< ಎಸ್ತೇರಳು 1 >

1 ಭಾರತ ಮೊದಲುಗೊಂಡು ಕೂಷಿನ ವರೆಗೂ ಇರುವ ನೂರಿಪ್ಪತ್ತೇಳು ಸಂಸ್ಥಾನಗಳನ್ನು ಆಳುತ್ತಿದ್ದ ಅಹಷ್ವೇರೋಷನ ಕಾಲದಲ್ಲಿ ನಡೆದ ಚರಿತ್ರೆ.
राजा अहषवेरोष के शासनकाल में, जिसका साम्राज्य हिंद देश से कूश तक 127 राज्यों तक विस्तीर्ण था,
2 ಅಹಷ್ವೇರೋಷ ರಾಜನು ಶೂಷನ್ ಕೋಟೆಯಲ್ಲಿ ತನ್ನ ರಾಜಸಿಂಹಾಸದಲ್ಲಿ ಆಸೀನನಾಗಿ ಆಡಳಿತ ನಡೆಸುತ್ತಿದ್ದನು.
जब वह राजधानी शूशन में अपने राज सिंहासन पर विराजमान था,
3 ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.
अपने शासनकाल के तीसरे वर्ष में उसने अपने समस्त अधिकारियों एवं कर्मचारियों के लिए एक विशिष्ट उत्सव का आयोजन किया. फारस एवं मेदिया के सेनापति, सारे सांसद एवं राज्यपाल इस भोज में उसके साथ शामिल हुए.
4 ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.
यह भोज 180 दिन चलता रहा, जिसमें राजा ने अपना राजसी वैभव, समृद्धि एवं संपत्ति का प्रदर्शन किया.
5 ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.
जब इस काल का अंत हुआ, राजा ने राजधानी शूशन में उपस्थित समस्त प्रजा के लिए; चाहे वह सामान्य हो अथवा विशिष्ट, राजमहल के उद्यान के आंगन में सात दिनों का एक विशेष भोज आयोजित किया.
6 ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.
इस स्थल को सफेद तथा बैंगनी वस्त्रों का उत्कृष्ट सन के पर्दे बैंजनी डोरियों द्वारा चांदी की छड़ों से लटकाकर सजाया गया था. ये छड़ें संगमरमर के स्तंभों पर लगी थी. वहां सोना एवं चांदी के आसन सजाए गए थे इस स्थल को संगमरमर के खंभों, अमूल्य रत्नों तथा अमूल्य पत्थरों से गढ़ा गया था.
7 ಬಂಗಾರದ ಪಾನ ಪಾತ್ರೆಗಳು ನಾನಾ ಆಕಾರದಲ್ಲಿದ್ದವು. ರಾಜದ್ರಾಕ್ಷಾರಸದ ಔತಣ ಕೂಟವು ಅರಸರ ಔದಾರ್ಯಕ್ಕೆ ತಕ್ಕಂತೆ ಧಾರಾಳವಾಗಿತ್ತು.
दाखमधु सोने के विभिन्‍न प्रकार के बर्तनों में परोसी जा रही थी. राजकीय दाखमधु राजा के बड़े भंडार में से बहुतायत से परोसी जा रही थी.
8 “ಪಾನಮಾಡುವುದರಲ್ಲಿ ಯಾರಿಗೂ ಒತ್ತಾಯಮಾಡಬಾರದು” ಎಂದು ರಾಜಾಜ್ಞೆಯಿತ್ತು. ಪ್ರತಿಯೊಬ್ಬರಿಗೂ ಅವರವರ ಇಷ್ಟದಂತೆ ಕೊಡಬೇಕೆಂದು ರಾಜನು ತನ್ನ ಎಲ್ಲಾ ಮನೆವಾರ್ತೆಯವರಿಗೆ ಆಜ್ಞಾಪಿಸಿದ್ದನು.
पेय परोसने के विषय में आज्ञा थी कि किसी को इसके पीने के लिए मजबूर न किया जाए क्योंकि राजा ने राज कर्मचारियों को यह आज्ञा दी थी कि वे वही करें जैसा हर एक बुलाए गए लोग चाहते है.
9 ವಷ್ಟಿ ರಾಣಿಯೂ ಅಹಷ್ವೇರೋಷ ರಾಜನ ಅರಮನೆಯಲ್ಲಿ ಸ್ತ್ರೀಯರಿಗೋಸ್ಕರ ಔತಣಮಾಡಿಸಿದಳು.
रानी वश्ती ने भी राजमहल की स्त्रियों के लिये अहषवेरोष के राजमहल में भोज दिया था.
10 ೧೦ ಏಳನೆಯ ದಿನದಲ್ಲಿ ಅಹಷ್ವೇರೋಷ ರಾಜನು ದ್ರಾಕ್ಷಾರಸ ಪಾನಮಾಡಿ ಆನಂದಲಹರಿಯಲ್ಲಿದ್ದಾಗ ಬಹು ಸುಂದರಿಯಾದ ತನ್ನ ರಾಣಿಯ ಸೌಂದರ್ಯವನ್ನು ಜನರಿಗೂ, ಸರದಾರರಿಗೂ ತೋರಿಸಬೇಕೆಂದು ಬಯಸಿದನು. ಅವನು ತನ್ನ ಸಾನ್ನಿಧ್ಯಸೇವಕರಾದ ಮೆಹೂಮಾನ್, ಬಿಜೆತಾ, ಹರ್ಬೋನಾ, ಬಿಗೆತಾ, ಅಬಗೆತಾ, ಜೇತರ್, ಕರ್ಕಸ್ ಎಂಬ ಏಳು ಕಂಚುಕಿಗಳಿಗೆ,
सातवें दिन जब राजा दाखमधु से मस्त था उसने महूमान बिज़था हरबोना बिगथा अबगथा ज़ेथर तथा करकस नामक सात खोजों को
11 ೧೧ “ವಷ್ಟಿ ರಾಣಿಯು ರಾಜಮುಕುಟವನ್ನು ಧರಿಸಿಕೊಂಡು ರಾಜಸನ್ನಿಧಿಗೆ ಬರಬೇಕೆಂಬದಾಗಿ ಹೇಳಿರಿ” ಎಂದು ಆಜ್ಞಾಪಿಸಿದನು. ಅವಳು ಅತಿ ಸೌಂದರ್ಯವತಿಯಾಗಿದ್ದಳು.
आदेश दिया कि रानी वश्ती को राजा के सामने उसके राजसी मुकुट के साथ प्रस्तुत किया जाए, शासकों एवं समस्त उपस्थित अतिथियों के सामने उसके सौंदर्य का प्रदर्शन करे, रानी वश्ती अति सुंदर थी.
12 ೧೨ ಕಂಚುಕಿಗಳು ತಿಳಿಸಿದ ರಾಜಾಜ್ಞೆಗೆ ವಷ್ಟಿ ರಾಣಿಯು, “ಬರುವುದಿಲ್ಲ” ಎಂದು ಉತ್ತರಕೊಟ್ಟಳು. ಇದರಿಂದ ಅರಸನು ಬಹುಕೋಪಗೊಂಡು ರೌದ್ರಾವೇಶವುಳ್ಳವನಾದನು.
किंतु रानी वश्ती ने खोजों द्वारा दिए गए राजा के इस आदेश को अस्वीकार कर दिया. इस पर राजा क्रोधित हो उठा, क्रोध उसके अंदर भड़कने लगा.
13 ೧೩ ವಿಧಿನಾಯ್ಯಗಳನ್ನು ಬಲ್ಲವರೆಲ್ಲರ ಮುಂದೆ ಅರಮನೆಯ ಸಂಗತಿಗಳನ್ನು ಇಡುವ ಪದ್ಧತಿಯಿತ್ತು.
तब राजा अपने समय के अनुसार अपने उन ज्ञानियों से बोला जो न्यायशास्त्र एवं नियम के विशेषज्ञ थे
14 ೧೪ ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು.
इन ऊंचे पदों पर थे: करषना, शेतार, अदमाता, तरशीश, मेरेस, मरसेना, तथा ममूकान. ये सात फारस तथा मेदिया के ऐसे प्रधान थे जो साम्राज्य में ज़रूरी थे, उनके लिए राजा की उपस्थिति में प्रवेश आसान था.
15 ೧೫ ಅವನು ಸಮುಯೋಚಿತ ಜ್ಞಾನವುಳ್ಳವರಾದ ಇವರನ್ನು, “ಕಂಚುಕಿಗಳ ಮುಖಾಂತರ ತನಗುಂಟಾದ ರಾಜಾಜ್ಞೆಯನ್ನು ಕೈಗೊಳ್ಳದೆ ಹೋದ ವಷ್ಟಿ ರಾಣಿಗೆ ನಿಯಮದ ಪ್ರಕಾರ ಮಾಡತಕ್ಕದ್ದೇನು?” ಎಂದು ಕೇಳಿದನು.
राजा ने इनसे पूछा, “नियम के अनुसार अब रानी वश्ती के साथ क्या किया जाना सही होगा, क्योंकि उसने खोजों द्वारा दी गई राजा अहषवेरोष की आज्ञा नहीं मानी है?”
16 ೧೬ ಆಗ ಮೆಮೂಕಾನನು ಅರಸನ ಮತ್ತು ಸರದಾರರ ಮುಂದೆ, “ವಷ್ಟಿ ರಾಣಿಯ ಅಪರಾಧವು ಅರಸನೊಬ್ಬನಿಗೇ ವಿರುದ್ಧವಾದುದಲ್ಲ.
ममूकान ने राजा एवं अधिकारियों के सामने साफ किया, “रानी वश्ती का यह काम राजा के विरुद्ध अपराध है, मतलब यह समस्त अधिकारियों, राजा अहषवेरोष के राज्यों के समस्त लोगों के विरुद्ध एक बड़ा अपराध है.
17 ೧೭ ರಾಣಿಯ ನಡತೆಯು ಎಲ್ಲಾ ಸ್ತ್ರೀಯರಿಗೂ ಗೊತ್ತಾಗಿ ಅವರೂ ತಮ್ಮ ಗಂಡಂದಿರ ಮಾತನ್ನು ನಿರಾಕರಿಸುವುದಕ್ಕೆ ಮತ್ತು ತಿರಸ್ಕರಿಸುವುದಕ್ಕೆ ಇದು ಕಾರಣವಾಗಬಹುದು. ಅವರು ‘ಅರಸನಾದ ಅಹಷ್ವೇರೋಷನು ವಷ್ಟಿ ರಾಣಿಯನ್ನು ರಾಜಸನ್ನಿಧಿಗೆ ಬರಬೇಕೆಂದು ಹೇಳಿಕಳುಹಿಸಿದಾಗ ಆಕೆಯು ಹೋಗಲಿಲ್ಲವಲ್ಲಾ’ ಅನ್ನುವರು.
क्योंकि रानी के इस काम की सूचना समस्त स्त्रियों को मिल जाएगी, जिसका परिणाम यह होगा, वे सभी अपने-अपने पतियों के प्रति घृणा के साथ व्यवहार करेंगी, क्योंकि तब वे यह विचार करने लगेंगी, ‘राजा अहषवेरोष का आदेश था कि रानी वश्ती उनके सामने लायी जाए, किंतु वह उनके सामने नहीं आई.’
18 ೧೮ ರಾಣಿಯ ಮಾತನ್ನು ಕೇಳಿದ ಪಾರಸಿಯ ಮತ್ತು ಮೇದ್ಯ ಕುಲೀನ ಸ್ತ್ರೀಯರು ಈ ಹೊತ್ತೇ ಅದನ್ನು ಅರಸನ ಎಲ್ಲಾ ಸರದಾರರಿಗೂ ಹೇಳುವರು. ಹೀಗೆ ಎಷ್ಟೋ ತಿರಸ್ಕಾರವೂ ಮತ್ತು ಕೋಪವೂ ಉಂಟಾಗುವುದು.
फारस एवं मेदिया की स्त्रियों ने आज रानी के जिस व्यवहार के विषय में सुन लिया है, राजा के हाकिमो से वैसा ही व्यवहार करेंगी. इससे उनमें बहुत घृणा एवं क्रोध उत्पन्‍न हो जाएगा.
19 ೧೯ ಅರಸನು ಒಪ್ಪುವುದಾದರೆ ವಷ್ಟಿಯು ಪುನಃ ಅಹಷ್ವೇರೋಷ ರಾಜನು ಸನ್ನಿಧಿಗೆ ಬರಲೇ ಬಾರದೆಂಬ ರಾಜಾಜ್ಞೆಯು ಪ್ರಕಟವಾಗಿ ಅದು ಎಂದಿಗೂ ರದ್ದಾಗದ ಹಾಗೆ ಪಾರಸಿಯ ಮತ್ತು ಮೇದ್ಯ ಶಾಸನಗಳಲ್ಲಿ ಲಿಖಿತವಾಗಲಿ; ಅರಸನು ಆಕೆಯ ಪಟ್ಟವನ್ನು ಆಕೆಗಿಂತ ಉತ್ತಮಳಾದ ಇನ್ನೊಬ್ಬಳಿಗೆ ಕೊಡಲಿ.
“यदि राजा को यह उपयुक्त लगे, वह एक राजाज्ञा प्रसारित कर दें जिसे फारस एवं मेदिया के नियमों में लिख दिया जाए कि कभी इस नियम को बदला न जा सके, कि अब कभी भी रानी वश्ती राजा अहषवेरोष की उपस्थिति में प्रवेश न करे, तब रानी वश्ती का राजकीय पद किसी अन्य को जो वश्ती से अधिक योग्य हैं उसे प्रदान कर दें
20 ೨೦ ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.
जब राजा के द्वारा प्रसारित आज्ञा उनके संपूर्ण साम्राज्य में सुनाई जाएगी तब सब स्त्रियां अपने पतियों का आदर करने लगेंगी, विशेष अथवा सामान्य, सभी अपने-अपने पतियों का सम्मान करने लगेंगी.”
21 ೨೧ ಈ ಮಾತು ಅರಸನಿಗೂ, ಅವನ ಸರದಾರರಿಗೂ ಒಳ್ಳೆಯದೆಂದು ತೋರಿದಾಗ ಅರಸನು ಮೆಮೂಕಾನನ ಮಾತಿನಂತೆಯೇ ಮಾಡಿದನು.
राजा एवं शासकों के लिए यह परामर्श स्वीकार्य था, तब राजा ने ममूकान के प्रस्ताव के अनुरूप ही कार्य पूरा किया.
22 ೨೨ ಅವನು, “ಪ್ರತಿಯೊಂದು ಕುಟುಂಬದಲ್ಲಿ ಪುರುಷನೇ ಒಡೆಯನಾಗಿರುವನು ಮತ್ತು ಅವನ ಸ್ವಜನರ ಭಾಷೆಯೇ ಉಪಯೋಗವಾಗಬೇಕು” ಎಂಬುದಾಗಿ ಎಲ್ಲಾ ರಾಜ ಸಂಸ್ಥಾನಗಳಲ್ಲಿ ಪತ್ರಗಳ ಮೂಲಕ ಪ್ರಕಟಿಸಿದನು. ಈ ಪತ್ರಗಳು ಆಯಾ ಸಂಸ್ಥಾನಗಳ ಬರಹಗಳಲ್ಲಿಯೂ, ಆಯಾ ಜನಾಂಗಗಳ ಭಾಷೆಗಳಲ್ಲಿಯೂ ಬರೆಯಲ್ಪಟ್ಟವು.
तब उसने राजा के समस्त राज्यों में पत्र प्रेषित किए, हर एक राज्य में उसी की अक्षर के अनुरूप तथा हर एक जाति को उसी की भाषा में कि अपने-अपने परिवार में हर एक पुरुष घर का मुखिया हो तथा वह अपने जाति की भाषा बोला करे.

< ಎಸ್ತೇರಳು 1 >