< ವಿಮೋಚನಕಾಂಡ 1 >

1 ಯಾಕೋಬನೊಂದಿಗೆ ಐಗುಪ್ತದೇಶಕ್ಕೆ ತಮ್ಮತಮ್ಮ ಮನೆಯವರ ಸಂಗಡ ಬಂದ ಇಸ್ರಾಯೇಲರ ಮಕ್ಕಳ ಹೆಸರುಗಳು:
وَهَذِهِ هِيَ أَسْمَاءُ أَبْنَاءِ إِسْرَائِيلَ الَّذِينَ قَدِمُوا مَعَ يَعْقُوبَ إِلَى مِصْرَ، كُلُّ وَاحِدٍ مِنْهُمْ مَعَ أَهْلِ بَيْتِهِ.١
2 ರೂಬೇನ್, ಸಿಮೆಯೋನ್, ಲೇವಿ, ಯೆಹೂದ,
رَأُوبَيْنُ، وَشِمْعُونُ، وَلاَوِي وَيَهُوذَا،٢
3 ಇಸ್ಸಾಕಾರ್, ಜೆಬುಲೂನ್ ಮತ್ತು ಬೆನ್ಯಾಮೀನ್,
وَيَسَّاكَرُ وَزَبُولُونُ وَبَنْيَامِينُ،٣
4 ದಾನ್, ಗಾದ್, ನಫ್ತಾಲಿ ಮತ್ತು ಆಶೇರ್.
وَدَانُ وَنَفْتَالِي وَجَادُ وَأَشِيرُ.٤
5 ಯಾಕೋಬನ ಎಲ್ಲಾ ಸಂತತಿಯವರು ಒಟ್ಟು ಎಪ್ಪತ್ತು ಮಂದಿ. ಆದರೆ ಯೋಸೇಫನು ಮೊದಲೇ ಐಗುಪ್ತದೇಶದಲ್ಲಿದ್ದನು.
وَكَانَتْ جُمْلَةُ النُّفُوسِ الْمَوْلُودِينَ مِنْ صُلْبِ يَعْقُوبَ سَبْعِينَ نَفْساً. أَمَّا يُوسُفُ فَقَدْ كَانَ فِي مِصْرَ.٥
6 ಆ ನಂತರ ಯೋಸೇಫನೂ, ಅವನ ಅಣ್ಣತಮ್ಮಂದಿರೂ, ಆ ಸಂತತಿಯವರೆಲ್ಲರೂ ಮರಣ ಹೊಂದಿದರು.
ثُمَّ مَاتَ يُوسُفُ وَإِخْوَتُهُ جَمِيعاً وَكَذَلِكَ سَائِرُ ذَلِكَ الْجِيلِ.٦
7 ಆದರೆ ಇಸ್ರಾಯೇಲರ ಮಕ್ಕಳು ಅತ್ಯಧಿಕವಾಗಿ ಅಭಿವೃದ್ಧಿಯಾಗಿ, ಹೆಚ್ಚಿನ ಸಂಖ್ಯೆಯಲ್ಲಿ ಬೆಳೆದು ಬಲ ಹೊಂದಿದರು. ಆ ದೇಶವು ಅವರಿಂದ ತುಂಬಿಹೋಯಿತು.
وَنَمَا بَنُو إِسْرَائِيلَ، وَتَوَالَدُوا وَتَكَاثَرُوا وَعَظُمُوا جِدّاً حَتَّى اكْتَظَّتْ بِهِمِ الأَرْضُ.٧
8 ತರುವಾಯ ಯೋಸೇಫನನ್ನು ಅರಿಯದ ಹೊಸ ಅರಸನು ಐಗುಪ್ತದೇಶದ ಆಳ್ವಿಕೆಗೆ ಬಂದನು.
وَمَا لَبِثَ أَنْ قَامَ مَلِكٌ جَدِيدٌ عَلَى مِصْرَ لَمْ يَكُنْ يَعْرِفُ يُوسُفَ.٨
9 ಅರಸನು ತನ್ನ ಜನರಿಗೆ, “ಇಸ್ರಾಯೇಲರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಮತ್ತು ನಮಗಿಂತ ಬಹಳ ಬಲಶಾಲಿಗಳೂ ಆಗಿದ್ದಾರೆ ನೋಡಿರಿ.
فَقَالَ لِشَعْبِهِ: «هَا بَنُو إِسْرَائِيلَ أَكْثَرُ مِنَّا وَأَعْظَمُ قُوَّةً.٩
10 ೧೦ ನಮಗೆ ಯುದ್ಧವೇನಾದರೂ ಸಂಭವಿಸಿದರೆ ಅವರು ನಮ್ಮ ಶತ್ರುಗಳೊಂದಿಗೆ ಸೇರಿಕೊಂಡು, ನಮಗೆ ವಿರುದ್ಧವಾಗಿ ಹೋರಾಡಿ ದೇಶವನ್ನು ಬಿಟ್ಟುಹೋದಾರು. ಆದ್ದರಿಂದ ಅವರು ನಮ್ಮ ದೇಶವನ್ನು ಬಿಟ್ಟು ಹೋಗದಂತೆ ನಾವು ಉಪಾಯ ಮಾಡೋಣ” ಎಂದು ಹೇಳಿ
فَلْنَتَآمَرْ عَلَيْهِمْ لِكَيْلاَ يَتَكَاثَرُوا وَيَنْضَمُّوا إِلَى أَعْدَائِنَا إِذَا نَشَبَ قِتَالٌ وَيُحَارِبُونَا ثُمَّ يَخْرُجُوا مِنَ الأَرْضِ».١٠
11 ೧೧ ಅವರನ್ನು ಬಿಟ್ಟೀ ಕೆಲಸಗಳಿಂದ ಪೀಡಿಸುವುದಕ್ಕಾಗಿ, ಬಿಟ್ಟೀಕೆಲಸ ಮಾಡಿಸುವ ಅಧಿಕಾರಿಗಳನ್ನು ಅವರ ಮೇಲೆ ಇರಿಸಿದನು. ಅವರು ಫರೋಹನನಿಗೆ ಪಿತೋಮ್ ಮತ್ತು ರಾಮ್ಸೇಸ್ ಎಂಬ ಉಗ್ರಾಣ ಪಟ್ಟಣಗಳನ್ನು ಕಟ್ಟಿಸಿದನು.
فَعَهِدُوا بِهِمْ إِلَى مُشْرِفِينَ عُتَاةٍ لِيُسَخِّرُوهُمْ بِالأَعْمَالِ الشَّاقَةِ. فَبَنَوْا مَدِينَتَيْ فِيثُومَ وَرَعَمْسِيسَ لِتَكُونَا مَخَازِنَ لِفِرْعَوْنَ.١١
12 ೧೨ ಐಗುಪ್ತರು ಇಸ್ರಾಯೇಲರನ್ನು ಉಪದ್ರವಪಡಿಸಿದಷ್ಟೂ, ಅವರು ಬಹಳವಾಗಿ ಹೆಚ್ಚಿ ಹರಡಿಕೊಂಡಿದ್ದರಿಂದ ಐಗುಪ್ತರು ಇಸ್ರಾಯೇಲರ ವಿಷಯದಲ್ಲಿ ಬಹಳ ಹೆದರಿಕೆಯುಳ್ಳವರಾದರು.
وَلَكِنْ كُلَّمَا زَادُوا مِنْ إذْلاَلِهِمْ، اِزْدَادَ تَكَاثُرُهُمْ وَنُمُوُّهُمْ، فَتَخَوَّفُوا مِنْ بَنِي إِسْرَائِيلَ١٢
13 ೧೩ ಐಗುಪ್ತರು ಇಸ್ರಾಯೇಲರಿಂದ ಕ್ರೂರವಾಗಿ ಸೇವೆಮಾಡಿಸಿಕೊಂಡರು.
فَتَزَايَدَ عُنْفُ اسْتِعْبَادِ الْمِصْرِيِّينَ لِبَنِي إِسْرَائِيلَ.١٣
14 ೧೪ ಮಣ್ಣಿನ ಕೆಲಸದಲ್ಲಿಯೂ, ಇಟ್ಟಿಗೆಮಾಡುವ ಕೆಲಸದಲ್ಲಿಯೂ, ವ್ಯವಸಾಯದ ಎಲ್ಲಾ ವಿಧವಾದ ಕೆಲಸದಲ್ಲಿಯೂ ಕಠಿಣವಾಗಿ ದುಡಿಸಿಕೊಂಡು ಅವರ ಜೀವಿತವನ್ನೇ ಬೇಸರಪಡಿಸಿದರು. ಐಗುಪ್ತರು ಇಸ್ರಾಯೇಲರಿಂದ ಮಾಡಿಸಿದ ಎಲ್ಲಾ ಕೆಲಸಗಳು ಬಹಳ ಕಠಿಣವಾಗಿದ್ದವು.
وَأَتْعَسُوا حَيَاتَهُمْ بالأَعْمَالِ الشَّاقَةِ فِي الطِّينِ وَاللِّبْنِ كَادِحِينَ فِي الْحُقُولِ. وسَخَّرَهُمُ الْمِصْرِيُّونَ بِعُنْفٍ فِي كُلِّ أَعْمَالِهِمِ الشَّاقَةِ.١٤
15 ೧೫ ಇದಲ್ಲದೆ ಐಗುಪ್ತ ದೇಶದ ಅರಸನು “ಶಿಪ್ರಾ” ಮತ್ತು “ಪೂಗಾ” ಎಂಬ ಹೆಸರಿನ ಇಬ್ರಿಯ ಸೂಲಗಿತ್ತಿಯರೊಂದಿಗೆ ಮಾತನಾಡಿದನು.
ثُمَّ قَالَ مَلِكُ مِصْرَ لِلْقَابِلَتَيْنِ الْعِبْرَانِيَّتَيْنِ الْمَدْعُوَّتَيْنِ شِفْرَةَ وَفُوعَةَ:١٥
16 ೧೬ ಅವನು ಅವರಿಗೆ, “ನೀವು ಇಬ್ರಿಯ ಹೆಂಗಸರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗುವು ಗಂಡು ಮಗುವಾಗಿದ್ದರೆ ಕೊಂದುಹಾಕಿರಿ, ಹೆಣ್ಣಾಗಿದ್ದರೆ ಬದುಕಲು ಬಿಡಿ” ಎಂದು ಹೇಳಿದನು.
«عِنْدَمَا تُشْرِفَانِ عَلَى تَوْلِيدِ النِّسَاءِ الْعِبْرَانِيَّاتِ رَاقِبَاهُنَّ عَلَى كُرْسِيِّ الْوِلادَةِ، فَإنْ كَانَ الْمَوْلُودُ صَبِيّاً فَاقْتُلاهُ، وَإنْ كَانَ بِنْتاً فاتْرُكَاهَا تَحْيَا.١٦
17 ೧೭ ಆದರೆ ಸೂಲಗಿತ್ತಿಯರು ದೇವರಿಗೆ ಭಯಪಟ್ಟು ಐಗುಪ್ತರ ಅರಸನ ಮಾತಿನಂತೆ ಮಾಡದೆ ಗಂಡು ಮಕ್ಕಳನ್ನು ಜೀವದಿಂದ ಉಳಿಸಿದರು.
غَيْرَ أَنَّ الْقَابِلَتَيْنِ كَانَتَا تَخَافَانِ اللهَ فَلَمْ تُنَفِّذَا أَمْرَ الْمَلِكِ فاسْتَحْيَتَا الأَطْفَالَ الذُّكُورَ.١٧
18 ೧೮ ಆಗ ಐಗುಪ್ತದ ಅರಸನು ಸೂಲಗಿತ್ತಿಯರನ್ನು ಕರೆಯಿಸಿ, “ನೀವು ಅವರ ಗಂಡು ಮಕ್ಕಳನ್ನು ಉಳಿಸಿದ್ದೇನು? ಹೀಗೆ ಯಾಕೆ ಮಾಡಿದಿರಿ?” ಎಂದು ಕೇಳಿದನು.
فَاسْتَدْعَى مَلِكُ مِصْرَ الْقَابِلَتَيْنِ وَسَأَلَهُمَا: «لِمَاذَا فَعَلْتُمَا هَذَا الأَمْرَ واسْتَحْيَيْتُمَا الأَطْفَالَ الذُّكُورَ؟»١٨
19 ೧೯ ಸೂಲಗಿತ್ತಿಯರು ಫರೋಹನಿಗೆ, “ಇಬ್ರಿಯರ ಸ್ತ್ರೀಯರು ಐಗುಪ್ತ ಸ್ತ್ರೀಯರಂತೆ ಅಲ್ಲ, ಅವರು ಬಹು ಚುರುಕು ಬುದ್ಧಿಯವರು. ಸೂಲಗಿತ್ತಿಯು ಅವರ ಹತ್ತಿರ ಬರುವುದಕ್ಕೆ ಮೊದಲೇ ಮಗುವನ್ನು ಹೆರುತ್ತಿದ್ದರು” ಎಂದು ಹೇಳಿದರು.
فَأَجَابَتَاهُ: «إنَّ النِّسَاءَ الْعِبْرَانِيَّاتِ لَسْنَ كَالْمِصْرِيَّاتِ، فَإِنَّهُنَّ قَوِيَّاتٌ يَلِدْنَ قَبْلَ وُصُولِ الْقَابِلَةِ إِلَيْهِنَّ».١٩
20 ೨೦ ಆದ್ದರಿಂದ ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನು ಮಾಡಿದನು. ಇದರಿಂದ ಇಸ್ರಾಯೇಲ್ ಜನರು ಹೆಚ್ಚಾಗಿ ಬಹಳ ಬಲಗೊಂಡರು.
وَتَكَاثَرَ الشَّعْبُ وَعَظُمَ جِدّاً.٢٠
21 ೨೧ ಸೂಲಗಿತ್ತಿಯರು ದೇವರಿಗೆ ಭಯಪಟ್ಟಿದ್ದರಿಂದ, ಆತನು ಅವರಿಗೆ ವಂಶಾಭಿವೃದ್ಧಿಯನ್ನು ಅನುಗ್ರಹಿಸಿದನು. ಇಸ್ರಾಯೇಲರು ಹೆಚ್ಚಿ ಬಲಗೊಂಡರು.
وَإِذْ خَافَتِ الْقَابِلَتَانِ اللهَ أَثَابَهُمَا بِنَسْلٍ.٢١
22 ೨೨ ತರುವಾಯ ಫರೋಹನು ತನ್ನ ಜನರಿಗೆ, “ಇಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು, ಹೆಣ್ಣುಕೂಸುಗಳನ್ನೆಲ್ಲಾ ಉಳಿಸಬೇಕು” ಎಂದು ಆಜ್ಞೆ ಮಾಡಿದನು.
ثُمَّ أَصْدَرَ فِرْعَوْنُ أَمْرَهُ لِجَمِيعِ شَعْبِهِ قَائِلاً: «اطْرَحُوا كُلَّ ابْنٍ (عِبْرَانِيٍّ) يُوْلَدُ فِي النَّهْرِ، أَمَّا الْبَنَاتُ فَاسْتَحْيُوهُنَّ».٢٢

< ವಿಮೋಚನಕಾಂಡ 1 >