< ವಿಮೋಚನಕಾಂಡ 5 >
1 ೧ ಬಳಿಕ ಮೋಶೆ ಮತ್ತು ಆರೋನರು ಫರೋಹನ ಸನ್ನಿಧಿಗೆ ಹೋಗಿ, “ಇಸ್ರಾಯೇಲರ ದೇವರಾದ ಯೆಹೋವನು, ನನ್ನ ಜನರು ನನಗಾಗಿ ಅರಣ್ಯದೊಳಗೆ ಜಾತ್ರೆ ನಡೆಸುವಂತೆ ಅವರಿಗೆ ಅಪ್ಪಣೆ ಕೊಡಬೇಕು ಎಂದು ಹೇಳಿದ್ದಾನೆ” ಅಂದರು.
၁ထိုနောက်မောရှေနှင့်အာရုန်တို့သည် ဖာရော ဘုရင်ထံသို့ဝင်ရောက်၍``ဣသရေလအမျိုး သားတို့၏ဘုရားသခင်ထာဝရဘုရား က`ဣသရေလအမျိုးသားတို့သည်တော ကန္တာရတွင်ဘုရားပွဲတော်ကျင်းပနိုင်ရန် သူတို့ကိုသွားခွင့်ပေးလော့' ဟုမိန့်တော်မူ ပါသည်'' ဟူ၍လျှောက်ထားကြ၏။
2 ೨ ಅದಕ್ಕೆ ಫರೋಹನು, “ಯೆಹೋವನೆಂಬುವವನು ಯಾರು? ನಾನು ಅವನ ಮಾತನ್ನು ಕೇಳಿ ಇಸ್ರಾಯೇಲರನ್ನು ಹೋಗಗೊಡಿಸುವುದೇತಕ್ಕೆ? ಯೆಹೋವನು ಯಾರೋ ನನಗೆ ಗೊತ್ತಿಲ್ಲ. ಇದು ಮಾತ್ರವಲ್ಲದೆ, ಇಸ್ರಾಯೇಲರನ್ನು ಹೋಗಲು ನಾನು ಬಿಡುವುದೇ ಇಲ್ಲ” ಅಂದನು.
၂ဖာရောဘုရင်က``ထိုဘုရားသည်မည်သူနည်း။ ငါသည်အဘယ်ကြောင့်ထိုဘုရား၏စကား ကိုနာခံလျက် ဣသရေလအမျိုးသားတို့ကို လွှတ်ရမည်နည်း။ ငါသည်ထိုဘုရားကိုမသိ သဖြင့်ဣသရေလအမျိုးသားတို့ကိုမ လွှတ်နိုင်'' ဟုဆိုလေ၏။
3 ೩ ಆಗ ಅವರು, “ಇಬ್ರಿಯರ ದೇವರು ನಮ್ಮನ್ನು ಎದುರುಗೊಂಡನು. ಅಪ್ಪಣೆಯಾದರೆ ನಾವು ಮರುಭೂಮಿಯಲ್ಲಿ ಮೂರು ದಿನ ಪ್ರಯಾಣಮಾಡಿ, ನಮ್ಮ ದೇವರಾದ ಯೆಹೋವನಿಗೋಸ್ಕರ ಯಜ್ಞಮಾಡಿ ಬರುವೆವು. ಇಲ್ಲವಾದರೆ ಆತನು ನಮ್ಮನ್ನು ವ್ಯಾಧಿಯಿಂದಾದರೂ, ಕತ್ತಿಯಿಂದಾದರೂ ಸಂಹಾರಮಾಡುವನು” ಎಂದು ಹೇಳಿದರು.
၃သူတို့က``ဟေဗြဲအမျိုးသားတို့၏ဘုရား ကို အကျွန်ုပ်တို့ဖူးတွေ့ခဲ့ရပြီ။ အကျွန်ုပ်တို့ ၏ဘုရားသခင်ထာဝရဘုရားအားယဇ် ပူဇော်နိုင်ရန် တောကန္တာရသို့သုံးရက်ခရီး သွားခွင့်ပေးတော်မူပါ။ အကျွန်ုပ်တို့သည် ထိုဝတ်ကိုမပြုရလျှင်ဘုရားသခင်သည် အကျွန်ုပ်တို့အားရောဂါဘေးသို့မဟုတ် ဋ္ဌားဘေးသင့်စေပါမည်'' ဟုလျှောက်ကြ၏။
4 ೪ ಐಗುಪ್ತರ ಅರಸನು ಅವರಿಗೆ, “ಮೋಶೆ ಮತ್ತು ಆರೋನರೇ, ಈ ಜನರು ತಮ್ಮ ಕೆಲಸವನ್ನು ಮಾಡದಂತೆ ಯಾಕೆ ಅಡ್ಡಿ ಮಾಡುತ್ತೀರಿ? ನಿಮ್ಮ ಬಿಟ್ಟೀ ಕೆಲಸಕ್ಕೆ ಹೋಗಿರಿ” ಎಂದು ಹೇಳಿದನು.
၄ထိုအခါဖာရောဘုရင်က မောရှေနှင့်အာရုန် တို့အား``ဤသူတို့ကိုအဘယ်ကြောင့်အလုပ် ပျက်အောင်ပြုလိုကြသနည်း။ အလုပ်ခွင် သို့ပြန်ကြစေ။-
5 ೫ ಫರೋಹನು, “ಇಬ್ರಿಯರು ದೇಶದಲ್ಲಿ ಹೆಚ್ಚಾಗಿದ್ದಾರೆ. ಅವರು ತಮ್ಮ ಬಿಟ್ಟೀ ಕೆಲಸಗಳನ್ನು ಮಾಡದಂತೆ ನಿಲ್ಲಿಸಿ ಬಿಡುತ್ತಿದ್ದೀರಲ್ಲಾ?” ಎಂದನು.
၅သင်တို့လူမျိုးသည်အီဂျစ်လူမျိုးတို့ထက် များပြားလာကြလေပြီ။ ယခုသင်တို့အလုပ် မှရပ်နားလိုကြသည်တကား'' ဟုဆိုလေ၏။
6 ೬ ಆ ದಿನದಲ್ಲಿ ಫರೋಹನು ಬಿಟ್ಟೀಮಾಡಿಸುವವರನ್ನು ಮತ್ತು ಅವರ ಅಧಿಕಾರಿಗಳನ್ನು ಕರೆಯಿಸಿ,
၆ထိုနေ့၌ပင်ဖာရောဘုရင်သည် အီဂျစ်အမျိုး သားအုပ်ချုပ်သူ၊ ဣသရေလအမျိုးသား အလုပ်ကြပ်တို့အား၊-
7 ೭ “ಇನ್ನು ಮೇಲೆ ನೀವು ಆ ಜನರಿಗೆ ಇಟ್ಟಿಗೆ ಮಾಡುವುದಕ್ಕೆ ಹುಲ್ಲನ್ನು ಕೊಡಬಾರದು. ಅವರೇ ಹೋಗಿ ಹುಲ್ಲನ್ನು ಶೇಖರಿಸಿಕೊಳ್ಳಲಿ,
၇``ဣသရေလအမျိုးသားတို့ကိုအုတ်ဖုတ် ရန်အတွက် ကောက်ရိုးကိုယခင်ကကဲ့သို့ မပေးရ။ သူတို့ကိုယ်တိုင်ရှာယူကြစေ။-
8 ೮ ಆದರೂ ಅವರು ಈವರೆಗೆ ಮಾಡಿದ ಇಟ್ಟಿಗೆಗಳ ಲೆಕ್ಕದಲ್ಲಿ ಏನೂ ಕಡಿಮೆಯಾಗಬಾರದು ಎಂದು ಅವರಿಗೆ ಹೇಳಬೇಕು. ಅವರು ಮೈಗಳ್ಳರೇ, ಆದುದರಿಂದಲೇ ಅವರು, ‘ನಾವು ಹೋಗಿ ನಮ್ಮ ದೇವರಿಗೆ ಯಜ್ಞಮಾಡಿ ಬರುವುದಕ್ಕೆ ಅಪ್ಪಣೆಯಾಗಬೇಕು’ ಎಂದು ಕೂಗಿಕೊಳ್ಳುತ್ತಿದ್ದಾರೆ.
၈သို့ရာတွင်သူတို့ဖုတ်ရမည့်အုတ်အရေ အတွက်မှာ ယခင်ကထက်မနည်းစေရ။ မည် သည့်အကြောင်းကြောင့်မျှအရေအတွက် မလျော့စေရ။ သူတို့သည်ပျင်း၏။ ထို့ကြောင့် သူတို့က`ငါတို့၏ဘုရားအားယဇ်ပူဇော် ရန်သွားခွင့်ပေးပါ' ဟုတောင်းဆို၏။-
9 ೯ ಈ ಜನರು ವ್ಯರ್ಥವಾದ ಮಾತುಗಳಿಗೆ ಗಮನ ಕೊಡದಂತೆ ನೀವು ಅವರ ಮೇಲೆ ಹೆಚ್ಚು ಕೆಲಸವನ್ನು ಹೊರಿಸಿರಿ. ಅವರು ದುಡಿಯಲಿ” ಎಂದು ಆಜ್ಞಾಪಿಸಿದನು.
၉သူတို့အားအလုပ်ကိုအားသွန်ခွန်စိုက်လုပ် ဆောင်ကြစေ။ သို့မှသာလျှင်သူတို့သည်လိမ် လည်လှည့်စားသည့်စကားကိုနားမယောင်၊ အလုပ်မပျက်ဘဲလုပ်ကိုင်ကြလိမ့်မည်'' ဟု မိန့်မြွက်လေ၏။
10 ೧೦ ಆಗ ಬಿಟ್ಟೀಕೆಲಸವನ್ನು ಮಾಡಿಸುವವರೂ ಮತ್ತು ಅಧಿಕಾರಿಗಳೂ ಹೊರಗೆ ಹೋಗಿ ಆ ಜನರಿಗೆ, “ನಿಮಗೆ ಹುಲ್ಲನ್ನು ಕೊಡಬಾರದೆಂದು ಫರೋಹನ ಅಪ್ಪಣೆಯಾಗಿದೆ.
၁၀အုပ်ချုပ်သူတို့နှင့်ဣသရေလအလုပ်ကြပ် တို့က ဣသရေလအမျိုးသားတို့ထံသို့ သွားရောက်၍``ဖာရောဘုရင်က`ငါသည်သင် တို့အားကောက်ရိုးကိုပေးတော့မည်မဟုတ်။-
11 ೧೧ ನಿಮಗೆ ಹುಲ್ಲು ಎಲ್ಲಿ ದೊರಕುವುದೋ ಅಲ್ಲಿಗೆ ನೀವೇ ಹೋಗಿ ತೆಗೆದುಕೊಳ್ಳಿರಿ. ಆದರೂ ನೀವು ಮಾಡಬೇಕಾದ ಕೆಲಸದಲ್ಲಿ ಸ್ವಲ್ಪವೂ ಕಡಿಮೆಯಾಗಬಾರದು” ಎಂದು ಹೇಳಿದರು.
၁၁သင်တို့ကိုယ်တိုင်ကောက်ရိုးရနိုင်မည့်အရပ်မှ ကောက်ရိုးကိုရှာယူရမည်။ သို့ရာတွင်သင်တို့ ဖုတ်ရမည့်အုတ်အရေအတွက်မှာ ယခင်က ထက်မနည်းစေရ' ဟုမိန့်ကြားတော်မူသည်'' ဟူ၍ပြောလေ၏။-
12 ೧೨ ಹೀಗಿರಲಾಗಿ ಜನರು ಹುಲ್ಲನ್ನು ಕೂಡಿಸಿಕೊಳ್ಳುವುದಕ್ಕಾಗಿ ಐಗುಪ್ತ ದೇಶದಲ್ಲೆಲ್ಲಾ ಚದರಿಹೋಗಿ ಹುಡುಕತೊಡಗಿದರು.
၁၂ထို့ကြောင့်ဣသရေလအမျိုးသားတို့သည် အီဂျစ်ပြည်အနှံ့အပြားသို့သွားရောက်၍ ကောက်ရိုးရှာရလေ၏။-
13 ೧೩ ಇದಲ್ಲದೆ ಬಿಟ್ಟೀ ಕೆಲಸ ಮಾಡಿಸುವವರು, “ನಿಮಗೆ ಹುಲ್ಲು ಇದ್ದಾಗ ಹೇಗೋ ಹಾಗೆ ಪ್ರತಿದಿನದ ಕೆಲಸವನ್ನು ಅದೇ ದಿನದಲ್ಲೇ ಮುಗಿಸಬೇಕು” ಎಂದು ಹೇಳಿ ಅವರನ್ನು ಅವಸರ ಪಡಿಸಿದರು.
၁၃အုပ်ချုပ်သူတို့က``သင်တို့သည်ကောက်ရိုးရ စဉ်က နေ့စဉ်ဖုတ်ပြီးသမျှအုတ်အရေအတွက် နှုန်းအတိုင်း ယခုလည်းပြီးစီးစေရမည်'' ဟု ဆိုလျက်ဣသရေလအမျိုးသားတို့အား အသော့ခိုင်းလေ၏။-
14 ೧೪ ಫರೋಹನ ಅಧಿಕಾರಿಗಳು ತಾವೇ ನೇಮಿಸಿದ ಇಸ್ರಾಯೇಲರ ಮೇಲ್ವಿಚಾರಕರಿಗೆ, “ನೀವು ಮೊದಲು ಇಟ್ಟಿಗೆಗಳ ಲೆಕ್ಕ ಒಪ್ಪಿಸುತ್ತಿದ್ದಂತೆ ನಿನ್ನೆ ಹಾಗೂ ಈ ಹೊತ್ತು ಯಾಕೆ ಒಪ್ಪಿಸಲಿಲ್ಲ” ಎಂದು ಹೇಳಿ ಅವರನ್ನು ಹೊಡೆದರು.
၁၄အီဂျစ်အမျိုးသားအုပ်ချုပ်သူတို့က ဣသ ရေလအမျိုးသားအလုပ်ကြပ်တို့ကိုရိုက် နှက်လျက်``ယနေ့သင်တို့သည်အဘယ်ကြောင့် ယခင်အုတ်အရေအတွက်နှုန်းကိုမီအောင် မထုတ်နိုင်သနည်း'' ဟုမေးကြ၏။
15 ೧೫ ಹೀಗಿರಲು ಇಸ್ರಾಯೇಲರ ಮೇಲ್ವಿಚಾರಕರು ಫರೋಹನ ಬಳಿಗೆ ಹೋಗಿ, “ಏಕೆ ನಿನ್ನ ದಾಸರಿಗೆ ಹೀಗೆ ಮಾಡುತ್ತಿರುವಿರಿ ಸ್ವಾಮೀ?
၁၅ထိုအခါအလုပ်ကြပ်တို့သည်ဖာရောဘုရင် ထံသို့ဝင်၍``အရှင်မင်းကြီး၊ ကိုယ်တော်ကျွန် တို့အားအဘယ်ကြောင့်ဤသို့ပြုပါသနည်း။-
16 ೧೬ ನಿನ್ನ ದಾಸರಿಗೆ, ನೇಮಿಸಿದ ಅಧಿಕಾರಿಗಳು ಹುಲ್ಲನ್ನು ಕೊಡದೆ ‘ಇಟ್ಟಿಗೆಗಳನ್ನು ಮಾಡಿರಿ!’ ಎಂದು ಹೇಳುತ್ತಾ ನಮ್ಮನ್ನು ಹೊಡೆಯುತ್ತಿದ್ದಾರೆ. ಹೀಗೆ ನಿನ್ನ ಜನರು ಮಾಡುತ್ತಿರುವುದು ಪಾಪಕಾರ್ಯವಾಗಿದೆ” ಎಂದು ಗೋಳಾಡಿದರು.
၁၆ကိုယ်တော်ကျွန်တို့အားကောက်ရိုးကိုမပေးဘဲ အုတ်ဖုတ်ရမည်ဟုအမိန့်ပေးပါသည်။ ကိုယ် တော်ကြောင့်ယခုကိုယ်တော်ကျွန်တို့အရိုက် အနှက်ခံနေရပါသည်'' ဟုလျှောက်ထား ကြ၏။
17 ೧೭ ಅದಕ್ಕೆ ಅವನು, “ನೀವು ಮೈಗಳ್ಳರು, ನೀವು ಮೈಗಳ್ಳರಾದ ಕಾರಣ, ‘ನಾವು ಹೋಗಿ ಯೆಹೋವನಿಗೆ ಯಜ್ಞವನ್ನರ್ಪಿಸಿ ಬರಬೇಕು’ ಎಂದು ಹೇಳುತ್ತಿದ್ದೀರಿ.
၁၇ထိုအခါဖာရောဘုရင်က``သင်တို့သည်ပျင်း၏။ အလွန်ပျင်းသောကြောင့်သင်တို့က`အကျွန်ုပ်တို့ ၏ထာဝရဘုရားအားယဇ်ပူဇော်ရန်သွားပါ ရစေ' ဟုတောင်းလျှောက်ကြ၏။-
18 ೧೮ ಆದ್ದರಿಂದ ಈಗ ಕೆಲಸಕ್ಕೆ ನಡೆಯಿರಿ ನಿಮಗೆ ಹುಲ್ಲನ್ನು ಕೊಡುವುದಿಲ್ಲ. ಆದರೂ ನೇಮಿಸಿದ ಇಟ್ಟಿಗೆಗಳ ಲೆಕ್ಕವನ್ನು ತಪ್ಪದೆ ಒಪ್ಪಿಸಬೇಕು” ಅಂದನು.
၁၈အလုပ်ခွင်သို့ပြန်သွားကြ။ သင်တို့အားကောက် ရိုးပေးမည်မဟုတ်။ သို့သော်ယခင်အုတ်အရေ အတွက်နှုန်းအတိုင်းထုတ်လုပ်ရမည်'' ဟုမိန့် ကြားလေ၏။-
19 ೧೯ ದಿನ ದಿನವೂ ಒಪ್ಪಿಸಬೇಕಾದ ಇಟ್ಟಿಗೆಗಳ ಲೆಕ್ಕ ಕಡಿಮೆಯಾಗಬಾರದೆಂಬ ಅಪ್ಪಣೆಯಾಗಿದ್ದರಿಂದ ಇಸ್ರಾಯೇಲರ ಮೇಲ್ವಿಚಾರಕರು ತಾವು ದುರವಸ್ಥೆಯಲ್ಲಿ ಸಿಕ್ಕಿಕೊಂಡಿವೆಂದು ತಿಳಿದುಕೊಂಡರು.
၁၉ယခင်နေ့စဉ်ထုတ်လုပ်သော အုတ်အရေအတွက် နှုန်းအတိုင်းထုတ်လုပ်ရမည်ဖြစ်ကြောင်းကို ကြားရသောအခါ ဣသရေလအမျိုးသား အလုပ်ကြပ်တို့သည်မိမိတို့၌ဒုက္ခရောက် မည့်အရေးကိုတွေ့မြင်လာကြလေသည်။
20 ೨೦ ಅವರು ಫರೋಹನ ಬಳಿಯಿಂದ ಹೊರಗೆ ಬಂದಾಗ ತಮ್ಮನ್ನು ಎದುರುಗೊಳ್ಳುವುದಕ್ಕೆ ನಿಂತಿದ್ದ ಮೋಶೆ ಮತ್ತು ಆರೋನರನ್ನು ನೋಡಿ
၂၀သူတို့သည်ဖာရောဘုရင်ထံမှထွက်ခွာလာ ကြသောအခါ သူတို့အားစောင့်နေသော မောရှေနှင့်အာရုန်တို့ကိုတွေ့လျှင်၊-
21 ೨೧ ಮೋಶೆ ಹಾಗು ಆರೋನರಿಗೆ, “ಯೆಹೋವನು ನಿಮ್ಮನ್ನು ನೋಡಿ ನ್ಯಾಯತೀರಿಸಲಿ. ಏಕೆಂದರೆ ಫರೋಹನು ಮತ್ತು ಅವನ ಸೇವಕರೂ ನಮ್ಮನ್ನು ನೋಡಿ ಅಸಹ್ಯಪಡುವಂತೆ ನೀವು ಮಾಡಿರುವಿರಿ. ನಮ್ಮನ್ನು ಸಂಹಾರಮಾಡುವುದಕ್ಕೆ ಅವರ ಕೈಗೆ ಕತ್ತಿಯನ್ನು ಕೊಟ್ಟಿದ್ದೀರಿ” ಅಂದರು. “ಯೆಹೋವನು ನಿಮ್ಮ ತಪ್ಪನ್ನು ವಿಚಾರಿಸಿ ತಕ್ಕ ಶಿಕ್ಷೆಯನ್ನು ವಿಧಿಸಲಿ” ಎಂದು ಹೇಳಿದರು.
၂၁``ဖာရောဘုရင်နှင့်သူ၏အရာရှိတို့ကကျွန်ုပ် တို့အားရွံမုန်းလာစေရန် သင်တို့ပြုလုပ်သည့် အတွက်ကြောင့်ထာဝရဘုရားသည်သင်တို့ အားစီရင်တော်မူပါစေသော။ ကျွန်ုပ်တို့အား သတ်ရန်သင်တို့သည်သူတို့လက်၌ဋ္ဌားကို အပ်ပေးလေပြီ'' ဟုဆိုကြ၏။
22 ೨೨ ಆಗ ಮೋಶೆಯು ಯೆಹೋವನ ಬಳಿಗೆ ಹಿಂತಿರುಗಿ ಬಂದು, “ಸ್ವಾಮೀ, ಈ ಜನರಿಗೆ ಕೇಡನ್ನು ಮಾಡಿದ್ದೀಯಲ್ಲಾ? ನನ್ನನ್ನು ಕಳುಹಿಸಿದ್ದು ಯಾಕೆ?
၂၂ထိုနောက်မောရှေသည်ထာဝရဘုရားထံတော် သို့``အို အရှင်ဘုရား၊ အဘယ်ကြောင့်ဤသူတို့ ကိုဒုက္ခရောက်စေပါသနည်း။ အကျွန်ုပ်အား အဘယ်ကြောင့်စေလွှတ်တော်မူပါသနည်း။-
23 ೨೩ ನಾನು ಫರೋಹನ ಬಳಿಗೆ ಹೋಗಿ ನಿನ್ನ ಹೆಸರಿನಲ್ಲಿ ಮಾತನಾಡಿದಂದಿನಿಂದ ಅವನು ಈ ಜನರಿಗೆ ಕೇಡನ್ನೇ ಮಾಡುತ್ತಿದ್ದಾನೆ. ನೀನು ನಿನ್ನ ಜನರನ್ನು ಎಷ್ಟು ಮಾತ್ರವೂ ತಪ್ಪಿಸಲಿಲ್ಲವಲ್ಲ” ಎಂದು ಹೇಳಿದನು.
၂၃အကျွန်ုပ်သည်ကိုယ်တော်၏အမိန့်တော်အရ ဖာရောဘုရင်ထံလျှောက်ထားသည့်အချိန်မှ စ၍ သူသည်ကိုယ်တော်၏လူမျိုးတော်ကိုနှိပ် စက်ခဲ့ပါပြီ။ သို့သော်လည်းကိုယ်တော်သည် သူတို့အားမည်သည့်အကူအညီကိုမျှ မပေးခဲ့ပါ'' ဟုလျှောက်ထားလေ၏။