< ಪ್ರಸಂಗಿ 12 >

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
在你年輕的時日,在災禍的日子來到之前,即在你說的那些「沒有歡樂」的日子來到之前,你應記念你的造主;
2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
不要等到太陽、光體、月亮、星辰失光,雨後雲彩再來;
3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
因為那時,看門者戰慄,大力士屈伏,推磨的婦女因為少而停工,眺望窗外的女人面目昏黑,
4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
兩扇街門將要關閉,磨聲低微,雀鳥息聲,歌女低吟,
5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
怕上高處,行路危險,杏子被棄,蚱蜢被嫌,續隨子失去效力,因為人要回永久的家鄉,哀悼的人徘徊街頭;
6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
那時銀鏈將斷,金燈將碎,水罐將破於泉旁,輪子將爛於井邊,
7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
灰塵將歸於原來的土中,生氣將歸於天主,因為原是天主之所賜。
8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
訓道者說:虛而又虛,萬事皆虛。
9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
訓道者不但是智者,並且教人獲得知識,在沉思推究之後,編撰了許多格言。
10 ೧೦ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
訓道者費神尋找適當的語句,忠誠地寫下了真理之言。
11 ೧೧ ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
智者的話好似錐子,收集起的言論集,好像釘牢的釘子:二者都是一位牧者所賜。
12 ೧೨ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
除此之外,我兒,不必再找別的書籍,書不論寫多少,總沒有止境;用功過度,必使身體疲倦。
13 ೧೩ ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
總而言之:「你應敬畏天主,遵守他的誡命,因為這是眾人的義務。」
14 ೧೪ ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
因為天主對一切行為,連最隱秘的,不論好壞,都要一一審判。

< ಪ್ರಸಂಗಿ 12 >