< ಪ್ರಸಂಗಿ 12 >

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.
וּזְכֹר אֶת־בּוֹרְאֶיךָ בִּימֵי בְּחוּרֹתֶיךָ עַד אֲשֶׁר לֹא־יָבֹאוּ יְמֵי הָֽרָעָה וְהִגִּיעוּ שָׁנִים אֲשֶׁר תֹּאמַר אֵֽין־לִי בָהֶם חֵֽפֶץ׃
2 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು.
עַד אֲשֶׁר לֹֽא־תֶחְשַׁךְ הַשֶּׁמֶשׁ וְהָאוֹר וְהַיָּרֵחַ וְהַכּוֹכָבִים וְשָׁבוּ הֶעָבִים אַחַר הַגָּֽשֶׁם׃
3 ಅದೇ ಕಾಲದಲ್ಲಿ ಮನೆಗಾವಲಿನವರು ನಡುಗುವರು, ಬಲಿಷ್ಠರು ಬಗ್ಗುವರು, ಅರೆಯುವವರು ಕಡಿಮೆ ಜನರಿರುವುದರಿಂದ ಕೆಲಸವನ್ನು ನಿಲ್ಲಿಸಿಬಿಡುವರು, ಕಿಟಕಿಗಳಿಂದ ನೋಡುವವರು ಮಂಕಾಗುವರು.
בַּיּוֹם שֶׁיָּזֻעוּ שֹׁמְרֵי הַבַּיִת וְהִֽתְעַוְּתוּ אַנְשֵׁי הֶחָיִל וּבָטְלוּ הַטֹּֽחֲנוֹת כִּי מִעֵטוּ וְחָשְׁכוּ הָרֹאוֹת בָּאֲרֻבּֽוֹת׃
4 ಬೀದಿಯ ಬಾಗಿಲುಗಳು ಮುಚ್ಚಿರುವವು, ಅರೆಯುವ ಶಬ್ದವು ನಿಲ್ಲುವುದು, ಮನುಷ್ಯನು ಹಕ್ಕಿಯ ಧ್ವನಿಗೆ ಎದ್ದೇಳುವನು, ಗಾಯಕಿಯರೆಲ್ಲಾ ಕುಗ್ಗುವರು.
וְסֻגְּרוּ דְלָתַיִם בַּשּׁוּק בִּשְׁפַל קוֹל הַֽטַּחֲנָה וְיָקוּם לְקוֹל הַצִּפּוֹר וְיִשַּׁחוּ כׇּל־בְּנוֹת הַשִּֽׁיר׃
5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.
גַּם מִגָּבֹהַּ יִרָאוּ וְחַתְחַתִּים בַּדֶּרֶךְ וְיָנֵאץ הַשָּׁקֵד וְיִסְתַּבֵּל הֶֽחָגָב וְתָפֵר הָֽאֲבִיּוֹנָה כִּֽי־הֹלֵךְ הָאָדָם אֶל־בֵּית עוֹלָמוֹ וְסָבְבוּ בַשּׁוּק הַסּוֹפְדִֽים׃
6 ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,
עַד אֲשֶׁר לֹֽא־[יֵרָתֵק] (ירחק) חֶבֶל הַכֶּסֶף וְתָרוּץ גֻּלַּת הַזָּהָב וְתִשָּׁבֶר כַּד עַל־הַמַּבּוּעַ וְנָרֹץ הַגַּלְגַּל אֶל־הַבּֽוֹר׃
7 ಮಣ್ಣು ಭೂಮಿಗೆ ಸೇರಿ ಇದ್ದ ಹಾಗಾಗುವುದು, ಆತ್ಮವು ತನ್ನನ್ನು ದಯಪಾಲಿಸಿದ ದೇವರ ಬಳಿಗೆ ಸೇರುವುದು. ಇಷ್ಟರೊಳಗಾಗಿ ನಿನ್ನ ಸೃಷ್ಟಿ ಕರ್ತನನ್ನು ಸ್ಮರಿಸದಿರಬೇಡ.
וְיָשֹׁב הֶעָפָר עַל־הָאָרֶץ כְּשֶׁהָיָה וְהָרוּחַ תָּשׁוּב אֶל־הָאֱלֹהִים אֲשֶׁר נְתָנָֽהּ׃
8 “ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.
הֲבֵל הֲבָלִים אָמַר הַקּוֹהֶלֶת הַכֹּל הָֽבֶל׃
9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.
וְיֹתֵר שֶׁהָיָה קֹהֶלֶת חָכָם עוֹד לִמַּד־דַּעַת אֶת־הָעָם וְאִזֵּן וְחִקֵּר תִּקֵּן מְשָׁלִים הַרְבֵּֽה׃
10 ೧೦ ಪ್ರಸಂಗಿಯು ಯಥಾರ್ಥ ಭಾವದಿಂದ ರಚಿಸಿದ ಒಪ್ಪಿಗೆಯ ಸತ್ಯದ ಮಾತುಗಳನ್ನು ಹುಡುಕಿ ಆರಿಸಿದನು.
בִּקֵּשׁ קֹהֶלֶת לִמְצֹא דִּבְרֵי־חֵפֶץ וְכָתוּב יֹשֶׁר דִּבְרֵי אֱמֶֽת׃
11 ೧೧ ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ.
דִּבְרֵי חֲכָמִים כַּדָּרְבֹנוֹת וּֽכְמַשְׂמְרוֹת נְטוּעִים בַּעֲלֵי אֲסֻפּוֹת נִתְּנוּ מֵרֹעֶה אֶחָֽד׃
12 ೧೨ ನನ್ನ ಕಂದಾ, ಇವುಗಳಲ್ಲದೆ ಉಳಿದವುಗಳಲ್ಲಿಯೂ ಎಚ್ಚರದಿಂದಿರು. ಬಹಳ ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿವ್ಯಾಸಂಗವು ದೇಹಕ್ಕೆ ಆಯಾಸ.
וְיֹתֵר מֵהֵמָּה בְּנִי הִזָּהֵר עֲשׂוֹת סְפָרִים הַרְבֵּה אֵין קֵץ וְלַהַג הַרְבֵּה יְגִעַת בָּשָֽׂר׃
13 ೧೩ ವಿಷಯವು ತೀರಿತು, ಎಲ್ಲವೂ ಕೇಳಿ ಮುಗಿಯಿತು, ದೇವರಿಗೆ ಭಯಪಟ್ಟು ಆತನ ಆಜ್ಞೆಗಳನ್ನು ಕೈಕೊಳ್ಳು, ಮನುಷ್ಯರೆಲ್ಲರ ಕರ್ತವ್ಯವು ಇದೇ.
ס וֹף דָּבָר הַכֹּל נִשְׁמָע אֶת־הָאֱלֹהִים יְרָא וְאֶת־מִצְוֺתָיו שְׁמוֹר כִּי־זֶה כׇּל־הָאָדָֽם׃
14 ೧೪ ಒಳ್ಳೆಯದಾಗಲೀ ಅಥವಾ ಕೆಟ್ಟದ್ದಾಗಲೀ, ಸಕಲ ರಹಸ್ಯ ಸಂಗತಿಗಳನ್ನು ವಿಮರ್ಶಿಸಿ, ನ್ಯಾಯವಿಚಾರಣೆಗೆ ದೇವರು ಪ್ರತಿಯೊಂದು ಕಾರ್ಯವನ್ನು ಗುರಿಮಾಡುವನು.
כִּי אֶת־כׇּל־מַֽעֲשֶׂה הָאֱלֹהִים יָבִא בְמִשְׁפָּט עַל כׇּל־נֶעְלָם אִם־טוֹב וְאִם־רָֽע׃ סוף דבר הכל נשמע את האלהים ירא ואת מצותיו שמור כי זה כל האדם

< ಪ್ರಸಂಗಿ 12 >