< ಸಮುವೇಲನು - ದ್ವಿತೀಯ ಭಾಗ 8 >

1 ಅನಂತರ ದಾವೀದನು ಹೋಗಿ ಫಿಲಿಷ್ಟಿಯರ ಮೇಲೆ ಮುತ್ತಿಗೆ ಹಾಕಿ, ಅವರನ್ನು ಸೋಲಿಸಿ, ಅವರ ರಾಜಧಾನಿಯನ್ನು ವಶಪಡಿಸಿಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
कुछ समय बाद दावीद ने फिलिस्तीनियों को युद्ध में हराया, और फिलिस्तीनियों के कब्जे के प्रमुख नगर का नियंत्रण उनसे छीन लिया.
2 ಇದಲ್ಲದೆ ಅವನು ಮೋವಾಬ್ಯರನ್ನು ಸೋಲಿಸಿ, ಅವರನ್ನು ನೆಲಕ್ಕೆ ಉರುಳಿಸಿ, ಹಗ್ಗದಿಂದ ಅಳತೆಮಾಡಿಸಿ, ಪ್ರತಿ ಮೂರನೆಯ ಎರಡು ಭಾಗದ ಜನರನ್ನು ಕೊಲ್ಲಿಸಿ, ಮೂರನೆ ಭಾಗದ ಜನರನ್ನು ಉಳಿಸಿದನು. ಉಳಿದ ಮೋವಾಬ್ಯರು ದಾವೀದನ ದಾಸರಾಗಿ ಅವನಿಗೆ ಕಪ್ಪಕೊಡಬೇಕಾಯಿತು.
दावीद ने मोआबियों को भी हराया, उन्हें भूमि पर लिटा कर एक डोर से उन्हें मापा. तब दो पंक्तियों का वध किया जाने का और एक पंक्ति को सजीव रखने का आदेश दिया. इससे मोआबी दावीद के सेवक हो गए और उन्हें शुल्क देने लगे.
3 ದಾವೀದನು ಯೂಫ್ರೆಟಿಸ್ ನದಿಯ ಸುತ್ತಣ ಪ್ರದೇಶದಲ್ಲಿ ತನ್ನ ರಾಜ್ಯಾಧಿಕಾರವನ್ನು ಸ್ಥಾಪಿಸುವುದಕ್ಕೆ ಹೋಗುತ್ತಿದ್ದ ರೆಹೋಬನ ಮಗನೂ ಚೋಬದ ಅರಸನೂ ಆದ ಹದದೆಜೆರನನ್ನು ಸೋಲಿಸಿದನು.
जब ज़ोबाह के राजा रेहोब के पुत्र हादेदेज़र फरात नदी पर अपने अधिकार की पुनःस्थापना कर रहे थे, दावीद ने उसको भी हराया.
4 ಅವನು ಅವರ ಸಾವಿರದ ಏಳುನೂರು ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ನೂರು ಕುದುರೆಗಳನ್ನಿಟ್ಟುಕೊಂಡು ಮಿಕ್ಕಾದ ಕುದುರೆಗಳ ಹಿಂಗಾಲಿನ ನರಗಳನ್ನು ಕತ್ತರಿಸಿಬಿಟ್ಟನು.
दावीद ने हादेदेज़र से 1,000 रथ, 7,000 घुड़सवार और 20,000 पैदल सैनिक छीन लिए, और रथों के घोड़ों के पैंरो की प्रमुख नस काट दी, किंतु सौ रथों में इस्तेमाल के लिए पर्याप्‍त घोड़ों को छोड़ दिया.
5 ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು.
जब ज़ोबाह के राजा हादेदेज़र की सहायता के लिए दमेशेक से अरामी वहां आए, दावीद ने 22,000 अरामियों को मार दिया.
6 ಅನಂತರ ದಾವೀದನು ದಮಸ್ಕದ ಅರಾಮ್ಯ ದೇಶದಲ್ಲಿ ಕಾವಲುದಂಡನ್ನಿರಿಸಿದನು. ಹೀಗೆ ಅರಾಮ್ಯರು ಅವನ ಸೇವಕರಾಗಿ ಅವನಿಗೆ ಕಪ್ಪಕೊಡುವವರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯದೊರಕಿತು.
दावीद ने दमेशेक के अरामी सैनिकों के बीच एक रक्षक सेना ठहरा दी. अरामी दावीद के सेवक बन गए, और उन्हें कर देने लगे. दावीद जहां कहीं गए, उन्हें याहवेह की सहायता मिलती रही.
7 ಅವನು ಹದದೆಜೆರನ ಸೇವಕರ ಬಳಿ ಇದ್ದ ಬಂಗಾರದ ಗುರಾಣಿಗಳನ್ನು ಯೆರೂಸಲೇಮಿಗೆ ತೆಗೆದುಕೊಂಡು ಹೋದನು.
हादेदेज़र के सेवकों की सोने की ढालों को दावीद ने लाकर येरूशलेम में रख दिया.
8 ಇದಲ್ಲದೆ ಅರಸನಾದ ದಾವೀದನು ಹದದೆಜೆರನ ಪಟ್ಟಣಗಳಾದ ಬೆಟಹದಿಂದಲೂ ಬೇರೋತೈಯಿಂದಲೂ ಬಹಳ ತಾಮ್ರವನ್ನು ತೆಗೆದುಕೊಂಡು ಹೋದನು.
हादेदेज़र के दोनों नगर बेताह और बेरोथाई से राजा दावीद ने बड़ी मात्रा में कांसा इकट्ठा किया.
9 ದಾವೀದನು ಹದದೆಜೆರನ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವು ಹಮಾತಿನ ಅರಸನಾದ ತೋವಿಗೆ ಮುಟ್ಟಿತು.
जब हामाथ के राजा तोऊ ने यह सुना कि दावीद ने हादेदेज़र की संपूर्ण सेना को हरा दिया है,
10 ೧೦ ತೋವಿಗೂ ಹದದೆಜೆರನಿಗೂ ವಿರೋಧವಿತ್ತು. ದಾವೀದನು ಹದದೆಜೆರನ ಮೇಲೆ ದಾಳಿಮಾಡಿ, ಅವನನ್ನು ಸೋಲಿಸಿದ್ದರಿಂದ ತೋವು ದಾವೀದನನ್ನು ವಂದಿಸುವುದಕ್ಕೂ ಹರಸುವುದಕ್ಕೂ ತನ್ನ ಮಗನಾದ ಯೋರಾಮನನ್ನು ಕಳುಹಿಸಿದನು. ಇವನು ಬರುವಾಗ ದಾವೀದನಿಗೋಸ್ಕರ ತಾಮ್ರ, ಬೆಳ್ಳಿ, ಬಂಗಾರದ ಪಾತ್ರೆಗಳನ್ನು ತಂದನು.
तोऊ ने अपने पुत्र योराम को राजा दावीद से भेंटकरने भेजा, ताकि वह राजा दावीद के स्वास्थ्य के बारे में मालूम करे, और उनको बधाई दे, क्योंकि दावीद ने हादेदेज़र को हरा दिया, जो हमेशा तोऊ से युद्ध करता रहता था. योराम अपने साथ सोना, चांदी और कांसे की वस्तुएं भी लाया था.
11 ೧೧ ಅರಸನಾದ ದಾವೀದನು ಇವುಗಳನ್ನು ತನ್ನಿಂದ ಅಪಜಯಹೊಂದಿದ ಅರಾಮ್ಯರೂ, ಮೋವಾಬ್ಯರೂ, ಅಮ್ಮೋನಿಯರೂ, ಫಿಲಿಷ್ಟಿಯರೂ, ಅಮಾಲೇಕ್ಯರೂ ಎಂಬ ಈ ಸುತ್ತಣ ಜನಾಂಗಗಳಿಂದಲೂ,
राजा दावीद ने सोना, चांदी और कांसे की इन सभी वस्तुओं को उन वस्तुओं के साथ याहवेह को समर्पित कर दी, जो वह उन सभी पराजित देशों,
12 ೧೨ ಚೋಬದ ಅರಸನಾದ ರೆಹೋಬನ ಮಗ ಹದದೆಜೆರನಿಂದಲೂ ಪಡೆದುಕೊಂಡ ಬೆಳ್ಳಿ, ಬಂಗಾರವನ್ನೂ ಯೆಹೋವನಿಗೋಸ್ಕರ ಪ್ರತಿಷ್ಠಿಸಿದನು.
यानी, एदोम, मोआब, अम्मोन के वंशजों, फिलिस्तीनियों और अमालेकियों और ज़ोबाह के पुत्र, राजा हादेदेज़र से कब्जा किये गए थे.
13 ೧೩ ಇದಲ್ಲದೆ ದಾವೀದನು ಹೋಗಿ ಉಪ್ಪಿನ ತಗ್ಗಿನಲ್ಲಿ ಅರಾಮ್ಯರ ಹದಿನೆಂಟು ಸಾವಿರ ಮಂದಿ ಸೈನಿಕರನ್ನು ಸೋಲಿಸಿದಂದಿನಿಂದ ಬಹು ಪ್ರಖ್ಯಾತಿ ಹೊಂದಿದನು.
नमक की घाटी में 18,000 एदोमियों का संहार कर लौटने पर दावीद ने अपनी कीर्ति व्यापक कर ली.
14 ೧೪ ದಾವೀದನು ಎದೋಮಿನಲ್ಲೆಲ್ಲಾ ಕಾವಲುದಂಡನ್ನಿರಿಸಿದನು. ಎದೋಮ್ಯರೆಲ್ಲರೂ ದಾವೀದನ ದಾಸರಾದರು. ಯೆಹೋವನ ಅನುಗ್ರಹದಿಂದ ದಾವೀದನಿಗೆ ಎಲ್ಲಿ ಹೋದರೂ ಜಯವುಂಟಾಯಿತು.
इसके बाद दावीद ने संपूर्ण एदोम राष्ट्र में गढ़ रक्षक सेनाएं बना दी. सभी एदोमवासी दावीद के अधीन हो गए. दावीद जहां कहीं हमला करते थे, याहवेह की ओर से उन्हें सफलता ही प्राप्‍त होती थी.
15 ೧೫ ದಾವೀದನು ಇಸ್ರಾಯೇಲ್ಯರ ಅರಸನಾಗಿ, ಎಲ್ಲಾ ಪ್ರಜೆಗಳನ್ನು ನೀತಿನ್ಯಾಯಗಳಿಂದ ನಡೆಸುತ್ತಾ ಬಂದನು.
दावीद सारे इस्राएल के शासक थे. उन्होंने अपनी सारी प्रजा के लिए न्याय और सच्चाई की व्यवस्था की थी.
16 ೧೬ ಚೆರೂಯಳ ಮಗನಾದ ಯೋವಾಬನೂ ಅವನ ಸೇನಾಧಿಪತಿಯೂ ಅಹೀಲೂದನ ಮಗನಾದ ಯೆಹೋಷಾಫಾಟನು ರಾಜವಂಶಸ್ಥದ ಇತಿಹಾಸಕಾರನಾಗಿದ್ದನು.
ज़ेरुइयाह के पुत्र योआब सेना पर अधीक्षक था और अहीलूद के पुत्र यहोशाफ़ात था लेखापाल;
17 ೧೭ ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು,
अहीतूब के पुत्र सादोक और अबीयाथर के पुत्र अहीमेलेख पुरोहित थे और सेराइयाह उनका सचिव था;
18 ೧೮ ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲು ದಂಡುಗಳ ಮುಖ್ಯಸ್ಥನು. ದಾವೀದನ ಮಕ್ಕಳು ರಾಜನ ಮುಖ್ಯಸಲಹೆಗಾರರಾಗಿದ್ದರು.
यहोयादा के पुत्र बेनाइयाह केरेथि और पेलेथ के निवासियों के प्रधान थे और दावीद के पुत्र प्रशासनिक सलाहकार थे.

< ಸಮುವೇಲನು - ದ್ವಿತೀಯ ಭಾಗ 8 >