< ಆದಿಕಾಂಡ 32 >
1 ೧ ಯಾಕೋಬನು ಮುಂದೆ ಪ್ರಯಾಣಮಾಡಲು ದೇವದೂತರು ಅವನೆದುರಿಗೆ ಬಂದರು.
၁ယာကုပ်သည်ခရီးဆက်လက်သွားစဉ် ဘုရားသခင်၏ ကောင်းကင်တမန်တို့နှင့်တွေ့ဆုံလေ သည်။-
2 ೨ ಯಾಕೋಬನು ಅವರನ್ನು ನೋಡಿದಾಗ, “ಇದು ದೇವರ ಸೇನಾನಿವೇಶ” ಎಂದು ಹೇಳಿ ಆ ಸ್ಥಳಕ್ಕೆ “ಮಹನಯಿಮ್” ಎಂದು ಹೆಸರಿಟ್ಟನು.
၂ကောင်းကင်တမန်တို့ကိုမြင်လျှင်ယာကုပ် က``ဤအရပ်ကားဘုရားသခင်၏တပ်တော် ဖြစ်သည်'' ဟုဆို၍၎င်းကိုမဟာနိမ်ဟုမှည့် ခေါ်လေသည်။
3 ೩ ಬಳಿಕ ಯಾಕೋಬನು ತನಗಿಂತ ಮೊದಲು ಎದೋಮ್ಯರ ಪ್ರದೇಶವಾಗಿರುವ ಸೇಯೀರ್ ಸೀಮೆಗೆ ತನ್ನ ಅಣ್ಣನಾದ ಏಸಾವನ ಬಳಿಗೆ ಸೇವಕರನ್ನು ಕಳುಹಿಸಿದನು.
၃ယာကုပ်သည်ဧဒုံပြည်တွင်ရှိသောသူ၏အစ် ကိုဧသောထံသို့ စေတမန်များကိုရှေ့ပြေး အဖြစ်စေလွှတ်လေ၏။-
4 ೪ ಕಳುಹಿಸುವಾಗ ಅವರಿಗೆ “ನೀವು ನನ್ನ ಪ್ರಭುವಾದ ಏಸಾವನ ಬಳಿಗೆ ಹೋಗಿ ಅವನಿಗೆ, ‘ನಿನ್ನ ಸೇವಕನಾದ ಯಾಕೋಬನು ಇಷ್ಟು ದಿನ ಲಾಬಾನನ ಬಳಿಯಲ್ಲಿ ವಾಸವಾಗಿದ್ದನು
၄ထိုစေတမန်တို့အား``ကိုယ်တော်၏အစေခံ ယာကုပ်က`ကျွန်ုပ်သည်လာဗန်နှင့်အတူနေ ထိုင်ပြီးယခုမှပြန်ခဲ့ရပါသည်။-
5 ೫ ಈಗ ಅವನಿಗೆ ಎತ್ತು, ಕತ್ತೆ ಮುಂತಾದ ಪಶುಗಳ ಹಿಂಡುಗಳೂ ದಾಸದಾಸಿಯರು ಇದ್ದಾರೆ. ಅವನು ತಮ್ಮ ದಯೆ ಆತನ ಮೇಲೆ ಇರಬೇಕೆಂದು ತಿಳಿಸುವುದಕ್ಕೆ ನಿಮ್ಮನ್ನು ಕಳುಹಿಸಿದ್ದಾನೆ’” ಎಂದು ಹೇಳಿರಿ ಅಂದನು.
၅ကျွန်ုပ်တွင်နွား၊ မြည်း၊ သိုး၊ ဆိတ်နှင့်ကျွန်များရှိ ပါသည်။ ကိုယ်တော်ထံ၌ကျွန်ုပ်မျက်နှာသာရ နိုင်မည်ဟုမျှော်လင့်လျက် ဤသို့သတင်းပို့ လျှောက်ထားပါသည်' ဟုပြောလော့'' ဟုမှာ ကြားလိုက်လေသည်။
6 ೬ ತರುವಾಯ ಆ ಸೇವಕರು ಯಾಕೋಬನ ಬಳಿಗೆ ಹಿಂತಿರುಗಿ ಬಂದು, “ನಾವು ನಿನ್ನ ಅಣ್ಣನಾದ ಏಸಾವನ ಹತ್ತಿರಕ್ಕೆ ಹೋಗಿ ಬಂದಿದ್ದೇವೆ, ಅವನು ನಾನೂರು ಜನರ ಸಮೇತ ನಿನ್ನನ್ನು ಎದುರುಗೊಳ್ಳುವುದಕ್ಕೆ ಬರುತ್ತಾನೆ” ಎಂದು ಹೇಳಿದಾಗ,
၆စေတမန်တို့သည်ယာကုပ်ထံသို့ပြန်ရောက် လာ၍ ``ကျွန်ုပ်တို့သည်ကိုယ်တော်၏အစ်ကို ဧသောထံသို့ရောက်ခဲ့ပါသည်။ သူသည်လည်း ကိုယ်တော်နှင့်တွေ့ဆုံရန်လာနေပါပြီ။ သူ့ ထံ၌လူအင်အားလေးရာရှိပါသည်'' ဟု ပြန်ကြားကြသည်။-
7 ೭ ಯಾಕೋಬನಿಗೆ ಬಹು ಭಯವೂ ಕಳವಳವೂ ಉಂಟಾದವು. ಅವನು ತನ್ನೊಂದಿಗಿದ್ದ ಜನರನ್ನು, ಕುರಿದನಗಳನ್ನು ಹಾಗೂ ಒಂಟೆಗಳನ್ನು ಎರಡು ಗುಂಪುಗಳಾಗಿ ವಿಭಾಗಿಸಿದನು.
၇ထိုအခါယာကုပ်သည်အလွန်ကြောက်ရွံ့၍ စိတ်ပူပန်သဖြင့် သူနှင့်အတူရှိသောသူတို့ ကိုလည်းကောင်း၊ သိုး၊ ဆိတ်၊ နွားနှင့်ကုလားအုတ် တို့ကိုလည်းကောင်းနှစ်စုခွဲ၍ထားလိုက်၏။-
8 ೮ ಏಕೆಂದರೆ, “ಏಸಾವನು ಒಂದು ಗುಂಪಿನ ಮೇಲೆ ಬಿದ್ದರೂ ಮತ್ತೊಂದು ಗುಂಪು ತಪ್ಪಿಸಿಕೊಂಡು ಹೋಗಬಹುದು” ಅಂದುಕೊಂಡನು.
၈အဘယ်ကြောင့်ဆိုသော်သူက``ဧသောရောက် လာ၍ပထမအစုကိုတိုက်ခိုက်သည်ရှိသော် ကျန်တစ်စုကားလွတ်မြောက်နိုင်လိမ့်မည်'' ဟု တွေးတောမိသောကြောင့်တည်း။
9 ೯ ಇದಲ್ಲದೆ ಯಾಕೋಬನು ದೇವರನ್ನು ಪ್ರಾರ್ಥಿಸಿ, “ಯೆಹೋವನೇ, ನನ್ನ ತಂದೆಯಾದ ಅಬ್ರಹಾಮನ ದೇವರೇ, ನನ್ನ ತಂದೆಯಾದ ಇಸಾಕನ ದೇವರೇ, ‘ನಿನ್ನ ಸ್ವದೇಶಕ್ಕೂ, ಬಂಧುಗಳ ಬಳಿಗೂ ತಿರುಗಿ ಹೋಗಬೇಕೆಂದು ನನಗೆ ಆಜ್ಞಾಪಿಸಿ ನಿನಗೆ ಒಳ್ಳೆಯದನ್ನು ಮಾಡುವೆನೆಂದು’ ನನಗೆ ವಾಗ್ದಾನ ಮಾಡಿದ ಯೆಹೋವನೇ,
၉ထိုနောက်ယာကုပ်က``အကျွန်ုပ်၏အဘိုး အာဗြဟံနှင့်အကျွန်ုပ်၏ဖခင်ဣဇာက်တို့ ၏ဘုရားသခင်၊ အကျွန်ုပ်၏ဆုတောင်းသံကို နားညောင်းတော်မူပါ။ ကိုယ်တော်ရှင်က`သင်၏ ပြည်၊ သင်၏ဆွေမျိုးသားချင်းတို့ထံသို့ပြန် လော့။ ငါသည်သင့်ကိုကြီးပွားစေမည်' ဟု မိန့်တော်မူပါ၏။-
10 ೧೦ ನೀನು ನಿನ್ನ ದಾಸನಾದ ನನ್ನ ಮೇಲೆ ಎಷ್ಟೋ ನಂಬಿಕೆಯನ್ನಿಟ್ಟು ನಿನ್ನ ವಾಗ್ದಾನವನ್ನು ನೆರವೇರಿಸಿದ್ದೀಯಲ್ಲಾ. ನಾನು ಅದಕ್ಕೆ ಕೇವಲ ಅಯೋಗ್ಯನು. ನಾನು ಮೊದಲು ಈ ಯೊರ್ದನ್ ನದಿಯನ್ನು ದಾಟಿದಾಗ ನನ್ನ ಬಳಿಯಲ್ಲಿ ಒಂದು ಕೋಲು ಮಾತ್ರವೇ ಇತ್ತು. ಈಗ ಎರಡು ಗುಂಪುಗಳಿಗೆ ಒಡೆಯನಾಗಿದ್ದೇನೆ.
၁၀ကိုယ်တော်အမြဲထားတော်မူသောကရုဏာ တော်နှင့်ကိုယ်တော်၏ကျွန်သည်မထိုက်တန် ပါ။ အကျွန်ုပ်သည်ယော်ဒန်မြစ်ကိုဖြတ်ကူး စဉ်အခါက အကျွန်ုပ်၌လက်ကိုင်တောင်ဝှေး တစ်ချောင်းသာပါသွားသော်လည်း ယခုမှာ မူဤလူစုနှစ်စုပါလျက်ပြန်လာခဲ့ရ ပါသည်။-
11 ೧೧ ನನ್ನ ಅಣ್ಣನಾದ ಏಸಾವನು ಬಂದು ನನ್ನನ್ನೂ, ನನ್ನ ಮಕ್ಕಳನ್ನೂ, ಅವರ ತಾಯಿಯರನ್ನೂ ಕೊಂದುಹಾಕುವನೋ ಎಂದು ನನಗೆ ಭಯವಿದೆ. ಅವನ ಕೈಗೆ ಸಿಕ್ಕದಂತೆ ನಮ್ಮನ್ನು ಕಾಪಾಡಬೇಕೆಂದು ನಿನ್ನನ್ನು ಬೇಡಿಕೊಳ್ಳುತ್ತೇನೆ,
၁၁အကျွန်ုပ်၏အစ်ကိုဧသော၏လက်မှအကျွန်ုပ် အားကယ်တင်ရန်တောင်းလျှောက်ပါ၏။ သူ သည်မိန်းမနှင့်ကလေးများအပါအဝင် အကျွန်ုပ်တို့အားလုံးအားတိုက်ခိုက်ဖျက် ဆီးမည်ကိုအကျွန်ုပ်စိုးရိမ်ကြောက်ရွံ့ပါ၏။-
12 ೧೨ ‘ನಿನಗೆ ಖಂಡಿತವಾಗಿ ಒಳ್ಳೆಯದನ್ನು ಮಾಡಿ, ನಿನ್ನ ಸಂತತಿಯನ್ನು ಸಮುದ್ರದ ಉಸುಬಿನಂತೆ ಅಸಂಖ್ಯವಾಗಿ ಅಭಿವೃದ್ಧಿ ಮಾಡುವೆನೆಂದು ನೀನು ನನಗೆ ಹೇಳಿದ್ದೀಯಲ್ಲಾ?’” ಎಂದನು.
၁၂ကိုယ်တော်က`သင့်ကိုကြီးပွားစေမည်။ သင်၏ အဆက်အနွယ်များကိုပင်လယ်ကမ်းခြေရှိ သဲပွင့်များကဲ့သို့ မရေမတွက်နိုင်အောင်များ ပြားစေမည်' ဟူသောကတိတော်ကိုသတိရ တော်မူပါ'' ဟုတောင်းလျှောက်လေသည်။
13 ೧೩ ಯಾಕೋಬನು ಆ ರಾತ್ರಿ ಅಲ್ಲೇ ತಂಗಿದನು. ತಾನು ತಂದದ್ದರಲ್ಲಿ ಕೆಲವನ್ನು ಸಹೋದರನಾದ ಏಸಾವನಿಗೆ ಕಾಣಿಕೆಯಾಗಿ ತೆಗೆದುಕೊಂಡನು.
၁၃ယာကုပ်သည်ထိုအရပ်တွင်တစ်ညတည်းခို ပြီးနောက် အစ်ကိုဧသောအားလက်ဆောင်ပေး ရန် မိမိ၏တိရစ္ဆာန်အုပ်ထဲမှဆိတ်မနှစ်ရာ နှင့်ဆိတ်ထီးနှစ်ဆယ်၊ သိုးမနှစ်ရာနှင့်သိုး ထီးနှစ်ဆယ်၊ နို့စားကုလားအုတ်မသုံးဆယ် နှင့်သားကောင်ငယ်များ၊ နွားမလေးဆယ်နှင့် နွားထီးဆယ်ကောင်၊ မြည်းမနှစ်ဆယ်နှင့် မြည်းထီးဆယ်ကောင်တို့ကိုရွေးယူလေ၏။-
14 ೧೪ ಇನ್ನೂರು ಆಡುಕುರಿ, ಇಪ್ಪತ್ತು ಹೋತ, ಇಪ್ಪತ್ತು ಟಗರು, ಮರಿಯೊಡನೆ ಹಾಲು ಕರೆಯುವ
၁၄
15 ೧೫ ಮೂವತ್ತು ಒಂಟೆ, ನಲ್ವತ್ತು ಆಕಳು, ಹತ್ತು ಹೋರಿ ಇಪ್ಪತ್ತು ಹೆಣ್ಣುಕತ್ತೆ, ಹತ್ತು ಗಂಡುಕತ್ತೆ ಇವುಗಳನ್ನು ತೆಗೆದುಕೊಂಡನು.
၁၅
16 ೧೬ ಇವುಗಳಲ್ಲಿ ಪ್ರತಿಯೊಂದು ಹಿಂಡನ್ನು ತನ್ನ ಸೇವಕನಿಗೆ ಒಪ್ಪಿಸಿ, “ನೀವು ನನಗಿಂತ ಮುಂಚಿತವಾಗಿ ನದಿಯನ್ನು ದಾಟಿ ಹೋಗಿರಿ ಮತ್ತು ಪ್ರತಿ ಹಿಂಡು ಹಿಂಡಿಗೂ ಮಧ್ಯದಲ್ಲಿ ಅಂತರವಿರಲಿ” ಎಂದನು.
၁၆ထိုတိရစ္ဆာန်များကိုအုပ်လိုက်ခွဲပြီးလျှင် တစ် အုပ်စီကိုအစေခံတစ်ယောက်ကျအုပ်ထိန်း စေ၏။ ထိုနောက်အစေခံတို့အား``သင်တို့သည် တစ်အုပ်နှင့်တစ်အုပ်ရှေ့နောက်ခြား၍ငါ့ရှေ့ မှသွားကြလော့'' ဟုမှာကြားလေသည်။-
17 ೧೭ ಮೊದಲನೆಯ ಹಿಂಡಿನ ಮೇಲ್ವಿಚಾರಕನಿಗೆ, “ನನ್ನ ಅಣ್ಣನಾದ ಏಸಾವನು ನಿನ್ನೆದುರಿಗೆ ಬಂದು, ‘ನೀನು ಯಾರ ಸೇವಕನು? ಎಲ್ಲಿಗೆ ಹೋಗುತ್ತೀ? ನಿನ್ನ ಮುಂದೆ ಇರುವ ಇವೆಲ್ಲಾ ಯಾರದು?’” ಎಂದು ಕೇಳಿದರೆ,
၁၇ရှေ့ဆုံးမှသွားရသောအစေခံအား``ငါ၏ အစ်ကိုဧသောကသင့်ကိုတွေ့၍`သင်၏သခင် ကားမည်သူနည်း၊ မည်သည့်အရပ်သို့သွား မည်နည်း။ သင့်ရှေ့၌ရှိသောတိရစ္ဆာန်တို့ကို မည်သူပိုင်သနည်း' ဟုမေးလျှင်၊-
18 ೧೮ ಆಗ ನೀನು, “ಇವು ನಿಮ್ಮ ಸೇವಕನಾದ ಯಾಕೋಬನದು. ತನ್ನ ಪ್ರಭುಗಳಾದ ನಿಮಗೆ ಇವುಗಳನ್ನು ಕಾಣಿಕೆಯಾಗಿ ಕಳುಹಿಸಿಕೊಟ್ಟಿದ್ದಾನೆ. ಅವನೂ ನಮ್ಮ ಹಿಂದೆ ಬರುತ್ತಿದ್ದಾನೆ” ಎಂದು ಉತ್ತರಕೊಡಬೇಕು ಎಂಬುದಾಗಿ ಅಪ್ಪಣೆಕೊಟ್ಟನು.
၁၈`ကိုယ်တော်၏အစေခံယာကုပ်ပိုင်ပါသည်။ သခင်ဧသောအားဆက်သလိုက်သောလက် ဆောင်များဖြစ်ပါသည်။ ယာကုပ်ကိုယ်တိုင် အကျွန်ုပ်တို့နောက်မှလိုက်ပါလာပါသည်' ဟူ၍ညွှန်ကြားလေသည်။-
19 ೧೯ ಹಾಗೆಯೇ ಎರಡನೆಯವನಿಗೂ ಮೂರನೆಯವನಿಗೂ ಹಿಂಡುಗಳ ಹಿಂದೆ ಹೋದವರೆಲ್ಲರಿಗೂ, “ನೀವು ಏಸಾವನನ್ನು ನೋಡುವಾಗ ಇದೇ ರೀತಿಯಾಗಿ ಹೇಳಬೇಕು. ನಿನ್ನ ಸೇವಕನಾದ ಯಾಕೋಬನೇ ನಮ್ಮ ಹಿಂದೆ ಬರುತ್ತಿದ್ದಾನೆ ಎನ್ನಿರಿ” ಎಂದು ಅಪ್ಪಣೆಕೊಟ್ಟನು.
၁၉ထိုနည်းတူဒုတိယအစေခံ၊ တတိယ အစေခံမှစ၍ တိရစ္ဆာန်အုပ်တို့ကိုအုပ် ထိန်းရသူအပေါင်းတို့အား၊-
20 ೨೦ ಯಾಕೋಬನು ತನ್ನೊಳಗೆ, “ನನ್ನ ಮುಂದೆ ಹೋಗುವ ಈ ಕಾಣಿಕೆಯಿಂದ ಏಸಾವನನ್ನು ಸಮಾಧಾನಪಡಿಸುವೆನು. ಆಮೇಲೆ ಅವನನ್ನು ಸಂಧಿಸುವಾಗ, ಒಂದು ವೇಳೆ ನನ್ನನ್ನು ಪ್ರೀತಿಯಿಂದ ಸ್ವೀಕರಿಸುವನೇನೋ” ಎಂದುಕೊಂಡನು.
၂၀သင်တို့သည်ဧသောနှင့်တွေ့သောအခါ`ကိုယ်တော် ၏အစေခံယာကုပ်သည်ကျွန်ုပ်တို့နောက်မှလိုက် ပါလာပါသည်' ဟုပြောရမည်'' ဟူ၍မှာကြား ၏။ ယာကုပ်က``ယခုပေးလိုက်သောလက်ဆောင် များအားဖြင့် အစ်ကို၏စိတ်ကိုပြေစေ၍သူ နှင့်တွေ့ဆုံရသောအခါ ငါ့အပြစ်ကိုခွင့် လွှတ်ကောင်းခွင့်လွှတ်ပေလိမ့်မည်'' ဟု စိတ်ကူးမိလေ၏။-
21 ೨೧ ಹೀಗೆ ಆ ಕಾಣಿಕೆಯು ಅವನ ಮುಂದಾಗಿ ಹೊರಟು ಹೋಯಿತು. ತಾನು ಆ ರಾತ್ರಿ ತನ್ನ ಪಾಳೆಯದಲ್ಲೇ ಉಳಿದುಕೊಂಡನು.
၂၁သူသည်လက်ဆောင်များကိုကြိုတင်ပို့ပြီး နောက်ထိုညတွင်စခန်း၌အိပ်လေ၏။
22 ೨೨ ಆ ರಾತ್ರಿ ಅವನು ತನ್ನ ಇಬ್ಬರು ಹೆಂಡತಿಯರನ್ನು, ಇಬ್ಬರು ದಾಸಿಯರನ್ನು ಹಾಗೂ ಹನ್ನೊಂದು ಮಂದಿ ಮಕ್ಕಳನ್ನು ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟಿದನು.
၂၂ထိုညချင်းတွင်းယာကုပ်သည်ထ၍မယားနှစ် ယောက်၊ မယားငယ်နှစ်ယောက်၊ သားသမီးတစ် ဆယ့်တစ်ယောက်တို့ကိုခေါ်ဆောင်လျက်ယဗ္ဗုတ် မြစ်ကိုဖြတ်ကူးစေ၏။-
23 ೨೩ ಅವರನ್ನೂ, ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ
၂၃သားမယားတို့နှင့်အတူပိုင်သမျှဥစ္စာပစ္စည်း တို့ကိုတစ်ဖက်ကမ်းသို့ပို့လေ၏။-
24 ೨೪ ಯಾಕೋಬನು ಒಂಟಿಯಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು.
၂၄ယာကုပ်ကမူတစ်ယောက်တည်းနေရစ်ခဲ့လေ သည်။ ထိုအခါလူတစ်ယောက်သည်မိုးလင်းအံ့ဆဲ ဆဲတိုင်အောင်သူနှင့်နပန်းလုံးလေ၏။-
25 ೨೫ ಆ ಪುರುಷನು ತಾನು ಗೆಲ್ಲದೆ ಇರುವುದನ್ನು ಕಂಡು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಯಾಕೋಬನು ಅವನ ಸಂಗಡ ಹೋರಾಡುತ್ತಿರುವಾಗಲೇ ಅವನ ತೊಡೆಯ ಕೀಲು ತಪ್ಪಿತು.
၂၅ထိုသူသည်မနိုင်မှန်းသိသောအခါယာကုပ် ၏တင်ပါးကိုထိုးသဖြင့်အဆစ်ပြုတ်လေ၏။-
26 ೨೬ ಆ ಪುರುಷನು, “ನನ್ನನ್ನು ಬಿಡು, ಬೆಳಗಾಗುತ್ತಿದೆ” ಎನ್ನಲು, ಯಾಕೋಬನು, “ನೀನು ನನ್ನನ್ನು ಆಶೀರ್ವದಿಸದ ಹೊರತು ನಾನು ನಿನ್ನನ್ನು ಬಿಡುವುದಿಲ್ಲ” ಎಂದನು.
၂၆ထိုသူက``ငါ့ကိုလွှတ်ပါ။ မိုးလင်းလုပြီ'' ဟုဆိုလေ၏။ ယာကုပ်က``အကျွန်ုပ်ကိုကောင်းချီးပေးမှလွှတ် မည်'' ဟုပြော၏။
27 ೨೭ ಆ ಪುರುಷನು, “ನಿನ್ನ ಹೆಸರೇನು?” ಎಂದು ಕೇಳಿದ್ದಕ್ಕೆ ಅವನು, “ಯಾಕೋಬನು” ಎಂದಾಗ,
၂၇ထိုသူကလည်း``သင်၏နာမည်ကားအဘယ် နည်း'' ဟုမေး၏။ ``ယာကုပ်'' ဟုပြန်ဖြေ၏။
28 ೨೮ ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.
၂၈ထိုသူက``နောင်တွင်သင်၏နာမည်ကို`ယာကုပ်' ဟူ ၍မခေါ်စေရ။ သင်သည်ဘုရားနှင့်သော်လည်း ကောင်း၊ လူနှင့်သော်လည်းကောင်းဆိုင်ပြိုင်၍အနိုင် ရခဲ့သောကြောင့်သင်၏နာမည်မှာ`ဣသရေလ' ဟူ၍ဖြစ်ရမည်'' ဟုဆိုလေ၏။
29 ೨೯ ಯಾಕೋಬನು, “ನೀನು ನಿನ್ನ ಹೆಸರನ್ನು ನನಗೆ ತಿಳಿಸಬೇಕು” ಎಂದು ಅವನನ್ನು ಕೇಳಿಕೊಂಡಾಗ ಆತನು, “ನನ್ನ ಹೆಸರನ್ನು ವಿಚಾರಿಸುವುದೇಕೆ?” ಎಂದು ಹೇಳಿ ಅಲ್ಲಿ ಅವನನ್ನು ಆಶೀರ್ವದಿಸಿದನು.
၂၉ယာကုပ်က``ကိုယ်တော်၏နာမကိုသိပါရစေ'' ဟုလျှောက်လေ၏။ ထိုသူက``သင်သည်ငါ၏နာမကိုအဘယ် ကြောင့်သိလိုသနည်း'' ဟုမေး၏။ ထိုနောက် ယာကုပ်ကိုကောင်းချီးပေးလေ၏။
30 ೩೦ ಆಗ ಯಾಕೋಬನು, “ನಾನು ದೇವರನ್ನು ಪ್ರತ್ಯಕ್ಷವಾಗಿ ನೋಡಿದೆನಲ್ಲಾ; ಆದರೂ ನನ್ನ ಪ್ರಾಣ ಉಳಿದಿದೆ” ಎಂದು ಹೇಳಿ ಆ ಸ್ಥಳಕ್ಕೆ ಪೆನೀಯೇಲ್ ಎಂದು ಹೆಸರಿಟ್ಟನು,
၃၀ယာကုပ်က``ငါသည်ဘုရားသခင်ကိုမျက်နှာ ချင်းဆိုင်ဖူးတွေ့ရသော်လည်း အသက်ချမ်း သာရလျက်ရှိသေး၏'' ဟုဆို၍ထိုအရပ် ကိုပေနွေလဟုသမုတ်လေ၏။-
31 ೩೧ ಅವನು, ಪೆನೂವೇಲನ್ನು ದಾಟುತ್ತಿರುವಾಗ ಸೂರ್ಯೋದಯವಾಯಿತು. ಆದರೆ ಯಾಕೋಬನು ತೊಡೆಯ ನೋವಿನ ನಿಮಿತ್ತ ಕುಂಟುತ್ತಾ ನಡೆದನು.
၃၁ယာကုပ်သည်ပေနွေလအရပ်မှထွက်ခွာလာ သောအခါနေထွက်ပြီဖြစ်၏။ သူသည်ခါးဆစ် ဒဏ်ရာကြောင့်ထော့နဲ့ကျိုးနင်းသွားရလေသည်။-
32 ೩೨ ಆ ಪುರುಷನು ಯಾಕೋಬನ ತೊಡೆಯ ಕೀಲನ್ನು ಮುಟ್ಟಿದ್ದರಿಂದ ಇಸ್ರಾಯೇಲ್ಯರು ಇಂದಿನ ವರೆಗೂ ತೊಡೆಯ ಕೀಲಿನ ಮೇಲಿರುವ ಸೊಂಟದ ಮಾಂಸವನ್ನು ತಿನ್ನುವುದಿಲ್ಲ.
၃၂ယာကုပ်သည်တင်ပါးကြွက်သားတွင်အထိုး ခံခဲ့ရသည်ဖြစ်သောကြောင့် ယနေ့ထက်တိုင် ဣသရေလအမျိုးသားတို့သည်တင်ပါး ကြွက်သားကိုမစားကြချေ။