+ ಆದಿಕಾಂಡ 1 >

1 ಆದಿಯಲ್ಲಿ ದೇವರು ಆಕಾಶವನ್ನು, ಭೂಮಿಯನ್ನು ಸೃಷ್ಟಿಮಾಡಿದನು.
आदिमा परमेश्‍वरले आकाशमण्डल र पृथ्वी सृष्‍टि गर्नुभयो ।
2 ಭೂಮಿಯು ಕ್ರಮವಿಲ್ಲದೆಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕತ್ತಲಿತ್ತು. ದೇವರಾತ್ಮವು ಸಾಗರದ ಮೇಲೆ ಚಲಿಸುತ್ತಿತ್ತು.
पृथ्वी निराकार र शून्य थियो । समुद्रको सतहमाथि अन्धकार थियो । परमेश्‍वरका आत्मा सारा समुद्रमाथि परिभ्रमण गर्दै हुनुहुन्थ्यो ।
3 ಅನಂತರ ದೇವರು “ಬೆಳಕಾಗಲಿ” ಎಂದು ಆಜ್ಞಾಪಿಸಲು ಬೆಳಕಾಯಿತು.
परमेश्‍वरले भन्‍नुभयो, “उज्यालो होस्,” र त्यहाँ उज्यालो भयो ।
4 ದೇವರು ಆ ಬೆಳಕನ್ನು ಒಳ್ಳೆಯದೆಂದು ಕಂಡನು.
परमेश्‍वरले उज्यालोलाई हेर्नुभयो, र त्यो असल थियो । उहाँले उज्यालोलाई अन्धकारबाट छुट्‍ट्याउनुभयो ।
5 ದೇವರು ಬೆಳಕನ್ನೂ ಕತ್ತಲನ್ನೂ ಬೇರ್ಪಡಿಸಿ ಬೆಳಕಿಗೆ “ಹಗಲು” ಎಂದೂ, ಕತ್ತಲೆಗೆ “ಇರುಳು” ಎಂದೂ ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೊದಲನೆಯ ದಿನವಾಯಿತು.
परमेश्‍वरले उज्यालोलाई “दिन”, र अन्धकारलाई “रात” भन्‍नुभयो । साँझ पर्‍यो र बिहान भयो - पहिलो दिन ।
6 ಬಳಿಕ ದೇವರು “ಜಲರಾಶಿಗಳ ನಡುವೆ ವಿಸ್ತಾರವಾದ ಗುಮ್ಮಟವು ಉಂಟಾಗಲಿ ಅದು ಕೆಳಗಿನ ನೀರುಗಳನ್ನೂ ಮೇಲಿನ ನೀರುಗಳನ್ನೂ ಬೇರೆ ಬೇರೆ ಮಾಡಲಿ” ಅಂದನು.
परमेश्‍वरले भन्‍नुभयो, “पानीको बिचमा एउटा क्षेत्र होस्, र त्यसले पानीलाई दुई भागमा विभाजन गरोस् ।”
7 ದೇವರು ವಿಸ್ತಾರವಾದ ಗುಮ್ಮಟವನ್ನು ಮಾಡಿ ಅದರ ಕೆಳಗಿದ್ದ ನೀರುಗಳನ್ನು ಅದರ ಮೇಲಿದ್ದ ನೀರುಗಳಿಂದ ವಿಂಗಡಿಸಿದನು. ಅದು ಹಾಗೆಯೇ ಆಯಿತು.
परमेश्‍वरले त्यो क्षेत्र बनाएर त्यसमुनि र माथिको पानीलाई विभाजन गर्नुभयो । तब त्यस्तै भयो ।
8 ದೇವರು ಆ ಗುಮ್ಮಟಕ್ಕೆ “ಆಕಾಶ” ಎಂದು ಹೆಸರಿಟ್ಟನು. ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಎರಡನೆಯ ದಿನವಾಯಿತು.
परमेश्‍वरले त्यस क्षेत्रलाई “आकाश” भन्‍नुभयो । साँझ पर्‍यो र बिहान भयो - दोस्रो दिन ।
9 ಅನಂತರ ದೇವರು, “ಆಕಾಶದ ಕೆಳಗಿರುವ ನೀರೆಲ್ಲಾ ಒಂದೇ ಸ್ಥಳದಲ್ಲಿ ಒಟ್ಟಿಗೆ ಕೂಡಿಕೊಳ್ಳಲಿ ಮತ್ತು ಒಣನೆಲವು ಕಾಣಿಸಲಿ” ಅಂದನು. ಹಾಗೆಯೇ ಆಯಿತು.
परमेश्‍वरले भन्‍नुभयो, “आकाशमुनिको जम्मै पानी एक ठाउँमा जम्मा होस्, र ओभानो जमिन देखा परोस् ।” तब त्यस्तै भयो ।
10 ೧೦ ದೇವರು ಒಣನೆಲಕ್ಕೆ “ಭೂಮಿ” ಎಂದೂ ಜಲರಾಶಿಗೆ “ಸಮುದ್ರ” ಎಂದೂ ಹೆಸರಿಟ್ಟನು. ಆತನು ಅದನ್ನು ಒಳ್ಳೆಯದೆಂದು ನೋಡಿದನು.
परमेश्‍वरले ओभानो जमिनलाई “पृथ्वी” भन्‍नुभयो, र जम्मा भएको पानीलाई “समुद्र” भन्‍नुभयो । उहाँले हेर्नुभयो, र त्यो असल थियो ।
11 ೧೧ ತರುವಾಯ ದೇವರು, “ಭೂಮಿಯು ಹುಲ್ಲನ್ನು, ಸಸ್ಯಗಳನ್ನೂ, ಬೀಜಬಿಡುವ ಕಾಯಿಪಲ್ಯದ ಗಿಡಗಳನ್ನೂ ಬೆಳೆಯಿಸಲಿ ಮತ್ತು ಬೀಜವುಳ್ಳ ಹಣ್ಣಿನ ಮರಗಳನ್ನು ಅವುಗಳ ಜಾತಿಗನುಸಾರವಾಗಿ ಫಲಿಸಲಿ” ಎಂದು ಹೇಳಿದನು, ಹಾಗೆಯೇ ಆಯಿತು.
परमेश्‍वरले भन्‍नुभयो, “पृथ्वीले आ-आफ्नो प्रजातिअनुसारको वनस्पति, बिउ हुने बोट-बिरुवाहरू र फलभित्रै बिउ हुने फल-फलाउने रुखहरू उमारोस् ।” तब त्यस्तै भयो ।
12 ೧೨ ಭೂಮಿಯಲ್ಲಿ ಸಸ್ಯಗಳು ಬೆಳೆದವು. ತಮ್ಮ ತಮ್ಮ ಜಾತಿಯ ಪ್ರಕಾರ ಬೀಜಬಿಡುವ ಕಾಯಿಪಲ್ಯದ ಗಿಡಗಳು ಉಂಟಾದವು. ತಮ್ಮ ತಮ್ಮ ಜಾತಿಗನುಸಾರವಾಗಿ ಬೀಜವುಳ್ಳ ಹಣ್ಣಿನ ಮರಗಳು ಉತ್ಪತ್ತಿಯಾದವು. ದೇವರು ಅದನ್ನು ಒಳ್ಳೆಯದೆಂದು ಕಂಡನು
पृथ्वीले वनस्पति, आ-आफ्नो प्रजातिअनुसारका बिउ हुने बोट-बिरुवाहरू र आफ्नै फलभित्र बिउ हुने फल-फलाउने रुखहरू उमार्‍यो । परमेश्‍वरले हेर्नुभयो, र त्यो असल थियो ।
13 ೧೩ ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಮೂರನೆಯ ದಿನವಾಯಿತು.
साँझ पर्‍यो र बिहान भयो - तेस्रो दिन ।
14 ೧೪ ಬಳಿಕ ದೇವರು, “ಆಕಾಶ ಮಂಡಲದಲ್ಲಿ ಬೆಳಕುಗಳು ಉಂಟಾಗಲಿ. ಅವು ಹಗಲಿರುಳುಗಳನ್ನು ಬೇರೆ ಬೇರೆ ಮಾಡಲಿ. ಅವು ಕಾಲಗಳನ್ನೂ, ದಿನಸಂವತ್ಸರಗಳನ್ನೂ ಸೂಚಿಸುವ ಗುರುತುಗಳಾಗಿರಲಿ.
परमेश्‍वरले भन्‍नुभयो, “दिनलाई रातबाट अलग गर्नको निम्ति आकाशमा ज्योतिहरू होऊन् र तिनीहरू ऋतुहरू, दिनहरू र वर्षहरूका निम्ति चिन्हहरू होऊन् ।
15 ೧೫ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೆ ಅವು ಆಕಾಶಮಂಡಲದಲ್ಲಿ ದೀಪಗಳಂತಿರಲಿ” ಅಂದನು. ಹಾಗೆಯೇ ಆಯಿತು.
पृथ्वीमाथि उज्यालो दिनलाई ती आकाशमा ज्योतिहरू होऊन् ।” तब त्यस्तै भयो ।
16 ೧೬ ದೇವರು ಹಗಲನ್ನಾಳುವುದಕ್ಕೆ ದೊಡ್ಡ ದೀಪವನ್ನೂ ಇರುಳನ್ನಾಳುವುದಕ್ಕೆ ಚಿಕ್ಕ ದೀಪವನ್ನೂ ಹೀಗೆ ಎರಡು ದೊಡ್ಡ ದೀಪಗಳನ್ನು ಉಂಟು ಮಾಡಿದನು. ಆತನು ನಕ್ಷತ್ರಗಳನ್ನು ಸಹ ಉಂಟು ಮಾಡಿದನು.
परमेश्‍वरले दुईवटा विशाल ज्योति बनाउनुभयो, ठुलो ज्योतिचाहिँ दिनमाथि प्रभुत्व गर्न, र सानोचाहिँ रातमाथि प्रभुत्व गर्न । उहाँले ताराहरू पनि बनाउनुभयो ।
17 ೧೭ ದೇವರು ಆ ಬೆಳಕುಗಳನ್ನು ಆಕಾಶದಲ್ಲಿ ನಿಲ್ಲಿಸಿ ಭೂಮಿಯ ಮೇಲೆ ಬೆಳಕು ಕೊಡುವುದಕ್ಕೂ
पृथ्वीमाथि उज्यालो दिन, दिन र रातमाथि प्रभुत्व गर्न, र उज्यालोलाई अन्धकारबाट अलग गर्न
18 ೧೮ ಹಗಲಿರುಳುಗಳನ್ನು ಆಳುವುದಕ್ಕೂ ಬೆಳಕನ್ನು, ಕತ್ತಲನ್ನು ಬೇರೆ ಬೇರೆ ಮಾಡುವುದಕ್ಕೂ ಅವುಗಳನ್ನು ನೇಮಿಸಿದನು. ದೇವರು ಅದನ್ನು ಒಳ್ಳೆಯದೆಂದು ಕಂಡನು.
परमेश्‍वरले ती आकाशमा राख्‍नुभयो । परमेश्‍वरले हेर्नुभयो, र त्यो असल थियो ।
19 ೧೯ ಸಾಯಂಕಾಲವೂ ಉದಯಕಾಲವೂ ಆಗಿ ನಾಲ್ಕನೆಯ ದಿನವಾಯಿತು.
साँझ पर्‍यो र बिहान भयो - चौथो दिन ।
20 ೨೦ ತರುವಾಯ ದೇವರು, “ಗುಂಪು ಗುಂಪಾಗಿ ಚಲಿಸುವ ಜಲಜಂತುಗಳು ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಅಂತರಿಕ್ಷದಲ್ಲಿ ಹಾರಾಡಲಿ” ಎಂದು ಹೇಳಿದನು.
परमेश्‍वरले भन्‍नुभयो, “पानी ठुलो सङ्ख्‍यामा जीवित प्राणीहरूले भरिऊन्, र पृथ्वीमाथि आकाशमा पक्षीहरू उडून् ।”
21 ೨೧ ಹೀಗೆ ದೇವರು ಮಹಾ ಜಲಚರಗಳನ್ನೂ ನೀರಿನಲ್ಲಿ ತುಂಬಿರುವ ಸಕಲ ವಿಧವಾದ ಜೀವಿಗಳನ್ನೂ ರೆಕ್ಕೆಗಳುಳ್ಳ ಸಕಲವಿಧವಾದ ಪಕ್ಷಿಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
परमेश्‍वरले विशाल जलचरहरू, र आ-आफ्नो प्रजातिअनुसारको सबै जीवित प्राणी, चलहल गर्ने र पुरै पानीलाई भर्ने प्राणीहरू, र आ-आफ्नो प्रजातिअनुसारको पखेटा भएका सबै पक्षीहरूलाई सृष्‍टि गर्नुभयो । परमेश्‍वरले हेर्नुभयो, र त्यो असल थियो ।
22 ೨೨ ಇದಲ್ಲದೆ ದೇವರು, “ಅವುಗಳಿಗೆ ನೀವು ಅಭಿವೃದ್ಧಿಯಾಗಿ ಹೆಚ್ಚಿರಿ, ಜಲಚರಗಳು ಸಮುದ್ರದ ನೀರಿನಲ್ಲಿ ತುಂಬಿಕೊಳ್ಳಲಿ, ಪಕ್ಷಿಗಳು ಭೂಮಿಯ ಮೇಲೆ ಹೆಚ್ಚಲಿ” ಎಂದು ಹೇಳಿ ಆಶೀರ್ವದಿಸಿದನು.
परमेश्‍वरले तिनीहरूलाई यसो भनेर आशिष् दिनुभयो, “फल्दै-फुल्दै र वृद्धि हुँदै जाओ, र समुद्रमा भरिँदै जाओ । पृथ्वीमा पक्षीहरू वृद्धि होऊन् ।”
23 ೨೩ ಹೀಗೆ ಸಾಯಂಕಾಲವೂ ಉದಯಕಾಲವೂ ಆಗಿ ಐದನೆಯ ದಿನವಾಯಿತು.
साँझ पर्‍यो र बिहान भयो - पाँचौँ दिन ।
24 ೨೪ ಬಳಿಕ ದೇವರು, “ಭೂಮಿಯಿಂದ ಜೀವಜಂತುಗಳು ಉಂಟಾಗಲಿ; ಪಶು, ಕ್ರಿಮಿಗಳೂ ಕಾಡುಮೃಗಗಳು, ತಮ್ಮ ತಮ್ಮ ಜಾತಿಗನುಸಾರವಾಗಿ ಹುಟ್ಟಲಿ” ಅಂದನು. ಹಾಗೆಯೇ ಆಯಿತು.
परमेश्‍वरले भन्‍नुभयो, “पृथ्वीले आ-आफ्नो प्रजातिअनुसारको जीवित प्राणीहरू, पाल्तु पशुहरू, घस्रने जन्तुहरू, र पृथ्वीका जङ्गली जनावरहरू उत्पन्‍न गरोस् ।” तब त्यस्तै भयो ।
25 ೨೫ ದೇವರು ಕಾಡುಮೃಗಗಳನ್ನೂ, ಪಶುಗಳನ್ನೂ, ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳನ್ನೂ ಅವುಗಳ ಜಾತಿಗನುಸಾರವಾಗಿ ಉಂಟುಮಾಡಿದನು. ಆತನು ಅದನ್ನು ಒಳ್ಳೆಯದೆಂದು ಕಂಡನು.
परमेश्‍वरले पृथ्वीका जङ्गली जनावरहरू, पाल्तु पशुहरू, जमिनमा घस्रने सबै जन्तुहरूलाई तिनीहरूकै आ-आफ्नै प्रजातिअनुसार बनाउनुभयो । उहाँले हेर्नुभयो, र त्यो असल थियो ।
26 ೨೬ ಆಮೇಲೆ ದೇವರು, ನಮ್ಮ ಸ್ವರೂಪದಲ್ಲಿ ನಮ್ಮ ಹೋಲಿಕೆಗೆ ಸರಿಯಾಗಿ ಮನುಷ್ಯರನ್ನು ಉಂಟು ಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ, ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ, ಪ್ರಾಣಿಗಳ ಮೇಲೆಯೂ, ನೆಲದ ಮೇಲೆ ಹರಿದಾಡುವ ಎಲ್ಲಾ ಕ್ರಿಮಿಕೀಟಗಳ ಮೇಲೆಯೂ ಎಲ್ಲಾ ಭೂಮಿಯ ಮೇಲೆಯೂ ದೊರೆತನಮಾಡಲಿ ಅಂದನು.
परमेश्‍वरले भन्‍नुभयो, “मानिसलाई हाम्रो स्वरूपमा, हाम्रो प्रतिरूपमा बनाऔँ । तिनीहरूले समुद्रका माछाहरू, आकाशका पक्षीहरू, पाल्तु पशुहरू, सारा पृथ्वी, र पृथ्वीमा घस्रने सबै जन्तुहरूमाथि अधिकार गरून् ।”
27 ೨೭ ಹೀಗೆ ದೇವರು; “ಮನುಷ್ಯನನ್ನು ತನ್ನ ಸ್ವರೂಪದಲ್ಲಿ ಉಂಟುಮಾಡಿದನು. ದೇವರ ಸ್ವರೂಪದಲ್ಲಿ ಅವನನ್ನು ಉಂಟುಮಾಡಿದನು. ಅವರನ್ನು ಗಂಡುಹೆಣ್ಣಾಗಿ ಸೃಷ್ಟಿ ಮಾಡಿದನು.”
परमेश्‍वरले मानिसलाई आफ्नै स्वरूपमा सृष्‍टि गर्नुभयो । उहाँले तिनलाई आफ्नै प्रतिरूपमा सृष्‍टि गर्नुभयो । नर र नारी गरी उहाँले तिनीहरूलाई सृष्‍टि गर्नुभयो ।
28 ೨೮ ಇದಲ್ಲದೆ ದೇವರು ಅವರನ್ನು ಆಶೀರ್ವದಿಸಿ, “ನೀವು ಬಹು ಸಂತಾನವುಳ್ಳವರಾಗಿ ಹೆಚ್ಚಿರಿ. ಭೂಮಿಯಲ್ಲಿ ತುಂಬಿಕೊಂಡು ಅದನ್ನು ವಶಮಾಡಿಕೊಳ್ಳಿರಿ. ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲಾ ಜೀವಿಗಳ ಮೇಲೆಯೂ ದೊರೆತನ ಮಾಡಿರಿ” ಎಂದು ಅವರಿಗೆ ಹೇಳಿದನು.
परमेश्‍वरले तिनीहरूलाई आशिष्‍्‍ दिनुभयो र भन्‍नुभयो, “फल्दै-फुल्दै र वृद्धि हुँदै जाओ । पृथ्वीमा भरिँदै जाओ, र त्यसलाई आफ्नो वशमा राख । समुद्रका माछाहरू, आकाशका पक्षीहरू, र पृथ्वीमा चलहल गर्ने सबै जीवित प्राणीहरूमाथि अधिकार गर ।”
29 ೨೯ ಅಲ್ಲದೆ ದೇವರು, “ಇಗೋ, ಸಮಸ್ತ ಭೂಮಿಯ ಮೇಲಿರುವ ಬೀಜವುಳ್ಳ ಎಲ್ಲಾ ಪೈರುಗಳನ್ನೂ, ಬೀಜವುಳ್ಳ ಎಲ್ಲಾ ಹಣ್ಣಿನ ಮರಗಳನ್ನೂ ನಿಮಗೆ ಆಹಾರಕ್ಕಾಗಿ ಕೊಟ್ಟಿದ್ದೇನೆ
परमेश्‍वरले भन्‍नुभयो, “हेर, मैले पृथ्वीका बिउ हुने हरेक बोट-बिरुवाहरू, र फलभित्रै बिउ हुने हरेक फल-फलाउने रुखहरू तिमीहरूलाई दिएको छु । ती तिमीहरूका निम्ति आहारा हुनेछन् ।
30 ೩೦ ಇದಲ್ಲದೆ ಭೂಮಿಯ ಮೇಲೆ ತಿರುಗಾಡುವ ಮೃಗಗಳು, ಆಕಾಶದಲ್ಲಿ ಹಾರಾಡುವ ಪಕ್ಷಿಗಳು, ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು ಮೊದಲಾದ ಜೀವಿಗಳಿಗೆ ಹಸುರಾದ ಸಸ್ಯಗಳನ್ನೆಲ್ಲಾ ಆಹಾರಕ್ಕಾಗಿ ಕೊಟ್ಟಿದ್ದೇನೆ” ಎಂದು ಹೇಳಿದನು. ಅದು ಹಾಗೆಯೇ ಆಯಿತು.
पृथ्वीका हरेक जङ्गली जनवारहरू, आकाशका हरेक पक्षीहरू, र सबै घस्रने जन्तुहरू, र जीवन भएका हरेक प्राणीलाई मैले आहाराको निम्ति सबै हरिया बोट-बिरुवाहरू दिएको छु ।” तब त्यस्तै भयो ।
31 ೩೧ ದೇವರು ತಾನು ಉಂಟುಮಾಡಿದ್ದನ್ನೆಲ್ಲಾ ನೋಡಲಾಗಿ ಅವೆಲ್ಲವೂ ಬಹು ಒಳ್ಳೆಯದಾಗಿ ತೋರಿತು. ಸಾಯಂಕಾಲವೂ ಉದಯಕಾಲವೂ ಆಗಿ ಆರನೆಯ ದಿನವಾಯಿತು.
परमेश्‍वरले आफूले बनाउनुभएका सबै कुरा हेर्नुभयो । त्यो ज्यादै असल थियो । साँझ पर्‍यो र बिहान भयो - छैटौँ दिन ।

+ ಆದಿಕಾಂಡ 1 >