< ಯೆಶಾಯನು 1 >

1 ಯೆಹೂದ ದೇಶದ ಅರಸರಾದ ಉಜ್ಜೀಯ, ಯೋಥಾಮ, ಆಹಾಜ, ಹಿಜ್ಕೀಯ ಇವರ ಕಾಲದಲ್ಲಿ ಯೆಹೂದ ಮತ್ತು ಯೆರೂಸಲೇಮಿನ ವಿಷಯವಾಗಿ ಆಮೋಚನ ಮಗನಾದ ಯೆಶಾಯನಿಗೆ ಆದ ದೈವದರ್ಶನ.
यसा'याह बिन आमूस का ख़्वाब जो उसने यहूदाह और येरूशलेम के ज़रिए' यहूदाह के बादशाहों उज़ियाह और यूताम और आख़ज़ और हिज़क़ियाह के दिनों में देखा।
2 ಆಕಾಶಮಂಡಲವೇ, ಆಲಿಸು! ಭೂಮಂಡಲವೇ ಕೇಳು! ಯೆಹೋವನು ಮಾತನಾಡುತ್ತಿದ್ದಾನೆ. ನಾನು ಸಾಕಿ ಸಲಹಿದ ಮಕ್ಕಳೇ ನನಗೆ ದ್ರೋಹ ಮಾಡಿದ್ದಾರೆ.
सुन ऐ आसमान, और कान लगा ऐ ज़मीन, कि ख़ुदावन्द यूँ फ़रमाता है: “कि मैंने लड़कों को पाला और पोसा, लेकिन उन्होंने मुझ से सरकशी की।
3 ಎತ್ತು ಯಜಮಾನನನ್ನು, ಕತ್ತೆ ಒಡೆಯನ ಕೊಟ್ಟಿಗೆಯನ್ನು ತಿಳಿದಿರುವುದು. ಆದರೆ ಇಸ್ರಾಯೇಲ್ ಜನರಿಗೋ ತಿಳಿವಳಿಕೆ ಇಲ್ಲ. ನನ್ನ ಪ್ರಜೆಯು ಆಲೋಚಿಸುವುದಿಲ್ಲ.
बैल अपने मालिक को पहचानता है और गधा अपने मालिक की चरनी को, लेकिन बनी — इस्राईल नहीं जानते; मेरे लोग कुछ नहीं सोचते।”
4 ಪಾಪಿಷ್ಠ ಜನಾಂಗವೇ, ಅಧರ್ಮದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಜಾತಿಯೇ, ದ್ರೋಹಿಗಳಾದ ಮಕ್ಕಳೇ, ನಿಮ್ಮ ಗತಿಯನ್ನು ಏನು ಹೇಳಲಿ! ಅವರು ಯೆಹೋವನನ್ನು ತೊರೆದಿದ್ದಾರೆ. ಇಸ್ರಾಯೇಲರ ಸದಮಲಸ್ವಾಮಿಯನ್ನು ಧಿಕ್ಕರಿಸಿದ್ದಾರೆ. ಆತನಿಗೆ ಬೆನ್ನು ಮಾಡಿ ಬೇರೆಯಾಗಿದ್ದಾರೆ.
आह, ख़ताकार गिरोह, बदकिरदारी से लदी हुई क़ौम बदकिरदारों की नसल मक्कार औलाद; जिन्होंने ख़ुदावन्द को छोड़ दिया, इस्राईल के क़ुददूस को हक़ीर जाना, और गुमराह — ओ — बरगश्ता हो गए!'
5 ಏಕೆ ದ್ರೋಹವನ್ನು ಹೆಚ್ಚಿಸಿ, ಪೆಟ್ಟಿಗೆ ಗುರಿಯಾಗುತ್ತೀರಿ? ತಲೆಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
तुम क्यूँ ज़्यादा बग़ावत करके और मार खाओगे? तमाम सिर बीमार है और दिल बिल्कुल सुस्त है।
6 ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
तलवे से लेकर चाँदी तक उसमें कहीं सेहत नहीं सिर्फ़ ज़ख़्म और चोट और सड़े हुए घाव ही हैं; जो न दबाए गए, न बाँधे गए, न तेल से नर्म किए गए हैं।
7 ನಿಮ್ಮ ದೇಶವು ಹಾಳಾಗಿದೆ. ನಿಮ್ಮ ಪಟ್ಟಣಗಳು ಸುಟ್ಟುಹೋಗಿವೆ. ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿಬಿಡುತ್ತಿದ್ದಾರೆ. ಅದು ಅನ್ಯಜನರಿಂದ ಹಾಳಾಯಿತು.
तुम्हारा मुल्क उजाड़ है, तुम्हारी बस्तियाँ जल गईं; लेकिन परदेसी तुम्हारी ज़मीन को तुम्हारे सामने निगलते हैं, वह वीरान है, जैसे उसे अजनबी लोगों ने उजाड़ा है।
8 ಯೆರೂಸಲೇಮಿನ ನಗರವೊಂದೇ ಉಳಿದು, ದ್ರಾಕ್ಷಿತೋಟದ ಮನೆಯಂತೆಯೂ, ಸೌತೆಕಾಯಿಯ ಹೊಲದ ಗುಡಿಸಿಲಿನ ಹಾಗೂ ಮುತ್ತಿಗೆ ಹಾಕಲ್ಪಟ್ಟ ಪಟ್ಟಣದ ಹಾಗೆಯೂ ಇದೆ.
और सिय्यून की बेटी छोड़ दी गई है, जैसे झोपड़ी बाग़ में और छप्पर ककड़ी के खेत में या उस शहर की तरह जो महसूर हो गया हो।
9 ಸೇನಾಧೀಶ್ವರನಾದ ಯೆಹೋವನು ನಮಗೆ ಸ್ವಲ್ಪ ಜನರನ್ನು ಉಳಿಸದೇ ಹೋಗಿದ್ದರೆ, ಸೊದೋಮಿನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.
अगर रब्ब — उल — अफ़वाज हमारा थोड़ा सा बक़िया बाक़ी न छोड़ता, तो हम सदूम की तरह और 'अमूरा की तरह हो जाते।
10 ೧೦ ಸೊದೋಮಿನ ಅಧಿಪತಿಗಳೇ, ಯೆಹೋವನ ಮಾತನ್ನು ಆಲಿಸಿರಿ. ಗೊಮೋರದ ಪ್ರಜೆಗಳೇ ನಮ್ಮ ದೇವರ ಧರ್ಮೋಪದೇಶವನ್ನು ಕೇಳಿರಿ.
सदूम के हाकिमो, का कलाम सुनो! के लोगों, ख़ुदा की शरी'अत पर कान लगाओ!
11 ೧೧ ಯೆಹೋವನು ಹೀಗೆನ್ನುತ್ತಾನೆ, “ಲೆಕ್ಕವಿಲ್ಲದ ನಿಮ್ಮ ಯಜ್ಞಗಳು ನನಗೇಕೆ? ಟಗರುಗಳ ಸರ್ವಾಂಗ ಹೋಮ, ಪುಷ್ಟಪಶುಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು. ಹೋರಿ, ಕುರಿಗಳ, ರಕ್ತಕ್ಕೆ ನಾನು ಒಲಿಯೆನು.
ख़ुदावन्द फ़रमाता है, तुम्हारे ज़बीहों की कसरत से मुझे क्या काम? मैं मेंढों की सोख़्तनी कु़र्बानियों से और फ़र्बा बछड़ों की चर्बी से बेज़ार हूँ; और बैलों और भेड़ों और बकरों के ख़ून में मेरी ख़ुशनूदी नहीं।
12 ೧೨ ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕೆಂದು ನೀವು ಬರುತ್ತೀರಲ್ಲಾ; ನನ್ನ ಆಲಯದ ಪ್ರಾಕಾರವನ್ನು ಪ್ರವೇಶಿಸಲು ಯಾರು ನಿಮ್ಮನ್ನು ಕೇಳಿಕೊಂಡರು?
“जब तुम मेरे सामने आकर मेरे दीदार के तालिब होते हो, तो कौन तुम से ये चाहता है कि मेरी बारगाहों को रौंदो?
13 ೧೩ ವ್ಯರ್ಥವಾದ ಕಾಣಿಕೆಗಳನ್ನು ಇನ್ನು ತರಬೇಡಿ; ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಹುಣ್ಣಿಮೆಹಬ್ಬ, ಸಬ್ಬತ್ ದಿನ, ಕೂಟ ಪ್ರಕಟಣೆ ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.
आइन्दा को बातिल हदिये न लाना, ख़ुशबू से मुझे नफ़रत है, नये चाँद और सबत और 'ईदी जमा'अत से भी; क्यूँकि मुझ में बदकिरदारी के साथ 'ईद की बर्दाश्त नहीं।
14 ೧೪ ನಿಮ್ಮ ಅಮಾವಾಸ್ಯೆಗಳನ್ನೂ, ಹುಣ್ಣಿಮೆಹಬ್ಬ, ಉತ್ಸವ ದಿನಗಳನ್ನೂ ದ್ವೇಷಿಸುತ್ತೇನೆ; ಇವು ನನಗೆ ಭಾರ; ಸಹಿಸಲು ಬೇಸರ.
मेरे दिल को तुम्हारे नये चाँदों और तुम्हारी मुक़र्ररा 'ईदों से नफ़रत है; वह मुझ पर बार हैं; मैं उनकी बर्दाश्त नहीं कर सकता।
15 ೧೫ ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
जब तुम अपने हाथ फैलाओगे, तो मैं तुम से आँख फेर लूँगा; हाँ, जब तुम दुआ पर दुआ करोगे, तो मैं न सुनूँगा; तुम्हारे हाथ तो ख़ून आलूदा हैं।
16 ೧೬ ನಿಮ್ಮನ್ನು ತೊಳೆದು ಶುದ್ಧರಾಗಿ, ನನ್ನ ಕಣ್ಣೆದುರಿನಿಂದ ನಿಮ್ಮ ದುಷ್ಕೃತ್ಯಗಳನ್ನು ತೊಲಗಿಸಿರಿ, ದುರಾಚಾರವನ್ನು ಬಿಡಿ,
अपने आपको धो, अपने आपको पाक करो; अपने बुरे कामों को मेरी आँखों के सामने से दूर करो, बदफ़ेली से बाज़ आओ,
17 ೧೭ ಸದಾಚಾರವನ್ನು ಅಭ್ಯಾಸ ಮಾಡಿಕೊಳ್ಳಲು ಕಲಿಯಿರಿ, ನ್ಯಾಯವನ್ನು ಅನುಸರಿಸಿ ನಡೆಯಿರಿ. ಹಿಂಸೆಗೆ ಒಳಗಾದವನಿಗೆ ಸಹಾಯಮಾಡಿರಿ. ಅನಾಥನಿಗೆ ನ್ಯಾಯತೀರಿಸಿರಿ. ವಿಧವೆಯ ಪಕ್ಷವಾಗಿ ವಾದಿಸಿರಿ.”
नेकोकारी सीखो; इन्साफ़ के तालिब हो मज़लूमों की मदद करो यतीमों की फ़रियादरसी करो, बेवाओं के हामी हो।”
18 ೧೮ “ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.
अब ख़ुदावन्द फ़रमाता है, “आओ, हम मिलकर हुज्जत करें; अगरचे तुम्हारे गुनाह क़िर्मिज़ी हों, वह बर्फ़ की तरह सफ़ेद हो जाएँगे; और हर चन्द वह अर्ग़वानी हों, तोभी ऊन की तरह उजले होंगे।
19 ೧೯ ನೀವು ಒಪ್ಪಿ ವಿಧೇಯರಾದರೆ ದೇಶದ ಮೇಲನ್ನು ಅನುಭವಿಸುವಿರಿ.
अगर तुम राज़ी और फ़रमाबरदार हो, तो ज़मीन के अच्छे अच्छे फल खाओगे;
20 ೨೦ ಒಪ್ಪದೆ ತಿರುಗಿ ಬಿದ್ದರೆ, ಕತ್ತಿಯ ಬಾಯಿಗೆ ತುತ್ತಾಗುವಿರಿ” ಈ ಮಾತನ್ನು ಯೆಹೋವನೇ ನುಡಿದಿದ್ದಾನೆ.
लेकिन अगर तुम इन्कार करो और बाग़ी हो तो तलवार का लुक़्मा हो जाओगे क्यूँकि ख़ुदावन्द ने अपने मुँह से ये फ़रमाया है।”
21 ೨೧ ಅಯ್ಯೋ, ನಂಬಿಕೆಯುಳ್ಳ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದ ನಗರ ಈಗ ಕೊಲೆಪಾತಕರಿಗೆ ನೆಲೆಯಾಗಿದೆ.
वफ़ादार बस्ती कैसी बदकार हो गई! वह तो इन्साफ़ से मा'मूर थी और रास्तबाज़ी उसमें बसती थी, लेकिन अब ख़ूनी रहते हैं।
22 ೨೨ ನಿನ್ನ ಬೆಳ್ಳಿಯು ಅಶುದ್ಧವಾಯಿತು. ನಿನ್ನ ದ್ರಾಕ್ಷಾರಸವು ನೀರಾಯಿತು.
तेरी चाँदी मैल हो गई, तेरी मय में पानी मिल गया।
23 ೨೩ ನಿನ್ನ ಅಧಿಕಾರಿಗಳು ದ್ರೋಹಿಗಳೂ, ಕಳ್ಳರ ಗೆಳೆಯರೂ ಆಗಿದ್ದಾರೆ; ಪ್ರತಿಯೊಬ್ಬನೂ ಕಾಣಿಕೆಗಳನ್ನು ಪ್ರೀತಿಸಿ, ಲಂಚಗಳನ್ನು ಹುಡುಕುವನು; ಅನಾಥರಿಗೆ ನ್ಯಾಯತೀರಿಸುವುದಿಲ್ಲ; ವಿಧವೆಯರ ವ್ಯಾಜ್ಯವು ಅವರ ಮನಸ್ಸಿಗೆ ಬಾರದು.
तेरे सरदार गर्दनकश और चोरों के साथी हैं। उनमें से हर एक रिश्वत दोस्त और इन'आम का तालिब है। वह यतीमों का इन्साफ़ नहीं करते और बेवाओं की फ़रियाद उन तक नहीं पहुँचती।
24 ೨೪ ಆದುದರಿಂದ ಕರ್ತನೂ, ಸೇನಾಧೀಶ್ವರನೂ, ಇಸ್ರಾಯೇಲರ ಶೂರನೂ ಆಗಿರುವ ಯೆಹೋವನು ಹೀಗೆ ನುಡಿಯುತ್ತಾನೆ, “ಆಹಾ, ನನ್ನ ವಿರೋಧಿಗಳನ್ನು ಅಡಗಿಸಿ ಶಾಂತನಾಗುವೆನು; ನನ್ನ ಶತ್ರುಗಳಿಗೆ ಮುಯ್ಯಿ ತೀರಿಸುವೆನು.
इसलिए ख़ुदावन्द रब्ब — उल — अफ़वाज, इस्राईल का क़ादिर, यूँ फ़रमाता है: कि “आह मैं ज़रूर अपने मुख़ालिफ़ों से आराम पाऊँगा, और अपने दुश्मनों से इन्तक़ाम लूँगा।
25 ೨೫ ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಪುಟಕ್ಕೆ ಹಾಕಿ, ನಿನ್ನ ಹೊಲಸುತನವನ್ನು ಸಂಪೂರ್ಣವಾಗಿ ನಿವಾರಿಸಿ, ನಿನ್ನ ಎಲ್ಲಾ ಕಲ್ಮಷವನ್ನು ತೆಗೆದುಬಿಡುವೆನು.
और मैं तुझ पर अपना हाथ बढ़ाऊँगा, और तेरी गन्दगी बिल्कुल दूर कर दूँगा, और उस राँगे को जो तुझ में मिला है जुदा करूँगा;
26 ೨೬ ಪೂರ್ವದಲ್ಲಿ ನಿನಗಿದ್ದ ನ್ಯಾಯಾಧಿಪತಿಗಳನ್ನು, ಮಂತ್ರಾಲೋಚಕರನ್ನು ಪುನಃ ಒದಗಿಸಿಕೊಡುವೆನು. ಆ ಮೇಲೆ ನೀನು ಸದಾಚಾರದ ನಗರಿ ಎಂತಲೂ, ಸ್ವಾಮಿ ನಿಷ್ಠೆಯುಳ್ಳ ನಗರಿ ಎಂತಲೂ ಕರೆಯಲ್ಪಡುವಿ.”
और मैं तेरे क़ाज़ियों को पहले की तरह और तेरे सलाहकारों को पहले के मुताबिक़ बहाल करूँगा। इसके बाद तू रास्तबाज़ बस्ती और वफ़ादार आबादी कहलाएगी।”
27 ೨೭ ಚೀಯೋನ್ ನ್ಯಾಯತೀರ್ಪಿನಿಂದಲೂ, ನೀತಿ ನಂಬಿಕೆಯಿಂದ ಪಶ್ತಾತ್ತಾಪ ಹೊಂದಿದ ಆಕೆಯ ಜನರೂ ಬಿಡುಗಡೆಯಾಗುವರು.
सिय्यून 'अदालत की वजह से और वह जो उसमें गुनाह से बाज़ आए हैं, रास्तबाज़ी के ज़रिए' नजात पाएँगे;
28 ೨೮ ಆದರೆ ದ್ರೋಹಿಗಳೂ ಮತ್ತು ಪಾಪಿಗಳೂ ಒಟ್ಟಾಗಿ ನಾಶವಾಗುವರು. ಹೌದು, ಯೆಹೋವನನ್ನು ತೊರೆದವರು ನಾಶವಾಗುವರು.
लेकिन गुनाहगार और बदकिरदार सब इकट्ठे हलाक होंगे, और जो ख़ुदावन्द से बाग़ी हुए फ़ना किए जाएँगे।
29 ೨೯ “ನೀವು ಇಷ್ಟಪಟ್ಟ ಏಲಾ ಮರಗಳ ನಿಮಿತ್ತ ನಾಚಿಕೆಪಡುವಿರಿ. ಗೊತ್ತು ಮಾಡಿಕೊಂಡ ವನಗಳ ವಿಷಯವಾಗಿ ಲಜ್ಜೆಪಡುವಿರಿ.
क्यूँकि वह उन बलूतों से, जिनको तुम ने चाहा शर्मिन्दा होंगे; और तुम उन बाग़ों से, जिनको तुम ने पसन्द किया है ख़जिल होगे।
30 ೩೦ ಎಲೆ ಒಣಗಿದ ಏಲಾ ಮರದಂತೆಯೂ, ನೀರಿಲ್ಲದ ವನದ ಹಾಗೂ ಇರುವಿರಿ.
और तुम उस बलूत की तरह हो जाओगे जिसके पत्ते झड़ जाएँ, और उस बाग़ की तरह जो बेआबी से सूख जाए।
31 ೩೧ ನಿಮ್ಮಲ್ಲಿನ ಬಲಿಷ್ಠನೇ ಸೆಣಬಿನ ನಾರು, ಅವನ ಕಾರ್ಯವೇ ಕಿಡಿ, ಎರಡೂ ಸೇರಿ ಯಾರೂ ಆರಿಸಲಾಗದಂತೆ ಅವು ಸುಟ್ಟುಹೋಗುವವು.”
वहाँ का पहलवान ऐसा हो जाएगा जैसा सन, और उसका काम चिंगारी हो जाएगा; वह दोनों एक साथ जल जाएँगे, और कोई उनकी आग न बुझाएगा।

< ಯೆಶಾಯನು 1 >