< ವಿಮೋಚನಕಾಂಡ 13 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
وَقَالَ الرَّبُّ لِمُوسَى:١
2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
«خَصِّصْ لِي كُلَّ بِكْرٍ ذَكَرٍ. كُلُّ فَاتِحِ رَحِمٍ مِنْ بَنِي إِسْرَائِيلَ هُوَ لِي. كُلُّ بِكْرٍ مِنَ النَّاسِ أَوِ الْبَهَائِمِ».٢
3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
وَقَالَ مُوسَى لِلشَّعْبِ: «اذْكُرُوا هَذَا الْيَوْمَ الَّذِي خَرَجْتُمْ فِيهِ مِنْ مِصْرَ مِنْ بَيْتِ الْعُبُودِيَّةِ، فَقَدْ أَطْلَقَكُمُ الرَّبُّ مِنْ هُنَا بِيَدٍ قَدِيرَةٍ، فَلا تَأْكُلُوا خُبْزاً مُخْتَمِراً.٣
4 ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
الْيَوْمَ فِي شَهْرِ أَبِيبَ (أَيْ فِي شَهْرِ آذَارَ – مَارِسَ) أَنْتُمْ خَارِجُونَ،٤
5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
لِذَلِكَ عِنْدَمَا يُدْخِلُكُمُ الرَّبُّ أَرْضَ الْكَنْعَانِيِّينَ وَالْحِثِّيِّينَ وَالأَمُورِيِّينَ وَالْحِوِّيِّينَ وَالْيَبُوسِيِّينَ، الَّتِي تَفِيضُ لَبَناً وَعَسَلاً، وَالَّتِي أَقْسَمَ لِآبَائِكُمْ أَنْ يَهَبَكُمْ إِيَّاهَا، تُمَارِسُونَ هَذِهِ الْفَرِيضَةَ فِي هَذَا الشَّهْرِ.٥
6 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
سَبْعَةَ أَيَّامٍ لَا تَأْكُلُونَ فِيهَا خُبْزاً مُخْتَمِراً، وَفِي الْيَوْمِ السَّابِعِ يَكُونُ احْتِفَالٌ لِلرَّبِّ.٦
7 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
سَبْعَةَ أَيَّامٍ تَأْكُلُونَ فِيهَا خُبْزاً فَطِيراً وَلا تَحْتَفِظُونَ فِي بُيُوتِكُمْ بِشَيْءٍ مُخْتَمِرٍ أَوْ بِخَمِيرٍ.٧
8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
فِي ذَلِكَ الْيَوْمِ تَقُولُ لابْنِكَ: إنَّنِي أُمَارِسُ هَذَا مِنْ أَجْلِ مَا صَنَعَهُ الرَّبُّ لِي، حِينَ أَخْرَجَنِي مِنْ مِصْرَ.٨
9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
فَتَكُونُ هَذِهِ الْفَرِيضَةُ بِمَثَابَةِ عَلامَةٍ عَلَى يَدِكَ، وَتَذْكَاراً بَيْنَ عَيْنَيْكَ، لِتَكُونَ شَرِيعَةُ الرَّبِّ فِي فَمِكَ، لأَنَّ الرَّبَّ قَدْ أَخْرَجَكَ بِيَدٍ قَدِيرَةٍ مِنْ مِصْرَ.٩
10 ೧೦ ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
فَتُمَارِسُ هَذِهِ الْفَرِيضَةَ فِي مِيعَادِهَا مَرَّةً كُلَّ سَنَةٍ.١٠
11 ೧೧ “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
وَيَكُونُ حِينَ يُدْخِلُكَ الرَّبُّ إِلَى أَرْضِ الْكَنْعَانِيِّينَ، كَمَا أَقْسَمَ لَكَ وَلِآبَائِكَ أَنْ يَهَبَكَ إِيَّاهَا،١١
12 ೧೨ ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
أَنَّكَ تَفْرِزُ لِلرَّبِّ كُلَّ ذَكَرٍ فَاتِحِ رَحِمٍ. وَكَذَلِكَ كُلَّ بِكْرٍ مِنْ نِتَاجِ الْبَهَائِمِ الَّتِي تَمْلِكُهَا يَكُونُ لِلرَّبِّ.١٢
13 ೧೩ ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
إِنَّمَا كُلُّ بِكْرِ حِمَارٍ تَفْدِيهِ بِحَمَلٍ. وَإِنْ لَمْ تَفْدِهِ تَكْسِرْ عُنُقَهُ. وَكَذَلِكَ تَفْدِي أَيْضاً كُلَّ بِكْرٍ مِنْ بَنِيكَ.١٣
14 ೧೪ ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
وَحِينَ يَسْأَلُكَ ابْنُكَ فِي الأَيَّامِ الْمُقْبِلَةِ: مَا مَعْنَى هَذَا؟ تُجِيبُهُ: إِنَّهُ بِيَدٍ قَدِيرَةٍ أَخْرَجَنَا الرَّبُّ مِنْ دِيَارِ الْعُبُودِيَّةِ.١٤
15 ೧೫ ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
وَعِنْدَمَا تَصَلَّبَ فِرْعَوْنُ وَامْتَنَعَ عَنْ إِطْلاقِنَا، أَهْلَكَ الرَّبُّ كُلَّ بِكْرٍ فِي بِلادِ مِصْرَ، مِنْ أَبْكَارِ النَّاسِ وَالْبَهَائِمِ. لِذَلِكَ أَنَا أُقَرِّبُ لِلرَّبِّ الذُّكُورَ مِنْ كُلِّ فَاتِحِ رَحِمٍ وَأَفْدِي كُلَّ بِكْرٍ مِنْ أَوْلادِي.١٥
16 ೧೬ ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
فَتَكُونُ هَذِهِ الْفَرِيضَةُ بِمَثَابَةِ عَلامَةٍ عَلَى يَدِكَ وَرَمْزاً عَلَى جَبْهَتِكَ، لأَنَّ الرَّبَّ قَدْ أَخْرَجَنَا بِيَدٍ قَدِيرَةٍ مِنْ مِصْرَ».١٦
17 ೧೭ ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
وَعِنْدَمَا أَطْلَقَ فِرْعَوْنُ الشَّعْبَ لَمْ يَقُدْهُمُ اللهُ فِي طَرِيقِ بِلادِ الْفِلِسْطِينِيِّينَ عَلَى الرَّغْمِ مِنْ قِصَرِهَا. لأَنَّ اللهَ قَالَ لِئَلّا يَنْدَمَ الشَّعْبُ إِذَا تَعَرَّضَ لِحَرْبٍ وَيَرْجِعَ إِلَى مِصْرَ.١٧
18 ೧೮ ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
إِنَّمَا اقْتَادَ اللهُ الشَّعْبَ عَبْرَ صَحْرَاءِ الْبَحْرِ الأَحْمَرِ. وَكَانَ بَنُو إِسْرَائِيلَ قَدْ غَادَرُوا مِصْرَ مُتَسَلِّحِينَ مُتَأَهِّبِينَ لِلْقِتَالِ.١٨
19 ೧೯ ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
وَحَمَلَ مُوسَى عِظَامَ يُوسُفَ مَعَهُ، لأَنَّهُ كَانَ قَدِ اسْتَحْلَفَ بَنِي إِسْرَائِيلَ بِحَلْفٍ قَائِلاً: «لابُدَّ أَنْ يَفْتَقِدَكُمُ اللهُ فَعَلَيْكُمْ أَنْ تَنْقُلُوا عِظَامِي مَعَكُمْ مِنْ هَذَا الْمَكَانِ».١٩
20 ೨೦ ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
وَارْتَحَلُوا مِنْ سُكُّوتَ وَخَيَّمُوا فِي إِيثَامَ عَلَى طَرَفِ الصَّحْرَاءِ.٢٠
21 ೨೧ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
وَكَانَ الرَّبُّ يَتَقَدَّمُهُمْ نَهَاراً فِي عَمُودِ سَحَابٍ لِيَهْدِيَهُمْ فِي الطَّرِيقِ، وَلَيْلاً فِي عَمُودِ نَارٍ لِيُضِيءَ لَهُمْ.٢١
22 ೨೨ ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
وَلَمْ يَبْرَحْ عَمُودُ السَّحَابِ نَهَاراً وَعَمُودُ النَّارِ لَيْلاً مِنْ أَمَامِ الشَّعْبِ.٢٢

< ವಿಮೋಚನಕಾಂಡ 13 >