< ಧರ್ಮೋಪದೇಶಕಾಂಡ 20 >

1 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
तुम्ही शत्रूवर चाल करून जाल तेव्हा त्यांचे घोडे, रथ आणि तुमच्यापेक्षा मोठे सैन्य पाहून घाबरुन जाऊ नका. कारण ज्याने तुम्हास मिसरमधून बाहेर काढले तो परमेश्वर देव तुमच्याबरोबर आहे.
2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
तुम्ही युद्धावर जाल तेव्हा तुमच्या याजकाने आपल्या सैन्याकडे येऊन त्यांच्याशी बोलणे करावे.
3 “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
ते अशी, “इस्राएल लोकहो, ऐका. तुम्ही आज शत्रूवर चाल करून जात आहात. तेव्हा आपले धैर्य गमावू नका. भयभीत होऊ नका. मन कचरू देऊ नका, भिऊ नका, थरथर कापू नका शत्रूला पाहून घाबरु नका.
4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
कारण तुम्हास देव परमेश्वर ह्याची साथ आहे. शत्रू विरूद्ध लढाई करायला तसेच विजय मिळवायला तो तुम्हास मदत करणारा आहे.”
5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
मग लेवी अधिकाऱ्यांनी सैन्याला असे सांगावे, “नवीन घर बांधून अजून त्याचे अर्पण केले नाही असा कोणी तुमच्यात आहे का? त्याने परत जावे. कारण तो युद्धात मरण पावल्यास दुसरा कोणी गृहप्रवेश करील.
6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
द्राक्षमळा लावून अजून त्याची तोडणी केली नाही, फळ चाखले नाही असा कोणी आहे काय? त्याने माघारी जावे कारण तो युद्धात मरण पावल्यास दुसराच कोणी त्याच्या मळ्यातील फळे खाईल.
7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
तसेच, पत्नीला मागणी घालून अजून लग्न केलेले नाही असा कोणी असल्यास त्याने परत जावे. कारण तो युद्धात कामी आल्यास त्याच्या वाग्दत्त वधूशी दुसरा कोणी लग्न करील.”
8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
त्या लेवी अधिकाऱ्यांनी पुढे हेही सांगावे की “भीत्रा व घाबरलेल्या मनाचा कोणी असल्यास त्याने घरी परत जावे. नाहीतर त्याच्यामुळे इतरांचेही हृदयाचे अवसान गळेल.”
9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
अशाप्रकारे सैन्याशी संभाषण केल्यानंतर अधिकाऱ्यांनी सेनापतींची नेमणूक करावी.
10 ೧೦ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
१०तुम्ही एखाद्या नगरावर चाल करून जाल तेव्हा प्रथम शांततेच्या तहाची बोलणी करून पाहा.
11 ೧೧ ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
११त्यांनी तुमच्या बोलण्याला शांतीने उत्तर देऊन नगराचे दरवाजे उघडले तर तेथील सर्व प्रजा तुमची गुलाम होईल व तुमची सेवाचाकरी करील.
12 ೧೨ ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
१२पण त्यांनी तुमची तहाची बोलणी फेटाळून लावली आणि ते युद्धाला सज्ज झाले तर मग नगराला वेढा घाला.
13 ೧೩ ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
१३आणि तुमचा देव परमेश्वर ते तुमच्या हाती देईल तेव्हा तेथील सर्व पुरुषांना तलवारीने ठार करा.
14 ೧೪ ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
१४पण त्या नगरातील स्त्रिया, मुले, गुरेढोरे इत्यादी लूट स्वत: साठी घ्या. तुमचा देव परमेश्वर ह्याने दिलेल्या या लुटीचा उपभोग घ्या.
15 ೧೫ ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
१५तुमच्यापासून फार लांब असणाऱ्या व तुमच्या प्रदेशाबाहेर असणाऱ्या नगरांबाबत असे करण्यात यावे.
16 ೧೬ ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
१६पण तुमचा देव परमेश्वर तुम्हास देणार असलेल्या प्रदेशातील नगरे तुम्ही ताब्यात घ्याल तेव्हा तिथे मात्र कोणालाही जिवंत ठेवू नका.
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
१७हित्ती, अमोरी, कनानी, परिज्जी, हिव्वी, यबूसी अशा एकूण एक सर्वांचा तुमचा देव परमेश्वर ह्याच्या आज्ञेप्रमाणे समूळ नाश करा.
18 ೧೮ ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
१८नाहीतर आपापल्या दैवतांची पूजा करताना ते ज्या अमंगळ गोष्टी करतात त्या ते तुम्हास शिकवतील आणि तसे करणे आपला देव परमेश्वर ह्याच्या दृष्टीने पाप आहे.
19 ೧೯ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
१९युद्धात एखाद्या नगराला तुम्ही फार काळ वेढा घालून राहिलात तर तेथील फळझाडांवर कुऱ्हाड चालवू नका. त्यांची फळे अवश्य खा पण झाडे तोडू नका. त्यांच्याशी युद्ध पुकारायला ती झाडे काही तुमची शत्रू नाहीत.
20 ೨೦ ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
२०पण ज्यांना फळ येत नाहीत ती झाडे तोडलीत तरी चालतील. युद्ध चालू असेल ते नगर पडेपर्यंत युद्धासाठी लागणारी तटबंदी बनवायला त्या लाकडाचा उपयोग हवा तर करा.

< ಧರ್ಮೋಪದೇಶಕಾಂಡ 20 >