< ಯಾಕೋಬನು ಬರೆದ ಪತ್ರಿಕೆ 1 >

1 ದೇವರಿಗೂ ಕರ್ತನಾದ ಯೇಸು ಕ್ರಿಸ್ತನಿಗೂ ದಾಸನಾಗಿರುವ ಯಾಕೋಬನು ಅನ್ಯದೇಶಗಳಲ್ಲಿ ಚದುರಿರುವ ಇಸ್ರಾಯೇಲ್ಯರ ಹನ್ನೆರಡು ಗೋತ್ರದವರಿಗೂ ಬರೆಯುವುದೇನೆಂದರೆ, “ನಿಮಗೆ ಶುಭವಾಗಲಿ.”
Յակոբոս, Աստուծոյ ու Տէր Յիսուս Քրիստոսի ծառայ, տասներկու տոհմերուն՝ որ ցրուած են ամէն կողմ. ողջո՜յն:
2 ನನ್ನ ಸಹೋದರರೇ, ನೀವು ನಾನಾವಿಧವಾದ ಕಷ್ಟಗಳನ್ನು ಅನುಭವಿಸುವಾಗ ಅದನ್ನು ಕೇವಲ ಆನಂದಕರವಾದದ್ದೆಂದು ತಿಳಿಯಿರಿ.
Եղբայրնե՛րս, բոլորովին ուրախութի՛ւն համարեցէք՝ երբ զանազան փորձութիւններու մէջ իյնաք,
3 ಏಕೆಂದರೆ ನಿಮ್ಮ ನಂಬಿಕೆಗೆ ಆಗುವ ಪರಿಶೋಧನೆಯು ನಿಮಗೆ ತಾಳ್ಮೆಯನ್ನುಂಟು ಮಾಡುತ್ತದೆಂದು ನೀವು ತಿಳಿಯಿರಿ.
գիտնալով թէ ձեր հաւատքին փորձը համբերութիւն կ՚իրագործէ:
4 ಆ ತಾಳ್ಮೆಯು ಸಂಪೂರ್ಣವಾಗಿ ನಿಮ್ಮಲ್ಲಿ ಫಲಿಸಲಿ, ಆಗ ನೀವು ಸರ್ವಸುಗುಣಸಂಪನ್ನರೂ, ಪರಿಪೂರ್ಣರೂ, ಯಾವುದಕ್ಕೂ ಕಡಿಮೆಯಿಲ್ಲದವರೂ ಆಗುವಿರಿ.
Բայց համբերութիւնը թող ունենայ իր կատարեալ գործը, որպէսզի կատարեալ եւ ամբողջ ըլլաք, եւ ոչինչ պակսի ձեզի:
5 ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.
Իսկ եթէ իմաստութիւն կը պակսի ձեզմէ մէկուն, թող խնդրէ Աստուծմէ՝ որ բոլորին կու տայ առատապէս՝ առանց կշտամբելու, եւ պիտի տրուի անոր:
6 ಆದರೆ ದೇವರ ಬಳಿ ಬೇಡುವವನು ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಂದ ಬೇಡಿಕೊಳ್ಳಲಿ. ಸಂದೇಹಪಡುವವನು ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ಅಲೆಯಂತೆ ಅತ್ತಿತ್ತ ಅಲೆಯುತ್ತಿರುತ್ತಾನೆ.
Բայց հաւատքո՛վ թող խնդրէ, առանց տատամսելու. որովհետեւ ա՛ն որ կը տատամսի՝ նման է ծովուն հողմակոծեալ ու տատանեալ ալիքներուն:
7 ಇಂಥವನು ತಾನು ಕರ್ತನಿಂದ ಬೇಡಿಕೊಂಡಿದ್ದೆಲ್ಲವನ್ನು ಹೊಂದುವೆನೆಂದು ಭಾವಿಸದೆ ಇರಲಿ.
Այդ մարդը թող չկարծէ թէ որեւէ բան պիտի ստանայ Տէրոջմէն.
8 ಏಕೆಂದರೆ ಅವನು ಎರಡು ಮನಸ್ಸುಳ್ಳವನು, ತನ್ನ ನಡತೆಯಲ್ಲಿ ಚಂಚಲನಾಗಿದ್ದಾನೆ.
երկմիտ մարդը անհաստատ է իր բոլոր ճամբաներուն մէջ:
9 ದೀನಸ್ಥಿತಿಯಲ್ಲಿರುವ ಸಹೋದರನು ತಾನು ಉನ್ನತ ಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ.
Նուաստ եղբայրը թող պարծենայ իր բարձրացումով,
10 ೧೦ ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.
իսկ հարուստը՝ իր նուաստացումով, որովհետեւ ինք պիտի անցնի խոտի ծաղիկին պէս.
11 ೧೧ ಸೂರ್ಯನು ಉದಯಿಸಿದ ಮೇಲೆ ಸುಡುವ ಬಿಸಿಲಿಗೆ ಹುಲ್ಲು ಬಾಡಿ, ಹೂವು ಉದುರಿ ಅದರ ರೂಪದ ಸೊಗಸು ನಾಶವಾಗುತ್ತದೆ; ಹಾಗೆಯೇ ಐಶ್ವರ್ಯವಂತನು ತನ್ನ ಪ್ರಯತ್ನಗಳಲ್ಲಿ ಕುಂದಿಹೋಗುವನು.
քանի որ արեւը կը ծագի այրող տաքութեամբ ու կը չորցնէ խոտը, անոր ծաղիկը կը թափի, եւ անոր տեսքին վայելչութիւնն ալ կը կորսուի: Այդպէս ալ հարուստը պիտի թառամի իր ճամբաներուն մէջ:
12 ೧೨ ಕಷ್ಟಗಳನ್ನು ಸಹಿಸಿಕೊಳ್ಳುವವನು ಧನ್ಯನು. ಅವನು ಪರಿಶೋಧಿತನಾದ ಮೇಲೆ ಕರ್ತನು ತನ್ನನ್ನು ಪ್ರೀತಿಸುವವರಿಗೆ ವಾಗ್ದಾನಮಾಡಿದಂತೆ ಜೀವದ ಕಿರೀಟವನ್ನು ಹೊಂದುವನು.
Երանի՜ այն մարդուն՝ որ կը տոկայ փորձութեան. որովհետեւ երբ փորձարկուի եւ ընտիր գտնուի՝ պիտի ստանայ կեանքի պսակը, որ Տէրը խոստացաւ զինք սիրողներուն:
13 ೧೩ ಯಾರಾದರೂ ಶೋಧನೆಗೆ ಪ್ರೇರೇಪಿಸಲ್ಪಡುವಾಗ “ಈ ಪ್ರೇರಣೆಯು ತನಗೆ ದೇವರಿಂದ ಉಂಟಾಯಿತೆಂದು” ಹೇಳಬಾರದು. ಏಕೆಂದರೆ ದೇವರು ಕೆಟ್ಟದ್ದಕ್ಕೆ ಪ್ರೇರಣೆ ನೀಡುವವನಲ್ಲ. ಮತ್ತು ಆತನು ಯಾರನ್ನೂ ಪಾಪಕ್ಕೆ ಪ್ರೇರೇಪಿಸಿ ಶೋಧಿಸುವುದೂ ಇಲ್ಲ.
Ո՛չ մէկը թող ըսէ՝ երբ կը փորձուի. «Աստուծմէ՛ կը փորձուիմ». որովհետեւ Աստուած չարէն չի փորձուիր, ո՛չ ալ ի՛նք կը փորձէ ոեւէ մէկը:
14 ೧೪ ಆದರೆ ಪ್ರತಿಯೊಬ್ಬನು ತನ್ನ ಸ್ವಂತ ದುರಾಶೆಗಳಿಂದ ಸೆಳೆಯಲ್ಪಟ್ಟು ಮರುಳುಗೊಂಡವನಾಗಿ ಶೋಧಿಸಲ್ಪಡುತ್ತಾನೆ.
Սակայն իւրաքանչիւրը կը փորձուի՝ հրապուրուած ու խաբուած իր ցանկութենէն.
15 ೧೫ ಆ ಮೇಲೆ ದುರಾಶೆಯು ಗರ್ಭಧರಿಸಿ ಪಾಪವನ್ನು ಹೆರುತ್ತದೆ. ಪಾಪವು ಪೂರ್ಣವಾಗಿ ಬೆಳೆದು ಮರಣವನ್ನು ತರುತ್ತದೆ.
Յետոյ՝ ցանկութիւնը յղանալով մեղք կը ծնանի, իսկ երբ մեղքը կատարուի՝ մահ կը ծնանի:
16 ೧೬ ನನ್ನ ಪ್ರಿಯ ಸಹೋದರರೇ, ಮೋಸಹೋಗಬೇಡಿರಿ.
Մի՛ մոլորիք, սիրելի՛ եղբայրներս.
17 ೧೭ ಎಲ್ಲಾ ಒಳ್ಳೆಯ ವರಗಳು ಮತ್ತು ಪರಿಪೂರ್ಣವಾದ ವರಗಳು ಮೇಲಿನಿಂದ ಬಂದವುಗಳೇ, ಅವು ಸಕಲ ವಿಧವಾದ ಬೆಳಕಿಗೆ ಮೂಲಕರ್ತನಾದ ದೇವರಿಂದ ಇಳಿದು ಬರುತ್ತವೆ; ಆತನು ನೆರಳಿನಂತೆ ಬದಲಾಗುವವನಲ್ಲ, ಚಂಚಲಚಿತ್ತನೂ ಅಲ್ಲ.
ամէն բարի նուէր եւ ամէն կատարեալ պարգեւ՝ վերէն է, ու կ՚իջնէ լոյսի Հօրմէն, որուն մէջ բնա՛ւ փոփոխութիւն չկայ, ո՛չ ալ դառնալու շուք:
18 ೧೮ ದೇವರು ತನ್ನ ಸುಚಿತ್ತದ ಪ್ರಕಾರ ಸತ್ಯವಾಕ್ಯದ ಮೂಲಕ ಜೀವಕೊಟ್ಟಿವುದರಿಂದ ನಾವು ಆತನ ಸರ್ವ ಸೃಷ್ಟಿಯಲ್ಲಿ ಪ್ರಥಮ ಫಲವಾದೆವು.
Ան ի՛ր փափաքով ծնաւ մեզ՝ ճշմարտութեան խօսքով, որպէսզի մենք երախայրիք մը ըլլանք իր արարածներուն:
19 ೧೯ ನನ್ನ ಪ್ರಿಯ ಸಹೋದರರೇ, ನೀವು ಇದನ್ನು ಚೆನ್ನಾಗಿ ತಿಳಿದುಕೊಳ್ಳಿರಿ, ಪ್ರತಿಯೊಬ್ಬನೂ ಕಿವಿಗೊಡುವುದರಲ್ಲಿ ಚುರುಕಾಗಿಯೂ, ಮಾತನಾಡುವುದರಲ್ಲಿ ನಿಧಾನವಾಗಿಯೂ ಮತ್ತು ಕೋಪಿಸುವುದರಲ್ಲಿ ನಿಧಾನವಾಗಿಯೂ ಇರಲಿ.
Հետեւաբար, սիրելի՛ եղբայրներս, ամէն մարդ թող արագ ըլլայ՝ լսելու մէջ, դանդաղ՝ խօսելու մէջ, դանդաղ՝ բարկանալու մէջ.
20 ೨೦ ಏಕೆಂದರೆ ಮನುಷ್ಯನು ಕೋಪಗೊಂಡಾಗ ದೇವರು ಬಯಸುವ ನೀತಿ ಕಾರ್ಯಗಳನ್ನು ಮಾಡಲು ಸಾಧ್ಯವಾಗುವುದಿಲ್ಲ.
որովհետեւ մարդուն բարկութիւնը չ՚իրագործեր Աստուծոյ արդարութիւնը:
21 ೨೧ ಆದಕಾರಣ ಎಲ್ಲಾ ನೀಚತನವನ್ನೂ, ಎಲ್ಲಾ ದುಷ್ಟತನವನ್ನೂ ತೆಗೆದುಹಾಕಿ ಮನಸ್ಸಿನೊಳಗೆ ಬೇರೂರಿರುವ ದೇವರ ವಾಕ್ಯವನ್ನು ನಮ್ರತೆಯಿಂದ ಸ್ವೀಕರಿಸಿರಿ. ಅದು ನಿಮ್ಮ ಆತ್ಮಗಳನ್ನು ರಕ್ಷಿಸುವುದಕ್ಕೆ ಸಾಮರ್ಥ್ಯವುಳ್ಳದ್ದಾಗಿರುತ್ತದೆ.
Ուստի, թօթափելով ամէն աղտեղութիւն ու չարամտութեան աւելցուք, հեզութեա՛մբ ընդունեցէք ձեր մէջ տնկուած խօսքը, որ կարող է փրկել ձեր անձերը:
22 ೨೨ ದೇವರ ವಾಕ್ಯದ ಪ್ರಕಾರ ನಡೆಯುವವರಾಗಿರಿ, ಅದನ್ನು ಕೇವಲ ಕೇಳುವವರು ಮಾತ್ರವೇ ಆಗಿದ್ದು ನಿಮ್ಮನ್ನು ನೀವೇ ಮೋಸಗೊಳಿಸಿಕೊಳ್ಳಬೇಡಿರಿ.
Սակայն խօսքը գործադրողնե՛ր եղէ՛ք, եւ ո՛չ թէ միայն լսողներ՝ դուք ձեզ խաբելով:
23 ೨೩ ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.
Արդարեւ, եթէ մէկը միայն լսէ խօսքը ու չգործադրէ, կը նմանի մարդու մը՝ որ հայելիի մէջ կը դիտէ իր բնական երեսը,
24 ೨೪ ಏಕೆಂದರೆ ಇವನು ತನ್ನನ್ನು ತಾನೇ ನೋಡಿ ನಂತರ ತಾನು ಹೀಗಿದ್ದೇನೆಂಬುದನ್ನು ಆ ಕ್ಷಣವೇ ಮರೆತುಬಿಡುವನು.
որովհետեւ կը դիտէ ինքզինք ու կ՚երթայ, եւ իսկոյն կը մոռնայ թէ ի՛նչպէս էր:
25 ೨೫ ಆದರೆ ಬಿಡುಗಡೆಯನ್ನು ಉಂಟುಮಾಡುವ ಪರಿಪೂರ್ಣವಾದ ಧರ್ಮಶಾಸ್ತ್ರವನ್ನು ಲಕ್ಷ್ಯಕೊಟ್ಟು ಓದಿ, ಮನನ ಮಾಡಿ ಅದನ್ನು ಅನುಸರಿಸುವವನು ವಾಕ್ಯವನ್ನು ಕೇಳಿ ಮರೆತು ಹೋಗದೆ ಅದರ ಪ್ರಕಾರ ನಡೆಯುತ್ತಾ ತನ್ನ ನಡತೆಯಿಂದ, ಕ್ರಿಯೆಗಳಿಂದ ಧನ್ಯನಾಗುವನು.
Բայց ա՛ն որ ակնկառոյց կը նայի ազատութեան կատարեալ Օրէնքին ու կը կենայ անոր մէջ, - ո՛չ թէ մոռացկոտ լսող մը ըլլալով, հապա՝ գործը կատարող մը, - երանելի պիտի ըլլայ իր ըրածին մէջ:
26 ೨೬ ತನ್ನನ್ನು ಸದ್ಭಕ್ತನೆಂದೆಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಯನ್ನು ಹತೋಟಿಯಲ್ಲಿ ಇಟ್ಟುಕೊಳ್ಳದೆ ತನ್ನ ಹೃದಯವನ್ನು ಮೋಸಗೊಳಿಸುವವನಾದರೆ ಅವನ ಭಕ್ತಿಯು ವ್ಯರ್ಥವಾಗಿದೆ.
Եթէ մէկը կը կարծէ կրօնասէր ըլլալ ու չի սանձեր իր լեզուն, այլ կը խաբէ իր սիրտը, անոր կրօնասիրութիւնը փուճ է:
27 ೨೭ ಸಂಕಟದಲ್ಲಿ ಬಿದ್ದಿರುವ ದಿಕ್ಕಿಲ್ಲದವರನ್ನೂ, ವಿಧವೆಯರನ್ನೂ ಪರಾಂಬರಿಸಿ ತನಗೆ ಇಹಲೋಕದ ದೋಷವು ಹತ್ತದಂತೆ ತನ್ನನ್ನು ತಾನು ಕಾಪಾಡಿಕೊಳ್ಳುವುದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ, ನಿರ್ಮಲವೂ ಆಗಿರುವ ಭಕ್ತಿ.
Աստուծոյ եւ Հօրը առջեւ՝ մաքուր ու անարատ կրօնասիրութիւնը սա՛ է.- այցելել որբերուն եւ այրիներուն՝ իրենց տառապանքին մէջ, ու ինքզինք անբիծ պահել աշխարհէն:

< ಯಾಕೋಬನು ಬರೆದ ಪತ್ರಿಕೆ 1 >