< ಯಾಕೋಬನು ಬರೆದ ಪತ್ರಿಕೆ 5 >

1 ಐಶ್ವರ್ಯವಂತರೇ, ನಿಮಗೆ ಬರುವ ಸಂಕಟಗಳಿಗಾಗಿ ಕಣ್ಣೀರಿಡಿರಿ, ಗೋಳಾಡಿರಿ.
Ἄγε νῦν, οἱ πλούσιοι, κλαύσατε, ὀλολύζοντες ἐπὶ ταῖς ταλαιπωρίαις ὑμῶν ταῖς ἐπερχομέναις.
2 ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.
Ὁ πλοῦτος ὑμῶν σέσηπεν, καὶ τὰ ἱμάτια ὑμῶν σητόβρωτα γέγονεν.
3 ನಿಮ್ಮ ಚಿನ್ನ, ಬೆಳ್ಳಿಗಳು ತುಕ್ಕು ಹಿಡಿದು ಮಣ್ಣಿಗೆ ಸಮವಾಗಿದೆ. ಅವುಗಳ ತುಕ್ಕು ನಿಮಗೆ ವಿರೋಧವಾಗಿ ಸಾಕ್ಷಿಯಾಗಿದ್ದು, ಬೆಂಕಿಯಂತೆ ನಿಮ್ಮ ಮಾಂಸವನ್ನು ದಹಿಸಿಬಿಡುವುದು. ಅಂತ್ಯಕಾಲ ಬಂದರೂ ಸಂಪತ್ತನ್ನು ಕೂಡಿಸಿ ಇಟ್ಟುಕೊಂಡಿದ್ದೀರಿ.
Ὁ χρυσὸς ὑμῶν καὶ ὁ ἄργυρος κατίωται, καὶ ὁ ἰὸς αὐτῶν εἰς μαρτύριον ὑμῖν ἔσται, καὶ φάγεται τὰς σάρκας ὑμῶν ὡς πῦρ. Ἐθησαυρίσατε ἐν ἐσχάταις ἡμέραις.
4 ಇಗೋ, ನಿಮ್ಮ ಹೊಲದಲ್ಲಿನ ಪೈರುಗಳನ್ನು ಕೊಯ್ದದವರ ಕೂಲಿಯನ್ನು ಕೊಡದೆ ವಂಚಿಸಿದಿರಿ. ಆ ಕೂಲಿಯ ಕೂಗು ಹಾಗು ಪೈರು ಕೊಯ್ದದವರ ಕೂಗು ಸೇನಾಧೀಶ್ವರನಾದ ಕರ್ತನ ಕಿವಿಗಳನ್ನು ಮುಟ್ಟಿವೆ.
Ἰδοὺ, ὁ μισθὸς τῶν ἐργατῶν, τῶν ἀμησάντων τὰς χώρας ὑμῶν, ὁ ἀφυστερημένος ἀφʼ ὑμῶν, κράζει, καὶ αἱ βοαὶ τῶν θερισάντων, εἰς τὰ ὦτα ˚Κυρίου Σαβαὼθ εἰσελήλυθαν.
5 ಭೂಲೋಕದಲ್ಲಿ ನೀವು ಸುಖಭೋಗಿಗಳಾಗಿ ನಿಮ್ಮ ಇಚ್ಛೆಪೂರೈಸಿಕೊಳ್ಳುವವರಾಗಿ ಜೀವಿಸಿದ್ದೀರಿ; ವಧೆಯ ದಿನಕ್ಕಾಗಿಯೋ ಎಂಬಂತೆ ನಿಮ್ಮ ಹೃದಯಗಳನ್ನು ಕೊಬ್ಬಿಸಿಕೊಂಡಿದ್ದೀರಿ.
Ἐτρυφήσατε ἐπὶ τῆς γῆς. Καὶ ἐσπαταλήσατε, ἐθρέψατε τὰς καρδίας ὑμῶν ἐν ἡμέρᾳ σφαγῆς.
6 ನೀವು ನೀತಿವಂತನನ್ನು ಖಂಡಿಸಿ ಕೊಂದು ಹಾಕಿದ್ದೀರಿ; ಅವನಾದರೋ ನಿಮ್ಮನ್ನು ವಿರೋಧಿಸುತ್ತಿಲ್ಲ.
Κατεδικάσατε, ἐφονεύσατε τὸν δίκαιον, οὐκ ἀντιτάσσεται ὑμῖν.
7 ಸಹೋದರರೇ, ಕರ್ತನು ಬರುವ ತನಕ ತಾಳ್ಮೆಯಿಂದಿರಿ. ವ್ಯವಸಾಯಮಾಡುವವರನ್ನು ನೋಡಿರಿ, ಅವನು ಭೂಮಿಯ ಬೆಲೆಬಾಳುವ ಫಲಕ್ಕಾಗಿ ಕಾದಿದ್ದು ಮುಂಗಾರು, ಹಿಂಗಾರು ಮಳೆಗಳು ಬರುವ ತನಕ ತಾಳ್ಮೆಯಿಂದಿರುವನು.
Μακροθυμήσατε οὖν, ἀδελφοί, ἕως τῆς παρουσίας τοῦ ˚Κυρίου. Ἰδοὺ, ὁ γεωργὸς ἐκδέχεται τὸν τίμιον καρπὸν τῆς γῆς, μακροθυμῶν ἐπʼ αὐτῷ ἕως λάβῃ πρόϊμον καὶ ὄψιμον.
8 ನೀವೂ ತಾಳ್ಮೆಯಿಂದಿರಿ, ನಿಮ್ಮ ಹೃದಯಗಳನ್ನು ದೃಢಪಡಿಸಿಕೊಳ್ಳಿರಿ; ಏಕೆಂದರೆ ಕರ್ತನ ಬರೋಣವು ಹತ್ತಿರವಾಯಿತು.
Μακροθυμήσατε καὶ ὑμεῖς, στηρίξατε τὰς καρδίας ὑμῶν, ὅτι ἡ παρουσία τοῦ ˚Κυρίου ἤγγικεν.
9 ಸಹೋದರರೇ, ನೀವು ಒಬ್ಬರ ಮೇಲೊಬ್ಬರು ಆಪವಾದನೆ ಮಾಡಬೇಡಿರಿ; ಇದರಿಂದ ನ್ಯಾಯವಿಚಾರಣೆಗೆ ಗುರಿಯಾದಿರಿ. ಅಗೋ, ನ್ಯಾಯಾಧಿಪತಿಯು ಬಾಗಿಲಿನ ಮುಂದೆಯೇ ನಿಂತಿದ್ದಾನೆ.
Μὴ στενάζετε, ἀδελφοί, κατʼ ἀλλήλων, ἵνα μὴ κριθῆτε. Ἰδοὺ, ὁ κριτὴς πρὸ τῶν θυρῶν ἕστηκεν.
10 ೧೦ ಸಹೋದರರೇ, ಬಾಧೆಯನ್ನು ತಾಳ್ಮೆಯಿಂದ ಸಹಿಸಿಕೊಳ್ಳುವ ವಿಷಯದಲ್ಲಿ ಕರ್ತನ ಹೆಸರಿನಲ್ಲಿ ಮಾತನಾಡಿದ ಪ್ರವಾದಿಗಳನ್ನೇ ಮಾದರಿ ಮಾಡಿಕೊಳ್ಳಿರಿ.
Ὑπόδειγμα λάβετε, ἀδελφοί, τῆς κακοπαθείας, καὶ τῆς μακροθυμίας, τοὺς προφήτας, οἳ ἐλάλησαν ἐν ὀνόματι ˚Κυρίου.
11 ೧೧ ಇಗೋ, ತಾಳಿಕೊಳ್ಳುವವರನ್ನು ಧನ್ಯರೆಂದು ನಾವು ಪರಿಗಣಿಸುತ್ತೇವಲ್ಲವೇ. ನೀವು ಯೋಬನಲ್ಲಿದ್ದ ತಾಳ್ಮೆಯ ವಿಷಯವಾಗಿ ಕೇಳಿ ಕರ್ತನು ಅವನಿಗೆ ಅಂತ್ಯದಲ್ಲಿ ಮಾಡಿದ್ದನ್ನು ನೋಡಿ ಕರ್ತನು ಬಹಳ ಕರುಣಾಸಾಗರನೂ ಮತ್ತು ದಯಾಳುವೂ ಆಗಿದ್ದಾನೆಂದು ತಿಳಿದಿರುವಿರಿ.
Ἰδοὺ, μακαρίζομεν τοὺς ὑπομείναντας. Τὴν ὑπομονὴν Ἰὼβ ἠκούσατε, καὶ τὸ τέλος ˚Κυρίου εἴδετε, ὅτι πολύσπλαγχνός ἐστιν ὁ ˚Κύριος καὶ οἰκτίρμων.
12 ೧೨ ಮುಖ್ಯವಾಗಿ ನನ್ನ ಸಹೋದರರೇ, ಆಣೆಯಿಡಲೇ ಬೇಡಿರಿ. ಆಕಾಶದ ಮೇಲಾಗಲಿ, ಭೂಮಿಯ ಮೇಲಾಗಲಿ, ಇನ್ಯಾವುದರ ಮೇಲಾಗಲಿ ಆಣೆಯಿಡಬೇಡಿರಿ. ಹೌದೆಂದು ಹೇಳಬೇಕಾದರೆ ಹೌದೆನ್ನಿರಿ, ಅಲ್ಲವೆನ್ನಬೇಕಾದರೆ ಅಲ್ಲವೆನ್ನಿರಿ; ಹೀಗಾದರೆ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ.
Πρὸ πάντων δέ, ἀδελφοί μου, μὴ ὀμνύετε, μήτε τὸν οὐρανὸν, μήτε τὴν γῆν, μήτε ἄλλον τινὰ ὅρκον· ἤτω δὲ ὑμῶν τὸ “Ναὶ”, ναὶ, καὶ τὸ “Οὒ”, οὔ, ἵνα μὴ ὑπὸ κρίσιν πέσητε.
13 ೧೩ ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದರೆ, ಅವನು ದೇವರನ್ನು ನಂಬಿಕೆಯಿಂದ ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷಪಡುವವನು ಇದ್ದರೆ, ಅವನು ದೇವರಿಗೆ ಸ್ತುತಿಗೀತೆಗಳನ್ನು ಹಾಡಲಿ.
Κακοπαθεῖ τις ἐν ὑμῖν; Προσευχέσθω. Εὐθυμεῖ τις; Ψαλλέτω.
14 ೧೪ ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
Ἀσθενεῖ τις ἐν ὑμῖν; Προσκαλεσάσθω τοὺς πρεσβυτέρους τῆς ἐκκλησίας, καὶ προσευξάσθωσαν ἐπʼ αὐτὸν, ἀλείψαντες αὐτὸν ἐλαίῳ ἐν τῷ ὀνόματι τοῦ ˚Κυρίου.
15 ೧೫ ನಂಬಿಕೆಯಿಂದ ಮಾಡಿದ ಪ್ರಾರ್ಥನೆಯು ರೋಗಿಯನ್ನು ಗುಣಪಡಿಸುವುದು ಮತ್ತು ಕರ್ತನು ಅವನನ್ನು ಎಬ್ಬಿಸುವನು; ಅವನು ಪಾಪ ಮಾಡಿದವನಾಗಿದ್ದರೆ, ದೇವರು ಆ ಪಾಪಗಳನ್ನು ಕ್ಷಮಿಸುವನು.
Καὶ ἡ εὐχὴ τῆς πίστεως σώσει τὸν κάμνοντα, καὶ ἐγερεῖ αὐτὸν ὁ ˚Κύριος· κἂν ἁμαρτίας ᾖ πεποιηκώς, ἀφεθήσεται αὐτῷ.
16 ೧೬ ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.
Ἐξομολογεῖσθε οὖν ἀλλήλοις τὰς ἁμαρτίας, καὶ προσεύχεσθε ὑπὲρ ἀλλήλων, ὅπως ἰαθῆτε. Πολὺ ἰσχύει δέησις δικαίου ἐνεργουμένη.
17 ೧೭ ಎಲೀಯನು ನಮಗೆ ಸಮಾನವಾದ ಸ್ವಭಾವವುಳ್ಳವನಾಗಿದ್ದನು, ಅವನು ಮಳೆ ಬರಬಾರದೆಂದು ಭಕ್ತಿಯಿಂದ ಪ್ರಾರ್ಥಿಸಲು ಮೂರು ವರ್ಷ ಆರು ತಿಂಗಳವರೆಗೂ ಭೂಮಿಯ ಮೇಲೆ ಮಳೆ ಬೀಳಲಿಲ್ಲ.
Ἠλίας ἄνθρωπος ἦν ὁμοιοπαθὴς ἡμῖν, καὶ προσευχῇ προσηύξατο τοῦ μὴ βρέξαι, καὶ οὐκ ἔβρεξεν ἐπὶ τῆς γῆς, ἐνιαυτοὺς τρεῖς καὶ μῆνας ἕξ.
18 ೧೮ ತಿರುಗಿ ಅವನು ಪ್ರಾರ್ಥನೆ ಮಾಡಲು ಆಕಾಶವು ಮಳೆಗರೆಯಿತು, ಭೂಮಿಯು ಫಲಕೊಟ್ಟಿತು.
Καὶ πάλιν προσηύξατο, καὶ ὁ οὐρανὸς ὑετὸν ἔδωκεν, καὶ ἡ γῆ ἐβλάστησεν τὸν καρπὸν αὐτῆς.
19 ೧೯ ನನ್ನ ಸಹೋದರರೇ, ನಿಮ್ಮಲ್ಲಿ ಯಾರಾದರು ಸತ್ಯ ಮಾರ್ಗವನ್ನು ಬಿಟ್ಟು ತಪ್ಪಿ ನಡೆಯುತ್ತಿದ್ದರೆ ಮತ್ತೊಬ್ಬನು ಅವನನ್ನು ಸನ್ಮಾರ್ಗಕ್ಕೆ ತಂದರೆ;
Ἀδελφοί μου, ἐάν τις ἐν ὑμῖν πλανηθῇ ἀπὸ τῆς ἀληθείας, καὶ ἐπιστρέψῃ τις αὐτόν,
20 ೨೦ ಒಬ್ಬ ಪಾಪಿಯನ್ನು ತಪ್ಪಾದ ಮಾರ್ಗದಿಂದ ತಪ್ಪಿಸಿ, ಪರಿವರ್ತಿಸಿ ಅವನ ಆತ್ಮವನ್ನು ಮರಣದಿಂದ ತಪ್ಪಿಸಿ ಬಹು ಪಾಪಗಳನ್ನು ಮುಚ್ಚಿದವನಾದನೆಂದು ತಿಳಿದುಕೊಳ್ಳಲ್ಲಿ.
γινώσκετε ὅτι ὁ ἐπιστρέψας ἁμαρτωλὸν ἐκ πλάνης ὁδοῦ αὐτοῦ, σώσει ψυχὴν αὐτοῦ ἐκ θανάτου, καὶ καλύψει πλῆθος ἁμαρτιῶν.

< ಯಾಕೋಬನು ಬರೆದ ಪತ್ರಿಕೆ 5 >