< ಯೋಹಾನನು 11 >

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
Եւ մի հիւանդ կար, Ղազարոս անունով, Բեթանիայից՝ Մարիամի եւ նրա քոյր Մարթայի գիւղից:
2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
Սա այն Մարիամն էր, որ իւղով օծեց Տիրոջը եւ իր մազերով սրբեց նրա ոտքերը: Եւ սրա եղբայր Ղազարոսը հիւանդ էր:
3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
Սրա քոյրերը նրա մօտ մարդ ուղարկեցին եւ ասացին. «Տէ՛ր, ահաւասիկ նա, ում դու սիրում էիր, հիւանդացել է»:
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
Երբ Յիսուս լսեց, ասաց. «Այդ հիւանդութիւնը մահաբեր չէ, այլ Աստծու փառքի համար է, որպէսզի դրանով Աստծու Որդին փառաւորուի»:
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
Յիսուս սիրում էր Մարիամին, նրա քրոջը՝ Մարթային, եւ Ղազարոսին:
6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
Լսելուց յետոյ, թէ Ղազարոսը հիւանդացել է, նա տակաւին երկու օր մնաց այնտեղ, ուր գտնւում էր:
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
Ապա դրանից յետոյ իր աշակերտներին ասաց. «Եկէ՛ք վերստին գնանք Հրէաստան»:
8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
Աշակերտները նրան ասացին. «Ռաբբի՛, հրեաները դեռ նոր էին ուզում քեզ քարկոծել, եւ նորից այնտե՞ղ ես գնում»:
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
Յիսուս պատասխանեց. «Ցերեկը տասներկու ժամ չունի՞. եթէ մէկը ցերեկն է քայլում, չի սայթաքում, որովհետեւ այս աշխարհի լոյսը տեսնում է,
10 ೧೦ ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
իսկ եթէ մէկը գիշերն է քայլում, սայթաքում է, որովհետեւ հետը լոյս չունի»:
11 ೧೧ ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
Այս բաներն ասելուց յետոյ նորից ասաց նրանց. «Մեր բարեկամ Ղազարոսը ննջել է, սակայն ես գնում եմ, որ նրան արթնացնեմ»:
12 ೧೨ ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
Աշակերտները նրան ասացին. «Տէ՛ր, եթէ ննջել է, ապա կ՚առողջանայ»:
13 ೧೩ ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
Բայց Յիսուս նրա մահուան մասին էր ասում, մինչդեռ նրանց այնպէս թուաց, թէ նա քնով ննջելու մասին է խօսում:
14 ೧೪ ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
Այն ժամանակ Յիսուս նրանց յայտնապէս ասաց. «Ղազարոսը մեռաւ.
15 ೧೫ ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
բայց ես ուրախ եմ ձեզ համար, որ այնտեղ չէի. որպէսզի դուք ինձ հաւատաք: Արդ, եկէ՛ք գնանք նրա մօտ»:
16 ೧೬ ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
Թովմասը, որ Երկուորեակ էր կոչւում, աշակերտակիցներին ասաց. «Եկէ՛ք մենք էլ գնանք, որ նրա հետ մեռնենք»:
17 ೧೭ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
Յիսուս եկաւ, նրան գտաւ չորս օրից ի վեր գերեզմանի մէջ:
18 ೧೮ ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
Եւ Բեթանիան Երուսաղէմի մօտ էր շուրջ երեք կիլոմետր:
19 ೧೯ ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
Հրեաներից շատերը եկել էին Մարթայի եւ Մարիամի մօտ, որպէսզի նրանց մխիթարեն իրենց եղբօր մահուան համար:
20 ೨೦ ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
Երբ Մարթան լսեց, որ Յիսուս գալիս է, նրան ընդառաջ գնաց. իսկ Մարիամը տանը նստած էր:
21 ೨೧ ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
Մարթան Յիսուսին ասաց. «Տէ՛ր, եթէ դու այստեղ եղած լինէիր, իմ եղբայրը մեռած չէր լինի.
22 ೨೨ ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
բայց հիմա էլ գիտեմ, թէ ինչ էլ որ Աստծուց ուզես, Աստուած քեզ կը տայ»:
23 ೨೩ ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
Յիսուս նրան ասաց. «Քո եղբայրը յարութիւն կ՚առնի»:
24 ೨೪ ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
Մարթան նրան ասաց. «Գիտեմ, որ յարութեան ժամանակ վերջին օրը յարութիւն կ՚առնի»:
25 ೨೫ ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
Յիսուս նրան ասաց. «Ես իսկ եմ յարութիւն եւ կեանք. ով հաւատում է ինձ, թէպէտ եւ մեռնի, կ՚ապրի.
26 ೨೬ ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
եւ ով կենդանի է ու ինձ հաւատում է, յաւիտեան չի մեռնի: Հաւատո՞ւմ ես այս բանին»: (aiōn g165)
27 ೨೭ ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
Նա ասաց նրան. «Այո՛, Տէ՛ր, ես հաւատում եմ, որ դո՛ւ ես Քրիստոսը՝ Աստծու Որդին, որ աշխարհ էիր գալու»:
28 ೨೮ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
Եւ այս ասելուց յետոյ, գնաց գաղտնաբար կանչեց իր քրոջը՝ Մարիամին եւ ասաց. «Վարդապետն է եկել եւ քեզ է կանչում»:
29 ೨೯ ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
Երբ նա լսեց, իսկոյն վեր կացաւ եւ եկաւ նրա մօտ:
30 ೩೦ ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Յիսուս դեռ գիւղ չէր հասել, այլ դեռեւս այն տեղում էր, ուր Մարթան նրան ընդառաջ էր ելել:
31 ೩೧ ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
Իսկ այն հրեաները, որ նրա հետ տանն էին եւ նրան մխիթարում էին, երբ տեսան Մարիամին, որ վեր կացաւ իսկոյն ու գնաց, իրենք եւս նրա յետեւից գնացին. կարծում էին, թէ գերեզման է գնում, որ այնտեղ լաց լինի:
32 ೩೨ ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
Իսկ Մարիամը, երբ եկաւ այնտեղ, ուր Յիսուս կանգնած էր, ու տեսաւ նրան, ընկաւ նրա ոտքերն ու ասաց. «Տէ՛ր, եթէ այստեղ եղած լինէիր, իմ եղբայրը մեռած չէր լինի»:
33 ೩೩ ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
Երբ Յիսուս տեսաւ, որ նա լալիս է, եւ նրա հետ եղող հրեաներն էլ լալիս են, սաստիկ խռովուեց իր հոգում եւ ասաց.
34 ೩೪ “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
«Ո՞ւր դրիք նրան»: Նրան ասացին. «Տէ՛ր, արի՛ եւ տե՛ս»:
35 ೩೫ ಯೇಸು ಕಣ್ಣೀರಿಟ್ಟನು.
Եւ Յիսուս արտասուեց:
36 ೩೬ ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
Հրեաներն ասացին. «Տեսէ՛ք ինչքան էր սիրում նրան»:
37 ೩೭ ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
Նրանցից ոմանք ասում էին. «Սա, որ կոյրի աչքերը բացեց, չէ՞ր կարող նաեւ այնպէս անել, որ սա չմեռնէր»:
38 ೩೮ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
Յիսուս, դարձեալ խռովուելով ինքն իր մէջ, եկաւ գերեզմանը: Սա մի քարայր էր, որի վրայ մի քար էր դրուած:
39 ೩೯ ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
Եւ Յիսուս ասաց. «Այդ քարը մի կողմ դրէք»: Մարթան՝ մեռածի քոյրը, նրան ասաց. «Տէ՛ր, հիմա արդէն նեխած կը լինի, քանի որ չորս օրուայ է»:
40 ೪೦ ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
Յիսուս նրան ասաց. «Քեզ չասացի՞. եթէ հաւատաս, կը տեսնես Աստծու փառքը»:
41 ೪೧ ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Երբ քարը վերցրին, Յիսուս աչքերը վեր բարձրացրեց ու ասաց. «Հա՛յր, գոհութիւն եմ տալիս քեզ, որ ինձ լսեցիր.
42 ೪೨ ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
եւ ես գիտէի, որ ամէն ժամ լսում ես ինձ, բայց այս անում եմ շուրջս կանգնած այս ժողովրդի համար, որպէսզի հաւատան, որ դո՛ւ ինձ ուղարկեցիր»:
43 ೪೩ ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
Երբ այս ասաց, բարձր ձայնով աղաղակեց եւ ասաց. «Ղազարո՛ս, վե՛ր կաց, դո՛ւրս արի»:
44 ೪೪ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
Եւ մեռելը ելաւ՝ կապուած ոտքերով, ձեռքերը երիզով ամրացուած եւ երեսը վարշամակով պատած: Եւ Յիսուս նրանց ասաց. «Արձակեցէ՛ք դրան եւ թողէ՛ք, որ գնայ»:
45 ೪೫ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
Հրեաներից շատերը, որոնք եկել էին Մարիամենց մօտ, երբ տեսան, ինչ որ Յիսուս արեց, հաւատացին նրան:
46 ೪೬ ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
Իսկ նրանցից ոմանք գնացին փարիսեցիների մօտ եւ պատմեցին նրանց, ինչ որ Յիսուս արեց:
47 ೪೭ ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
Քահանայապետներն ու փարիսեցիները ատեան գումարեցին եւ ասացին. «Ի՞նչ անենք, քանի որ այդ մարդը բազում նշաններ է անում:
48 ೪೮ ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
Եթէ նրան այնպէս թողնենք, ամէնքը կը հաւատան նրան, եւ հռոմէացիները կը գան ու կը վերացնեն մեր ազգն ու մեր սրբավայրը»:
49 ೪೯ ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
Նրանցից մէկը՝ Կայիափա անունով, որ այդ տարուայ քահանայապետն էր, նրանց ասաց.
50 ೫೦ ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
«Դուք ոչինչ չգիտէք, ոչ իսկ խորհել էք, թէ մեզ համար աւելի լաւ է, որ մէկ մարդ մեռնի ժողովրդի համար, քան թէ ամբողջ ազգը կորչի»:
51 ೫೧ ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
Այս բանը նա ինքն իրենից չասաց, այլ, քանի որ այդ տարուայ քահանայապետն էր, մարգարէացաւ, որ Յիսուս մեռնելու էր ազգի համար:
52 ೫೨ ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
Եւ ոչ միայն ազգի համար, այլ՝ որպէսզի նաեւ Աստծու ցրուած որդիներին ի մի հաւաքի:
53 ೫೩ ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
Ապա այն օրուանից խորհուրդ արեցին, որ նրան սպանեն:
54 ೫೪ ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
Եւ Յիսուս այնուհետեւ այլեւս համարձակ չէր շրջում հրեաների մէջ, այլ այնտեղից գնաց մի շրջան, որ մօտ էր անապատին. գնաց մի քաղաք, որի անունն էր Եփրայիմ, եւ իր աշակերտների հետ այդտեղ էր մնում:
55 ೫೫ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
Եւ հրեաների զատիկը մօտ էր. եւ այդ գաւառից շատերը Երուսաղէմ բարձրացան զատկից առաջ, որպէսզի իրենք իրենց մաքրեն:
56 ೫೬ ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
Յիսուսին փնտռում էին. եւ մինչ տաճարի մէջ էին, միմեանց ասում էին. «Ինչպէ՞ս է ձեզ թւում, արդեօք այս տօնին չի՞ գայ»:
57 ೫೭ ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Քահանայապետներն ու փարիսեցիները հրահանգել էին, որ, եթէ մէկն իմանայ, թէ նա որտեղ է, յայտնի, որպէսզի նրան ձ»րբակալ»ն:

< ಯೋಹಾನನು 11 >