< ಯಾಕೋಬನು ಬರೆದ ಪತ್ರಿಕೆ 2 >

1 ನನ್ನ ಸಹೋದರರೇ, ಮಹಿಮೆಯುಳ್ಳ ನಮ್ಮ ಕರ್ತನಾದ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಟ್ಟವರಾದ ನೀವು ಪಕ್ಷಪಾತಿಗಳಾಗಿರಬಾರದು.
Եղբայրնե՛րս, առանց աչառութեան թող ըլլայ մեր Տէրոջ՝ Յիսուս Քրիստոսի՝ փառքի Տէրոջ հաւատքը:
2 ಹೇಗೆಂದರೆ ಒಬ್ಬ ಮನುಷ್ಯನು ಚಿನ್ನದ ಉಂಗುರಗಳನ್ನು ಮತ್ತು ಉತ್ತಮವಾದ ವಸ್ತ್ರಗಳನ್ನೂ ಹಾಕಿಕೊಂಡು ನಿಮ್ಮ ಸಭೆಯೊಳಗೆ ಬಂದಾಗ ಮತ್ತು ಒಬ್ಬ ಬಡ ಮನುಷ್ಯನು ಕೊಳಕು ಬಟ್ಟೆಗಳನ್ನು ಧರಿಸಿಕೊಂಡು ಬಂದಾಗ,
Արդարեւ եթէ ձեր ժողովարանին մէջ մտնէ մարդ մը՝ ոսկիէ մատանիով ու փայլուն տարազով, եւ մտնէ նաեւ աղքատ մը՝ աղտոտ տարազով,
3 ನೀವು ಉತ್ತಮವಾದ ವಸ್ತ್ರಗಳನ್ನು ಧರಿಸಿಕೊಂಡು ಬಂದಿರುವವನನ್ನು ಗೌರವದಿಂದ ನೋಡಿ ಅವನಿಗೆ “ನೀವು ಇಲ್ಲಿ ಈ ಗೌರವ ಆಸನದಲ್ಲಿ ಕುಳಿತುಕೊಳ್ಳಿರಿ” ಎಂತಲೂ, ಆ ಬಡ ಮನುಷ್ಯನಿಗೆ “ನೀನು ಅಲ್ಲಿ ನಿಂತುಕೋ” ಇಲ್ಲವೇ “ಇಲ್ಲಿ ನನ್ನ ಕಾಲ್ಮಣೆಯ ಬಳಿ ಕುಳಿತುಕೋ” ಎಂತಲೂ ಹೇಳಿದರೆ,
ու նայիք անոր՝ որ փայլուն տարազ կը կրէ, եւ ըսէք. «Հո՛ս նստէ՝ պատիւով», իսկ աղքատին ըսէք. «Հո՛ն ոտքի կայնէ, կամ հո՛ս նստէ՝ պատուանդանիս քով»,
4 ನೀವು ನಿಮ್ಮ ನಿಮ್ಮಲ್ಲಿ ಭೇದಭಾವ ಮಾಡುವವರಾಗಿದ್ದು, ತಾರತಮ್ಯ ಆಲೋಚನೆಗಳಂತೆ ನಡೆಯುವ ನಿರ್ಧಾರ ಮಾಡುವವರಾಗಿರುತ್ತೀರಿ ಅಲ್ಲವೇ?
միթէ ձեր մէջ խտրութիւն դրած չէ՞ք ըլլար, ու չար մտածումներու դատաւոր եղած:
5 ನನ್ನ ಪ್ರಿಯ ಸಹೋದರರೇ, ಕೇಳಿರಿ ದೇವರು ಈ ಲೋಕದಲ್ಲಿನ ಬಡವರನ್ನು ನಂಬಿಕೆಯಲ್ಲಿ ಐಶ್ವರ್ಯವಂತರನ್ನಾಗಿಯೂ, ತನ್ನನ್ನು ಪ್ರೀತಿಸುವವರಿಗೆ ತಾನು ವಾಗ್ದಾನ ಮಾಡಿದ ರಾಜ್ಯಕ್ಕೆ ಬಾಧ್ಯರಾಗಿಯೂ ಇರಬೇಕೆಂದು ಆರಿಸಿಕೊಳ್ಳಲಿಲ್ಲವೇ?
Լսեցէ՛ք, սիրելի՛ եղբայրներս. միթէ Աստուած չընտրե՞ց այս աշխարհի աղքատները՝ որոնք հարուստ են հաւատքով, ու ժառանգորդ արքայութեան՝ որ խոստացաւ զինք սիրողներուն:
6 ನೀವಾದರೋ ಬಡವರನ್ನು ಅವಮಾನಪಡಿಸಿದ್ದೀರಿ. ನಿಮ್ಮನ್ನು ಬಾಧಿಸಿ ನ್ಯಾಯಸ್ಥಾನದ ಮುಂದೆ ಎಳೆದುಕೊಂಡು ಹೋಗುವವರು ಐಶ್ವರ್ಯವಂತರಲ್ಲವೋ?
Բայց դուք անպատուեցիք աղքատները: Հարուստները չե՞ն՝ որ կը հարստահարեն ձեզ ու դատարանները կը քաշեն:
7 ನೀವು ಕರೆಯಲ್ಪಟ್ಟ ಆ ಶ್ರೇಷ್ಠವಾದ ನಾಮವನ್ನು ದೂಷಿಸುವವರು ಅವರಲ್ಲವೋ?
Անոնք չե՞ն որ կը հայհոյեն այն բարի անունը՝ որով կոչուած էք:
8 ಆದರೂ ಧರ್ಮಶಾಸ್ತ್ರಕ್ಕೆ ಸರಿಯಾಗಿ “ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು” ಎಂಬ ರಾಜಾಜ್ಞೆಯನ್ನು ನೆರವೇರಿಸುವವರಾದರೆ, ನೀವು ಒಳ್ಳೆಯದನ್ನೇ ಮಾಡುವವರಾಗಿರುವಿರಿ.
Ուրեմն՝ եթէ դուք կը գործադրէք արքայական Օրէնքը՝ Գիրքին ըսածին համաձայն. «Սիրէ՛ ընկերդ քու անձիդ՝՝ պէս», լա՛ւ կ՚ընէք:
9 ಒಂದು ವೇಳೆ ಅದನ್ನು ಬಿಟ್ಟು ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದು ಅಪರಾಧಿಗಳೆಂದು ಧರ್ಮಶಾಸ್ತ್ರದ ಪ್ರಕಾರ ತೀರ್ಮಾನಿಸಲ್ಪಡುತ್ತೀರಿ.
Բայց եթէ աչառութիւն կ՚ընէք՝ մե՛ղք կը գործէք, եւ կը կշտամբուիք Օրէնքէն՝ օրինազանցներու պէս.
10 ೧೦ ಏಕೆಂದರೆ ಯಾರಾದರೂ ಧರ್ಮಶಾಸ್ತ್ರವನ್ನೆಲ್ಲಾ ಕೈಕೊಂಡು ನಡೆದು ಅದರಲ್ಲಿ ಒಂದೇ ಒಂದು ವಿಷಯದಲ್ಲಿ ತಪ್ಪಿದರೆ ಅಂಥವರು ಎಲ್ಲಾ ವಿಷಯಗಳಲ್ಲಿಯೂ ಅಪರಾಧಿಯಾಗಿರುತ್ತಾರೆ.
քանի որ ո՛վ որ պահէ ամբողջ Օրէնքը սակայն սայթաքի մէ՛կ բանի մէջ, պարտապան կ՚ըլլայ բոլորին:
11 ೧೧ ಏಕೆಂದರೆ ವ್ಯಭಿಚಾರ ಮಾಡಬಾರದೆಂದು ಹೇಳಿದವನೇ ನರಹತ್ಯ ಮಾಡಬಾರದೆಂತಲೂ ಹೇಳಿದನು. ಆದಕಾರಣ ನೀನು ವ್ಯಭಿಚಾರಮಾಡದೆ ಇದ್ದರೂ ನರಹತ್ಯ ಮಾಡಿದರೆ ಧರ್ಮಶಾಸ್ತ್ರವನ್ನು ಮೀರಿದವನಾಗಿರುತ್ತಿ.
Արդարեւ ա՛ն որ ըսաւ. «Շնութիւն մի՛ ըներ», ըսաւ նաեւ. «Մի՛ սպաններ»: Ուստի եթէ շնութիւն չընես բայց սպաննես, օրինազանց կ՚ըլլաս:
12 ೧೨ ನೀವು ಬಿಡುಗಡೆಯನ್ನುಂಟು ಮಾಡುವ ಧರ್ಮಶಾಸ್ತ್ರದ ಪ್ರಕಾರ ತೀರ್ಪುಹೊಂದುವವರಿಗೆ ತಕ್ಕಂತೆ ಮಾತನಾಡಿರಿ ಮತ್ತು ವಿಧೇಯರಾಗಿರಿ.
Ա՛յնպէս խօսեցէք եւ ա՛յնպէս գործեցէք՝ որպէս թէ պիտի դատուիք ազատութեան Օրէնքով:
13 ೧೩ ಏಕೆಂದರೆ ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವುದಿಲ್ಲ. ಕರುಣೆಯು ನ್ಯಾಯತೀರ್ಪಿನ ಮೇಲೆ ಜಯ ಹೊಂದುತ್ತದೆ.
Որովհետեւ դատաստանը անողորմ պիտի ըլլայ անոր՝ որ չէ ողորմած. սակայն ողորմութիւնը կը պարծենայ դատաստանին դիմաց:
14 ೧೪ ನನ್ನ ಸಹೋದರರೇ, ಒಬ್ಬನು ತನಗೆ ನಂಬಿಕೆಯುಂಟೆಂದು ಹೇಳಿಕೊಂಡು ತಕ್ಕ ಕ್ರಿಯೆಗಳಿಲ್ಲದವನಾಗಿದ್ದರೆ ಪ್ರಯೋಜನವೇನು? ಅಂಥ ನಂಬಿಕೆಯು ಅವನನ್ನು ರಕ್ಷಿಸುವುದೋ?
Ի՞նչ օգուտ ունի, եղբայրնե՛րս, եթէ մէկը ըսէ թէ հաւատք ունի սակայն գործեր չունենայ. միթէ հաւատքը կրնա՞յ փրկել զինք:
15 ೧೫ ನಿಮ್ಮಲ್ಲಿ ಒಬ್ಬ ಸಹೋದರನಿಗೆ ಇಲ್ಲವೆ ಒಬ್ಬ ಸಹೋದರಿಗೆ ಉಡಲು ಬಟ್ಟೆಯೂ ಮತ್ತು ದಿನನಿತ್ಯದ ಆಹಾರವೂ ಅಗತ್ಯವಾಗಿರುವಾಗ,
Եթէ եղբայր մը կամ քոյր մը մերկ ըլլայ եւ օրուան կերակուրին կարօտ,
16 ೧೬ ನಿಮ್ಮಲ್ಲಿ ಒಬ್ಬನು ಅವರಿಗೆ ದೈಹಿಕ ಅವಶ್ಯಕತೆಗಳನ್ನು ಪೂರೈಸದೆ “ಸಮಾಧಾನದಿಂದ ಹೋಗಿರಿ, ಬೆಚ್ಚಗೆ ಬೆಂಕಿಕಾಯಿಸಿಕೊಳ್ಳಿ, ಹೊಟ್ಟೆ ತುಂಬಾ ಊಟಮಾಡಿ” ಎಂದು ಹೇಳಿದರೆ ಪ್ರಯೋಜನವೇನು?
ու ձեզմէ մէկը ըսէ անոնց. «Գացէ՛ք խաղաղութեամբ, տաքցէ՛ք եւ կշտացէ՛ք», բայց մարմինին հարկաւոր բաները չտայ անոնց, ի՞նչ օգուտ ունի:
17 ೧೭ ಹಾಗೆಯೇ ಕ್ರಿಯೆಗಳಿಲ್ಲದ ನಂಬಿಕೆಯು ನಿರ್ಜೀವವಾದದು.
Ա՛յդպէս ալ հաւատքը՝ եթէ գործեր չունենայ իրեն հետ՝ մեռած է ինքնիր մէջ:
18 ೧೮ ಆದರೂ ಒಬ್ಬನು; “ನಿನಗೆ ನಂಬಿಕೆಯುಂಟು ಮತ್ತು ನನಗೆ ಕ್ರಿಯೆಗಳುಂಟು” ನೀನು ಕ್ರಿಯೆಗಳಿಲ್ಲದೆ ನಿನ್ನ ನಂಬಿಕೆಯನ್ನು ನನಗೆ ತೋರಿಸು. ನಾನು ನನ್ನ ಕ್ರಿಯೆಗಳ ಮುಖಾಂತರ ನನ್ನ ನಂಬಿಕೆಯನ್ನು ತೋರಿಸುತ್ತೇನೆ ಎಂದು ಹೇಳುವನಲ್ಲವೇ.
Նոյնիսկ մէկը կրնայ ըսել. «Դուն հաւա՛տք ունիս, ես ալ գործե՛ր ունիմ. ցո՛յց տուր ինծի քու հաւատքդ՝ առանց գործերու, իսկ ես ցոյց պիտի տամ քեզի իմ հաւատքս՝ գործերո՛վս”:
19 ೧೯ ದೇವರು ಒಬ್ಬನೇ ಎಂದು ನೀನು ನಂಬುತ್ತೀ; ಹಾಗೆ ನಂಬುವುದು ಸರಿ. ಆದರೆ ದೆವ್ವಗಳು ಸಹ ಹಾಗೆಯೇ ನಂಬಿ ಹೆದರಿ ನಡುಗುತ್ತವೆ.
Դուն կը հաւատաս թէ Աստուած մէկ է. լա՛ւ կ՚ընես: Դեւե՛րն ալ կը հաւատան ու կը սարսռան:
20 ೨೦ ಅವಿವೇಕಿಯೇ, ಕ್ರಿಯೆಗಳಿಲ್ಲದ ನಂಬಿಕೆಯು ವ್ಯರ್ಥವಾದದ್ದು ಎಂದು ನಿನಗೆ ಸಾಬಿತುಪಡಿಸಬೇಕೋ?
Բայց կ՚ուզե՞ս գիտնալ, ո՛վ սնոտի մարդ, թէ հաւատքը մեռած է առանց գործերու:
21 ೨೧ ನಮ್ಮ ಪಿತೃವಾದ ಅಬ್ರಹಾಮನು ತನ್ನ ಮಗನಾದ ಇಸಾಕನನ್ನು ಯಜ್ಞವೇದಿಯ ಮೇಲೆ ಅರ್ಪಿಸಿದಾಗ ನೀತಿವಂತನೆಂಬ ನಿರ್ಣಯವನ್ನು ಹೊಂದಿದ್ದು ನಂಬಿಕೆಯ ಕ್ರಿಯೆಗಳಿಂದಲ್ಲವೇ?
Աբրահամ՝ մեր հայրը՝ գործերով չարդարացա՞ւ, երբ իր որդին՝ Իսահակը մատուցանեց զոհասեղանին վրայ:
22 ೨೨ ಅವನ ನಂಬಿಕೆಯು ಕ್ರಿಯೆಗಳೊಂದಿಗೆ ಕಾರ್ಯಮಾಡಿತ್ತು ಮತ್ತು ಆ ಕ್ರಿಯೆಗಳಿಂದಲೇ ಅವನ ನಂಬಿಕೆಯ ಉದ್ದೇಶವು ನೆರವೇರಿತು ಎಂದು ಕಾಣುತ್ತೇವಲ್ಲಾ.
Կը տեսնե՞ս թէ հաւատքը գործակից եղաւ անոր գործերուն, ու գործերո՛վ հաւատքը կատարեալ եղաւ,
23 ೨೩ “ಅಬ್ರಹಾಮನು ದೇವರನ್ನು ನಂಬಿದನು ಮತ್ತು ಆ ನಂಬಿಕೆ ಅವನ ಲೆಕ್ಕಕ್ಕೆ ನೀತಿಯೆಂದು ಎಣಿಸಲ್ಪಟ್ಟಿತು” ಎಂಬ ಧರ್ಮಶಾಸ್ತ್ರದ ಮಾತು ಹೀಗೆ ನೆರವೇರಿತು. ಆದ್ದರಿಂದ ಅಬ್ರಹಾಮನು ದೇವರ ಸ್ನೇಹಿತನೆಂದು ಕರೆಯಲ್ಪಟ್ಟನು.
եւ իրագործուեցաւ Գիրքին խօսքը՝ որ կ՚ըսէ. «Աբրահամ հաւատաց Աստուծոյ, ու ատիկա արդարութիւն սեպուեցաւ անոր, եւ ինք Աստուծոյ բարեկամ կոչուեցաւ»:
24 ೨೪ ಆದುದರಿಂದ ಮನುಷ್ಯನು, ಕ್ರಿಯೆಗಳಿಂದ ನೀತಿವಂತನೆಂದು ನಿರ್ಣಯಿಸಲ್ಪಡುತ್ತಾನೆ ಹೊರತು ಬರೀ ನಂಬಿಕೆಯಿಂದಲ್ಲ ಎಂದು ನೋಡುತ್ತೀರಿ.
Կը նկատէ՞ք թէ մարդ կ՚արդարանայ գործերո՛վ, ու ո՛չ թէ՝ միայն հաւատքով:
25 ೨೫ ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?
Նմանապէս Ռախաբ պոռնիկն ալ չարդարացա՞ւ գործերով, երբ ընդունեց պատգամաւորները եւ ուրիշ ճամբայով ուղարկեց զանոնք:
26 ೨೬ ಆತ್ಮವಿಲ್ಲದ ದೇಹವು ಸತ್ತದ್ದಾಗಿರುವ ಪ್ರಕಾರವೇ ಕ್ರಿಯೆಗಳಿಲ್ಲದ ನಂಬಿಕೆಯೂ ಸತ್ತದ್ದಾಗಿದೆ.
Արդարեւ ինչպէս մարմինը մեռած է առանց հոգիի, այդպէս ալ հաւատքը մեռած է առանց գործերու:

< ಯಾಕೋಬನು ಬರೆದ ಪತ್ರಿಕೆ 2 >