< ಯೆಹೆಜ್ಕೇಲನು 15 >

1 ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು,
وَأَوْحَى إِلَيَّ الرَّبُّ بِكَلِمَتِهِ قَائِلاً:١
2 “ನರಪುತ್ರನೇ, ದ್ರಾಕ್ಷಿಯ ಗಿಡವು ಉಳಿದ ಗಿಡಗಳಿಗಿಂತ ಎಷ್ಟು ಹೆಚ್ಚು? ವನವೃಕ್ಷಗಳಲ್ಲಿ ದ್ರಾಕ್ಷಾಲತೆಯ ವಿಶೇಷವೇನು?
«يَاابْنَ آدَمَ، بِمَاذَا يَفْضُلُ عُودُ الْكَرْمِ عَلَى كُلِّ عُودٍ آخَرَ أَوْ عَلَى غُصْنٍ مِنْ أَغْصَانِ شَجَرِ الْغَابَةِ؟٢
3 ಜನರು ದ್ರಾಕ್ಷಿಯ ಕಟ್ಟಿಗೆಯನ್ನು ತೆಗೆದುಕೊಂಡು ಅದರಿಂದ ಯಾವ ಕೆಲಸವನ್ನಾದರೂ ಮಾಡುವರೋ ಅಥವಾ ಅದರ ಮೇಲೆ ಯಾವ ವಸ್ತುವನ್ನಾದರೂ ನೇತು ಹಾಕುವುದಕ್ಕೆ ಅದರಿಂದ ಗೂಟವನ್ನು ಮಾಡಿಕೊಳ್ಳುವರೋ?
أَيُؤْخَذُ مِنْهُ قَضِيبٌ لِيُصْنَعَ مِنْهُ شَيْءٌ مَا؟ أَوْ يَخْتَارُونَ مِنْهُ وَتَداً يُعَلَّقُ عَلَيْهِ إِنَاءٌ؟٣
4 ಇಲ್ಲ, ಸೌದೆಯಾಗಿ ಬೆಂಕಿಯಲ್ಲಿ ಹಾಕುವರು; ಬೆಂಕಿಯು ಅದರ ಎರಡು ಕೊನೆಗಳನ್ನು ಸುಟ್ಟುಬಿಡುವುದು, ಮಧ್ಯಭಾಗವು ಇದ್ದಲಾಗಿ ಯಾವ ಕೆಲಸಕ್ಕೂ ಬರುವುದಿಲ್ಲ.
إِنَّمَا يُطْرَحُ وَقُوداً لِلنَّارِ فَتَلْتَهِمُ النَّارُ طَرَفَيْهِ وَتَجْعَلُ وَسَطَهُ فَحْماً، أَيَصْلُحُ بَعْدُ لِشَيْءٍ؟٤
5 ಅದು ಸಂಪೂರ್ಣವಾಗಿ ಇದ್ದಾಗ ಯಾವ ಕೆಲಸಕ್ಕೂ ಬರಲಿಲ್ಲ; ಬೆಂಕಿಯಲ್ಲಿ ಸುಟ್ಟು ಇದ್ದಲಾದ ಮೇಲೆ ಯಾವ ಕೆಲಸಕ್ಕೆ ಬಂದೀತು?”
فَإِنْ كَانَ وَهُوَ سَلِيمٌ لَمْ يَصْلُحْ لِعَمَلٍ مَا، فَكَمْ بِالأَحْرَى بَعْدَ أَنِ الْتَهَمَتْهُ النِّيرَانُ وَاحْتَرَقَ؟ أَيَصْلُحُ بَعْدُ لِصُنْعِ شَيْءٍ؟٥
6 ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ವನ ವೃಕ್ಷಗಳಲ್ಲಿ ದ್ರಾಕ್ಷಿಯ ಗಿಡವನ್ನು ನಾನು ಹೇಗೆ ಬೆಂಕಿಗೆ ಸೌದೆಯನ್ನಾಗಿ ಕೊಟ್ಟಿದ್ದೇನೋ, ಹಾಗೆಯೇ ನಾನು ಯೆರೂಸಲೇಮಿನವರನ್ನು ವಿನಾಶಕ್ಕೆ ಗುರಿಮಾಡಿದ್ದೇನೆ.
لِذَلِكَ يَقُولُ السَّيِّدُ الرَّبُّ، كَمَا جَعَلْتُ عُودَ الْكَرْمِ مِنْ بَيْنِ أَشْجَارِ الْغَابَةِ وَقُوداً لِلنَّارِ، هَكَذَا أَجْعَلُ أَهْلَ أُورُشَلِيمَ حَطَباً لَهَا.٦
7 ಅವರ ಮೇಲೆ ಕೋಪ ದೃಷ್ಟಿಯನ್ನಿಡುವೆನು; ಅವರು ಬೆಂಕಿಯೊಳಗಿಂದ ತಪ್ಪಿಸಿಕೊಂಡರೂ, ಬೆಂಕಿಯು ಅವರನ್ನು ನುಂಗಿಬಿಡುವುದು; ನಾನು ಅವರ ಮೇಲೆ ಕೋಪ ದೃಷ್ಟಿಯನ್ನಿಡುವಾಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
وَأَنْقَلِبُ عَلَيْهِمْ حَتَّى إِذَا خَرَجُوا مِنْ نَارٍ تَلْتَهِمُهُمْ نَارٌ أُخْرَى، فَتُدْرِكُونَ أَنِّي أَنَا الرَّبُّ حِينَ أَنْقَلِبُ عَلَيْكُمْ.٧
8 ಅವರು ದ್ರೋಹ ಮಾಡಿದ್ದರಿಂದ ನಾನು ದೇಶವನ್ನು ಹಾಳುಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
وَأَجْعَلُ الأَرْضَ مُقْفِرَةً لأَنَّهُمْ خَانُوا عَهْدِي يَقُولُ السَّيِّدُ الرَّبُّ».٨

< ಯೆಹೆಜ್ಕೇಲನು 15 >