< ಧರ್ಮೋಪದೇಶಕಾಂಡ 20 >

1 ನೀವು ನಿಮ್ಮ ಶತ್ರುಗಳಿಗೆ ವಿರುದ್ಧವಾಗಿ ಯುದ್ಧಕ್ಕೆ ಹೊರಟಾಗ ಅವರ ಹತ್ತಿರ ಕುದುರೆಗಳೂ, ರಥಗಳೂ ಮತ್ತು ನಿಮಗಿಂತ ಹೆಚ್ಚಾದ ಕಾಲ್ಬಲವೂ ಇರುವುದನ್ನು ಕಂಡರೆ ಹೆದರಬಾರದು. ಏಕೆಂದರೆ ಐಗುಪ್ತದೇಶದಿಂದ ನಿಮ್ಮನ್ನು ಬಿಡಿಸಿದ ನಿಮ್ಮ ದೇವರಾದ ಯೆಹೋವನು ನಿಮ್ಮ ಕಡೆ ಇದ್ದಾನಲ್ಲಾ.
तिमीहरू आफ्ना शत्रुहरूको विरुद्धमा युद्धमा जाँदा तिमीहरूले तिनीहरूको भन्दा धेरै घोडा, रथ र मानिसहरू देख्यौ भने तिनीहरूदेखि नडराओ । किनकि परमप्रभु तिमीहरूका परमेश्‍वर तिमीहरूसितै हुनुहुन्छ जसले तिमीहरूलाई मिश्र देशबाट निकालेर ल्याउनुभयो ।
2 ನಿಮಗೆ ಯುದ್ಧ ಸಮೀಪಿಸಿದಾಗ ಯಾಜಕನು ಮುಂದೆ ಬಂದು ಭಟರ ಸಂಗಡ ಮಾತನಾಡಿ ಅವರಿಗೆ,
तिमीहरू युद्धमा जानै लाग्दा पुजारी नजिक आएर मानिसहरूलाई उसले यसो भन्‍नुपर्छ,
3 “ಇಸ್ರಾಯೇಲರೇ, ಕೇಳಿರಿ; ನೀವು ಈಗ ಶತ್ರುಗಳೊಡನೆ ಯುದ್ಧಮಾಡುವ ಕಾಲ ಸಮೀಪಿಸಿತಷ್ಟೆ. ನೀವು ಎದೆಗುಂದಬಾರದು, ದಿಗಿಲುಪಡಬಾರದು, ನಡುಗಬಾರದೂ ಮತ್ತು ಅವರಿಗೆ ಹೆದರಲೂಬಾರದು.
'हे इस्राएली हो, सुन । तिमीहरू आफ्ना शत्रुको विरुद्धमा युद्धमा जान लागेका छौ । तिमीहरूका ह्रदय विचलत नहोऊन् । नडराओ, नकाम । तिनीहरूदेखि भयभीत नहोओ ।
4 ನಿಮ್ಮ ದೇವರಾದ ಯೆಹೋವನು ತಾನೇ ನಿಮ್ಮ ಸಂಗಡ ಇದ್ದು ಶತ್ರುಗಳೊಡನೆ ನಿಮಗೋಸ್ಕರ ಯುದ್ಧಮಾಡಿ ನಿಮಗೆ ಜಯವನ್ನು ಉಂಟುಮಾಡುವನು” ಎಂದು ಹೇಳಬೇಕು.
किनकि परमप्रभु तिमीहरूका परमेश्‍वर नै तिमीहरूका शत्रुहरूको विरुद्धमा लडी तिमीहरूलाई बचाउन तिमीहरूको अगिअगि जाँदै हुनुहुन्छ ।'
5 ಮತ್ತು ಸೈನ್ಯಾಧಿಪತಿಗಳು ಅವರಿಗೆ, “ನಿಮ್ಮಲ್ಲಿ ಯಾವನಾದರೂ ಹೊಸ ಮನೆಯನ್ನು ಕಟ್ಟಿಸಿಕೊಂಡು ಇನ್ನು ಪ್ರತಿಷ್ಠೆ ಮಾಡದಿದ್ದರೆ ಅವನು ಆ ಮನೆಗೆ ಹೋಗಲಿ, ಅವನು ಯುದ್ಧಕ್ಕೆ ಬಂದು ಸತ್ತರೆ ಮತ್ತೊಬ್ಬನು ಆ ಮನೆಯಲ್ಲಿ ಗೃಹಪ್ರವೇಶ ಮಾಡಿಕೊಳ್ಳಬಹುದು.
अधिकारीहरूले मानिसहरूलाई यसो भनून्, 'के घर निर्माण गरेर त्यसलाई अर्पण गर्न नपाएको यहाँ कोही छ? त्यो आफ्नो घरमा फर्केर जाओस् ताकि त्यो युद्धमा मर्नु नपरोस् र अर्कोले त्यसको घर अर्पण नगरोस् ।
6 ಯಾವನಾದರೂ ದ್ರಾಕ್ಷಿತೋಟವನ್ನು ಮಾಡಿ ಅದರ ಹಣ್ಣುಗಳನ್ನು ಇನ್ನೂ ಅನುಭೋಗಿಸದಿದ್ದರೆ ಅವನು ಮನೆಗೆ ಹೋಗಲಿ; ಅವನು ಕಾಳಗದಲ್ಲಿ ಸತ್ತರೆ ಮತ್ತೊಬ್ಬನು ಆ ತೋಟದ ಹಣ್ಣುಗಳನ್ನು ಅನುಭೋಗಿಸಬಹುದು.
के दाखबारी लगाएर यसको फल खान नपाउने यहाँ कोही छ? त्यो घरमा जाओस् र युद्धमा मर्नु नपरोस् अनि अर्कोले त्यसलाई उपभोग गर्न नपाओस् ।
7 ಯಾವನಾದರೂ ತಾನು ಮದುವೆಗೆ ನಿಶ್ಚಯ ಮಾಡಿಕೊಂಡ ಹೆಣ್ಣನ್ನು ಇನ್ನೂ ಸೇರಿಸಿಕೊಳ್ಳದಿದ್ದರೆ ಅವನು ಮನೆಗೆ ಹೋಗಲಿ; ಅವನು ಯುದ್ಧದಲ್ಲಿ ಸತ್ತರೆ ಮತ್ತೊಬ್ಬನು ಅವಳನ್ನು ಮದುವೆ ಮಾಡಿಕೊಳ್ಳಬಹುದು” ಎಂದು ಹೇಳಬೇಕು.
के मगनी भएर बिहे नभएको यहाँ कोही मानिस छ? त्यो घरमा जाओस् ताकि त्यो युद्धमा मर्नु नपरोस् र त्यसलाई अर्कोले बिहे गर्न नपाओस् ।'
8 ಇದಲ್ಲದೆ, “ಯಾವನಾದರೂ ಅಧೈರ್ಯದಿಂದ ಯುದ್ಧ ಮಾಡಲು ಹಿಂಜರಿದರೆ ಅವನೂ ಮನೆಗೆ ಹೋಗಲಿ; ಅವನು ದಿಗಿಲುಪಡುವುದರಿಂದ ಅವನ ಜೊತೆಗಾರರೂ ದಿಗಿಲುಪಟ್ಟಾರು” ಎಂದು ಹೇಳಬೇಕು.
यसबाहेक अधिकारीहरूले मानिसहरूलाई यसो भनून्, 'के यहाँ कोही डरपोक र कातर छ? त्यो फर्केर आफ्नो घरमा जाओस् ताकि त्यसको भाइको हृदय त्यसको झैँ शिथिल नहोस् ।'
9 ಸೈನ್ಯಾಧಿಪತಿಗಳು ಭಟರಿಗೆ ಈ ರೀತಿಯಾಗಿ ಹೇಳಿದ ನಂತರ ದಂಡಿನವರ ಮೇಲೆ ನಾಯಕರನ್ನು ನೇಮಿಸಬೇಕು.
अधिकारीहरूले मानिसहरूसित बोलिसकेपछि तिनीहरूले उनीहरूमाथि सेनानायकहरू नियुक्त गरून् ।
10 ೧೦ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕೆ ಅದರ ಹತ್ತಿರಕ್ಕೆ ಬಂದಾಗ ಮೊದಲು ಅದು ಯುದ್ಧವಿಲ್ಲದೆ ಸಮಾಧಾನದಿಂದಲೇ ಅಧೀನವಾಗಬಹುದೆಂದು ಪ್ರಕಟಿಸಬೇಕು.
कुनै सहरलाई आक्रमण गर्न तिमीहरू नजिक पुग्दा ती मानिसहरूसित शान्तिको प्रस्ताव राख्‍नू ।
11 ೧೧ ಅದರಲ್ಲಿರುವವರು ಒಪ್ಪಿ ಬಾಗಿಲನ್ನು ನಿಮಗೆ ತೆರೆದುಕೊಟ್ಟರೆ ಅವರೆಲ್ಲರೂ ನಿಮಗೆ ಬಿಟ್ಟೀಕೆಲಸವನ್ನು ಮಾಡುವ ದಾಸರಾಗಬೇಕು.
तिनीहरूले तिमीहरूको प्रस्तावलाई स्वीकार गरी तिमीहरूलाई सहरमा स्वागत गरे भने त्यस सहरमा भएका सबै मानिसलाई बेगार काममा लगाउनू र तिनीहरूले तिमीहरूको सेवा गरून् ।
12 ೧೨ ಅವರು ನಿಮ್ಮ ಮಾತಿಗೆ ಸಮ್ಮತಿಸದೆ ಎದುರಿಸಿದರೆ ನೀವು ಆ ಪಟ್ಟಣಕ್ಕೆ ಮುತ್ತಿಗೆ ಹಾಕಬೇಕು.
तर तिनीहरूले तिमीहरूसित कुनै शान्ति सम्झौता गर्नुको साटो तिमीहरूको विरुद्धमा युद्ध गर्न आए भने तब तिमीहरूले सहरलाई घेरा हाल्नू,
13 ೧೩ ನಿಮ್ಮ ದೇವರಾದ ಯೆಹೋವನು ಆ ಪಟ್ಟಣವನ್ನು ನಿಮಗೆ ವಶವಾಗುವಂತೆ ಮಾಡಿದಾಗ ಅದರಲ್ಲಿರುವ ಗಂಡಸರೆಲ್ಲರನ್ನೂ ಕನಿಕರಿಸದೆ ಸಂಹಾರಮಾಡಬೇಕು.
र परमप्रभु तिमीहरूका परमेश्‍वरले तिमीहरूलाई विजय दिई तिमीहरूको नियन्त्रणमा ल्याउनुहुँदा तिमीहरूले त्यस सहरको हरेक व्यक्तिलाई मार्नू ।
14 ೧೪ ಹೆಂಗಸರನ್ನೂ, ಮಕ್ಕಳನ್ನೂ, ದನಗಳನ್ನೂ ಮತ್ತು ಊರಿನಲ್ಲಿರುವ ಆಸ್ತಿಯನ್ನೂ ನೀವು ಸ್ವಂತಕ್ಕೆ ತೆಗೆದುಕೊಳ್ಳಬಹುದು. ನಿಮ್ಮ ದೇವರಾದ ಯೆಹೋವನು ನಿಮಗೆ ವಶಪಡಿಸಿದ ಶತ್ರುಗಳ ಆಸ್ತಿಯನ್ನು ನೀವೇ ಅನುಭೋಗಿಸಬಹುದು.
तर स्‍त्री, बालबच्‍चा, गाईवस्तु र सहरमा भएका हरेक थोक लुटको मालको रूपमा आफ्नो लागि लैजानू । परमप्रभु तिमीहरूका परमेश्‍वरले तिमीहरूलाई तिमीहरूका शत्रुहरूबाट दिनुभएको लुटको माल तिमीहरूले उपभोग गर्नू ।
15 ೧೫ ಈ ದೇಶದ ಜನಾಂಗಗಳಿಗೆ ಸೇರದೆ ದೂರವಾಗಿರುವ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ನೀವು ಹಾಗೆಯೇ ನಡೆದುಕೊಳ್ಳಬೇಕು.
तिमीहरूबाट टाढा भएका सबै सहरलाई मात्र तिमीहरूले यसो गर्नू, तिमीहरूले यी जातिहरूका सहरहरूलाई भने त्यसो नगर्नू ।
16 ೧೬ ಆದರೆ ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವಂತಕ್ಕಾಗಿ ಕೊಡುವ ಈ ಜನಾಂಗಗಳ ಪಟ್ಟಣಗಳ ವಿಷಯದಲ್ಲಿ ಹಾಗೆ ಮಾಡದೆ ಉಸಿರಾಡುವ ಒಬ್ಬರನ್ನಾದರೂ ಉಳಿಸಬಾರದು.
परमप्रभु तिमीहरूका परमेश्‍वरले तिमीहरूलाई सम्पत्तिको रूपमा दिनुहुने यी जातिहरूको सहरहरूमा भने तिमीहरूले सास फेर्ने कसैलाई जीवित नराख्‍नू ।
17 ೧೭ ನಿಮ್ಮ ದೇವರಾದ ಯೆಹೋವನು ನಿಮಗೆ ಅಪ್ಪಣೆಕೊಟ್ಟಂತೆ ಇವರನ್ನು ಅಂದರೆ ಹಿತ್ತಿಯರು, ಅಮೋರಿಯರು, ಕಾನಾನ್ಯರು, ಪೆರಿಜ್ಜೀಯರು, ಹಿವ್ವಿಯರು, ಯೆಬೂಸಿಯರು, ಇವರೆಲ್ಲರನ್ನೂ ನಾಶಮಾಡಿಬಿಡಬೇಕು.
बरु, परमप्रभु तिमीहरूका परमेश्‍वरले तिमीहरूलाई आज्ञा गर्नुभएझैँ तिमीहरूले हित्ती, एमोरी, कनानी, परिज्‍जी, हिव्वी र यबूसीहरूलाई पूर्ण रूपमा नष्‍ट गरिदिनू ।
18 ೧೮ ಇಲ್ಲವಾದರೆ ಅವರು ತಮ್ಮ ದೇವರುಗಳಿಗಾಗಿ ಆಚರಿಸುವ ನಿಷಿದ್ಧವಾದ ಆಚಾರಗಳನ್ನು ನಿಮಗೆ ಕಲಿಸಿಕೊಟ್ಟಾರು; ಮತ್ತು ನೀವು ನಿಮ್ಮ ದೇವರಾದ ಯೆಹೋವನಿಗೆ ದ್ರೋಹಿಗಳಾಗಬಹುದು.
तिनीहरूले आफ्ना देवताहरूसित गरेका तिनीहरूका घृणित मार्गहरू तिनीहरूले तिमीहरूलाई नसिकाऊन् भन्‍नाका लागि यसो गर्नू । तिनीहरूको मार्ग पछ्यायौ भने तिमीहरूले परमप्रभु तिमीहरूका परमेश्‍वरका विरुद्धमा पाप गर्ने छौ ।
19 ೧೯ ನೀವು ಒಂದು ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಅದಕ್ಕೆ ಬಹುದಿನ ಮುತ್ತಿಗೆಹಾಕಿದಾಗ, ಅದಕ್ಕೆ ಸೇರಿರುವ ಮರಗಳನ್ನು ಹಾಳುಮಾಡಬಾರದು; ಅವುಗಳಿಗೆ ಕೊಡಲಿಯನ್ನು ಹಾಕಲೇಬಾರದು. ಅವುಗಳ ಹಣ್ಣನ್ನು ತಿನ್ನಬಹುದೇ ಹೊರತು ಮರಗಳನ್ನು ಕಡಿಯಬಾರದು. ಅಡವಿಯ ಮರಗಳು ಯಾರಿಗೂ ಶತ್ರುಗಳಲ್ಲ! ಅವುಗಳೊಡನೆ ಯುದ್ಧಮಾಡಬಹುದೇ?
कुनै सहरलाई कब्जा गर्न तिमीहरूले त्यसलाई लामो समयसम्म घेर्दा तिमीहरूले बञ्चरोले यसका रुखहरू नकाट्नू । किनकि तिमीहरूले तीबाट खान सक्छौ । त्यसैले, तिनलाई नकाट । किनकि के जङ्गलका रुखहरू जाति हुन् जसलाई तिमीहरू घेरा हाल्छौ?
20 ೨೦ ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.
फल दिने रुखहरू होइनन् भनी तिमीहरूले चिनेका रुखहरूलाई मात्र तिमीहरूले काटेर नष्‍ट गर्नू । तिमीहरूसित युद्ध गर्ने सहर पराजित नभएसम्म घेरा हाल्ने काममा ती प्रयोग गर्न सक्छौ ।

< ಧರ್ಮೋಪದೇಶಕಾಂಡ 20 >