< ಸಮುವೇಲನು - ದ್ವಿತೀಯ ಭಾಗ 1 >

1 ಸೌಲನು ಸತ್ತನಂತರ, ದಾವೀದನು ಅಮಾಲೇಕ್ಯರನ್ನು ಸಂಹರಿಸಿ ಚಿಕ್ಲಗ್ ಪಟ್ಟಣದಲ್ಲಿ ಎರಡು ದಿನ ಇದ್ದನು.
शाऊल की मृत्यु हो चुकी थी और दावीद को अमालेकियों का संहार कर लौटे हुए दो दिन व्यतीत हो चुके थे.
2 ಮೂರನೆಯ ದಿನದಲ್ಲಿ ಸೌಲನ ಠಾಣ್ಯದಿಂದ ಒಬ್ಬ ಮನುಷ್ಯನು ದಾವೀದನ ಬಳಿಗೆ ಬಂದು ನೆಲದ ಮಟ್ಟಿಗೆ ಬಾಗಿ ನಮಸ್ಕರಿಸಿದನು. ಅವನು ವಸ್ತ್ರಗಳನ್ನು ಹರಿದುಕೊಂಡು ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದನು.
तीसरे दिन शाऊल के शिविर से एक व्यक्ति वहां आया उसके वस्त्र फटे हुए थे और उसके केशों में धूल समाई हुई थी. जब वह दावीद के निकट पहुंचा, उसने दंडवत हो उनका अभिवादन किया.
3 ದಾವೀದನು ಅವನನ್ನು, “ನೀನು ಎಲ್ಲಿಂದ ಬಂದಿ” ಎಂದು ಕೇಳಲು ಅವನು, “ನಾನು ಇಸ್ರಾಯೇಲರ ಠಾಣ್ಯದಿಂದ ತಪ್ಪಿಸಿಕೊಂಡು ಬಂದೆನು” ಎಂದು ಉತ್ತರಕೊಟ್ಟನು.
दावीद ने उससे प्रश्न किया, “कहां से आ रहे हो?” उसने उत्तर दिया, “मैं इस्राएली सेना के शिविर से बच निकल भागकर यहां पहुंचा हूं.”
4 ಆಗ ದಾವೀದನು, “ದಯವಿಟ್ಟು ಕಾರ್ಯವೇನಾಯಿತೆಂದು ತಿಳಿಸು” ಅನ್ನಲು ಆ ಮನುಷ್ಯನು, “ಇಸ್ರಾಯೇಲರು ರಣರಂಗದಿಂದ ಓಡಿಹೋದರು. ಅನೇಕರು ಗಾಯಗೊಂಡು ಸತ್ತುಹೋದರು. ಸೌಲನೂ ಅವನ ಮಗನಾದ ಯೋನಾತಾನನೂ ಮರಣಹೊಂದಿದರು” ಎಂದು ತಿಳಿಸಿದನು.
दावीद ने उससे आगे पूछा, “मुझे बताओ वहां स्थिति क्या है?” उसने उत्तर दिया, “इस्राएली सेना पीठ दिखाकर भागी है. अनेक सैनिक घायल हुए, और अनेक मारे गए हैं. शाऊल और उनके पुत्र योनातन भी युद्ध में मारे गये.”
5 ದಾವೀದನು ಈ ವರ್ತಮಾನ ತಂದ ಆ ಪ್ರಾಯಸ್ಥನಿಗೆ “ಸೌಲನೂ ಅವನ ಮಗನಾದ ಯೋನಾತಾನನೂ ಸತ್ತಿರುವುದು ನಿನಗೆ ಹೇಗೆ ಗೊತ್ತಾಯಿತು” ಎಂದು ಪ್ರಶ್ನಿಸಲು ಅವನು,
दावीद ने उस संदेशवाहक युवक से प्रश्न किया, “तुम्हें यह कैसे ज्ञात हुआ कि शाऊल और योनातन की मृत्यु हो चुकी है?”
6 “ನಾನು ಆಕಸ್ಮಿಕವಾಗಿ ಗಿಲ್ಬೋವ ಪರ್ವತಪ್ರದೇಶಕ್ಕೆ ಬಂದಾಗ ಸೌಲನು ತನ್ನ ಬರ್ಜಿಯನ್ನೂರಿಕೊಂಡು ನಿಂತಿರುವುದನ್ನೂ ರಥಗಳು ಮತ್ತು ರಾಹುತರು ಅವನನ್ನು ಹಿಂದಟ್ಟಿ ಬರುತ್ತಿರುವುದನ್ನೂ ಕಂಡೆನು.
उस सूचना देनेवाले युवक ने उन्हें बताया, “संयोगवश में उस समय गिलबोआ पर्वत पर ही था. वहां मैंने देखा कि शाऊल अपने भाले पर झुके हुए थे, घुड़सवार और रथ उनकी ओर बढ़े चले आ रहे थे,
7 ಅವನು ತಿರುಗಿಕೊಂಡು ನನ್ನನ್ನು ನೋಡಿ ಕರೆದನು.
उन्होंने मुड़कर मेरी ओर देखा और मुझे पुकारा, मैंने उनसे कहा, ‘आज्ञा दीजिए?’
8 ನಾನು, ‘ಇಗೋ ಬಂದೆನು’ ಎಂದು ಹೇಳಿ ಹೋದಾಗ ಅವನು ‘ನೀನಾರು?’ ಎಂದು ಕೇಳಿದ್ದಕ್ಕೆ, ‘ನಾನು ಅಮಾಲೇಕ್ಯನು’ ಎಂದು ಉತ್ತರಕೊಟ್ಟೆನು.
“उन्होंने ही मुझसे पूछा, ‘कौन हो तुम?’ “मैंने उन्हें उत्तर दिया, ‘मैं अमालेकी हूं.’
9 ಆಗ ಅವನು ನನಗೆ, ‘ನೀನು ದಯೆಮಾಡಿ ಹತ್ತಿರ ಬಂದು ನನ್ನನ್ನು ಕೊಂದು ಹಾಕು. ಯಾಕೆಂದರೆ ನನ್ನಲ್ಲಿ ಜೀವವು ಇನ್ನೂ ಪೂರ್ಣವಾಗಿರುವುದರಿಂದ ನನಗೆ ಸಂಕಟ ಹಿಡಿದದೆ’ ಎಂದು ಹೇಳಿದನು.
“उन्होंने मुझसे कहा, ‘मेरे निकट आकर मुझे इस पीड़ा से मुक्त कर दो. मेरी मृत्यु की पीड़ा असहनीय हो रही है, परंतु मेरे प्राण निकल नहीं रहे.’
10 ೧೦ ನಾನು ಹತ್ತಿರ ಹೋಗಿ ಅವನು ಬಿದ್ದನಂತರ ಬದುಕಲಾರನೆಂದು ನೆನಸಿ, ಅವನನ್ನು ಕೊಂದು ಹಾಕಿ, ಅವನ ತಲೆಯ ಮೇಲಣ ಕಿರೀಟವನ್ನೂ ತೋಳಿನಲ್ಲಿದ್ದ ಬಳೆಯನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಾದ ನಿನಗೆ ತಂದಿದ್ದೇನೆ” ಅಂದನು.
“तब मैं उनके निकट गया और उन पर वार कर उनकी हत्या कर दी, क्योंकि यह स्पष्ट ही थी कि भाले पर गिरने के बाद उनका जीवित रहना असंभव था. फिर मैंने उनका मुकुट उनके सिर से उठाया, उनकी बांह से उनका कंगन निकाला, और अपने स्वामी के लिए उन्हें ले आया हूं.”
11 ೧೧ ಸೌಲನೂ ಅವನ ಮಗನಾದ ಯೋನಾತಾನನೂ, ಯೆಹೋವನ ಪ್ರಜೆಗಳಾದ ಇಸ್ರಾಯೇಲರೂ ಕತ್ತಿಯಿಂದ ಸಂಹೃತರಾದದ್ದಕ್ಕಾಗಿ ದಾವೀದನೂ ಅವನ ಜನರೂ
तब दावीद ने अपने कपड़ों को पकड़कर उन्हें फाड़ दिया, और यही उनके सभी साथियों ने भी किया.
12 ೧೨ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಳಾಡಿ, ಅತ್ತು ಸಾಯಂಕಾಲದವರೆಗೆ ಉಪವಾಸ ಮಾಡಿದರು.
शाऊल, उनके पुत्र योनातन और तलवार से घात किए गए याहवेह की प्रजा और इस्राएल वंश के लिए वे सांझ तक विलाप करते रहे और उन्होंने उपवास किया.
13 ೧೩ ದಾವೀದನು ವರ್ತಮಾನ ತಂದ ಯುವಕನನ್ನು, “ನೀನು ಎಲ್ಲಿಯವನು?” ಎಂದು ಕೇಳಿದನು. ಅವನು, “ನಾನು ಇಸ್ರಾಯೇಲರಲ್ಲಿ ಪ್ರವಾಸಿಯಾಗಿರುವ ಅಮಾಲೇಕ್ಯನು” ಎಂದು ಉತ್ತರಕೊಟ್ಟನು.
दावीद ने उस युवक से जो समाचार लाया था पूछा, “कहां के हो तुम?” और उसने उन्हें उत्तर दिया था, “मैं एक विदेशी की संतान हूं, एक अमालेकी.”
14 ೧೪ ದಾವೀದನು ಅವನಿಗೆ, “ನೀನು ಕೈಯೆತ್ತಿ ಯೆಹೋವನ ಅಭಿಷಿಕ್ತನನ್ನು ಕೊಲ್ಲುವುದಕ್ಕೆ ಏಕೆ ಭಯಪಡಲಿಲ್ಲ?” ಎಂದು ಹೇಳಿ
दावीद ने इस युवक से प्रश्न किया, “याहवेह के अभिषिक्त पर हाथ उठाते हुए तुम्हें भय क्यों न लगा?”
15 ೧೫ ತನ್ನ ಆಳುಗಳಲ್ಲಿ ಒಬ್ಬನನ್ನು ಕರೆದು, “ಹೋಗಿ ಇವನನ್ನು ಕೊಂದುಹಾಕು” ಎಂದು ಆಜ್ಞಾಪಿಸಲು ಅವನು ಅಮಾಲೇಕ್ಯನನ್ನು ಹೊಡೆದು ಕೊಂದನು.
दावीद ने अपने एक युवा साथी को बुलाकर उससे कहा, “जाकर उसे समाप्‍त कर दो.” तब उस साथी ने अमालेकी पर वार किया और उसकी मृत्यु हो गई.
16 ೧೬ ದಾವೀದನು, “ಈ ರಕ್ತಾಪರಾಧವು ನಿನ್ನ ತಲೆಯ ಮೇಲೆಯೇ ಇರಲಿ. ಯೆಹೋವನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯೇ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿತು” ಅಂದನು.
दावीद ने कहा, “तुम्हारा रक्त-दोष तुम्हारे ही सिर पर है, क्योंकि स्वयं तुमने यह कहते हुए अपने मुख से अपने ही विरुद्ध गवाही दी है, ‘मैंने याहवेह के अभिषिक्त की हत्या की है.’”
17 ೧೭ ದಾವೀದನು ಸೌಲ ಯೋನಾತನರ ಕುರಿತು ಒಂದು ಶೋಕಗೀತೆಯನ್ನು ರಚಿಸಿ,
दावीद ने शाऊल और उनके पुत्र योनातन के लिए यह शोक गीत गाया,
18 ೧೮ ಬಿಲ್ಲೆ ಎಂಬ ಈ ಗೀತೆಯನ್ನು ಯೆಹೂದ್ಯರಿಗೆ ಕಲಿಸಬೇಕೆಂದು ಆಜ್ಞಾಪಿಸಿದನು. ಆ ಗೀತವು ಯಾಷಾರ್ ಗ್ರಂಥದಲ್ಲಿ ಬರೆದಿರುತ್ತದೆ.
और उन्होंने यह आदेश प्रसारित किया, कि यह गीत सारे यहूदियावासियों को सिखाया जाए (यह गीत याशर के ग्रंथ में अंकित है):
19 ೧೯ “ಇಸ್ರಾಯೇಲರೇ, ನಿಮ್ಮ ವೈಭವವು ನಿಮ್ಮ ಗುಡ್ಡಗಳಲ್ಲಿ ಮಣ್ಣು ಪಾಲಾಗಿ ಹೋಯಿತು. ಅಯ್ಯೋ ಪರಾಕ್ರಮಶಾಲಿಗಳೇ, ನೀವು ಹೇಗೆ ಹತರಾದಿರಿ.
“इस्राएल, तुम्हारा गौरव तुम्हारे ही उच्च स्थानों पर घात किया गया है. कैसे पराक्रमी गिर पड़े हैं!
20 ೨೦ ಈ ಸಂಗತಿಯನ್ನು ಗತ್ ಊರಿನಲ್ಲಿ ತಿಳಿಸಬೇಡಿರಿ. ಅಷ್ಕೆಲೋನಿನ ಬೀದಿಗಳಲ್ಲಿ ಸಾರಬೇಡಿರಿ. ಫಿಲಿಷ್ಟಿಯರ ಹೆಂಗಸರು ಸಂತೋಷಿಸಾರು. ಸುನ್ನತಿಯಿಲ್ಲದವರ ಸ್ತ್ರೀಯರು ಉಲ್ಲಾಸಪಟ್ಟಾರು.
“इसका उल्लेख गाथ में न किया जाए, इसका उल्लेख अश्कलोन की गलियों में भी न किया जाए, ऐसा न हो कि फिलिस्तीनियों की पुत्रियां इस पर उल्लास मनाने लगें, ऐसा न हो कि अख़तनितों की पुत्रियां हर्षित होने लगें.
21 ೨೧ ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
“गिलबोआ के पर्वतों, तुम पर न तो ओस पड़े, और न बारिश, तुम पर उपजाऊ खेत भी न हों. क्योंकि इसी स्थान पर शूर योद्धा की ढाल दूषित की गई, शाऊल की ढाल बिना तेल लगाए रह गई.
22 ೨೨ ಯೋನಾತಾನನ ಬಿಲ್ಲು ಹತರಾದವರ ರಕ್ತವನ್ನು ಹೀರದೆಯೂ ಪರಾಕ್ರಮಶಾಲಿಗಳ ಕೊಬ್ಬನ್ನು ರುಚಿಸದೆಯೂ ಬರುತ್ತಿರಲಿಲ್ಲ. ಸೌಲನ ಕತ್ತಿಯು ವ್ಯರ್ಥವಾಗಿ ಹಿಂದಿರುಗುತ್ತಿರಲಿಲ್ಲ.
“घात किए हुओं के रक्त से, शूरवीरों की चर्बी से, योनातन का धनुष कभी खाली न लौटा, वैसे ही शाऊल की तलवार का वार कभी विफल नहीं हुआ.
23 ೨೩ ಸೌಲಯೋನಾತಾನರು ಪ್ರಿಯರೂ ಮನೋಹರರೂ ಆಗಿದ್ದರು. ಅವರು ಜೀವಿಸುವಾಗಲೂ ಸಾಯುವಾಗಲೂ ಅಗಲಿದವರಲ್ಲ. ಅವರು ಹದ್ದುಗಳಿಗಿಂತಲೂ ವೇಗವುಳ್ಳವರು, ಸಿಂಹಗಳಿಗಿಂತಲೂ ಬಲವುಳ್ಳವರು.
शाऊल और योनातन अपने जीवनकाल में प्रिय और आकर्षक थे, मृत्यु में भी वे विभक्त नहीं हुए. उनमें गरुड़ों सदृश तेज गति, और सिंहों सदृश बल था.
24 ೨೪ ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?
“इस्राएल की पुत्रियो, शाऊल के लिए विलाप करो, जिन्होंने तुम्हें भव्य बैंगनी वस्त्र पहनाए, जिन्होंने वस्त्रों के अलावा तुम्हें सोने के आभूषण भी दिए.
25 ೨೫ ಅಯ್ಯೋ ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮರಣ ಹೊಂದಿದಿರಿ. ಯೋನಾತಾನನು ನಿಮ್ಮ ಬೆಟ್ಟದಲ್ಲಿ ಹತನಾಗಿ ಬಿದ್ದನಲ್ಲಾ
“शूर कैसे घात किए गए युद्ध में! तुम्हारे उच्च स्थल पर योनातन मृत पड़ा है.
26 ೨೬ ಯೋನಾತಾನನೇ, ನನ್ನ ಸಹೋದರನೇ ನಿನಗೋಸ್ಕರ ನನ್ನಲ್ಲಿ ಬಹು ಸಂಕಟವುಂಟಾಗಿದೆ. ನೀನು ನನಗೆ ಮನೋಹರನಾಗಿದ್ದಿ. ನನ್ನ ಮೇಲಿನ ನಿನ್ನ ಪ್ರೀತಿಯು ಆಶ್ಚರ್ಯಕರವಾದದ್ದು. ಅದು ಸತಿ ಪ್ರೇಮಕ್ಕಿಂತ ಶ್ರೇಷ್ಠವಾದದ್ದು.
योनातन, मेरे भाई, तुम्हारे लिए मैं शोकाकुल हूं; तुम मुझे अत्यंत प्रिय थे. मेरे लिए तुम्हारा प्रेम, नारी के प्रेम से कहीं अधिक मधुर था.
27 ೨೭ ಅಯ್ಯೋ ಪರಾಕ್ರಮಶಾಲಿಗಳು ಹೇಗೆ ಹತರಾದರು, ಯುದ್ಧದ ಆಯುಧಗಳು ಹೇಗೆ ಹಾಳಾದವು.”
“कैसे शूर मिट गए! कैसे युद्ध के हथियार नष्ट हो गए!”

< ಸಮುವೇಲನು - ದ್ವಿತೀಯ ಭಾಗ 1 >