< ಯೆಶಾಯನು 18 >

1 ಓಹೋ, ಕೂಷಿನ ನದಿಗಳ ಆಚೆಯಲ್ಲಿರುವ ಸೀಮೆ, ರೆಕ್ಕೆಗಳನ್ನು ಪಟಪಟನೆ ಬಡಿಯುವ ನಾಡು,
कूशातील नद्यांच्या पलीकडील सळसळणाऱ्या पंखाच्या देशा हायहाय;
2 ರಾಯಭಾರಿಗಳನ್ನು ನೀರಿನ ಮೇಲೆ ಬೆಂಡಿನ ದೋಣಿಗಳಲ್ಲಿ ನದಿಯ ಮಾರ್ಗವಾಗಿ ಕಳುಹಿಸುವ ದೇಶ, ವೇಗವಾಗಿ ಬರುತ್ತಿರುವ ದೂತರೇ, ಎತ್ತರವಾದವರೂ, ನಯವಾದ ಚರ್ಮವುಳ್ಳವರೂ, ಸರ್ವ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರ ಬಳಿಗೆ ಹೋಗಿರಿ.
जो समुद्रातून, लव्हाळ्यांच्या पात्रातून जलावर वकील पाठवतो. शीघ्रगती दूतांनो, त्या उंच आणि मनमिळावू राष्ट्रांकडे, जे लोक भीतीपासून दूर व जवळ आहेत त्यांच्याकडे, जे बलवान व अजिंक्य राष्ट्र, ज्याची भूमी नद्यांनी विभागली आहे त्याच्याकडे जा,
3 ಸಮಸ್ತ ಭೂನಿವಾಸಿಗಳೇ, ಲೋಕದ ಸಕಲ ಜನರೇ, ಬೆಟ್ಟಗಳಲ್ಲಿ ಧ್ವಜವನ್ನು ಹಾರಿಸುವಾಗ ನೋಡಿರಿ, ತುತ್ತೂರಿಯನ್ನೂದುವಾಗ ಕೇಳಿರಿ!
अहो जगातल्या सर्व रहिवाश्यांनो आणि जे कोणी पृथ्वीवर राहणाऱ्यांनो, जेव्हा पर्वतावरून निशाण उंचविण्यात येईल तेव्हा पाहा; आणि जेव्हा कर्णा फुंकण्यात येईल तेव्हा ऐका.
4 ಯೆಹೋವನು ನನಗೆ ಹೇಳುವುದೇನೆಂದರೆ, “ಬಿಸಿಲಿನಲ್ಲಿ ಜಳಜಳಿಸುವ ಧಗೆಯಂತೆಯೂ, ಸುಗ್ಗಿಯಲ್ಲಿನ ಮಂಜಿನ ಮೋಡದ ಹಾಗೂ ನಾನು ನನ್ನ ವಾಸಸ್ಥಾನದಲ್ಲಿ ಸುಮ್ಮನಿದ್ದು ದೃಷ್ಟಿಸುತ್ತಿರುವೆನು” ಎಂಬುದೇ.
परमेश्वराने मला हे सांगितले आहे की, जसे सूर्याच्या प्रकाशात उकळणारी उष्णता असते अथवा जसे कापणीच्या उन्हात दहिवरयुक्त अभ्र येते, तसे मी आपल्या निवासस्थानातून शांतपणे निरीक्षण करीन.
5 ಕೊಯ್ಲಿನ ಕಾಲಕ್ಕೆ ಮೊದಲು ಮೊಗ್ಗು ಬಿಟ್ಟಾದ ಮೇಲೆ, ಹೂವಿನಿಂದ ಹೀಚು ದ್ರಾಕ್ಷಿ ದೋರೆ ಕಾಯಿಯಾಗುವಾಗ, ಆತನು ಕುಡುಗೋಲುಗಳಿಂದ ಬಳ್ಳಿಗಳನ್ನು ಕತ್ತರಿಸಿ ಚಿಗುರುಗಳನ್ನು ಕಡಿದುಹಾಕುವನು.
कापणीच्यापूर्वी, जेव्हा बहार संपल्यावर फुले द्राक्षात पिकू लागतात, तेव्हा तो कोयत्याने डहाळ्या कापील व खाली काढून टाकेल आणि पसरलेल्या फांद्या काढून टाकेल.
6 ಅವೆಲ್ಲವು ಬೆಟ್ಟದ ಪಕ್ಷಿಗಳಿಗೂ, ಭೂಮಿಯ ಕಾಡುಮೃಗಗಳಿಗೂ ಆಹಾರವಾಗಿ ಬಿದ್ದಿರುವವು. ಬೇಸಿಗೆಯಲ್ಲಿ ಪಕ್ಷಿಗಳಿಗೂ, ಹಿಮಕಾಲದಲ್ಲಿ ಕಾಡುಮೃಗಗಳಿಗೂ ಆಹಾರವಾಗುವುದು.
पर्वतावरील पक्ष्यांसाठी आणि पृथ्वीवरील जनावरांसाठी त्या एकत्र टाकून ठेवल्या जातील. उन्हाळ्यात पक्षी त्यामध्ये राहतील आणि थंडीत पृथ्वीवरील जनावरे त्यावर हिवाळा घालवतील.”
7 ಆ ಕಾಲದಲ್ಲಿ ಎತ್ತರವಾದವರೂ, ನುಣುಪಾದ ಚರ್ಮವುಳ್ಳವರೂ, ಸರ್ವದಾ ಭಯಂಕರರೂ, ಮಹಾ ಬಲದಿಂದ ಶತ್ರುಗಳನ್ನು ತುಳಿಯುವವರೂ, ನದಿಗಳಿಂದ ವಿಭಾಗವಾಗಿರುವ ದೇಶದ ನಿವಾಸಿಗಳೂ ಆದ ಜನಾಂಗದವರು ಸೇನಾಧೀಶ್ವರನಾದ ಯೆಹೋವನ ನಾಮ ಮಹತ್ವದ ಚೀಯೋನ್ ಪರ್ವತಕ್ಕೆ, ಆತನಿಗೋಸ್ಕರ ಕಾಣಿಕೆಯನ್ನು ತರುವರು.
त्या वेळेला, उंच आणि मनमिळावू लोक, भीतीपासून दूर व जवळ असे बलवान व अजिंक्य राष्ट्र, ज्या राष्ट्राची भूमी नद्यांनी विभागलेली आहे ते, सेनाधीश परमेश्वराचे नाव दिलेल्या स्थळी म्हणजे सीयोन डोंगरावर सेनाधीश पमेश्वराला स्वतःचा नजराणा म्हणून अर्पण करण्यास येतील.

< ಯೆಶಾಯನು 18 >