< ಯೋಹಾನನು 11 >

1 ಮಾರ್ಥಳು ಮತ್ತು ಆಕೆಯ ಸಹೋದರಿಯಾದ, ಮರಿಯಳ ಊರಾದ, ಬೇಥಾನ್ಯದಲ್ಲಿ ಲಾಜರನೆಂಬುವನೊಬ್ಬನು ಅಸ್ವಸ್ಥನಾಗಿದ್ದನು.
Մարիամի եւ անոր քրոջ՝ Մարթայի գիւղէն, Բեթանիայէն, Ղազարոս անունով մէկը հիւանդ էր:
2 ಈ ಮರಿಯಳು ಕರ್ತನಿಗೆ ತೈಲವನ್ನು ಹಚ್ಚಿ ಆತನ ಪಾದಗಳನ್ನು ತನ್ನ ತಲೆ ಕೂದಲಿನಿಂದ ಒರಸಿದವಳು. ಈಕೆಯ ಸಹೋದರನಾದ ಲಾಜರನೇ ಅಸ್ವಸ್ಥನಾಗಿದ್ದನು.
(Ասիկա այն Մարիամն էր՝ որ օծեց Տէրը օծանելիքով ու սրբեց անոր ոտքերը իր մազերով. անոր եղբայրը՝ Ղազարոս հիւանդ էր: )
3 ಹೀಗಿರಲಾಗಿ ಅವನ ಸಹೋದರಿಯರು, “ಕರ್ತನೇ ಇಗೋ, ನೀನು ಪ್ರೀತಿಸುವವನು ಅಸ್ವಸ್ಥನಾಗಿದ್ದಾನೆ” ಎಂಬುದಾಗಿ ಯೇಸುವಿನ ಬಳಿಗೆ ಹೇಳಿ ಕಳುಹಿಸಿದರು.
Ուրեմն իր քոյրերը մարդ ղրկեցին անոր եւ ըսին. «Տէ՛ր, ահա՛ ան՝ որ դուն կը սիրես՝ հիւանդ է»:
4 ಯೇಸು ಇದನ್ನು ಕೇಳಿ, “ಈ ರೋಗವು ಮರಣಕ್ಕಾಗಿ ಬಂದದ್ದಲ್ಲ; ಇದರಿಂದ ದೇವಕುಮಾರನಿಗೆ ಮಹಿಮೆ ಉಂಟಾಗುವಂತೆ ದೇವರ ಮಹಿಮೆಗೋಸ್ಕರ ಬಂದದ್ದು” ಎಂದು ಹೇಳಿದನು.
Երբ Յիսուս լսեց՝ ըսաւ. «Այս հիւանդութիւնը մահուան համար չէ՝ հապա Աստուծոյ փառքին համար, որպէսզի Աստուծոյ Որդին փառաւորուի անով»:
5 ಮಾರ್ಥಳನ್ನು ಆಕೆಯ ತಂಗಿಯನ್ನು ಮತ್ತು ಲಾಜರನನ್ನು ಯೇಸು ಪ್ರೀತಿಸುತ್ತಿದ್ದನು.
Արդարեւ Յիսուս կը սիրէր Մարթան եւ անոր քոյրն ու Ղազարոսը:
6 ಲಾಜರನು ಅಸ್ವಸ್ಥನಾಗಿದ್ದಾನೆಂದು ಆತನು ಕೇಳಿದ ಮೇಲೆಯೂ ಎರಡು ದಿನ ತಾನಿದ್ದ ಸ್ಥಳದಲ್ಲೇ ಉಳಿದುಕೊಂಡನು.
Ուրեմն երբ լսեց թէ հիւանդ է, եղած տեղը երկու օր ալ մնաց.
7 ಬಳಿಕ ಆತನು ತನ್ನ ಶಿಷ್ಯರಿಗೆ, “ನಾವು ಪುನಃ ಯೂದಾಯಕ್ಕೆ ಹೋಗೋಣ” ಎಂದು ಹೇಳಿದನು.
յետոյ ըսաւ աշակերտներուն. «Եկէ՛ք, դարձեալ Հրէաստան երթանք»:
8 ಆತನ ಶಿಷ್ಯರು ಆತನಿಗೆ, “ಗುರುವೇ, ಆಗಲೇ ಯೆಹೂದ್ಯರು ನಿನ್ನ ಮೇಲೆ ಕಲ್ಲೆಸೆಯಬೇಕೆಂದು ಹುಡುಕುತ್ತಿದ್ದಾರೆ, ಪುನಃ ನೀನು ಅಲ್ಲಿಗೆ ಹೋಗಬೇಕೆಂದಿರುವಿಯಾ?” ಎಂದರು.
Աշակերտները ըսին իրեն. «Ռաբբի՛, Հրեաները հի՛մա կը փնտռէին քեզ՝ քարկոծելու համար, ու դա՞րձեալ հոն կ՚երթաս»:
9 ಯೇಸು, “ಹಗಲಿಗೆ ಹನ್ನೆರಡು ತಾಸುಗಳು ಉಂಟಲ್ಲವೇ? ಒಬ್ಬನು ಹಗಲಿನಲ್ಲಿ ನಡೆದರೆ, ಈ ಲೋಕದ ಬೆಳಕು ಕಾಣಿಸುವುದರಿಂದ ಅವನು ಎಡವುದಿಲ್ಲ.
Յիսուս պատասխանեց. «Օրը տասներկու ժամ չէ՞: Եթէ մէկը ցերեկը քալէ՝ չի սայթաքիր, որովհետեւ այս աշխարհի լոյսը կը տեսնէ.
10 ೧೦ ರಾತ್ರಿಯಲ್ಲಿ ನಡೆದರೆ ತನ್ನಲ್ಲಿ ಬೆಳಕಿಲ್ಲದ್ದರಿಂದ ಅವನು ಎಡವುತ್ತಾನೆ” ಎಂದು ಉತ್ತರಕೊಟ್ಟನು.
բայց եթէ մէկը գիշերուան մէջ քալէ՝ կը սայթաքի, որովհետեւ իրեն հետ լոյս չկայ»:
11 ೧೧ ಇದನ್ನು ಹೇಳಿದ ಮೇಲೆ ಆತನು ಅವರಿಗೆ, “ನಮ್ಮ ಮಿತ್ರನಾದ ಲಾಜರನು ನಿದ್ರೆ ಮಾಡುತ್ತಿದ್ದಾನೆ, ಆದುದರಿಂದ ನಾನು ಹೋಗಿ ಅವನನ್ನು ನಿದ್ರೆಯಿಂದ ಎಬ್ಬಿಸಬೇಕಾಗಿದೆ” ಎಂದು ಹೇಳಿದನು.
Այս բաները խօսելէ ետք՝ ըսաւ անոնց. «Ղազարոս՝ մեր բարեկամը՝ քնացած է. բայց կ՚երթա՛մ՝ որպէսզի արթնցնեմ զայն»:
12 ೧೨ ಅದಕ್ಕೆ ಶಿಷ್ಯರು, “ಅವನು ನಿದ್ರೆ ಮಾಡುತ್ತಿದ್ದರೆ ಸ್ವಸ್ಥನಾಗುವನು” ಎಂದರು.
Իր աշակերտները ըսին. «Տէ՛ր, եթէ քնացած է՝ պիտի առողջանայ»:
13 ೧೩ ಯೇಸು ಅವನ ಮರಣವನ್ನು ಕುರಿತು ಅದನ್ನು ಹೇಳಿದ್ದನು, ಆದರೆ ಅವರು ವಿಶ್ರಾಂತಿಗಾಗಿ ಮಲಗಿದ್ದಾನೆಂಬುದಾಗಿ ಹೇಳಿದನೆಂದು ಯೋಚಿಸಿದರು.
Յիսուս կը խօսէր անոր մահուան մասին, բայց անոնք կը կարծէին թէ քունո՛վ հանգստանալուն մասին կը խօսէր:
14 ೧೪ ಆಗ ಯೇಸು ಸ್ಪಷ್ಟವಾಗಿ ಅವರಿಗೆ, “ಲಾಜರನು ಸತ್ತು ಹೋಗಿದ್ದಾನೆ.
Այն ատեն Յիսուս բացորոշապէս ըսաւ անոնց. «Ղազարոս մեռաւ.
15 ೧೫ ನಾನು ಅಲ್ಲಿ ಇಲ್ಲದೆ ಹೋದದ್ದು ಒಳ್ಳೆಯದೇ, ನಿಮಗೆ ನನ್ನಲ್ಲಿ ನಂಬಿಕೆ ಬರುವಂತೆ ಇದೆಲ್ಲಾ ನಡೆದಿದೆ. ಬನ್ನಿ, ನಾವು ಅವನ ಬಳಿಗೆ ಹೋಗೋಣ” ಎಂದು ಹೇಳಿದನು
ու ես ուրախ եմ ձեզի համար՝ որ հոն չէի, որպէսզի դուք հաւատաք. բայց եկէ՛ք՝ երթանք անոր»:
16 ೧೬ ಆಗ ದಿದುಮನೆಂಬ ತೋಮನು ತನ್ನ ಜೊತೆ ಶಿಷ್ಯರಿಗೆ, “ನಾವು ಸಹ ಯೇಸುವಿನೊಂದಿಗೆ ಸಾಯುವುದಕ್ಕೆ ಹೋಗೋಣ” ಎಂದು ಹೇಳಿದನು.
Թովմաս, որ Երկուորեակ կը կոչուէր, ըսաւ աշակերտակիցներուն. «Մե՛նք ալ երթանք՝ որպէսզի մեռնինք անոր հետ»:
17 ೧೭ ಯೇಸು ಬಂದಾಗ ಲಾಜರನನ್ನು ಸಮಾಧಿಯಲ್ಲಿಟ್ಟು ಆಗಲೇ ನಾಲ್ಕು ದಿನಗಳಾಯಿತೆಂದು ಆತನಿಗೆ ತಿಳಿದು ಬಂದಿತು.
Երբ Յիսուս եկաւ, գտաւ որ ան արդէն չորս օրէ ի վեր գերեզմանը դրուած էր:
18 ೧೮ ಬೇಥಾನ್ಯವು ಯೆರೂಸಲೇಮಿಗೆ ಸಮೀಪವಾಗಿತ್ತು. ಯೆರುಸಲೇಮಿನಿಂದ ಸುಮಾರು ಒಂದು ಹರಿದಾರಿಯಷ್ಟು ಅಂತರವಿತ್ತು.
Բեթանիա Երուսաղէմի մօտ էր՝ տասնհինգ ասպարէզի չափ.
19 ೧೯ ಯೆಹೂದ್ಯರಲ್ಲಿ ಅನೇಕರು ಮಾರ್ಥಳನ್ನು ಮತ್ತು ಮರಿಯಳನ್ನು ಅವರ ಸಹೋದರನ ವಿಷಯದಲ್ಲಿ ಸಂತೈಸಬೇಕೆಂದು ಬಂದಿದ್ದರು.
եւ Հրեաներէն շատեր եկած էին Մարթայի ու Մարիամի, որպէսզի սփոփեն զանոնք իրենց եղբօր համար:
20 ೨೦ ಹೀಗಿರುವಲ್ಲಿ ಮಾರ್ಥಳು ಯೇಸು ಬರುತ್ತಾನೆಂದು ಕೇಳಿ ಆತನನ್ನು ಎದುರುಗೊಳ್ಳುವುದಕ್ಕೆ ಎದ್ದು ಹೋದಳು. ಆದರೆ ಮರಿಯಳು ಮನೆಯಲ್ಲೇ ಉಳಿದುಕೊಂಡಿದ್ದಳು.
Ուստի՝ երբ Մարթա լսեց թէ Յիսուս կու գայ՝ գնաց դիմաւորելու զայն. բայց Մարիամ նստած էր տան մէջ:
21 ೨೧ ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
Մարթա ըսաւ Յիսուսի. «Տէ՛ր, եթէ հոս ըլլայիր, եղբայրս չէր մեռներ.
22 ೨೨ ಈಗಲಾದರೂ ನೀನು ದೇವರನ್ನು ಏನು ಕೇಳಿಕೊಂಡರೂ ಅದನ್ನು ದೇವರು ನಿನಗೆ ಅನುಗ್ರಹಿಸುವನೆಂದು ನಾನು ಬಲ್ಲೆನು” ಎಂದು ಹೇಳಿದಳು.
Բայց գիտեմ թէ հիմա ալ՝ դուն ի՛նչ որ խնդրես Աստուծմէ, Աստուած պիտի տայ քեզի»:
23 ೨೩ ಯೇಸು ಆಕೆಗೆ, “ನಿನ್ನ ತಮ್ಮನು ಪುನಃ ಎದ್ದು ಬರುವನು” ಎಂದು ಹೇಳಿದನು.
Յիսուս ըսաւ անոր. «Եղբայրդ յարութիւն պիտի առնէ»:
24 ೨೪ ಮಾರ್ಥಳು ಆತನಿಗೆ, “ಸತ್ತವರಿಗೆ ಕಡೆಯ ದಿನದಲ್ಲಿ ಪುನರುತ್ಥಾನವಾಗುವಾಗ ಅವನೂ ಎದ್ದು ಬರುವನೆಂದು ನಾನು ಬಲ್ಲೆನು” ಅಂದಳು.
Մարթա ըսաւ անոր. «Գիտեմ թէ յարութեան ժամանակը՝ վերջին օրը՝ յարութիւն պիտի առնէ»:
25 ೨೫ ಯೇಸು ಆಕೆಗೆ, “ನಾನೇ ಪುನರುತ್ಥಾನವೂ ಜೀವವೂ ಆಗಿದ್ದೇನೆ. ನನ್ನಲ್ಲಿ ನಂಬಿಕೆ ಇಡುವವನು ಸತ್ತರೂ ಬದುಕುವನು,
Յիսուս ըսաւ անոր. «Ե՛ս եմ յարութիւնն ու կեանքը: Ա՛ն որ կը հաւատայ ինծի, թէեւ մեռնի՝ պիտի ապրի.
26 ೨೬ ಮತ್ತು ಜೀವಿಸುವ ಪ್ರತಿಯೊಬ್ಬನು ನನ್ನಲ್ಲಿ ನಂಬಿಕೆಯಿಟ್ಟರೆ, ಅವನು ಎಂದಿಗೂ ಸಾಯುವುದಿಲ್ಲ. ಇದನ್ನು ನೀನು ನಂಬುತ್ತೀಯೋ?” ಎಂದು ಕೇಳಿದಕ್ಕೆ, (aiōn g165)
Եւ ո՛վ որ կ՚ապրի եւ կը հաւատայ ինծի, յաւիտեա՛ն պիտի չմեռնի: Դուն կը հաւատա՞ս ասոր»: (aiōn g165)
27 ೨೭ ಆಕೆಯು ಆತನಿಗೆ, “ಹೌದು ಕರ್ತನೇ, ಲೋಕಕ್ಕೆ ಬರಬೇಕಾದ ದೇವಕುಮಾರನಾದ ಕ್ರಿಸ್ತನು ನೀನೇ ಎಂದು ನಾನು ನಂಬಿದ್ದೇನೆ” ಅಂದಳು.
Ըսաւ անոր. «Այո՛, Տէ՛ր, ես կը հաւատամ թէ դո՛ւն ես Քրիստոսը՝ Աստուծոյ Որդին, որ աշխարհ պիտի գար»:
28 ೨೮ ಇದನ್ನು ಹೇಳಿ ಆಕೆ ಹೋಗಿ ತನ್ನ ತಂಗಿಯಾದ ಮರಿಯಳನ್ನು ಗುಪ್ತವಾಗಿ ಕರೆದು, “ಗುರುವು ಬಂದಿದ್ದಾರೆ, ನಿನ್ನನ್ನು ಕರೆಯುತ್ತಿದ್ದಾರೆ” ಎಂದಳು.
Երբ ըսաւ ասիկա՝ գնաց, ու ծածկաբար կանչեց իր քոյրը՝ Մարիամը, ըսելով. «Վարդապետը եկած է, եւ կը կանչէ քեզ»:
29 ೨೯ ಮರಿಯಳು ಇದನ್ನು ಕೇಳಿದಾಗ ತಟ್ಟನೆ ಎದ್ದು ಆತನ ಬಳಿಗೆ ಹೋದಳು.
Երբ ան լսեց՝ շուտով ոտքի ելաւ ու եկաւ անոր քով:
30 ೩೦ ಯೇಸು ಇನ್ನೂ ಊರೊಳಗೆ ಬಂದಿರಲಿಲ್ಲ. ಮಾರ್ಥಳು ಆತನನ್ನು ಸಂಧಿಸಿದ ಸ್ಥಳದಲ್ಲಿಯೇ ಇದ್ದನು.
Յիսուս դեռ եկած չէր գիւղը, հապա այն տեղն էր՝ ուր Մարթա դիմաւորեց զինք:
31 ೩೧ ಮರಿಯಳೊಂದಿಗೆ ಮನೆಯಲ್ಲಿ ಇದ್ದುಕೊಂಡು ಆಕೆಯನ್ನು ಸಂತೈಸುತ್ತಿದ್ದ ಯೆಹೂದ್ಯರು ಆಕೆಯು ತಟ್ಟನೆ ಎದ್ದು ಹೊರಗೆ ಹೋಗುವುದನ್ನು ಕಂಡು, ಆಕೆಯು ಅಳುವುದಕ್ಕಾಗಿ ಸಮಾಧಿಗೆ ಹೋಗುತ್ತಿದ್ದಾಳೆಂದು ಭಾವಿಸಿ ಆಕೆಯ ಹಿಂದೆ ಹೋದರು.
Բայց Հրեաները, որ տան մէջ էին անոր հետ եւ կը սփոփէին զայն, երբ տեսան թէ Մարիամ շուտով կանգնեցաւ ու գնաց, իրենք ալ հետեւեցան անոր՝ ըսելով. «Գերեզմանը կ՚երթայ՝ որպէսզի հոն լայ»:
32 ೩೨ ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
Իսկ Մարիամ, երբ հասաւ Յիսուսի եղած տեղը ու տեսաւ զինք, անոր ոտքը իյնալով՝ ըսաւ անոր. «Տէ՛ր, եթէ հոս ըլլայիր՝ եղբայրս չէր մեռներ»:
33 ೩೩ ಆಕೆಯು ಅಳುವುದನ್ನು ಮತ್ತು ಆಕೆಯೊಂದಿಗೆ ಬಂದಿದ್ದ ಯೆಹೂದ್ಯರು ಅಳುವುದನ್ನು ಯೇಸು ನೋಡಿದಾಗ ಯೇಸುವು ಆತ್ಮದಲ್ಲಿ ವ್ಯಸನಪಟ್ಟು ನೊಂದುಕೊಂಡು,
Ուրեմն երբ Յիսուս տեսաւ զայն՝ որ կու լար, եւ անոր հետ եկող Հրեաները՝ որոնք կու լային, սրդողեցաւ իր հոգիին մէջ ու վրդովեցաւ,
34 ೩೪ “ಅವನನ್ನು ಎಲ್ಲಿ ಇಟ್ಟಿದ್ದೀರಿ?” ಎಂದನು. ಅವರು ಆತನಿಗೆ, “ಕರ್ತನೇ, ಬಂದು ನೋಡು” ಎಂದರು.
եւ ըսաւ. «Ո՞ւր դրած էք զայն»: Ըսին իրեն. «Տէ՛ր, եկո՛ւր ու տե՛ս»:
35 ೩೫ ಯೇಸು ಕಣ್ಣೀರಿಟ್ಟನು.
Յիսուս լացաւ:
36 ೩೬ ಅದಕ್ಕೆ ಯೆಹೂದ್ಯರು, “ಆಹಾ! ಈತನು ಅವನ ಮೇಲೆ ಎಷ್ಟೋ ಮಮತೆ ಇಟ್ಟಿದ್ದಾನೆ” ಎಂದರು.
Ուստի Հրեաները կ՚ըսէին. «Նայեցէ՛ք, ո՜րչափ կը սիրէր զայն»:
37 ೩೭ ಅವರಲ್ಲಿ ಕೆಲವರು, “ಈತನು ಆ ಕುರುಡನಿಗೆ ಕಣ್ಣು ಕೊಟ್ಟನಲ್ಲಾ, ಈ ಮನುಷ್ಯನನ್ನು ಸಾಯದ ಹಾಗೆ ಮಾಡಬಹುದಿತ್ತಲ್ಲಾ?” ಎಂದರು.
Անոնցմէ ոմանք ալ կ՚ըսէին. «Ասիկա՝ որ կոյրին աչքերը բացաւ, չէ՞ր կրնար այնպէս ընել՝ որ ա՛յս ալ չմեռնէր»:
38 ೩೮ ಯೇಸು ತಿರುಗಿ ತನ್ನ ಮನದಲ್ಲಿ ನೊಂದುಕೊಳ್ಳುತ್ತಾ ಸಮಾಧಿಯ ಬಳಿಗೆ ಬಂದನು. ಅದು ಒಂದು ಗವಿಯಾಗಿತ್ತು, ಅದರ ಬಾಯಿಗೆ ಒಂದು ಕಲ್ಲನ್ನು ಮುಚ್ಚಿಡಲಾಗಿತ್ತು.
Ուրեմն Յիսուս՝ դարձեալ սրդողելով ինքնիր մէջ՝ գնաց գերեզման. ան քարայր մըն էր, որուն վրայ քար մը դրուած էր:
39 ೩೯ ಯೇಸು, “ಆ ಕಲ್ಲನ್ನು ತೆಗೆದು ಹಾಕಿರಿ” ಎನ್ನಲು, ತೀರಿಹೋದವನ ಸಹೋದರಿಯಾದ ಮಾರ್ಥಳು ಆತನಿಗೆ, “ಕರ್ತನೇ, ಅವನು ಸತ್ತು ನಾಲ್ಕು ದಿನಗಳಾದವು, ಈಗ ದುರ್ವಾಸನೆ ಬಂದಿರಬಹುದು” ಎಂದಳು.
Յիսուս ըսաւ. «Վերցուցէ՛ք այդ քարը»: Մեռելին քոյրը՝ Մարթա՝ ըսաւ անոր. «Տէ՛ր, արդէն նեխած պիտի ըլլայ, որովհետեւ չորս օրուան է»:
40 ೪೦ ಯೇಸು ಆಕೆಗೆ, “ನೀನು ನಂಬಿದರೆ ದೇವರ ಮಹಿಮೆಯನ್ನು ಕಾಣುವಿ ಎಂದು ನಾನು ನಿನಗೆ ಹೇಳಲಿಲ್ಲವೇ?” ಎಂದು ಉತ್ತರ ಕೊಟ್ಟನು
Յիսուս ըսաւ անոր. «Քեզի չըսի՞ թէ պիտի տեսնես Աստուծոյ փառքը՝ եթէ հաւատաս»:
41 ೪೧ ಆಗ ಅವರು ಕಲ್ಲನ್ನು ತೆಗೆದು ಹಾಕಿದರು. ಯೇಸು ಕಣ್ಣೆತ್ತಿ ಮೇಲಕ್ಕೆ ನೋಡಿ, “ತಂದೆಯೇ ನೀನು ನನಗೆ ಕಿವಿಗೊಟ್ಟಿದ್ದಕ್ಕಾಗಿ ನಿನಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Ուստի վերցուցին քարը: Յիսուս բարձրացուց իր աչքերը եւ ըսաւ. «Հա՛յր, շնորհակալ եմ քեզմէ՝ որ լսեցիր զիս:
42 ೪೨ ನೀನು ನನಗೆ ಯಾವಾಗಲೂ ಕಿವಿಗೊಡುತ್ತೀ ಎಂದು ನನಗೆ ತಿಳಿದೇ ಇದೆ. ಆದರೂ ನೀನೇ ನನ್ನನ್ನು ಕಳುಹಿಸಿಕೊಟ್ಟಿರುವಿ ಎಂದು ಸುತ್ತಲೂ ನಿಂತಿರುವ ಈ ಜನರು ನಂಬುವಂತೆ ಅವರಿಗೋಸ್ಕರ ಈ ಮಾತುಗಳನ್ನಾಡಿದ್ದೇನೆ” ಎಂದು ಹೇಳಿದನು.
Ու ես գիտէի թէ ամէն ատեն կը լսես զիս. բայց ըսի շուրջս կայնող բազմութեան համար, որպէսզի հաւատան թէ դո՛ւն ղրկեցիր զիս»:
43 ೪೩ ಆತನು ಹೀಗೆ ಹೇಳಿದ ಮೇಲೆ, “ಲಾಜರನೇ, ಹೊರಗೆ ಬಾ!” ಎಂದು ಗಟ್ಟಿಯಾದ ಸ್ವರದಿಂದ ಕೂಗಿದನು.
Ասիկա ըսելէն ետք՝ բարձրաձայն պոռաց. «Ղազարո՛ս, դո՛ւրս եկուր»:
44 ೪೪ ಸತ್ತಿದ್ದವನು ಹೊರಗೆ ಬಂದನು. ಅವನ ಕೈಕಾಲುಗಳು ಶವ ವಸ್ತ್ರಗಳಿಂದ ಸುತ್ತಿದ್ದವು. ಅವನ ಮುಖಕ್ಕೆ ವಸ್ತ್ರ ಸುತ್ತಲಾಗಿತ್ತು. ಯೇಸು ಅವರಿಗೆ, “ಅವನನ್ನು ಬಿಡಿಸಿರಿ, ಅವನು ಹೋಗಲಿ” ಎಂದು ಹೇಳಿದನು.
Մեռելն ալ ելաւ՝ ոտքերն ու ձեռքերը պատանքով կապուած, եւ դէմքը՝ վարշամակով պատուած: Յիսուս ըսաւ անոնց. «Արձակեցէ՛ք զինք, ու թո՛յլ տուէք որ երթայ»:
45 ೪೫ ಆದುದರಿಂದ ಮರಿಯಳ ಬಳಿಗೆ ಬಂದಿದ್ದ ಯೆಹೂದ್ಯರಲ್ಲಿ ಅನೇಕರು ಯೇಸುವಿನ ಕಾರ್ಯವನ್ನು ನೋಡಿ ಆತನಲ್ಲಿ ನಂಬಿಕೆಯಿಟ್ಟರು.
Հրեաներէն շատեր՝ որ եկած էին Մարիամի քով, երբ տեսան Յիսուսի ըրածը՝ հաւատացին իրեն:
46 ೪೬ ಆದರೆ ಕೆಲವರು ಫರಿಸಾಯರ ಬಳಿಗೆ ಹೋಗಿ ಯೇಸು ಮಾಡಿದ ಕಾರ್ಯಗಳನ್ನು ಅವರಿಗೆ ಹೇಳಿದರು.
Բայց անոնցմէ ոմանք գացին Փարիսեցիներուն ու պատմեցին անոնց Յիսուսի ըրածը:
47 ೪೭ ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.
Ուստի քահանայապետներն ու Փարիսեցիները ժողով գումարեցին՝՝ եւ ըսին. «Ի՞նչ ընենք, քանի որ այս մարդը բազմաթիւ նշաններ կ՚ընէ:
48 ೪೮ ನಾವು ಅವನನ್ನು ಹೀಗೆಯೇ ಬಿಟ್ಟರೆ ಎಲ್ಲರೂ ಆತನ್ನನ್ನೇ ನಂಬುವರು. ರೋಮನ್ನರು ಬಂದು ನಮ್ಮ ಸ್ಥಳವನ್ನೂ ಮತ್ತು ರಾಷ್ಟ್ರವನ್ನೂ ವಶ ಮಾಡಿಕೊಂಡಾರು” ಎಂದರು.
Եթէ թոյլ տանք անոր՝ որ այսպէս շարունակէ, բոլորն ալ պիտի հաւատան անոր, ու Հռոմայեցիները պիտի գան եւ կործանեն մեր տեղն ու ազգը»:
49 ೪೯ ಆಗ ಅವರಲ್ಲಿ ಆ ವರ್ಷಕ್ಕೆ ಮಹಾಯಾಜಕನಾಗಿದ್ದ ಕಾಯಫನೆಂಬುವನು ಅವರಿಗೆ, “ನಿಮಗೇನೂ ತಿಳಿಯುತ್ತಿಲ್ಲ.
Անոնցմէ մէկը՝ Կայիափա անունով, որ այդ տարուան քահանայապետն էր, ըսաւ անոնց.
50 ೫೦ ಇಡೀ ರಾಷ್ಟ್ರವೇ ನಾಶವಾಗುವುದಕ್ಕಿಂತ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವುದು ನಿಮಗೆ ಹಿತವೆಂದು ನೀವು ಆಲೋಚಿಸುವುದೂ ಇಲ್ಲ” ಎಂಬುದಾಗಿ ಹೇಳಿದನು.
«Դուք ոչինչ գիտէք, ու չէք ալ մտածեր թէ աւելի օգտակար է մեզի՝ որ մէ՛կ մարդ մեռնի ժողովուրդին համար, եւ ամբողջ ազգը չկորսուի»:
51 ೫೧ ಇದನ್ನು ಅವನು ತನ್ನಷ್ಟಕ್ಕೆ ತಾನೇ ಹೇಳಲಿಲ್ಲ, ಆದರೆ ತಾನು ಆ ವರ್ಷದಲ್ಲಿ ಮಹಾಯಾಜಕನಾಗಿದ್ದುದರಿಂದ, ಯೇಸು ಆ ಜನರಿಗೋಸ್ಕರ ಹಾಗೂ
Բայց այս բանը ո՛չ թէ ինքնիրմէ ըսաւ, հապա այդ տարուան քահանայապետը ըլլալով՝ մարգարէացաւ թէ Յիսուս պիտի մեռնէր ազգին համար.
52 ೫೨ ಆ ಜನತೆಗಾಗಿ ಮಾತ್ರವಲ್ಲದೆ ಚದರಿರುವ ದೇವರ ಮಕ್ಕಳನ್ನು ಸಹ ಒಟ್ಟುಗೂಡಿಸುವುದಕ್ಕಾಗಿಯೂ ಸಾಯುವುದಕ್ಕಿದ್ದನು, ಎಂಬುದಾಗಿ ಪ್ರವಾದಿಸಿದನು
եւ ո՛չ միայն ազգին համար, այլ նաեւ հաւաքելով միացնելու համար Աստուծոյ ցրուած որդիները:
53 ೫೩ ಅವರು ಆ ದಿನದಿಂದ ಆತನನ್ನು ಕೊಲ್ಲುವುದಕ್ಕೆ ಆಲೋಚಿಸುತ್ತಿದ್ದರು.
Ուրեմն այդ օրէն ետք խորհրդակցեցան՝ որ սպաննեն զայն:
54 ೫೪ ಹೀಗಿರಲಾಗಿ ಯೇಸು ಇನ್ನೂ ಯೆಹೂದ್ಯರೊಳಗೆ ಬಹಿರಂಗವಾಗಿ ತಿರುಗಾಡದೆ, ಅಲ್ಲಿಂದ ಅಡವಿಯ ಹತ್ತಿರದ ಪ್ರದೇಶಕ್ಕೆ ಹೋಗಿ, ಎಫ್ರಾಯೀಮ್ ಎಂಬ ಊರಲ್ಲಿ ತನ್ನ ಶಿಷ್ಯರ ಜೊತೆ ಇದ್ದನು.
Ուստի ա՛լ Յիսուս բացորոշապէս չէր շրջեր Հրեաներուն մէջ, հապա անկէ գնաց անապատին մօտ երկրամաս մը, քաղաք մը՝ որ Եփրայիմ կը կոչուէր, եւ հոն կեցաւ իր աշակերտներուն հետ:
55 ೫೫ ಆಗ ಯೆಹೂದ್ಯರ ಪಸ್ಕಹಬ್ಬ ಹತ್ತಿರವಾಗಿರಲಾಗಿ, ಬಹು ಜನರು ತಮ್ಮನ್ನು ಶುದ್ಧ ಮಾಡಿಕೊಳ್ಳುವುದಕ್ಕಾಗಿ ಹಬ್ಬಕ್ಕಿಂತ ಮೊದಲೇ ಹಳ್ಳಿಗಳಿಂದ ಯೆರೂಸಲೇಮಿಗೆ ಬಂದರು.
Երբ Հրեաներուն Զատիկը մօտեցաւ, այդ երկրամասէն շատեր Երուսաղէմ բարձրացան Զատիկէն առաջ՝ որպէսզի մաքրագործեն իրենք զիրենք:
56 ೫೬ ಅವರು ಯೇಸುವನ್ನು ಹುಡುಕುತ್ತಾ ದೇವಾಲಯದಲ್ಲಿ ನಿಂತುಕೊಂಡು, “ಅವನು ಹಬ್ಬಕ್ಕೆ ಬಾರದೇ ಇದ್ದಾನೋ? ನಿಮಗೆ ಹೇಗೆ ತೋರುತ್ತದೆ?” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಾ ಇದ್ದರು.
Ուստի կը փնտռէին Յիսուսը, ու տաճարին մէջ կեցած ատեն՝ կ՚ըսէին իրարու. «Ի՞նչ է ձեր կարծիքը. արդեօք բնա՛ւ պիտի չգա՞յ այս տօնին»:
57 ೫೭ ಆಗ ಮುಖ್ಯಯಾಜಕರೂ ಮತ್ತು ಫರಿಸಾಯರೂ ಆತನನ್ನು ಹಿಡಿಯಬೇಕೆಂಬುದಾಗಿ ಯೋಚಿಸಿ, ಅವನಿರುವ ಸ್ಥಳವು ಯಾರಿಗಾದರೂ ಗೊತ್ತಾದರೆ ಅದನ್ನು ತಮಗೆ ತಿಳಿಸಬೇಕೆಂದು ಅಪ್ಪಣೆ ಕೊಟ್ಟಿದ್ದರು.
Իսկ քահանայապետներն ու Փարիսեցիները պատուիրեր էին, որ եթէ մէկը գիտնայ անոր ո՛ւր ըլլալը՝ ցոյց տայ, որպէսզի ձերբակալեն զայն:

< ಯೋಹಾನನು 11 >