< ಅಪೊಸ್ತಲರ ಕೃತ್ಯಗಳ 16 >

1 ಅನಂತರ ಅವನು ದೆರ್ಬೆಗೂ, ಲುಸ್ತ್ರಕ್ಕೂ ಬಂದನು. ಲುಸ್ತ್ರದಲ್ಲಿ ತಿಮೊಥೆಯನೆಂಬ ಒಬ್ಬ ಶಿಷ್ಯನಿದ್ದನು. ಅವನು ಕ್ರಿಸ್ತನನ್ನು ನಂಬಿದ್ದ ಒಬ್ಬ ಯೆಹೂದ್ಯ ಸ್ತ್ರೀಯ ಮಗನು. ಅವನ ತಂದೆ ಗ್ರೀಕನು.
फेर वो दिरबे अर लुस्त्रा नगर म्ह भी गया। ओड़ै तीमुथियुस नाम का एक चेल्ला था, उसकी माँ एक यहूदी बिश्वासी थी, पर उसका बाप यूनानी था।
2 ಅವನು ಲುಸ್ತ್ರದಲ್ಲಿಯೂ, ಇಕೋನ್ಯದಲ್ಲಿಯೂ ಇದ್ದ ಸಹೋದರರಿಂದ ಒಳ್ಳೆಯ ಸಾಕ್ಷಿಯನ್ನು ಹೊಂದಿದ್ದವನು.
वो लुस्त्रा अर इकुनियुम नगर के भाईयाँ म्ह उसका आच्छा नाम था।
3 ಅವನು ತನ್ನ ಸಂಗಡ ಬರಬೇಕೆಂದು ಪೌಲನು ಅಪೇಕ್ಷಿಸಿ ಆ ಸ್ಥಳಗಳಲ್ಲಿದ್ದ ಯೆಹೂದ್ಯರ ನಿಮಿತ್ತವಾಗಿ ಅವನಿಗೆ ಸುನ್ನತಿ ಮಾಡಿಸಿದನು, ಏಕೆಂದರೆ ಅವನ ತಂದೆ ಗ್ರೀಕನೆಂಬುದು ಎಲ್ಲರಿಗೂ ತಿಳಿದ ಸಂಗತಿಯಾಗಿತ್ತು.
पौलुस की मर्जी या थी के वो उसके गेल्या जावै, अर जो यहूदी माणस उन जगहां म्ह थे उनकै कारण उननै उनका खतना करया, क्यूँके वे सारे जाणै थे, के उनका बाप यूनानी था।
4 ಬಳಿಕ ಅವರು ಊರೂರುಗಳಲ್ಲಿ ಸಂಚಾರಮಾಡುತ್ತಿರುವಾಗ ಯೆರೂಸಲೇಮಿನಲ್ಲಿದ್ದ ಅಪೊಸ್ತಲರೂ, ಸಭೆಯ ಹಿರಿಯರೂ ನಿರ್ಣಯಿಸಿದ್ದ ವಿಧಿಗಳನ್ನು ಅವರಿಗೆ ತಿಳಿಸಿ ಅವುಗಳನ್ನು ನೀವು ಅನುಸರಿಸಿ ನಡೆಯಬೇಕೆಂದು ಬೋಧಿಸಿದರು.
पौलुस अर उसका साथी नगर-नगर जान्दे होड़ चेल्यां ताहीं वे सारे हुकम सौपते जावै थे, जो यरुशलेम नगर के प्रेरितां अर कलीसिया के अगुवां नै तय करी थी।
5 ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು.
इस तरियां कलीसिया बिश्वास म्ह पक्की होंदी गई अर गिणती दिन-ब-दिन बधती गई।
6 ಆಸ್ಯಸೀಮೆಯಲ್ಲಿ ವಾಕ್ಯವನ್ನು ಹೇಳಬಾರದೆಂದು ಪವಿತ್ರಾತ್ಮನು ತಡೆದ್ದುದರಿಂದ ಅವರು ಫ್ರುಗ್ಯ, ಗಲಾತ್ಯ ಸೀಮೆಯನ್ನು ಹಾದುಹೋಗಿ,
वे फ्रुगिया अर गलातिया परदेसां म्ह तै होकै गये, क्यूँके पवित्र आत्मा नै उननै आसिया परदेस म्ह वचन सुणाण तै मना करया।
7 ಮೂಸ್ಯಕ್ಕೆ ಹತ್ತಿರವಾಗಿ ಬಂದಾಗ, ಬಿಥೂನ್ಯಕ್ಕೆ ಹೋಗುವ ಪ್ರಯತ್ನಮಾಡಿದರು. ಅಲ್ಲಿಯೂ ಯೇಸುವಿನ ಆತ್ಮನು ಅವರನ್ನು ಹೋಗಗೊಡಿಸಲಿಲ್ಲ.
उननै मूसिया परदेस कै लोवै पोहचकै, बिथुनिया परदेस म्ह जाणा चाह्या, पर पवित्र आत्मा नै उन ताहीं जाण कोनी दिया।
8 ಆಗ ಅವರು ಮೂಸ್ಯದ ಮುಖಾಂತಾರವಾಗಿ ತ್ರೋವಕ್ಕೆ ಬಂದರು.
आखर म्ह वे मूसिया परदेस तै होकै त्रोआस म्ह आये।
9 ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು, ಏನೆಂದರೆ, ಮಕೆದೋನ್ಯ ದೇಶದವನಾದ ಒಬ್ಬ ಮನುಷ್ಯನು ನಿಂತುಕೊಂಡು; “ನೀನು ಸಮುದ್ರವನ್ನು ದಾಟಿ ಮಕೆದೋನ್ಯಕ್ಕೆ ಬಂದು ನಮಗೆ ನೆರವಾಗಬೇಕೆಂದು” ಅವನನ್ನು ಬೇಡಿಕೊಳ್ಳುತ್ತಿದ್ದನು.
ओड़ै पौलुस नै रात नै दर्शन देख्या के एक मकिदुनिया परदेस का माणस खड्या होया उनतै बिनती करकै कहण लागरया सै, “पार उतरकै मकिदुनिया परदेस म्ह आ, अर म्हारी मदद कर।”
10 ೧೦ ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.
उसकै यो दर्शन देखदे हमनै जिब्बे मकिदुनिया परदेस जाणा चाह्या, न्यू सोचकै के परमेसवर नै म्हारै ताहीं उनतै सुसमाचार सुणाण कै खात्तर बुलाया सै।
11 ೧೧ ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
इस करकै त्रोआस नगर तै जहाज खोल कै हम सीध्धे सुमात्राके टापू अर दुसरे दिन नियापुलिस नगर म्ह आये।
12 ೧೨ ಫಿಲಿಪ್ಪಿ ಎಂಬುದು ಮಕೆದೋನ್ಯದಲ್ಲಿ ಪ್ರಧಾನ ಪಟ್ಟಣ, ಇದು ರೋಮಾಪುರದವರ ಒಂದು ಪ್ರವಾಸ ಸ್ಥಾನವೂ ಆಗಿದೆ. ಈ ಪಟ್ಟಣದಲ್ಲಿ ನಾವು ಕೆಲವು ದಿನಗಳ ಕಾಲ ಇದ್ದೆವು.
ओड़ै तै हम फिलिप्पी नगर पोहचे, जो मकिदुनिया परदेस का खास नगर अर रोमियों का मोहल्ला सै, अर हम उस नगर कुछे दिन रहे।
13 ೧೩ ನದೀತೀರದಲ್ಲಿ ದೇವರ ಪ್ರಾರ್ಥನೆ ನಡೆಯುವ ಸ್ಥಳ ಇರುವುದೆಂದು ತಿಳಿದು ಸಬ್ಬತ್ ದಿನದಲ್ಲಿ ಊರ ಬಾಗಿಲಿನ ಹೊರಗೆ ಹೋಗಿ ಅಲ್ಲಿ ಕೂಡಿಬಂದಿದ್ದ ಸ್ತ್ರೀಯರ ಸಂಗಡ ಕುಳಿತುಕೊಂಡು ಮಾತನಾಡಿದೆವು.
आराम कै दिन हम नगर कै फाटक कै बाहरणै नदी कै किनारे न्यू सोचकै गये के ओड़ै प्रार्थना करण की जगहां होगी, अर बैठकै उन लुगाईयाँ तै जो कठ्ठी होई थी, बतळाण लाग्गे।
14 ೧೪ ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.
थुआतीरा नगर की बैंजनी लत्ते बेचण आळी एक लुदिया नाम की परमेसवर की भगतणी उनकी बात सुणण लागरी थी। प्रभु नै उसका मन खोल्या ताके वा पौलुस की बात्तां पै मन लगावै।
15 ೧೫ ಆಕೆಯೂ, ಆಕೆಯ ಮನೆಯವರೂ ದೀಕ್ಷಾಸ್ನಾನ ಮಾಡಿಸಿಕೊಂಡ ಮೇಲೆ, ಆಕೆ; “ಕರ್ತನನ್ನು ನಂಬಿದವಳೆಂದು ನೀವು ನನ್ನ ಬಗ್ಗೆ ನಿಶ್ಚಯಿಸಿಕೊಂಡಿದ್ದರೆ ನನ್ನ ಮನೆಯಲ್ಲಿ ಬಂದು ಉಳಿದುಕೊಳ್ಳಬೇಕೆಂದು” ಬೇಡಿಕೊಂಡು ನಮ್ಮನ್ನು ಬಲವಂತ ಮಾಡಿದಳು.
जिब उसनै अपणे कुण्बे सुधा बपतिस्मा लिया, तो उसनै म्हारै तै बिनती करी, “जै थम मन्नै प्रभु की बिश्वासिणी समझो सो, तो चालकै मेरै घर म्ह रहो,” अर वा हमनै मनाकै ले गई।
16 ೧೬ ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವುದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.
जिब हम प्रार्थना करण की जगहां पै जाण लागरे थे, तो हमनै एक कम उम्र की दास्सी मिली जिसम्ह भविष्य बताण आळी आत्मा थी, अर वा भविष्य बताकै अपणे मालिकां कै खात्तर घणाए कमा लेवै थी।
17 ೧೭ ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
वा पौलुस कै अर म्हारै पाच्छै आकै नै किल्की मारण लाग्गी, “ये माणस परमप्रधान परमेसवर के दास सै, जो म्हारै ताहीं उद्धार के राह की कथा सुणावै सै।”
18 ೧೮ ಅನೇಕ ದಿನ ಅವಳು ಹೀಗೆ ಮಾಡುತ್ತಿದ್ದುದರಿಂದ ಪೌಲನು ಬಹಳವಾಗಿ ಬೇಸರಗೊಂಡು ಹಿಂತಿರುಗಿ ಅವಳೊಳಗಿದ್ದ ದುರಾತ್ಮಕ್ಕೆ; “ಅವಳನ್ನು ಬಿಟ್ಟುಹೋಗು ಎಂದು ಯೇಸು ಕ್ರಿಸ್ತನ ಹೆಸರಿನಲ್ಲಿ ನಿನಗೆ ಆಜ್ಞಾಪಿಸುತ್ತೇನೆ” ಎಂದು ಹೇಳಿದನು. ಅದೇ ಗಳಿಗೆಯಲ್ಲಿಯೇ ಅದು ಬಿಟ್ಟು ಹೋಯಿತು.
वा घणे दिनां ताहीं न्यूए कर दी रही, पर पौलुस परेशान होग्या, अर बोहड़कै उस ओपरी आत्मा तै बोल्या, “मै तन्नै यीशु मसीह कै नाम तै हुकम दियुँ सूं के उस म्ह तै बाहरणै लिकड़ जा।” अर वा उस्से बखत लिकड़गी।
19 ೧೯ ಅವಳ ಯಜಮಾನರು ತಮ್ಮ ಆದಾಯದ ನಿರೀಕ್ಷೆ ತಪ್ಪಿತಲ್ಲಾ ಎಂದು ತಿಳಿದು ಪೌಲನನ್ನೂ ಮತ್ತು ಸೀಲನನ್ನೂ ಹಿಡಿದು ಮಾರುಕಟ್ಟೆಯ ಸ್ಥಳಕ್ಕೆ ಅಧಿಕಾರಿಗಳ ಬಳಿಗೆ ಎಳೆದುಕೊಂಡು ಹೋದರು.
जिब उसके मालिकां नै देख्या के म्हारी कमाई की आस खतम होग्यी, तो पौलुस अर सीलास नै पकड़कै चौक म्ह प्रधानां कै धोरै खींच ल्याए,
20 ೨೦ ಅವರನ್ನು ಅಧಿಕಾರಿಗಳ ಮುಂದೆ ತಂದು; “ಈ ಮನುಷ್ಯರು ನಮ್ಮ ಪಟ್ಟಣವನ್ನು ಬಹಳವಾಗಿ ಕದಡುತ್ತಿದ್ದಾರೆ;
अर उन ताहीं न्यायाधीश कै धोरै ल्याए अर बोल्ले, “ये माणस जो यहूदी सै, म्हारे नगर म्ह दंगा मचाण लागरे सै,
21 ೨೧ ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
अर इसे रीति-रिवाज बतावै सै, जिन ताहीं हम रोमियाँ कै खात्तर अपणाना सही कोनी।”
22 ೨೨ ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.
फेर भीड़ के माणस उनकै बिरोध म्ह कठ्ठे होकै उनपै चढ़ याए, अर हाकिमां नै उनके लत्ते पाड़कै उतार दिये, अर उनकै बैत मारण का हुकम दिया।
23 ೨೩ ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
घणी बैत मारे पाच्छै उननै उन ताहीं जेळ म्ह गेर दिया अर दरोग्गा ताहीं हुकम दिया के उननै चौक्कस राखिये।
24 ೨೪ ಅವನು ಇಂಥಾ ಅಪ್ಪಣೆಯನ್ನು ಹೊಂದಿ ಅವರನ್ನು ಸೆರೆಮನೆಯ ಒಳಕೋಣೆಯಲ್ಲಿ ಹಾಕಿ ಅವರ ಕಾಲುಗಳಿಗೆ ಕೋಳವನ್ನು ಹಾಕಿ ಬಿಗಿಸಿದನು.
उसनै इसा हुकम पाकै उन ताहीं भित्तरली कोठड़ी म्ह राख्या अर उनके पाँ काठ की बेड़ियाँ तै जकड़ दिये।
25 ೨೫ ಮಧ್ಯರಾತ್ರಿಯಲ್ಲಿ ಪೌಲನೂ ಮತ್ತು ಸೀಲನೂ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಿದ್ದರು; ಸೆರೆಯಲ್ಲಿದ್ದವರು ಲಕ್ಷ್ಯವಿಟ್ಟು ಕೇಳುತ್ತಿದ್ದರು.
आध्धी रात कै बखत पौलुस अर सीलास प्रार्थना करदे होए परमेसवर के भजन गाण लागरे थे, अर कैदी उनकी सुणण लागरे थे।
26 ೨೬ ಆಕಸ್ಮಾತ್ತಾಗಿ ಮಹಾಭೂಕಂಪವುಂಟಾಯಿತು; ಸೆರೆಮನೆಯ ಅಸ್ತಿವಾರಗಳು ಕದಲಿದವು. ಅದೇ ಕ್ಷಣದಲ್ಲಿ ಕದಗಳೆಲ್ಲಾ ತೆರೆದವು, ಎಲ್ಲರ ಬೇಡಿಗಳು ಕಳಚಿಬಿದ್ದವು.
इतनै म्ह चाणचक बड्ड़ा हाल्लण आ ग्या, उरै ताहीं के जेळ की नीम भी हालगी, अर जिब्बे सारे दरबाजे खुलगे, अर सारया के बन्धन खुलकै पड़गे।
27 ೨೭ ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
दरोग्गा जागग्या, अर जेळ के दरबाजे खुल्ले देखकै समझ गया के कैदी भाजगे सै, इस करकै उसनै तलवार खिंचकै खुद ताहीं मारणा चाह्या।
28 ೨೮ ಆದರೆ ಪೌಲನು ಮಹಾ ಶಬ್ದದಿಂದ ಕೂಗಿ ಅವನಿಗೆ; “ನೀನೇನೂ ಕೇಡುಮಾಡಿಕೊಳ್ಳಬೇಡ, ನಾವೆಲ್ಲರೂ ಇಲ್ಲೇ ಇದ್ದೇವೆ” ಎಂದು ಹೇಳಿದನು.
पर पौलुस नै ठाड्डू आवाज म्ह रुक्का मारया, “अपणे-आपनै किमे नुकसान ना पोहोचाइये, क्यूँके हम सारे उरैए सां।”
29 ೨೯ ಆಗ ಅವನು; ದೀಪ ತರಬೇಕೆಂದು ಕೂಗಿ ಒಳಕ್ಕೆ ಹಾರಿ ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಮುಂದೆ ಆಡ್ಡಬಿದ್ದನು.
फेर दरोग्गा दिवां मँगाकै भित्तर आया, अर काम्बदा होया पौलुस अर सीलास कै आग्गै पड्या,
30 ೩೦ ಮತ್ತು ಅವರನ್ನು ಹೊರಗೆ ಕರೆದುಕೊಂಡು ಬಂದು; “ಸ್ವಾಮಿಗಳೇ, ನಾನು ರಕ್ಷಣೆಹೊಂದುವುದಕ್ಕೆ ಏನು ಮಾಡಬೇಕೆಂದು?” ಕೇಳಲು,
अर उन ताहीं बाहरणै ल्याकै बोल्या, “हे भले माणसों, उद्धार पाण कै खात्तर मै के करुँ?”
31 ೩೧ ಅವರು; “ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡು, ಆಗ ನೀನು ರಕ್ಷಣೆ ಹೊಂದುವಿ, ನಿನ್ನ ಮನೆಯವರೂ ರಕ್ಷಣೆಹೊಂದುವರು” ಎಂದು ಹೇಳಿ,
उननै कह्या, “प्रभु यीशु मसीह पै बिश्वास कर, तो तू अर तेरा कुण्बा उद्धार पावैगा।”
32 ೩೨ ಅವನಿಗೂ, ಅವನ ಮನೆಯಲ್ಲಿದ್ದವರೆಲ್ಲರಿಗೂ ದೇವರ ವಾಕ್ಯವನ್ನು ತಿಳಿಸಿದರು.
अर उननै उस ताहीं अर उसके सारे घर के माणसां ताहीं प्रभु का वचन सुणाया।
33 ೩೩ ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
रात नै उस्से बखत उसनै उन ताहीं ले जाकै उनके घाव धोये, अर उसनै अपणे सारे माणसां सुधा जिब्बे बपतिस्मा लिया।
34 ೩೪ ತರುವಾಯ ಅವರನ್ನು ತನ್ನ ಮನೆಗೆ ಕರೆದುಕೊಂಡು ಹೋಗಿ ಊಟಮಾಡಿಸಿದನು. ಅವನು ತನ್ನ ಮನೆಯವರೆಲ್ಲರ ಸಂಗಡ ದೇವರನ್ನು ನಂಬಿ ಸಂತೋಷಪಟ್ಟರು.
फेर दरोग्गै नै उन ताहीं अपणे घरां ले जाकै उनकै आग्गै खाणा धरया, अर साब्ते कुण्बे सुधा परमेसवर पै बिश्वास करकै आनन्द करया।
35 ೩೫ ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು.
आगले दिन फेर हाकिमां नै सिपाहियाँ के हाथ्थां कहवां भेज्या के उन माणसां नै छोड़ द्यो।
36 ೩೬ ಸೆರೆಮನೆಯ ಯಜಮಾನನು ಈ ಮಾತನ್ನು ಪೌಲನಿಗೆ ತಿಳಿಸಿ; “ಅಧಿಕಾರಿಗಳು ನಿಮ್ಮನ್ನು ಬಿಟ್ಟುಬಿಡಬೇಕೆಂದು ಹೇಳಿಕಳುಹಿಸಿದ್ದಾರೆ, ಆದುದರಿಂದ ಈಗ ನೀವು ಸಮಾಧಾನದಿಂದ ಹೊರಟುಹೋಗಿರಿ” ಎಂದು ಹೇಳಿದನು.
दरोग्गै नै ये बात पौलुस तै कही, “हाकिमां नै थारे ताहीं छोड़ देण का हुकम दिया सै। ज्यांतै इब खुश होकै जाओ।”
37 ೩೭ ಅದಕ್ಕೆ ಪೌಲನು; “ಅವರು ವಿಚಾರಣೆಮಾಡದೆ ರೋಮಾಪುರದ ಹಕ್ಕುದಾರರಾದ ನಮ್ಮನ್ನು ಎಲ್ಲರ ಮುಂದೆ ಹೊಡಿಸಿ ಸೆರೆಮನೆಯೊಳಗೆ ಹಾಕಿಸಿದರು; ಈಗ ನಮ್ಮನ್ನು ಗುಪ್ತವಾಗಿ ಹೊರಗೆ ಕಳುಹಿಸುತ್ತಾರೋ? ಹಾಗೆ ಎಂದಿಗೂ ಆಗಕೂಡದು; ಅವರೇ ಬಂದು ನಮ್ಮನ್ನು ಹೊರಗೆ ಕರದುಕೊಂಡುಹೋದರೆ ಸರಿ” ಎಂದು ಹೇಳಿದನು.
पर पौलुस नै उनतै कह्या, “उननै म्हारै ताहीं जो रोमी माणस सै, कसूरवार ठहराए बिना माणसां कै स्याम्ही मारया अर जेळ म्ह गेरया। इब के हमनै बोल-बाल्ले लिकाड़ण लागरे सै? इसा कोनी, पर वे खुद आकै हमनै बाहरणै लिकाड़ै।”
38 ೩೮ ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
सिपाहियाँ नै ये बात हाकिमां तै कही, अर वे न्यू सुणकै के वे रोम के बासिन्दे सै, डरगे,
39 ೩೯ ಪೌಲ ಮತ್ತು ಸೀಲರ ಬಳಿಗೆ ಹೋಗಿ ವಿನಯವಾಗಿ ಮಾತನಾಡಿ ಅವರನ್ನು ಹೊರಕ್ಕೆ ಕರೆದುಕೊಂಡು ಬಂದು; ನೀವು ಊರನ್ನು ಬಿಟ್ಟುಹೋಗಬೇಕೆಂದು ಬೇಡಿಕೊಂಡರು.
अर आकै उन ताहीं मनाया, अर बाहरणै ले जाकै बिनती करी के नगर चले जाओ।
40 ೪೦ ಆಗ ಅವರು ಸೆರೆಮನೆಯೊಳಗಿಂದ ಹೊರಟು ಲುದ್ಯಳ ಮನೆಗೆ ಬಂದು ಸಹೋದರರನ್ನು ನೋಡಿ ಅವರನ್ನು ಧೈರ್ಯಗೊಳಿಸಿ ಅಲ್ಲಿಂದ ಹೊರಟುಹೋದರು.
वे जेळ तै लिकड़कै लुदिया कै उरै गये, अर बिश्वासी भाईयाँ तै भेंट करकै उन ताहीं शान्ति देई, अर चले गये।

< ಅಪೊಸ್ತಲರ ಕೃತ್ಯಗಳ 16 >