< ವಿಮೋಚನಕಾಂಡ 13 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ,
फिर याहवेह ने मोशेह से कहा:
2 “ಇಸ್ರಾಯೇಲರಲ್ಲಿ ಹುಟ್ಟಿರುವ ಪ್ರತಿಯೊಂದು ಚೊಚ್ಚಲ ಗಂಡನ್ನು ನನಗಾಗಿ ಪ್ರತಿಷ್ಠಿಸಬೇಕು. ಮನುಷ್ಯರಲ್ಲಾಗಲೀ, ಪಶುಗಳಲ್ಲಾಗಲೀ ಹುಟ್ಟುವ ಪ್ರಥಮ ಗರ್ಭಫಲವು ನನ್ನದಾಗಿದೆ” ಎಂದು ಹೇಳಿದನು.
“मनुष्य एवं पशु की पहली संतान मेरे लिए अलग करो. सब बच्‍चे, जो इस्राएल में पहिलौठे हैं, चाहे मनुष्य के हों, या पशु के, उन सभी पर मेरा ही अधिकार होगा.”
3 ಮೋಶೆಯು ಇಸ್ರಾಯೇಲರಿಗೆ, “ನೀವು ದಾಸತ್ವದಲ್ಲಿದ್ದ ಐಗುಪ್ತ ದೇಶದೊಳಗಿಂದ ಬಿಡುಗಡೆಯಾದ ಈ ದಿನವನ್ನು ನೆನಪಿನಲ್ಲಿಟ್ಟುಕೊಳ್ಳಿರಿ. ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಆ ಸ್ಥಳದಿಂದ ಬಿಡಿಸಿದ್ದಾನೆ. ಈ ದಿನದಲ್ಲಿ ನೀವು ಹುಳಿಬೆರೆಸಿದ್ದನ್ನು ತಿನ್ನಬಾರದು.
मोशेह ने लोगों से कहा, “यह दिन याद रखना, जब तुम मिस्र से निकले थे—जब तुम ग़ुलामी में थे तब याहवेह ही ने अपने सामर्थ्यी हाथों द्वारा उस जगह से तुम्हें बाहर निकाला; इस कारण खमीर वाली कोई भी चीज़ न रखना.
4 ಚೈತ್ರ ಮಾಸದ ಈ ದಿನದಲ್ಲೇ ನೀವು ಹೊರಗೆ ಬಂದಿರುವಿರಿ.
अबीब के महीने में आज के दिन तुम निकले हो.
5 ಯೆಹೋವನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿ ಹೇಳಿದಂತೆ, ನಿಮ್ಮನ್ನು ಹಾಲೂ ಮತ್ತು ಜೇನೂ ಹರಿಯುವ ದೇಶಕ್ಕೆ ಅಂದರೆ ಕಾನಾನ್ಯರು, ಹಿತ್ತಿಯರು, ಅಮೋರಿಯರು, ಹಿವ್ವಿಯರು, ಯೆಬೂಸಿಯರು ವಾಸವಾಗಿರುವ ದೇಶಕ್ಕೆ ಕರೆದು ತಂದು ಅದನ್ನು ನಿಮಗೆ ಕೊಟ್ಟಾಗ ನೀವು ಈ ತಿಂಗಳಲ್ಲಿ ಈ ಆಚರಣೆಯನ್ನು ನಡೆಸಬೇಕು.
जब याहवेह तुम्हें तुम्हारे पूर्वजों से किए गए वायदे के अनुसार कनानी, हित्ती, अमोरी, हिव्वी तथा यबूसी जाति के देशों में पहुंचा देंगे, जहां दूध एवं मधु की धाराएं बहती हैं, तब तुम्हें इस दिन को मनाना ज़रूरी होगा.
6 ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.
सात दिन बिना खमीर की रोटी खाना और सातवें दिन याहवेह के लिए उत्सव का दिन होगा.
7 ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.
सातों दिन बिना खमीर की रोटी ही खाना. तुम्हारे बीच खमीर की कोई भी चीज़ न हो और पूरे देश से भी खमीर की कोई वस्तु न लाना.
8 ಆ ದಿನದಲ್ಲಿ ನೀವು ನಿಮ್ಮ ಮಕ್ಕಳಿಗೆ, ನಮ್ಮ ಜನರು ಐಗುಪ್ತ ದೇಶದಿಂದ ಹೊರಟು ಬಂದಾಗ ಯೆಹೋವನು ನಮಗೋಸ್ಕರ ಮಾಡಿದ್ದನ್ನು ನೆನಪು ಮಾಡಿಕೊಳ್ಳುವುದಕ್ಕಾಗಿ ಈ ಆಚರಣೆಯನ್ನು ಆಚರಿಸುತ್ತೇವೆ.
तुम अपने बच्चों को भी सच्चाई बताना, ‘यह सब इसलिये किया जाता है, क्योंकि जब हम मिस्र देश से निकले तब याहवेह ने हमारे लिए यह सब किया था.’
9 ಯೆಹೋವನು ತನ್ನ ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ್ದರಿಂದ ಆತನ ನಿಯಮವನ್ನು ಕುರಿತು ನೀವು ಹೇಳಬೇಕು. ಈ ಆಚರಣೆಯು ನಿಮ್ಮ ಕೈಗಳ ಮೇಲೆ ಗುರುತಾಗಿಯೂ, ಹಣೆಗೆ ಕಟ್ಟಿಕೊಂಡಿರುವ ಜ್ಞಾಪಕಪಟ್ಟಿಯಂತೆಯೂ ಇರಬೇಕು.
इस कारण तुम्हें भी इस दिन को उतना ही मनाना और याद रखना होगा, और याहवेह के नियम और व्यवस्था को कभी नहीं भूलना. यह हमेशा अपने माथे पर याद कराने वाली बात ठहरे और तुम्हारे हाथ में एक चिन्ह होगा, क्योंकि याहवेह ने अपनी सामर्थ्य के द्वारा तुम्हें मिस्र देश से बाहर निकाला था.
10 ೧೦ ಹೀಗಿರುವುದರಿಂದ ಪ್ರತಿವರ್ಷವು ನಿಯಮಿತವಾದ ಕಾಲದಲ್ಲಿ ನೀವು ಈ ಆಚರಣೆಯನ್ನು ಮಾಡಬೇಕು.
इस कारण हर वर्ष इस विधि का सही समय पर पालन करना.
11 ೧೧ “ಯೆಹೋವನು ನಿಮಗೂ ನಿಮ್ಮ ಪೂರ್ವಿಕರಿಗೂ ಪ್ರಮಾಣಮಾಡಿದ ಪ್ರಕಾರ ನಿಮ್ಮನ್ನು ಕಾನಾನ್ಯರ ದೇಶಕ್ಕೆ ಬರಮಾಡಿ ಆ ದೇಶವನ್ನು ನಿಮಗೆ ಕೊಟ್ಟ ನಂತರ,
“तब याहवेह पूर्वजों से किए गए वायदे के अनुसार तुम्हें कनानियों के देश में पहुंचा कर तुम्हें उसका अधिकार देंगे,
12 ೧೨ ನಿಮ್ಮಲ್ಲಿಯೂ ನಿಮ್ಮ ಪಶುಗಳಲ್ಲಿಯೂ ಹುಟ್ಟುವ ಪ್ರಥಮ ಗರ್ಭಫಲವು ಗಂಡಾದ ಪಕ್ಷಕ್ಕೆ ಅದು ಯೆಹೋವನ ಭಾಗವೆಂದು ತಿಳಿದುಕೊಂಡು ಅದನ್ನು ಆತನಿಗೆ ಸಮರ್ಪಿಸಬೇಕು.
तब घर की हर पहली संतान को याहवेह को अर्पित करना ज़रूरी होगा, हर पशु का भी पहिलौठा याहवेह का होगा. हर एक पहिलौठे नर पर परमेश्वर का अधिकार होगा.
13 ೧೩ ಮೊದಲು ಹುಟ್ಟಿದ ಕತ್ತೆಯ ಚೊಚ್ಚಲಮರಿಗೆ ಬದಲಾಗಿ ಕುರಿಮರಿಯನ್ನು ಬಿಡಿಸಿಕೊಳ್ಳಬಹುದು. ಹಾಗೆ ಬಿಡಿಸದೆ ಹೋದರೆ ಅದರ ಕುತ್ತಿಗೆ ಮುರಿದು ಕೊಲ್ಲಬೇಕು. ಮನುಷ್ಯರ ಚೊಚ್ಚಲ ಗಂಡು ಮಕ್ಕಳನ್ನು ಯೆಹೋವನಿಗಾಗಿ ಬಿಡಿಸಿಕೊಳ್ಳಲೇ ಬೇಕು.
गधी के पहिलौठे के बदले में मेमने को अलग कर सकते हो, और अगर मेमना न देना चाहो तो गदही के पहिलौठे का गला तोड़ देना. पर हर एक पहिलौठे पुत्र का बदला देकर छुड़ाना.
14 ೧೪ ಮುಂದೆ ನಿಮ್ಮ ಮಕ್ಕಳು, ‘ಇದರ ಅರ್ಥ ಏನು?’ ಎಂದು ನಿಮ್ಮನ್ನು ವಿಚಾರಿಸುವಾಗ ನೀವು ಅವರಿಗೆ, ‘ನಾವು ದಾಸತ್ವದಲ್ಲಿದ್ದ ಐಗುಪ್ತ ದೇಶದಿಂದ ಯೆಹೋವನು ತನ್ನ ಭುಜಬಲದಿಂದ ನಮ್ಮನ್ನು ಬಿಡಿಸಿದನು.
“जब, तुम्हारे पुत्र इसके बारे में तुमसे पूछें तब तुम बताना, ‘जब तुम गुलाम थे तब याहवेह ने कैसे अपनी सामर्थ्य से तुम्हें मिस्र देश से निकाला.
15 ೧೫ ಫರೋಹನು ಹಠಹಿಡಿದು ನಮ್ಮನ್ನು ಹೋಗಗೊಡಿಸದೇ ಇದ್ದಾಗ ಯೆಹೋವನು ಐಗುಪ್ತ ದೇಶದಲ್ಲಿ ಮನುಷ್ಯರ ಚೊಚ್ಚಲಮಕ್ಕಳನ್ನು, ಪಶುಗಳ ಚೊಚ್ಚಲು ಮರಿಗಳನ್ನು ಅಂತೂ ಆ ದೇಶದಲ್ಲಿ ಚೊಚ್ಚಲಾಗಿದ್ದ ಎಲ್ಲವನ್ನು ಸಂಹಾರ ಮಾಡಿದನು. ಆದಕಾರಣ ಗಂಡಾಗಿ ಹುಟ್ಟುವ ಪ್ರಥಮ ಗರ್ಭಫಲವನ್ನೆಲ್ಲಾ ನಾವು ಯೆಹೋವನಿಗೆ ಸಮರ್ಪಿಸುವುದುಂಟು. ಮನುಷ್ಯರಿಂದಾದ ಪ್ರಥಮ ಗರ್ಭಫಲವನ್ನಾದರೋ ಅದನ್ನು ಬದಲುಕೊಟ್ಟು ಬಿಡಿಸುತ್ತೇವೆ’” ಎಂದು ಹೇಳಬೇಕು.
मिस्र देश से फ़रोह हमें निकलने नहीं दे रहा था, तब याहवेह ने मिस्र देश में प्रत्येक पहिलौठे को मार दिया—चाहे वह मनुष्य का था या पशु का. इसलिये पशु के पहलौठे नर को याहवेह के लिए बलि करते हैं, किंतु मनुष्य के पहिलौठे को बदला देकर छुड़ा देते हैं.’
16 ೧೬ ಯೆಹೋವನು ಭುಜಬಲದಿಂದ ನಿಮ್ಮನ್ನು ಐಗುಪ್ತ ದೇಶದಿಂದ ಬಿಡಿಸಿದ ಸಂಗತಿಯನ್ನು ನೀವು ಜ್ಞಾಪಕದಲ್ಲಿಟ್ಟುಕೊಳ್ಳುವುದರ ಗುರುತಾಗಿ ಅದನ್ನು ನಿಮ್ಮ ಕೈಗಳ ಮೇಲೆಯೂ, ಹಣೆಯ ಮೇಲೆ ಜ್ಞಾಪಕಪಟ್ಟಿಯಂತೆಯೂ ಇರಬೇಕು.
अब यह तुम्हारे हाथ पर चिन्ह के समान होगा तथा तुम्हारे माथे पर टीका समान होगा—क्योंकि याहवेह ने हमें मिस्र देश से अपने सामर्थ्यी हाथों के द्वारा निकाला था.”
17 ೧೭ ಫರೋಹನು ಇಸ್ರಾಯೇಲರಿಗೆ ಹೋಗುವುದಕ್ಕೆ ಅಪ್ಪಣೆ ಕೊಟ್ಟಾಗ, ಫಿಲಿಷ್ಟಿಯರ ದೇಶದ ಮಾರ್ಗವು ಸಮೀಪವಾಗಿದ್ದರೂ ದೇವರು ಆ ದಾರಿಯಲ್ಲಿ ಅವರನ್ನು ಹೋಗಗೊಡಿಸಲಿಲ್ಲ. ಏಕೆಂದರೆ, “ದೇವರು, ಜನರು ಯುದ್ಧವನ್ನು ನೋಡಿ ಗಾಬರಿಯಾಗಿ ಮನಸ್ಸನ್ನು ಬದಲಾಯಿಸಿಕೊಂಡು ಐಗುಪ್ತಕ್ಕೆ ಹಿಂದಿರುಗಿ ಹೋದಾರೂ” ಎಂದು ಹೇಳಿದನು.
जब फ़रोह ने प्रजा को वहां से जाने को कहा, तब परमेश्वर उन्हें फिलिस्तीनियों के देश में से होकर नहीं ले गए, यह रास्ता बहुत छोटा था. लेकिन परमेश्वर का कहना था, “लड़ाई देखकर लोग मिस्र देश वापस चले न जाएं.”
18 ೧೮ ಹೀಗಿರುವುದರಿಂದ ಯೆಹೋವನು ಜನರನ್ನು ಕೆಂಪುಸಮುದ್ರದ ಸಮೀಪದಲ್ಲಿರುವ ಮರುಭೂಮಿಯನ್ನು ಬಳಸಿಕೊಂಡು ಹೋಗುವಂತೆ ಮಾಡಿದನು. ಆದರೂ ಇಸ್ರಾಯೇಲರು ಯುದ್ಧಸನ್ನದ್ದರಾಗಿ ಐಗುಪ್ತ ದೇಶದೊಳಗಿಂದ ಹೊರಟುಬಂದರು.
परमेश्वर उन्हें घुमाकर रेगिस्तानी रास्ते से लाल सागर की ओर ले गए ताकि मिस्र देश से निकलकर इस्राएली युद्ध के लिए तैयार होकर आगे बढ़ें.
19 ೧೯ ಇದಲ್ಲದೆ ಯೋಸೇಫನು ಇಸ್ರಾಯೇಲರಿಗೆ, “ದೇವರು ನಿಸ್ಸಂದೇಹವಾಗಿ ನಿಮ್ಮನ್ನು ಪರಾಂಬರಿಸಿ ತನ್ನ ವಾಗ್ದಾನವನ್ನು ನೆರವೇರಿಸುವವನಾಗಿರುವುದರಿಂದ ನೀವು ಹೋಗುವಾಗ ನನ್ನ ದೇಹದ ಅಸ್ತಿಮೂಳೆಗಳನ್ನು ನಿಮ್ಮ ಸಂಗಡ ತೆಗೆದುಕೊಂಡು ಹೋಗಬೇಕು” ಎಂದು ಖಂಡಿತವಾದ ಪ್ರಮಾಣವನ್ನು ಮಾಡಿಸಿದ್ದರಿಂದ ಮೋಶೆಯು ಅವನ ಮೂಳೆಗಳನ್ನು ತನ್ನ ಸಂಗಡ ತೆಗೆದುಕೊಂಡು ಹೋದನು.
मोशेह ने अपने साथ योसेफ़ की अस्थियां भी ले लीं थी. क्योंकि योसेफ़ ने इस्राएलियों से शपथ करवाई थी, “निश्चय परमेश्वर तुम्हारी दशा पर ध्यान देंगे और जब तुम यहां से जाओ तब मेरी अस्थियों को भी अपने साथ ले जाना.”
20 ೨೦ ಅವರು ಸುಕ್ಕೋತಿನಿಂದ ಪ್ರಯಾಣ ಮಾಡಿ ಮರಳುಗಾಡಿನ ಅಂಚಿನಲ್ಲಿರುವ ಏತಾಮಿನಲ್ಲಿ ಪಾಳೆಯಮಾಡಿ ಇಳಿದುಕೊಂಡರು.
इस्राएलियों ने सुक्कोथ से चलना शुरू किया और एथाम में रुक गये, जो रेगिस्तान के किनारे पर ही था.
21 ೨೧ ಯೆಹೋವನು ಹಗಲು ಹೊತ್ತಿನಲ್ಲಿ ದಾರಿತೋರಿಸುವುದಕ್ಕೆ ಮೇಘಸ್ತಂಭದಲ್ಲಿಯೂ, ರಾತ್ರಿವೇಳೆಯಲ್ಲಿ ಬೆಳಕುಕೊಡುವುದಕ್ಕೆ ಅಗ್ನಿಸ್ತಂಭದಲ್ಲಿಯೂ ಇದ್ದು ಅವನ್ನು ನಡೆಸುತಿದ್ದನು. ಈ ರೀತಿಯಲ್ಲಿ ಅವರು ಹಗಲಿರುಳು ಪ್ರಯಾಣಮಾಡಿದರು.
याहवेह उन्हें मार्ग दिखाकर उनके आगे-आगे चले; दिन में बादल तथा रात में आग की रोशनी देकर उनको चलाया, ताकि वे दिन में तथा रात में भी आराम से चल सकें.
22 ೨೨ ಹಗಲಿನಲ್ಲಿ ಮೇಘಸ್ತಂಭವಾಗಿ, ರಾತ್ರಿಯಲ್ಲಿ ಅಗ್ನಿಸ್ತಂಭವಾಗಿ ಜನರನ್ನು ಬಿಟ್ಟು ಹೋಗದೆ ಅಲ್ಲಿಯೇ ಇರುತ್ತಿದ್ದನು.
दिन में बादल और रात में आग का खंभा लोगों के आगे-आगे चलता रहा याहवेह ने उनसे कभी दूर न हुए.

< ವಿಮೋಚನಕಾಂಡ 13 >