< ಅಪೊಸ್ತಲರ ಕೃತ್ಯಗಳ 13 >

1 ಅಂತಿಯೋಕ್ಯದಲ್ಲಿದ್ದ ಸಭೆಯೊಳಗೆ ಪ್ರವಾದಿಗಳೂ, ಬೋಧಕರೂ ಇದ್ದರು; ಅವರು ಯಾರೆಂದರೆ; ಬಾರ್ನಬ, ನೀಗರನೆಂಬ ಸಿಮೆಯೋನ, ಕುರೇನ್ಯದ ಲೂಕ್ಯ, ಸಾಮಂತ ಹೆರೋದನ ಜೊತೆಯಲ್ಲಿ ಬೆಳೆದ ಮೆನಹೇನ, ಸೌಲ ಇವರೇ.
Ἦσαν δέ τινες ἐν Ἀντιοχείᾳ κατὰ τὴν οὖσαν ἐκκλησίαν προφῆται καὶ διδάσκαλοι, ὅ τε Βαρνάβας καὶ Συμεὼν ὁ καλούμενος Νίγερ, καὶ Λούκιος ὁ Κυρηναῖος, Μαναήν τε Ἡρῴδου τοῦ τετράρχου σύντροφος, καὶ Σαῦλος.
2 ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
Λειτουργούντων δὲ αὐτῶν τῷ Κυρίῳ καὶ νηστευόντων, εἶπε τὸ Πνεῦμα τὸ Ἅγιον, Ἀφορίσατε δή μοι τὸν Βαρνάβαν καὶ τὸν Σαῦλον εἰς τὸ ἔργον ὃ προσκέκλημαι αὐτούς.
3 ಆಗ ಅವರು ಉಪವಾಸವಿದ್ದು ಪ್ರಾರ್ಥಿಸಿ ಆ ಇಬ್ಬರ ಮೇಲೆ ಹಸ್ತಗಳನ್ನಿಟ್ಟು ಅವರನ್ನು ಕಳುಹಿಸಿಕೊಟ್ಟರು.
Τότε νηστεύσαντες καὶ προσευξάμενοι καὶ ἐπιθέντες τὰς χεῖρας αὐτοῖς, ἀπέλυσαν.
4 ಹೀಗೆ ಅವರು ಪವಿತ್ರಾತ್ಮನಿಂದ ಕಳುಹಿಸಲ್ಪಟ್ಟವರಾಗಿ ಸೆಲ್ಯೂಕ್ಯಕ್ಕೆ ಬಂದರು; ಅಲ್ಲಿಂದ ಸಮುದ್ರದಲ್ಲಿ ಪ್ರಯಾಣವಾಗಿ ಕುಪ್ರದ್ವೀಪಕ್ಕೆ ಹೋದರು.
Οὗτοι μὲν οὖν, ἐκπεμφθέντες ὑπὸ τοῦ Πνεύματος τοῦ Ἁγίου, κατῆλθον εἰς τὴν Σελεύκειαν· ἐκεῖθεν δὲ ἀπέπλευσαν εἰς τὴν Κύπρον.
5 ಸಲಮೀಸ್ ಎಂಬ ಸ್ಥಳಕ್ಕೆ ಸೇರಿ ಅಲ್ಲಿ ಯೆಹೂದ್ಯರ ಸಭಾಮಂದಿರಗಳಲ್ಲಿ ದೇವರ ವಾಕ್ಯವನ್ನು ಬೋಧಿಸಿದರು. ಮಾರ್ಕನೆನಿಸಿಕೊಳ್ಳುವ ಯೋಹಾನನು ಸಹಾಯಕನಾಗಿ ಅವರ ಸಂಗಡ ಇದ್ದನು.
Καὶ γενόμενοι ἐν Σαλαμῖνι, κατήγγελλον τὸν λόγον τοῦ Θεοῦ ἐν ταῖς συναγωγαῖς τῶν Ἰουδαίων· εἶχον δὲ καὶ Ἰωάννην ὑπηρέτην.
6 ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್‍ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
Διελθόντες δὲ τὴν νῆσον ἄχρι Πάφου, εὗρόν τινα μάγον ψευδοπροφήτην Ἰουδαῖον, ᾧ ὄνομα Βαρϊησοῦς,
7 ಅವನು ರಾಜ್ಯ ಪಾಲನಾಗಿದ್ದ ಸೆರ್ಗ್ಯ ಪೌಲನೆಂಬ ಅಧಿಪತಿಯ ಜೊತೆಯಲ್ಲಿದ್ದನು. ಆ ಅಧಿಪತಿಯು ಬುದ್ಧಿವಂತನಾಗಿದ್ದು, ಬಾರ್ನಬ ಮತ್ತು ಸೌಲನನ್ನು ತನ್ನ ಬಳಿಗೆ ಕರೆಸಿ ದೇವರ ವಾಕ್ಯವನ್ನು ಕೇಳುವುದಕ್ಕೆ ಅಪೇಕ್ಷೆ ಪಟ್ಟನು.
ὃς ἦν σὺν τῷ ἀνθυπάτῳ Σεργίῳ Παύλῳ, ἀνδρὶ συνετῷ. Οὗτος προσκαλεσάμενος Βαρνάβαν καὶ Σαῦλον ἐπεζήτησεν ἀκοῦσαι τὸν λόγον τοῦ Θεοῦ.
8 ಆದರೆ ಆ ಮಂತ್ರವಾದಿಯಾದ ಎಲುಮನು (ಎಲುಮನೆಂಬ ಹೆಸರಿಗೆ ಮಂತ್ರವಾದಿಯೆಂದರ್ಥ) ಅವರನ್ನು ವಿರೋಧಿಸಿದನು; ಅಧಿಪತಿಯು ಕ್ರಿಸ್ತನಲ್ಲಿ ನಂಬಿಕೆಯಿಡದಂತೆ ಅಡ್ಡಿಮಾಡಲು ಪ್ರಯತ್ನಿಸಿದನು.
Ἀνθίστατο δὲ αὐτοῖς Ἐλύμας, ὁ μάγος—οὕτω γὰρ μεθερμηνεύεται τὸ ὄνομα αὐτοῦ—ζητῶν διαστρέψαι τὸν ἀνθύπατον ἀπὸ τῆς πίστεως.
9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,
Σαῦλος δέ, ὁ καὶ Παῦλος, πλησθεὶς Πνεύματος Ἁγίου, καὶ ἀτενίσας εἰς αὐτὸν
10 ೧೦ ಅವನನ್ನು ದೃಷ್ಟಿಸಿನೋಡಿ; “ಸೈತಾನನ ಮಗನೇ, ಮೋಸದಿಂದಲೂ, ಎಲ್ಲಾ ಕೆಟ್ಟತನದಿಂದಲೂ ತುಂಬಿರುವವನೇ, ಎಲ್ಲಾ ನೀತಿಗೂ ವಿರೋಧಿಯೇ, ನೀನು ಕರ್ತನ ನೇರವಾದ ಮಾರ್ಗಗಳನ್ನು ಡೊಂಕು ಮಾಡುವುದನ್ನು ಬಿಡುವುದಿಲ್ಲವೋ?
εἶπεν, Ὦ πλήρης παντὸς δόλου καὶ πάσης ῥᾳδιουργίας, υἱὲ διαβόλου, ἐχθρὲ πάσης δικαιοσύνης, οὐ παύσῃ διαστρέφων τὰς ὁδοὺς Κυρίου τὰς εὐθείας;
11 ೧೧ ಇಗೋ, ಕರ್ತನು ನಿನಗೆ ವಿರುದ್ಧವಾಗಿ ಕೈ ಎತ್ತಿದ್ದಾನೆ; ನೀನು ಕುರುಡನಾಗಿ ಕೆಲವು ಕಾಲ ಸೂರ್ಯನನ್ನು ನೋಡದೆ ಇರುವಿ” ಎಂದು ಹೇಳಿದನು. ಆ ಕ್ಷಣವೇ ಅವನಿಗೆ ಕಣ್ಣು ಮೊಬ್ಬಾಗಿ ಕತ್ತಲೆ ಕವಿಯಿತು; ಅವನು ಕೈಹಿಡಿದು ಆಧಾರ ಕೊಡುವವರನ್ನು ಹುಡುಕುತ್ತಾ ತಿರುಗಾಡಿದನು.
Καὶ νῦν ἰδού, χεὶρ Κυρίου ἐπὶ σέ, καὶ ἔσῃ τυφλός, μὴ βλέπων τὸν ἥλιον ἄχρι καιροῦ. Παραχρῆμα δὲ ἐπέπεσεν ἐπ᾽ αὐτὸν ἀχλὺς καὶ σκότος, καὶ περιάγων ἐζήτει χειραγωγούς.
12 ೧೨ ಅಧಿಪತಿಯು ಆ ಸಂಗತಿಯನ್ನು ನೋಡಿ ಕರ್ತನ ಬೋಧನೆಗೆ ಅತ್ಯಾಶ್ಚರ್ಯಪಟ್ಟು ನಂಬುವವನಾದನು.
Τότε ἰδὼν ὁ ἀνθύπατος τὸ γεγονὸς ἐπίστευσεν, ἐκπλησσόμενος ἐπὶ τῇ διδαχῇ τοῦ Κυρίου.
13 ೧೩ ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
Ἀναχθέντες δὲ ἀπὸ τῆς Πάφου οἱ περὶ τὸν Παῦλον ἦλθον εἰς Πέργην τῆς Παμφυλίας. Ἰωάννης δὲ ἀποχωρήσας ἀπ᾽ αὐτῶν ὑπέστρεψεν εἰς Ἱεροσόλυμα.
14 ೧೪ ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು.
Αὐτοὶ δὲ διελθόντες ἀπὸ τῆς Πέργης, παρεγένοντο εἰς Ἀντιόχειαν τῆς Πισιδίας, καὶ εἰσελθόντες εἰς τὴν συναγωγὴν τῇ ἡμέρᾳ τῶν σαββάτων, ἐκάθισαν.
15 ೧೫ ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.
Μετὰ δὲ τὴν ἀνάγνωσιν τοῦ νόμου καὶ τῶν προφητῶν, ἀπέστειλαν οἱ ἀρχισυνάγωγοι πρὸς αὐτούς, λέγοντες, Ἄνδρες ἀδελφοί, εἰ ἔστι λόγος ἐν ὑμῖν παρακλήσεως πρὸς τὸν λαόν, λέγετε.
16 ೧೬ ಆಗ ಪೌಲನು ಎದ್ದು ಕೈಸನ್ನೆ ಮಾಡಿ ಹೇಳಿದ್ದೇನಂದರೆ;
Ἀναστὰς δὲ Παῦλος, καὶ κατασείσας τῇ χειρί, εἶπεν, Ἄνδρες Ἰσραηλῖται, καὶ οἱ φοβούμενοι τὸν Θεόν, ἀκούσατε.
17 ೧೭ “ಇಸ್ರಾಯೇಲ್ ಜನರೇ, ಮತ್ತು ಯೆಹೂದ್ಯ ಮತಾವಲಂಬಿಗಳೇ, ಕೇಳಿರಿ. ನಮ್ಮ ಇಸ್ರಾಯೇಲ್ ಜನರ ದೇವರು ಆರಿಸಿಕೊಂಡ ನಮ್ಮ ಪೂರ್ವಿಕರು ಐಗುಪ್ತದೇಶದಲ್ಲಿ ವಾಸಿಸುತ್ತಿದ್ದಾಗ ಅವರನ್ನು ಪ್ರಬಲರನ್ನಾಗಿ ಮಾಡಿ, ಅಭಿವೃದ್ಧಿಗೆ ತಂದು ತನ್ನ ಭುಜಬಲದಿಂದ ಅವರನ್ನು ಆ ದೇಶದಿಂದ ಬರಮಾಡಿದನು.
Ὁ Θεὸς τοῦ λαοῦ τούτου ἐξελέξατο τοὺς πατέρας ἡμῶν, καὶ τὸν λαὸν ὕψωσεν ἐν τῇ παροικίᾳ ἐν γῇ Αἰγύπτῳ, καὶ μετὰ βραχίονος ὑψηλοῦ ἐξήγαγεν αὐτοὺς ἐξ αὐτῆς.
18 ೧೮ ಆತನು ಸುಮಾರು ನಲವತ್ತು ವರ್ಷಗಳವರೆಗೂ ಅಡವಿಯಲ್ಲಿ ಅವರ ನಡವಳಿಕೆಯನ್ನು ಸಹಿಸಿಕೊಂಡು,
Καὶ ὡς τεσσαρακονταετῆ χρόνον ἐτροποφόρησεν αὐτοὺς ἐν τῇ ἐρήμῳ.
19 ೧೯ ಕಾನಾನ್ ದೇಶದಲ್ಲಿದ್ದ ಅನ್ಯಜನಗಳ ಏಳು ರಾಜ್ಯಗಳನ್ನು ನಿರ್ಮೂಲಮಾಡಿ, ಆ ಜನರ ದೇಶವನ್ನು ಅವರಿಗೆ ಸ್ವತ್ತಾಗಿ ಹಂಚಿಕೊಟ್ಟನು.
Καὶ καθελὼν ἔθνη ἑπτὰ ἐν γῇ Χαναάν, κατεκληρονόμησεν αὐτοῖς τὴν γῆν αὐτῶν.
20 ೨೦ ಇಷ್ಟರೊಳಗೆ ಸುಮಾರು ನಾನೂರೈವತ್ತು ವರ್ಷಗಳು ಗತಿಸಿದವು. ಇದಾದ ಮೇಲೆ ಪ್ರವಾದಿಯಾದ ಸಮುವೇಲನ ಕಾಲದ ವರೆಗೆ ನ್ಯಾಯಾಧಿಪತಿಗಳನ್ನು ಕೊಟ್ಟನು.
Καὶ μετὰ ταῦτα, ὡς ἔτεσι τετρακοσίοις καὶ πεντήκοντα, ἔδωκε κριτὰς ἕως Σαμουὴλ τοῦ προφήτου.
21 ೨೧ ತರುವಾಯ ಅವರು ತಮಗೆ ಅರಸನು ಬೇಕೆಂದು ಕೇಳಿಕೊಳ್ಳಲು, ದೇವರು ಅವರಿಗೆ ಬೆನ್ಯಾಮೀನನ ಕುಲದ ಕೀಷನ ಮಗನಾದ ಸೌಲನನ್ನು ರಾಜನನ್ನಾಗಿ ಕೊಟ್ಟನು. ಅವನು ಅವರನ್ನು ನಲವತ್ತು ವರ್ಷ ಆಳಿದನು.
Κἀκεῖθεν ᾐτήσαντο βασιλέα, καὶ ἔδωκεν αὐτοῖς ὁ Θεὸς τὸν Σαοὺλ υἱὸν Κίς, ἄνδρα ἐκ φυλῆς Βενιαμίν, ἔτη τεσσαράκοντα.
22 ೨೨ ಆ ಮೇಲೆ ದೇವರು ಅವನನ್ನು ತೆಗೆದುಹಾಕಿ ದಾವೀದನನ್ನು ಅವರ ಮೇಲೆ ಅರಸನನ್ನಾಗಿ ನೇಮಕಮಾಡಿ; ‘ಇಷಯನ ಮಗನಾದ ದಾವೀದನು ನನಗೆ ಸಿಕ್ಕಿದನು, ಅವನು ನನ್ನ ಹೃದಯಕ್ಕೆ ಒಪ್ಪುವ ಮನುಷ್ಯನು, ಅವನು ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವನು’ ಎಂಬುದಾಗಿ ಅವನ ವಿಷಯವಾಗಿ ಸಾಕ್ಷಿಹೇಳಿದನು.
Καὶ μεταστήσας αὐτόν, ἤγειρεν αὐτοῖς τὸν Δαυὶδ εἰς βασιλέα, ᾧ καὶ εἶπε μαρτυρήσας, Εὗρον Δαυὶδ τὸν τοῦ Ἰεσσαί, ἄνδρα κατὰ τὴν καρδίαν μου, ὃς ποιήσει πάντα τὰ θελήματά μου.
23 ೨೩ “ಅವನ ಸಂತಾನದಿಂದ ದೇವರು ತನ್ನ ವಾಗ್ದಾನದ ಪ್ರಕಾರ ಇಸ್ರಾಯೇಲರಿಗೆ ಒಬ್ಬ ರಕ್ಷಕನನ್ನು ಹುಟ್ಟಿಸಿದ್ದಾನೆ.
Τούτου ὁ Θεὸς ἀπὸ τοῦ σπέρματος κατ᾽ ἐπαγγελίαν ἤγαγε τῷ Ἰσραὴλ σωτηρίαν,
24 ೨೪ ಆ ರಕ್ಷಕನೇ ಯೇಸು, ಆತನ ಆಗಮನಕ್ಕೆ ಮೊದಲು ಯೋಹಾನನು ಇಸ್ರಾಯೇಲ್ ಜನರೆಲ್ಲರಿಗೆ, ನೀವು ದೇವರ ಕಡೆಗೆ ತಿರುಗಿಕೊಂಡು ಪಶ್ಚಾತ್ತಾಪದ ದೀಕ್ಷಾಸ್ನಾನಮಾಡಿಸಿಕೊಳ್ಳಬೇಕೆಂದು ಸಾರಿದನು.
προκηρύξαντος Ἰωάννου πρὸ προσώπου τῆς εἰσόδου αὐτοῦ βάπτισμα μετανοίας τῷ Ἰσραήλ.
25 ೨೫ ಯೋಹಾನನು ತನ್ನ ಸೇವೆಯನ್ನು ಪೂರೈಸುತ್ತಿರುವಾಗ ಜನರಿಗೆ; ‘ನನ್ನನ್ನು ಯಾರೆಂದು ಯೋಚಿಸುತ್ತೀರಿ? ನಾನು ಆತನಲ್ಲ, ಆದರೆ ನನ್ನ ಹಿಂದೆ ಒಬ್ಬನು ಬರುತ್ತಾನೆ, ಆತನ ಪಾದರಕ್ಷೆಯನ್ನು ಬಿಚ್ಚುವುದಕ್ಕೆ ನಾನು ಯೋಗ್ಯನಲ್ಲ’ ಎಂದು ಹೇಳಿದನು.
Ὡς δὲ ἐπλήρου ὁ Ἰωάννης τὸν δρόμον, ἔλεγε, Τίνα με ὑπονοεῖτε εἶναι; Οὐκ εἰμὶ ἐγώ. Ἀλλ᾽ ἰδού, ἔρχεται μετ᾽ ἐμέ, οὗ οὐκ εἰμὶ ἄξιος τὸ ὑπόδημα τῶν ποδῶν λῦσαι.
26 ೨೬ “ಸಹೋದರರೇ, ಅಬ್ರಹಾಮನ ವಂಶಸ್ಥರೇ, ಮತ್ತು ನಿಮ್ಮೊಂದಿಗಿರುವ ಯೆಹೂದ್ಯಮತಾವಲಂಬಿಗಳೇ, ನಮಗೆ ಈ ರಕ್ಷಣೆಯ ವಾಕ್ಯವು ಕಳುಹಿಸಲ್ಪಟ್ಟಿದೆ.
Ἄνδρες ἀδελφοί, υἱοὶ γένους Ἀβραάμ, καὶ οἱ ἐν ὑμῖν φοβούμενοι τὸν Θεόν, ὑμῖν ὁ λόγος τῆς σωτηρίας ταύτης ἀπεστάλη.
27 ೨೭ ಯೆರೂಸಲೇಮಿನಲ್ಲಿ ವಾಸವಾಗಿರುವವರೂ, ಅವರ ಅಧಿಕಾರಿಗಳೂ, ಆತನನ್ನಾಗಲಿ, ಪ್ರತಿ ಸಬ್ಬತ್ ದಿನದಲ್ಲಿ ಪಾರಾಯಣವಾಗುವ ಪ್ರವಾದಿಗಳ ಮಾತುಗಳನ್ನಾಗಲಿ ಗ್ರಹಿಸದೆ, ಆತನನ್ನು ಅಪರಾಧಿಯೆಂದು ತೀರ್ಪುಮಾಡಿ ಆ ಮಾತುಗಳನ್ನೇ ನೆರವೇರಿಸಿದರು.
Οἱ γὰρ κατοικοῦντες ἐν Ἱερουσαλὴμ καὶ οἱ ἄρχοντες αὐτῶν, τοῦτον ἀγνοήσαντες, καὶ τὰς φωνὰς τῶν προφητῶν τὰς κατὰ πᾶν σάββατον ἀναγινωσκομένας, κρίναντες ἐπλήρωσαν.
28 ೨೮ ಮರಣದಂಡನೆಗೆ ಕಾರಣವೇನೂ ತಮಗೆ ಸಿಕ್ಕದಿದ್ದರೂ, ಆತನನ್ನು ಕೊಲ್ಲಿಸಬೇಕೆಂದು ಪಿಲಾತನನ್ನು ಕೇಳಿಕೊಂಡರು.
Καὶ μηδεμίαν αἰτίαν θανάτου εὑρόντες, ᾐτήσαντο Πιλάτον ἀναιρεθῆναι αὐτόν.
29 ೨೯ ಆತನ ವಿಷಯವಾಗಿ ಶಾಸ್ತ್ರದಲ್ಲಿ ಬರೆದಿರುವುದೆಲ್ಲಾ ನೆರವೇರಿಸಿದ ಮೇಲೆ, ಆತನನ್ನು ಮರದ ಕಂಬದಿಂದ ಇಳಿಸಿ ಸಮಾಧಿಯಲ್ಲಿಟ್ಟರು.
Ὡς δὲ ἐτέλεσαν πάντα τὰ περὶ αὐτοῦ γεγραμμένα, καθελόντες ἀπὸ τοῦ ξύλου, ἔθηκαν εἰς μνημεῖον.
30 ೩೦ “ಆದರೆ ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನು.
Ὁ δὲ Θεὸς ἤγειρεν αὐτὸν ἐκ νεκρῶν·
31 ೩೧ ಮತ್ತು ಆತನು ಗಲಿಲಾಯದಿಂದ ಯೆರೂಸಲೇಮಿಗೆ ತನ್ನ ಜೊತೆಯಲ್ಲಿ ಬಂದವರಿಗೆ ಅನೇಕ ದಿನಗಳವರೆಗೂ ಕಾಣಿಸಿಕೊಂಡನು; ಈಗ ಅವರು ಜನರಿಗೆ ಆತನ ಸಾಕ್ಷಿಗಳಾಗಿದ್ದಾರೆ.
ὃς ὤφθη ἐπὶ ἡμέρας πλείους τοῖς συναναβᾶσιν αὐτῷ ἀπὸ τῆς Γαλιλαίας εἰς Ἱερουσαλήμ, οἵτινές εἰσι μάρτυρες αὐτοῦ πρὸς τὸν λαόν.
32 ೩೨ “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
Καὶ ἡμεῖς ὑμᾶς εὐαγγελιζόμεθα τὴν πρὸς τοὺς πατέρας ἐπαγγελίαν γενομένην, ὅτι ταύτην ὁ Θεὸς ἐκπεπλήρωκε τοῖς τέκνοις αὐτῶν ἡμῖν, ἀναστήσας Ἰησοῦν·
33 ೩೩ ‘ನನಗೆ ನೀನು ಮಗನು, ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ’ ಎಂದು ಎರಡನೆಯ ಕೀರ್ತನೆಯಲ್ಲಿ ಬರೆದಿರುವ ಮಾತು ನೆರವೇರಿತು.
ὡς καὶ ἐν τῷ ψαλμῷ τῷ δευτέρῳ γέγραπται, Υἱός μου εἶ σύ, ἐγὼ σήμερον γεγέννηκά σε.
34 ೩೪ “ಇದಲ್ಲದೆ ದೇವರು ಯೇಸುವನ್ನು ಸತ್ತವರೊಳಗಿಂದ ಎಬ್ಬಿಸಿದ್ದರಿಂದ ಆತನು ಇನ್ನೆಂದಿಗೂ ಕೊಳೆಯುವ ಅವಸ್ಥೆಗೆ ಸೇರತಕ್ಕವನಲ್ಲವೆಂಬುದರ ಕುರಿತು ದೇವರು ಹೇಳಿರುವುದು ಏನೆಂದರೆ; ‘ದಾವೀದನಿಗೆ ಖಂಡಿತವಾಗಿ ವಾಗ್ದಾನಮಾಡಿದ ಕೃಪಾವರಗಳನ್ನು ನಿಮಗೂ ಕೊಡುತ್ತೇನೆ, ಅವು ನಂಬತಕ್ಕವುಗಳೇ’ ಎಂಬುದೆ.
Ὅτι δὲ ἀνέστησεν αὐτὸν ἐκ νεκρῶν, μηκέτι μέλλοντα ὑποστρέφειν εἰς διαφθοράν, οὕτως εἴρηκεν ὅτι Δώσω ὑμῖν τὰ ὅσια Δαυὶδ τὰ πιστά.
35 ೩೫ ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
Διὸ καὶ ἐν ἑτέρῳ λέγει, Οὐ δώσεις τὸν ὅσιόν σου ἰδεῖν διαφθοράν·
36 ೩೬ “ದಾವೀದನಾದರೋ ತನ್ನ ಜೀವಮಾನ ಕಾಲದಲ್ಲಿ ದೇವರ ಸಂಕಲ್ಪಕ್ಕನುಸಾರವಾಗಿ ಸೇವೆಮಾಡಿದ ನಂತರ, ಸತ್ತಾಗ ತನ್ನ ಪೂರ್ವಜರ ಬಳಿ ಅವನನ್ನು ಸಮಾಧಿಮಾಡಲಾಯಿತು, ಅವನ ದೇಹವು ಕೊಳೆಯುವ ಅವಸ್ಥೆಯನ್ನು ಅನುಭವಿಸಿತು.
Δαυὶδ μὲν γὰρ ἰδίᾳ γενεᾷ ὑπηρετήσας τῇ τοῦ Θεοῦ βουλῇ ἐκοιμήθη, καὶ προσετέθη πρὸς τοὺς πατέρας αὐτοῦ, καὶ εἶδε διαφθοράν·
37 ೩೭ ಆದರೆ ದೇವರು ಮರಣದಿಂದ ಎಬ್ಬಿಸಿದ ಯೇಸುವು ಕೊಳೆಯುವ ಅವಸ್ಥೆಯನ್ನು ಅನುಭವಿಸಲಿಲ್ಲ.
ὃν δὲ ὁ Θεὸς ἤγειρεν, οὐκ εἶδε διαφθοράν.
38 ೩೮ “ಆದುದರಿಂದ ಸಹೋದರರೇ, ಆತನ ಮೂಲಕವಾಗಿ ಪಾಪ ಕ್ಷಮಾಪಣೆಯು ದೊರೆಯುತ್ತದೆಂಬುದು ನಿಮಗೆ ಸಾರೋಣವಾಗಿತ್ತೆಂದು ನಿಮಗೆ ತಿಳಿದಿರಲಿ.
Γνωστὸν οὖν ἔστω ὑμῖν, ἄνδρες ἀδελφοί, ὅτι διὰ τούτου ὑμῖν ἄφεσις ἁμαρτιῶν καταγγέλλεται·
39 ೩೯ ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
καὶ ἀπὸ πάντων ὧν οὐκ ἠδυνήθητε ἐν τῷ νόμῳ Μωϋσέως δικαιωθῆναι, ἐν τούτῳ πᾶς ὁ πιστεύων δικαιοῦται.
40 ೪೦ ಹೀಗಿರಲಾಗಿ ಪ್ರವಾದಿಗಳ ಗ್ರಂಥದಲ್ಲಿ ಹೇಳಿರುವುದು ನಿಮಗೆ ಸಂಭವಿಸದಂತೆ ನೋಡಿಕೊಳ್ಳಿರಿ. ಆದೇನಂದರೆ;
Βλέπετε οὖν μὴ ἐπέλθῃ ἐφ᾽ ὑμᾶς τὸ εἰρημένον ἐν τοῖς προφήταις,
41 ೪೧ “‘ಎಲೈ, ತಿರಸ್ಕಾರ ಮಾಡುವವರೇ, ಆಶ್ಚರ್ಯಪಡಿರಿ, ನಾಶವಾಗಿಹೋಗಿರಿ. ನಿಮ್ಮ ಕಾಲದಲ್ಲಿ ನಾನು ಒಂದು ಕಾರ್ಯವನ್ನು ಮಾಡುವೆನು; ಆ ಕಾರ್ಯವನ್ನು ಒಬ್ಬನು ನಿಮಗೆ ವಿವರಿಸಿದರೂ ನೀವು ಅದನ್ನು ಸ್ವಲ್ಪವೂ ನಂಬುವುದಿಲ್ಲ’” ಎಂಬುದೇ ಎಂದು ಹೇಳಿದನು.
Ἴδετε, οἱ καταφρονηταί, καὶ θαυμάσατε, καὶ ἀφανίσθητε· ὅτι ἔργον ἐγὼ ἐργάζομαι ἐν ταῖς ἡμέραις ὑμῶν, ὃ οὐ μὴ πιστεύσητε, ἐάν τις ἐκδιηγῆται ὑμῖν.
42 ೪೨ ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು.
Ἐξιόντων δὲ ἐκ τῆς συναγωγῆς τῶν Ἰουδαίων, παρεκάλουν τὰ ἔθνη εἰς τὸ μεταξὺ σάββατον λαληθῆναι αὐτοῖς τὰ ῥήματα.
43 ೪೩ ಸಭೆಯು ಮುಗಿದ ತರುವಾಯ ಯೆಹೂದ್ಯರಲ್ಲಿ, ದೈವಭಕ್ತರಾಗಿದ್ದ ಯೆಹೂದ್ಯ ಮತಾವಲಂಬಿಗಳಲ್ಲಿ ಅನೇಕರು ಪೌಲ ಮತ್ತು ಬಾರ್ನಬನನ್ನು ಹಿಂಬಾಲಿಸಿದರು. ಇವರು ಅವರ ಸಂಗಡ ಮಾತನಾಡಿ ದೇವರ ಕೃಪಾಶ್ರಯದಲ್ಲಿ ನೆಲೆಗೊಂಡಿರಬೇಕೆಂದು ಅವರನ್ನು ಪ್ರೋತ್ಸಾಹಪಡಿಸಿದರು.
Λυθείσης δὲ τῆς συναγωγῆς, ἠκολούθησαν πολλοὶ τῶν Ἰουδαίων καὶ τῶν σεβομένων προσηλύτων τῷ Παύλῳ καὶ τῷ Βαρνάβᾳ· οἵτινες προσλαλοῦντες, ἔπειθον αὐτοὺς ἐπιμένειν τῇ χάριτι τοῦ Θεοῦ.
44 ೪೪ ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
Τῷ τε ἐρχομένῳ σαββάτῳ σχεδὸν πᾶσα ἡ πόλις συνήχθη ἀκοῦσαι τὸν λόγον τοῦ Θεοῦ.
45 ೪೫ ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.
Ἰδόντες δὲ οἱ Ἰουδαῖοι τοὺς ὄχλους ἐπλήσθησαν ζήλου, καὶ ἀντέλεγον τοῖς ὑπὸ τοῦ Παύλου λεγομένοις, ἀντιλέγοντες καὶ βλασφημοῦντες.
46 ೪೬ ಆಗ ಪೌಲನೂ, ಬಾರ್ನಬನೂ ಧೈರ್ಯದಿಂದ ಮಾತನಾಡಿ; ದೇವರ ವಾಕ್ಯವನ್ನು ಮೊದಲು ನಿಮಗೇ ಹೇಳುವುದು ಅಗತ್ಯವಾಗಿತ್ತು; ಆದರೆ ನೀವು ಅದನ್ನು ತಳ್ಳಿಬಿಟ್ಟು ನಿಮ್ಮನ್ನು ನಿತ್ಯಜೀವಕ್ಕೆ ಅಪಾತ್ರರೆಂದು ತೀರ್ಪು ಮಾಡಿಕೊಂಡಿದ್ದರಿಂದ ಇಗೋ, ನಾವು ನಿಮ್ಮನ್ನು ಬಿಟ್ಟು ಅನ್ಯಜನರ ಕಡೆಗೆ ಹೋಗುತ್ತೇವೆ. (aiōnios g166)
Παρρησιασάμενοι δὲ ὁ Παῦλος καὶ ὁ Βαρνάβας εἶπον, Ὑμῖν ἦν ἀναγκαῖον πρῶτον λαληθῆναι τὸν λόγον τοῦ Θεοῦ. Ἐπειδὴ δὲ ἀπωθεῖσθε αὐτόν, καὶ οὐκ ἀξίους κρίνετε ἑαυτοὺς τῆς αἰωνίου ζωῆς, ἰδοὺ στρεφόμεθα εἰς τὰ ἔθνη. (aiōnios g166)
47 ೪೭ ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು.
Οὕτω γὰρ ἐντέταλται ἡμῖν ὁ Κύριος, Τέθεικά σε εἰς φῶς ἐθνῶν, τοῦ εἶναί σε εἰς σωτηρίαν ἕως ἐσχάτου τῆς γῆς.
48 ೪೮ ಅಲ್ಲಿದ್ದ ಅನ್ಯಜನರು ಆ ಮಾತನ್ನು ಕೇಳಿ ಸಂತೋಷಪಟ್ಟು, ದೇವರ ವಾಕ್ಯವನ್ನು ಹೊಗಳಿದರು. ಮತ್ತು ನಿತ್ಯಜೀವಕ್ಕೆ ನೇಮಿಸಲ್ಪಟ್ಟವರೆಲ್ಲರೂ ನಂಬಿದರು. (aiōnios g166)
Ἀκούοντα δὲ τὰ ἔθνη ἔχαιρε, καὶ ἐδόξαζον τὸν λόγον τοῦ Κυρίου, καὶ ἐπίστευσαν ὅσοι ἦσαν τεταγμένοι εἰς ζωὴν αἰώνιον. (aiōnios g166)
49 ೪೯ ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
Διεφέρετο δὲ ὁ λόγος τοῦ Κυρίου δι᾽ ὅλης τῆς χώρας.
50 ೫೦ ಆದರೆ ಯೆಹೂದ್ಯರು ತಮ್ಮ ಮತಕ್ಕೆ ಸೇರಿದ್ದ ಭಕ್ತೆಯರಾದ ಕುಲೀನ ಸ್ತ್ರೀಯರನ್ನೂ, ಊರಿನ ಪ್ರಮುಖರನ್ನೂ, ಹುರಿದುಂಬಿಸಿ ಪೌಲ ಮತ್ತು ಬಾರ್ನಬರ ವಿರೋಧವಾಗಿ ಹಿಂಸೆಯನ್ನೆಬ್ಬಿಸಿ ಅವರನ್ನು ತಮ್ಮ ಪ್ರದೇಶದಿಂದ ಆಚೆಗೆ ಅಟ್ಟಿಬಿಟ್ಟರು.
Οἱ δὲ Ἰουδαῖοι παρώτρυναν τὰς σεβομένας γυναῖκας καὶ τὰς εὐσχήμονας καὶ τοὺς πρώτους τῆς πόλεως, καὶ ἐπήγειραν διωγμὸν ἐπὶ τὸν Παῦλον καὶ τὸν Βαρνάβαν, καὶ ἐξέβαλον αὐτοὺς ἀπὸ τῶν ὁρίων αὐτῶν.
51 ೫೧ ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
Οἱ δὲ ἐκτιναξάμενοι τὸν κονιορτὸν τῶν ποδῶν αὐτῶν ἐπ᾽ αὐτούς, ἦλθον εἰς Ἰκόνιον.
52 ೫೨ ಶಿಷ್ಯರಾದವರು ಸಂತೋಷಭರಿತರೂ, ಪವಿತ್ರಾತ್ಮಭರಿತರೂ ಆಗಿದ್ದರು.
Οἱ δὲ μαθηταὶ ἐπληροῦντο χαρᾶς καὶ Πνεύματος Ἁγίου.

< ಅಪೊಸ್ತಲರ ಕೃತ್ಯಗಳ 13 >