< ಸಮುವೇಲನು - ದ್ವಿತೀಯ ಭಾಗ 5 >

1 ಅನಂತರ ಇಸ್ರಾಯೇಲರ ಎಲ್ಲಾ ಕುಲಗಳವರು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದು ಅವನಿಗೆ, “ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ,
इसके बाद इस्राएल के सारे गोत्र हेब्रोन में दावीद से भेंटकरने आए और उनके समक्ष यह प्रस्ताव रखा, “विचार कीजिए, हम आप ही की अस्थि और मांस हैं.
2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.
पिछले सालों में जब राजा तो शाऊल थे किंतु ये आप ही थे, जो हमारा मार्गदर्शन और इस्राएली सेना को चलाते रहे. याहवेह ने आपसे कहा था, ‘तुम मेरी प्रजा इस्राएल के चरवाहे होगे, तुम मेरी प्रजा इस्राएल के शासक होगे.’”
3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.
अत: इस्राएल के सारे प्राचीन हेब्रोन नगर में राजा के सामने इकट्ठा हुए. दावीद ने याहवेह के सामने उनसे वाचा बांधी. तत्पश्चात उन्होंने इस्राएल के लिए दावीद का राजाभिषेक किया.
4 ದಾವೀದನು ಮೂವತ್ತು ವರ್ಷದವನಾದಾಗ ಅರಸನಾಗಿ, ನಲ್ವತ್ತು ವರ್ಷ ಆಳಿದನು.
शासन प्रारंभ करते समय दावीद की आयु तीस वर्ष की थी, और उन्होंने चालीस वर्ष शासन किया.
5 ಅವನು ಹೆಬ್ರೋನಿನಲ್ಲಿದ್ದು ಯೆಹೂದ ಕುಲವೊಂದನ್ನೇ ಆಳಿದ್ದು ಏಳು ವರ್ಷ ಆರು ತಿಂಗಳು. ಯೆರೂಸಲೇಮಿನಲ್ಲಿದ್ದು ಯೆಹೂದ್ಯರನ್ನು ಮತ್ತು ಎಲ್ಲಾ ಇಸ್ರಾಯೇಲರನ್ನು ಆಳಿದ್ದು ಮೂವತ್ತು ಮೂರು ವರ್ಷಗಳು.
उन्होंने हेब्रोन में रहते हुए यहूदिया पर सात वर्ष छः माह शासन किया और येरूशलेम में उन्होंने संपूर्ण इस्राएल और यहूदिया पर तैंतीस वर्ष शासन किया.
6 ದಾವೀದನು ತನ್ನ ಜನರನ್ನು ಕರೆದುಕೊಂಡು ಯೆರೂಸಲೇಮಿನಲ್ಲಿದ್ದ ದೇಶದ ಮೂಲನಿವಾಸಿಗಳಾದ ಯೆಬೂಸಿಯರಿಗೆ ವಿರೋಧವಾಗಿ ಹೊರಟನು. ಅವರು ಇವನು ಒಳಗೆ ಬರುವುದಿಲ್ಲವೆಂದು ತಿಳಿದು ದಾವೀದನಿಗೆ, “ನೀನು ಒಳಗೆ ಬರಲಾರೆ, ಕುರುಡರು ಕುಂಟರು ಇವರೇ ನಿನ್ನನ್ನು ಅಟ್ಟಿಬಿಡುವರು” ಎಂದು ಹೇಳಿದರು.
राजा ने अपनी सेना के साथ येरूशलेम जाकर उस देश के निवासी यबूसियों पर आक्रमण किया. यबूसियों ने दावीद को संदेश भेजा, “तुम तो यहां प्रवेश भी न कर सकोगे; तुम्हें तो हमारे अंधे और लंगड़े ही पछाड़ देंगे!” उनका विचार था, “दावीद के लिए यहां प्रवेश करना संभव नहीं है.”
7 ಅದರೂ ದಾವೀದನು ದಾವೀದನಗರ ಎನ್ನಿಸಿಕೊಳ್ಳುವ ಚೀಯೋನಿನ ಕೋಟೆಯನ್ನು ಸ್ವಾಧೀನಪಡಿಸಿಕೊಂಡನು.
फिर भी, दावीद ने ज़ियोन गढ़ पर अधिकार कर लिया. अब यह दावीद के नगर के नाम से प्रख्यात हो गया है.
8 ಆ ದಿನ ದಾವೀದನು, “ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನು ಮತ್ತು ಕುಂಟರನ್ನು ಕಂದಕದಲ್ಲಿ ನಾಶಪಡಿಸಬೇಕು” ಎಂದು ಹೇಳಿದನು. ಆದುದರಿಂದ “ಕುರುಡರೂ ಕುಂಟರೂ ಅರಮನೆಯ ಒಳಗೆ ಬರಲಾಗದು” ಎಂಬ ಗಾದೆಯುಂಟು.
उस अवसर पर दावीद ने अपने लोगों से कहा, “यदि तुम लोग यबूसियों को हराना चाहते हो तो जल सुरंग से जाओ, और उन ‘अंधों तथा विकलांगों’ पर हमला करो.” यही कारण है कि लोग कहते हैं “अंधों और विकलांग को (राज) निवास में प्रवेश निषेध है.”
9 ದಾವೀದನು ಆ ಕೋಟೆಗೆ ದಾವೀದ ನಗರವೆಂದು ಹೆಸರಿಟ್ಟು ಅಲ್ಲೇ ವಾಸಿಸುತ್ತಾ, ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಣ ಪೌಳಿಗೋಡೆಯನ್ನು ಕಟ್ಟಿಸಿದನು.
दावीद ने गढ़ पर अधिकार कर लिया और उसे दावीद-नगर नाम दिया. दावीद ने मिल्लो से प्रारंभ कर इसके चारों ओर भीतर की ओर नगर का निर्माण किया.
10 ೧೦ ಸೇನಾಧೀಶ್ವರನಾದ ಯೆಹೋವ ದೇವರು ಅವನ ಸಂಗಡ ಇದ್ದುದರಿಂದ ಅವನು ಆಧಿಕ ಪ್ರಬಲಗೊಳ್ಳುತ್ತಾ ಬಂದನು.
दावीद पर सर्वशक्तिमान याहवेह परमेश्वर की कृपादृष्टि थी, इसलिए दावीद धीरे धीरे मजबूत होते चले गए.
11 ೧೧ ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.
इसके बाद सोर के राजा हीराम ने दावीद के पास अपने दूत भेजे, जो दावीद के घर को बनाने के लिए अपने साथ देवदार की लकड़ी, बढ़ई और राजमिस्त्री भी ले आए.
12 ೧೨ ಇದರಿಂದ ದಾವೀದನು, “ಯೆಹೋವನು ನನ್ನನ್ನು ಇಸ್ರಾಯೇಲರ ರಾಜನನ್ನಾಗಿ ಸ್ಥಿರಪಡಿಸಿ, ತನ್ನ ಪ್ರಜೆಗಳಾದ ಇಸ್ರಾಯೇಲರ ನಿಮಿತ್ತವಾಗಿ ನನ್ನ ರಾಜ್ಯವನ್ನು ವೃದ್ಧಿಪಡಿಸಿದ್ದಾನೆ” ಎಂದು ತಿಳಿದುಕೊಂಡನು.
इससे दावीद को यह अहसास हो गया कि याहवेह ने उन्हें इस्राएल के राजा के रूप में प्रतिष्ठित कर दिया है, और यह भी कि याहवेह ने अपनी प्रजा इस्राएल के हित में अपने राज्य को उन्‍नत किया है.
13 ೧೩ ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.
हेब्रोन से येरूशलेम आकर बसने पर दावीद और भी उपपत्नियां और पत्नियां ले आए. उनको और भी संतान पैदा हुई.
14 ೧೪ ಅಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
येरूशलेम में पैदा उनकी संतान के नाम ये हैं: शम्मुआ, शोबाब, नाथान, शलोमोन,
15 ೧೫ ಇಬ್ಹಾರ್, ಎಲೀಷೂವ, ನೆಫೆಗ್, ಯಾಫೀಯ,
इबहार, एलिशुआ, नेफ़ेग, याफिया,
16 ೧೬ ಎಲೀಷಾಮ, ಎಲ್ಯಾದ ಮತ್ತು ಎಲೀಫೆಲೆಟ್.
एलीशामा, एलियादा और एलिफेलेत.
17 ೧೭ ಇಸ್ರಾಯೇಲರು ದಾವೀದನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡರೆಂಬ ವರ್ತಮಾನವು ಫಿಲಿಷ್ಟಿಯರಿಗೆ ತಲುಪಿದಾಗ ಅವರು ಅವನನ್ನು ಸೆರೆಹಿಡಿಯುವುದಕ್ಕೆ ಹೊರಟರು. ದಾವೀದನು ಇದನ್ನು ಕೇಳಿ ದುರ್ಗಕ್ಕೆ ಹೋದನು.
जब फिलिस्तीनियों को यह मालूम हुआ कि दावीद का राजाभिषेक इस्राएल के राजा के रूप में किया गया है, सभी फिलिस्तीनी दावीद की खोज में निकल पड़े; मगर जैसे ही दावीद ने इसके विषय में सुना, वह गढ़ में चले गए.
18 ೧೮ ಫಿಲಿಷ್ಟಿಯರು ದೇಶದೊಳಗೆ ನುಗ್ಗಿ ರೆಫಾಯೀಮ್ ತಗ್ಗಿಗೆ ಬಂದು ಅಲ್ಲಿ ಪಾಳೆಯಮಾಡಿಕೊಂಡಿದ್ದರು.
इस समय फिलिस्तीनी आकर रेफाइम घाटी में फैल गए.
19 ೧೯ ಅದನ್ನು ತಿಳಿದು ದಾವೀದನು ಯೆಹೋವನನ್ನು, “ನಾನು ಫಿಲಿಷ್ಟಿಯರಿಗೆ ವಿರೋಧವಾಗಿ ಹೋಗಬಹುದೋ? ಅವರನ್ನು ನನ್ನ ಕೈಗೆ ಒಪ್ಪಿಸಿಕೊಡುವಿಯೋ?” ಎಂದು ಕೇಳಿದನು. ಅದಕ್ಕೆ ಯೆಹೋವನು, “ಹೋಗು ನಾನು ಹೇಗೂ ಅವರನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು” ಎಂದು ಉತ್ತರಕೊಟ್ಟನು.
इस पर दावीद ने याहवेह से पूछा, “क्या मैं फिलिस्तीनियों पर आक्रमण करूं? क्या आप उन्हें मेरे अधीन कर देंगे?” याहवेह ने दावीद को उत्तर दिया, “जाओ, क्योंकि मैं फिलिस्तीनियों को निश्चित ही तुम्हारे अधीन कर दूंगा.”
20 ೨೦ ಆಗ ಅವನು ಹೋಗಿ ಅವರನ್ನು ಸೋಲಿಸಿ, “ಯೆಹೋವನು ಕಟ್ಟೆ ಒಡೆದ ಪ್ರವಾಹದಂತೆ ತನ್ನ ಶತ್ರುಗಳ ಮೇಲೆ ಬಿದ್ದು, ಅವರನ್ನು ನನ್ನ ಕಣ್ಣ ಮುಂದೆಯೇ ನಾಶಮಾಡಿದ್ದಾನೆ” ಎಂದು ಹೇಳಿ ಆ ಯುದ್ಧ ಸ್ಥಳಕ್ಕೆ “ಬಾಳ್ ಪೆರಾಚೀಮ್” ಎಂದು ಹೆಸರಿಟ್ಟನು.
दावीद बाल-पेराज़िम नामक स्थान पर पहुंचे और वहां फिलिस्तीनियों को हरा दिया. वहां दावीद ने यह घोषित किया, “याहवेह मेरे पहले ही वहां पहुंचकर मेरे शत्रुओं पर कुछ ऐसे टूट पड़े, जैसे बहुत से जल का बहाव.” इस पर उस स्थान का नाम पड़ गया, बाल-पेराज़िम.
21 ೨೧ ಫಿಲಿಷ್ಟಿಯರು ಅಲ್ಲಿ ಬಿಟ್ಟು ಹೋಗಿದ್ದ ವಿಗ್ರಹಗಳನ್ನು ದಾವೀದನೂ ಅವನ ಜನರೂ ತೆಗೆದುಕೊಂಡು ಬಂದರು.
फिलिस्तीनी अपनी मूर्तियां वही छोड़कर भागे, जिन्हें दावीद और उनके साथी उठाकर ले गए.
22 ೨೨ ಫಿಲಿಷ್ಟಿಯರು ಇನ್ನೊಮ್ಮೆ ಹೊರಟು ಬಂದು ರೆಫಾಯೀಮ್ ತಗ್ಗಿನಲ್ಲಿ ಇಳಿದುಕೊಂಡರು.
एक बार फिर फिलिस्तीनी आए और रेफाइम घाटी में फैल गए.
23 ೨೩ ದಾವೀದನು ಯೆಹೋವನ ಸನ್ನಿಧಿಯಲ್ಲಿ ವಿಚಾರಿಸಿದಾಗ ಆತನು ಅವನಿಗೆ, “ನೀನು ನೇರವಾಗಿ ಹೋಗಿ ಅವರನ್ನು ಮುತ್ತಿಗೆ ಹಾಕಬೇಡ. ಅವರಿಗೆ ತಿಳಿಯದಂತೆ ಸುತ್ತಿಕೊಂಡು ಹೋಗಿ ಹಿಂಬಾಲಿಸಿ, ಬಾಕಾ ಮರಗಳಿರುವ ಕಡೆಯಿಂದ ಅವರ ಮೇಲೆ ಬೀಳು.
जब दावीद ने याहवेह से इस विषय में पूछा, याहवेह ने उन्हें उत्तर दिया, “तुम सीधे जाकर उन पर हमला न करना, बल्कि तुम घूमकर उनके पीछे जाकर मोखा वृक्षों की ओर से हमला करना.
24 ೨೪ ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು.
हमला उस समय सही होगा, जब तुम्हें मोखा के पेड़ों के ऊपर से सेना की चहल-कदमी सुनाई देने लगें. तब तुम युद्ध शुरू कर देना, क्योंकि उस समय याहवेह तुम्हारे आगे-आगे फिलिस्तीनी सेना को मारते हुए बढ़ रहे होंगे.”
25 ೨೫ ದಾವೀದನು ಯೆಹೋವನ ಆಜ್ಞಾನುಸಾರವಾಗಿ ಮಾಡಿ, ಫಿಲಿಷ್ಟಿಯರನ್ನು ಗೆಬದಿಂದ ಗೆಜೆರಿನವರೆಗೂ ಸಂಹರಿಸಿದನು.
दावीद ने वैसा ही किया, जैसा याहवेह ने आदेश दिया था. उन्होंने गिबयोन से लेकर गेज़ेर तक फिलिस्तीनियों को मार गिराया.

< ಸಮುವೇಲನು - ದ್ವಿತೀಯ ಭಾಗ 5 >