< ಧರ್ಮೋಪದೇಶಕಾಂಡ 20 >

1 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
あなたが敵と戦うために出る時、馬と戦車と、あなたよりも大ぜいの軍隊を見ても、彼らを恐れてはならない。あなたをエジプトの国から導きのぼられたあなたの神、主が共におられるからである。
2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
あなたがたが戦いに臨むとき、祭司は進み出て民に告げて、
3 “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
彼らに言わなければならない、『イスラエルよ聞け。あなたがたは、きょう、敵と戦おうとしている。気おくれしてはならない。恐れてはならない。あわててはならない。彼らに驚いてはならない。
4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
あなたがたの神、主が共に行かれ、あなたがたのために敵と戦って、あなたがたを救われるからである』。
5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
次につかさたちは民に告げて言わなければならない。『新しい家を建てて、まだそれをささげていない者があれば、その人を家に帰らせなければならない。そうしなければ、彼が戦いに死んだとき、ほかの人がそれをささげるようになるであろう。
6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
ぶどう畑を作って、まだその実を食べていない者があれば、その人を家に帰らせなければならない。そうしなければ彼が戦いに死んだとき、ほかの人がそれを食べるようになるであろう。
7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
女と婚約して、まだその女をめとっていない者があれば、その人を家に帰らせなければならない。そうしなければ彼が戦いに死んだとき、ほかの人が彼女をめとるようになるであろう』。
8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
つかさたちは、また民に告げて言わなければならない。『恐れて気おくれする者があるならば、その人を家に帰らせなければならない。そうしなければ、兄弟たちの心が彼の心のようにくじけるであろう』。
9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
つかさたちがこのように民に告げ終ったならば、軍勢のかしらたちを立てて民を率いさせなければならない。
10 ೧೦ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
一つの町へ進んで行って、それを攻めようとする時は、まず穏やかに降服することを勧めなければならない。
11 ೧೧ ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
もしその町が穏やかに降服しようと答えて、門を開くならば、そこにいるすべての民に、みつぎを納めさせ、あなたに仕えさせなければならない。
12 ೧೨ ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
もし穏やかに降服せず、戦おうとするならば、あなたはそれを攻めなければならない。
13 ೧೩ ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
そしてあなたの神、主がそれをあなたの手にわたされる時、つるぎをもってそのうちの男をみな撃ち殺さなければならない。
14 ೧೪ ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
ただし女、子供、家畜およびすべて町のうちにあるもの、すなわちぶんどり物は皆、戦利品として取ることができる。また敵からぶんどった物はあなたの神、主が賜わったものだから、あなたはそれを用いることができる。
15 ೧೫ ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
遠く離れている町々、すなわちこれらの国々に属さない町々には、すべてこのようにしなければならない。
16 ೧೬ ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
ただし、あなたの神、主が嗣業として与えられるこれらの民の町々では、息のある者をひとりも生かしておいてはならない。
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
すなわちヘテびと、アモリびと、カナンびと、ペリジびと、ヒビびと、エブスびとはみな滅ぼして、あなたの神、主が命じられたとおりにしなければならない。
18 ೧೮ ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
これは彼らがその神々を拝んでおこなったすべての憎むべき事を、あなたがたに教えて、それを行わせ、あなたがたの神、主に罪を犯させることのないためである。
19 ೧೯ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
長く町を攻め囲んで、それを取ろうとする時でも、おのをふるって、そこの木を切り枯らしてはならない。それはあなたの食となるものだから、切り倒してはならない。あなたは田野の木までも、人のように攻めなければならないであろうか。
20 ೨೦ ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
ただし実を結ばない木とわかっている木は切り倒して、あなたと戦っている町にむかい、それをもってとりでを築き、陥落するまで、それを攻めることができる。

< ಧರ್ಮೋಪದೇಶಕಾಂಡ 20 >