ಬಾಳ್ಜೆಬೂಬನನ್ನು ವಿಚಾರಿಸುವುದಕ್ಕೆ ದೂತರನ್ನು ಕಳುಹಿಸಿದ್ದೇನು? ಅಂಥ ವಿಚಾರ ಮಾಡುವುದಕ್ಕೆ ಇಸ್ರಾಯೇಲರಲ್ಲಿ ದೇವರಿಲ್ಲವೋ? ನೀನು ಹೀಗೆ ಮಾಡಿದ್ದರಿಂದ ಹತ್ತಿದ ಮಂಚದಿಂದ ಇಳಿಯದೆ ಸಾಯಲೇಬೇಕು ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳಿದನು.
၁၆ထာဝရဘုရား မိန့်တော်မူသည်ကား၊ သင်သည် ဧကြုန်မြို့၏ ဘုရားဗလဇေဗုပ်၌ မေးမြန်းခြင်းငှါ အဘယ်ကြောင့် သံတမန်တို့ကိုစေလွှတ်သနည်း။ မေးမြန်းစရာဘို့ ဣသရေလပြည်၌ ဘုရားသခင်မရှိ သောကြောင့် ထိုသို့ပြုသလော။ သို့ဖြစ်၍ သင်သည် ယခုတက်သော သာလွန်ပေါ်က နောက်တဖန်မဆင်းရ။ စင်စစ်သေရ မည်ဟု မိန့်တော်မူကြောင်းကို ဆင့်ဆို၏။
17 ೧೭ ಯೆಹೋವನು ಎಲೀಯನ ಮುಖಾಂತರವಾಗಿ ಮುಂತಿಳಿಸಿದಂತೆ ಅರಸನು ಸತ್ತನು. ಅವನಿಗೆ ಮಗನಿಲ್ಲದೆ ಇದ್ದುದರಿಂದ ಅವನಿಗೆ ಬದಲಾಗಿ ಅವನ ತಮ್ಮನಾದ ಯೋರಾಮನೆಂಬವನು ಯೆಹೂದ್ಯರ ಅರಸನಾದ ಯೆಹೋಷಾಫಾಟನ ಮಗ ಯೆಹೋರಾಮನ ಆಳ್ವಿಕೆಯ ಎರಡನೆಯ ವರ್ಷದಲ್ಲಿ ಇಸ್ರಾಯೇಲರ ಅರಸನಾದನು
၁၇ဧလိယ ဆင့်ဆိုသောထာဝရဘုရား၏ စကားတော်အတိုင်း ရှင်ဘုရင်သေ၍၊ သားတော်မရှိသော ကြောင့် ညီတော်ယောရံသည် ယုဒရှင်ဘုရင်ယောရှဖတ်သား ယဟောရံနန်းစံနှစ်နှစ်တွင် နန်းထိုင်လေ၏။
18 ೧೮ ಅಹಜ್ಯನ ಉಳಿದ ಚರಿತ್ರೆಯೂ, ಅವನ ಕೃತ್ಯಗಳೂ ಇಸ್ರಾಯೇಲರ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದಿರುತ್ತವೆ.
၁၈အာဇခိပြုမူသော အမှုအရာကြွင်းလေသမျှတို့သည်၊ ဣသရေလ ရာဇဝင်၌ ရေးထားလျက်ရှိ၏။

< ಅರಸುಗಳು - ದ್ವಿತೀಯ ಭಾಗ 1 >