< ತಿಮೊಥೆಯನಿಗೆ ಬರೆದ ಎರಡನೆಯ ಪತ್ರಿಕೆ 4 >
1 ೧ ನಾನು ದೇವರ ಸಮಕ್ಷಮದಲ್ಲಿ ಮತ್ತು ಜೀವಿಸುವವರಿಗೂ ಸತ್ತವರಿಗೂ ನ್ಯಾಯತೀರಿಸುವುದಕ್ಕೆ ಬರುವ ಕ್ರಿಸ್ತ ಯೇಸುವಿನ ಪ್ರತ್ಯಕ್ಷತೆಯನ್ನೂ, ಆತನ ರಾಜ್ಯವನ್ನೂ ಮುಂದಿಟ್ಟು ನಿನಗೆ ಖಂಡಿತವಾಗಿ ಹೇಳುವುದೇನಂದರೆ,
१देवासमोर आणि जो ख्रिस्त येशू जिवंतांचा व मृतांचा न्याय करील त्याच्यासमक्ष त्याच्या प्रकट होण्याला व त्याच्या राज्याला स्मरून मी निक्षून सांगतो की,
2 ೨ ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.
२वचनाची घोषणा कर सुवेळी अवेळी तयार राहा, सर्व प्रकारच्या सहनशीलतेने व शिक्षणाने दोष दाखीव, निषेध कर व बोध कर.
3 ೩ ಯಾಕೆಂದರೆ ಜನರು ಸ್ವಸ್ಥಬೋಧನೆಯನ್ನು ಒಪ್ಪಲಾರದ ಕಾಲವು ಬರುತ್ತದೆ. ಅದರಲ್ಲಿ ಅವರು ಕಿವಿಗೆ ಇಂಪಾಗುವ ಹಾಗೆ ತಮ್ಮ ದುರಾಶೆಗಳಿಗೆ ಅನುಕೂಲವಾದ ಉಪದೇಶಗಳನ್ನು ನೀಡುವ ಅನೇಕ ಉಪದೇಶಕರನ್ನು ಇಟ್ಟುಕೊಳ್ಳುವರು.
३मी असे म्हणतो कारण अशी वेळ येईल जेव्हा लोक चांगले शिक्षण सहन करणार नाहीत. त्याऐवजी त्यांच्या स्वतःच्या इच्छांना पूरक असे शिक्षक ते त्यांच्यासाठी जमा करतील.
4 ೪ ಅವರು ಸತ್ಯ ಬೋಧನೆಗೆ ಕಿವಿಗೊಡದೆ ಕಟ್ಟುಕಥೆಗಳನ್ನು ಕೇಳುವುದಕ್ಕೆ ಇಚ್ಛಿಸುವರು.
४सत्यापासून ते आपले कान दुसरीकडे वळवतील व आपले लक्ष ते काल्पनिक कथांकडे लावतील.
5 ೫ ಆದರೆ ನೀನು ಎಲ್ಲಾ ವಿಷಯಗಳಲ್ಲಿಯೂ ಸ್ವಸ್ಥಚಿತ್ತನಾಗಿರು, ಹಿಂಸೆಯನ್ನು ತಾಳಿಕೋ, ಸುವಾರ್ತಿಕನ ಕೆಲಸವನ್ನು ಮಾಡು, ನಿನಗೆ ನೇಮಿಸಿರುವ ಸೇವೆಯನ್ನು ಲೋಪವಿಲ್ಲದೆ ಮಾಡು.
५पण तू सर्व परीस्थितीत सावधानतेने वाग, दुःख सहन कर; सुवार्तेची घोषणा करण्याचे काम कर; देवाने दिलेली सेवा पूर्ण कर.
6 ೬ ಯಾಕೆಂದರೆ ನಾನಂತೂ ಈಗಲೇ ಪಾನದ್ರವ್ಯವಾಗಿ ಅರ್ಪಿತನಾಗುತ್ತಾ ಇದ್ದೇನೆ. ನನ್ನ ನಿರ್ಗಮನದ ಸಮಯವು ಸಮೀಪವಾಗುತ್ತಾ ಬಂದಿದೆ.
६कारण आता माझे अर्पण होत आहे व माझी या जगातून जाण्याची वेळ आली आहे.
7 ೭ ಶ್ರೇಷ್ಠ ಹೋರಾಟವನ್ನು ಮಾಡಿದ್ದೇನೆ, ನನ್ನ ಓಟವನ್ನು ಓಡಿಮುಗಿಸಿದ್ದೇನೆ, ಕ್ರಿಸ್ತ ನಂಬಿಕೆಯನ್ನು ಕಾಪಾಡಿಕೊಂಡಿದ್ದೇನೆ.
७मी सुयुद्ध केले आहे. मी माझी धाव संपवली आहे. मी विश्वास राखला आहे.
8 ೮ ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.
८आता पुढे माझ्यासाठी जो नितीमत्वाचा मुकुट ठेवला आहे, तो त्यादिवशी नीतिमान न्यायाधीश प्रभू मला देईल आणि केवळ मलाच नव्हे, तर त्याचे प्रकट होणे ज्यांना प्रिय आहे त्या सर्वांनाही देईल.
9 ೯ ನೀನು ನನ್ನ ಬಳಿಗೆ ಬೇಗನೇ ಬರುವುದಕ್ಕೆ ಪ್ರಯತ್ನಪಡು,
९माझ्याजवळ लवकर येण्याचा प्रयत्न कर.
10 ೧೦ ಯಾಕೆಂದರೆ ದೇಮನು ಇಹಲೋಕವನ್ನು ಪ್ರೀತಿಸಿ, ನನ್ನನ್ನು ಬಿಟ್ಟು ಥೆಸಲೋನಿಕಕ್ಕೆ ಹೋದನು. ಕ್ರೆಸ್ಕನು ಗಲಾತ್ಯಕ್ಕೂ ತೀತನು ದಲ್ಮಾತ್ಯಕ್ಕೂ ಹೋದರು. (aiōn )
१०कारण देमास मला सोडून थेस्सलनीका शहरास गेला आहे कारण त्यास जगाचे सुख प्रिय आहे. क्रेस्केस गलतीया प्रांतास गेला आहे व तीत दालमतीया प्रांतास गेला आहे. (aiōn )
11 ೧೧ ಲೂಕನು ಮಾತ್ರ ನನ್ನ ಜೊತೆಯಲ್ಲಿದ್ದಾನೆ. ಮಾರ್ಕನನ್ನು ನಿನ್ನ ಸಂಗಡ ಕರೆದುಕೊಂಡು ಬಾ, ಅವನು ನನಗೆ ಸೇವೆಯಲ್ಲಿ ಉಪಯುಕ್ತನಾಗಿದ್ದಾನೆ.
११लूक मात्र माझ्याजवळ आहे, जेव्हा तू येशील तेव्हा मार्कालाही तुझ्याबरोबर घेऊ नये कारण सेवेकरता तो मला उपयोगी आहे.
12 ೧೨ ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.
१२तुखिकाला मी इफिस शहरास पाठवले आहे.
१३त्रोवस शहरात कार्पाच्या घरी राहिलेला माझा झगा येताना घेऊन ये. तसेच माझी पुस्तके, विशेषतः चर्मपत्राच्या गुंडाळ्या घेऊन ये.
14 ೧೪ ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡುಮಾಡಿದನು. ಕರ್ತನು ಅವನ ಕೃತ್ಯಗಳಿಗೆ ತಕ್ಕ ಪ್ರತಿಫಲವನ್ನು ಅವನಿಗೆ ಕೊಡುವನು.
१४आलेक्सांद्र तांबटाने माझे खूप नुकसान केले आहे. त्याने केलेल्या त्याच्या कृत्यांबद्दल देव त्याची फेड करील.
15 ೧೫ ನೀನು ಸಹ ಅವನ ವಿಷಯದಲ್ಲಿ ಎಚ್ಚರಿಕೆಯಾಗಿರು, ಅವನು ನಮ್ಮ ಮಾತುಗಳನ್ನು ಬಹಳವಾಗಿ ಎದುರಿಸಿದನು.
१५त्याच्यापासून स्वतःचे रक्षण कर कारण त्याने आपल्या शिक्षणाला जोरदारपणे विरोध केला होता.
16 ೧೬ ನಾನು ಮೊದಲನೆ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನ ಸಂಗಡ ಇರಲಿಲ್ಲ, ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರಿಗೆ ದೋಷವಾಗಿ ಎಣಿಸಲ್ಪಡದೆ ಇರಲಿ.
१६पहिल्यांदा जेव्हा मला माझा बचाव करायचा होता तेव्हा मला कोणीही साथ केली नाही. त्याऐवजी ते सर्व मला सोडून गेले. देवाकडून हे त्यांच्याविरुद्ध मोजले जाऊ नये.
17 ೧೭ ಆದರೆ ಕರ್ತನು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರಲ್ಪಡುವಂತೆಯೂ, ಅನ್ಯ ಜನರೆಲ್ಲರೂ ಅದನ್ನು ಕೇಳುವಂತೆಯೂ ಮಾಡಿದನು. ಇದಲ್ಲದೆ ಆತನು ನನ್ನನ್ನು ಸಿಂಹದ ಬಾಯೊಳಗಿಂದ ತಪ್ಪಿಸಿದನು.
१७प्रभू माझ्या बाजूने उभा राहिला आणि मला सामर्थ्य दिले यासाठी की, माझ्याकडून संदेशाची पूर्ण घोषणा व्हावी व सर्व परराष्ट्रीयांनी ती ऐकावी आणि त्याने मला सिंहाच्या मुखातून सोडवले.
18 ೧೮ ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್. (aiōn )
१८प्रभू मला प्रत्येक वाईट कामापासून सोडवील व आपल्या स्वर्गीय राज्यात घेण्यासाठी तारील. त्यास सदासर्वकाळपर्यंत गौरव असो. आमेन. (aiōn )
19 ೧೯ ಪ್ರಿಸ್ಕಿಲ್ಲಳಿಗೂ, ಅಕ್ವಿಲ್ಲನಿಗೂ, ಒನೇಸಿಪೊರನ ಮನೆಯವರಿಗೂ ವಂದನೆಹೇಳು.
१९प्रिस्कीला, अक्विला आणि अनेसिफरच्या घरातील लोकांस सलाम सांग.
20 ೨೦ ಎರಸ್ತನು ಕೊರಿಂಥದಲ್ಲಿ ನಿಂತನು. ತ್ರೊಫಿಮನು ಅಸ್ವಸ್ಥನಾಗಿದ್ದುದರಿಂದ ಅವನನ್ನು ಮಿಲೇತದಲ್ಲಿ ಬಿಟ್ಟೆನು.
२०एरास्त करिंथ शहरात राहिला. त्रफिमाला मी मिलेता शहरात सोडले कारण तो आजारी होता.
21 ೨೧ ಚಳಿಗಾಲಕ್ಕೆ ಮುಂಚೆಯೇ ಬರುವುದಕ್ಕೆ ಪ್ರಯತ್ನಿಸು. ಯುಬೂಲನು, ಪೊದೆಯನೂ, ಲೀನನೂ, ಕ್ಲೌದ್ಯಳೂ ಉಳಿದ ಸಹೋದರರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ.
२१तू हिवाळ्यापूर्वी येण्याचा अधिक प्रयत्न कर. युबुल, पुदेस, लीन व क्लौदिया व इतर सर्व बंधू तुला सलाम सांगतात.
22 ೨೨ ಕರ್ತನು ನಿನ್ನ ಆತ್ಮದೊಂದಿಗೆ ಇರಲಿ. ಆತನ ಕೃಪೆಯು ನಿಮ್ಮೊಂದಿಗಿರಲಿ.
२२प्रभू तुझ्या आत्म्यासोबत असो. देवाची कृपा तुम्हा सर्वांबरोबर असो.