< ಯೆರೆಮೀಯನು 39 >

1 ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸಕಲ ಸೈನ್ಯಸಹಿತ ಬಂದು ಯೆರೂಸಲೇಮನ್ನು ಮುತ್ತಿದನು.
ယုဒရှင်ဘုရင် ဇေဒကိမင်းကြီးနန်းစံကိုးနှစ် ဒသမလတွင်၊ ဗာဗုလုန်ရှင်ဘုရင်နေဗုခဒ်နေဇာသည် ဗိုလ်ခြေအပေါင်းတို့နှင့်တကွ လာ၍ ယေရုရှလင်မြို့ကို ဝိုင်းထားကြ၏။
2 ಚಿದ್ಕೀಯನ ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ ಪೌಳಿಗೋಡೆ ಒಡಕು ಬಿದ್ದು ಯೆರೂಸಲೇಮ್ ಪಟ್ಟಣವು ಶತ್ರುವಶವಾಯಿತು.
ဇေဒကိမင်းကြီးနန်းစံဆယ်တနှစ်၊ စတုတ္ထလ ကိုးရက်နေ့၌ မြို့ကို ဖြိုဖေါက်၍၊
3 ಆಗ ನೇರ್ಗಲ್ ಸರೆಚರ್, ಸಮ್ಗರ್ ನೆಬೋ, ಕಂಚುಕಿಯರ ಮುಖ್ಯಸ್ಥನಾದ ಸರ್ಸೆಕೀಮ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಕಲ ಸರದಾರರೂ ಪುರಪ್ರವೇಶಮಾಡಿ ಮಧ್ಯಮದ್ವಾರದೊಳಗೆ ಆಸೀನರಾದರು.
ရွှေထားဝန်နေရဂါလရှရေဇာ၊ မိန်းမစိုးအုပ်စာ သခိမ်၊ မာဂုပညာ ရှိအုပ်နေရဂါလရှရေဇာတည်းဟူသော ဗာဗုလုန်ရှင်ဘုရင်၏မှူးမတ်အစရှိသော မှူးတော် မတ်တော်အပေါင်းတို့သည် မြို့ထဲသို့ဝင်၍၊ အလယ်ချက် တံခါးဝ၌ထိုင်ကြ၏။
4 ಯೆಹೂದದ ಅರಸನಾದ ಚಿದ್ಕೀಯನೂ ಮತ್ತು ಸಮಸ್ತ ಸೈನಿಕರೂ ಇವರನ್ನು ನೋಡಿ ಅದೇ ರಾತ್ರಿಯಲ್ಲಿ ಹೊರಟು ಅರಸನ ಉದ್ಯಾನದ ಮಾರ್ಗವಾಗಿ ಎರಡು ಗೋಡೆಗಳ ನಡುವಣ ಬಾಗಿಲಿನಿಂದ ಪಟ್ಟಣವನ್ನು ಬಿಟ್ಟು ಅರಾಬಾ ಎಂಬ ತಗ್ಗಾದ ಪ್ರದೇಶದ ಕಡೆಗೆ ಪಲಾಯನ ಮಾಡಿದರು.
ယုဒရှင်ဘုရင်ဇေဒကိမင်းနှင့် စစ်သူရဲအပေါင်း တို့သည် ထိုလူများကို မြင်လျှင်၊ ညဉ့်အခါပြေး၍ ဥယျာဉ် တော်လမ်းကို လိုက်လျက်၊ မြို့ရိုးနှစ်ထပ်စပ်ကြား တံခါးဖြင့် ထွက်ပြီးမှ လွင်ပြင်သို့ သွားကြ၏။
5 ಕಸ್ದೀಯರ ಸೈನಿಕರು ಅವರನ್ನು ಹಿಂದಟ್ಟುತ್ತಾ ಯೆರಿಕೋವಿನ ಬಯಲಿನಲ್ಲಿ ಚಿದ್ಕೀಯನನ್ನು ಹಿಡಿದು ಹಮಾತ್ ಸೀಮೆಯ ರಿಬ್ಲದಲ್ಲಿದ್ದ ನೆಬೂಕದ್ನೆಚ್ಚರನೆಂಬ ಬಾಬೆಲಿನ ಅರಸನ ಬಳಿಗೆ ತೆಗೆದುಕೊಂಡು ಬಂದರು.
ခါလဒဲစစ်သူရဲတို့သည် လိုက်လျက်၊ ယေရိခေါ လွင်ပြင်၌ဇေဒကိ မင်းကိုမှီ၍ ဘမ်းဆီးပြီးမှ၊ ဗာဗုလုန် ရှင်ဘုရင် နေဗုခဒ်နေဇာရှိရာ ဟာမတ်ပြည်ရိဗလမြို့သို့ ဆောင်သွားကြ၏။ ဗာဗုလုန်ရှင်ဘုရင်သည် ဇေဒကိ မင်း၏ အမှုကို စစ်ကြောစီရင်၍၊
6 ಆ ಬಾಬೆಲಿನ ಅರಸನು ಅಲ್ಲಿ ಚಿದ್ಕೀಯನಿಗೆ ಶಿಕ್ಷೆಯನ್ನು ವಿಧಿಸಿ, ಅವನ ಮಕ್ಕಳನ್ನು ರಿಬ್ಲದಲ್ಲಿ ಅಲ್ಲೇ ಅವನ ಕಣ್ಣೆದುರಿಗೆ ವಧಿಸಿ ಯೆಹೂದದ ಸಮಸ್ತ ಶ್ರೀಮಂತರನ್ನೂ ಕೊಲ್ಲಿಸಿದನು.
ရိဗလမြို့မှာ ဇေဒကိသားတို့ကို အဘ မျက် မှောက်၌ သတ်လေ၏။ ယုဒမှူးမတ်အပေါင်းကိုလည်း သတ်လေ၏။
7 ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಕೀಳಿಸಿ ಅವನನ್ನು ಬಾಬಿಲೋನಿಗೆ ಸಾಗಿಸಬೇಕೆಂದು ಬೇಡಿಹಾಕಿಸಿದನು.
ဇေဒကိမျက်စိကိုလည်း ဖောက်ပြီးမှ၊ သူ့ကိုကြေးဝါ ကြိုးနှင့် ချည်နှောင်လေ၏။
8 ಮತ್ತು ಕಸ್ದೀಯರು ಅರಮನೆಯನ್ನೂ, ಪ್ರಜೆಗಳ ಮನೆಗಳನ್ನೂ ಬೆಂಕಿಯಿಂದ ಸುಟ್ಟು, ಯೆರೂಸಲೇಮಿನ ಸುತ್ತಣ ಗೋಡೆಗಳನ್ನು ಕೆಡವಿದರು.
ခါလဒဲလူတို့သည်လည်း၊ နန်းတော်နှင့် ဆင်းရဲ သားအိမ်တို့ကို မီးရှို့၍၊ မြို့ရိုးကို ဖြိုဖျက်ကြ၏။
9 ಆಗ ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನು ಪಟ್ಟಣದಲ್ಲಿ ಉಳಿದವರನ್ನೂ, ಮೊದಲೇ ತನ್ನನ್ನು ಮೊರೆಹೊಕ್ಕವರನ್ನೂ, ಇತರ ಸಮಸ್ತ ಜನರನ್ನೂ ಬಾಬಿಲೋನಿಗೆ ಸೆರೆಯೊಯ್ದನು.
ထိုအခါ ကိုယ်ရံတော်မှူးနေဗုဇာရဒန်သည် မြို့ထဲမှာကျန်ကြွင်းသောသူ၊ ခါလဒဲလူဘက်သို့ ကူးသွား နှင့်သောသူ၊ ကျန်ကြွင်းသမျှသော သူတို့ကိုဗာဗုလုန်မြို့သို့ သိမ်းသွားလေ၏။
10 ೧೦ ಆದರೆ ಏನೂ ಇಲ್ಲದ ಕೆಲವು ಬಡ ಜನರನ್ನು ಯೆಹೂದ ದೇಶದಲ್ಲಿ ಬಿಟ್ಟು ಆಗಲೇ ಅವರಿಗೆ ಹೊಲ ಮತ್ತು ದ್ರಾಕ್ಷಿತೋಟಗಳನ್ನು ಕೊಟ್ಟನು.
၁၀သို့ရာတွင်၊ ဥစ္စာအလျှင်းမရှိသော ဆင်းရဲသား အချို့တို့ကို ယုဒပြည်၌ထားခဲ့၍၊ စပျစ်ဥယျာဉ်နှင့် လယ်ယာတို့ကို ပေးလေ၏။
11 ೧೧ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನಿಗೆ,
၁၁ဗာဗုလုန်ရှင်ဘုရင်နေဗုခဒ်နေဇာသည် ယေရမိ အမှု၌၊ ကိုယ်ရံတော်မှူးနေဗုဇာရဒန်ကို မှာထားနှင့် သည်ကား၊
12 ೧೨ “ಅವನನ್ನು ಕರೆಯಿಸಿಕೊಂಡು ಏನೂ ಕೇಡುಮಾಡದೆ ಅವನು ಬೇಡುವುದನ್ನೆಲ್ಲಾ ನೆರವೇರಿಸಿ ಕಟಾಕ್ಷಿಸು” ಎಂದು ಅಪ್ಪಣೆಕೊಟ್ಟನು.
၁၂ယေရမိကိုယူ၍ ကောင်းမွန်စွာ ကြည့်ရှုလော့။ မညှဉ်းဆဲနှင့်။ သူပြောသည်အတိုင်း သူ့ကိုပြုလော့ဟု မှာထားတော်မူသည်နှင့်အညီ၊
13 ೧೩ ಅದಕ್ಕೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನ್, ಕಂಚುಕಿಯರ ಮುಖ್ಯಸ್ಥನಾದ ನೆಬೂಷಜ್ಬಾನ್, ಜೋಯಿಸರ ಮುಖ್ಯಸ್ಥನಾದ ನೇರ್ಗಲ್ ಸರೆಚರ್ ಅಂತು ಬಾಬೆಲಿನ ಅರಸನ ಸಮಸ್ತ ಮುಖ್ಯಾಧಿಕಾರಿಗಳು,
၁၃ကိုယ်ရံတော်မှူးနေဗုဇာရဒန်၊ မိန်းမစိုးအုပ် နေဗုရှာဇဗန်၊ မာဂုပညာရှိအုပ်နေရဂါလရှဓရဇာအစ ရှိသော ဗာဗုလုန်ရှင်ဘုရင်၏မှူးမတ်အပေါင်းတို့သည် လူကိုစေလွှတ်၍၊
14 ೧೪ ಯೆರೆಮೀಯನನ್ನು ಕಾರಾಗೃಹದ ಅಂಗಳದಿಂದ ಕರೆತರಿಸಿ, ಅಹೀಕಾಮನ ಮಗನೂ ಶಾಫಾನನ ಮೊಮ್ಮಗನೂ ಆದ ಗೆದಲ್ಯನ ವಶಕ್ಕೆ ಒಪ್ಪಿಸಿ ಮನೆಗೆ ಕರೆದುಕೊಂಡು ಹೋಗುವಂತೆ ಹೇಳಿದರು. ಅಂದಿನಿಂದ ಯೆರೆಮೀಯನು ಎಂದಿನಂತೆ ಜನರ ಮಧ್ಯದಲ್ಲಿ ವಾಸಿಸಿದನು.
၁၄ယေရမိကိုထောင်ဝင်းထဲက နှုတ်ယူပြီးလျှင်၊ သူ၏နေရာသို့ ပို့ဆောင်စေခြင်းငှါ၊ ရှာဖန်သားဖြစ်သော အဟိကံ၏သားဂေဒလိ၌ အပ်ကြ၏။ သို့ဖြစ်၍၊ ယေရမိ သည် ပြည်သားများနှင့်အတူ နေရလေ၏။
15 ೧೫ ಯೆರೆಮೀಯನು ಕಾರಾಗೃಹದ ಅಂಗಳದಲ್ಲಿ ಸೆರೆಯಾಗಿದ್ದಾಗ ಯೆಹೋವನು ಅವನಿಗೆ ಈ ಮಾತನ್ನು ದಯಪಾಲಿಸಿದನು,
၁၅ယေရမိသည်ထောင်ဝင်းထဲမှာ အချုပ်ခံရသော အခါ၊ ထာဝရဘုရား၏ နှုတ်ကပတ်တော်ရောက်၍၊
16 ೧೬ “ನೀನು ಹೋಗಿ ಕೂಷ್ಯನಾದ ಎಬೆದ್ಮೆಲೆಕನಿಗೆ ಹೀಗೆ ಹೇಳು, ‘ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಆಹಾ, ನಾನು ನುಡಿದ ಮೇಲನ್ನಲ್ಲ, ನುಡಿದ ಕೇಡನ್ನೇ ಈ ಪಟ್ಟಣದ ಮೇಲೆ ಬರಮಾಡುವೆನು; ಅದು ಆ ದಿನದಲ್ಲಿ ನಿನ್ನ ಕಣ್ಣೆದುರಿಗೆ ಆಗುವುದು.
၁၆သင်သည် ကုရှအမျိုးသား ဧဗဒမေလက်ကို ဆင့်ဆိုရမည်မှာ၊ ဣသရေလအမျိုး၏ဘုရားသခင်၊ ကောင်းကင်ဗိုလ်ခြေအရှင်ထာဝရဘုရား မိန့်တော် မူသည်ကား၊ ဤမြို့၏အကျိုးကိုမပြုစု၊ ဖျက်ဆီးခြင်းငှါ ငါ့စကားကို ငါတည်စေမည်။ ကာလအချိန်ရောက်လျှင်၊ သင့်ရှေ့၌ ငါ့စကားပြည့်စုံလိမ့်မည်။
17 ೧೭ ಯೆಹೋವನು ಇಂತೆನ್ನುತ್ತಾನೆ, ಆ ದಿನದಲ್ಲಿ ನಾನು ನಿನ್ನನ್ನು ಉದ್ಧರಿಸುವೆನು; ನೀನು ಹೆದರುವ ಮನುಷ್ಯರ ಕೈಗೆ ಸಿಕ್ಕುವುದಿಲ್ಲ.
၁၇သို့သော်လည်း၊ ထိုကာလ၌သင့်ကို ငါကယ်နှုတ် မည်။ သင်ကြောက်သော သူတို့လက်သို့ သင်မရောက်ရ။
18 ೧೮ ನೀನು ನನ್ನಲ್ಲಿ ಭರವಸವಿಟ್ಟ ಕಾರಣ ನಿನ್ನನ್ನು ರಕ್ಷಿಸೇ ರಕ್ಷಿಸುವೆನು; ನೀನು ಖಡ್ಗಕ್ಕೆ ತುತ್ತಾಗದೆ ಅದರ ಬಾಯೊಳಗಿಂದ ನಿನ್ನ ಪ್ರಾಣವನ್ನು ಸೆಳೆದುಕೊಂಡು ಹೋಗುವಿ; ಇದು ಯೆಹೋವನ ನುಡಿ’” ಎಂಬುದೇ.
၁၈ငါသည် သင့်ကို စင်စစ်ကယ်နှုတ်မည်။ သင်သည် ထားဖြင့် မဆုံးရ။ လက်ရဥစ္စာကဲ့သို့ ကိုယ် အသက်ကို ရလိမ့်မည်။ အကြောင်းမူကား၊ သင်သည် ငါ့ကိုကိုးစားသော ကြောင့်တည်းဟု ထာဝရဘုရား မိန့်တော်မူ၏။

< ಯೆರೆಮೀಯನು 39 >