< ಇಬ್ರಿಯರಿಗೆ ಬರೆದ ಪತ್ರಿಕೆ 13 >

1 ಸಹೋದರ ಪ್ರೀತಿಯನ್ನು ಸತತವಾಗಿ ತೋರಿಸಿರಿ.
Յարատեւեցէ՛ք եղբայրսիրութեան մէջ:
2 ಅತಿಥಿ ಸತ್ಕಾರಮಾಡುವುದನ್ನು ಅಲಕ್ಷ್ಯಮಾಡಬೇಡಿರಿ. ಏಕೆಂದರೆ ಅದನ್ನು ಮಾಡುವುದರಲ್ಲಿ ಕೆಲವರು ತಿಳಿಯದೆ ದೇವದೂತರನ್ನೂ ಸತ್ಕರಿಸಿದ್ದಾರೆ.
Մի՛ մոռնաք հիւրասիրութիւնը, որովհետեւ ոմանք անով հրեշտակներ հիւրընկալեցին թաքուն կերպով:
3 ಸೆರೆಯವರ ಸಂಗಡ ನೀವೂ ಜೊತೆಸೆರೆಯವರೆಂದು ತಿಳಿದು, ಅವರಿಗುಂಟಾದ ಶಾರೀರಿಕ ಕಷ್ಟಾನುಭವವು ನಿಮಗೂ ಸಂಭವಿಸಿತೆಂದು ಭಾವಿಸಿಕೊಂಡು, ಅವರನ್ನು ಜ್ಞಾಪಕಮಾಡಿಕೊಳ್ಳಿರಿ.
Յիշեցէ՛ք բանտարկեալները՝ որպէս թէ դո՛ւք ալ կապուած էք անոնց հետ, եւ չարչարուողները՝ որպէս թէ դո՛ւք ալ մարմինի մէջ էք:
4 ಎಲ್ಲರೂ ವಿವಾಹವನ್ನು ಮಾನ್ಯವಾದದ್ದೆಂದು ಎಣಿಸಬೇಕು ಮತ್ತು ದಾಂಪತ್ಯ ಜೀವನವು ಶುದ್ಧವಾಗಿರಬೇಕು. ಏಕೆಂದರೆ ಜಾರರಿಗೂ ಮತ್ತು ವ್ಯಭಿಚಾರಿಗಳಿಗೂ ದೇವರು ನ್ಯಾಯತೀರಿಸುವನೆಂದು ತಿಳಿದುಕೊಳ್ಳಿರಿ.
Ամուսնութիւնը թող պատուական համարուի բոլորէն, ու անկողինը՝ անարատ պահուի, քանի որ Աստուած պիտի դատէ պոռնկողներն ու շնացողները:
5 ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.
Ձեր վարուելակերպը թող ըլլայ առանց արծաթսիրութեան. բաւարարուեցէ՛ք ձեր ունեցածով, որովհետեւ ինք ըսաւ. «Բնա՛ւ պիտի չթողում քեզ, ո՛չ ալ պիտի լքեմ քեզ»:
6 ಆದ್ದರಿಂದ, “ಕರ್ತನು ನನ್ನ ಸಹಾಯಕನು ನಾನು ಭಯಪಡುವುದಿಲ್ಲ, ಮನುಷ್ಯನು ನನಗೆ ಏನು ಮಾಡಿಯಾನು?” ಎಂದು ನಾವು ಧೈರ್ಯವಾಗಿ ಹೇಳಬಲ್ಲೆವು.
Հետեւաբար վստահութեա՛մբ ըսենք. «Տէրը իմ օգնականս է, ուստի պիտի չվախնամ. մարդը ի՞նչ պիտի ընէ ինծի»:
7 ನಿಮಗೆ ದೇವರ ವಾಕ್ಯವನ್ನು ಬೋಧಿಸಿದ ನಿಮ್ಮ ಸಭಾನಾಯಕರನ್ನು ನೆನಪುಮಾಡಿಕೊಳ್ಳಿರಿ. ಅವರು ಜೀವಾಂತ್ಯದವರೆಗೆ ಯಾವ ರೀತಿ ನಡೆದುಕೊಂಡುರೆಂಬುದನ್ನು ನೆನಪಿಸಿಕೊಂಡು ಮತ್ತು ಅವರ ನಂಬಿಕೆಯನ್ನು ಅನುಸರಿಸಿರಿ.
Յիշեցէ՛ք ձեզ կառավարողները՝ որ Աստուծոյ խօսքը քարոզեցին ձեզի, եւ հետեւեցէ՛ք անոնց հաւատքին՝ զննելով անոնց վարքին աւարտը:
8 ಯೇಸು ಕ್ರಿಸ್ತನು ನಿನ್ನೇ ಇದ್ದ ಹಾಗೆಯೇ, ಈ ಹೊತ್ತು, ನಿರಂತರವೂ ಇರುವನು. (aiōn g165)
Յիսուս Քրիստոս նոյնն է՝ երէկ, այսօր ու յաւիտեան: (aiōn g165)
9 ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
Մի՛ տարուիք բազմազան եւ օտարոտի ուսուցումներէ, քանի որ լաւ է որ սիրտը հաստատուի շնորհքո՛վ, եւ ո՛չ թէ կերակուրներով, որոնք օգտակար չեղան անոնց համաձայն ընթացողներուն:
10 ೧೦ ನಮಗೊಂದು ಯಜ್ಞವೇದಿ ಉಂಟು ಈ ಯಜ್ಞವೇದಿಯ ಪದಾರ್ಥಗಳನ್ನು ತಿನ್ನುವುದಕ್ಕೆ ಗುಡಾರದಲ್ಲಿ ಸೇವೆ ನಡೆಸುವವರಿಗೆ ಹಕ್ಕಿಲ್ಲ.
Մենք ունինք զոհասեղան մը, որմէ ուտելու իրաւունք չունին անոնք՝ որ կը ծառայեն խորանին.
11 ೧೧ ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.
քանի որ բանակավայրէն դուրս կ՚այրուին մարմինները այն կենդանիներուն, որոնց արիւնը կը տարուի սրբարանը՝ քահանայապետին միջոցով, մեղքի քաւութեան համար:
12 ೧೨ ಅದರಂತೆ ಯೇಸು ಕೂಡ ಸ್ವಂತ ರಕ್ತದಿಂದ ತನ್ನ ಜನರನ್ನು ಶುದ್ಧೀಕರಿಸುವುದಕ್ಕೋಸ್ಕರ ಪಟ್ಟಣದ ಹೊರಗೆ ಸತ್ತನು.
Ուստի Յիսո՛ւս ալ չարչարուեցաւ դռնէն դուրս, որպէսզի իր արիւնով սրբացնէ ժողովուրդը:
13 ೧೩ ಆದ್ದರಿಂದ ನಾವು ಆತನ ನಿಮಿತ್ತ ಉಂಟಾಗುವ ನಿಂದೆಯನ್ನು ತಾಳಿಕೊಳ್ಳುವವರಾಗಿ, ಪಾಳೆಯದ ಆಚೆ ಆತನ ಬಳಿಗೆ ಹೊರಟುಹೋಗೊಣ.
Ուրեմն երթա՛նք անոր՝ բանակավայրէն դուրս, կրելով իր նախատինքը.
14 ೧೪ ಏಕೆಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ. ಭವಿಷ್ಯತ್ತಿನಲ್ಲಿ ಬರುವ ಪಟ್ಟಣವನ್ನು ಎದುರುನೋಡುತ್ತಾ ಇದ್ದೇವೆ.
որովհետեւ մենք հոս չունինք մնայուն քաղաք, հապա կը փնտռենք գալիք քաղաքը:
15 ೧೫ ಆದ್ದರಿಂದ ಯೇಸುವಿನ ಮೂಲಕವಾಗಿಯೇ ದೇವರಿಗೆ ಸ್ತೋತ್ರವೆಂಬ ಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ, ಆತನನ್ನು ನಾವು ಕರ್ತನೆಂದು ನಂಬಿ ಬಾಯಿಂದ ಅರಿಕೆ ಮಾಡುವುದೇ ನಾವು ಅರ್ಪಿಸುವ ಯಜ್ಞವಾಗಿದೆ.
Ուստի՝ անոր միջոցով ամէն ատեն գովաբանութեան զոհ մատուցանենք Աստուծոյ, այսինքն՝ իր անունը դաւանող շրթունքներուն պտուղը:
16 ೧೬ ಇದಲ್ಲದೆ ಪರೋಪಕಾರ ಮಾಡುವುದನ್ನು, ಬೇರೆಯವರಿಗೆ ಸಹಾಯ ಮಾಡುವುದನ್ನು ಮರೆಯಬೇಡಿರಿ. ಇವೇ ದೇವರಿಗೆ ಮೆಚ್ಚಿಕೆಯಾದ ಯಜ್ಞಗಳು.
Բայց մի՛ մոռնաք բարեգործութիւնն ու կարօտեալներուն հաղորդակցութիւնը, քանի որ այդպիսի՛ զոհեր հաճելի են Աստուծոյ:
17 ೧೭ ನಿಮ್ಮ ಸಭಾನಾಯಕರ ಮಾತನ್ನು ಕೇಳಿರಿ, ಅವರಿಗೆ ಅಧೀನರಾಗಿರಿ. ಅವರು ಲೆಕ್ಕ ಒಪ್ಪಿಸಬೇಕಾದವರಾಗಿರುವುದರಿಂದ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ದುಃಖಿಸದೆ ಸಂತೋಷದಿಂದ ಇದನ್ನು ಮಾಡುವಂತೆ ನಡೆದುಕೊಳ್ಳಿರಿ. ಏಕೆಂದರೆ ಅವರು ವ್ಯಸನದಿಂದಿರುವುದು ನಿಮಗೆ ಪ್ರಯೋಜನಕರವಾದದ್ದಲ್ಲ.
Անսացէ՛ք ձեզ կառավարողներուն եւ ենթարկուեցէ՛ք անոնց, որովհետեւ անոնք կը հսկեն ձեր անձերուն վրայ՝ որոնց համար հաշիւ պիտի տան. որպէսզի ուրախութեա՛մբ ընեն այդ գործը, եւ ո՛չ թէ հառաչելով, քանի որ ատիկա օգտակար չէ ձեզի:
18 ೧೮ ನಮಗೋಸ್ಕರ ಪ್ರಾರ್ಥಿಸಿರಿ. ನಾವು ಎಲ್ಲಾ ವಿಷಯಗಳಲ್ಲಿ ಸಜ್ಜನರಾಗಿ ನಡೆದುಕೊಳ್ಳಬೇಕೆಂದು ಅಪೇಕ್ಷಿಸುವವರಾಗಿದ್ದು ಒಳ್ಳೆಯ ಮನಸ್ಸಾಕ್ಷಿ ಹೊಂದಿದ್ದೇವೆಂದು ನಿಶ್ಚಯಿಸಿಕೊಂಡಿದ್ದೇವೆ.
Աղօթեցէ՛ք մեզի համար, որովհետեւ համոզուած ենք թէ ունինք բարի խղճմտանք ու կ՚ուզենք ամէն բանի մէջ վարուիլ պարկեշտութեամբ:
19 ೧೯ ಮತ್ತು ನಾನು ಅತಿ ಶೀಘ್ರವಾಗಿ ನಿಮ್ಮ ಬಳಿಗೆ ತಿರುಗಿ ಬರುವಂತೆ ನೀವು ಪ್ರಾರ್ಥಿಸಬೇಕೆಂದು ನಾನು ನಿಮ್ಮನ್ನು ಬಹಳವಾಗಿ ಕೇಳಿಕೊಳ್ಳುತ್ತೇನೆ.
Բայց առաւելապէս կ՚աղաչե՛մ որ ընէք ատիկա, որպէսզի աւելի՛ շուտ վերադարձուիմ ձեզի:
20 ೨೦ ನಿತ್ಯವಾದ ಒಡಂಬಡಿಕೆಯನ್ನು, ರಕ್ತದಿಂದ ನಿಶ್ಚಯಪಡಿಸುವುದಕ್ಕಾಗಿ, ಸಭೆಯೆಂಬ ಹಿಂಡಿಗೆ ಮಹಾಪಾಲಕನಾಗಿರುವ ನಮ್ಮ ಕರ್ತನಾದ ಯೇಸುವನ್ನು ಸತ್ತವರೊಳಗಿಂದ ಬರಮಾಡಿದ, ಶಾಂತಿದಾಯಕನಾದ ದೇವರು, ನೀವು ಆತನ ಚಿತ್ತವನ್ನು ನೆರವೇರಿಸುವ ಹಾಗೆ ಸಕಲ ಸತ್ಕಾರ್ಯಗಳಿಗೆ ಬೇಕಾದ ಅನುಕೂಲತೆಗಳನ್ನು ನಿಮಗೆ ದಯಪಾಲಿಸಿ, ಆತನು ಯೇಸು ಕ್ರಿಸ್ತನ ಮೂಲಕ ತನಗೆ ಮೆಚ್ಚಿಕೆಯಾದದ್ದನ್ನು ನಮ್ಮಲ್ಲಿ ನೆರವೇರಿಸಲಿ. ಯುಗಯುಗಾಂತರಗಳಲ್ಲಿಯೂ ಆತನಿಗೆ ಮಹಿಮೆ ಉಂಟಾಗಲಿ. ಆಮೆನ್. (aiōn g165, aiōnios g166)
Խաղաղութեան Աստուածը, որ մեռելներէն վեր հանեց մեր Տէրը՝ Յիսուսը - ոչխարներուն մեծ Հովիւը՝ յաւիտենական ուխտին արիւնով -, (aiōnios g166)
21 ೨೧
ամէն բարի գործի մէջ հաստատէ ձեզ՝ իր կամքը գործադրելու, ձեր մէջ իրագործելով իր առջեւ հաճելի եղածը՝ Յիսուս Քրիստոսի միջոցով, որուն փա՜ռք դարէ դար՝՝: Ամէն: (aiōn g165)
22 ೨೨ ಸಹೋದರರೇ, ಈ ಬುದ್ಧಿಯ ಮಾತನ್ನು ಸಹಿಸಿಕೊಳ್ಳಬೇಕೆಂದು ನಿಮ್ಮನ್ನು ಬೇಡಿಕೊಳ್ಳುತ್ತೇನೆ. ನಿಮಗೆ ಸಂಕ್ಷೇಪವಾಗಿ ಬರೆದಿದ್ದೇನೆ.
Կ՚աղաչե՛մ ձեզի, եղբայրնե՛ր, որ հանդուրժէք այս յորդորական խօսքիս, որովհետեւ համառօտաբար գրեցի ձեզի:
23 ೨೩ ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.
Գիտցէ՛ք թէ մեր եղբայրը՝ Տիմոթէոս արձակուած է. եթէ շուտով գայ՝ անոր հետ պիտի տեսնեմ ձեզ:
24 ೨೪ ನಿಮ್ಮ ಎಲ್ಲಾ ಸಭಾನಾಯಕರಿಗೂ ಮತ್ತು ಪರಿಶುದ್ಧ ದೇವಜನರಿಗೂ ವಂದನೆ ಹೇಳಿರಿ. ಇತಾಲ್ಯ ದೇಶದಿಂದ ಬಂದವರು ನಿಮಗೆ ವಂದನೆ ಹೇಳುತ್ತಾರೆ.
Բարեւեցէ՛ք բոլոր ձեզ կառավարողներն ու բոլոր սուրբերը. կը բարեւեն ձեզ անոնք՝ որ Իտալիայէն են:
25 ೨೫ ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ.
Շնորհքը ձեր բոլորին հետ: Ամէն:

< ಇಬ್ರಿಯರಿಗೆ ಬರೆದ ಪತ್ರಿಕೆ 13 >