< ಧರ್ಮೋಪದೇಶಕಾಂಡ 5 >

1 ಮೋಶೆ ಎಲ್ಲಾ ಇಸ್ರಾಯೇಲರನ್ನು ಕರೆದು, “ಇಸ್ರಾಯೇಲರೇ, ನಾನು ಈಗ ನಿಮಗೆ ತಿಳಿಸುವ ಆಜ್ಞಾವಿಧಿಗಳನ್ನು ಕೇಳಿರಿ; ಇವುಗಳನ್ನು ಗ್ರಹಿಸಿಕೊಂಡು ಅನುಸರಿಸಿ ನಡೆಯಬೇಕು.
మోషే ఇశ్రాయేలు ప్రజలందరినీ పిలిపించి ఇలా చెప్పాడు, “ఇశ్రాయేలు ప్రజలారా, నేను మీకు ఈ రోజు చెబుతున్న కట్టడలను, విధులను విని నేర్చుకుని వాటిని పాటించండి.
2 ನಮ್ಮ ದೇವರಾದ ಯೆಹೋವನು ಹೋರೇಬಿನಲ್ಲಿ ನಮ್ಮ ಸಂಗಡ ನಿಬಂಧನೆಯನ್ನು ಮಾಡಿದನು.
మన దేవుడు యెహోవా హోరేబులో మనతో ఒప్పందం చేశాడు.
3 ಆತನು ನಮ್ಮ ಪೂರ್ವಿಕರ ಸಂಗಡ ಈ ನಿಬಂಧನೆಯನ್ನು ಮಾಡದೆ, ಈಗ ಇಲ್ಲಿ ಜೀವದಿಂದಿರುವ ನಮ್ಮ ಸಂಗಡಲೇ ಇದನ್ನು ಮಾಡಿದನು.
ఆయన మన పూర్వీకులతో కాదు, ఈ రోజు, ఇక్కడ జీవించి ఉన్న మనతోనే ఈ ఒప్పందం చేశాడు.
4 ಯೆಹೋವನು ಆ ಬೆಟ್ಟದ ಮೇಲೆ ಬೆಂಕಿಯ ಜ್ಞಾಲೆಯೊಳಗಿಂದ ಮುಖಾಮುಖಿಯಾಗಿ ನಿಮ್ಮ ಸಂಗಡ ಮಾತನಾಡಿದನು.
యెహోవా ఆ కొండ మీద అగ్నిలో నుండి ముఖాముఖిగా మీతో మాటలాడినప్పుడు మీరు ఆ అగ్నికి భయపడి ఆ కొండ ఎక్కలేదు.
5 ನೀವು ಆ ಬೆಂಕಿಯ ಜ್ವಾಲೆಯ ದೆಸೆಯಿಂದ ಭಯಪಟ್ಟು, ಬೆಟ್ಟವನ್ನು ಹತ್ತದೆ ಇದ್ದುದರಿಂದ ನಾನು ಯೆಹೋವನಿಗೂ ಮತ್ತು ನಿಮಗೂ ನಡುವೆ ನಿಂತು ಆತನು ಹೇಳಿದ ಮಾತುಗಳನ್ನು ನಿಮಗೆ ತಿಳಿಸಿದೆನು. ಆತನು ಹೇಳಿದ್ದೇನೆಂದರೆ,
కాబట్టి యెహోవా మాట మీకు తెలపడానికి నేను యెహోవాకూ మీకూ మధ్య నిలబడి ఉన్నప్పుడు యెహోవా ఇలా చెప్పాడు.
6 “ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆಮಾಡಿದ ಯೆಹೋವನೆಂಬ ನಿನ್ನ ದೇವರು ನಾನೇ.
‘బానిసల గృహమైన ఐగుప్తు దేశంలో నుండి నిన్ను రప్పించిన నీ దేవుడనైన యెహోవాను నేనే.
7 ನಾನಲ್ಲದೆ ನಿನಗೆ ಬೇರೆ ದೇವರುಗಳು ಇರಬಾರದು.
నేను తప్ప వేరొక దేవుడు నీకుండకూడదు.
8 “ಯಾವ ಮೂರ್ತಿಯನ್ನೂ ಮಾಡಿಕೊಳ್ಳಬಾರದು. ಆಕಾಶದಲ್ಲಾಗಲಿ, ಭೂಮಿಯಲ್ಲಾಗಲಿ, ಭೂಮಿಯ ಕೆಳಗಣ ನೀರಿನಲ್ಲಾಗಲಿ ಇರುವ ಯಾವುದರ ರೂಪವನ್ನೂ ಮಾಡಿಕೊಳ್ಳಬಾರದು.
పైన ఉన్న ఆకాశంలో గాని, కింద ఉన్న భూమిపైనే గాని, భూమి కింద ఉన్న నీళ్లలోనే గాని ఉండే దేని పోలికలోనైనా విగ్రహాన్ని చేసుకోకూడదు.
9 ಅವುಗಳಿಗೆ ಅಡ್ಡಬೀಳಲೂ ಬಾರದು, ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದ್ದರಿಂದ, ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ಪೂರ್ವಿಕರ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳ ವರೆಗೆ ಬರಮಾಡುವವನಾಗಿದ್ದೇನೆ.
వాటికి నమస్కరించకూడదు, వాటిని పూజింపకూడదు. మీ దేవుడైన యెహోవా అనే నేను రోషం గల దేవుణ్ణి. నన్ను ద్వేషించేవారి విషయంలో మూడు నాలుగు తరాల వరకూ తండ్రులు చేసిన దోషాన్ని కొడుకులపైకి రప్పిస్తాను.
10 ೧೦ ನನ್ನನ್ನು ಪ್ರೀತಿಸಿ ನನ್ನ ಆಜ್ಞೆಗಳನ್ನು ಕೈಕೊಳ್ಳುವವರಿಗೋಸ್ಕರ ಸಾವಿರ ತಲೆಗಳವರೆಗೆ ದಯೆತೋರಿಸುವವನಾಗಿಯೂ ಇದ್ದೇನೆ.
౧౦నన్ను ప్రేమించి నా ఆజ్ఞలు పాటించే వారి విషయంలో వెయ్యి తరాల వరకూ కరుణిస్తాను.
11 ೧೧ “ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಉಪಯೋಗಿಸಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯ ಕಾರ್ಯಕ್ಕಾಗಿ ಉಪಯೋಗಿಸುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
౧౧మీ దేవుడు యెహోవా పేరును అనవసరంగా పలకకూడదు, యెహోవా తన పేరును అనవసరంగా పలికేవాణ్ణి దోషిగా ఎంచుతాడు.
12 ೧೨ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನೀನು ಸಬ್ಬತ್‍ ದಿನವನ್ನು ದೇವರ ದಿನವೆಂದು ಆಚರಿಸಬೇಕು.
౧౨మీ యెహోవా దేవుడు మీకు ఆజ్ఞాపించినట్టు విశ్రాంతి దినాన్ని పరిశుద్ధంగా ఆచరించండి.
13 ೧೩ ಆರು ದಿನಗಳಲ್ಲಿ ನೀನು ದುಡಿದು ನಿನ್ನ ಕೆಲಸವನ್ನೆಲ್ಲಾ ಮಾಡಬೇಕು.
౧౩ఆరు రోజులు మీరు కష్టపడి మీ పని చేయాలి.
14 ೧೪ ಏಳನೆಯ ದಿನ ನಿನ್ನ ದೇವರಾದ ಯೆಹೋವನಿಗೆ ಮೀಸಲಾದ ವಿಶ್ರಾಂತಿ ದಿನವಾಗಿದೆ. ಅದರಲ್ಲಿ ನೀನು ಯಾವ ಕೆಲಸವನ್ನೂ ಮಾಡಬಾರದು. ನಿನ್ನ ಗಂಡುಮಕ್ಕಳು, ಹೆಣ್ಣುಮಕ್ಕಳು, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ, ಪಶುಗಳು ಮತ್ತು ನಿನ್ನ ಊರಲ್ಲಿರುವ ಅನ್ಯದೇಶದವರು ಯಾವ ಕೆಲಸವನ್ನೂ ಮಾಡಬಾರದು. ನಿನ್ನಂತೆಯೇ ನಿನ್ನ ಗಂಡಾಳು ಹೆಣ್ಣಾಳುಗಳಿಗೂ ವಿಶ್ರಾಂತಿ ದೊರೆಯಬೇಕು.
౧౪ఏడో రోజు మీ యెహోవా దేవునికి విశ్రాంతి దినం. ఆ రోజు మీరు, మీ కొడుకు, కూతురు, దాసుడు లేక దాసి, మీ ఎద్దు లేక గాడిద, మీ పశువుల్లో ఏదైనా సరే, మీ ఇంట్లో ఉన్న పరదేశితో సహా, ఏ పనీ చేయకూడదు. ఎందుకంటే మీకులాగా మీ దాసుడు, మీ దాసి కూడా విశ్రాంతి తీసుకోవాలి.
15 ೧೫ ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.
౧౫మీరు ఐగుప్తు దేశంలో బానిసలుగా ఉన్నప్పుడు మీ దేవుడు యెహోవా తన బాహుబలంతో, చాచిన చేతితో మిమ్మల్ని అక్కడ నుండి రప్పించాడని జ్ఞాపకం చేసుకోండి. కాబట్టి, విశ్రాంతి దినాన్ని పాటించాలని ఆయన మీకు ఆజ్ఞాపించాడు.
16 ೧೬ “ನಿನ್ನ ದೇವರಾದ ಯೆಹೋವನು ಆಜ್ಞಾಪಿಸಿದಂತೆ ನಿನ್ನ ತಂದೆತಾಯಿಗಳನ್ನು ಸನ್ಮಾನಿಸಬೇಕು; ಸನ್ಮಾನಿಸಿದರೆ ನಿನ್ನ ದೇವರಾದ ಯೆಹೋವನು ನಿನಗೆ ಅನುಗ್ರಹಿಸುವ ದೇಶದಲ್ಲಿ ನೀನು ಬಹುಕಾಲ ಕ್ಷೇಮವಾಗಿ ಇರುವಿ, ಮತ್ತು ನಿನಗೆ ಒಳ್ಳೆಯದಾಗುವುದು.
౧౬మీ దేవుడు యెహోవా మీకిచ్చే దేశంలో మీరు దీర్ఘాయువుతో, సుఖశాంతులు కలిగి ఉండేలా ఆయన మీకు ఆజ్ఞాపించినట్టు మీ తల్లి తండ్రులను గౌరవించండి.
17 ೧೭ “ನರಹತ್ಯ ಮಾಡಬಾರದು.
౧౭హత్య చేయకూడదు.
18 ೧೮ “ವ್ಯಭಿಚಾರ ಮಾಡಬಾರದು.
౧౮వ్యభిచారం చేయకూడదు.
19 ೧೯ “ಕದಿಯಬಾರದು.
౧౯దొంగతనం చేయకూడదు.
20 ೨೦ “ಮತ್ತೊಬ್ಬನ ಮೇಲೆ ಸುಳ್ಳು ಸಾಕ್ಷಿ ಹೇಳಬಾರದು.
౨౦మీ సాటి మనిషికి వ్యతిరేకంగా అబద్ధ సాక్ష్యం చెప్పకూడదు.
21 ೨೧ “ಮತ್ತೊಬ್ಬನ ಹೆಂಡತಿಯನ್ನು ಅಪೇಕ್ಷಿಸಬಾರದು; ಮತ್ತೊಬ್ಬನ ಹೊಲ, ಮನೆ, ಗಂಡಾಳು, ಹೆಣ್ಣಾಳು, ಎತ್ತು ಮತ್ತು ಕತ್ತೆ ಮುಂತಾದವುಗಳನ್ನು ಆಶಿಸಬಾರದು.”
౨౧మీ పొరుగువాడి భార్యపై ఆశపడకూడదు. మీ పొరుగువాడి ఇంటిని, పొలాన్ని, పనివాణ్ణి, పనికత్తెని, ఎద్దును, గాడిదను, ఇంకా అతనికి చెందిన దేనినీ ఆశించకూడదు.’
22 ೨೨ ಈ ಮಾತುಗಳನ್ನು ಯೆಹೋವನು ಆ ಬೆಟ್ಟದ ಮೇಲೆ ಬೆಂಕಿ, ಮೋಡ, ಕಾರ್ಗತ್ತಲು ಇವುಗಳ ಮಧ್ಯದೊಳಗಿಂದ ನಿಮ್ಮ ಸರ್ವಸಮೂಹಕ್ಕೆ ಕೇಳಿಸುವಂತೆ ಮಹಾ ಸ್ವರದಿಂದ ನುಡಿದನು. ಇದಲ್ಲದೆ ಆತನು ಮತ್ತೇನೂ ಹೇಳಲಿಲ್ಲ. ಆತನು ಆ ಮಾತುಗಳನ್ನು ಎರಡು ಕಲ್ಲಿನ ಹಲಗೆಗಳಲ್ಲಿ ಕೆತ್ತಿ ನನಗೆ ಕೊಟ್ಟನು.
౨౨యెహోవా ఆ కొండ మీద అగ్ని, మేఘం, గాఢాంధకారాల మధ్య నుండి గొప్ప స్వరంతో మీ సమాజమంతటితో ఈ మాటలు చెప్పి, రెండు రాతి పలకల మీద వాటిని రాసి నాకిచ్చాడు. ఇంతకు మించి ఆయన మరేమీ చెప్పలేదు.
23 ೨೩ ಆ ಬೆಟ್ಟವು ಬೆಂಕಿಯಿಂದ ಪ್ರಜ್ವಲಿಸುತ್ತಿರುವಾಗ ಆ ಕತ್ತಲೊಳಗಿಂದ ದೇವರ ಸ್ವರವನ್ನು ಕೇಳಿ, ನೀವು ಅಂದರೆ ನಿಮ್ಮ ಕುಲಾಧಿಪತಿಗಳೂ ಮತ್ತು ಹಿರಿಯರೂ ನನ್ನ ಬಳಿಗೆ ಬಂದು,
౨౩ఆ కొండ అగ్నితో మండుతున్నప్పుడు మీరు ఆ చీకటి మధ్య నుండి ఆ స్వరం విని, అంటే మీ గోత్రాల ప్రధానులు, పెద్దలు నా దగ్గరికి వచ్చి,
24 ೨೪ “ನಮ್ಮ ದೇವರಾದ ಯೆಹೋವನು ತನ್ನ ಘನವನ್ನೂ ಮತ್ತು ಮಹಿಮೆಯನ್ನೂ ನಮಗೆ ತೋರಿಸಿ, ಅಗ್ನಿಜ್ವಾಲೆಯೊಳಗಿಂದ ತನ್ನ ಸ್ವರವನ್ನು ನಮಗೆ ಕೇಳುವಂತೆ ಮಾಡಿದನಲ್ಲಾ. ಮನುಷ್ಯನು ತನ್ನ ಸಂಗಡ ದೇವರು ಮಾತನಾಡಿದರೂ ಸಾಯದೆ ಬದುಕಿದ್ದುಂಟೆಂಬುದು ಈ ಹೊತ್ತು ನಮಗೆ ತಿಳಿಯಬಂತು.
౨౪‘మన యెహోవా దేవుడు తన మహిమని గొప్పతనాన్ని మాకు చూపించాడు. అగ్నిలో నుండి ఆయన స్వరాన్ని విన్నాం. దేవుడు మానవులతో మాట్లాడినప్పటికీ వారు బతికి ఉండగలరని ఈ రోజు గ్రహించాం.
25 ೨೫ ಆದರೂ ಈ ಘೋರವಾದ ಅಗ್ನಿಜ್ವಾಲೆಯು ನಮ್ಮನ್ನು ದಹಿಸಿ ಬಿಟ್ಟಿತು, ಮತ್ತು ನಮ್ಮ ದೇವರಾದ ಯೆಹೋವನ ಸ್ವರವನ್ನು ನಾವು ಪುನಃ ಕೇಳಿದರೆ ಸತ್ತೇವು.
౨౫కాబట్టి మేము చావడమెందుకు? ఈ గొప్ప అగ్ని మమ్మల్ని కాల్చివేస్తుంది. మేము మన దేవుడు యెహోవా స్వరం ఇంకా వింటే చనిపోతాం.
26 ೨೬ ಬೆಂಕಿಯ ಜ್ವಾಲೆಯೊಳಗಿಂದ ಮಾತನಾಡುವ ಚೈತನ್ಯಸ್ವರೂಪನಾದ ದೇವರ ಸ್ವರವನ್ನು ನಾವು ಕೇಳಿದಂತೆ ಎಲ್ಲಾ ಮನುಷ್ಯರೊಳಗೆ ಯಾರು ಕೇಳಿ ಬದುಕಿದರು? ಹೀಗಿರುವುದರಿಂದ ನಾವು ಯಾಕೆ ಸಾಯಬೇಕು?
౨౬మాలాగా మానవులందరిలో సజీవుడైన దేవుని స్వరం అగ్నిలో నుండి పలకడం విని ఇంకెవరు జీవించి ఉన్నారు?
27 ೨೭ ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
౨౭నువ్వే వెళ్ళి మన దేవుడు యెహోవా చెప్పేదంతా విను. ఆయన నీతో చెప్పిన దానంతటినీ నువ్వే మాతో చెబితే మేము విని దాన్ని పాటిస్తాం అని చెప్పారు.’
28 ೨೮ ನಿಮ್ಮ ಮಾತುಗಳನ್ನು ಯೆಹೋವನು ಕೇಳಿ ನನಗೆ, “ಈ ಜನರು ನಿನಗೆ ಹೇಳಿದ ಮಾತುಗಳನ್ನು ಕೇಳಿದ್ದೇನೆ; ಆ ಮಾತುಗಳೆಲ್ಲಾ ಒಳ್ಳೆಯವೇ.
౨౮మీరు నాతో చెప్పిన మాటలు యెహోవా విన్నాడు. అప్పుడు యెహోవా నాతో ఇలా చెప్పాడు. ‘ఈ ప్రజలు నీతో చెప్పిన మాటలు నేను విన్నాను. వారు చెప్పినదంతా మంచిదే.
29 ೨೯ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಯಾವಾಗಲೂ ಅವರಲ್ಲಿ ಇದ್ದರೆ ಒಳ್ಳೇಯದು. ಆಗ ಅವರಿಗೂ ಅವರ ಸಂತತಿಯವರಿಗೂ ಯಾವಾಗಲೂ ಶುಭವುಂಟಾಗುವುದು”
౨౯వారికీ వారి సంతానానికీ ఎప్పుడూ సుఖశాంతులు కలిగేలా వారు నాపట్ల భయభక్తులు కలిగి నా ఆజ్ఞలన్నిటిని పాటించే మనస్సు వారికి ఉండడం మంచిది.
30 ೩೦ “‘ನಿಮ್ಮ ನಿಮ್ಮ ಡೇರೆಗಳಿಗೆ ಹಿಂತಿರುಗಿ ಹೋಗಿರಿ’ ಎಂದು ಅವರಿಗೆ ಆಜ್ಞಾಪಿಸು.
౩౦“వారి వారి గుడారాల్లోకి తిరిగి వెళ్ళమని” వారితో చెప్పు.
31 ೩೧ ನೀನಾದರೋ ಇಲ್ಲೇ ನನ್ನ ಹತ್ತಿರ ನಿಂತಿರು; ನಾನು ಅವರಿಗೆ ಬೋಧಿಸಬೇಕಾದ ಎಲ್ಲಾ ಧರ್ಮೋಪದೇಶವನ್ನು ಮತ್ತು ವಿಧಿನಿಯಮಗಳನ್ನೂ ನಿನಗೆ ತಿಳಿಸುತ್ತೇನೆ. ನಾನು ಅವರಿಗೆ ಸ್ವಂತಕ್ಕಾಗಿ ಕೊಡುವ ದೇಶದಲ್ಲಿ ಅವರು ಇವುಗಳನ್ನು ಅನುಸರಿಸಬೇಕು” ಎಂದು ಹೇಳಿದನು.
౩౧నువ్వు మాత్రం ఇక్కడ నా దగ్గర ఉండు. నువ్వు వారికి బోధించాల్సిన కట్టడలనూ విధులనూ నేను నీతో చెబుతాను.’
32 ೩೨ ಆದುದರಿಂದ ನೀವು ಬಲಕ್ಕಾಗಲಿ ಎಡಕ್ಕಾಗಲಿ ತಿರುಗಿಕೊಳ್ಳದೆ ತಪ್ಪಿ ನಡೆಯದೆ ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದಂತೆಯೇ ನಡೆದುಕೊಳ್ಳಬೇಕು.
౩౨వారు స్వాధీనం చేసుకోడానికి నేను వారికి ఇస్తున్న దేశంలో వారు ఆ విధంగా ప్రవర్తించాలి.
33 ೩೩ ಆಗ ನೀವು ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಬಹುಕಾಲ ಸುಕ್ಷೇಮದಿಂದ ಬದುಕಿಕೊಳ್ಳುವಂತೆ, ನಿಮ್ಮ ದೇವರಾದ ಯೆಹೋವನು ಆಜ್ಞಾಪಿಸಿದ ಮಾರ್ಗದಲ್ಲೇ ನಡೆಯಬೇಕು.
౩౩మీరు కుడికి ఎడమకి తిరగకుండా మీ దేవుడు యెహోవా ఆజ్ఞాపించిన విధంగా చేయడానికి జాగ్రత్తపడాలి. మీరు స్వాధీనం చేసుకోబోయే దేశంలో నివసిస్తూ సుఖశాంతులతో దీర్ఘాయుష్మంతులయ్యేలా మీ దేవుడు యెహోవా మీకు ఆజ్ఞాపించిన మార్గాలన్నిటిలో నడుచుకోవాలి.”

< ಧರ್ಮೋಪದೇಶಕಾಂಡ 5 >